Priyanka Chopra's Met Gala Diamond Necklace Worth Met Gala 2023: ʻಮೆಟ್​ ಗಾಲಾʼ ದಲ್ಲಿ ಪಿಗ್ಗಿ ಧರಿಸಿದ ದುಬಾರಿ ಡೈಮಂಡ್ ನೆಕ್ಲೇಸ್ ಬೆಲೆ ಏಷ್ಟು? - Vistara News

South Cinema

Met Gala 2023: ʻಮೆಟ್​ ಗಾಲಾʼ ದಲ್ಲಿ ಪಿಗ್ಗಿ ಧರಿಸಿದ ದುಬಾರಿ ಡೈಮಂಡ್ ನೆಕ್ಲೇಸ್ ಬೆಲೆ ಏಷ್ಟು?

ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ‘ಮೆಟ್​ ಗಾಲಾ 2023’ (Met Gala 2023) ನಡೆದಿದೆ. ಈ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ನಾಲ್ಕನೇ ಬಾರಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Priyanka Chopra's Met Gala Diamond Necklace Worth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Met Gala 2023

ಅಮೆರಿಕದ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿ ‘ಮೆಟ್​ ಗಾಲಾ 2023’ (Met Gala 2023) ನೆರವೇರಿದೆ. ಈ ವೇದಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳುತ್ತಿರುವುದು ನಾಲ್ಕನೇ ಬಾರಿಗೆ.

Met Gala 2023

ವೈರಲ್ ಟ್ವೀಟ್ ಪ್ರಕಾರ ಪ್ರಿಯಾಂಕಾ ಅವರು ಧರಿಸಿರುವ ಡೈಮಂಡ್‌ ನೆಕ್ಲೇಸ್ 25 ಮಿಲಿಯನ್ ಡಾಲರ್ ಮೌಲ್ಯದ್ದಾಗಿದೆ. ಭಾರತೀಯ ಕರೆನ್ಸಿ ಪ್ರಕಾರ ಇದರ ಬೆಲೆ 204 ಕೋಟಿ ರೂ.

Met Gala 2023

ಪ್ರಿಯಾಂಕಾ ಧರಿಸಿರುವ ಈ ನೆಕ್ಲೇಸ್ ಡ್ರೆಸ್‌ಗೆ ಮ್ಯಾಚ್ ಆಗುವಂತೆ ಅವರ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿತ್ತು.

Met Gala 2023

ಪ್ರಿಯಾಂಕಾ ಚೋಪ್ರಾ ಹಾಗೂ ಪತಿ ನಿಕ್ ಜೋನಾಸ್ ಮೆಟಾ ಗಾಲಾ ಕಾರ್ಯಕ್ರಮದಲ್ಲಿ ಮಿಂಚಿದ್ದು ಹೀಗೆ. ದಂಪತಿ ಕೈ ಕೈ ಹಿಡಿದು ರೆಡ್ ಕಾರ್ಪೆಟ್ ಮೇಲೆ ಒಟ್ಟಿಗೆ ಪೋಸ್ ಕೊಟ್ಟಿದ್ದಾರೆ

Met Gala 2023

ಪಾರ್ಟಿಯ ಬಳಿಕ ಕಾರಿನಲ್ಲಿ ತೆರಳುತ್ತಿದ್ದಾಗ ನಿಕ್‌- ಪ್ರಿಯಾಂಕಾ ಅವರು ರ‍್ಯಾಪರ್‌ ಸಿಂಗರ್‌ ಆಗಿರುವ ಡೋಜಾ ಕ್ಯಾಟ್ ಅವರನ್ನು ಅನುಕರಿಸುವ ತಮಾಷೆಯ ವಿಡಿಯೊವನ್ನು ಹಂಚಿಕೊಂಡು ಸುದ್ದಿಯಲ್ಲಿದ್ದಾರೆ ದಂಪತಿ.

Met Gala 2023

ನಿಕ್ ಜೋನಾಸ್ ಬಿಳಿ ಶರ್ಟ್, ಕಪ್ಪು ಪ್ಯಾಂಟ್, ಟೈ ಮತ್ತು ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಒಬ್ಬರಿಗೊಬ್ಬರು ಪೋಸ್ ನೀಡುತ್ತಿರುವಾಗ ದಂಪತಿ ನಗುತ್ತಿರುವ ವಿಡಿಯೊ ವೈರಲ್‌ ಆಗಿದೆ.

Met Gala 2023

ಇತ್ತೀಚೆಗೆ ಬಿಡುಗಡೆಯಾದ ಅಮೆರಿಕನ್ ವೆಬ್ ಸಿರೀಸ್‌ ಸಿಟಾಡೆಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ ಅವರ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

Uttarakaanda Movie: ನಟ ದೂದ್ ಪೇಡಾ ದಿಗಂತ್ (doodh peda diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

Uttarakaanda Movie doodh peda diganth mirchi mallige
Koo

ಬೆಂಗಳೂರು: ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. ಇದೀಗ ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿದೆ. ನಟ ದೂದ್ ಪೇಡಾ ದಿಗಂತ್ (doodh peda diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್‌ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

‘ಲವ್ ಮತ್ತ್ ಗುಟ್ಕಾ ಜೀವಕ್ಕ್ ಅನಾಹುತ ಹೆಂಗ.. ಹಂಗಾ ದೂದ್ ಪೇಡಾ ದಿಗಂತ್ ಇಗ್ ಮಿರ್ಚಿ ಮಲ್ಲಿಗಿ ಉತ್ತರಕಾಂಡ ಪಿಚ್ಚರದಾಗ’ ಎಂದು ನಿರ್ಮಾಣ ಸಂಸ್ಥೆ ಕೆಆರ್​ಜಿ ಸ್ಟುಡಿಯೋಸ್ ಪೋಸ್ಟ್ ಮಾಡಿದೆ. ದಿಗಂತ್ ಕೈಯಲ್ಲಿ ಪಾನ್ ಪರಾಗ್ ಪ್ಯಾಕ್ ಇದೆ.

ʼಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ಶಿವಣ್ಣ- ಧನಂಜಯ್‌ ಅಭಿನಯದ ʼಉತ್ತರಕಾಂಡʼ ಚಿತ್ರಕ್ಕೆ ಚೈತ್ರಾ ಆಚಾರ್‌ ಎಂಟ್ರಿ

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಟಾಲಿವುಡ್

Nikhil Siddhartha: ಮಗನ ಹೆಸರನ್ನು ರಿವೀಲ್‌ ಮಾಡಿದ ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ನಟ!

Nikhil Siddhartha: ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Nikhil Siddhartha reveals his son name
Koo

ಬೆಂಗಳೂರು: ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ಟಾಲಿವುಡ್‌ ನಟ ನಿಖಿಲ್ ಸಿದ್ಧಾರ್ಥ ಅವರ ಪತ್ನಿ ಪಲ್ಲವಿ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ದಂಪತಿ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ʻಧೀರʼ ಎಂದು (Dheera Siddhartha) ನಾಮಕರಣ ಮಾಡಿದೆ ಜೋಡಿ. ಇದೀಗ ನಿಖಿಲ್‌ ಮಾಧ್ಯಮದ ಜತೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನಿಖಿಲ್ ಸಿದ್ಧಾರ್ಥ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಮಗನೊಂದಿಗೆ ಮನೆಯಲ್ಲಿ ಸಮಯ ಕಳೆಯಲು ಹಾಗೂ ಹೆಂಡತಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ಇಷ್ಟ ಪಡುವುದಾಗಿ ಹೇಳಿಕೊಂಡರು. ನಿಖಿಲ್ ಸಿದ್ಧಾರ್ಥ ಮಾತನಾಡಿ ʻʻನಾವು ಮಗನಿಗೆ ಧೀರ ಸಿದ್ಧಾರ್ಥ ಎಂದು ಹೆಸರಿಟ್ಟಿದ್ದೇವೆ. ನಾನು ಪ್ರತಿದಿನ ಅವನೊಂದಿಗೆ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದೇನೆ. ಏಕೆಂದರೆ ಮಕ್ಕಳು ಬೇಗನೆ ಬೆಳೆಯುತ್ತಾರೆ. ನಾನು ಪಲ್ಲವಿಯೊಂದಿಗೆ ಜವಾಬ್ದಾರಿಗಳನ್ನು ಹಂಚಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇನೆ. ನಾನು ವಾರಕ್ಕೊಮ್ಮೆಯಾದರೂ ಪಾರ್ಟಿಗೆ ಹೋಗುತ್ತಿದ್ದೆ, ಆದರೆ ನಾನು ಈಗ ಅದನ್ನೆಲ್ಲ ಕಡಿಮೆ ಮಾಡಿದ್ದೇನೆ. ಪೋಷಕರಾದ ನಂತರ ನಮ್ಮ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಕೆಟ್ಟ ಅಭ್ಯಾಸಗಳನ್ನು ಬಿಡಬೇಕುʼʼಎಂದರು.

ಇದನ್ನೂ ಓದಿ: Nikhil Siddhartha: ’ಸ್ವಯಂಭು’ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ‘ಪಟಾಕ’!

ಫೆಬ್ರವರಿ 21 ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಧೀರ ಜನಿಸಿದ. ಮಗುವನ್ನು ಎತ್ತಿಕೊಂಡಿರುವ ಫೋಟೊವನ್ನು ನಟ ನಿಖಿಲ್ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಜತೆಗೆ ಹೀಗೆ ಬರೆದುಕೊಂಡಿದ್ದರು. ʻʻಒಂದು ವರ್ಷದ ಹಿಂದೆ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ಮನೆಗೆ ಧಿರ ಬಂದಿದ್ದಾನೆ. ಪಲ್ಲವಿ ಮತ್ತು ನನಗೆ ಇಂದು ಮುದ್ದಾದ ಪುಟ್ಟ ಗಂಡು ಮಗುವಿದೆ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ. ಅತ್ಯಂತ ಸಂತೋಷವಾಗಿದೆʼʼಎಂದು ಬರೆದುಕೊಂಡಿದ್ದರು.

ನಿಖಿಲ್ ಮತ್ತು ಪಲ್ಲವಿ 2020ರಲ್ಲಿ ಮದುವೆಯಾಗಿದ್ದರು. ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಜೋಡಿ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿತ್ತು. ಸಿನಿಮಾ ವಿಚಾರಕ್ಕೆ ಬಂದರೆ ನಿಖಿಲ್‌ ಶೀಘ್ರದಲ್ಲೇ ʻಸ್ವಯಂಭುʼ, ʻದಿ ಇಂಡಿಯಾ ಹೌಸ್ʼ ಮತ್ತು ʻಕಾರ್ತಿಕೇಯ 3ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Ayalaan Movie: ತಮಿಳು ನಟ ಶಿವಕಾರ್ತಿಕೇಯನ್ ‘ಅಯಲಾನ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ

ತೆಲುಗು ನಟ ನಿಖಿಲ್ ಸಿದ್ದಾರ್ಥ್ (Nikhil Siddhartha) ನಟಿಸುತ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ʻಸ್ವಯಂಭುʼ (Swayambhu Movie) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ʻಪಟಾಕʼ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್‌ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಸುಂದರಿ ʻಸ್ವಯಂಭುʼ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ.

ಸ್ವಯಂಭು’ ಶೂಟಿಂಗ್ ಅಖಾಡಕ್ಕೆ ನಭಾ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಝಲಕ್ ಮೂಲಕ ಚಿತ್ರತಂಡ ಆಕೆಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಣಿಯಂತೆ ಕಂಗೊಳಿಸುತ್ತಿರುವ ನಭಾ ಲುಕ್ ರಿವೀಲ್ ಮಾಡಲಾಗಿದೆ. ಆದರೆ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಬಿಟ್ಟುಕೊಟ್ಟಿಲ್ಲ. ಶಿವಣ್ಣ ನಟನೆಯ ʻವಜ್ರಕಾಯʼ ಚಿತ್ರದ ಮೂಲಕ ಸಿನಿಮಾ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ನಭಾ, ಪೂರಿ ಜಗನ್ನಾಥ್ ನಿರ್ದೇಶನದ ʻಇಸ್ಮಾರ್ಟ್ ಶಂಕರ್ʼ ಮೂಲಕ ಖ್ಯಾತಿ ಗಳಿಸಿದರು.

ನಿಖಿಲ್ ನಾಯಕನಟನಾಗಿರುವ ʻಸ್ವಯಂಭುʼ ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ಪಾತ್ರಕ್ಕಾಗಿ ಅವರು ತಯಾರಿಯಲ್ಲಿದ್ದಾರೆ. ಅಂದಹಾಗೇ ಭರತ್ ಕೃಷ್ಣಮಾಚಾರಿ ಸ್ವಯಂಭು ಆ್ಯಕ್ಷನ್ ಕಟ್ ಹೇಳಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻಮಾಸ್ಟರ್‌ ಆನಂದ್‌ʼ ಮಗಳ ಮೊದಲ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ!

Kannada New Movie: ಪ್ರೇಮಗೀಮ ಜಾನೆದೋʼ ಎನ್ನುತ್ತ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟ ಯುವ ಪ್ರತಿಭೆ ಗೌತಮ್ ಆರ್ ಇದೀಗ ʻನಾಲ್ಕನೇ ಆಯಾಮದ ಕಥೆʼ ಒಪ್ಪಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ʻಪ್ರೇಮಗೀಮ ಜಾನೆದೋʼ ಚಿತ್ರ ಮೂಲಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಗೌತಮ್ ಈಗ ನಾಯಕನ ಜತೆ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತಿದ್ದಾರೆ.

VISTARANEWS.COM


on

Kannada New Movie nalkane ayama movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ-ನಿರ್ದೇಶಕ ನಿರೂಪಕ ಮಾಸ್ಟರ್ ಆನಂದ್ (Master Anand) ಮಗಳು ಅಂಜನಿ ವಂಶಿಕಾ ಮೊದಲ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾ ಮಕ್ಕಳ ಸಿನಿಮಾ ಅಲ್ಲ. ಹಾರರ್ ಕಥಾಹಂದರ ಹೊಂದಿರುವ ಸಿನಿಮಾವಿದು. ಲವ್ ಮಾಕ್ಟೇಲ್-2 ಚಿತ್ರ ಖ್ಯಾತಿಯ ನಟಿ ರಚನಾ ಇಂದರ್, ಹೊಸಬರು ಗೌತಮ್ (Gautham) ಕೂಡ ಈ ಸಿನಿಮಾದಲ್ಲಿದ್ದಾರೆ.

ʻಪ್ರೇಮಗೀಮ ಜಾನೆದೋʼ ಎನ್ನುತ್ತ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟ ಯುವ ಪ್ರತಿಭೆ ಗೌತಮ್ ಆರ್ ಇದೀಗ ʻನಾಲ್ಕನೇ ಆಯಾಮದ ಕಥೆʼ ಒಪ್ಪಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ʻಪ್ರೇಮಗೀಮ ಜಾನೆದೋʼ ಚಿತ್ರ ಮೂಲಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಗೌತಮ್ ಈಗ ನಾಯಕನ ಜತೆ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಅವರ ನಿರ್ದೇಶನದ ʻನಾಲ್ಕನೇ ಆಯಾಮಾʼ ಇದೇ ಶುಕ್ರವಾರ (ಏ.19) ತೆರೆಗೆ ಬರುತ್ತಿದೆ.

ಗೌತಮ್ ನಟಿಸಿ ನಿರ್ದೇಶಿಸಿರುವ ʻನಾಲ್ಕನೇ ಆಯಾಮʼದಲ್ಲಿ ನಾಯಕಿಯಾಗಿ ʻಹೆಂಗೆ ನಾವುʼ! ಖ್ಯಾತಿಯ ರಚನಾ ಇಂದರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದ ಮೂಲಕ ಮಾಸ್ಟರ್ ಆನಂದ್ ಮಗಳು ಪಟಾಕಿ ʻಅಂಜನಿ ವಂಶಿಕಾʼ ಕಶ್ಯಪ್ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದು, ಅಮಿತ್ ಗೌಡ,, ಯಶಸ್ವಿನಿ ಎಂ , ಬಲ ರಾಜ್ ವಾಡಿ, ವಿನ್ಸೆಂಟ್, ಮಂಜು ಸ್ವಾಮಿ, ಚಂದ್ರಕಲಾ ಮೋಹನ್, ಬೇಬಿ ನಿಷಿತಾ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ಹಂಸಲೇಖ ಸಮ್ಮುಖದಲ್ಲಿ `ಕಲ್ಜಿಗ’ ಚಿತ್ರದ ಟೈಟಲ್‌ ಪೋಸ್ಟರ್‌ ಔಟ್‌!

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ನಾಲ್ಕನೇ ಆಯಾಮ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ, ಅಭಿನಂದನ್ ಕಶಪ್ಯ ಬ್ಯಾಗ್ರೌಂಡ್ ಸ್ಕೋರ್ ಹಾಗೂ ಸೌಂಡ್ ಡಿಸೈನ್ ಮಾಡಿದ್ದು, ಕೆ ಭ್ರಮೇಂದ್ರ ಹಾಗೂ ಅರುಣ್ ಛಾಯಾಗ್ರಹಣ, ಉಗ್ರಂ ಶ್ರೀಕಾಂತ್ ಸಂಕಲನವಿದೆ.

ಇಂಚರಾ ಕ್ರಿಯೇಷನ್ ನಡಿ ಅರುಣಾ ಮುತ್ತು ರಾಯಪ್ಪ ನಿರ್ಮಾಣ ಮಾಡಿದ್ದು, ಕಿರಣ್ ರಾಯಚೋಟಿ, ದಿವ್ಯಾ ಸಜೋಗ್ ನಿರ್ಮಾಣದಲ್ಲಿ ಜೊತೆಯಾಗಿ ನಿಂತಿದ್ದಾರೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಾಲ್ಕನೇ ಆಯಾಮಾ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Continue Reading

ಕಾಲಿವುಡ್

Veera Dheera Sooran: ಚಿಯಾನ್ ವಿಕ್ರಮ್ 62ನೇ ಸಿನಿಮಾದ ಟೈಟಲ್‌ ಟೀಸರ್‌ ಔಟ್‌!

Veera Dheera Sooran: ‘ವೀರ ಧೀರ ಸೂರನ್’ ಎಂಬ ಟೈಟಲ್‌ನೊಂದಿಗೆ ಸಿನಿಮಾ (Chiyaan Vikram) ಫಸ್ಟ್‌ ಲುಕ್‌ ಪೋಸ್ಟರ್‌ ಶೇರ್‌ ಮಾಡಿಕೊಂಡಿದೆ. “ವೀರ ಧೀರ ಸೂರನ್” ಶೀರ್ಷಿಕೆಯ ಟೀಸರ್ ಚಿತ್ರತಂಡ ಅನಾವರಣಗೊಳಿಸಿದೆ. ಚಿಯಾನ್ 62ರ ಹೊಸ ಶೀರ್ಷಿಕೆಯ ಟೀಸರ್ ಜತೆಗೆ, ʻವೀರ ಧೀರ ಸೂರನ್ʼ ಹೊಸ ಪೋಸ್ಟರ್ ಕೂಡ ಅನಾವರಣ ಮಾಡಿದರು. ಪೋಸ್ಟರ್ ಹಂಚಿಕೊಂಡ ಚಿಯಾನ್‌ “ನೀವು ಗ್ಯಾಂಗ್‌ಸ್ಟರ್‌ ಆಗಿದ್ದರೆ.. ನಾನು ಮಾನ್‌ಸ್ಟರ್‌ !!”ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

VISTARANEWS.COM


on

Veera Dheera Sooran Title Teaser OUT
Koo

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ನಟ ಚಿಯಾನ್ ವಿಕ್ರಮ್ (Veera Dheera Sooran) ಅವರ ಜನ್ಮದಿನದಂದು 62 ನೇ ಸಿನಿಮಾದ ಟೈಟಲ್‌ ರಿವೀಲ್‌ ಆಗಿದೆ. ಎಸ್‌ಯು ಅರುಣ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಚಿಯಾನ್‌ ರಗಡ್‌ ಲುಕ್‌ ನಲ್ಲಿ ಕಂಡಿದ್ದಾರೆ. ‘ವೀರ ಧೀರ ಸೂರನ್’ ಎಂಬ ಟೈಟಲ್‌ನೊಂದಿಗೆ ಸಿನಿಮಾ (Chiyaan Vikram) ಫಸ್ಟ್‌ ಲುಕ್‌ ಪೋಸ್ಟರ್‌ ಶೇರ್‌ ಮಾಡಿಕೊಂಡಿದೆ. “ವೀರ ಧೀರ ಸೂರನ್” ಶೀರ್ಷಿಕೆಯ ಟೀಸರ್ ಚಿತ್ರತಂಡ ಅನಾವರಣಗೊಳಿಸಿದೆ.

ʻವೀರ ಧೀರ ಸೂರನ್ʼ . 3 ನಿಮಿಷ 45 ಸೆಕೆಂಡ್ ಕಾಲ ಟೀಸರ್‌ ಇದೆ. ಜಿವಿ ಪ್ರಕಾಶ್ ಕುಮಾರ್ ಅವರ ಹಿನ್ನೆಲೆ ಸಂಗೀತ ಸಖತ್‌ ಕಿಕ್‌ ಕೊಡುವಂತಿದೆ. ಚಿಯಾನ್ 62ರ ಹೊಸ ಶೀರ್ಷಿಕೆಯ ಟೀಸರ್ ಜತೆಗೆ, ʻವೀರ ಧೀರ ಸೂರನ್ʼ ಹೊಸ ಪೋಸ್ಟರ್ ಕೂಡ ಅನಾವರಣ ಮಾಡಿದರು. ಪೋಸ್ಟರ್ ಹಂಚಿಕೊಂಡ ಚಿಯಾನ್‌ “ನೀವು ಗ್ಯಾಂಗ್‌ಸ್ಟರ್‌ ಆಗಿದ್ದರೆ.. ನಾನು ಮಾನ್‌ಸ್ಟರ್‌ !!”ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಇನ್ನು ಟೀಸರ್‌ನಲ್ಲಿ ಭಾಗ -2 ಎಂದು ಉಲ್ಲೇಖಿಸಲಾಗಿದೆ.

ಚಿಯಾನ್‌ ವಿಕ್ರಮ ಜತೆಗೆ ಎಸ್‌ಜೆ ಸೂರ್ಯ, ಸುರಾಜ್ ವೆಂಜರಮೂಡು ಮತ್ತು ದಸರಾ ವಿಜಯನ್ ಅವರೂ ಇರಲಿದ್ದಾರೆ. ನಟ ಸೂರಜ್‌ಗೆ ಚೊಚ್ಚಲ ತಮಿಳು ಚಿತ್ರ ಇದಾಗಿದೆ.

ಇದನ್ನೂ ಓದಿ: Chiyaan Vikram: ಚಿಯಾನ್ ವಿಕ್ರಮ್ ಜನುಮದಿನಕ್ಕೆ ʻತಂಗಲಾನ್‌ʼ ಚಿತ್ರತಂಡದಿಂದ ಭರ್ಜರಿ ಗಿಫ್ಟ್‌!

ಚಿಯಾನ್ ವಿಕ್ರಮ್ ಜನುಮದಿನಕ್ಕೆ ʻತಂಗಲಾನ್‌ʼ ಚಿತ್ರತಂಡದಿಂದ ಭರ್ಜರಿ ಗಿಫ್ಟ್‌!

ʻʻತಂಗಲಾನ್‌ʼʼ (Thangalaan)ಚಿತ್ರತಂಡ ಏಪ್ರಿಲ್‌ 17ರಂದು ಸಣ್ಣ ವಿಡಿಯೊ ಗ್ಲಿಂಪ್ಸ್‌ ಔಟ್‌ ಮಾಡಿತ್ತು. ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದರು ಚಿಯಾನ್‌ ವಿಕ್ರಮ್‌.

ಅಪ್ರತಿಮ ಪ್ರತಿಭೆ, ವೈಭವದೊಂದಿಗೆ ವಿಸ್ಮಯವನ್ನು ಪ್ರೇರೇಪಿಸುತ್ತದೆ. ಜನ್ಮದಿನದ ಶುಭಾಶಯಗಳು ಚಿಯಾನ್ ವಿಕ್ರಮ್. ದೊಡ್ಡ ಪರದೆ ನಿಮ್ಮ ಉಪಸ್ಥಿತಿಗಾಗಿ ಕಾಯುತ್ತಿದೆ!ʼʼಎಂದು ವಿಡಿಯೊ ಪೋಸ್ಟ್‌ ಮಾಡಿದೆ ಚಿತ್ರತಂಡ. ವಿಡಿಯೊದಲ್ಲಿ, ಚಿಯಾನ್ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ವಿಡಿಯೊದಲ್ಲಿ ವಿವಿಧ ರೀತಿಯ ಆಯುಧಗಳನ್ನು ಹಿಡಿದು, ಒರಟಾದ ಅವತಾರದಲ್ಲಿ ಕಂಡಿದ್ದರು.

ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕನ್ನಡದ ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಲಿದೆ.

Continue Reading
Advertisement
Hubli Murder Case
ಪ್ರಮುಖ ಸುದ್ದಿ18 mins ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ43 mins ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ1 hour ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Man death in tiger attack in Nittur village
ಕೊಡಗು1 hour ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ1 hour ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ1 hour ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 20242 hours ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabah Election
ಪ್ರಮುಖ ಸುದ್ದಿ2 hours ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

DRDO
ತಂತ್ರಜ್ಞಾನ2 hours ago

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

Iran Israel war
ಪ್ರಮುಖ ಸುದ್ದಿ2 hours ago

Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌