Site icon Vistara News

Prithviraj Sukumaran: ಶೂಟಿಂಗ್‌ ವೇಳೆ ಅವಘಡ; ನಟ ಪೃಥ್ವಿರಾಜ್ ಸುಕುಮಾರನ್‌ಗೆ ಗಂಭೀರ ಗಾಯ

Prithviraj Sukumaran Vilayath Buddha

ಬೆಂಗಳೂರು: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರ ಮುಂಬರುವ ಚಿತ್ರ `ವಿಲಾಯತ್ ಬುದ್ಧ’ (Vilayath Buddha) ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್‌ ಸುಕುಮಾರನ್‌ ಗಾಯಗೊಂಡಿದ್ದಾರೆ. ನಟನಿಗೆ ಕಾಲಿಗೆ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು ಹೇಳಿರುವುದಾಗಿ ವರದಿಯಾಗಿದೆ. ವೈದ್ಯರ ಸಲಹೆಯಂತೆ ಅವರು ಚೇತರಿಸಿಕೊಳ್ಳಲು ಕೆಲವು ವಾರಗಳು ಬೇಕಾಗಿದ್ದು, ಕೆಲ ಕಾಲ ರೆಸ್ಟ್‌ ತೆಗೆದುಕೊಳ್ಳಲಿದ್ದಾರೆ.

ಕೇರಳದ ಸರ್ಕಾರಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಪೃಥ್ವಿರಾಜ್ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಜೂನ್ 26ರಂದು ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಮೂರು ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಪೃಥ್ವಿರಾಜ್ ಅವರು ಸುಮಾರು 2 ರಿಂದ 3ತಿಂಗಳ ಕಾಲ ಬೆಡ್‌ ರೆಸ್ಟ್‌ ಮಾಡಲಿದ್ದಾರೆ. ಆದರೆ, ಈ ಬಗ್ಗೆ ನಟ ಅಥವಾ ಆಸ್ಪತ್ರೆ ಆಡಳಿತ ಮಂಡಳಿ ಇನ್ನೂ ಅಧಿಕೃತ ಮಾಹಿತಿ ಹಂಚಿಕೊಂಡಿಲಲ್ಲ.

ವಿಲಾಯತ್ ಬುದ್ಧ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸಿದ್ದಾರೆ. ಈ ಹಿಂದೆ ದಿವಂಗತ ನಿರ್ದೇಶಕ ಸಚಿಯವರಿಗೆ ಅಯ್ಯಪ್ಪನುಂ ಕೊಶಿಯುಂನಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ವಿಲಾಯತ್ ಬುದ್ಧ ಜಿಆರ್ ಇಂದುಗೋಪನ್ ಅವರ ಅದೇ ಹೆಸರಿನ ಕಾದಂಬರಿಯ ರೂಪಾಂತರವಾಗಿದೆ.

ಇದನ್ನೂ ಓದಿ: Actor Suriya | ತಮಿಳು ನಟ ಸೂರ್ಯ ಜತೆ ಸಿನಿಮಾ ಮಾಡಲು ಮುಂದಾಗಿದೆ ಹೊಂಬಾಳೆ ಫಿಲ್ಮ್ಸ್‌

ಪೃಥ್ವಿರಾಜ್‌ ಸುಕುಮಾರನ್‌ಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಜತೆ ಒಡನಾಟವಿದೆ. ‘KGF’, ‘ಕಾಂತಾರ’, ‘ಧೂಮಮ್’ ಸಿನಿಮಾಗಳನ್ನು ಕೇರಳದಲ್ಲಿ ಪೃಥ್ವಿರಾಜ್ ವಿತರಣೆ ಮಾಡಿದ್ದರು. ಸದ್ಯ ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಸಲಾರ್’ ಹಾಗೂ ‘ಟೈಸನ್’ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ‘ಸಲಾರ್’ ಚಿತ್ರದಲ್ಲಿ ಪ್ರಭಾಸ್ ಎದುರು ವಿಲನ್ ಆಗಿ ಅಬ್ಬರಿಸುತ್ತಿದ್ದು ‘ಟೈಸನ್’ ಚಿತ್ರವನ್ನು ನಿರ್ದೇಶಿಸಿ ನಟಿಸುತ್ತಿದ್ದಾರೆ.

Exit mobile version