Rajinikanth: ಹೆಸರು, ಭಾವಚಿತ್ರ ಬಳಸಿಕೊಂಡರೆ ಕಾನೂನು ಕ್ರಮ; ಸಾರ್ವಜನಿಕ ನೋಟಿಸ್ ಜಾರಿ ಮಾಡಿದ ರಜಿನಿಕಾಂತ್ - Vistara News

ಕಾಲಿವುಡ್

Rajinikanth: ಹೆಸರು, ಭಾವಚಿತ್ರ ಬಳಸಿಕೊಂಡರೆ ಕಾನೂನು ಕ್ರಮ; ಸಾರ್ವಜನಿಕ ನೋಟಿಸ್ ಜಾರಿ ಮಾಡಿದ ರಜಿನಿಕಾಂತ್

ಸಾರ್ವಜನಿಕರಲ್ಲಿ ಜನಪ್ರಿಯತೆಯನ್ನು ಸೃಷ್ಟಿಸಲು ಮತ್ತು ಅವರ ಉತ್ಪನ್ನಗಳನ್ನು ಖರೀದಿಸಲು ಅಥವಾ ಅವರ ಪ್ಲಾಟ್‌ಫಾರ್ಮ್‌ಗಳನ್ನು ಪ್ರವೇಶಿಸಲು ಈ ರೀತಿಯಾಗಿ ಮಾಡುತ್ತಿದ್ದಾರೆ. ಈ ರೀತಿ ಅನಧಿಕೃತವಾಗಿ ಬಳಸುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮತ್ತು ವಂಚನೆ ಉಂಟಾಗುವ ಸಾಧ್ಯತೆಯಿದೆ.

VISTARANEWS.COM


on

Rajinikanth threatens legal action against brands
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟನೆ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ. ಇದೀಗ ರಜನಿಕಾಂತ್‌ ಅವರ ಹೆಸರು, ಭಾವಚಿತ್ರ, ಅವರ ಧ್ವನಿ ಹೀಗೆ ಇತರ ವಿಶಿಷ್ಟ ಅಂಶಗಳನ್ನು ಅನಧಿಕೃತವಾಗಿ ಬಳಸುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ನೋಟಿಸ್ ಜಾರಿ ಮಾಡಿದ್ದಾರೆ. ನಟರ ವ್ಯಕ್ತಿತ್ವದ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರ ವಕೀಲ ಎಸ್ ಎಳಂಭರತಿಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ನೋಟಿಸ್ ಜಾರಿ ಮಾಡಿದ ರಜಿನಿಕಾಂತ್

ರಜನಿಕಾಂತ್‌ ಅವರ ಹೆಸರು, ಚಿತ್ರ ಹಾಗೂ ಇನ್ನೀತರ ಅಂಶಗಳನ್ನು ಇಟ್ಟುಕೊಂಡು ಹಲವಾರು ವೇದಿಕೆಗಳು, ಮಾಧ್ಯಮಗಳು ಮತ್ತು ಉತ್ಪನ್ನ ತಯಾರಕರು ಕಮರ್ಶಿಯಲ್‌ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಿವೆ. ಅವರ ಹೆಸರು, ಧ್ವನಿ, ಛಾಯಾಚಿತ್ರ, ವ್ಯಂಗ್ಯಚಿತ್ರ ಚಿತ್ರ, ಕಲಾತ್ಮಕ ಚಿತ್ರಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಲ್ಲಿ ಜನಪ್ರಿಯತೆಯನ್ನು ಸೃಷ್ಟಿಸಲು ಮತ್ತು ಅವರ ಉತ್ಪನ್ನಗಳನ್ನು ಖರೀದಿಸಲು ಅಥವಾ ಅವರ ಪ್ಲಾಟ್‌ಫಾರ್ಮ್‌ಗಳನ್ನು ಪ್ರವೇಶಿಸಲು ಈ ರೀತಿಯಾಗಿ ಮಾಡುತ್ತಿದ್ದಾರೆ. ಈ ರೀತಿ ಅನಧಿಕೃತವಾಗಿ ಬಳಸುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮತ್ತು ವಂಚನೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಈ ರೀತಿಯ ಕ್ರಮ ಕೈಗೊಂಡಿರುವುದಾಗಿ ನಟ ಹೇಳಿದ್ದಾರೆ.

ಇದನ್ನೂ ಓದಿ: Rajinikanth: ಕುಡಿತ, ನಾನ್ ವೆಜ್, ಸಿಗರೇಟ್ ಚಟಕ್ಕೆ ಒಳಗಾಗಿದ್ದ ನನ್ನನ್ನು ಬದಲಾಯಿಸಿದ್ದೇ ನನ್ನ ಪತ್ನಿ: ರಜನಿಕಾಂತ್‌

Rajinikanth threatens legal action against brands

ರಜನಿಕಾಂತ್ ಅವರ ವಕೀಲ ಸುಬ್ಬಯ್ಯ ಎಳಂಭಾರತಿ ಅವರು ಸಹಿ ಮಾಡಿರುವ ಪತ್ರದಲ್ಲಿ, ‘ಯಾರಾದರೂ ಅವರ ವ್ಯಕ್ತಿತ್ವ/ಪ್ರಚಾರ/ಪ್ರಸಿದ್ಧ ಹಕ್ಕುಗಳನ್ನು ಉಲ್ಲಂಘಿಸಿದರೆ’ ಕಾನೂನು ಕ್ರಮ ಎದುರಿಸಬೇಕಾಗುತ್ತದೆʼʼ ಎಂದು ಉಲ್ಲೇಖಗೊಂಡಿದೆ. ಹಾಗೂ ಹಲವು ಬ್ರ್ಯಾಂಡ್‌ಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: Rajinikanth | ʻಜೈಲರ್‌ʼ ಸಿನಿಮಾ ಬಳಿಕ ಖ್ಯಾತ ನಿರ್ದೇಶಕರ ಪ್ರಾಜೆಕ್ಟ್‌ಗೆ ಸಹಿ ಹಾಕಿದ್ದಾರಂತೆ ರಜನಿಕಾಂತ್‌!

ರಜಿನಿಕಾಂತ್‌ ಕೊನೆಯದಾಗಿ ನಿರ್ದೇಶಕ ಸಿರುತೈ ಶಿವ ಅವರ ಅಣ್ಣಾತ್ತೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನೆಲ್ಸನ್ ದಿಲೀಪ್ ಕುಮಾರ್ ಅವರ ಜೈಲರ್ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸಿದೆ. ಚಿತ್ರದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಸೂಪರ್ ಸ್ಟಾರ್ ಶಿವರಾಜಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುನಿಲ್, ತಮನ್ನಾ, ವಿಜಯಕನ್, ವಸಂತ್ ರವಿ ಮತ್ತು ರಮ್ಯಾ ಕೃಷ್ಣನ್ ಪೋಷಕ ಪಾತ್ರಗಳ ಭಾಗವಾಗಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಿಸಿರುವ ಜೈಲರ್ ಈ ವರ್ಷದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Shruti Haasan: ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

VISTARANEWS.COM


on

Shruti Haasan and boyfriend santanu hazarika break up
Koo

ಬೆಂಗಳೂರು: ಕಾಲಿವುಡ್‌ ಸೂಪರ್‌ ಸ್ಟಾರ್‌ ಮಲ್‌ ಹಾಸನ್‌ (Kamal Hassan) ಅವರ ಪುತ್ರಿ ನಟಿ ಶ್ರುತಿ ಹಾಸನ್‌ (Shruti Haasan) ಪ್ರಿಯತಮ ಶಂತನು ಹಜಾರಿಕಾ (santanu hazarika) ಜತೆ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿ ಇರುವುದು ಗೊತ್ತೇ ಇದೆ. ಇದೀಗ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಪೂರಕ ಎಂಬಂತೆ ನಟಿ ಪ್ರಿಯತಮ ಶಂತನು ಹಜಾರಿಕಾ ಅವರ ಎಲ್ಲ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಇನ್‌ಸ್ಟಾ ಅನ್‌ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ನಟಿ ಸ್ವಲ್ಪ ಸಮಯದವರೆಗೆ ಇನ್ಸ್ಟಾಗ್ರಾಮ್ ಖಾತೆಯನ್ನು ಡಿ ಆಕ್ಟಿವೇಟ್‌ ಮಾಡಿದ್ದರು. ಬಳಿಕ ಇನ್‌ಸ್ಟಾದಲ್ಲಿ ಶಂತನು ಹಜಾರಿಕಾ ಜತೆ ಇದ್ದ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಅನ್‌ಫಾಲೋ ಮಾಡಿದ್ದಾರೆ. ಈಗಾಗಲೇ ಈ ಜೋಡಿ ಒಟ್ಟಿಗೆ ಇಲ್ಲ ಎಂದು ವರದಿಯಾಗಿದೆ. ಈ ಮುಂಚೆ ಒಂದೇ ಮನೆಯಲ್ಲಿ ಇಬ್ಬರೂ ಇದ್ದಿದ್ದರು. ನಟಿ ತನ್ನ ವೈಯಕ್ತಿಕ ಜೀವನದಲ್ಲಿ ನಡೆಯುವ ಘಟನೆಗಳನ್ನು ಅಭಿಮಾನಿಗಳೊಂದಿಗೆ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬ್ರೇಕಪ್‌ ಬಗ್ಗೆ ನಟಿ ಶೀರ್ಘದಲ್ಲೇ ಅಧಿಕೃತವಾಗಿ ಹೇಳಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.

ಇದನ್ನೂ ಓದಿ: Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ. ಇವರು 2018ರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಆಗಾಗ ಶ್ರುತಿ ಹಾಸನ್‌ ಶಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಿದ್ದರು. ಮೊದಲು ಪ್ರಪೋಸ್ ಮಾಡಿದ್ದು ಕೂಡ ಶ್ರುತಿ ಹಾಸನ್‌ ಅಂತೆ.

ನನ್ನ ಬಾಯ್‌ಫ್ರೆಂಡ್‌ನ ಹೂಸು ಕೂಡ ನಂಗಿಷ್ಟ ಎಂದಿದ್ದ ಕಮಲ್‌ ಹಾಸನ್‌ ಪುತ್ರಿ

ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

ಶ್ರುತಿ ಹಾಸನ್ ಫುಲ್ ಬ್ಯುಸಿ ಶ್ರುತಿ ಹಾಸನ್ ಕೈಯಲ್ಲಿ ದೊಡ್ಡ ದೊಡ್ಡ ಸಿನಿಮಾಗಳಿವೆ. ನಟಿ ಪ್ರಭಾಸ್ ಅವರ ಸಲಾರ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಸಲಾರ್‌ ಸಿನಿಮಾದಲ್ಲಿ ಶ್ರುತಿ ಹಾಸನ್ ‘ಆದ್ಯ’ ಪಾತ್ರ ಮಾಡಿದ್ದರು. ಶ್ರುತಿ ಇತ್ತೀಚೆಗೆ ತೆಲುಗು ಚಿತ್ರ ‘ವಾಲ್ತೇರ್‌ ವೀರಯ್ಯ’ದಲ್ಲಿ ಕಾಣಿಸಿಕೊಂಡಿದ್ದರು. ಈ ವರ್ಷ ವೀರಸಿಂಹ ರೆಡ್ಡಿ ಮತ್ತು ವಾಲ್ತೇರ್‌ ವೀರಯ್ಯ ಜನವರಿ ತಿಂಗಳಲ್ಲಿ ಒಟ್ಟಿಗೆ ತೆರೆಗೆ ಬಂತು.

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ಕನಕರಾಜ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಕಮಲ್‌ ಹಾಸನ್‌ ಪುತ್ರಿ ಶ್ರುತಿ ಹಾಸನ್‌ ಅವರಿಗೆ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಲೋಕೇಶ್‌ ಕನಕರಾಜ್‌. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (RKFI) ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸಿನಿಮಾ

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

Kanguva Budget: ಭಾರತೀಯ ಚಿತ್ರರಂಗದಲ್ಲಿ ಅತೀ ದೊಡ್ಡ ಬಜೆಟ್ ನ ಚಿತ್ರ ಕಂಗುವ ವರ್ಷಾಂತ್ಯಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ. ತಮಿಳು ನಟ ಸೂರ್ಯ ಶಿವಕುಮಾರ್ ಹಾಗೂ ಬಾಲಿವುಡ್ ಸ್ಟಾರ್ ಬಾಬಿ ಡಿ’ಯೋಲ್‌ ಅಭಿನಯದ ಈ ಚಿತ್ರ ಈಗಾಗಲೇ ಸಿನಿ ರಸಿಕರನ್ನು ಮೋಡಿ ಮಾಡಿದೆ.

VISTARANEWS.COM


on

By

Kanguva Budget
Koo

ಚೆನ್ನೈ: ಹೊಸ ವರ್ಷದಂದು (new year) ಪೋಸ್ಟರ್ (poster) ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (social media) ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ ಕಂಗುವ (Kanguva). ತಮಿಳು (tamil) ನಟ (actor) ಸೂರ್ಯ (surya), ದಿಶಾ ಪಟಾನಿ (disha patani) ಅಭಿನಯದ ಈ ಚಿತ್ರ ಬಿಡುಗಡೆಗೆ ಮುನ್ನವೇ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಚಿತ್ರದ ಕುರಿತು ಹೊಸಹೊಸ ಮಾಹಿತಿಗಾಗಿ ವೀಕ್ಷಕರು ಕಾಯುವಂತೆ ಮಾಡಿದೆ.

ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಕಂಗುವ ಬಗ್ಗೆ ಭಾರಿ ಚರ್ಚೆ

ಸ್ಟುಡಿಯೋ ಗ್ರೀನ್ ಮತ್ತು ಸೂರ್ಯ ಶಿವಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಕಂಗುವ” ದ ಟೀಸರ್ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಣ್ಣಿಗೆ ಹಬ್ಬದಂತಿರುವ ಚಿತ್ರದ ದೃಶ್ಯಗಳು, ಬೆರಗುಗೊಳಿಸುವ ವಿನ್ಯಾಸ, ವಿಶಿಷ್ಟ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಅದ್ಬುತ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ದೇಶದಾದ್ಯಂತ ಸಾಕಷ್ಟು ಮಂದಿ ಇದನ್ನು ನೋಡಲು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: Uttarakaanda Movie: ʼಉತ್ತರಕಾಂಡʼ ಚಿತ್ರಕ್ಕೆ ನಾಯಕಿ ಎಂಟ್ರಿ; ಮೋಹಕ ತಾರೆ ರಮ್ಯಾ ಜಾಗಕ್ಕೆ ಕಾಲಿವುಡ್‌ ನಟಿ


ಶಕ್ತಿಶಾಲಿ ನಾಯಕನಾಗಿ ಸೂರ್ಯ ಮತ್ತು ಖಳನಾಯಕನಾಗಿ ಬಾಬಿ ಡಿ’ಯೋಲ್‌ ಚಿತ್ರದ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ. ಟೀಸರ್ ಬಿಡುಗಡೆಯಾದಾಗಿನಿಂದ ಆನ್‌ಲೈನ್ ಚರ್ಚೆಯನ್ನು ಹುಟ್ಟುಹಾಕಿದೆ, ಎಲ್ಲರೂ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ದುಬಾರಿ ಚಿತ್ರ

ಕಂಗುವವರ ಮಹತ್ವಾಕಾಂಕ್ಷೆಯ ಕಥೆಯ ಹಂದರವನ್ನು ಒಳಗೊಂಡಿರುವ ಈ ಚಿತ್ರದ ಬಜೆಟ್ 350 ಕೋಟಿಗೂ ಮೀರಿದೆ ಎನ್ನಲಾಗಿದೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಚಿತ್ರಗಳಲ್ಲಿ ಒಂದಾಗಲಿದೆ.


ಚಿತ್ರದ ಪ್ಯಾನ್-ವರ್ಲ್ಡ್ ಪ್ರಾಜೆಕ್ಟ್ ಎಲ್ಲರನ್ನೂ ಬೆರಗುಗೊಳಿಸುವಂತಿದೆ. ಸುಂದರ ದೃಶ್ಯಗಳು, ಭವ್ಯವಾದ ಛಾಯಾಗ್ರಹಣ ಮತ್ತು ವಿಸ್ತಾರವಾದ ಈ ಚಿತ್ರ ಚಲನಚಿತ್ರ ನಿರ್ಮಾಪಕರು ಅದರ ಸೃಷ್ಟಿಗೆ ಸುರಿದ ಅಪಾರ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ.

ವೆಟ್ರಿ ಪಳನಿಸಾಮಿ ಅವರ ಅದ್ಭುತ ಛಾಯಾಗ್ರಹಣ ಮತ್ತು ಗಾಯಕ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಚಿತ್ರವು ಹೆಚ್ಚು ಪ್ರದರ್ಶನವನ್ನು ಕಾಣುವ ನಿರೀಕ್ಷೆಯಿದೆ.

ಸ್ಟುಡಿಯೋ ಗ್ರೀನ್‌ ಬೆಂಬಲದಿಂದ ನಿರ್ದೇಶಕ ಶಿವ ಅವರ ವಿಶಿಷ್ಟ ಕಲ್ಪನೆಗೆ ಜೀವ ತುಂಬಿದೆ. ಹಾಲಿವುಡ್ ಶೈಲಿಯಲ್ಲಿ ಮೂಡಿ ಬಂದಿರುವ ಚಿತ್ರ ಸಿನಿರಸಿಕರ ಮನ ಗೆಲ್ಲುವುದರಲ್ಲಿ ಸಂದೇಹವಿಲ್ಲ.

ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಪ್ರಮುಖರಾಗಿರುವ ಸ್ಟುಡಿಯೋ ಗ್ರೀನ್ ಮಾಲಕ ಕೆ.ಇ. ಜ್ಞಾನವೇಲ್ ರಾಜಾ ಅವರು ಕಳೆದ 16 ವರ್ಷಗಳಲ್ಲಿ ಸತತವಾಗಿ “ಸಿಂಗಂ” ಸರಣಿ, “ಪರುತಿ ವೀರನ್,” “ಸಿರುತೈ,” “ಕೊಂಬನ್,” “ನಾನ್ ಮಹನ್ ಅಲ್ಲಾ,” “ಮದ್ರಾಸ್,” “ಟೆಡ್ಡಿ,” ಮತ್ತು ತೀರಾ ಇತ್ತೀಚೆಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.

“ಪಾತು ತಾಲಾ.” ಅವರು “ಬಾಹುಬಲಿ: ದಿ ಬಿಗಿನಿಂಗ್” ನಂತಹ ಪ್ರಮುಖ ಬ್ಲಾಕ್‌ಬಸ್ಟರ್‌ಗಳನ್ನು ವಿತರಿಸಿದ ಕಾರಣ ಅವರಿಂದಲೇ ಚಿತ್ರ ಬಿಡುಗಡೆ ಮಾಡಿಸಬೇಕು ಎಂದು ಹಲವಾರು ಮಂದಿ ನಿರ್ದೇಶಕರು ಕಾಯುವಂತಾಗಿದೆ.
ಸ್ಟುಡಿಯೋ ಗ್ರೀನ್ ಕಂಗುವಕ್ಕಾಗಿ ವಿಶ್ವದಾದ್ಯಂತ ಇರುವ ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದೆ. 2024 ರ ಕೊನೆಯಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಕಾಲಿವುಡ್

Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

Actor Rajinikanth: ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Rajinikanth Thailaiver 171 lokesh kanakaraj entry
Koo

ಬೆಂಗಳೂರು: ʻಜೈಲರ್’ ಬಳಿಕ ರಜನಿಕಾಂತ್ (Actor Rajinikanth) ‘ಲಾಲ್ ಸಲಾಂ’ (Lal Salaam) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ನಂತರ ಜ್ಞಾನವೇಲ್ ನಿರ್ದೇಶನದ ಚಿತ್ರಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ. ಈ ಎರಡೂ ಸಿನಿಮಾಗಳು ಮುಗಿದ ಬಳಿಕ ಕಾಲಿವುಡ್ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ತಲೈವಾ ನಟಿಸುವುದು ಫಿಕ್ಸ್‌ ಆಗಿದೆ. ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಈ ಸುದ್ದಿ ನಿಜ ಅಂತಾದರೆ ರಜನಿಕಾಂತ್‌ ಹಾಗೂ ನಾರ್ಜುನ ಅವರು 32 ವರ್ಷಗಳ ಬಳಿಕ ತೆರೆ ಮೇಲೆ ನೋಡಬಹುದು. ನಾಗಾರ್ಜುನಗೆ ಮಲ್ಟಿಸ್ಟಾರರ್ ಸಿನಿಮಾ ಹೊಸದೇನು ಅಲ್ಲ. ಇತ್ತೀಚೆಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಜತೆ ಕಾಣಿಸಿಕೊಂಡಿದ್ದರು. ಈಗ ಧನುಷ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಊಪಿರಿ’ ಸಿನಿಮಾದಲ್ಲೂ ಕಾರ್ತಿ ಜೊತೆ ನಾಗಾರ್ಜುನ ಜತೆ ನಟಿಸಿದ್ದರು. ಹೀಗಾಗಿ ರಜನಿಕಾಂತ್ ಜತೆ ನಟಿಸಬಹುದು ಎಂದು ಹೇಳಲಾಗುತ್ತಿದೆ.

ಟಿ.ಜೆ.ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲಯಾಳಂ ನಟ ಫಹಾದ್‌ ಫಾಸಿಲ್‌ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಜತೆಯಾಗಿ ನಟಿಸುತ್ತಿರುವ ಫೋಟೊ ಇಂಟರ್‌ನೆಟ್‌ನಲ್ಲಿ ಹರಿದಾಡಿ ವೈರಲ್‌ ಆಗಿತ್ತು. ವಿಶೇಷ ಎಂದರೆ ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ರಾಣಾ ದಗ್ಗುಬಾಟಿ, ಮಲಯಾಳಂ ನಟಿ ಮಂಜು ವಾಯಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ಸಂಯೋಜಿಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?

ಕಥೆ ಏನು?

‘ವೆಟ್ಟೈಯನ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಿರುವನಂತಪುರಂ, ತಿರುನೆಲ್ವೇಲಿ ಮತ್ತು ಮುಂಬೈ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದೆ. ತಮಿಳು ಜತೆಗೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಟೀಸರ್‌ ಬಿಡುಗಡೆ

ಇತ್ತೀಚೆಗೆ ‘ವೆಟ್ಟೈಯನ್’ ಚಿತ್ರದ ಟೀಸರ್‌ ಬಿಡುಗಡೆಯಾಗಿತ್ತು. ಲಾಠಿ ಹಿಡಿದು ರಜನಿಕಾಂತ್‌ ಆಗಮಿಸುವ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಜತೆಗೆ ರಜನಿಕಾಂತ್ ತಮ್ಮದೇ ಶೈಲಿಯಲ್ಲಿ ಕನ್ನಡಕ ಹಾಕಿಕೊಳ್ಳುತ್ತ ಡೈಲಾಗ್‌ ಹೇಳುವ ದೃಶ್ಯ, ಕೈ ಹಿಂಬದಿಯಲ್ಲಿಟ್ಟುಕೊಂಡು ಚಿಟಿಕೆ ಹೊಡೆಯುವ ಸೀನ್‌ ಗಮನ ಸೆಳೆದಿತ್ತು. ‌ʼವೆಟ್ಟೈಯನ್‌ʼ ಎಂದರೆ ಕನ್ನಡದಲ್ಲಿ ಬೇಟೆಗಾರ ಎಂದರ್ಥ. ಈ ಸಿನಿಮಾದಲ್ಲಿ ರಜನಿಕಾಂತ್‌ ಅಪರಾಧಿಗಳ ಬೇಟೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆಗಲೇ ಪ್ರೇಕ್ಷಕರು ಊಹಿಸಿದ್ದರು.

Continue Reading

ಕಾಲಿವುಡ್

Nayanthara-Vignesh Shivan: ಪತಿಯ ಕಂಡು ನಯನತಾರಾ ನಾಚಿ ನೀರಾಗಿದ್ದೇಕೆ!

Nayanthara-Vignesh Shivan: ನಯನತಾರಾ ಇತ್ತೀಚೆಗೆ ಕುಟುಂಬದ ಜತೆಗೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಆಗಾಗ ಅವಳಿ ಮಕ್ಕಳ ಜತೆ ಸಮಯ ಕಳೆಯುತ್ತಿರುವ ಕ್ಷಣಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ಪತಿ ಜತೆ ಕ್ಯೂಟ್‌ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ನಯನತಾರಾ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ನಟಿ ನಯನತಾರಾ (Actress Nayanthara ) ಮತ್ತು ನಿವಿನ್ ಪೌಲ್‌ ಮುಂಬರುವ ಮಲಯಾಳಂ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’ಗ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

VISTARANEWS.COM


on

Nayanthara-Vignesh Shivan latest pictures
Koo

ನಟಿ ನಯನತಾರಾ ಪತಿ ವಿಘ್ನೇಶ್ ಶಿವನ್ (Nayanthara-Vignesh Shivan) ಅವರೊಂದಿಗೆ ಕೆಲವು ಸುಂದರವಾದ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ದಂಪತಿ ಟ್ರೆಡಿಷನಲ್‌ ಲುಕ್‌ನಲ್ಲಿ ಕ್ಯೂಟ್‌ ಆಗಿ ಕಂಡಿದ್ದಾರೆ.

ನಯನತಾರಾ ಲ್ಯಾವೆಂಡರ್ ಬಣ್ಣದ ಸೀರೆ ಮತ್ತು ವಿಘ್ನೇಶ್ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿದ್ದರು. ನಯನತಾರಾ ಒಂದು ಫೋಟೊದಲ್ಲಿ ಪತಿ ಕಂಡು ನಾಚಿ ನೀರಾಗಿದ್ದಾರೆ.

ವಿಘ್ನೇಶ್ ಅವರು ಕೂಡ ತಮ್ಮ ಇನ್‌ಸ್ಟಾದಲ್ಲಿ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜೋಡಿ ಉದ್ಯಾನವನದಲ್ಲಿ ಸುಂದರ ಸಮಯ ಕಳೆದಿದೆ.

ಇದನ್ನೂ ಓದಿ: Lady Superstar: ಖ್ಯಾತ ನಿರ್ದೇಶಕರ ಚಿತ್ರದಲ್ಲಿ ನಟಿಸ್ತಾರಾ ನಯನತಾರಾ?

ನಿರ್ದೇಶಕ ಶಂಕರ್ ಅವರ ಪುತ್ರಿ ಐಶ್ವರ್ಯಾ ಮತ್ತು ತರುಣ್ ಕಾರ್ತಿಕೇಯನ್ ಅವರ ಮದುವೆಗೆಂದು ನಯನತಾರಾ ದಂಪತಿ ರೆಡಿಯಾಗಿರುವ ಫೋಟೊಗಳಿವು.

ಈ ಅದ್ಧೂರಿ ವಿವಾಹಕ್ಕೆ ರಜನಿಕಾಂತ್, ಕಮಲ್ ಹಾಸನ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading
Advertisement
Modi in Karnataka stay in Belagavi tomorrow and Huge gatherings at five places
Lok Sabha Election 202424 mins ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ32 mins ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ40 mins ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 202450 mins ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

lok sabha election
ಪ್ರಮುಖ ಸುದ್ದಿ1 hour ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Karnataka weather Forecast
ಮಳೆ2 hours ago

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Flower Crown Trend
ಫ್ಯಾಷನ್2 hours ago

Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

Rinku Singh
ಕ್ರೀಡೆ2 hours ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Tejasvi Surya
ಕರ್ನಾಟಕ2 hours ago

Tejasvi Surya: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ8 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20248 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20249 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ15 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌