Site icon Vistara News

Rajanikanth: ಮಂಗಳೂರಿಗೆ ಭೇಟಿ ಕೊಟ್ಟ ಸೂಪರ್‌ ಸ್ಟಾರ್‌ ರಜನಿಕಾಂತ್‌!

Rajanikanth

ಬೆಂಗಳೂರು: ರಜನಿಕಾಂತ್ (Rajanikanth) ಅವರು ಎರಡು ದಿನಗಳ ಭೇಟಿಗೆ ಭಾನುವಾರ ಫೆ.12ರಂದು ಮಂಗಳೂರಿಗೆ ಆಗಮಿಸಿದ್ದಾರೆ. ರಜನಿಕಾಂತ್ ಅವರು ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ಒಂದರಲ್ಲಿ ನಟಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ಕೂಡ ಮಂಗಳೂರಿಗೆ ತೆರಳಿದ್ದಾರೆ.

ʼಜೈಲರ್‌ʼ ಸಿನಿಮಾದಲ್ಲಿ ರಜನಿಕಾಂತ್‌ ಜೈಲಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌, ಜಾಕಿ ಶ್ರಾಫ್, ತಮನ್ನಾ ಭಾಟಿಯಾ, ರಮ್ಯ ಕೃಷ್ಣನ್‌ ಕೂಡ ನಟಿಸುತ್ತಿದ್ದಾರೆ. ʼಉತ್ತರ ದಕ್ಷಿಣ್‌ʼ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ರಜನಿ ಮತ್ತು ಜಾಕಿ ಶ್ರಾಫ್ ಜೋಡಿ ಇದೀಗ 36 ವರ್ಷಗಳ ನಂತರ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಇದೇ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rajanikanth: ಸೂಪರ್ ಸ್ಟಾರ್ ರಜನಿಕಾಂತ್‌ ಆಶೀರ್ವಾದ ಪಡೆದ ‘ಒಂದಂಕೆ ಕಾಡು’ ನಿರ್ದೇಶಕ ರಾಮಚಂದ್ರ ವೈದ್ಯ

ರಜನಿಕಾಂತ್‌ ಜೈಲರ್‌ ನಂತರ ಮಗಳು ಐಶ್ವರ್ಯ ರಜನಿಕಾಂತ್‌ ನಿರ್ದೇಶನದ ʼಲಾಲ್‌ ಸಲಾಮ್‌ʼ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಸಿನಿಮಾದ ಮೂಲಕ ಐಶ್ವರ್ಯ ಹಲವು ವರ್ಷಗಳ ಅವರು ನಂತರ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಇದರಲ್ಲಿ ವಿಷ್ಣು ವಿಶಾಲ್‌ ಮತ್ತು ವಿಕ್ರಾಂತ್‌ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Exit mobile version