Prrabhudeva RC 15 surprises Actor Ramcharan Actor Ramcharan: RRR ಆಸ್ಕರ್‌ ಗೆದ್ದ ಬಳಿಕ ದೇಶಕ್ಕೆ ವಾಪಸ್ಸಾದ ರಾಮ್‌ಚರಣ್‌ಗೆ ಪ್ರಭುದೇವರಿಂದ ಬಿಗ್ ಸರ್‌ಪ್ರೈಸ್ - Vistara News

South Cinema

Actor Ramcharan: RRR ಆಸ್ಕರ್‌ ಗೆದ್ದ ಬಳಿಕ ದೇಶಕ್ಕೆ ವಾಪಸ್ಸಾದ ರಾಮ್‌ಚರಣ್‌ಗೆ ಪ್ರಭುದೇವರಿಂದ ಬಿಗ್ ಸರ್‌ಪ್ರೈಸ್

RC15 ಚಿತ್ರತಂಡದಿಂದ ವಿಭಿನ್ನವಾಗಿ ನಟನನ್ನು ವೆಲ್‌ಕಮ್‌ ಮಾಡಿದ್ದಾರೆ.ತಂಡಕ್ಕೆ ಧನ್ಯವಾದ ಅರ್ಪಿಸಲು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ ರಾಮ್‌ಚರಣ್‌ (Actor Ramcharan).

VISTARANEWS.COM


on

Prrabhudeva RC 15 surprises Actor Ramcharan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರ್‌ಆರ್‌ಆರ್ ಆಸ್ಕರ್‌ ಪ್ರಶಸ್ತಿ ದೊರೆತ ಬಳಿಕ ರಾಮ್‌ ಚರಣ್‌ (Actor Ramcharan) ಅವರು ಭಾರತಕ್ಕೆ ಮರಳಿದ್ದು, ಹೈದರಾಬಾದ್‌ ವಿಮಾನ ನಿಲ್ದಾಣದಲ್ಲಿ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಇದೀಗ RC15 ಚಿತ್ರತಂಡದಿಂದ ವಿಭಿನ್ನವಾಗಿ ನಟನನ್ನು ವೆಲ್‌ಕಮ್‌ ಮಾಡಲಾಗಿದೆ. ಈ ಸಿನಿಮಾ ಭಾಗವಾಗಿರುವ ಪ್ರಭುದೇವ ಹಾಗೂ ಚಿತ್ರತಂಡ ನಾಟು ನಾಟು ಹಾಡನ್ನು ಸೆಟ್‌ನಲ್ಲಿಯೇ ಸ್ಟೆಪ್ಸ್‌ ಹಾಕಿ ರಾಮ್‌ಚರಣ್‌ ಅವರನ್ನು ಸ್ವಾಗತಿಸಿದ್ದಾರೆ. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ತಂಡಕ್ಕೆ ಧನ್ಯವಾದ ಅರ್ಪಿಸಲು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವನ್ನು ಹಂಚಿಕೊಂಡ ರಾಮ್ ಚರಣ್, “ಇಂತಹ ಆತ್ಮೀಯ ಸ್ವಾಗತಕ್ಕಾಗಿ ನಿಮಗೆಲ್ಲರಿಗೂ ಧನ್ಯವಾದ ಅಷ್ಟೇ ಹೇಳಲು ಸಾಧ್ಯವಿಲ್ಲ. ನಮ್ಮ ಗ್ರ್ಯಾಂಡ್ ಮಾಸ್ಟರ್ ಪ್ರಭುದೇವ ಸರ್ ಅವರ ಸಪ್ರೈಸ್‌ಗೂ ಧನ್ಯವಾದಗಳು. ಮತ್ತೆ RC15 ಚಿತ್ರದ ಚಿತ್ರೀಕರಣಕ್ಕೆ ಮರಳಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

ಆಸ್ಕರ್ ಪ್ರಶಸ್ತಿ ಪಡೆದ ಬಗ್ಗೆ ಮಾತನಾಡಿರುವ ರಾಮ್‌ ಚರಣ್‌, “ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ರಾಜಮೌಳಿ ಸರ್‌, ಕೀರವಾಣಿ ಮತ್ತು ಚಂದ್ರಬೋಸ್‌ ಸರ್‌ ಅವರ ಬಗ್ಗೆ ನಮಗೆ ಹೆಮ್ಮೆಯಿದೆ. ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹೀಗೆ ಭಾರತದ ಎಲ್ಲ ಭಾಗದ ಜನರು ಆರ್‌ಆರ್‌ಆರ್‌ ಸಿನಿಮಾ ನೋಡಿ ಹರಸಿದ್ದಾರೆ. ನಾಟು ನಾಟು ಹಾಡು ನಮ್ಮದಲ್ಲ ಬದಲಾಗಿ ಭಾರತೀಯರದ್ದು” ಎಂದು ಹೇಳಿದ್ದಾರೆ.

ರಾಮ್‌ ಚರಣ್‌ ಪೋಸ್ಟ್‌

RC15 ಸಿನಿಮಾ

RC15 ಚಲನಚಿತ್ರಕ್ಕೆ ತಾತ್ಕಾಲಿಕವಾಗಿ RC15 ಎಂದು ಹೆಸರಿಸಲಾಗಿದೆ. ಇದರಲ್ಲಿ ಕಿಯಾರಾ ಆಡ್ವಾಣಿ, ಎಸ್‌ಜೆ ಸೂರ್ಯ, ಜಯರಾಮ್, ಅಂಜಲಿ ಮತ್ತು ಶ್ರೀಕಾಂತ್ ಕೂಡ ನಟಿಸಿದ್ದಾರೆ. ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಆರ್‌ಸಿ 15 ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಪ್ರಭುದೇವ ಮುಂದಿನ ಸಿನಿಮಾ ‘wolfʼ

ಈ ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕರಾಗಿರುವ ಸಂದೇಶ್‌ ನಾಗರಾಜ್‌ ಅವರು ನಿರ್ಮಿಸಿದ್ದಾರೆ. ವಿನು ವೆಂಕಟೇಶ್‌ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆಯುವುದರ ಜತೆ ಆಕ್ಷನ್‌ ಕಟ್‌ ಕೂಡ ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಬಹುಕೋಟಿ ವೆಚ್ಚವನ್ನು ಮಾಡಲಾಗಿದೆ.

ಇದನ್ನೂ ಓದಿ: Oscars 2023: ನಮ್ಮ ಮಗು ನಮಗೆ ತುಂಬ ಅದೃಷ್ಟವನ್ನು ತರುತ್ತಿದೆ: ರಾಮ್‌ಚರಣ್‌

ಚಿತ್ರದಲ್ಲಿ ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಪುಷ್ಪ ಖ್ಯಾತಿಯ ಅನಸೂಯ ಸೇರಿ ಅನೇಕರು ಬಣ್ಣ ಹಚ್ಚಿದ್ದಾರೆ. ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿರುವುದಾಗಿ ಚಿತ್ರತಂಡ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Pavithra Jayaram ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದರು.

VISTARANEWS.COM


on

Pavithra Jayaram Trinayani Serial Son Prajwal Reaction
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ಈ ಬಗ್ಗೆ ಮಾತನಾಡಿ ʻಅಮ್ಮನಿಗೆ ಊರಿನ ಜತೆ ಒಡನಾಟ ತುಂಬ ಚೆನ್ನಾಗಿಯೇ ಇತ್ತು. ಚಿತ್ರರಂಗ ಎಂದರೆ ನಿಮಗೆ ಗೊತ್ತು. ನಾನು ಇಂಡಸ್ಟ್ರಿಗೆ ಬಂದರೂ ನನ್ನ ಜತೆ ಯಾರಾದರೂ ಇದ್ದಾರೆ ಅಂದರೆ ಫಸ್ಟ್‌ ಈ ರೀತಿ ರೂಮರ್ಸ್‌ ಹುಟ್ಟಿಕೊಳ್ಳುತ್ತೆ. ಚಂದ್ರಕಾಂತ್‌ ಕುಟುಂಬ ಕೂಡ ಬೇಸರದಲ್ಲಿದೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

ಚಂದ್ರಕಾಂತ್‌ ಪತ್ನಿ ಹೇಳಿದ್ದೇನು?

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದಿದ್ದರು.

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ

Continue Reading

ಸ್ಯಾಂಡಲ್ ವುಡ್

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

IPL 2024: ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

VISTARANEWS.COM


on

IPL 2024 The people paid revenge for the controversial post ashwini Puneeth Rajkumar
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕೀಳುಮಟ್ಟದ ಟ್ವೀಟ್‌ ಬಗ್ಗೆ ಸಮಾಧಾನವಾಗಿಯೇ ಉತ್ತರ ಕೊಟ್ಟಿದ್ದ ದೊಡ್ಮನೆ ಸೊಸೆ!

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Continue Reading

ಬಾಲಿವುಡ್

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Kattappa To Turn Modi: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

VISTARANEWS.COM


on

Kattappa To Turn Modi Sathyaraj To Play Biopic On Prime Minister
Koo

ಬೆಂಗಳೂರು: ಬ್ಲಾಕ್‌ಬಸ್ಟರ್ `ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa To Turn Modi) ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ (Veteran actor Sathyaraj) ಅವರು ಪ್ರಧಾನಿ ನರೇಂದ್ರ ಮೋದಿ (Biopic On Prime Minister) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಪಾತ್ರವನ್ನು ಸಿನಿಮಾ ತಜ್ಞ ರಮೇಶ್ ಬಾಲಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರ ಜೀವನ ತೆರೆ ಮೇಲೆ ಬಂದಿರುವುದು ಇದೇನು ಮೊದಲಲ್ಲ. 2019 ರಲ್ಲಿ, ನಟ ವಿವೇಕ್ ಒಬೆರಾಯ್, ಓಮಂಗ್ ಕುಮಾರ್ ನಿರ್ದೇಶಿಸಿದ ಜೀವನಚರಿತ್ರೆಯ ಚಿತ್ರದಲ್ಲಿ ಕಂಡು ಬಂದಿದ್ದರು. ಇದಲ್ಲದೆ, ಮಹೇಶ್ ಠಾಕೂರ್, ಲಾಲ್ಜಿ ಡಿಯೋರಿಯಾ, ರಜಿತ್ ಕಪೂರ್ ಮತ್ತು ಕೆಕೆ ಶುಕ್ಲಾ ಅವರಂತಹ ಇತರ ನಟರು ಮೋದಿ ಕುರಿತು ಸಿನಿಮಾ ಮಾಡಿದ್ದಾರೆ. ಮೋದಿ ಪಾತ್ರದಲ್ಲಿ ಸತ್ಯರಾಜ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದಕ್ಷಿಣ ಭಾರತದ ಹಿರಿಯ ನಟನ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನೂ ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

ಇದನ್ನೂ ಓದಿ: Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

ಭಾರೀ ವಿವಾದವಾಗಿತ್ತು

2019ರ ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯ ಕಾವು ಜೋರಾಗಿತ್ತು. ಇದೇ ಸಂದರ್ಭದಲ್ಲಿ ನಿರ್ಮಾಪಕರು ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಮುಂದಾದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಧ್ಯೆ ಒಣ ರಗಳೆಗೂ ಕಾರಣವಾಯಿತು. ಪಿಎಂ ನರೇಂದ್ರ ಮೋದಿ ಸಿನಿಮಾ ಮತದಾರರಿಗೆ ಆಮಿಷ ಒಡ್ಡಬಹುದು ಎಂಬ ಆರೋಪ ಕೇಳಿ ಬಂತು. ಹಾಗಾಗಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಗಲಿಲ್ಲ. ಫಲಿತಾಂಶ ಪ್ರಕಟವಾದ ಮಾರನೇ ದಿನ ಅಂದರೆ 2019 ಮೇ 24ರಂದು ಸಿನಿಮಾ ಬಿಡುಗಡೆಯಾಯಿತು.

ಬಿಡುಗಡೆ ಮುನ್ನ ಭಾರೀ ಸದ್ದಿಗೆ ಕಾರಣವಾಗಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ, ಬಿಡುಗಡೆಯ ಬಳಿಕ ಅಷ್ಟೇನೂ ಸದ್ದು ಮಾಡಲಿಲ್ಲ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆಯೂ ಸಿಗಲಿಲ್ಲ. 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಹಿಂದಿ ಭಾಷೆಯ ಚಿತ್ರವು ತನ್ನ ಲೈಫ್‌ ಟೈಮ್‌ನಲ್ಲಿ 28 ಕೋಟಿ ರೂ. ಗಳಿಕೆ ಮಾಡಿತ್ತು.

ಸ್ಫೂರ್ತಿಯಾದರು ಮೋದಿ

ಬಹುಶಃ ಸಂಪೂರ್ಣವಾಗಿ ಮೋದಿ ಅವರನ್ನು ಕೇಂದ್ರವಾಗಿಟ್ಟು ಈವರೆಗೆ ಅಷ್ಟೇನೂ ಚಿತ್ರಗಳ ಬಂದಿಲ್ಲ. ಆದರೆ, ಕೆಲವು ಸಿನಿಮಾಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಕೆಲವು ಪಾತ್ರಗಳನ್ನು ಅವರನ್ನು ಹೋಲುತ್ತವೆ. ಹಾಗಾಗಿ, ಮೋದಿ ಅವರಿಗೂ ಸಿನಿಮಾ ರಂಗಕ್ಕೂ ನಂಟಿದೆ ಎದು ಹೇಳಬಹುದು.

Continue Reading

ಸ್ಯಾಂಡಲ್ ವುಡ್

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Kannada New Movie: ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie anartha cinema teaser Out
Koo

ಬೆಂಗಳೂರು: ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ (Kannada New Movie) ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೊದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೀಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು ʻʻಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಒಂದು ಮಟ್ಟಕ್ಕೆ ಪ್ರೀತಿಸಿರುತ್ತಾರೆ. ನಾವುಗಳು ಬ್ರೇಕ್‌ಅಪ್ ಎನ್ನುವ ಪದವನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಿದ ನಂತರ, ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ. ನೋಡುಗರಿಗೆ ಊಹಿಸಲಾಗದ ತಿರುವುಗಳಿವೆ. ಕ್ಲೈಮಾಕ್ಸ್‌ದಲ್ಲಿ ಹೀಗೂ ಆಗಬಹುದು ಎನ್ನುವಲ್ಲಿಗೆ ಶುಭಂ ಬರುತ್ತದೆ. ನಮ್ಮ ಚಿತ್ರವು ಎಲ್ಲಾ ಕಮರ್ಷಿಯಲ್ ಸಿನಿಮಾಗಳ ಅಂಶಗಳನ್ನು ಹೊಂದಿದ್ದರೂ, ಒಂದು ಅಂಶವು ಖಂಡಿತ ಭಿನ್ನವಾಗಿದೆ. ಅದನ್ನು ತಿಳಿಯಲು ನೀವುಗಳು ಚಿತ್ರಮಂದಿರಕ್ಕೆ ಬನ್ನಿರೆಂದುʼʼ ಕೋರಿದರು.



ನಾಯಕನಾಗಬೇಕೆಂದು ಆಸೆ ಪಟ್ಟಿದ್ದೆ. ಉದ್ಯಮದಲ್ಲಿ ಯಶಸ್ಸು ಕಂಡು, ಈಗ ತೇಜಸ್ ಸಿನಿ ಕ್ರಿಯೇಶನ್ಸ್ ಮೂಲಕ ನಿರ್ಮಾಪಕನಾಗಿದ್ದೇನೆ ಎನ್ನುತ್ತಾರೆ ಶ್ರೀಧರ್.ಎನ್.ಸಿ.ಹೊಸಮನೆ. ನಟ ಮಂಡ್ಯರಮೇಶ್ ಬಳಿ ತರಭೇತಿ ಪಡೆದುಕೊಂಡಿರುವ ವಿಶಾಲ್ ಮಣ್ಣೂರು ನಾಯಕ. ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮಂಡ್ಯದ ವಿಹಾನಿ, ಕಿರುಚಿತ್ರಗಳಲ್ಲಿ ನಟಿಸಿ, ಈಗ ನಾಯಕಿಯಾಗಿ ಬಡ್ತಿಗೊಂಡಿದ್ದಾರೆ. ಉಳಿದಂತೆ ಸಿ.ವಿಜಯ್‌ಕುಮಾರ್, ರಕ್ಷಿತ್, ಗಣೇಶ್, ಪ್ರಸನ್ನ ಬಾಗೀನ, ಅರ್ಪಿತ ಮುಂತಾದವರು ನಟಿಸಿದ್ದಾರೆ.

ಸಾಹಿತ್ಯ-ಸಂಗೀತ ಡಾ.ವಿ.ನಾಗೇಂದ್ರಪ್ರಸಾದ್, ಛಾಯಾಗ್ರಹಣ ಕುಮಾರ್‌ಗೌಡನಾಗವಾರ, ಸಂಕಲನ ನಿಷಿತ್‌ಪೂಜಾರಿ-ವಿನಯ್, ಹಿನ್ನಲೆ ಶಬ್ದ ನಿತಿನ್, ಸಾಹಸ ಕುಂಗು ಫು ಚಂದ್ರು ಅವರದಾಗಿದೆ. ವಿತರಕ ಎಂ.ರಮೇಶ್ ಒಡೆತನದ ಅಕ್ಷರ ಫಿಲಿಂಸ್ ಮುಖಾಂತರ ಚಿತ್ರವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Continue Reading
Advertisement
Pavithra Jayaram Trinayani Serial Son Prajwal Reaction
ಸಿನಿಮಾ7 mins ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ33 mins ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್36 mins ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Job Alert
ಉದ್ಯೋಗ48 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Electric shock in udupi
ಉಡುಪಿ2 hours ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ2 hours ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು2 hours ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್2 hours ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್2 hours ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌