Puneeth Rajkumar | ನೆನಪಿನ ಸಾಗರದಲ್ಲಿ ಅಪ್ಪು ಸದಾ ಜೀವಂತ: ಅಶ್ವಿನಿ ಪುನೀತ್‌ ರಾಜಕುಮಾರ್‌ ಭಾವುಕ ಪೋಸ್ಟ್‌! - Vistara News

ಸಿನಿಮಾ

Puneeth Rajkumar | ನೆನಪಿನ ಸಾಗರದಲ್ಲಿ ಅಪ್ಪು ಸದಾ ಜೀವಂತ: ಅಶ್ವಿನಿ ಪುನೀತ್‌ ರಾಜಕುಮಾರ್‌ ಭಾವುಕ ಪೋಸ್ಟ್‌!

ಪುನೀತ್‌ ರಾಜಕುಮಾರ್‌ (Puneeth Rajkumar) ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರು ಭಾವನಾತ್ಮಕ ನುಡಿಗಳುಳ್ಳ ಪೋಸ್ಟ್‌ ಹಾಕಿದ್ದಾರೆ. ಅಪ್ಪು ಅಭಿಮಾನಿಗಳಿಗೆ ಧನ್ಯವಾದಗಳನ್ನೂ ತಿಳಿಸಿದ್ದಾರೆ.

VISTARANEWS.COM


on

Puneeth Rajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ (Puneeth Rajkumar ) ಪುಣ್ಯಸ್ಮರಣೆಯ ದಿನದಂದು ಅಭಿಮಾನಿಗಳು ಸೇರಿದಂತೆ ನಟ ನಟಿಯರು ಸೋಷಿಯಲ್‌ ಮೀಡಿಯಾ ಮೂಲಕ ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಪ್ಪು ಅಭಿಮಾನಿಗಳು ನೋವಿನಲ್ಲಿಯೂ ಪುನೀತ್‌ ಅವರ ಭಾವಚಿತ್ರವನ್ನು ಹಿಡಿದು ಕುಣಿದು ಕುಪ್ಪಳಿಸುತ್ತಿದ್ದಾರೆ. ಇದೀಗ ಅಶ್ವಿನಿ ಪುನೀತ್ ರಾಜಕುಮಾರ್‌ ನೆನಪಿನ ಸಾಗರದಲ್ಲಿ ಎಂಬ ಶೀರ್ಷಿಕೆಯಲ್ಲಿ ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.

ʻʻನೆನಪಿನ ಸಾಗರದಲ್ಲಿ, ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತೀಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Gandhada Gudi | ಮಂಡ್ಯದ ನಿಮಿಷಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್‌ ರಾಜಕುಮಾರ್‌

ಅಪ್ಪು ನೆನೆದು ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ. ಅಪ್ಪು ಇಹಲೋಕ ತ್ಯಜಿಸಿದ ನಂತರ ಅವರು ಮಾಡುತ್ತಿದ್ದ ಸಮಾಜ ಸೇವೆಗಳು, ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡಿದ ಅದೆಷ್ಟೋ ನಿದರ್ಶನಗಳ ಕುರಿತು ಭಾವುಕ ಪೋಸ್ಟ್‌ ಶೇರ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Bigg Boss Kannada | ತಮ್ಮ ಗೆಲುವನ್ನು ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ಗೆ ಅರ್ಪಿಸಿದ ʻಧಮ್‌ ಪವರ್‌ʼ ಟೀಮ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Richa Chadha : ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ.

VISTARANEWS.COM


on

Richa Chadha drank alcohol to perform Sanjay Leela Bhansali’s Heeramandi
Koo

ಬೆಂಗಳೂರು: `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ʻಹೀರಾಮಂಡಿʼ ಸಿನಿಮಾದಲ್ಲಿ (Sanjay Leela Bhansali’s Heeramandi) ನಟಿ ಒಂದು ದೃಶ್ಯದಲ್ಲಿ ಅಭಿನಯಿಸಲು ʻಜಿನ್ʼ ಸೇವಿಸಿದ್ದರಂತೆ. ದೃಶ್ಯ ರಿಯಲ್‌ ಆಗಿ ಬರಬೇಕು ಎಂದು ಮದ್ಯ ಸೇವಿಸಿದ ಪರಿಣಾಮ 30-40 ರೀಟೇಕ್‌ಗಳನ್ನು ಪಡೆದುಕೊಂಡು, ದೃಶ್ಯ ನಿಭಾಯಿಸಲು ಆಗದೇ ಪರದಾಡಿದ್ದರಂತೆ.

ಈ ಬಗ್ಗೆ ನಟಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿ ʻʻಸ್ವಲ್ಪ ಜಿನ್ ಸೇವಿಸಿ ನಟಿಸೋಣ ಎಂದು ಕೊಂಡು ಎಂದಿಗೂ ಕುಡಿಯದ ನಾನು ಜಿನ್ ಸೇವಿಸಿದೆ. ಜಿನ್ ಕುಡಿದ ಕೆಲವೇ ಹೊತ್ತಿನಲ್ಲಿ ದೃಶ್ಯವನ್ನು ನಿಭಾಯಿಸಲು ಕಷ್ಟಕವಾಯ್ತು. ನಟನೆ ಚೆನ್ನಾಗಿ ಆಗುವ ಬದಲಿಗೆ ಇನ್ನೂ ಕೆಟ್ಟದಾಯ್ತ. ಕೇವಲ ಒಂದು ಸೀನ್​ಗೆ ಸುಮಾರು30-40 ರೀಟೇಕ್‌ಗಳನ್ನು ಪಡೆದುಕೊಂಡೆ.  ಸರಿಯಾಗಿ ನಟಿಸಲು ಮಾತ್ರವಲ್ಲ, ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ’ ಎಂದಿದ್ದಾರೆ ರಿಚಾ ಚಡ್ಡಾ.ʼʼ

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಮಸಾನ್’, ಫಕ್ರೆ, ಸರಬ್​ಜಿತ್ ಇನ್ನೂ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿರುವ ‘ಶಕೀಲ’ ಸಿನಿಮಾನಲ್ಲಿಯೂ ರಿಚಾ ಚಡ್ಡ ನಟಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದರು. ಈಗಾಗಲೇ ನೆಟ್‌ಫ್ಲಿಕ್ಸ್‌ನಲ್ಲಿ ಸಿರೀಸ್‌ ಸ್ಟ್ರೀಮಿಂಗ್‌ ಆಗುತ್ತಿದೆ.

ಇದನ್ನೂ ಓದಿ: ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Abdu Rozik: 20 ವರ್ಷದ ಅಬ್ದು ರೋಜಿಕ್ 19 ವರ್ಷದ ಯುವತಿಯನ್ನು ಮದುವೆಯಾಗಲಿದ್ದಾರೆ. ಅಭಿಮಾನಿಗಳು ಕೂಡ ಅಬ್ದು ಮದುವೆಗಾಗಿ ಕಾಯುತ್ತಿದ್ದಾರೆ. ಅಬ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಿಗ್ ಬಾಸ್’ ನಿಂದಾಗಿ ಅಬ್ದು ಖ್ಯಾತಿ ಮತ್ತು ಜನಪ್ರಿಯತೆ ಹೆಚ್ಚಾಯಿತು. ಸಲ್ಮಾನ್ ಖಾನ್ ಅವರ ಜೊತೆಗೂ ಅಬ್ದು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ.

VISTARANEWS.COM


on

Abdu Rozik Bigg Boss 16 gets engaged
Koo

ಬೆಂಗಳೂರು: ಹಿಂದಿ ಬಿಗ್‌ ಬಾಸ್‌ ಸೀಸನ್‌ 16ರ (Bigg Boss 16 fame Abdu Rozik) ಖ್ಯಾತಿಯ ಅಬ್ದು ರೋಜಿಕ್ (Abdu Rozik) ತಾವು ಎಂಗೇಜ್‌ ಆಗಿರುವ ವಿಚಾರವನ್ನು ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. ಅಬ್ದು ರೋಜಿಕ್ ಇದೀಗ ನಿಶ್ಚಿತಾರ್ಥ ಸಮಾರಂಭದ ಕೆಲವು ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜತೆಗೆ ಮದುವೆಯಾಗುತ್ತಿರುವ ಹುಡುಗಿ ಹೆಸರನ್ನು ರಿವೀಲ್‌ ಮಾಡಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ಅಮೀರಾ ಅವರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾತ್ರವಲ್ಲ ಜುಲೈನಲ್ಲಿ ಮದುವೆಯಾಗುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಮದುವೆಗೆ ಸಲ್ಮಾನ್ ಖಾನ್ ಭಾಗಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅಬ್ದು ರೋಜಿಕ್ ನಿಶ್ಚಿತಾರ್ಥದ ಸಮಾರಂಭಕ್ಕಾಗಿ ಸಾಂಪ್ರದಾಯಿಕ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಭಾವಿ ಪತ್ಮಿ ಅಮೀರಾ ಮುಖವು ಬುರ್ಖಾದಿಂದ ಮುಚ್ಚಲ್ಪಟ್ಟಿತ್ತು. ಅಬ್ದು ಹೃದಯ ಆಕಾರದ ಉಂಗುರವನ್ನು ಹಿಡಿದಿರುವುದು ಕಂಡುಬಂದಿದೆ. ದುಬೈ ಮಾಲ್‌ನಲ್ಲಿ ಇವರ ಭೇಟಿ ನಡೆದಿದೆ. ಮೊದಲ ಬಾರಿಗೆ ಅಬ್ದು ಅವರು ಅಮೀರಾ ಅವರನ್ನು ನೋಡಿದರು. ಮೊದಲ ನೋಟದಲ್ಲೇ ಅವರು ಸಾಕಷ್ಟು ಇಷ್ಟ ಆದರು. ಈಗ ಇವರು ಮದುವೆ ಆಗುತ್ತಿದ್ದಾರೆ.

ಅಬ್ದು ಅವರು ಅಮೀರಾ ಕುರಿತಾಗಿ ಮಾತನಾಡಿ ʻʻಅಮೀರಾ ಸುಂದರವಾದ ಉದ್ದ ಕೂದಲು ಮತ್ತು ಚೆಂದದ ಕಣ್ಣುಗಳನ್ನು ಹೊಂದಿದ್ದಾಳೆ” ಎಂದು ಹೇಳಿದರು. ಅಮೀರಾ ಶಾರ್ಜಾದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಓದುತ್ತಿದ್ದಾರೆ ಎಂದು ಹೇಳಿಕೆ ನೀಡಿದರು. ಅಬ್ದು ಮಾತನಾಡಿ ʻʻಅಮೀರಾ ನಾನು ಕುಳ್ಳುಗಿದ್ದರೂ ನನ್ನ ಪ್ರೀತಿಯನ್ನು ಒಪ್ಪಿಕೊಂಡಿರುವುದು ಸಂತೋಷವಾಗಿದೆ. ಜುಲೈ 7 ರಂದು ಮದುವೆಯಾಗಲಿದ್ದೇವೆ. ಸಲ್ಮಾನ್ ಖಾನ್ ನಮಗೆ ಆಶೀರ್ವದಿಸಲು ಮದುವೆಗೆ ಬರುತ್ತಾರೆ. ಅಮೀರಾ ನನ್ನ ಜೀವನದಲ್ಲಿ ಬಂದಿರುವುದು ನನ್ನ ಅದೃಷ್ಟʼʼಎಂದರು.

ಇದನ್ನೂ ಓದಿ: Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

20 ವರ್ಷದ ಅಬ್ದು ರೋಜಿಕ್ 19 ವರ್ಷದ ಯುವತಿಯನ್ನು ಮದುವೆಯಾಗಲಿದ್ದಾರೆ. ಅಭಿಮಾನಿಗಳು ಕೂಡ ಅಬ್ದು ಮದುವೆಗಾಗಿ ಕಾಯುತ್ತಿದ್ದಾರೆ. ಅಬ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಬಿಗ್ ಬಾಸ್’ ನಿಂದಾಗಿ ಅಬ್ದು ಖ್ಯಾತಿ ಮತ್ತು ಜನಪ್ರಿಯತೆ ಹೆಚ್ಚಾಯಿತು. ಸಲ್ಮಾನ್ ಖಾನ್ ಅವರ ಜೊತೆಗೂ ಅಬ್ದು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಅಬ್ದು ರೋಜಿಕ್ ತಜಕಿಸ್ತಾನದ ಸಂಗೀತಗಾರರೂ ಹೌದು.

Continue Reading

ಸ್ಯಾಂಡಲ್ ವುಡ್

Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

Dolly Dhananjay:  ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

VISTARANEWS.COM


on

Dolly Dhananjay Koti Movie Kannada First song will out
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಮೇ 13ರಂದುಬಿಡುಗಡೆಯಾಗಲಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. `ಕೋಟಿ’ ಸಿನಿಮಾದ (Koti Movie Kannada) ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೊ ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಮೇ 13ರಂದು ಬಿಡುಗಡೆಯಾಗಲಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ʻಕಾಂತಾರʼ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಮನ್.

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

ಹೇಗಿತ್ತು ಟೀಸರ್‌?

ಪರಮ್‌ (ಪರಮೇಶ್ವರ್‌ ಗುಂಡ್ಕಲ್‌) (parameshwar gundkal) ನಿರ್ದೇಶನದ ʻಕೋಟಿʼ ಸಿನಿಮಾ ಟೀಸರ್‌ (Kotee teaser) ಇಂದು ಏ.13ರಂದು ಬಿಡುಗಡೆಯಾಗಿತ್ತು. ʻಒಂದರ ಮುಂದೆ ಇರುವ ಸೊನ್ನೆ ಕೋಟಿ ಅಲ್ಲ…ಸೊನ್ನೆಗಳ ಮೊದಲು ಬರೋ ʻ1ʼ ಅದು ಕೋಟಿʼ ಎನ್ನುವ ಡೈಲಾಗ್‌, ಟೀಸರ್‌ನಲ್ಲಿ ಪ್ರಮುಖ ಹೈಲೈಟ್‌ ಆಗಿತ್ತು.

ಟೀಸರ್‌ನಲ್ಲಿ ದೃಶ್ಯಕ್ಕೆ ತಕ್ಕಂತೆ ಡೈಲಾಗ್‌, ಹಿನ್ನೆಲೆ ಧ್ವನಿ (Dolly Dhananjay) ಸಖತ್‌ ಆಗಿ ಮೂಡಿ ಬಂದಿತ್ತು. ಪ್ರತಿ ಶಾಟ್‌ನಲ್ಲಿಯೂ ಕುತೂಹಲ ಮೂಡಿಸುವಂತಿತ್ತು. ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ʻಕೋಟಿʼ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಯುಗಾದಿ ಹಬ್ಬದ ದಿನ ‘ಕೋಟಿ’ ಚಿತ್ರದ ಟೈಟಲ್‌ ಬಿಡುಗಡೆಯಾಗಿತ್ತು. 500 ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷವಾಗಿತ್ತು. ʻಕೋಟಿʼ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿತ್ತು.

ಹೊಯ್ಸಳʼ ನಂತರ ಬರುತ್ತಿರುವ ಧನಂಜಯ್‌ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

Continue Reading

ಸಿನಿಮಾ

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Pooja Hegde: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು.

VISTARANEWS.COM


on

Pooja Hegde
Koo

ಉಡುಪಿ: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ (Pooja Hegde) ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು. ಪ್ರತಿವರ್ಷ ದೈವಕೋಲ, ದೇವಸ್ಥಾನದ ಜಾತ್ರೆ, ಉತ್ಸವದಲ್ಲಿ ಪೂಜಾ ಹೆಗ್ಡೆ ಭಾಗಿಯಾಗುತ್ತಾರೆ.

ಈ ವೇಳೆ ಅವರು ಕಣಜೂರಿನ ತನ್ನ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಭೂತಾರಾಧನೆ, ದೈವರಾಧನೆ ಕುರಿತೂ ಮಾತನಾಡಿದ್ದಾರೆ. ಮುಂಬೈಯಲ್ಲಿ ಹುಟ್ಟಿ ಬೆಳೆದ ಪೂಜಾ ಹೆಗ್ಡೆ ಪ್ರತಿವರ್ಷದ ರಜೆಯಲ್ಲಿ ತಮ್ಮ ಅಜ್ಜನ ಮನೆಯಾದ ಕಣಜೂರಿಗೆ ಭೇಟಿ ನೀಡುತ್ತಿದ್ದರಂತೆ. ʼʼಬೇಸಿಗೆ ರಜೆಯನ್ನು ಇಲ್ಲಿ ಬಹಳ ಖುಷಿಯಿಂದ ಕಳೆಯುತ್ತಿದ್ದೆವು. ನಮಗೆ ಊರು ಬಿಟ್ಟು ಹೋಗಲು ಮನಸ್ಸಾಗುತ್ತಲೇ ಇರಲಿಲ್ಲ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದೇವರ ಅನುಗ್ರಹ ಇಲ್ಲದೆ ಏನೂ ಸಾಧನೆ ಮಾಡಲಾಗದು. ಸಿನಿಮಾ ಕುಟುಂಬವಲ್ಲದ ಕಡೆಯಿಂದ ನಾನು ಈ ಕ್ಷೇತ್ರಕ್ಕೆ ಬಂದಿದ್ದೇನೆ. ನಾನು ಸಾಧನೆ ಮಾಡಲು ದೇವರ ಅನುಗ್ರಹವೇ ಕಾರಣʼʼ ಎಂದು ಹೇಳಿದ್ದಾರೆ.

2012ರಲ್ಲಿ ತಮಿಳಿನ ʼಮುಗಮೂಡಿʼ ಸಿನಿಮಾದ ಮೂಲ ಪೂಜಾ ಹೆಗ್ಡೆ ಸಿನಿ ರಂಗಕ್ಕೆ ಕಾಲಿಟ್ಟರು. ಜೀವ ನಾಯಕನಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹಿಟ್‌ ಆಗದಿದ್ದರೂ ಪೂಜಾ ಗಮನ ಸೆಳೆದಿದ್ದರು. 2014ರಲ್ಲಿ ʼಒಕ ಲೈಲ ಕೋಸಮ್‌ʼ ಮತ್ತು ʼಮುಕುಂದʼ ಚಿತ್ರಗಳ ಮೂಲಕ ಟಾಲಿವುಡ್‌ ಪ್ರವೇಶಿಸಿದರು. ಬಳಿಕ ನೇರ ಬಾಲಿವುಡ್‌ ತೆರಳಿದರು. 2016ರಲ್ಲಿ ರಿಲೀಸ್‌ ಆದ ʼಮೊಹೆಂಜದಾರೊ’ ಸಿನಿಮಾದಲ್ಲಿ ಹೃತಿಕ್‌ ರೋಷನ್‌ಗೆ ನಾಯಕಿಯಾಗಿ ಗಮನ ಸೆಳೆದರು.

ಹೀಗೆ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ಪೂಜಾ ಹೆಗ್ಡೆ ಟಾಪ್‌ ನಾಯಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಟಾಲಿವುಡ್‌, ಬಾಲಿವುಡ್‌ನ ಟಾಪ್‌ ನಾಯಕರ ಜತೆಗೆ ತೆರೆ ಹಂಚಿಕೊಂಡಿದ್ದಾರೆ. ಸದ್ಯ ಶಾಹಿದ್ ಕಪೂರ್ ಜತೆಗೆ ‘ದೇವ’ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಶನ್‌ ಆಂಡ್ರ್ಯೂಸ್ ನಿರ್ದೇಶನದ ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿದೆ ಎನ್ನಲಾಗಿದೆ. ಜತೆಗೆ ಅಹನ್‌ ಶೆಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿಯೂ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

ಕೆಲವು ದಿನಗಳ ಹಿಂದೆಯಷ್ಟೇ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿತ್ತು. ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ಸುದ್ದಿಯಾಗಿತ್ತು. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿರಲಿಲ್ಲ. ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ಸದ್ಯ ಈ ವಿಚಾರ ತಣ್ಣಗಾಗಿದೆ.

Continue Reading
Advertisement
Mamitha Baiju
ಚಿನ್ನದ ದರ10 mins ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ11 mins ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

SSLC Student Death Exam fail
ಚಿತ್ರದುರ್ಗ12 mins ago

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

Richa Chadha drank alcohol to perform Sanjay Leela Bhansali’s Heeramandi
ಸಿನಿಮಾ14 mins ago

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Elon Musk
ತಂತ್ರಜ್ಞಾನ21 mins ago

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Tumkur Accident
ಕರ್ನಾಟಕ48 mins ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ50 mins ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ1 hour ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್2 hours ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ2 hours ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು20 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌