Swara Bhaskar: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ರಾಹುಲ್ ಗಾಂಧಿ ಭಾಗಿ Vistara News
Connect with us

ಬಾಲಿವುಡ್

Swara Bhaskar: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ರಾಹುಲ್ ಗಾಂಧಿ ಭಾಗಿ

ಮದುವೆ ಸಂಭ್ರಮದ (Swara Bhaskar) ಫೋಟೊಗಳನ್ನು ಈಗಾಗಲೇ ಸ್ವರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದ್ಧೂರಿಯಾಗಿ ಆರತಕ್ಷತೆ ಸಮಾರಂಭ ಕೂಡ ದೆಹಲಿಯಲ್ಲಿ ನಡೆದಿದೆ. ಸಿನಿಮಾ ಸೆಲೆಬ್ರಿಟಿಗಳು ಮತ್ತು ರಾಜಕೀಯ ಪಕ್ಷದ ನಾಯಕರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.

VISTARANEWS.COM


on

Rahul Gandhi at the reception of actress Swara Bhaskar
Koo

ಬೆಂಗಳೂರು: ನಟಿ ಸ್ವರಾ ಭಾಸ್ಕರ್ (Swara Bhaskar) ರಾಜಕೀಯ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಜತೆ ಹಿಂದು ಸಂಪ್ರದಾಯದಂತೆ ಸಪ್ತಪದಿ ತುಳಿದಿದ್ದಾರೆ. ಸ್ವರಾ ಮದುವೆ ಆರತಕ್ಷತೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮದುವೆ ಸಂಭ್ರಮದ ಫೋಟೊಗಳನ್ನು ಈಗಾಗಲೇ ಸ್ವರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದ್ಧೂರಿಯಾಗಿ ಆರತಕ್ಷತೆ ಸಮಾರಂಭ ಕೂಡ ದೆಹಲಿಯಲ್ಲಿ ನಡೆದಿದೆ. ಸಿನಿಮಾ ಸೆಲೆಬ್ರಿಟಿಗಳು ಮತ್ತು ರಾಜಕೀಯ ಪಕ್ಷದ ನಾಯಕರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: Swara Bhaskar: ಸ್ವರಾ ಭಾಸ್ಕರ್- ಫಹಾದ್ ಮದುವೆ ಸಂಭ್ರಮ, ಹಳದಿ ಶಾಸ್ತ್ರ ಹೇಗಿತ್ತು?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವಜೋಡಿಗೆ ಶುಭಹಾರೈಸಿ, ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ನಟಿ ಈ ಹಿಂದೆ ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ವಿವಾಹವಾದ ಫೋಟೊಗಳನ್ನು ಹಂಚಿಕೊಂಡಿದ್ದರು. ಹಾಗೇಯೇ ನ್ಯಾಯಾಲಯದ ಮುಂದೆ ವಿವಾಹವಾದ ನಂತರ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೊ ಹಾಗೂ ಫೋಟೊಗಳನ್ನು ಜೋಡಿ ಶೇರ್‌ ಮಾಡಿಕೊಂಡಿದೆ. ಫಹಾದ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಬಯೋ ಪ್ರಕಾರ ಸಮಾಜವಾದಿ ಪಕ್ಷದ ಯುವ ಘಟಕದ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

South Cinema

Bhola Movie: ಅಜಯ್‌ ದೇವಗನ್‌ ಅಭಿನಯದ ʻಭೋಲಾʼ ಚಿತ್ರ ಮೊದಲ ದಿನದ ಗಳಿಕೆ ಎಷ್ಟು?

ಭೋಲಾ (Bhola Movie) ಸಿನಿಮಾ ಹೆಚ್ಚಾಗಿ ಸಕಾರಾತ್ಮಕ ವಿಮರ್ಶೆಗಳನ್ನು ಗಳಿಸಿದೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಗ್ರಹಣೆ ಮಾಡಬಹುದು ಎಂತಲೂ ವರದಿಯಾಗಿದೆ. ಐಪಿಎಲ್‌ ಪ್ರಾರಂಭವಾಗುವುದರಿಂದ ಸಿನಿಮಾ ಗಳಿಕೆಗೆ ತೊಂದರೆಯಾಗಬಹುದೆಂಬುದೂ ಸಹ ಹೇಳಲಾಗುತ್ತಿದೆ.

VISTARANEWS.COM


on

Edited by

Bhola Movie First Day collection
Koo

ಬೆಂಗಳೂರು: ಬಾಲಿವುಡ್‌ ನಟ ಅಜಯ್ ದೇವಗನ್ ಮತ್ತು ಟಬು ಅಭಿನಯದ ʻಭೋಲಾʼ ಸಿನಿಮಾ (Bhola Movie) ಮಾರ್ಚ್‌ 30ರಂದು ರಾಮ ನವಮಿಯಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆ್ಯಕ್ಷನ್-ಥ್ರಿಲ್ಲರ್ ಭೋಲಾ ಸಿನಿಮಾವನ್ನು ಅಜಯ್ ದೇವಗನ್ ನಿರ್ದೇಶಿಸಿದ್ದಾರೆ. ಇದು 2019ರ ತಮಿಳು ಚಿತ್ರ ಕೈದಿಯ ರಿಮೇಕ್ ಆಗಿದೆ. ಮೊದಲ ದಿನ ಭೋಲಾ ಸಿನಿಮಾ 11.20 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ವರದಿಯಾಗಿದೆ.

ಚಲನಚಿತ್ರ ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಹೀಗೆ ಬರೆದಿದ್ದಾರೆ, “ಭೋಲಾ ಮೊದಲನೇ ದಿನದಂದು 11.20 ಕೋಟಿ ರೂ. ಕಲೆಕ್ಷನ್‌ ಮಾಡಿದೆʼʼಎಂದು ಬರೆದುಕೊಂಡಿದ್ದಾರೆ. ಭೋಲಾ ಸಿನಿಮಾ ಒಳ್ಳೆಯ ಕಲೆಕ್ಷನ್‌ ಮಾಡಿದ್ದರೂ ಸಹ ದೃಶ್ಯಂ ಸಿನಿಮಾದಷ್ಟು ಕಲೆಕ್ಷನ್‌ ಮಾಡಿಲ್ಲ.ಆದರೆ ಭೋಲಾ ಸಿನಿಮಾ ಹೆಚ್ಚಾಗಿ ಸಕಾರಾತ್ಮಕ ವಿಮರ್ಶೆಗಳನ್ನು ಗಳಿಸಿದೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಗ್ರಹಣೆ ಮಾಡಬಹುದು ಎಂತಲೂ ವರದಿಯಾಗಿದೆ. ಐಪಿಎಲ್‌ ಪ್ರಾರಂಭವಾಗುವುದರಿಂದ ಸಿನಿಮಾ ಗಳಿಕೆಗೆ ತೊಂದರೆಯಾಗಬಹುದೆಂಬುದೂ ಸಹ ಹೇಳಲಾಗುತ್ತಿದೆ.

ಬಾಲಿವುಡ್ ಹಂಗಾಮಾ ಪ್ರಕಾರ, ಮೊದಲ ದಿನದಲ್ಲಿ ಪಠಾಣ್‌ 57 ಕೋಟಿ ರೂ. ಗಳಿಕೆ ಕಂಡಿತ್ತು. ಜೂಥಿ ಮೈನ್ ಮಕ್ಕರ್ 15.73 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಇವೆರಡು ಸಿನಿಮಾಗಳ ಬಳಿಕ ಭೋಲಾ ಈ ವರ್ಷದ ಮೊದಲನೇ ದಿನ ಮೂರನೇ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎನ್ನಲಾಗಿದೆ. ಅಜಯ್‌ ದೇವಗನ್‌ ಅವರ ದೃಶ್ಯಂ-2 ಸಿನಿಮಾ 15.38 ಕೋಟಿ ರೂ. ಮೂಲಕ ಪ್ರಬಲ ಓಪನಿಂಗ್ ಹೊಂದಿತ್ತು. ಅಂತಿಮವಾಗಿ 240.54 ಕೋಟಿ ರೂ. ಬಾಚಿಕೊಂಡಿತು. ದೃಶ್ಯಂ 2 ಮತ್ತು ಭೋಲಾ ಎರಡೂ ಮಲಯಾಳಂ ಮತ್ತು ತಮಿಳು ಚಿತ್ರಗಳ ರಿಮೇಕ್‌ಗಳಾಗಿವೆ. ಭೋಲಾ 2019ರಲ್ಲಿ ಬಿಡುಗಡೆಯಾದ ಲೋಕೇಶ್ ಕನಕರಾಜ್ ಅವರ ಕೈದಿಯ ರಿಮೇಕ್ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಶೆಹಜಾದಾ ಮತ್ತು ಸೆಲ್ಫಿ ಕೂಡ ರೀಮೇಕ್ ಆಗಿದ್ದರೂ ಪ್ರೇಕ್ಷಕರನ್ನು ಆಕರ್ಷಿಸಲು ವಿಫಲವಾಗಿದೆ.

ಇದನ್ನೂ ಓದಿ: Bholaa trailer: ಅಜಯ್ ದೇವಗನ್ ನಟನೆ, ನಿರ್ದೇಶನದ ʻಭೋಲಾʼ ಟ್ರೈಲರ್‌ ಔಟ್‌

ʻಭೋಲಾʼ ಸಿನಿಮಾ 2019ರಲ್ಲಿ ಬಿಡುಗಡೆಯಾದ ತಮಿಳಿನ ʻಕೈದಿʼ ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ಕಾರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಬು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭೋಲಾ ಚಿತ್ರವು ಅಜಯ್ ದೇವಗನ್ ಮತ್ತು ನಟಿ ಟಬು ಅವರ ಒಂಬತ್ತನೇ ಚಿತ್ರವಾಗಿದೆ. ಇವರಿಬ್ಬರು ಕೊನೆಯದಾಗಿ ದೃಶ್ಯಂ 2ದಲ್ಲಿ ಕಾಣಿಸಿಕೊಂಡಿದ್ದಾರೆ .ಚಿತ್ರದಲ್ಲಿ ದೀಪಕ್ ಡೊಬ್ರಿಯಾಲ್, ಸಂಜಯ್ ಮಿಶ್ರಾ, ಅಮಲಾ ಪೌಲ್ ಮತ್ತು ವಿನೀತ್ ಕುಮಾರ್ ಸೇರಿದಂತೆ ಇತರರು ನಟಿಸಿದ್ದಾರೆ.

Continue Reading

South Cinema

Ananya Panday: ತನ್ನನ್ನು ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ

ಕಾರ್ಯಕ್ರಮದಲ್ಲಿ ನಟಿ ಅನನ್ಯಾ ಪಾಂಡೆ (Ananya Panday) ಸೇರಿದಂತೆ ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ನಟಿ ಕಾರ್ಯಕ್ರಮಕ್ಕೆ ಆಗಮಿಸಿದ ಫೋಟೊಗಳು ಮತ್ತು ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Edited by

Ananya Panday Requests Not Call Her ACP
Koo

ಬೆಂಗಳೂರು: ಬ್ರ್ಯಾಂಡ್‌ವೊಂದರ ಕಾರ್ಯಕ್ರಮದಲ್ಲಿ ನಟಿ ಅನನ್ಯಾ ಪಾಂಡೆ (Ananya Panday) ಸೇರಿದಂತೆ ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ನಟಿ ಕಾರ್ಯಕ್ರಮಕ್ಕೆ ಆಗಮಿಸಿದ ಫೋಟೊಗಳು ಮತ್ತು ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅನನ್ಯಾ ತನ್ನ ಗುಲಾಬಿ ಬಣ್ಣದ ಉಡುಪಿನಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಫೋಟೊಶೂಟ್‌ ಸಮಯದಲ್ಲಿ ಕೆಲವು ಮಾಧ್ಯಮಗಳು ಅವರನ್ನು ‘ಎಸಿಪಿʼ (ಅನನ್ಯಾ ಚಂಕಿ ಪಾಂಡೆ)’ ಎಂದು ಕರೆದಾಗ, ನಟಿ ಮುದ್ದಾಗಿ ದಯವಿಟ್ಟು ನನ್ನನ್ನು ಎಸಿಪಿ ಎಂದು ಕರೆಯಬೇಡಿʼʼ ಎಂದು ಧನ್ಯವಾದ ಸೂಚಿಸಿದ್ದಾರೆ.

ವಿಡಿಯೊ ನೋಡಿದ ಅಭಿಮಾನಿಗಳು ನಟಿಯ ಸ್ಟೈಲ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಬ್ಬರು “ಅನನ್ಯಾ ಅವರ ಶೈಲಿಯು ಯಾವಾಗಲೂ ತಾಜಾ ಮತ್ತು ವಿಶಿಷ್ಟವಾಗಿರುತ್ತದೆ” ಎಂದು ಬರೆದರೆ, ಇನ್ನೊಬ್ಬ ಬಳಕೆದಾರರು “ಈ ಬಣ್ಣ ಅವರಿಗೆ ತುಂಬ ಸೂಕ್ತವಾಗಿದೆ,” ಎಂದಿದ್ದಾರೆ. ಮತ್ತೊಬ್ಬರು ʻʻಗೊಂಬೆಯ ರೀತಿ ಕಾಣುತ್ತಿದ್ದಾರೆ,” ಎಂದು ಕಮೆಂಟ್‌ ಮಾಡಿದ್ದಾರೆ.

ಅನನ್ಯಾ ಹೊರತುಪಡಿಸಿ, ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ, ಅಥಿಯಾ ಶೆಟ್ಟಿ, ಶ್ವೇತಾ ಬಚ್ಚನ್ ನಂದಾ, ಸೋನಮ್ ಕಪೂರ್, ರೇಖಾ, ಖುಷಿ ಕಪೂರ್ ಮತ್ತು ಅಂಬಾನಿಗಳಂತಹ ಹಲವಾರು ಸೆಲೆಬ್ರಿಟಿಗಳು ಈವೆಂಟ್‌ನಲ್ಲಿ ಕಾಣಿಸಿಕೊಂಡರು. ಅನುಷ್ಕಾ ಹಳದಿ ಡ್ರೆಸ್ ಧರಿಸಿ ಲೇಡಿ ಡಿಯೊರ್ ಮಿನಿ ಬ್ಯಾಗ್ ಹಿಡಿದುಕೊಂಡಿದ್ದರು. ವಿರಾಟ್ ಖಾಕಿ ಸೂಟ್, ಬಿಳಿ ಶರ್ಟ್ ಮತ್ತು ಸ್ನೀಕರ್ಸ್‌ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ; Ananya Panday: ಸಿಗರೇಟ್ ಸೇದುತ್ತಿರುವ ಅನನ್ಯಾ ಪಾಂಡೆ: ಸ್ಮೋಕರ್ ಎಂದು ಟ್ರೋಲ್‌ ಮಾಡಿದ ನೆಟ್ಟಿಗರು

ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ

ವೃತ್ತಿಪರ ಮುಂಭಾಗದಲ್ಲಿ, ಅನನ್ಯಾ ಮುಂದೆ ರಾಜ್ ಶಾಂಡಿಲ್ಯ ಅವರ ನಿರ್ದೇಶನದ ʻಡ್ರೀಮ್ ಗರ್ಲ್ 2ʼ ನಲ್ಲಿ ಪರೇಶ್ ರಾವಲ್ ಮತ್ತು ಆಯುಷ್ಮಾನ್ ಖುರಾನಾ ಅವರೊಂದಿಗೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೊಮ್ಯಾಂಟಿಕ್-ಕಾಮಿಡಿ ಸಿನಿಮಾವಾಗಿದ್ದು, ಪ್ರಸ್ತುತ ಅದರ ನಿರ್ಮಾಣ ಹಂತದಲ್ಲಿದೆ. ಈ ವರ್ಷ ಜುಲೈ 7ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಅವರು ಅರ್ಜುನ್ ವರೈನ್ ಸಿಂಗ್ ಅವರ ʻಖೋ ಗಯೇ ಹಮ್ ಕಹಾನ್ʼ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಆದರ್ಶ್ ಗೌರವ್ ಮತ್ತು ಸಿದ್ಧಾಂತ್ ಚತುರ್ವೇದಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

South Cinema

Shreya Dhanwanthary: ಸೆಕ್ಸಿ ಫೋಟೊಶೂಟ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ಶ್ರೇಯಾ ಧನ್ವಂತರಿ

ಶ್ರೇಯಾ ಧನ್ವಂತರಿ (Shreya Dhanwanthary) ಅವರು ಬೋಲ್ಡ್ ಚಿತ್ರಗಳನ್ನು ಹಂಚಿಕೊಂಡಿದ್ದು, ಮೊನೊಕ್ರೋಮ್ ಎಂದು ಸರಳವಾಗಿ ಶೀರ್ಷಿಕೆ ನೀಡಿದ್ದಾರೆ. ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಹಾಟ್‌ ಫೋಟೊಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

VISTARANEWS.COM


on

Edited by

Shreya Dhanwanthary Sexy Photo
Koo

ಬೆಂಗಳೂರು: ಸ್ಕ್ಯಾಮ್ 1992 ಮತ್ತು ದಿ ಫ್ಯಾಮಿಲಿ ಮ್ಯಾನ್‌ನಲ್ಲಿನ ಪಾತ್ರಗಳಿಗೆ ಜನಪ್ರಿಯವಾಗಿರುವ ಶ್ರೇಯಾ ಧನ್ವಂತರಿ (Shreya Dhanwanthary) ಇತ್ತೀಚೆಗೆ ಹಾಟ್‌ ಫೋಟೊಶೂಟ್‌ ಮಾಡಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬ್ರಾಲೆಸ್ ಚಿತ್ರಗಳಲ್ಲಿ ನಟಿ ಸೆಕ್ಸಿಯಾಗಿ ಕಂಡಿದ್ದಾರೆ.

ಶ್ರೇಯಾ ಧನ್ವಂತರಿ ಅವರು ಬೋಲ್ಡ್ ಚಿತ್ರಗಳನ್ನು ಹಂಚಿಕೊಂಡಿದ್ದು, ಮೊನೊಕ್ರೋಮ್ ಎಂದು ಸರಳವಾಗಿ ಶೀರ್ಷಿಕೆ ನೀಡಿದ್ದಾರೆ. ಆಗಾಗ ಸೋಷಿಯಲ್‌ ಮೀಡಿಯಾದಲ್ಲಿ ಹಾಟ್‌ ಫೋಟೊಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲಸದ ಮುಂಭಾಗದಲ್ಲಿ, ಶ್ರೇಯಾ ಧನ್ವಂತರಿ ವೈ ಚೀಟ್ ಇಂಡಿಯಾ?, ಲೂಪ್ ಲಪೇಟಾ ಹೀಗೆ ಹಲವು ಚಿತ್ರಗಳ ಭಾಗವಾಗಿದ್ದಾರೆ. ಮುಂದೆ, ಅವರು ಸನ್ನಿ ಡಿಯೋಲ್ ಮತ್ತು ದುಲ್ಕರ್ ಸಲ್ಮಾನ್ ಅವರೊಂದಿಗೆ ಚುಪ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ನವಾಜುದ್ದೀನ್ ಸಿದ್ದಿಕಿ ಜತೆಗೂ ಸಿನಿಮಾ ಹೊಂದಿದ್ದಾರೆ. ಮುಂಬೈ ಡೈರೀಸ್: 26/11ನಲ್ಲಿ ಶ್ರೇಯಾ ಕೂಡ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Priyanka Chopra : ಬಾಲಿವುಡ್​ನ ಪೊಲಿಟಿಕ್ಸ್​ಗೆ ಹೆದರಿ ಹಾಲಿವುಡ್​ಗೆ ಓಡಿದ್ದೆ ಎಂದ ನಟಿ ಪ್ರಿಯಾಂಕ ಚೋಪ್ರಾ

Shreya Dhanwanthary

ಶ್ರೇಯಾ 2009ರ ತೆಲುಗು ಚಲನಚಿತ್ರ ಜೋಶ್‌ನೊಂದಿಗೆ ತನ್ನ ಪದಾರ್ಪಣೆ ಮಾಡಿದರು ಸ್ನೇಹ ಗೀತಂ, ವೈ ಚೀಟ್ ಇಂಡಿಯಾ, ಲೂಪ್ ಲಪೇಟಾ ಮತ್ತು ಚುಪ್: ರಿವೆಂಜ್ ಆಫ್ ದಿ ಆರ್ಟಿಸ್ಟ್‌ನಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ. ದಿ ಫ್ಯಾಮಿಲಿ ಮ್ಯಾನ್‌ ಸಿನಿಮಾ ಅವರಿಗೆ ದೊಡ್ಡ ಬ್ರೇಕ್ ಕೊಟ್ಟಿತು.

Continue Reading

ದೇಶ

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Raghav-Parineeti: ಆಪ್‌ ನಾಯಕ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಮಾತುಗಳಿಗೆ ವಾರದಲ್ಲಿಯೇ ನಡೆದ ಮೂರನೇ ಭೇಟಿಯು ಪುಷ್ಟಿ ನೀಡಿದೆ.

VISTARANEWS.COM


on

Edited by

Amid wedding rumours AAP MP Raghav Chadha picks up Parineeti Chopra from Delhi airport
Koo

ನವದೆಹಲಿ: ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆ ಸದಸ್ಯ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ (Raghav-Parineeti) ಅವರು ಕೆಲ ದಿನಗಳ ಹಿಂದೆ ಒಟ್ಟಿಗೆ ಕಾಣಿಸಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಇಬ್ಬರೂ ಹೋಟೆಲ್‌ನಲ್ಲಿ ಕಾಣಿಸಿಕೊಂಡ ಕಾರಣ ಇಬ್ಬರೂ ವದಂತಿಗಳಿಗೆ ಆಹಾರವಾಗಿದ್ದರು. ಈ ಕುರಿತು ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಇಬ್ಬರೂ ಪ್ರೀತಿಸುತ್ತಿದ್ದಾರೆ, ಮದುವೆಯಾಗುತ್ತಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ, ಈ ಕುರಿತು ರಾಘವ್‌ ಚಡ್ಡಾ ಹಾರಿಕೆಯ ಉತ್ತರ ನೀಡಿದ್ದರು. ಈಗ ಜೋಡಿಯು ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇದು ವಾರದಲ್ಲಿ ಮೂರನೇ ಭೇಟಿಯಾಗಿದೆ. ಹಾಗಾಗಿ, ಇಬ್ಬರೂ ಜೋಡಿ ಹಕ್ಕಿಗಳಾಗಿದ್ದಾರೆ ಎಂಬ ಮಾತಿಗೆ ಹಚ್ಚಿನ ಪುಷ್ಟಿ ಬಂದಂತಾಗಿದೆ.

ಮಾರ್ಚ್‌ 29ರಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪರಿಣೀತಿ ಚೋಪ್ರಾ ಅವರನ್ನು ಪಿಕ್‌ ಮಾಡಲು ಆಮ್‌ ಆದ್ಮಿ ಪಕ್ಷದ ನಾಯಕ ರಾಘವ್‌ ಚಡ್ಡಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ರಾಘವ್‌ ಚಡ್ಡಾ ಕಾರಿನಲ್ಲಿಯೇ ಪರಿಣೀತಿ ಚೋಪ್ರಾ ಅವರು ವಿಮಾನ ನಿಲ್ದಾಣದಿಂದ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಬ್ಬರೂ ಕಾಣಿಸಿಕೊಂಡ ಫೋಟೊಗಳು ಪಾಪರಾಜಿಗಳಿಗೆ ಸಿಕ್ಕಿದ್ದು, ಫೋಟೊಗಳು ವೈರಲ್‌ ಆಗಿವೆ. ಅಲ್ಲದೆ, ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬುದಾಗಿ ಜಾಲತಾಣಗಳಲ್ಲಿ ಮತ್ತೆ ಹೇಳಲು ಆರಂಭಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಮಾಧ್ಯಮದವರು ಇಬ್ಬರನ್ನೂ ಮಾತನಾಡಿಸಲು ಯತ್ನಿಸಿದರಾದರೂ, ಜೋಡಿಯು ಪ್ರತಿಕ್ರಿಯಿಸದೆ ತೆರಳಿದೆ.

ಏರ್‌ಪೋರ್ಟ್‌ನಲ್ಲಿ ಜೋಡಿ ಹಕ್ಕಿ

ಒಟ್ಟಿಗೆ ಊಟ, ಒಂದೇ ಕಾರಿನಲ್ಲಿ ತಿರುಗಾಟ

ಕಳೆದ ಒಂದು ವಾರದಲ್ಲಿ ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಮೂರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾರ್ಚ್‌ 22ರಂದು ರಾಘವ್‌ ಹಾಗೂ ಪರಿಣೀತಿ ಅವರು ಮುಂಬೈನ ರೆಸ್ಟೋರೆಂಟ್‌ ಒಂದರಲ್ಲಿ ಒಟ್ಟಿಗೆ ಊಟಕ್ಕೆ ತೆರಳಿದ್ದರು. ಇಬ್ಬರೂ ಒಟ್ಟಿಗೆ ಹೋಟೆಲ್‌ ಪ್ರವೇಶಿಸುವ ಹಾಗೂ ಹೋಟೆಲ್‌ನಿಂದ ಹೊರಬರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ. ಇದಾದ ಮರುದಿನವೇ (ಮಾರ್ಚ್‌ 23) ಇಬ್ಬರೂ ಮತ್ತೆ ಇನ್ನೊಂದು ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹೀಗೆ ಪದೇಪದೆ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೇಟಿಂಗ್‌ ಕುರಿತು ಮಾತುಗಳು ಕೇಳಿಬರುತ್ತಿವೆ.

ಹಾರಿಕೆಯ ಉತ್ತರ ನೀಡಿದ್ದ ಚಡ್ಡಾ

ಪರಿಣೀತಿ ಜತೆಗಿನ ಡೇಟಂಗ್‌ ಕುರಿತು ಇತ್ತೀಚೆಗೆ ಸುದ್ದಿಗಾರರು ಪ್ರಶ್ನೆ ಕೇಳುತ್ತಲೇ ನಾಚಿ ನೀರಾಗಿದ್ದ ರಾಘವ್‌ ಚಡ್ಡಾ, “ನನಗೆ ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಪ್ರಶ್ನೆ ಕೇಳಿ” ಎಂದು ನಕ್ಕಿದ್ದರು. ಹಾಗೆಯೇ, ನೀವು ಮದುವೆ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ, “ನಾನು ಮದುವೆಯಾಗುವಾಗ ನಿಮಗೆ ಖಂಡಿತವಾಗಿಯೂ ತಿಳಿಸುತ್ತೇನೆ” ಎಂದು ಹೇಳುವ ಮೂಲಕ ಜಾರಿಕೊಂಡಿದ್ದರು.

ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆಯ ಯುವ ಸದಸ್ಯರಾಗಿರುವ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಒಟ್ಟಿಗೆ ಓದಿದ್ದಾರೆ. ಹಾಗಾಗಿ, ಇಬ್ಬರಿಗೂ ಮೊದಲಿನಿಂದಲೂ ಪರಿಚಯ ಇದೆ ಎಂದು ತಿಳಿದುಬಂದಿದೆ. ಆದರೆ, ಮೂಲಗಳ ಪ್ರಕಾರ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಬ್ಬರೂ ಆತ್ಮೀಯರಾಗಿದ್ದಾರೆ. ಹಾಗಾಗಿ, ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Raghav Chadha: ಆಪ್‌ ನಾಯಕ ರಾಘವ್‌ ಚಡ್ಡಾ, ಪರಿಣೀತಿ ಚೋಪ್ರಾ ಈಗ ಜೋಡಿ ಹಕ್ಕಿ? ಜತೆಗೇ ಸುತ್ತಿ ಚಡ್ಡಾ ಹೇಳಿದ್ದೇನು?

Continue Reading
Advertisement
IPL 2023: IPL fan park after three years; Opportunity in Karnataka too
ಕ್ರಿಕೆಟ್10 mins ago

IPL 2023: ಮೂರು ವರ್ಷಗಳ ಬಳಿಕ ಐಪಿಎಲ್​ ಫ್ಯಾನ್​ ಪಾರ್ಕ್​; ಕರ್ನಾಟಕದಲ್ಲಿಯೂ ಇರಲಿದೆ ಜೋಶ್​

Mallikarjun khuba joins JDS
ಕರ್ನಾಟಕ12 mins ago

JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

Navjot Sidhu to be released from Jail
ದೇಶ18 mins ago

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

Release Rs 17.42 crore dues to MySugar factory says Dinesh Gooligowda
ಕರ್ನಾಟಕ18 mins ago

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Modi With Kharge
ಅಂಕಣ23 mins ago

ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ಆರೋಗ್ಯ24 mins ago

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ವೈರಲ್ ನ್ಯೂಸ್27 mins ago

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Boys death
ಕರ್ನಾಟಕ33 mins ago

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

6 die of suffocation in Delhi After Due to mosquito coil
ದೇಶ55 mins ago

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

Gas tragedy
ಕರ್ನಾಟಕ55 mins ago

Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ10 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ21 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!