Kiccha Sudeep: ಸುದೀಪ್ ಅವರ ಕಾಲು ಹಿಡಿದರೂ ಕರುಣೆ ತೋರಿಲ್ಲ; ನಿರ್ಮಾಪಕ ಕುಮಾರ್‌ ಆರೋಪವೇನು? - Vistara News

South Cinema

Kiccha Sudeep: ಸುದೀಪ್ ಅವರ ಕಾಲು ಹಿಡಿದರೂ ಕರುಣೆ ತೋರಿಲ್ಲ; ನಿರ್ಮಾಪಕ ಕುಮಾರ್‌ ಆರೋಪವೇನು?

Kiccha Sudeep: 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ಈಗಾಗಲೇ ಸುದೀಪ್‌ ಅವರಿಗೆ ಅಡ್ವಾನ್ಸ್‌ ಕೂಡ ಕೊಟ್ಟಿದ್ದೇನೆʼʼಎಂದು ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪಿಸಿದ್ದಾರೆ.

VISTARANEWS.COM


on

Producer MN Kumar Press Meet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು; ಸ್ಯಾಂಡಲ್‌ವುಡ್‌ ಹಿರಿಯ ನಿರ್ಮಾಪಕ, ರಂಗ SSLC, ಆಟೋಗ್ರಾಫ್, ಸ್ವಾತಿ ಮುತ್ತು ಹೀಗೆ ಹಲವು ಸಿನಿಮಾಗಳಿಗೆ ವಿತರಣೆ ಮಾಡಿರುವ ವಿತರಕ ಎಂ ಎನ್‌ ಕುಮಾರ್‌ ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ (Kiccha Sudeep) ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ನಿರ್ಮಾಪಕ ಎಂ ಎನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ್ದಾರೆ. ʻʻಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ನಾನು ಸುದೀಪ್ ಅವರ ಜತೆ ಹಲವಾರು ಸಿನಿಮಾಗಳನ್ನು ಮಾಡಿದ್ದೇನೆ. ಸುಮಾರು 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ಈಗಾಗಲೇ ಸುದೀಪ್‌ ಅವರಿಗೆ ಅಡ್ವಾನ್ಸ್‌ ಕೂಡ ಕೊಟ್ಟಿದ್ದೇನೆʼʼ ಎಂದು ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪಿಸಿದ್ದಾರೆ.

ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪವೇನು?

ನಿರ್ಮಾಪಕ ಎಂ ಎನ್‌ ಕುಮಾರ್‌ ಮಾಧ್ಯಮದ ಮುಂದೆ ಮಾತನಾಡಿ ʻʻಈಗಾಗಲೇ ಸುದೀಪ್‌ ಅವರಿಗೆ ಒಂದು ಸಿನಿಮಾದ ಅಡ್ವಾನ್ಸ್ ಕೂಡ ಕೊಟ್ಟಿದ್ದೇವೆ. ಆದರೆ ಸಿನಿಮಾ ಮಾಡಲು ಒಪ್ಪುತ್ತಿಲ್ಲ. ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ನಾನು ಸುದೀಪ್ ಅವರ ಜತೆ ಹಲವಾರು ಸಿನಿಮಾಗಳನ್ನು ಮಾಡಿದ್ದೇನೆ. ಸುಮಾರು 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ ಗೊಂದಲ ಮಾಡುತ್ತಿದ್ದಾರೆ. ಸುದೀಪ್‌ ಅವರ ಮೇಲಿನ ನಂಬಿಕೆ ಮೇಲೆ ಹಣ ಕೊಟ್ಟಿದ್ದೇನೆ. ನಾನು ಯಾಕೆ ವಾಪಸ್ ಹಣ ಕೇಳಬೇಕು? ಅವರು‌ ಹೇಳಿದಂತೆ ಸಿನಿಮಾ ಮಾಡಿಕೊಡಲಿ‌. ‘ಮುತ್ತತ್ತಿ ಸತ್ಯರಾಜ್’ ಎಂಬ ಟೈಟಲ್ ಫಿಕ್ಸ್ ಆಗಿತ್ತು. ವಾಣಿಜ್ಯ ಮಂಡಳಿಗೆ ಬರಲಿ. ಸುದೀಪ್‌ ಅವರು ನನ್ನ ಎದುರಿಗೆ ಬಂದು ಮಾತನಾಡಲಿ. ನಾವೇ ದುಡ್ಡು ಕೊಟ್ಟು ನಾವೇ ಬೇಡಬೇಕು. ಸುದೀಪ್ ಅವರು ಮಾಡಿರುವ ಈ ಕೆಲಸದಿಂದ ನನಗೆ 8 ವರ್ಷ ಹಾಳಾಗಿದೆ. ಹಣಕೊಟ್ಟು ಬೇಡುವಂತಹ ಸ್ಥಿತಿ ನನಿಗೆ ಬಂದಿದೆʼʼ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಕುಮಾರ್‌ ಅವರು ವಾಣಿಜ್ಯ ಮಂಡಳಿಗೆ ಮನವಿ ಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: Kiccha Sudeep : ಸುದೀಪ್ ಹೊಸ ಸಿನಿಮಾದ ಟೀಸರ್ ರೆಡಿ! ಬಿಡುಗಡೆಯ ಡೇಟ್ ಗೊತ್ತಾಯ್ತಾ?

Kiccha Sudeep

ಫ್ರೀ ಆಗಿ ಯಾವ ಸಿನಿಮಾ ಮಾಡಿಕೊಟ್ಟಿಲ್ಲ!

ʻʻಹಣ ವಾಪಸ್ ಕೊಟ್ಟರೂ ಸರಿ , ಸಿನಿಮಾ ಮಾಡಿದ್ದರೂ ಸರಿ. ಆದರೆ ನಮ್ಮ‌ ಸಮಸ್ಯೆ ಬಗೆಹರಿಯಬೇಕು. ಪ್ರಿಯಾ ಸುದೀಪ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಳಿದರೆ ಮೊಬೈಲ್ ನಂಬರ್ ಚೇಂಜ್ ಮಾಡುತ್ತಾರೆ. ಮನೆಗೆ ಹೋದರೆ ಅವರಿಲ್ಲ ಎಂದು ಸುಳ್ಳು ಹೇಳಿ ಕಳುಹಿಸುತ್ತಾರೆ. ಯಾವ ಸಿನಿಮಾದಲ್ಲೂ ಸುದೀಪ್ ಒಂದು ಪೈಸೆಯನ್ನು ಬಿಟ್ಟಿಲ್ಲ. ನಂದಕಿಶೋರ್ ಅವರೇ ಸುದೀಪ್ ಅವರನ್ನು ಭೇಟಿ ಮಾಡಿಸಿದ್ದು,. 46ಸಾವಿರ ರೂ. ಅಡ್ವಾನ್ಸ್ಅನ್ನು ನಂದಕಿಶೋರ್ ಅವರಿಗೆ ಕೊಟ್ಟಿದ್ದೇನೆ. 7-8ವರ್ಷದ ವ್ಯವಹಾರ ನಮ್ಮ ಇಬ್ಬರದ್ದು. ರಂಗ SSLC ಸಿನಿಮಾದ ಪೂರ್ತಿ ಪೇಮೆಂಟ್ ತೆಗೆದುಕೊಂಡಿದ್ದರು. ಫ್ರೀ ಆಗಿ ಯಾವ ಸಿನಿಮಾವನ್ನೂ ಅವರು ಮಾಡಿಕೊಟ್ಟಿಲ್ಲʼʼ ಎಂದು ಹೇಳಿದ್ದಾರೆ.

ಸುದೀಪ್‌ ಮನೆ ಮುಂದೆ ಧರಣಿ ಮಾಡ್ತೇವೆ!

ʻʻಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಬೇಕು. ಇಲ್ಲವಾದರೆ ಸುದೀಪ್ ಅವರ ಮನೆ ಮುಂದೆ ಧರಣಿ ಮಾಡುತ್ತೇವೆ. ನಾವು ಯಾರನ್ನೂ ಬ್ಯಾನ್ ಮಡುವುದಿಲ್ಲ. ಎಂಟು ವರ್ಷಗಳಿಂದ ನಾನು ಸಿನಿಮಾ ಮಾಡಲೆಂದು ಕಾಯುತ್ತಿದ್ದೇನೆ. ಸುದೀಪ್ ಲೈವ್ ಬಂದರೆ ನಾನು ಪ್ರತಿ ದಾಖಲೆ ಕೊಡುತ್ತೇನೆ. ಸುದೀಪ್ ಅವರ ಕಾಲು ಹಿಡಿದುಕೊಂಡರೂ ಕರುಣೆ ತೋರಿಲ್ಲʼʼ ಎಂದು ಕಣ್ಣೀರು ಹಾಕಿದ್ದಾರೆ ನಿರ್ಮಾಪಕ ಕುಮಾರ್.

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕರ್ ಮಾತನಾಡಿ ʻʻವಾಣಿಜ್ಯ ಮಂಡಳಿಯಿಂದ ಪತ್ರ ಕಳಿಸಿದ್ದರೂ ಸುದೀಪ್ ಬಂದಿಲ್ಲ. ಮಾತೃ ಸಂಸ್ಥೆಗೆ ಅಗೌರವ ತೋರಿಸಿದ್ದಾರೆʼʼಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Raayan Movie: ಸೂಪರ್‌ ಹಿಟ್‌ ಚಿತ್ರಗಳನ್ನು ನಕಲಿಸಿ ಮಾರುವ ಕುಖ್ಯಾತ ಪೈರಸಿ ಗ್ಯಾಂಗ್‌ ರೂವಾರಿ ಬಂಧನ

ಧನುಷ್ ಅಭಿನಯದ ʼರಾಯನ್ʼ ಚಿತ್ರ (Raayan Movie) ಇತ್ತೀಚೆಗೆ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರದಲ್ಲಿ ನಟಿಸುವುದನ್ನು ಹೊರತುಪಡಿಸಿ ಇದು ಅವರ ಎರಡನೇ ನಿರ್ದೇಶನದ ಚಿತ್ರವಾಗಿದೆ. ಜನಪ್ರಿಯತೆ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಈ ಚಿತ್ರವೂ ಪೈರಸಿಗೆ ತುತ್ತಾಗಿದೆ. ಪ್ರಮುಖ ಚಿತ್ರಗಳನ್ನು ಕದ್ದು ಹಂಚುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

By

Raayan Movie
Koo

ತಮಿಳು ನಟ ಧನುಷ್ (Tamil actor Dhanush) ಅಭಿನಯದ ‘ರಾಯನ್’ ಚಿತ್ರದ (Raayan Movie) ದೃಶ್ಯಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿದ್ದು, ಪೈರಸಿ ಸೈಟ್ ತಮಿಳ ರಾಕರ್ಸ್ ನ (Tamil Rockers ) ಸದಸ್ಯ ಜೆಬ್ ಸ್ಟೀಫನ್ ರಾಜ್ ನನ್ನು ಬಂಧಿಸಲಾಗಿದೆ. ʼರಾಯನ್ʼ ಹೊರತಾಗಿ ʼಮಹಾರಾಜʼ (maharaj) ಮತ್ತು ʼಕಲ್ಕಿ 2898ಎಡಿʼ (kalki 2898AD) ಚಿತ್ರದ ನಕಲಿ ಪ್ರತಿಗಳನ್ನು ಈತ ತಯಾರಿಸಿದ್ದ ಎಂದು ಆರೋಪಿಸಲಾಗಿದೆ.

ಧನುಷ್ ಅಭಿನಯದ ರಾಯನ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರದಲ್ಲಿ ನಟಿಸುವುದನ್ನು ಹೊರತುಪಡಿಸಿ ಇದು ಅವರ ಎರಡನೇ ನಿರ್ದೇಶನದ ಚಿತ್ರವಾಗಿದೆ. ಈ ಚಿತ್ರವೂ ಪೈರಸಿಗೆ ತುತ್ತಾಗಿದೆ.

ಮಧುರೈನ ಕುಖ್ಯಾತ ತಮಿಳು ರಾಕರ್ಸ್ ಸದಸ್ಯ ಜೆಬ್ ಸ್ಟೀಫನ್ ರಾಜ್ ಅವರು ಸ್ಟ್ರೀಮಿಂಗ್ ವೆಬ್‌ಸೈಟ್‌ನಲ್ಲಿ ಅಕ್ರಮವಾಗಿ ರಾಯನ್ ಅನ್ನು ರೆಕಾರ್ಡ್ ಮಾಡಿ ಅಪ್‌ಲೋಡ್ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅನಂತರ ಕೇರಳ ಸೈಬರ್ ಕ್ರೈಮ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಜೆಬ್ ಸ್ಟೀಫನ್ ರಾಜ್ ವೆಬ್‌ಸೈಟ್‌ನ ನಿರ್ವಾಹಕರೂ ಆಗಿದ್ದಾರೆ. ಹಲವು ವರ್ಷಗಳಿಂದ ಸಿನಿಮಾಗಳನ್ನು ಈ ರೀತಿ ಸೋರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕೇರಳದ ಸೈಬರ್ ಕ್ರೈಮ್ ಪೊಲೀಸರು ಇತ್ತೀಚೆಗೆ ಪೃಥ್ವಿರಾಜ್ ಸುಕು ಕುಮಾರನ್ ಅವರ ಇತ್ತೀಚಿನ ಮಲಯಾಳಂ ಚಿತ್ರ ʼಗುರುವಾಯೂರಪ್ಪನ್ ಅಂಬಲನಾಡೈʼ ಬಿಡುಗಡೆಯಾದ ಕೇವಲ ಒಂದೇ ದಿನದ ಅನಂತರ ಪೈರೇಟೆಡ್ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಂಡಿತ್ತು. ಬಳಿಕ ಈ ಕುರಿತು ತನಿಖೆ ನಡೆಸಲಾಗಿತ್ತು. ಈ ಎರಡು ಚಲನಚಿತ್ರಗಳ ಹೊರತಾಗಿ ಮಹಾರಾಜ ಮತ್ತು ಕಲ್ಕಿ 2898ಎಡಿ ನ ಪ್ರತಿಗಳು ಕೂಡ ಪೈರೇಟೆಡ್ ವೆಬ್ ಸೈಟ್‌ನಲ್ಲಿ ಕಾಣಿಸಿಕೊಂಡಿತ್ತು.

ತನಿಖಾಧಿಕಾರಿಗಳ ಪ್ರಕಾರ, ಪೈರಸಿ ಸೈಟ್ ಪಾಪ್-ಅಪ್ ಜಾಹೀರಾತುಗಳು ಮತ್ತು ಸದಸ್ಯತ್ವ ಶುಲ್ಕಗಳ ಮೂಲಕ ಹಣವನ್ನು ಗಳಿಸುತ್ತದೆ. ಅವರು ಮೊದಲು ಚಿತ್ರಮಂದಿರಗಳಲ್ಲಿ ರಹಸ್ಯವಾಗಿ ರೆಕಾರ್ಡ್ ಮಾಡಿದ ಚಲನಚಿತ್ರಗಳ ಪ್ರತಿಗಳನ್ನು ಇದರಲ್ಲಿ ಬಿಡುಗಡೆ ಮಾಡುತ್ತಾರೆ. ಅನಂತರ ಅವುಗಳನ್ನು ನವೀಕರಿಸುತ್ತಾರೆ.

Raayan Movie
Raayan Movie


ಧನುಷ್ ಬರೆದು ನಿರ್ದೇಶಿಸಿರುವ ಚಿತ್ರ ʼರಾಯನ್ʼ

ʼರಾಯನ್ʼ ತಮಿಳು ಭಾಷೆಯ ಚಿತ್ರವಾಗಿದ್ದು, ಧನುಷ್ ಬರೆದು ನಿರ್ದೇಶಿಸಿದ್ದಾರೆ. ಇದು ತನ್ನ ಕುಟುಂಬದ ಹತ್ಯೆಗೆ ಸೇಡು ತೀರಿಸಿಕೊಳ್ಳಲು ತರಬೇತಿ ಪಡೆಯುವ ಯುವಕನ ಕಥೆಯನ್ನು ಹೇಳುತ್ತದೆ. ಅವನು ನ್ಯಾಯವನ್ನು ಹುಡುಕುವ ಅನ್ವೇಷಣೆಯಲ್ಲಿ ತೊಡಗುತ್ತಾನೆ, ಅದು ಅವನನ್ನು ಭೂಗತ ಜಗತ್ತಿಗೆ ಕರೆದೊಯ್ಯುತ್ತದೆ.


ಸಾಹಸಮಯ ಚಿತ್ರದಲ್ಲಿ ದುಶಾರ ವಿಜಯನ್, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ಕಾಳಿದಾಸ್ ಜಯರಾಮ್, ನಿತ್ಯಾ ಮೆನೆನ್, ಅಮಲಾ ಪೌಲ್, ಎಸ್‌ಜೆ ಸೂರ್ಯ ಮತ್ತು ವರಲಕ್ಷ್ಮಿ ಶರತ್‌ಕುಮಾರ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ರಾಯನ್ 47.90 ಕೋಟಿ ರೂ. ಗಳಿಸಿದೆ. ಆರಂಭಿಕ ವಾರಾಂತ್ಯದಲ್ಲಿ ಯುಎಸ್ ಬಾಕ್ಸ್ ಆಫೀಸ್‌ನಲ್ಲಿ ರಾಯನ್ ಟಾಪ್ 10ರಲ್ಲಿ ಸ್ಥಾನವನ್ನು ಪಡೆದುಕೊಂಡಿತು. ʼರಾಯನ್ʼ ಯಶಸ್ವಿ ಪ್ರದರ್ಶನದ ಅನಂತರ ಧನುಷ್ ಮುಂದಿನ ಬಾರಿ ʼಕುಬೇರʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 6ನಿರ್ಮಾಪಕರು ಇತ್ತೀಚೆಗೆ ನಟನ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದರು. ಚಿತ್ರದಲ್ಲಿ ಧನುಷ್ ಹೊರತಾಗಿ, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮತ್ತು ಜಿಮ್ ಸರ್ಭ್ ನಟಿಸಲಿದ್ದಾರೆ.

Continue Reading

ಸಿನಿಮಾ

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Actor Shahrukh Khan: ಬಾಲಿವುಡ್‌ನ ಖ್ಯಾತ ನಟರಲ್ಲಿ ಒಬ್ಬರಾದ ಶಾರುಖ್ ಖಾನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. 58 ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Shahrukh Khan
Koo


ಮುಂಬೈ: ಶಾರುಖ್ ಖಾನ್ ಬಾಲಿವುಡ್‍ನ ಖ್ಯಾತ ನಟರಲ್ಲಿ ಒಬ್ಬರು. ಇವರು ಬಾಲಿವುಡ್ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇವತ್ತಿಗೂ ಬಾಲಿವುಡ್‌ಗೆ ಇವರೇ ಬಾದ್‌ ಶಾ! 58ನೇ ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಶಾರುಖ್ ಖಾನ್ (Actor Shahrukh Khan)ಕೊನೆಯ ಬಾರಿಗೆ ರಾಜ್ ಕುಮಾರ್ ಹಿರಾನಿ ಅವರ ʼಡಂಕಿʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ನಟ ಈಗ ಕಣ್ಣಿನ ಚಿಕಿತ್ಸೆಗಾಗಿ ತುರ್ತಾಗಿ ಅಮೆರಿಕಕ್ಕೆ ಹಾರಲಿದ್ದಾರೆ ಎಂದು ಹೇಳಲಾಗಿದೆ.

Actor Shahrukh Khan
Actor Shahrukh Khan

ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ, ನಟ ಶಾರುಖ್ ಖಾನ್ ಅವರನ್ನು ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಿಂದಾಗಿ ಗುಜರಾತ್‍ನ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಸಮಯದಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಅನ್ನು ಬೆಂಬಲಿಸಲು ಅವರು ಅಲ್ಲಿದ್ದಿದ್ದರು.

Actor Shahrukh Khan
Actor Shahrukh Khan

ಈ ಹಿಂದೆ 2014ರಲ್ಲಿ ಶಾರುಖ್ ತಮ್ಮ ದೃಷ್ಟಿಯನ್ನು ಸರಿಪಡಿಸಲು ಸಣ್ಣ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ತಮ್ಮ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಕ್ಕಾಗಿ ಡಾ. ಬುರ್ಜೋರ್ ಬನಾಜಿ ಮತ್ತು ಅವರ ಪತ್ನಿಗೆ ಧನ್ಯವಾದ ತಿಳಿಸಿದ್ದರು. ಈ ಶಸ್ತ್ರಚಿಕಿತ್ಸೆಯಿಂದ ತಮ್ಮ ದೃಷ್ಟಿ ಸರಿಯಾಗಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Actor Shahrukh Khan
Actor Shahrukh Khan

ನಟ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಆಕ್ಷನ್-ಥ್ರಿಲ್ಲರ್ ಕಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ಅವರ ಮಗಳು ಸುಹಾನಾ ಖಾನ್ ಸಹ ನಟಿಸಲಿದ್ದಾರೆ. ಹಾಗೇ ಅಭಿಷೇಕ್ ಬಚ್ಚನ್ ಕೂಡ ಚಿತ್ರದ ಭಾಗವಾಗಲಿದ್ದು, ಅಲ್ಲಿ ಅವರು ಖಳನಾಯಕನಾಗಿ ನಟಿಸಲಿದ್ದಾರೆ. ಆದರೆ, ಅಧಿಕೃತ ದೃಢೀಕರಣ ನಂತರ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ. ಮುಂದೆ ನಟ ಶಾರುಖ್ ಖಾನ್ ಅವರು ಆದಿತ್ಯ ಚೋಪ್ರಾ ಅವರ ಟೈಗರ್ ವರ್ಸಸ್ ಪಥನ್ ಚಿತ್ರದಲ್ಲಿ ಖಾನ್ ಪಥನ್ ಪಾತ್ರವನ್ನು ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಸಿನಿಮಾ

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Double Ismart: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆ ಕಾಣಲಿದೆ. ಈಗಾಗಲೇ ಎರಡು ಹಾಡುಗಳನ್ನು ರಿಲೀಸ್‌ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರತಂಡ ಇದೀಗ ಮೂರನೇ ಹಾಡು ಬಿಡುಗಡೆ ಮಾಡಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ ಮಿಂಚಿದ್ದಾರೆ.

VISTARANEWS.COM


on

Double Ismart
Koo

ಹೈದರಾಬಾದ್‌: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ (Double Ismart) ಸಿನಿಮಾ ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆ ಕಾಣಲಿದೆ. ಈಗಾಗಲೇ ಎರಡು ಹಾಡುಗಳನ್ನು ರಿಲೀಸ್‌ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರತಂಡ ಇದೀಗ ಮೂರನೇ ಹಾಡು ಬಿಡುಗಡೆ ಮಾಡಿದೆ. ಈಗಾಗಲೇ ರಿಲೀಸ್‌ ಆದ ಎರಡು ಹಾಡುಗಳು ಭರ್ಜರಿ ಹಿಟ್ ಆಗಿದ್ದು, ಆ ಸಾಲಿಗೆ ಇದೀಗ ಬಿಡುಗಡೆಯಾದ ʼಕ್ಯಾ ಲಫ್ಡಾʼ ಹಾಡೂ ಸೇರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ (Ram Pothineni) ಹಾಗೂ ನಾಯಕಿ ಕಾವ್ಯಾ ಥಾಪರ್ (Kavya Thapar) ಮಿಂಚಿದ್ದಾರೆ.

‘ಕ್ಯಾ ಲಫ್ಡಾ’ ಹಾಡಿಗೆ ಸಂಗೀತ ನಿರ್ದೇಶಕ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಶ್ರೀ ಹರ್ಷ ಇಮಾನಿ ಸಾಹಿತ್ಯ ಬರೆದಿದ್ದು, ಧನುಂಜಯ್ ಸೀಪಾನ ಮತ್ತು ಸಿಂಧೂಜಾ ಶ್ರೀನಿವಾಸನ್ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ‘ಕ್ಯಾ ಲಫ್ಡಾ’ ರಾಮ್ ಮತ್ತು ಕಾವ್ಯಾ ನಡುವಿನ ಕೆಮಿಸ್ಟ್ರೀ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಖಳ ನಾಯಕನಾಗಿ ಸಂಜಯ್ ದತ್

ಬಾಲಿವುಡ್‌ ನಟ ಸಂಜತ್‌ ದತ್‌ ಇದೀಗ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ಕೆಜಿಎಫ್‌ 2 ಬಳಿಕ ದಕ್ಷಿಣ ಭಾರತದ ಚಿತ್ರಗಳಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ಅವರು ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ʼಡಬಲ್ ಇಸ್ಮಾರ್ಟ್ʼ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಸ್ಯಾಮ್‌ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಹಣವಿದೆ.

ʼಡಬಲ್ ಇಸ್ಮಾರ್ಟ್ʼ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಆಗಸ್ಟ್ 15ರಂದು ಚಿತ್ರ ವಿಶ್ವದಾದ್ಯಂತ ತೆರೆಗೆ ಬರಲಿದ್ದು, ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.

ವಿಶೇಷ ಎಂದರೆ ಇದು 2019ರಲ್ಲಿ ಬಿಡುಗಡೆಯಾದ ‘ಇಸ್ಮಾರ್ಟ್ ಶಂಕರ್’ ಚಿತ್ರದ ಸೀಕ್ವೆಲ್‌. ಮೊದಲ ಭಾಗದಲ್ಲಿ ರಾಮ್‌ ರಾಮ್ ಪೋತಿನೇನಿ ಜತೆಗೆ ಕನ್ನಡತಿ ನಭಾ ನಟೇಶ್ ಮತ್ತು ಬೆಂಗಳೂರು ಮೂಲದ ನಿಧಿ ಅಗರ್‌ವಾಲ್‌ ಅಭಿನಯಿಸಿದ್ದರು. ಆಗ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ʼಡಬಲ್ ಇಸ್ಮಾರ್ಟ್ʼ ಸಿನಿಮಾ ಬರುತ್ತಿದೆ. ಹೀಗಾಗಿ ಕುತೂಹಲ ಮೂಡಿಸಿದೆ. ಇದರಲ್ಲಿ ರಾಮ್‌ ರಾಮ್ ಪೋತಿನೇನಿ, ಕಾವ್ಯಾ ಥಾಪರ್, ಸಂಜಯ್‌ ದತ್‌ ಜತೆಗೆ ಸಯ್ಯಾಜಿ ಶಿಂದೆ, ಬನಿ ಜೆ., ಅಲಿ, ಮಕರಂದ ದೇಶ್‌ಪಾಂಡೆ ಮತ್ತಿತರರು ನಟಿಸುತ್ತಿದ್ದಾರೆ. ಕಳೆದ ವರ್ಷ ತೆರೆಕಂಡ ರಾಮ್‌ ಪೋತಿನೇನಿ ಅಭಿನಯದ ʼಸ್ಕಂದʼ ಚಿತ್ರ ಹೀನಾಯವಾಗಿ ಸೋತಿರುವುದರಿಂದ ಅವರಿಗೆ ಗೆಲುವು ಅನಿವಾರ್ಯ ಎನಿಸಿಕೊಂಡಿದೆ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

Continue Reading

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ14 mins ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER15 mins ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ23 mins ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Raayan Movie
ಸಿನಿಮಾ28 mins ago

Raayan Movie: ಸೂಪರ್‌ ಹಿಟ್‌ ಚಿತ್ರಗಳನ್ನು ನಕಲಿಸಿ ಮಾರುವ ಕುಖ್ಯಾತ ಪೈರಸಿ ಗ್ಯಾಂಗ್‌ ರೂವಾರಿ ಬಂಧನ

Thyroid problem
ಆರೋಗ್ಯ41 mins ago

Thyroid Health Formulas: ನಿಮ್ಮ ಥೈರಾಯ್ಡ್‌ ನಿಮ್ಮ ಕೈಯಲ್ಲಿ! ಥೈರಾಯ್ಡ್‌ ಆರೋಗ್ಯಕ್ಕೆ ಇಲ್ಲಿವೆ ಆರು ಸೂತ್ರಗಳು

Physical abuse
ಕರ್ನಾಟಕ41 mins ago

Physical abuse: ಮಹಿಳೆ ಮೇಲೆ ಅತ್ಯಾಚಾರ; ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿ ಬಂಧನ

ಬೆಂಗಳೂರು60 mins ago

Sadhaka Ratna Award: ತೇಜೋಮಯಿ ಗದ್ದಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

Wayanad Landslide
ಕರ್ನಾಟಕ1 hour ago

Wayanad Landslide: ಕೇರಳ ಭೂ ಕುಸಿತ; ಕನ್ನಡಿಗರಿಗೆ ನೆರವು ನೀಡಲು ಸಹಾಯವಾಣಿ

Monsoon Jacket Fashion
ಫ್ಯಾಷನ್1 hour ago

Monsoon Jacket Fashion: ಸ್ಟೈಲಿಶ್‌ ಜಾಕೆಟ್ ಸ್ಟೈಲಿಂಗ್‌ಗೆ ನಟ ದರ್ಶ್ ಚಂದ್ರಪ್ಪ ಸಿಂಪಲ್‌ ರೂಲ್ಸ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಜುಲೈ 31ರಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಇಂತಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ9 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌