Priyanka Chopra’s Daughter Malti Owns A Bag Worth High cost Priyanka Chopra: ಪ್ರಿಯಾಂಕಾ ಚೋಪ್ರಾ ಮಗಳ ಕೈಯಲ್ಲಿ ದುಬಾರಿ ಹ್ಯಾಂಡ್‌ಬ್ಯಾಗ್‌; ಬೆಲೆ ಕೇಳಿದ್ರೆ ಅಚ್ಚರಿ ಗ್ಯಾರಂಟಿ! - Vistara News

South Cinema

Priyanka Chopra: ಪ್ರಿಯಾಂಕಾ ಚೋಪ್ರಾ ಮಗಳ ಕೈಯಲ್ಲಿ ದುಬಾರಿ ಹ್ಯಾಂಡ್‌ಬ್ಯಾಗ್‌; ಬೆಲೆ ಕೇಳಿದ್ರೆ ಅಚ್ಚರಿ ಗ್ಯಾರಂಟಿ!

Priyanka Chopra: ಪ್ರಿಯಾಂಕಾ ಚೋಪ್ರಾ ಜೋನಾಸ್, ಇತ್ತೀಚೆಗೆ ಮಗಳೊಂದಿಗಿನ ಫೋಟೊವೊಂದನ್ನು ಹಂಚಿಕೊಂಡಿದ್ದರು. ಚಿಕ್ಕ ಹ್ಯಾಂಡ್‌ಬ್ಯಾಗ್‌ನೊಂದಿಗೆ ಮಾಲತಿ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಳು. ಅದರ ಬೆಲೆ ಕೇಳಿ ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ.

VISTARANEWS.COM


on

Priyanka Chopra Daughter Malti Owns A Bag Worth High cost
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಿಯಾಂಕಾ ಚೋಪ್ರಾ (Priyanka Chopra) ಆಗಾಗ ಮಗಳು ಮಾಲತಿ ಮೇರಿಯ ಕುರಿತಾದ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ಅಮ್ಮನ ಜತೆ ಶಾಪಿಂಗ್ ಮಾಡುವುದರಿಂದ ಹಿಡಿದು ತಂದೆ ನಿಕ್‌ ಜೋನಾಸ್‌ ಜತೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ತನಕ ಫ್ಯಾನ್ಸ್‌ ಹೃದಯ ಗೆಲ್ಲುತ್ತಲೇ ಇರುತ್ತಾಳೆ ಮಾಲತಿ. ಪ್ರಿಯಾಂಕಾ ಚೋಪ್ರಾ ಜೋನಾಸ್, ಇತ್ತೀಚೆಗೆ ಮಗಳೊಂದಿಗಿನ ಫೋಟೊವೊಂದನ್ನು ಹಂಚಿಕೊಂಡಿದ್ದರು. ಚಿಕ್ಕ ಹ್ಯಾಂಡ್‌ಬ್ಯಾಗ್‌ನೊಂದಿಗೆ ಮಾಲತಿ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಳು. ಅದರ ಬೆಲೆ ಕೇಳಿ ನೆಟ್ಟಿಗರು ಅಚ್ಚರಿಗೆ ಒಳಗಾಗಿದ್ದಾರೆ.

ವರದಿಯ ಪ್ರಕಾರ, ಮಾಲತಿ ಮೇರಿ ಹಿಡಿದ ಹ್ಯಾಂಡ್‌ ಬ್ಯಾಗ್‌ ಬರೋಬ್ಬರಿ 2.45 ಲಕ್ಷ ರೂ. ಅಂದರೆ ನೀವು ನಂಬಲೇ ಬೇಕು. ಹೌದು 2.45 ಲಕ್ಷ ರೂ. ಮೌಲ್ಯದ ಬಲ್ಗರಿ ಸರ್ಪೆಂಟಿ ಫಾರೆವರ್ ಕ್ರಾಸ್‌ಬಾಡಿ ಬ್ಯಾಗ್, ಕಾಫ್‌ ಲೆದರ್‌ನಿಂದ (ಕರು ಚರ್ಮದಿಂದ)ತಯಾರಿಸಲಾಗಿದೆ ಮತ್ತು ನೀಲಿ ಹಾಗೂ ಹಸಿರು ಮಿಶ್ರಿತ ಬಣ್ಣದಲ್ಲಿದೆ.

ಕೆಲವು ದಿನಗಳ ಹಿಂದೆ ಪಿಗ್ಗಿ (Priyanka Chopra) ತಮ್ಮ ತಂದೆ ಡಾ ಅಶೋಕ್ ಚೋಪ್ರಾ ಅವರ ಪುಣ್ಯತಿಥಿಯಂದು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಲಾಸ್ ಏಂಜಲೀಸ್ ಮನೆಯಲ್ಲಿ ಪೂಜೆಯನ್ನು ಆಯೋಜಿಸಿದ್ದರು. ಮಗಳು ಮಾಲತಿ ಮೇರಿ ಕೂಡ ಪೂಜೆಯಲ್ಲಿ ಭಾಗಿಯಾಗಿದ್ದು, ಮಾಲತಿ ಲೆಹೆಂಗಾವನ್ನು ಧರಿಸಿದ್ದು ಕ್ಯೂಟ್‌ ಆಗಿ ಕಂಡಿದ್ದಳು.

ಪ್ರಿಯಾಂಕಾ ಪ್ರಸ್ತುತ ತನ್ನ ಮುಂದಿನ ಹಾಲಿವುಡ್ ಪ್ರಾಜೆಕ್ಟ್ – ʻಹೆಡ್ಸ್ ಆಫ್ ಸ್ಟೇಟ್‌ʼನ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಜಾನ್ ಸೆನಾ ಮತ್ತು ಇದ್ರಿಸ್ ಎಲ್ಬಾ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: Priyanka Chopra: ಪ್ರಿಯಾಂಕಾ ತಂದೆಯ ಪುಣ್ಯತಿಥಿಯಂದು ಭಾರತೀಯ ಉಡುಗೆಯಲ್ಲಿ ಮಿಂಚಿದ ಮಗಳು ಮಾಲತಿ ಮೇರಿ!

ಜ್ಯೂ. ಎನ್‌ಟಿಆರ್‌ ಜತೆ ಪ್ರಿಯಾಂಕಾ ಚೋಪ್ರಾ!

ಈಗಾಗಲೇ ಜ್ಯೂನಿಯರ್‌ ಎನ್‌ಟಿಆರ್‌ ʻದೇವರʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರೊಂದಿಗೆ NTR 31 ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್‌ ಕೆಲವು ದಿನಗಳ ಹಿಂದೆ ಪ್ರಶಾಂತ್ ನೀಲ್ ಅವರ ಜನ್ಮದಿನಕ್ಕೆ ಶುಭಹಾರೈಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿತ್ತು. ಜ್ಯೂನಿಯರ್‌ ಎನ್‌ಟಿಆರ್‌ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಅವರ ನಿರ್ಮಾಣ ಸಂಸ್ಥೆಯಾಗಿರುವ ಎನ್ ಟಿಆರ್ ಆರ್ಟ್ಸ್ ಹಾಗೂ ಮೈತ್ರಿ ಮೂವಿ ಮೇಕರ್ಸ್‌ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಇದೀಗ ಈ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಅವರನ್ನು ಚಿತ್ರತಂಡ ಸಂಪರ್ಕಿಸಿದೆ ಎಂದು ವರದಿಯಾಗಿದೆ.

ಜ್ಯೂನಿಯರ್‌ ಎನ್‌ಟಿಆರ್‌ NTR 31 ಚಿತ್ರದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ ಜೋನಸ್ ಅವರನ್ನು ಸಂಪರ್ಕಿಸಲಾಗಿದೆ ಎಂಬುದು ಇತ್ತೀಚಿನ ಸುದ್ದಿ. ಜ್ಯೂನಿಯರ್‌ ಎನ್‌ಟಿಆರ್‌ ಜತೆ ಪಿಗ್ಗಿ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. NTR 31 2024ರಲ್ಲಿ ತೆರೆಗೆ ಬರಲಿದೆ. ಪ್ರಿಯಾಂಕಾ ಅವರು ಸಿಟಾಡೆಲ್‌ನಲ್ಲಿ ಈಗಾಗಲೇ ಆ್ಯಕ್ಷನ್‌ ಸಿಕ್ವೆನ್ಸ್‌ಗಳಲ್ಲಿ ನಟಿಸಿದ್ದಾರೆ. NTR 31 ಸಿನಿಮಾ ಕೂಡ ಆ್ಯಕ್ಷನ್‌ ಸಿನಿಮಾ ಆಗಿದ್ದು. ಪಾತ್ರಗಳು ಕೂಡ ರೋಮಾಂಚನಕಾರಿಯಾಗಿರಲಿದೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

Kanguva Release Date: ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

VISTARANEWS.COM


on

Kanguva Release Date announce and clshes with dhruva sarja Martin
Koo

ಬೆಂಗಳೂರು: ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ನಟ ಸೂರ್ಯ ಅವರ ಬಹು ನಿರೀಕ್ಷಿತ ಫ್ಯಾಂಟಸಿ ಚಿತ್ರ ಕಂಗುವ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶಿವ-ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 10 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ.

ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

Continue Reading

ಟಾಲಿವುಡ್

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Actor Darshan: ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ. 2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan incident Naga Shaurya support
Koo

ಬೆಂಗಳೂರು: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ.

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

Continue Reading

South Cinema

Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Kalki 2898 AD: ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ.

VISTARANEWS.COM


on

Kalki 2898 AD Nag Ashwin Torn Slippers Dedication Behind
Koo

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD (Kalki 2898 AD:), ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಸಿನಿಮಾವನ್ನು ಜನರು ಹಾಡಿ ಹೊಗಳುತ್ತಿದ್ದಾರೆ. ಈ ಚಿತ್ರದ ಜರ್ನಿ ಹೇಗಿತ್ತು ಎಂಬುದನ್ನು ಒಂದೇ ಒಂದು ಫೋಟೋ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ವಿವರಿಸಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ.

ಪ್ರಭಾಸ್‌ ಅವರ ಬಹುನಿರೀಕ್ಷಿತ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ನಾಗ್ ಅಶ್ವಿನ್ . ಈ ಸಿನಿಮಾ ಸೆಟ್ಟೇರಿ ಮೂರು ವರ್ಷ ಕಳೆದಿತ್ತು. ಈ ಚಿತ್ರದ ಜರ್ನಿ ಹೇಗಿತ್ತು ಎಂದು ಫೋಟೊ ಮೂಲಕ ವಿವರಣೆ ನೀಡಿದ್ದಾರೆ. ನಾಗ್ ಅಶ್ವಿನ್ ಅವರು ಇದೇ ಮೊದಲ ಬಾರಿಗೆ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಿಲೀಸ್ ಸಂದರ್ಭದಲ್ಲಿ ನಾಗ್ ಅಶ್ವಿನ್ ಅವರು ಹರಿದ ಚಪ್ಪಲಿ ಫೋಟೋ ಹಂಚಿಕೊಂಡಿದ್ದಾರೆ. ‘ಇದು ತುಂಬಾನೇ ದೀರ್ಘ ರಸ್ತೆ’ ಎಂದು ಬರೆದುಕೊಂಡಿದ್ದಾರೆ. ಈ ಚಪ್ಪಲಿ ಒಂದಷ್ಟು ಕಡೆಗಳಲ್ಲಿ ಹರಿದು ಹೋಗಿದೆ. ಈ ಮೂಲಕ ತಮ್ಮ ಶ್ರಮದ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಈ ಫೋಟೊ ಶೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅನೇಕರು ನಾಗ್ ಅಶ್ವಿನ್ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಟಾಲಿವುಡ್

Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

Kalki 2898 AD: ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Kalki 2898 AD Box Office Day Prabhas Film Indian Opener Earns 180 Crore
Koo

ಬೆಂಗಳೂರು: ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ (Kalki 2898 AD) ಮತ್ತು ಕಮಲ್ ಹಾಸನ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತಿದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದೆ. ಆರಂಭಿಕ ದಿನದಂದು 180 ಕೋಟಿ ರೂ. ಗಳಿಕೆ ಕಂಡಿದೆ. ಕಲ್ಕಿ 2898 ಎಡಿ’ ಚಿತ್ರಕ್ಕೆ ಭಾರತದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಸಿನಿಮಾ ಭಾರತದಲ್ಲಿ 95 ಕೋಟಿ ರೂಪಾಯಿ ಬಾಚಿಕೊಂಡಿದೆ. ಗ್ರಾಸ್ ಕಲೆಕ್ಷನ್ ಲೆಕ್ಕಾಚಾರ ಕೊಟ್ಟರೆ 115 ಕೋಟಿ ರೂಪಾಯಿ ಆಗುತ್ತದೆ.

ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898 AD, ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ, ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆಯಾಗಿ, ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಕಲ್ಕಿ 2898 ಎಡಿ ಸಿನಿಮಾ ಹಲವು ಚಿತ್ರಗಳನ್ನು ಹಿಂದಿಕ್ಕಿದೆ. ಅದರಲ್ಲಿ ಕೆಜಿಎಫ್ 2 (ರೂ. 159 ಕೋಟಿ), ಸಲಾರ್ (ರೂ. 158 ಕೋಟಿ), ಲಿಯೋ (ರೂ. 142.75 ಕೋಟಿ) ಸಿನಿಮಾಗಳ ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ. ಆದರೆ, ಮೊದಲ ದಿನದ ಗಳಿಕೆಯಲ್ಲಿ ‘ಆರ್​ಆರ್​ಆರ್’ (223) ಹಾಗೂ ‘ಬಾಹುಬಲಿ 2’ (217) ಚಿತ್ರವನ್ನು ಹಿಂದಿಕ್ಕಲು ಈ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ರಿಲೀಸ್ ಆಗಿದೆ. ಮೊದಲ ದಿನ ಈ ಚಿತ್ರದ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಜನರು ಚಿತ್ರಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

ಲ್ಕಿಯ ಆಗಮನವು ಹಿಂದೂಗಳಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಈತ ಕಲಿಯುಗದ ಅಂತ್ಯದಲ್ಲಿ ಕಾಣಿಸಿಕೊಳ್ಳುತ್ತಾನೆ ಎಂದೇ ಭಾವಿಸಲಾಗಿದೆ. ಕಲಿಯುಗ ವಂಚನೆ, ಪಾಪ ಮತ್ತು ಅನೈತಿಕತೆಯಿಂದ ತುಂಬಿರುವ ಯುಗವಾಗಿದೆ. ಇದೀಗ ತೆರೆಗೆ ಬಂದಿರುವ ‘ಕಲ್ಕಿ 2898 ಎಡಿ’ ಈ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ತೆಲುಗು ಸೂಪರ್‌ಸ್ಟಾರ್ ಪ್ರಭಾಸ್, ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ತಮಿಳಿನ ಹಿರಿಯ ನಟ ಕಮಲ್ ಹಾಸನ್ ಒಳಗೊಂಡ ಈ ಚಿತ್ರದಲ್ಲಿ ಪೌರಾಣಿಕ ಕಥೆ ಮತ್ತು ವಿಜ್ಞಾನವನ್ನು ಹದವಾಗಿ ಬೆರೆಸಿ ಅದ್ಭುತವಾಗಿ ನಿರ್ಮಿಸಲಾಗಿದೆ. ನಾಗ್ ಅಶ್ವಿನ್ ನಿರ್ದೇಶನದ ಬಹುತೇಕ ಎಲ್ಲಾ ಪ್ರಮುಖ ಪಾತ್ರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಗುರುತಿಸಬಹುದು. ಟ್ರೇಲರ್‌ನಲ್ಲಿ ಭವಿಷ್ಯ ನುಡಿದ ಕಲ್ಕಿಯ ಗುರುತಿನ ಬಗ್ಗೆ ಅಶ್ವಿನ್ ಯಾವುದೇ ಸುಳಿವು ನೀಡಲಿಲ್ಲ.

Continue Reading
Advertisement
CM Siddaramaiah
ಕರ್ನಾಟಕ4 mins ago

CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Dhanya Ramkumar heroine in choukidaar cinema
ಸ್ಯಾಂಡಲ್ ವುಡ್14 mins ago

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Road Accident A huge tree fell on the bike Riders are serious
ಉತ್ತರ ಕನ್ನಡ16 mins ago

Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

Viral Video
Latest22 mins ago

Viral Video: ಸಲಿಂಗ ಪ್ರೇಮ ಪ್ರಕರಣ; ಯುವತಿಯನ್ನು ಮೆಚ್ಚಿ ಮದುವೆಯಾದ ಟಿವಿ ನಟಿ!

US Presidential Election
ವಿದೇಶ22 mins ago

US Presidential Election: ನೀಲಿ ಚಿತ್ರ ತಾರೆ ಜತೆ ಡೊನಾಲ್ಡ್‌ ಟ್ರಂಪ್‌ ಸೆಕ್ಸ್;‌ ಚರ್ಚೆ ವೇಳೆ ಬೈಡೆನ್‌ ಆರೋಪ

Paris olympics 2024
ಕ್ರೀಡೆ22 mins ago

Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

Viral Video
ವೈರಲ್ ನ್ಯೂಸ್28 mins ago

Viral Video: ಐಸ್‌ ಕ್ರೀಂನಲ್ಲಿ ಮನುಷ್ಯನ ಬೆರಳು! ತನಿಖೆಯಲ್ಲಿ ಬಯಲಾಯ್ತು ಭಯಾನಕ ಸತ್ಯ

Kalki 2898 AD 2
ಸಿನಿಮಾ31 mins ago

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್34 mins ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ41 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌