Prithviraj Sukumaran: ಶೂಟಿಂಗ್‌ ವೇಳೆ ಅವಘಡ; ನಟ ಪೃಥ್ವಿರಾಜ್ ಸುಕುಮಾರನ್‌ಗೆ ಗಂಭೀರ ಗಾಯ - Vistara News

South Cinema

Prithviraj Sukumaran: ಶೂಟಿಂಗ್‌ ವೇಳೆ ಅವಘಡ; ನಟ ಪೃಥ್ವಿರಾಜ್ ಸುಕುಮಾರನ್‌ಗೆ ಗಂಭೀರ ಗಾಯ

Prithviraj Sukumaran: ಕೇರಳದ ಸರ್ಕಾರಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.

VISTARANEWS.COM


on

Prithviraj Sukumaran Vilayath Buddha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರ ಮುಂಬರುವ ಚಿತ್ರ `ವಿಲಾಯತ್ ಬುದ್ಧ’ (Vilayath Buddha) ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್‌ ಸುಕುಮಾರನ್‌ ಗಾಯಗೊಂಡಿದ್ದಾರೆ. ನಟನಿಗೆ ಕಾಲಿಗೆ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು ಹೇಳಿರುವುದಾಗಿ ವರದಿಯಾಗಿದೆ. ವೈದ್ಯರ ಸಲಹೆಯಂತೆ ಅವರು ಚೇತರಿಸಿಕೊಳ್ಳಲು ಕೆಲವು ವಾರಗಳು ಬೇಕಾಗಿದ್ದು, ಕೆಲ ಕಾಲ ರೆಸ್ಟ್‌ ತೆಗೆದುಕೊಳ್ಳಲಿದ್ದಾರೆ.

ಕೇರಳದ ಸರ್ಕಾರಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಪೃಥ್ವಿರಾಜ್ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಜೂನ್ 26ರಂದು ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಮೂರು ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಪೃಥ್ವಿರಾಜ್ ಅವರು ಸುಮಾರು 2 ರಿಂದ 3ತಿಂಗಳ ಕಾಲ ಬೆಡ್‌ ರೆಸ್ಟ್‌ ಮಾಡಲಿದ್ದಾರೆ. ಆದರೆ, ಈ ಬಗ್ಗೆ ನಟ ಅಥವಾ ಆಸ್ಪತ್ರೆ ಆಡಳಿತ ಮಂಡಳಿ ಇನ್ನೂ ಅಧಿಕೃತ ಮಾಹಿತಿ ಹಂಚಿಕೊಂಡಿಲಲ್ಲ.

ವಿಲಾಯತ್ ಬುದ್ಧ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸಿದ್ದಾರೆ. ಈ ಹಿಂದೆ ದಿವಂಗತ ನಿರ್ದೇಶಕ ಸಚಿಯವರಿಗೆ ಅಯ್ಯಪ್ಪನುಂ ಕೊಶಿಯುಂನಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ವಿಲಾಯತ್ ಬುದ್ಧ ಜಿಆರ್ ಇಂದುಗೋಪನ್ ಅವರ ಅದೇ ಹೆಸರಿನ ಕಾದಂಬರಿಯ ರೂಪಾಂತರವಾಗಿದೆ.

ಇದನ್ನೂ ಓದಿ: Actor Suriya | ತಮಿಳು ನಟ ಸೂರ್ಯ ಜತೆ ಸಿನಿಮಾ ಮಾಡಲು ಮುಂದಾಗಿದೆ ಹೊಂಬಾಳೆ ಫಿಲ್ಮ್ಸ್‌

ಪೃಥ್ವಿರಾಜ್‌ ಸುಕುಮಾರನ್‌ಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಜತೆ ಒಡನಾಟವಿದೆ. ‘KGF’, ‘ಕಾಂತಾರ’, ‘ಧೂಮಮ್’ ಸಿನಿಮಾಗಳನ್ನು ಕೇರಳದಲ್ಲಿ ಪೃಥ್ವಿರಾಜ್ ವಿತರಣೆ ಮಾಡಿದ್ದರು. ಸದ್ಯ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಸಲಾರ್’ ಹಾಗೂ ‘ಟೈಸನ್’ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಎದುರು ವಿಲನ್ ಆಗಿ ಅಬ್ಬರಿಸುತ್ತಿದ್ದು ‘ಟೈಸನ್’ ಚಿತ್ರವನ್ನು ನಿರ್ದೇಶಿಸಿ ನಟಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ.

VISTARANEWS.COM


on

Yuva Rajkumar son of raghavendra Rajkumar yuva divorce
Koo

ಬೆಂಗಳೂರು: ವರನಟ ಡಾ. ರಾಜ್‌ ಕುಮಾರ್‌ (Yuva Rajkumar) ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ.

ಯುವರಾಜ್​ ಕುಮಾರ್​ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಅಮೆರಿಕಾದಲ್ಲಿ ಶ್ರೀದೇವಿ ನೆಲೆಸಿದ್ದಾರೆ. ಶಾಂತಿನಗರ ಫ್ಯಾಮಿಲಿ ಕೋರ್ಟ್‌ನಲ್ಲಿ ಇದೇ ತಿಂಗಳು 6ನೇ ತಾರೀಕು ವಿಚ್ಛೇದನ ಅರ್ಜಿ ಸಲ್ಲಿಸಿದ್ದರು ಯುವರಾಜ್.

ಇದನ್ನೂ ಓದಿ: Yuva Rajkumar: ಯುವ ಅಭಿಮಾನಿಗಳಿಗೆ ನಿರಾಸೆ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್‌

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನೂ ಅಚ್ಚರಿ ಅಂದರೆ ನಿವೇದಿತಾ ಹಾಗೂ ಚಂದನ್‌ ಕೂಡ ಇದೇ ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೊಂದು ಜೋಡಿ ಕೂಡ ವೈವಾಹಿಕ ಜೀವನಕ್ಕೆ ಫುಲ್‌ಸ್ಟಾಪ್‌ ಇಡಲು ಮುಂದಾಗಿದೆ.

ʻಯುವʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದರು. ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಿದ್ದರು. ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿದ್ದರು. . ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿತ್ತು. ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

Continue Reading

ಟಾಲಿವುಡ್

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

Nandamuri Balakrishna: ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

VISTARANEWS.COM


on

Nandamuri Balakrishna BB4 new film announced
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು ಜನುಮದಿನದ ಸಂಭ್ರಮ. ಹೀಗಾಗಿ ಅನೇಕ ಸಿನಿ ಗಣ್ಯರು ಸೇರಿದಂತೆ ಅವರ ಫ್ಯಾನ್ಸ್‌ ವಿಶ್‌ ಮಾಡುತ್ತಿದ್ದಾರೆ. ಇದೀಗ ಬೊಯಾಪಾಟಿ ಶ್ರೀನು ಅವರ ನಾಲ್ಕನೇ ಚಿತ್ರಕ್ಕಾಗಿ ಮತ್ತೆ ನಂದಮೂರಿ ಬಾಲಕೃಷ್ಣ ಒಂದಾಗಿದ್ದಾರೆ. 64ನೇ ವಸಂತಕ್ಕೆ ಕಾಲಿಟ್ಟ ಬಾಲಯ್ಯ ಇದೀಗ ‘BB4’ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. BB4ಎಂದು ತಾತ್ಕಲಿಕವಾಗಿ ಶಿರ್ಷಿಕೆ ಇಡಲಾಗಿದೆ.

‘ಸಿಂಹ’, ‘ಲೆಜೆಂಡ್’ ಮತ್ತು ‘ಅಖಂಡ’ ನಂತರ ನಾಲ್ಕನೇ ಬಾರಿಗೆ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು ಕೈ ಜೋಡಿಸಿದ್ದಾರೆ. ʻʻ’ಗಾಡ್ ಆಫ್ ಮಾಸಸ್’ ನಂದಮೂರಿ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು BB4ಗಾಗಿ ಮತ್ತೆ ಒಂದಾಗುತ್ತಾರೆ. ಜನ್ಮದಿನದ ಶುಭಾಶಯಗಳು, ಬಾಲಯ್ಯ ಬಾಬುʼʼಎಂದು ಪೋಸ್ಟರ್‌ ಹಂಚಿಕೊಂಡಿದೆ. ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.

ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

ಇದನ್ನೂ ಓದಿ: Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದರು. ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ತಂದೆ ಎನ್‌ಟಿಆರ್ ಹಾದಿಯಲ್ಲೇ ನಟ ಬಾಲಯ್ಯ ಚಿತ್ರರಂಗಕ್ಕೆ ಬಂದರು. ತಂದೆ ರಾಜಕೀಯರಂಗ ಪ್ರವೇಶಿಸಿ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಈಗ ಬಾಲಯ್ಯ- ಚಂದ್ರಬಾಬು ಬೀಗರು ಸಹ ಆಗಿದ್ದಾರೆ. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

Kannada New Movie: ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ.

VISTARANEWS.COM


on

Kannada New Movie Chilli Chicken Official Trailer
Koo

ಬೆಂಗಳೂರು: ಹೋಟೆಲ್ ಕೆಲಸ ಮಾಡುವ (Kannada New Movie) ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ `ಚಿಲ್ಲಿ ಚಿಕನ್’. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು.

ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬುದೇ ಒನ್ ಲೈನ್ ಕಥೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ಕಳೆದ ತಿಂಗಳು ಟೀಸರ್ ಬಿಡುಗಡೆ ಮಾಡಿದ್ದ ಈ ಚಿತ್ರತಂಡ ಇದೀಗ ಟ್ರೈಲರ್‌ ಹೊರತಂದಿದೆ. ಈ ಚಿತ್ರದ ಕಥೆ ಹುಟ್ಟಿರುವುದೇ ವಿಶೇಷವಾದ ಸ್ಥಳದಲ್ಲಿ.

ಹೌದು ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಾಗ ಸಂಗೀತ ನಿರ್ದೇಶಕ ಸಿದ್ಧಾಂತ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆದಿದೆ. ಅದನ್ನು ನಿರ್ದೇಶಕ ಪ್ರತೀಕ್ ಪ್ರಜೋಶ್ ಅವರಿಗೆ ಹೇಳುತ್ತಾರೆ. ಅವರು ಆ ಒಂದು ಲೈನ್ ಕಥೆಯ ಮೇಲೆ ಸಾಕಷ್ಟು ವರ್ಕ್ ಮಾಡಿ ಈಗ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ದಗೊಳಿಸಿದ್ದಾರೆ.

ಸಿದ್ಧಾಂತ ಸುಂದರ್ ಮಾತನಾಡಿ ʻʻನೈಜ ಘಟನೆಯನ್ನು ಕಥೆ ಮಾಡಿ ಸಿನಿಮಾ ಮಾಡೋದು ಸುಲಭವಲ್ಲ. ಚಿತ್ರ ಚೆನ್ನಾಗಿ ಬಂದಿದೆ.‌ ಚಿತ್ರದಲ್ಲಿ 5 ಹಾಡುಗಳಿದ್ದು ಅವುಗಳಿಗೆ ಮಾರ್ಟಿನ್ ಯೋ ಸಾಹಿತ್ಯ ಬರೆದಿದ್ದಾರೆ. ಇದರಲ್ಲಿ ಒಳ್ಳೇ ಕಥೆ, ಜತೆಗೆ ಮನರಂಜನೆ ಎಲ್ಲಾ ಇದೆʼʼ ಎಂದು ಹೇಳಿದರು.

ನಿರ್ದೇಶಕ ಪ್ರತೀಕ್ ಪ್ರಜೋಶ್. ಮಾತನಾಡಿ ʻʻಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ರಿಲೀಸಾಗಲಿದೆ. ನಿಮ್ಮಗಳ ಸಹಕಾರವಿರಲಿ ಎಂದಷ್ಟೇ ಹೇಳಿದರು. ಈ ಚಿತ್ರದ ನಾಯಕನಾಗಿ ಬಿ.ವಿ. ಶೃಂಗಾ ಅಭಿನಯಿಸಿದ್ದು, ಪಾತ್ರದ ಬಗ್ಗೆ ಮಾಹಿತಿ ನೀಡುವ ಅವರು ‘ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ನಿಮ್ಮಗಳ ಸಹಕಾರ ಬೇಕು. ನಾನಿಲ್ಲಿ ರೆಸ್ಟೋರೆಂಟ್ ಮಾಲಿಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ಇಂದಿನ ಜನರೇಷನ್ ಗೆ ಹೇಳಬೇಕಾದ ವಿಷಯವಿದೆ ಅನಿಸಿತು. ಇದರಲ್ಲಿ ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಚನ್ನಾಗಿ ಬಳಸಿದ್ದಾರೆ. ನಂದಿಲ್ಲಿ ಮಿಡ್ಲ್ ಕ್ಲಾಸ್ ಕುಟುಂಬದಿಂದ ಬಂದು, ಚೈನೀಸ್ ರೆಸ್ಟೋರೆಂಟ್ ಮಾಡುವ ಆಸೆಯಿಂದ ಹೇಗೆಲ್ಲಾ ಅಲೆದಾಡುತ್ತಾನೆ ಎಂಬುದನ್ನು ನೋಡಬಹುದು’ʼ ಎಂದರು.

ಇದನ್ನೂ ಓದಿ: Kannada New Movie: ʻರಮೇಶ್ ಸುರೇಶ್‌ʼ ಸಿನಿಮಾದಲ್ಲಿ ಇಬ್ಬರು ನಿರ್ದೇಶಕರು, ಇಬ್ಬರು ನಾಯಕರು ; ಜೂನ್ 21ರಂದು ತೆರೆಗೆ!

ನಟಿ ನಿತ್ಯಶ್ರೀ ಮಾತನಾಡಿ ʻʻನನಗೆ ಕನ್ನಡದಲ್ಲಿ ಇದು 2ನೇ ಸಿನಿಮಾ. ತಮಿಳು, ತೆಲಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಒಂದಿಷ್ಟು ಸಿನಿಮಾ ಮಾಡಿದ್ದೇನೆ. ಚಿತ್ರಕ್ಕೆ ತಂಡದ ಶ್ರಮ ತುಂಬಾ ಇದ್ದು ಎಲ್ಲಾ ಕಲಾವಿದರು ಭಾಷೆ ಕಲೆತು ಅಭಿನಯ ಮಾಡುವ ಜೊತೆಗೆ ಡಬ್ಬಿಂಗ್ ಕೂಡ ಮಾಡಿದ್ದಾರೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಚಿತ್ರದ ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು. ಅಂದಂಗೆ ಈಗಾಗಲೇ ಈ ಚಿತ್ರವನ್ನು ನೋಡಿದ ನಟ ರಮೇಶ್‌ ಅರವಿಂದ್, ಹೇಮಂತ್ ರಾವ್ ಹಾಗೂ ಬೇರೆ ಭಾಷೆಯ ಪ್ರಮುಖರು ಮೆಚ್ಚಿದ್ದಾರೆ. ಈ ತಂಡ ಬೆಂಗಳೂರಿನಲ್ಲಿ ಒಡೆದು ಹಾಕಿರುವ ಕಾವೇರಿ ಥಿಯೇಟರ್ ಬಗ್ಗೆ ಸಾಂಗ್ ಮಾಡಿ ಅದನ್ನು ಟ್ರಿಬ್ಯೂಟ್ ಕೊಡುತ್ತಿದೆ. ಈ ಗೀತೆಗೆ ಪತ್ರಕರ್ತ ಶ್ರೀಧರ್ ಶಿವಮೊಗ್ಗ ಸಾಹಿತ್ಯ ಬರೆದಿದ್ದಾರೆ.

Continue Reading

South Cinema

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

Kalki 2898 AD: ʼ ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು.

VISTARANEWS.COM


on

Kalki 2898 AD Deepika Padukone looks poster
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡ ದೀಪಿಕಾ ಪಡುಕೋಣೆ ಒಳಗೊಂಡಿರುವ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರದ ಟ್ರೈಲರ್‌ ನಾಳೆ (ಜೂನ್‌ 10) ಬಿಡುಗಡೆಯಾಗಲಿದೆ.

ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಾಳೆ ಟ್ರೈಲರ್‌ ರಿಲೀಸ್‌

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಈ ಮುಂಚೆ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿತ್ತು. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿತ್ತು. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading
Advertisement
Reasi Terror Attack
ಪ್ರಮುಖ ಸುದ್ದಿ28 seconds ago

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

murder case
ಮೈಸೂರು17 mins ago

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

pm narendra modi leopord
ಪ್ರಮುಖ ಸುದ್ದಿ17 mins ago

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್23 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ32 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ32 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು52 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ57 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ59 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ1 hour ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌