Kiccha Sudeep: ಸುದೀಪ್ ಅವರ ಕಾಲು ಹಿಡಿದರೂ ಕರುಣೆ ತೋರಿಲ್ಲ; ನಿರ್ಮಾಪಕ ಕುಮಾರ್‌ ಆರೋಪವೇನು? Vistara News
Connect with us

South Cinema

Kiccha Sudeep: ಸುದೀಪ್ ಅವರ ಕಾಲು ಹಿಡಿದರೂ ಕರುಣೆ ತೋರಿಲ್ಲ; ನಿರ್ಮಾಪಕ ಕುಮಾರ್‌ ಆರೋಪವೇನು?

Kiccha Sudeep: 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ಈಗಾಗಲೇ ಸುದೀಪ್‌ ಅವರಿಗೆ ಅಡ್ವಾನ್ಸ್‌ ಕೂಡ ಕೊಟ್ಟಿದ್ದೇನೆʼʼಎಂದು ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪಿಸಿದ್ದಾರೆ.

VISTARANEWS.COM


on

Producer MN Kumar Press Meet
Koo

ಬೆಂಗಳೂರು; ಸ್ಯಾಂಡಲ್‌ವುಡ್‌ ಹಿರಿಯ ನಿರ್ಮಾಪಕ, ರಂಗ SSLC, ಆಟೋಗ್ರಾಫ್, ಸ್ವಾತಿ ಮುತ್ತು ಹೀಗೆ ಹಲವು ಸಿನಿಮಾಗಳಿಗೆ ವಿತರಣೆ ಮಾಡಿರುವ ವಿತರಕ ಎಂ ಎನ್‌ ಕುಮಾರ್‌ ಇದೀಗ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ (Kiccha Sudeep) ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ನಿರ್ಮಾಪಕ ಎಂ ಎನ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ್ದಾರೆ. ʻʻಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ನಾನು ಸುದೀಪ್ ಅವರ ಜತೆ ಹಲವಾರು ಸಿನಿಮಾಗಳನ್ನು ಮಾಡಿದ್ದೇನೆ. ಸುಮಾರು 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ಈಗಾಗಲೇ ಸುದೀಪ್‌ ಅವರಿಗೆ ಅಡ್ವಾನ್ಸ್‌ ಕೂಡ ಕೊಟ್ಟಿದ್ದೇನೆʼʼ ಎಂದು ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪಿಸಿದ್ದಾರೆ.

ನಿರ್ಮಾಪಕ ಎಂ ಎನ್‌ ಕುಮಾರ್‌ ಆರೋಪವೇನು?

ನಿರ್ಮಾಪಕ ಎಂ ಎನ್‌ ಕುಮಾರ್‌ ಮಾಧ್ಯಮದ ಮುಂದೆ ಮಾತನಾಡಿ ʻʻಈಗಾಗಲೇ ಸುದೀಪ್‌ ಅವರಿಗೆ ಒಂದು ಸಿನಿಮಾದ ಅಡ್ವಾನ್ಸ್ ಕೂಡ ಕೊಟ್ಟಿದ್ದೇವೆ. ಆದರೆ ಸಿನಿಮಾ ಮಾಡಲು ಒಪ್ಪುತ್ತಿಲ್ಲ. ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ನಾನು ಸುದೀಪ್ ಅವರ ಜತೆ ಹಲವಾರು ಸಿನಿಮಾಗಳನ್ನು ಮಾಡಿದ್ದೇನೆ. ಸುಮಾರು 8 ವರ್ಷದಿಂದ ಒಂದು ಸಿನಿಮಾ ಮಾಡಬೇಕಿತ್ತು. ನಮ್ಮಿಬ್ಬರ ನಡುವೆ ಬಾಂಧವ್ಯವೂ ಚೆನ್ನಾಗಿತ್ತು. ಆದರೀಗ ಸುದೀಪ್‌ ಅವರು ಕೈಗೆ ಸಿಗುತ್ತಿಲ್ಲ. ‌ ಗೊಂದಲ ಮಾಡುತ್ತಿದ್ದಾರೆ. ಸುದೀಪ್‌ ಅವರ ಮೇಲಿನ ನಂಬಿಕೆ ಮೇಲೆ ಹಣ ಕೊಟ್ಟಿದ್ದೇನೆ. ನಾನು ಯಾಕೆ ವಾಪಸ್ ಹಣ ಕೇಳಬೇಕು? ಅವರು‌ ಹೇಳಿದಂತೆ ಸಿನಿಮಾ ಮಾಡಿಕೊಡಲಿ‌. ‘ಮುತ್ತತ್ತಿ ಸತ್ಯರಾಜ್’ ಎಂಬ ಟೈಟಲ್ ಫಿಕ್ಸ್ ಆಗಿತ್ತು. ವಾಣಿಜ್ಯ ಮಂಡಳಿಗೆ ಬರಲಿ. ಸುದೀಪ್‌ ಅವರು ನನ್ನ ಎದುರಿಗೆ ಬಂದು ಮಾತನಾಡಲಿ. ನಾವೇ ದುಡ್ಡು ಕೊಟ್ಟು ನಾವೇ ಬೇಡಬೇಕು. ಸುದೀಪ್ ಅವರು ಮಾಡಿರುವ ಈ ಕೆಲಸದಿಂದ ನನಗೆ 8 ವರ್ಷ ಹಾಳಾಗಿದೆ. ಹಣಕೊಟ್ಟು ಬೇಡುವಂತಹ ಸ್ಥಿತಿ ನನಿಗೆ ಬಂದಿದೆʼʼ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಕುಮಾರ್‌ ಅವರು ವಾಣಿಜ್ಯ ಮಂಡಳಿಗೆ ಮನವಿ ಪತ್ರ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: Kiccha Sudeep : ಸುದೀಪ್ ಹೊಸ ಸಿನಿಮಾದ ಟೀಸರ್ ರೆಡಿ! ಬಿಡುಗಡೆಯ ಡೇಟ್ ಗೊತ್ತಾಯ್ತಾ?

Kiccha Sudeep

ಫ್ರೀ ಆಗಿ ಯಾವ ಸಿನಿಮಾ ಮಾಡಿಕೊಟ್ಟಿಲ್ಲ!

ʻʻಹಣ ವಾಪಸ್ ಕೊಟ್ಟರೂ ಸರಿ , ಸಿನಿಮಾ ಮಾಡಿದ್ದರೂ ಸರಿ. ಆದರೆ ನಮ್ಮ‌ ಸಮಸ್ಯೆ ಬಗೆಹರಿಯಬೇಕು. ಪ್ರಿಯಾ ಸುದೀಪ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೇಳಿದರೆ ಮೊಬೈಲ್ ನಂಬರ್ ಚೇಂಜ್ ಮಾಡುತ್ತಾರೆ. ಮನೆಗೆ ಹೋದರೆ ಅವರಿಲ್ಲ ಎಂದು ಸುಳ್ಳು ಹೇಳಿ ಕಳುಹಿಸುತ್ತಾರೆ. ಯಾವ ಸಿನಿಮಾದಲ್ಲೂ ಸುದೀಪ್ ಒಂದು ಪೈಸೆಯನ್ನು ಬಿಟ್ಟಿಲ್ಲ. ನಂದಕಿಶೋರ್ ಅವರೇ ಸುದೀಪ್ ಅವರನ್ನು ಭೇಟಿ ಮಾಡಿಸಿದ್ದು,. 46ಸಾವಿರ ರೂ. ಅಡ್ವಾನ್ಸ್ಅನ್ನು ನಂದಕಿಶೋರ್ ಅವರಿಗೆ ಕೊಟ್ಟಿದ್ದೇನೆ. 7-8ವರ್ಷದ ವ್ಯವಹಾರ ನಮ್ಮ ಇಬ್ಬರದ್ದು. ರಂಗ SSLC ಸಿನಿಮಾದ ಪೂರ್ತಿ ಪೇಮೆಂಟ್ ತೆಗೆದುಕೊಂಡಿದ್ದರು. ಫ್ರೀ ಆಗಿ ಯಾವ ಸಿನಿಮಾವನ್ನೂ ಅವರು ಮಾಡಿಕೊಟ್ಟಿಲ್ಲʼʼ ಎಂದು ಹೇಳಿದ್ದಾರೆ.

ಸುದೀಪ್‌ ಮನೆ ಮುಂದೆ ಧರಣಿ ಮಾಡ್ತೇವೆ!

ʻʻಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಬೇಕು. ಇಲ್ಲವಾದರೆ ಸುದೀಪ್ ಅವರ ಮನೆ ಮುಂದೆ ಧರಣಿ ಮಾಡುತ್ತೇವೆ. ನಾವು ಯಾರನ್ನೂ ಬ್ಯಾನ್ ಮಡುವುದಿಲ್ಲ. ಎಂಟು ವರ್ಷಗಳಿಂದ ನಾನು ಸಿನಿಮಾ ಮಾಡಲೆಂದು ಕಾಯುತ್ತಿದ್ದೇನೆ. ಸುದೀಪ್ ಲೈವ್ ಬಂದರೆ ನಾನು ಪ್ರತಿ ದಾಖಲೆ ಕೊಡುತ್ತೇನೆ. ಸುದೀಪ್ ಅವರ ಕಾಲು ಹಿಡಿದುಕೊಂಡರೂ ಕರುಣೆ ತೋರಿಲ್ಲʼʼ ಎಂದು ಕಣ್ಣೀರು ಹಾಕಿದ್ದಾರೆ ನಿರ್ಮಾಪಕ ಕುಮಾರ್.

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕರ್ ಮಾತನಾಡಿ ʻʻವಾಣಿಜ್ಯ ಮಂಡಳಿಯಿಂದ ಪತ್ರ ಕಳಿಸಿದ್ದರೂ ಸುದೀಪ್ ಬಂದಿಲ್ಲ. ಮಾತೃ ಸಂಸ್ಥೆಗೆ ಅಗೌರವ ತೋರಿಸಿದ್ದಾರೆʼʼಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ?

Heart attack : ಸ್ಯಾಂಡಲ್‌ವುಡ್‌ ಹಿರಿಯ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ದನ್‌ ಅವರನ್ನು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೃದಯಾಘಾತ ಆಗಿದೆ ಎಂದು ಹೇಳಲಾಗುತ್ತಿದ್ದರೂ ಅವರ ಪುತ್ರ ಇದನ್ನು ಅಲ್ಲಗಳೆದಿದ್ದಾರೆ.

VISTARANEWS.COM


on

Edited by

Bank Janardhan get heart attack
Koo

ಬೆಂಗಳೂರು: ಹಿರಿಯ ನಟ, ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್‌ (Bank Janardhan) ಅವರಿಗೆ ಹೃದಯಾಘಾತ (Heart attack) ಆಗಿದೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ. ಅವರನ್ನು ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ. ಆದರೆ, ಅವರಿಗೆ ಹೃದಯಾಘಾತ ಆಗಿಲ್ಲ ಎಂದು ಪುತ್ರ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್‌ ಜನಾರ್ದನ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಸಿಯುಗೆ ದಾಖಲು ಮಾಡಲಾಗಿದೆ. ಹೃದಯಾಘಾತ ಆಗಿದೆ ಎಂಬ ಸುದ್ದಿ ಎಲ್ಲ ಕಡೆ ಹರಿದಾಡುತ್ತಿದೆ. ಆದರೆ, ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನಡೆಯುತ್ತಿದೆ ಅಷ್ಟೇ. ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿಲ್ಲ ಎಂದು ಅವರ ಪುತ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಅವರು ಈವರೆಗೆ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ನಟನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಾಸ್ಯ ಸೇರಿದಂತೆ ಗಂಭೀರ ಪಾತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದು, ನಟನೆಗೆ ಜೀವ ತುಂಬುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ.

Bank Janardhan get heart attack treatment in ICU manipal hospital

ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಜನಾರ್ದನ್‌, ತಮ್ಮದೇ ಆದ ಅಭಿಮಾನಿ ವರ್ಗವನ್ನು ಕಲೆಹಾಕಿದ್ದರು.

ನಾಳೆ ಆಂಜಿಯೋಗ್ರಾಮ್?

ಸದ್ಯ ನಟ ಬ್ಯಾಂಕ್​ ಜನಾರ್ದನ್​ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬುಧವಾರ ಅವರಿಗೆ ಆಂಜಿಯೋಗ್ರಾಮ್ (Angiogram test) ಮಾಡುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜನಾರ್ದನ್ ಅವರನ್ನು ನೋಡಲು ಯಾರಿಗೂ ಅನುಮತಿ ನೀಡುತ್ತಿಲ್ಲ.

ಬಹುತೇಕ ಸ್ಟಾರ್ ನಟರ ಜತೆ ನಟನೆ

ಗೌರಿ ಗಣೇಶ, ಕೌರವ, ರಂಗ ಎಸ್.ಎಸ್.ಎಲ್.ಸಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಅಲ್ಲದೆ, ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್ ನಟರ ಜತೆ ಇವರು ನಟನೆ ಮಾಡಿದ ಖ್ಯಾತಿಯನ್ನು ಹೊಂದಿದ್ದಾರೆ.

ಉತ್ತಮ ಹಾಸ್ಯ ನಟ

ಬ್ಯಾಂಕ್‌ ಜನಾರ್ದನ್‌ ಕನ್ನಡ ಸಿನಿಮಾ ರಂಗದ ಮಟ್ಟಿಗೆ ಒಬ್ಬ ಅತ್ಯುತ್ತಮ ಹಾಸ್ಯ ನಟರಾಗಿದ್ದಾರೆ. ಸಹಜ ನಟನೆ ಮೂಲಕ ಗಮನ ಸೆಳೆಯುವ ಇವರು, ತಮ್ಮ ಹಾವ-ಭಾವ ಹಾಗೂ ಮಾತಿನ ಮೂಲಕ ಹಾಸ್ಯವನ್ನು ಹಂಚುತ್ತಿದ್ದರು. ಉಪೇಂದ್ರ ನಿರ್ದೇಶನದ ಶ್‌! ಸಿನಿಮಾದಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಮಾಡಿದ ಇವರ ನಟನೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಇದಲ್ಲದೆ ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಕೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ತಮ್ಮ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ.

ಧಾರಾವಾಹಿಯಲ್ಲೂ ನಟನೆ

ಸಿನಿಮಾಗಳ ಜತೆ ಜತೆಯಲ್ಲಿ ಧಾರಾವಾಹಿಗಳಲ್ಲಿಯೂ ಬಣ್ಣ ಹಚ್ಚಿದ್ದ ಬ್ಯಾಂಕ್‌ ಜನಾರ್ದನ್‌ ಅಲ್ಲಿಯೂ ನಗಿಸುವ ಪ್ರಯತ್ನವನ್ನು ಮುಂದುವರಿಸಿದ್ದರು.​ ಪಾಪ ಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲಿ ನಟಿಸಿ ಮನೆ ಮನೆ ಮಾತಾಗಿದ್ದಾರೆ.

ಇದನ್ನೂ ಓದಿ: Cauvery water dispute : ತಮಿಳುನಾಡು ಸಿಎಂ ಜತೆ ಮಾತನಾಡಿ; ಸಿದ್ದರಾಮಯ್ಯಗೆ ಕಿಚ್ಚ ಸುದೀಪ್‌ ಸಲಹೆ

ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ

ಈಗ ಬ್ಯಾಂಕ್‌ ಜನಾರ್ದನ್‌ ಅವರು ಶೀಘ್ರ ಗುಣಮುಖರಾಗಲಿ ಎಂದು ಕನ್ನಡ ಕಲಾವಿದರು, ಸಿನಿಮಾ ಅಭಿಮಾನಿಗಳು ಕೋರಿಕೊಂಡಿದ್ದಾರೆ.

Continue Reading

South Cinema

Cauvery water dispute : ತಮಿಳುನಾಡು ಸಿಎಂ ಜತೆ ಮಾತನಾಡಿ; ಸಿದ್ದರಾಮಯ್ಯಗೆ ಕಿಚ್ಚ ಸುದೀಪ್‌ ಸಲಹೆ

Cauvery water dispute : ಕಾವೇರಿ ನೀರು ವಿವಾದ ಸಂಬಂಧ ಕಿಚ್ಚ ಸುದೀಪ್‌ ರೈತರ ಪರ ನಿಂತಿದ್ದಾರೆ. ರೈತರ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸಿದ್ದಾರೆ. ಅಲ್ಲದೆ, ಸದ್ಯ ಬಂದಿರುವ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಿಕೊಳ್ಳಲು ತಮಿಳುನಾಡು ಸಿಎಂ ಜತೆಗೆ ಮಾತುಕತೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Edited by

Kicchha sudeep tweet on Cauvery water dispute
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ವಿವಾದ ಭುಗಿಲೇಳುತ್ತಲೇ ಇದೆ. ತಮಿಳುನಾಡಿಗೆ ನೀರು ಬಿಡುತ್ತಿರುವ (Cauvery water to Tamil Nadu) ರಾಜ್ಯ ಸರ್ಕಾರದ (Government of Karnataka) ನಿಲುವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ವೇಳೆ ಮಂಗಳವಾರ (ಸೆಪ್ಟೆಂಬರ್‌ 26) ರಾಜಧಾನಿ ಬೆಂಗಳೂರನ್ನು ಬಂದ್‌ (Bangalore bandh) ಮಾಡಿ ಆಕ್ರೋಶವನ್ನು ಹೊರಹಾಕಲಾಗಿದೆ. ಅಲ್ಲದೆ, ಚಿತ್ರನಟರು ಕಾವೇರಿ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿರುವ ಈ ಹೊತ್ತಿನಲ್ಲಿ ಒಬ್ಬೊಬ್ಬರಾಗಿಯೇ ಮಾತನಾಡುತ್ತಿದ್ದಾರೆ. ಸೋಮವಾರ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ದರ್ಶನ್‌ (Actor Darshan) ಭಾಗಿಯಾಗಿ ಕಾವೇರಿ ಪರ ಧ್ವನಿ ಎತ್ತಿದ್ದರು. ಈಗ ನಟ ಕಿಚ್ಚ ಸುದೀಪ್‌ (Kichcha Sudeep) ಟ್ವೀಟ್‌ ಮಾಡುವ ಮೂಲಕ ಕಾವೇರಿ ನಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

ಕಾವೇರಿ ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಸುದೀಪ್‌ ಟ್ವೀಟ್‌ ಮೂಲಕ ಹೇಳಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮಿಳುನಾಡು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂಬ ಸಲಹೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!

ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಬೇಕು ಎಂಬ ಸಲಹೆಯನ್ನು ಸಹ ಕಿಚ್ಚ ಸುದೀಪ್‌ ಇದೇ ವೇಳೆ ನೀಡಿದ್ದಾರೆ. ಅಲ್ಲದೆ, ಈ ಜಲ ವಿವಾದವನ್ನು ಶೀಘ್ರದಲ್ಲಿಯೇ ಬಗೆಹರಿಸಬೇಕು ಎಂಬ ಕಳಕಳಿಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಕಿಚ್ಚ ಸುದೀಪ್‌ ಟ್ವೀಟ್‌ನಲ್ಲೇನಿದೆ?

“ಸಮಸ್ತ ಕನ್ನಡ ಜನತೆಗೆ ನಮಸ್ಕಾರ; ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಕೃಷಿ ಮಾತ್ರವಲ್ಲದೆ, ಜನರ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬ್ಯುನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ.

ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ, ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ.

ಇದನ್ನೂ ಓದಿ: Cauvery water dispute : ಕಾವೇರಿ ಮಾತುಕತೆಗೆ ನಾವು ಸಿದ್ಧ; ಮೋದಿ ಮನಸ್ಸು ಮಾಡಲಿ ಎಂದ ಸಿದ್ದರಾಮಯ್ಯ

ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ – ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು” ಎಂದು ಕಿಚ್ಚ ಸುದೀಪ್‌ ಟ್ವೀಟ್‌ ಮೂಲಕ ಬರೆದುಕೊಂಡಿದ್ದಾರೆ.

Continue Reading

South Cinema

Pooja Hegde: ಖ್ಯಾತ ಕ್ರಿಕೆಟಿಗನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಪೂಜಾ ಹೆಗ್ಡೆ?

Pooja Hegde: ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿದೆ.ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ.

VISTARANEWS.COM


on

Edited by

Pooja Hegde
Koo
Pooja Hegde
ನಟಿ ಪೂಜಾ ಹೆಗ್ಡೆ Pooja Hegde ಹಲವು ಸಿನಿಮಾಗಳು ಸೋಲು ಕಂಡಿವೆ ನಟಿ ಆಗಾಗ ಫೋಟೊ ಶೂಟ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ ಆದರೀಗ ನಟಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ
Pooja Hegde
ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: Pooja Hegde: ಕೆಂಪು ಉಡುಪಿನಲ್ಲಿ ಸಖತ್‌ ಹಾಟ್‌ ಆಗಿ ಕಂಡ ಪೂಜಾ ಹೆಗ್ಡೆ

Pooja Hegde
ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿದೆ ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ
Pooja Hegde
ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿವೆ
Pooja Hegde
ನಟಿ ಸೌತ್ ಬಾಲಿವುಡ್ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ
Pooja Hegde
ಓಕೆ ಲೈಲಾ ಪಾರೋ ಚಿತ್ರದ ಮೂಲಕ ಪೂಜಾ ನಾಯಕಿಯಾಗಿ ಪದಾರ್ಪಣೆ ಮಾಡಿದರು
Continue Reading

South Cinema

Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ

Darshan Thoogudeepa: ನಟ ದರ್ಶನ್ ಅವರ ಬೇಜವಾಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

VISTARANEWS.COM


on

Edited by

actor Darshan
Koo

ಮಂಡ್ಯ: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ)‌ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್‌ ಕಲಾವಿದರೂ ಕೂಡ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಕೂಡ ರೈತರ ಬೆಂಬಲಕ್ಕೆ ನಿಂತಿದ್ದರು. ಈ ವೇಳೆ ಕನ್ನಡ ಸಿನಿಮಾ ಕಲಾವಿದರು ಅದಕ್ಕೆ ಬರಲಿಲ್ಲ, ಇದಕ್ಕೆ ಬರಲಿಲ್ಲ ಎಂದು ಹೇಳುತ್ತೀರಲ್ಲ ಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ತಮಿಳು ನಟರು ಹಾಗೂ ಅವರ ಸಿನಿಮಾಗಳ ಬಗ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಇದೀಗ ನಟ ದರ್ಶನ್ ಅವರ ಬೇಜಾವಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

ನಟ ದರ್ಶನ್ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಹೋರಾಟ ನಡೆಸಿದೆ. ಕಾವೇರಿ ವಿಚಾರವಾಗಿ ನಟ ದರ್ಶನ್‌ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ʻʻನಟ ದರ್ಶನ್ ಅವರು ಕೂಡಲೇ ರೈತರಲ್ಲಿ ಕ್ಷಮೆ ಕೇಳಬೇಕು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದರೆ ಬಲ ಸಿಗುತ್ತದೆ ಎಂದು ಭಾವಿಸಿದ್ದೇವು. ಅದಕ್ಕಾಗಿಯೇ ನಾವು ಆಹ್ವಾನಿಸಿದ್ದೇವು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು. ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿಬೇಕಿತ್ತುʼʼ ಎಂದು ರೈತರು ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Darshan Thoogudeepa: ತಮಿಳು ಸಿನಿಮಾ ಯಾಕೆ ನೋಡಿದ್ರಿ? ಕಾವೇರಿ ವಿಚಾರದಲ್ಲಿ ದರ್ಶನ್‌ ಕೆಂಡ

ದರ್ಶನ್‌ ಹೇಳಿದ್ದೇನು?

ಕಾವೇರಿ ಗಲಾಟೆ ಆರಂಭ ಆಗುತ್ತಿದ್ದಂತೆ ಸ್ಯಾಂಡಲ್‌ವುಡ್‌ ನಟರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡ ಚಿತ್ರರಂಗದ ತಾರೆಗಳು ಧ್ವನಿ ಎತ್ತುತ್ತಿಲ್ಲ ಎಂಬಂತಹ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ನಟ ದರ್ಶನ್‌ ಖಾರವಾಗಿಯೇ ಮಾತನಾಡಿದ್ದರು. ʻʻಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ. ದರ್ಶನ್, ಶಿವಣ್ಣ, ಸುದೀಪ್, ಯಶ್ ಮಾತ್ರ ನಿಮಗೆ ಕಾಣುತ್ತಾರಾ? ಅವರು ಯಾರೂ ಕಾಣಿಸೋದಿಲ್ಲವೇ?ʼʼ ಎಂದು ಕನ್ನಡ ಕಲಾವಿದರ ಬಗ್ಗೆ ಟೀಕೆ ಮಾಡಿದವರಿಗೆ ದರ್ಶನ್ ತಿರುಗೇಟು ನೀಡಿದ್ದರು.

ದರ್ಶನ್‌ ವಿಡಿಯೊದಲ್ಲಿ ʻʻನೋಡಿ ಸ್ವಾಮಿ ಮೊನ್ನೆ ಮೊನ್ನೆಯಷ್ಟೇ ಒಂದು ತಮಿಳು ಸಿನಿಮಾ ರಿಲೀಸ್ ಆಯ್ತು. ಒಬ್ಬ ವಿತರಕ 6 ಕೋಟಿಗೆ ಸಿನಿಮಾ ತಗೊಂಡ. 35, 36 ಕೋಟಿ ರೂ. ಮಾಡಿದ. ಆ ಸಿನಿಮಾವನ್ನು ಇಲ್ಲಿ ತಮಿಳಿನವರು ನೋಡಿದ್ರಾ ಸ್ವಾಮಿ? ಎಲ್ಲೋ ಇದ್ದು ಏನೋ ಮಾಡಿದವರಿಗೆ ನೂರಾರು ಕೋಟಿ ಕೊಡ್ತೀರಾ? ಯಾಕೆ ನೀವು ಕನ್ನಡ ಸಿನಿಮಾಗೆ ಕೊಡಲ್ಲ?.” ಎಂದು ಪ್ರಶ್ನೆ ಮಾಡಿದ್ದರು. ನೀವು ಕನ್ನಡ ಸಿನಿಮಾ ನೋಡೋದಿಲ್ಲ, ನಾವೇಕೆ ಬೆಂಬಲ ನೀಡಬೇಕು ಎಂಬರ್ಥದಲ್ಲಿ ಮಾತನಾಡಿದ್ದರು.

Continue Reading
Advertisement
MLA BY Vijayendra
ಕರ್ನಾಟಕ4 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ4 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ4 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ4 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ5 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್5 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ6 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ6 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ6 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ6 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌