Priyanka Chopra's daughter Malti Marie puja at Siddhivinayak temple Priyanka Chopra: ಸಿದ್ಧಿವಿನಾಯಕ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ಮಗಳು ಮಾಲ್ತಿ ಮೇರಿ! - Vistara News

South Cinema

Priyanka Chopra: ಸಿದ್ಧಿವಿನಾಯಕ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ಮಗಳು ಮಾಲ್ತಿ ಮೇರಿ!

ಪ್ರಿಯಾಂಕಾ ಚೋಪ್ರಾ (Priyanka Chopra) ಏಪ್ರಿಲ್ 6ರಂದು ಮಗಳು ಮಾಲ್ತಿ ಮೇರಿ ಜೋನಾಸ್ ಅವರೊಂದಿಗೆ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Priyanka Chopra's daughter Malti Marie puja at Siddhivinayak temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಪ್ರಿಯಾಂಕಾ ಚೋಪ್ರಾ (Priyanka Chopra) ಹಾಗೂ ಅವರ ಕುಟುಂಬ ಮಾರ್ಚ್ 31ರಂದು ಭಾರತಕ್ಕೆ ಬಂದಿಳಿದಿದ್ದಾರೆ. ಮುಂಬೈನಿಂದ ಹೊರಡುವ ಮೊದಲು, ಪ್ರಿಯಾಂಕಾ ಚೋಪ್ರಾ ಏಪ್ರಿಲ್ 6ರಂದು ಮಗಳು ಮಾಲ್ತಿ ಮೇರಿ ಜೋನಾಸ್ ಅವರೊಂದಿಗೆ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ತನ್ನ ಮಗಳು ಮಾಲ್ತಿಯೊಂದಿಗೆ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಶೀರ್ವಾದ ಕೋರಿದರು. ಫೋಟೊಗಳಲ್ಲಿ, ನಟಿ ಮಾಲ್ತಿಯನ್ನು ಎತ್ತಿಕೊಂಡಿದ್ದಾರೆ. ಫೋಟೊ ಜತೆ ನಟಿ ʻʻಮಾಲ್ತಿ ಮೇರಿ ಮೊದಲ ಭಾರತ ಪ್ರವಾಸವು ಶ್ರೀ ಸಿದ್ಧಿವಿನಾಯಕ ಆಶೀರ್ವಾದದೊಂದಿಗೆ. ಗಣಪತಿ ಬಪ್ಪಾಮೋರಿಯಾ” ಎಂದು ಬರೆದಿದ್ದಾರೆ.

ಪ್ರಿಯಾಂಕ ಚೋಪ್ರಾ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ (NMACC Launch) ಗ್ರ್ಯಾಂಡ್ ಲಾಂಚ್‌ನಲ್ಲಿ, ಭಾಗವಹಿಸಿದ್ದರು. ಅಷ್ಟೇ ಅಲ್ಲದೇ ನಟಿ ತಮ್ಮ ಮುಂಬರುವ ಸಿಟಾಡೆಲ್‌ ಸಿರೀಸ್‌ ಪ್ರಚಾರ ಕಾರ್ಯವನ್ನೂ ಮಾಡಿದ್ದಾರೆ. ರುಸ್ಸೋ ಬ್ರದರ್ಸ್ ವೆಬ್ ಶೋ ಪ್ರೈಮ್ ವಿಡಿಯೊದಲ್ಲಿ ಏಪ್ರಿಲ್ 28 ರಂದು ಸಿಟಾಡೆಲ್‌ ಪ್ರದರ್ಶನಗೊಳ್ಳುತ್ತಿದೆ. ಈ ಸಿರೀಸ್‌ನಲ್ಲಿ ನಟಿ ರಿಚರ್ಡ್ ಮ್ಯಾಡೆನ್ ಜತೆಗೆ ಕಾಣಿಸಿಕೊಳ್ಳಲಿದ್ದಾರೆ. ಸಿಟಾಡೆಲ್ ಎಂಬುದು ದಿ ರುಸ್ಸೋ ಬ್ರದರ್ಸ್ ರಚಿಸಿದ ವೆಬ್‌ ಸಿರೀಸ್‌.

ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ಸ್ಟೆಪ್ಸ್‌ ಹಾಕಿದ ಪ್ರಿಯಾಂಕಾ

ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ (NMACC Launch) ಗ್ರ್ಯಾಂಡ್ ಲಾಂಚ್‌ನಲ್ಲಿ, ಬಾಲಿವುಡ್‌ ಸೆಲೆಬ್ರಿಟಿಗಳು ಉತ್ಸಾಹಭರಿತ ಪ್ರದರ್ಶನಗಳನ್ನು ನೀಡಿದ್ದಾರೆ. ಬೆರಗುಗೊಳಿಸುವ ರೆಡ್ ಕಾರ್ಪೆಟ್ ಬಟ್ಟೆಗಳ ಹೊರತಾಗಿ, ಬಾಲಿವುಡ್ ತಾರೆಯರ ಪ್ರದರ್ಶನಗಳು ಎಲ್ಲರ ಗಮನವನ್ನು ಸೆಳೆದವು. ಪ್ರಿಯಾಂಕಾ ಚೋಪ್ರಾ, ರಣವೀರ್ ಸಿಂಗ್, ವರುಣ್ ಧವನ್, ಶಾರುಖ್ ಖಾನ್ ಮತ್ತು ಇತರ ಸೆಲೆಬ್ರಿಟಿಗಳು ಪ್ರದರ್ಶನದಿಂದ ಪ್ರೇಕ್ಷಕರನ್ನು ರಂಜಿಸಿದರು.

ಇದನ್ನೂ ಓದಿ: Priyanka Chopra: ನೀತಾ ಮುಕೇಶ್​ ಅಂಬಾನಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಿಯಾಂಕಾ-ನಿಕ್‌ ಮಿಂಚಿದ್ದು ಹೀಗೆ!

ಪ್ರಿಯಾಂಕಾ ಚೋಪ್ರಾ ಪೋಸ್ಟ್‌

ದಿಲ್ ಧಡ್ಕ್ನೆ ದೋ ಚಿತ್ರದ ಗಲ್ಲಾನ್ ಗುಡಿಯಾನ್ (Gallan Goodiyaan) ಹಾಡಿಗೆ ರಣವೀರ್‌ ಹಾಗೂ ಪ್ರಿಯಾಂಕಾ ಸಖತ್‌ ಸ್ಟೆಪ್ಸ್‌ ಹಾಕಿದ್ದಾರೆ. ಚಿತ್ರದ ಪಾತ್ರಗಳಾದ ಆಯೇಷಾ ಮತ್ತು ಕಬೀರ್ ನೆನಪಿಸುವಂತಿದೆ ಎಂದು ನೆಟ್ಟಿಗರೊಬ್ಬರು ಕಾಮೆಂಟ್‌ ಮಾಡಿದ್ದಾರೆ. ಅಭಿಮಾನಿಯೊಬ್ಬರು “ಪ್ರಿಯಾಂಕಾ ಚೋಪ್ರಾ ಜೋನಾಸ್ ಮತ್ತು ರಣವೀರ್ ಸಿಂಗ್ ದಿಲ್ ಧಡಕ್ನೆ ದೋ (Dil Dhadkne Do) ಚಿತ್ರದ ಗಲ್ಲಾ ಗುಡಿಯನ್‌ಗೆ ಡ್ಯಾನ್ಸ್‌ ಮಾಡಿದ್ದು, NMACC ಈವೆಂಟ್‌ನ ಹೈಲೈಟ್ ಆಗಿದೆʼʼಎಂದು ಕಾಮೆಂಟ್‌ ಮಾಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ಪ್ರಿಯಾಂಕಾ

ಪ್ರಿಯಾಂಕಾ ಚೋಪ್ರಾ ನಟಿ ಆಲಿಯಾ ಭಟ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಜೀ ಲೆ ಜರಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಫರ್ಹಾನ್ ಅಖ್ತರ್ ನಿರ್ದೇಶಿಸಲಿದ್ದು, ಅವರು ನಟಿಸಲಿದ್ದಾರೆ. ಜಾನ್ ಸೆನಾ ಮತ್ತು ಇಡ್ರಿಸ್ ಎಲ್ಬಾ ಸಹ-ನಟಿಸಿದ ಹೆಡ್ಸ್ ಆಫ್ ಸ್ಟೇಟ್ ಎಂಬ ಅವರ ಮುಂದಿನ ಚಿತ್ರ ಪ್ರೈಮ್ ವಿಡಿಯೊದಲ್ಲಿ ಸ್ಟ್ರೀಮ್ ಆಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

Kannada New Movie: ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Kannada New Movie sanju weds geetha another movie came
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ “ಸಂಜು ವೆಡ್ಸ್ ಗೀತಾ“, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ (Kannada New Movie) ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. “ಕವಲುದಾರಿ”, “ಆಪರೇಷನ್ ಅಲುಮೇಲಮ್ಮ” ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಈ ನೂತನ ಚಿತ್ರದ ಸಹ ನಿರ್ಮಾಪಕರು.

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೇ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಡಿಸ್ನಿ ಹಾಟ್‌ಸ್ಟಾರ್‌ ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ನಿರ್ಮಾಪಕ ಪ್ರಮೋದ್ ನಾರಾಯಣ್.

ಈಗಾಗಲೇ ರಿಷಿ ನಟನೆಯ ʻರಾಮನ ಅವತಾರ ಸಿನಿಮಾ ಎರಡನೇ ವಾರ ಚಿತ್ರಮಂದಿರದಲ್ಲಿ ಓಡುತ್ತಿದೆ. ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ʻಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ.

Continue Reading

ಸಿನಿಮಾ

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Kannada New Movie: ಹೊಂದಿಸಿ ಬರೆಯಿರಿʼ ಸಿನಿಮಾಗೆ ಹಾಕಿದ್ದ ಹಣ ವಾಪಸ್ ಆಗದಿದ್ದರೂ ಚಿತ್ರತಂಡ ಇಂತಹ ಗಟ್ಟಿ ನಿರ್ಧಾರಕ್ಕೆ ಬಂದಿದೆ. ಹಾಗಂತ ಯೂಟ್ಯೂಬ್‌ನಲ್ಲಿ ರೆಂಟಲ್ ಮೊಡೆಲ್ ಆಯ್ಕೆ ಮಾಡಿ ಒಂದಿಷ್ಟು ಹಣ ನಿಗದಿ ಪಡಿಸಿ ನೋಡಿ ಎಂದು ಕೇಳುವುದಕ್ಕಿಂತ, ಉಚಿತವಾಗಿ ಯೂಟ್ಯೂಬ್‌ನಲ್ಲಿ ಎಲ್ಲರೂ ಸಿನಿಮಾ ನೋಡಲಿ, ಅವರಿಗೆ ಸಿನಿಮಾ ಇಷ್ಟವಾದರೆ ಮಾತ್ರ ತೋಚಿದಷ್ಟು ಹಣ ಕೊಡಲಿ ಎಂಬ ನಿರ್ಧಾರ ಮಾಡಿದೆ ಚಿತ್ರತಂಡ.

VISTARANEWS.COM


on

Kannada New Movie Hondisi Bareyiri in youtube
Koo

ಬೆಂಗಳೂರು: ಸಂಡೇ ಸಿನಿಮಾಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ “ಹೊಂದಿಸಿ ಬರೆಯಿರಿ (Kannada New Movie) ಯೂಟ್ಯೂಬ್ ‌ನಲ್ಲಿ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಇನ್ನೂ ಸ್ಟ್ರೀಮ್ ಆಗುತ್ತಿದ್ದರೂ, ಇದು ಭಾರತ, ಯುಎಸ್ ಎ ಮತ್ತು ಯುಕೆ ಹೊರತಾಗಿ ಬೇರೆ ದೇಶಗಳಲ್ಲಿ ಸ್ಟ್ರೀಮ್ ಆಗುತ್ತಿಲ್ಲ. ಹಾಗಾಗಿ ಉಳಿದ ಎಲ್ಲ ದೇಶಗಳ ಕನ್ನಡಿಗರಿಗೆ ತಲುಪಬೇಕು. ಥಿಯೇಟರ್ ನಲ್ಲಿ ಚಿತ್ರ ನೋಡಿರದ ಹಾಗೂ ಒಟಿಟಿ ಚಂದಾದಾರರ ಆಗದ ಎಲ್ಲರಿಗೂ ಚಿತ್ರ ತಲುಪಲಿ ಎನ್ನುವ ಉದ್ದೇಶ ಚಿತ್ರತಂಡ ಈ ನಿರ್ಧಾರ ಮಾಡಿದೆ.

ʻಹೊಂದಿಸಿ ಬರೆಯಿರಿʼ ಸಿನಿಮಾಗೆ ಹಾಕಿದ್ದ ಹಣ ವಾಪಸ್ ಆಗದಿದ್ದರೂ ಚಿತ್ರತಂಡ ಇಂತಹ ಗಟ್ಟಿ ನಿರ್ಧಾರಕ್ಕೆ ಬಂದಿದೆ. ಹಾಗಂತ ಯೂಟ್ಯೂಬ್‌ನಲ್ಲಿ ರೆಂಟಲ್ ಮಾಡೆಲ್ ಆಯ್ಕೆ ಮಾಡಿ ಒಂದಿಷ್ಟು ಹಣ ನಿಗದಿಪಡಿಸಿ ನೋಡಿ ಎಂದು ಕೇಳುವುದಕ್ಕಿಂತ, ಉಚಿತವಾಗಿ ಯೂಟ್ಯೂಬ್‌ನಲ್ಲಿ ಎಲ್ಲರೂ ಸಿನಿಮಾ ನೋಡಲಿ, ಅವರಿಗೆ ಸಿನಿಮಾ ಇಷ್ಟವಾದರೆ ಮಾತ್ರ ತೋಚಿದಷ್ಟು ಹಣ ಕೊಡಲಿ ಎಂಬ ನಿರ್ಧಾರ ಮಾಡಿದೆ ಚಿತ್ರತಂಡ. ಹೀಗಾಗಿ ನಿರ್ಮಾಣ ಸಂಸ್ಥೆ “ಸಂಡೇ ಸಿನಿಮಾಸ್‌”ನ QR CODE , ಯುಪಿಐ ಐಡಿ ಹಾಗೂ ಬ್ಯಾಂಕ್ ಡಿಟೇಲ್ಸ್‌ ಅನ್ನು ಲಗತ್ತಿಸಿಲಾಗಿದೆ ಜತೆಗೆ ಯುಟ್ಯೂಬ್‌ ಡಿಸ್ಕ್ರಿಪ್ಷನ್‌ ಬಗ್ಗೆ ಮಾಹಿತಿ ಇದೆ.

ಇದನ್ನೂ ಓದಿ: Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

ನಮ್ಮ “ಹೊಂದಿಸಿ ಬರೆಯಿರಿ” ಚಿತ್ರದ ಯುಟ್ಯೂಬ್‌ ಲಿಂಕ್‌ವನ್ನು ಸೋಷಿಯಲ್‌ ಮೀಡಿಯಾದಲ್ಲಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಶೇರ್‌ ಮಾಡುವ ಮೂಲಕ ಎಲ್ಲರಿಗೂ ತಲುಪಿಸಿ ಎಂದು ಚಿತ್ರತಂಡ ಮನವಿ ಮಾಡಿಕೊಂಡಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ನಮ್ಮ ಮುಂದಿನ ಚಿತ್ರದ ವಿವರಣೆಯನ್ನು ಆದಷ್ಟು ಬೇಗ ಹಂಚಿಕೊಳ್ಳುತ್ತೇವೆ ಎಂದಿದ್ದಾರೆ ರಾಮೇನಹಳ್ಳಿ ಜಗನ್ನಾಥ.

ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಜತೆಗೆ ಸ್ನೇಹಿತರ ಜತೆಗೂಡಿ ಸಂಡೇ ಸಿನಿಮಸ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ʻಹೊಂದಿಸಿ ಬರೆಯಿರಿʼ ಸಿನಿಮಾದಲ್ಲಿ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹದೇವ್, ಅನಿರುದ್ದ್ ಆಚಾರ್ಯ, ಭಾವನಾ ರಾವ್, ಐಶಾನಿ ಶೆಟ್ಟಿ, ಸಂಯುಕ್ತ ಹೊರ್ನಾಡ್, ಅರ್ಚನಾ ಜೋಯಿಸ್ ಹಲವರು ನಟಿಸಿದ್ದಾರೆ.

Continue Reading

ಟಾಲಿವುಡ್

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Payal Rajput: ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೋರ್ ನಿರ್ದೇಶಕ ಮತ್ತು ನಿರ್ಮಾಪಕ.

VISTARANEWS.COM


on

Payal Rajput Accuses Rakshana Producers Of Not Clearing Her Dues
Koo

ಬೆಂಗಳೂರು: ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ (Payal Rajput) ` RX 100 ಸಿನಿಮಾ ಮೂಲಕ ಟಾಲಿವುಡ್‌ನಲ್ಲಿ ಖ್ಯಾತಿ ಗಳಿಸಿದರು. ಜತೆಗೆ ಕನ್ನಡ ‘ಹೆಡ್‌ಬುಷ್’ ಚಿತ್ರದಲ್ಲಿ ಮಿಂಚಿದ್ದರು. ಆದರೀಗ ನಟಿ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪ ಮಾಡಿದ್ದಾರೆ. ʻತಂಡ ಇನ್ನೂ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆʼ ಎಂದು ಪೋಸ್ಟ್‌ ಮಾಡಿದ್ದಾರೆ.

ನಟಿ ಪೋಸ್ಟ್‌ನಲ್ಲಿ “ನನ್ನ ಬಳಿ “ರಕ್ಷಣ” ಎಂಬ ಸಿನಿಮಾವಿದೆ . ಇದನ್ನು 2019 ಮತ್ತು 2020ರಲ್ಲಿ ಚಿತ್ರೀಕರಿಸಲಾಗಿದೆ. ಇದನ್ನು ಮೂಲತಃ 5Ws ಎಂದು ಹೆಸರಿಸಲಾಗಿದೆ. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ಆದರೆ ಇತ್ತೀಚೆಗೆ ನನಗೆ ಸಿಕ್ಕ ಯಶಸ್ಸು ನೋಡಿ ಈಗ ನಿರ್ಮಾಪಕರು ಆ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನನ್ನ ಬಾಕಿ ಹಣಗಳನ್ನು ಕ್ಲೀಯರ್‌ ಮಾಡದೇ ಪ್ರಚಾರ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಚಿತ್ರದ ಪ್ರಚಾರಕ್ಕೆ ಬರದೇ ಇದ್ದರೆ ತೆಲುಗು ಉದ್ಯಮದಿಂದ ಬ್ಯಾನ್‌ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನನ್ನ ತಂಡ ಬಾಕಿ ಮೊತ್ತದ ಬಗ್ಗೆ ಚರ್ಚಿಸಿದಾಗ ರಾಜಿ ಮಾಡಿಕೊಳ್ಳಲು ನಿರಾಕರಿಸಿದರು. ನನ್ನ ಹೆಸರನ್ನು ಡ್ಯಾಮೇಜ್ ಆಗುವಂತೆ ಬಳಸಲಾಗುತ್ತಿದೆ. ಇತ್ತೀಚಿನ ಮೀಟಿಂಗ್‌ನಲ್ಲಿ ನನ್ನ ಬಗ್ಗೆ ಅಸಭ್ಯ ಭಾಷೆ ಬಳಸಲಾಗಿದೆ. ನನಗೆ ನೀಡಬೇಕಾದ ಸಂಪೂರ್ಣ ಸಂಭಾವನೆಯನ್ನು ನೀಡದೆ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿದ್ದಕ್ಕಾಗಿ ನಾನು ಈಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದುಕೊಂಡಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ನಟಿ ಪಾಯಲ್ ರಜಪೂತ್ ಕೊನೆಯದಾಗಿ ʻಮಂಗಳವರಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ರಕ್ಷಣ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಪೊಲೀಸ್ ಅಧಿಕಾರಿಯನ್ನು ಒಳಗೊಂಡ ನಿಜ ಜೀವನದ ಘಟನೆಯಿಂದ ಸ್ಫೂರ್ತಿ ಪಡೆದ ಚಿತ್ರ ಎನ್ನಲಾಗಿದೆ. ಚಿತ್ರದಲ್ಲಿ ರೋಷನ್, ಮಾನಸ್, ರಾಜೀವ್ ಕಣಕಾಲ ಮತ್ತು ಶಿವನ್ನಾರಾಯಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಣದೀಪ್ ಠಾಕೂರ್ ನಿರ್ದೇಶಕ ಮತ್ತು ನಿರ್ಮಾಪಕ.

ದೆಹಲಿಯಲ್ಲಿ ಹುಟ್ಟಿ ಬೆಳೆದ ಪಾಯಲ್ ಮೊದಲಿಗೆ ಕಿರುತೆರೆ ಧಾರಾವಾಹಿಯಲ್ಲಿ ನಟಿಸಿದ್ದರು. ‘ಸಪ್ನೋನ್ ಸೇ ಭಾರೆ ನೈನಾ’ ಧಾರಾವಾಹಿಯಲ್ಲಿ ಸೋನಾಕ್ಷಿ ಎನ್ನುವ ಪಾತ್ರ ಮಾಡಿದ್ದರು.ಶೂನ್ಯ ನಿರ್ದೇಶನದ ‘ಹೆಡ್‌ಬುಷ್’ ಚಿತ್ರದಲ್ಲಿ ರೇಷ್ಮಾ ಎನ್ನುವ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದರು.

Continue Reading

ಮಾಲಿವುಡ್

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Mohan Lal: ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್.

VISTARANEWS.COM


on

Mohan Lal watching dr rajkumars super hit song
Koo

ಬೆಂಗಳೂರು: ಕನ್ನಡದ ಕುಲಪುತ್ರ ದಿವಂಗತ ಡಾ. ರಾಜ್ ಕುಮಾರ್ (Dr. Rajkumar) ಎಂದರೆ ಅದು ಕೇವಲ ವ್ಯಕ್ತಿಯಲ್ಲ. ಅವರು ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಸಾರ್ವಭೌಮ ಬಣ್ಣ ಹಚ್ಚಿದ್ದರು. ರಾಜ್‌ಕುಮಾರ್‌ ಅವರನ್ನು ಇಷ್ಟ ಪಡದವರೇ ಇಲ್ಲ. ಇನ್ನು ಮಾಲಿವುಡ್ ನಟ ಮೋಹನ್ ಲಾಲ್‌ಗೂ (Mohan Lal) ರಾಜ್‌ ಅಂದರೆ ಪ್ರೀತಿ. ರಾಜ್‌ಕುಮಾರ್‌ ಅವರ ʻಎರಡೂ ಕನಸುʼ ಚಿತ್ರದ ʻಎಂದೆಂದೂ ನಿನ್ನನ್ನು ಮರೆತು” ಹಾಡನ್ನು ಪ್ಲೇ ಮಾಡಿ ಗುನುಗುತ್ತಿದ್ದರು ಮೋಹನ್ ಲಾಲ್. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಮೋಹನ್ ಲಾಲ್ ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜತೆ ‘ಮೈತ್ರಿ’ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಗಿರಿರಾಜ್ ನಿರ್ದೇಶನದ ಈ ಸೋಶಿಯಲ್ ಡ್ರಾಮಾ ಚಿತ್ರದಲ್ಲಿ ಮಹಾದೇವ್ ಗೊಡ್ಕೆ ಎನ್ನುವ ವಿಜ್ಞಾನಿ ಪಾತ್ರದಲ್ಲಿ ನಟಿಸಿದ್ದರು. 50 ವರ್ಷಗಳ ಹಿಂದೆ ತೆರೆಕಂಡಿದ್ದ ‘ಎರಡು ಕನಸು’ ಚಿತ್ರಕ್ಕೆ ದೊರೆ- ಭಗವಾನ್ ಆಕ್ಷನ್ ಕಟ್ ಹೇಳಿದ್ದರು. ವಾಣಿ ಅವರು ಬರೆದ ಕಾದಂಬರಿ ಆಧರಿಸಿ ಸಿನಿಮಾ ಮೂಡಿ ಬಂದಿತ್ತು.30 ವಾರಗಳ ಕಾಲ ಭರ್ಜರಿ ಪ್ರದರ್ಶನ ಕಂಡಿದ್ದ ‘ಎರಡು ಕನಸು’ ಸಿನಿಮಾ 1982ರಲ್ಲಿ ರೀ ರಿಲೀಸ್ ಆಗಿ ಶತದಿನೋತ್ಸವ ಆಚರಿಸಿತ್ತು. 2015ರಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದು ಸಿನಿಮಾ ಗಮನ ಸೆಳೆದಿತ್ತು. ಇದೀಗ ಮೋಹನ್‌ಲಾಲ್‌ ತಮ್ಮ ಮೊಬೈಲ್ ನಲ್ಲಿ ರಾಜ್ ಕುಮಾರ್ ಹಾಡು ಕೇಳುತ್ತ ಅದೇ ರೀತಿ ಹಾಡಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading
Advertisement
Cannes 2024 Sonam Kapoor dubs this outfit the best at Cannes this year
ಬಾಲಿವುಡ್6 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ24 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್31 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್32 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ55 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ1 hour ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್1 hour ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 hour ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ1 hour ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ2 hours ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌