Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು! - Vistara News

ಸಿನಿಮಾ

Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

Rajkumar Birth Anniversary:  ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತಹ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

VISTARANEWS.COM


on

Rajkumar Birth Anniversary TOP 10 Movies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಇಂದು ದಿವಂಗತ ಡಾ. ರಾಜ್ ಕುಮಾರ್ (Rajkumar Birth Anniversary) ಅವರ ಜಯಂತ್ಯೋತ್ಸವ. ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದರು. ನಗಿಸಿ, ಅಳಿಸಿ, ಆಲೋಚನೆಗೆ ಹಚ್ಚಿ, ಛಲ ತುಂಬಿ, ಮಾರ್ಗದರ್ಶನ ನೀಡಿದರು. 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಅಪ್ರತಿಮ ಸೂಪರ್‌ಸ್ಟಾರ್. 1954ರಲ್ಲಿ ತೆರೆಕಂಡ ‘ಬೇಡರ ಕಣ್ಣಪ್ಪ’ ಚಿತ್ರದಿಂದ ಮುತ್ತುರಾಜ್ ಕನ್ನಡ ಸಿನಿರಸಿಕರಿಗೆ ಪರಿಚಿತರಾದರು. ಇದೀಗ ರಾಜ್‌ ಅವರ ಟಾಪ್‌ 10 ಸಿನಿಮಾಗಳ ಮಾಹಿತಿ ತಿಳಿಯೋಣ.

ಕಸ್ತೂರಿ ನಿವಾಸ (KASTHURI NIVAAS)

ಕಸ್ತೂರಿ ನಿವಾಸ ಕನ್ನಡದ ಕ್ಲಾಸಿಕ್ ಸಿನಿಮಾಗಳಲ್ಲೊಂದು. ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ 175 ದಿನ ಪೂರೈಸಿದರೆ, 16 ಚಿತ್ರಮಂದಿರಗಳಲ್ಲಿ 100 ವಾರ ಪೂರೈಸಿ ದಾಖಲೆಯನ್ನ ಬರೆಯಿತು. ಕಸ್ತೂರಿ ನಿವಾಸ’ ಚಿತ್ರಕ್ಕೆ ಜಿಕೆ ವೆಂಕಟೇಶ್ ಸಂಗೀತ ನೀಡಿದ್ದರು. ವಿಶೇಷ ಅಂದರೆ ಚಿತ್ರದ ಆರಕ್ಕೆ ಆರು ಹಾಡು ಕೂಡ ಸೂಪರ್ ಹಿಟ್. ಚಿತ್ರದಲ್ಲಿನ ‘ಆಡಿಸಿ ನೋಡು ಬೀಳಿಸಿ ನೋಡು’.. ಹಾಡು ಸಂಗೀತ ಪ್ರಿಯರ ಮೇಲೆ ತನ್ನ ಹಿಡಿತ ಸಾಧಿಸಿದೆ ಅಂದರೆ ಎಂತಹವರಿಗೆ ಆದರೂ ಅದು ಅಚ್ಚರಿಯ ಸಂಗತಿಯೇ ಸರಿ. ದೊರೈ-ಭಗವಾನ್ ನಿರ್ದೇಶನ ಈ ಸಿನಿಮಾಗಿದೆ. ಶಿವಾಜಿ ಗಣೇಶನ್ ತಮಿಳಿನಲ್ಲಿ ಚಿತ್ರವನ್ನ ರಿಮೇಕ್ ಮಾಡಿದರು. ಹಿಂದಿಯಲ್ಲಿ ಸಂಜೀವ್ ಕುಮಾರ್ ಡಾ.ರಾಜ್ ಕುಮಾರ್ ಅವರ ಪಾತ್ರಕ್ಕೆ ಜೀವ ತುಂಬುವ ಪ್ರಯತ್ನವನ್ನ ಶಾಂದಾರ್ ಚಿತ್ರದಲ್ಲಿ ಮಾಡಿದರು.

ಬಂಗಾರದ ಮನುಷ್ಯ (1972) (Bangarada Manushya)

ಬಂಗಾರದ ಮನುಷ್ಯ T. K. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ 1972ರ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ಶ್ರೀನಿಧಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿದ್ದಲಿಂಗಯ್ಯ ನಿರ್ದೇಶಿಸಿದ್ದರು. ಈ ಮೊದಲು ಸಿದ್ದಲಿಂಗಯ್ಯ ಅವರು ʻಮೇಯರ್ ಮುತ್ತಣ್ಣʼ ಸಿನಿಮಾಗೂ ನಿರ್ದೇಶಿಸಿದ್ದರು. ರಾಜೀವನಾಗಿ ಡಾ ರಾಜ್‌ಕುಮಾರ್, ಲಕ್ಷ್ಮಿಯಾಗಿ ಭಾರತಿ, ರಾಚುತಪ್ಪನಾಗಿ ಬಾಲಕೃಷ್ಣ, ಶರಾವತಿಯಾಗಿ ಆರತಿ, ಗ್ರಾಮದ ಮುಖಂಡನ ಮಗನಾಗಿ ದ್ವಾರಕೀಶ್ ನಟಿಸಿದ್ದರು. ಆರ್.ಲಕ್ಷ್ಮಣ್ ನಿರ್ಮಾಣ ಇದ್ದರೆ, ಜಿ ಕೆ ವೆಂಕಟೇಶ್ ಸಂಗೀತ ನಿರ್ದೇಶಕರಾಗಿದ್ದರು.

ಬರೋಬ್ಬರಿ 2 ವರ್ಷ ಪ್ರದರ್ಶನ ಕಂಡ ಸಿನಿಮಾ ಇದು. ಡಾ. ರಾಜ್‌ಕುಮಾರ್ ಹಾಗೂ ಭಾರತೀ ವಿಷ್ಣುವರ್ಧನ್ ನಟನೆಯ ಈ ಚಿತ್ರ ಬೆಂಗಳೂರಿನ ಸ್ಟೇಟ್ಸ್ ಥಿಯೇಟರ್‌ನಲ್ಲಿ (ಈಗಿನ ಭೂಮಿಕಾ ಥಿಯೇಟರ್) ಎರಡು ವರ್ಷ, ಮೈಸೂರಿನ ಚಾಮುಂಡೇಶ್ವರಿ ಥಿಯೇಟರ್‌ನಲ್ಲಿ 60 ವಾರಗಳ ಕಾಲ ಪ್ರದರ್ಶನಗೊಂಡಿತ್ತು. ಇನ್ನು ಕೆಲವೆಡೆ 1 ವರ್ಷ, ಮತ್ತೆ ಕೆಲವೆಡೆ 25 ವಾರ ಓಡಿತ್ತು.ಪಟ್ಟಣದಿಂದ ಹಳ್ಳಿ ಸೇರಿ ರಾಜೀವ(ಡಾ. ರಾಜ್‌ಕುಮಾರ್) ಬರಡು ಭೂಮಿಯಲ್ಲಿ ಕೃಷಿ ಮಾಡಿ ಗೆಲ್ಲುವ ಕಥೆ ಅನೇಕರಿಗೆ ಸ್ಫೂರ್ತಿಯಾಗಿತ್ತು.ಅಂದಾಜು 13 ಲಕ್ಷ ರೂಪಾಯಿ ಖರ್ಚು ಮಾಡಿ ಸಿನಿಮಾ ನಿರ್ಮಿಸಲಾಗಿತ್ತು. ಆದರೆ ಹಲವು ಪಟ್ಟು ಸಿನಿಮಾ ಲಾಭ ಮಾಡಿತ್ತು. ಬರೋಬ್ಬರಿ 2.5 ಕೋಟಿ ರೂ. ಗಳಿಕೆ ಕಂಡಿತ್ತು ಎನ್ನುವ ಅಂದಾಜಿದೆ. ಇವತ್ತಿನ ಲೆಕ್ಕದಲ್ಲಿ ಕಲೆಕ್ಷನ್ 100 ಕೋಟಿ ರೂ.ಗೂ ಹೆಚ್ಚು ಎನ್ನಬಹುದು.

ಇದನ್ನೂ ಓದಿ: Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಗಂಧದಗುಡಿ ( GANDHADA GUDI)

ಕನ್ನಡ ನಾಡಿನ ಹಚ್ಚ ಹಸಿರು, ವನ್ಯಜೀವಿಗಳ ಲೋಕ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದ ಗಂಧದಗುಡಿ 1973ರ ಸೆಪ್ಟಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಟರಾಗಿ ನಂತರ ನಿರ್ಮಾಪಕರಾಗಿ ಬೆಳೆದವರು ಮೈಸೂರಿನವೇ ಆದ ಎಂ.ಪಿ.ಶಂಕರ್‌. ಅವರಿಗೂ ಕಾಡಿನ ಕುರಿತು ಏನಾದರೂ ಸಿನೆಮಾ ಮಾಡಬೇಕು ಎನ್ನುವ ಬಯಕೆ. ಅದಕ್ಕಾಗಿ 1969ರಲ್ಲಿ ಕಾಡಿನ ರಹಸ್ಯ ಎನ್ನುವ ಚಿತ್ರ ಮಾಡಿದ್ದರು. 1972ರಲ್ಲಿಯೇ ಮೈಸೂರು ಜಿಲ್ಲೆಯ ನಾಗರಹೊಳೆ, ಬಂಡೀಪುರ ಪ್ರದೇಶದಲ್ಲಿ ಶೂಟಿಂಗ್‌. ರಾಜಕುಮಾರ್‌ ಜತೆಗೆ ವಿಷ್ಣುವರ್ಧನ್‌ ಕೂಡ ಇದ್ದರು. ದೊಡ್ಡ ತಾರಾಗಣದ ಚಿತ್ರ. ವಿಜಯ್‌ ನಿರ್ದೇಶನ. ಡಿ.ವಿ.ರಾಜಾರಾಂ ಅವರ ಕ್ಯಾಮರಾ. ರಾಜನ್‌ ನಾಗೇಂದ್ರ ಅವರ ಸಂಗೀತವಿದ್ದ ಚಿತ್ರ.

ಭಕ್ತ ಕುಂಬಾರ

ಹುಣಸೂರು ಕೃಷ್ಣಮೂರ್ತಿ ನಿರ್ದೇಶಿಸಿದ 1974 ರ ಕನ್ನಡ ಚಲನಚಿತ್ರವಾಗಿದೆ. ಚಿತ್ರದಲ್ಲಿ ರಾಜಕುಮಾರ್ ಮತ್ತು ಲೀಲಾವತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜಿ ಕೆ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕರ್ನಾಟಕದಲ್ಲಿ ಅದ್ಭುತ ಯಶಸ್ಸಿನ ನಂತರ ಈ ಚಿತ್ರವನ್ನು ನಂತರ ತೆಲುಗಿನಲ್ಲಿ ವಿ. ಮಧುಸೂಧನ್ ರಾವ್ ಅವರು ʻಚಕ್ರಧಾರಿʼ ಎಂದು ಸಿನಿಮಾ ಮಾಡಿದರು. 1977ರಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್ ನಟಿಸಿದರು.
ಗೋರಾ ಪಾತ್ರದಲ್ಲಿ ಡಾ ರಾಜ್‌ಕುಮಾರ್, ಗೋರ ಪತ್ನಿಯಾಗಿ ಲೀಲಾವತಿ, ಸಂತ ಜ್ಞಾನದೇವನಾಗಿ ರಾಜಶಂಕರ್,
ಗೋರನ ನೆರೆಯವನಾಗಿ ಬಾಲಕೃಷ್ಣ, ಕೃಷ್ಣನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ಹುಣಸೂರು ಕೃಷ್ಣಮೂರ್ತಿ
ನಿರ್ಮಾಪಕ: ಲಕ್ಷ್ಮಿ ಫಿಲ್ಮ್ಸ್ ಕಂಬೈನ್ಸ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಮಯೂರ (Mayura)

ಮಯೂರ 975 ರ ಕನ್ನಡ ಐತಿಹಾಸಿಕ ನಾಟಕ ಚಲನಚಿತ್ರವಾಗಿದೆ. ಇಂದಿನ ಆಧುನಿಕ ಕರ್ನಾಟಕ ರಾಜ್ಯವನ್ನು ಆಳುವ ಸಾಮ್ರಾಜ್ಯವಾದ ಕದಂಬ ರಾಜವಂಶದ ರಾಜಕುಮಾರ ಮಯೂರಶರ್ಮಾ ಪಾತ್ರವನ್ನು ನಿರ್ವಹಿಸಿದ್ದರು ರಾಜ್‌. ರಾಜ್‌ಕುಮಾರ್ ಅವರ ಅತ್ಯಂತ ಜನಪ್ರಿಯ ಚಲನಚಿತ್ರಗಳಲ್ಲಿ ಇದು ಒಂದಾಗಿದೆ. ಈ ಚಿತ್ರವು ಬ್ರಾಹ್ಮಣ ಯುವಕನಾದ ಮಯೂರನ ಜೀವನವನ್ನು ಚಿತ್ರಿಸುತ್ತದೆ. ಮಯೂರನಾಗಿ ರಾಜಕುಮಾರ್, ಪಲ್ಲವರ ಯುವರಾಜನಾಗಿ ಶ್ರೀನಾಥ್, ರಾಜಕುಮಾರ ವಿಷ್ಣುಗೋಪನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ವಿಜಯ್
ನಿರ್ಮಾಪಕ: ಟಿ.ಪಿ. ವೇಣುಗೋಪಾಲ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಸನಾದಿ ಅಪ್ಪಣ್ಣ (1977) (sanaadi appanna)

ಸನಾದಿ ಅಪ್ಪಣ್ಣ (ಸನಾದಿ ಅಪ್ಪಣ್ಣ) ವಿಜಯ್ ನಿರ್ದೇಶಿಸಿದ 1977ರ ಭಾರತೀಯ ಕನ್ನಡ ಚಲನಚಿತ್ರವಾಗಿದ್ದು, ಕೃಷ್ಣಮೂರ್ತಿ ಪುರಾಣಿಕ್ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ‘ಸನಾದಿ ಅಪ್ಪಣ್ಣ’ ಚಿತ್ರವು ಕೃಷ್ಣಮೂರ್ತಿ ಪುರಾಣಿಕ್ ಅವರ ‘ಕುಣಿಯಿತು ಹೆಜ್ಜೆ ನಲಿಯಿತು ಗೆಜ್ಜೆ’ ಕಾದಂಬರಿಯನ್ನು ಆಧರಿಸಿದ್ದು. ಈ ಕಥೆಯ ಹಂದರ ಬಾಗಲಕೋಟೆಯ ಶಹನಾಯಿ ವಾದಕ ಅಪ್ಪಣ್ಣನವರ ಜೀವನ ವೃತ್ತಾಂತವನ್ನು ಒಳಗೊಂಡಿರುವಂತಹುದು. ವಿಜಯ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವಿದೆ. ಶಹನಾಯಿ ವಾದಕ ಅಪ್ಪಣ್ಣನ ಪಾತ್ರದಲ್ಲಿ ರಾಜಕುಮಾರ್ ಅವರು ತೆರೆಯನ್ನು ಆವರಿಸಿಕೊಂಡರೆ, ಚಿತ್ರದುದ್ದಕ್ಕೂ ಶಹನಾಯಿಯ ವಾದನವನ್ನು ಹಿನ್ನೆಲೆಯಲ್ಲಿ ಮಾಡಿರುವವರು ಬಿಸ್ಮಿಲ್ಲಾ ಖಾನ್.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಪಾತ್ರವರ್ಗ ಮತ್ತು ಸಿಬ್ಬಂದಿ:
ಅಪ್ಪಣ್ಣನಾಗಿ ರಾಜ್‌ಕುಮಾರ್, ಬಸಂತಿಯಾಗಿ ಜಯಪ್ರದಾ, ರಾವ್ ಅಪ್ಪಣ್ಣನ ಮಗನಾಗಿ ಅಶೋಕ್, ಅಪಶ್ರುತಿ ಅಯ್ಯಣ್ಣನಾಗಿ ಬಾಲಕೃಷ್ಣ, ಯುವಕ ಅಶೋಕ್ ಪಾತ್ರದಲ್ಲಿ ಪುನೀತ್ ರಾಜ್‌ಕುಮಾರ್
ನಿರ್ದೇಶಕ: ಎಚ್.ಆರ್.ಭಾರ್ಗವ
ನಿರ್ಮಾಪಕ: ದ್ವಾರಕೀಶ್
ಸಂಗೀತ ನಿರ್ದೇಶಕ: ರಾಜನ್-ನಾಗೇಂದ್ರ

ಬಬ್ರುವಾಹನ (Babruvahana )

ಬಬ್ರುವಾಹನ 1977 ರಲ್ಲಿ ಬಿಡುಗಡೆಯಾದ ಪೌರಾಣಿಕ ಕನ್ನಡ ಚಲನಚಿತ್ರ. ಮೇಕಿಂಗ್ ಮತ್ತು ಸಂಗೀತಕ್ಕೆ ಹೆಸರುವಾಸಿಯಾದ ಸಿನಿಮಾ. ರಾಜ್‌ಕುಮಾರ್ ಅವರೇ ಹಾಡಿರುವ ‘ಈ ಸಮಯ ಆನಂದಮಯ’, ‘ಆರಾಧಿಸುವೆ ಮದನಾರಿ’ ಮತ್ತು ‘ಬರಸಿಡಿಲು ಬಡಿದನಾಥೆ’ ನಂತಹ ಕೆಲವು ಹಾಡುಗಳು ಸಖತ್‌ ಹಿಟ್‌ ಕಂಡವು. ಅರ್ಜುನ ಮತ್ತು ಮಗ ಬಬ್ರುವಾಹನ ಪಾತ್ರದಲ್ಲಿ ರಾಜ್‌ಕುಮಾರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಿ ಸರೋಜಾದೇವಿ ಚಿತ್ರಾಂಗದೆಯಾಗಿ ಕಾಣಿಸಿಕೊಂಡಿದ್ದರು. ಹುಣಸೂರು ಕೃಷ್ಣಮೂರ್ತಿ ಅವರ ನಿರ್ದೇಶನ ಮತ್ತು ಚಿತ್ರಕಥೆಯನ್ನು ಒಳಗೊಂಡಿರುವ ಈ ಚಿತ್ರವನ್ನು ಕೆಸಿಎನ್ ಚಂದ್ರಶೇಖರ್ ನಿರ್ಮಿಸಿದ್ದಾರೆ.

ಪಾತ್ರವರ್ಗ ಮತ್ತು ಸಿಬ್ಬಂದಿ:
ರಾಜಕುಮಾರ್, ಬಿ.ಸರೋಜಾದೇವಿ, ಕಾಂಚನಾ, ಜಯಮಾಲಾ, ವಜ್ರಮುನಿ, ರಾಮಕೃಷ್ಣ, ತೂಗುದೀಪ ಶ್ರೀನಿವಾಸ್.
ನಿರ್ದೇಶಕ: ಹುಣಸೂರು ಕೃಷ್ಣ ಮೂರ್ತಿ
ನಿರ್ಮಾಪಕ: ರಾಜಕಮಲ್ ಆರ್ಟ್ಸ್
ಸಂಗೀತ ನಿರ್ದೇಶಕ: ಟಿ.ಜಿ. ಲಿಂಗಪ್ಪ

ಕವಿರತ್ನ ಕಾಳಿದಾಸ (1983)

ಕವಿರತ್ನ ಕಾಳಿದಾಸ 1983ರ ಕನ್ನಡ ಐತಿಹಾಸಿಕ ಚಲನಚಿತ್ರ. 4 ನೇ ಶತಮಾನದ ಶಾಸ್ತ್ರೀಯ ಸಂಸ್ಕೃತ ಬರಹಗಾರ ಕಾಳಿದಾಸನ ಜೀವನವನ್ನು ಆಧರಿಸಿದೆ. ತ್ತು. ಈ ಚಿತ್ರವನ್ನು ರೇಣುಕಾ ಶರ್ಮಾ ಬರೆದು ನಿರ್ದೇಶಿಸಿದ್ದಾರೆ. ವಿ ಎಸ್ ಗೋವಿಂದ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ಅವರು ಕಾಳಿದಾಸನ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಜಯಪ್ರದಾ ಅವರು ವಿದ್ಯಾಧರೆಯಾಗಿ ಮತ್ತು ಶ್ರೀನಿವಾಸ ಮೂರ್ತಿ ರಾಜ ಭೋಜ ಪಾತ್ರದಲ್ಲಿ ನಟಿಸಿದ್ದರು. ‘ವಜ್ರೇಶ್ವರಿ ಕಂಬೈನ್ಸ್’ ಬ್ಯಾನರ್ ಅಡಿಯಲ್ಲಿ ಪಾರ್ವತಮ್ಮ ರಾಜ್‌ಕುಮಾರ್ ವಿತರಿಸಿದ್ದರು.

ಪಾತ್ರವರ್ಗ ಮತ್ತು ಸಿಬ್ಬಂದಿ: ಕಾಳಿದಾಸನಾಗಿ ರಾಜ್‌ಕುಮಾರ್, ವಿಧ್ಯಾಧಾರೆಯಾಗಿ ಜಯಪ್ರದ, ರಾಜ ಭೋಜನಾಗಿ ಶ್ರೀನಿವಾಸ ಮೂರ್ತಿ. ನಿರ್ದೇಶಕರು: ರೇಣುಕಾ ಶರ್ಮಾ ನಿರ್ಮಾಪಕ: ವಿ ಎಸ್ ಗೋವಿಂದ ಸಂಗೀತ ನಿರ್ದೇಶಕ: ಎಂ.ರಂಗರಾವ್

ಜೀವನ ಚೈತ್ರ (1992) (Jeevana Chaitra)

ಜೀವನ ಚೈತ್ರ 1992ರಲ್ಲಿ ಬಿಡುಗಡೆಯಾದ ಸಿನಿಮಾ. ದೊರೈ- ಭಗವಾನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಚಿತ್ರದಲ್ಲಿ ಸಾಮಾಜಿಕ ಕಳಕಳಿಯ ಸಂದೇಶವಿದೆ. ಮದ್ಯಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ ರಾಜ್‌ಕುಮಾರ್ ಅಭಿನಯಿಸಿದ್ದಾರೆ. ಮಾಧವಿ ಈ ಚಿತ್ರದ ನಾಯಕಿ. ಇದು ಒಂದು ರೀತಿಯಲ್ಲಿ ಅಣ್ಣಾವ್ರ ಕಂಬ್ಯಾಕ್‌ ಸಿನಿಮಾವೂ ಆಗಿತ್ತು.ಇದು ಕಾದಂಬರಿ ಆಧರಿತ ಸಿನಿಮಾ. ವಿಶಾಲಾಕ್ಷಿ ದಕ್ಷಿಣಾಮೂರ್ತಿಯವರ ಜೀವನಚೈತ್ರ ಕಾದಂಬರಿಯೇ ಸಿನಿಮಾವಾಗಿತ್ತು.

ಪಾತ್ರವರ್ಗ ಮತ್ತು ಸಿಬ್ಬಂದಿ:
ಡಾ ರಾಜಕುಮಾರ್, ಮಾಧವಿ, ಕೆ.ಎಸ್.ಅಶ್ವಥ್, ಪಂಡರಿ ಬಾಯಿ
ನಿರ್ದೇಶಕ: ದೊರೈ – ಭಗವಾನ್
ನಿರ್ಮಾಪಕಿ: ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ ನಿರ್ದೇಶಕ: ಉಪೇಂದ್ರ ಕುಮಾರ್

ಆಕಸ್ಮಿಕ (1993) Aakasmika

1993 ರ ಕನ್ನಡ ಆಕ್ಷನ್-ಡ್ರಾಮಾ ಚಲನಚಿತ್ರವಾಗಿದ್ದು, ಇದನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಜಕುಮಾರ್, ಗೀತಾ ಮತ್ತು ಮಾಧವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಂಸಲೇಖ ಸಂಗೀತ ಜತೆಗೆ ಸಾಹಿತ್ಯವನ್ನು ಬರೆದಿದ್ದಾರೆ. ʻಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ಕೇಳಿದರೆ ಎಂಥವರಿಗಾದರೂ ಒಮ್ಮೆ ರೋಮಾಂಚನ ಆಗುತ್ತದೆ. ಈ ಹಾಡಿಗೆ ಇರುವ ತಾಕತ್ತು ಅಂಥದ್ದು. ಹಾಡಿನ ಪ್ರತಿ ಸಾಲುಗಳು ಕನ್ನಡ ನಾಡಿನ ಬಗ್ಗೆ ಇರುವುದು ಒಂದು ವಿಶೇಷವಾದರೆ, ರಾಜ್​ಕುಮಾರ್ ಅವರ ಕಂಠದಲ್ಲಿ ಈ ಸಾಂಗ್ ಮೂಡಿ ಬಂದಿದೆ ಅನ್ನೋದು ಮತ್ತೊಂದು ವಿಶೇಷ. ಈ ಸಿನಿಮಾದ ಹಿಟ್‌ ಸಾಂಗ್‌ ಇದು.

ರಾಜ್​ಕುಮಾರ್ ರಿಯಲ್ ಹೀರೊ

ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸಿನಿಮಾ

ಜಗತ್ತೇ ನಿನ್ನ ವಿರುದ್ಧ ನಿಂತರೂ ,ನಾನು ನಿನ್ನ ಜೊತೆ ಇರುವೆ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ, ವಿಜಯಲಕ್ಷ್ಮಿ ದಂಪತಿಗೆ ಇಂದು 23ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಹೀಗಿರುವಾಗ ಗಂಡನ ನೆನೆದು ಪತ್ನಿ ವಿಜಯಲಕ್ಷ್ಮಿ ಗಂಡನ ಕೈ ಹಿಡಿದಿರುವ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇನ್ನು ಪೋಸ್ಟ್‌ನಲ್ಲಿ ಪ್ರತಿ ಬಿರುಗಾಳಿ ಪ್ರತಿ ಮೌನದಲ್ಲಿಯೂ ನಾನು ನಿನ್ನ ಕೈಹಿಡಿಯುತ್ತೇನೆ. ಸಂದರ್ಭಗಳು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನಿಸಿದರೂ ನನ್ನ ಹೃದಯ ಯಾವಾಗಲೂ ನಿನ್ನನ್ನೇ ಆರಿಸುತ್ತದೆ. ನಿನ್ನ ವಿರುದ್ಧ ಜಗತ್ತೇ ನಿಂತರೂ ನಾನು ನಿನ್ನ ಜೊತೆಗೇ ಇರುತ್ತೇನೆ. ಏನೇ ಬರಲಿ ನಿನ್ನ ಕೈಬಿಡಲ್ಲ ಎಂದು ವಿಜಯಲಕ್ಷ್ಮಿ ಭಾವುಕವಾಗಿ ಬರೆದಿರುವುದು ಮನ ಮುಟ್ಟುವಂತಿದೆ.

ಇಂದು ಪತ್ನಿ ವಿಜಯಲಕ್ಷ್ಮಿ, ಮಗ ಸೇರಿ ಐವರಿಗೆ ಮಾತ್ರ ಜೈಲಿನಲ್ಲಿರುವ ದರ್ಶನ್‌ ಅವರನ್ನು ಭೇಟಿ ಮಾಡಲು 30 ನಿಮಿಷಗಳ ಕಾಲ ಅವಕಾಶ ನೀಡಲಾಗಿದೆ. ಜೊತೆಗೆ ಮನೆಯಿಂದ ತರುವ ಹಣ್ಣು, ತಿನಿಸುಗಳಿಗೆ ಅನುಮತಿ ನೀಡಲಾಗಿದೆ.

Continue Reading

Latest

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

VISTARANEWS.COM


on


ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್‌ ಕಾರಾಗೃಹ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ತನ್ನ ಪತ್ನಿ ವಿಜಯಲಕ್ಷ್ಮಿ ಮತ್ತು ಮಗನನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು, ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ಕೋರಿ ಕೇಂದ್ರ ಕಾರಾಗೃಹ ಎಸ್‌ಪಿ ಅಂಶುಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೈದಿಗಳನ್ನು ಭೇಟಿ ಮಾಡುವ ಸಂದರ್ಶನ ಕೊಠಡಿ ಬದಲು ಪ್ರತ್ಯೇಕವಾಗಿ ಸೆಲ್‌ ಒಳಗೆ ಭೇಟಿ ಅವಕಾಶ ಬೇಕೆಂದು ಕೋರಿದ್ದಾರೆ.
ಡಿಜಿಪಿ ಅಲೋಕ್‌ ಕುಮಾರ್‌ ಭೇಟಿ ಮಾಡಿದ ವಿಜಯಲಕ್ಷ್ಮಿ
ದರ್ಶನ್‌ ಜೈಲಧಿಕಾರಗಳಿಗೆ ಪತ್ರ ಬರೆದಿದ್ದರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಮೇ.16ರಂದು ಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದರ್ಶನ್‌ ಅವರನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆಂದು ಮಾಹಿತಿ ತಿಳಿದುಬಂದಿದೆ.

ನಾಳೆ ಮೇ 19 ದರ್ಶನ್‌, ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ದರ್ಶನ್‌ ಭೇಟಿಗೆ ಅವರ ಪತ್ನಿ, ಮಗನಿಗೆ ಅವಕಾಶ ಸಿಗಲಿ ಅಂತ ಅಭಿಮಾನಿಗಳು ಬಯಸುತ್ತಿದ್ದಾರೆ.

Continue Reading

Latest

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

VISTARANEWS.COM


on

ನಟ ದರ್ಶನ್‌ ಅವರಿಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್‌ಟಾ ಪೇಜ್‌ನಲ್ಲಿ ಹಾರ್ಟ್‌ ಬ್ರೇಕ್‌ ಇಮೋಜಿ ಮತ್ತು ದರ್ಶನ್‌ ಭಾವಚಿತ್ರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ದರ್ಶನ್‌ಗೆ ವಿಜಯಲಕ್ಷ್ಮಿ ಅವರು ಆಗಾಗ ಧೈರ್ಯ ತುಂಬುತ್ತಿದ್ದರು. ಕುಟುಂಬದ ಬೆಂಬಲವೇ ಅವರಿಗೆ ದೊಡ್ಡ ಶಕ್ತಿಯಾಗಿತ್ತು ಎನ್ನಲಾಗುತ್ತಿದೆ.

ಆದರೆ ಇತ್ತೀಚಿನ ಬೆಳವಣಿಗೆಗಳ ನಂತರ ದರ್ಶನ್‌ ಮೌನವಾಗಿದ್ದು, ಜೈಲಿನಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಇದೇ ವೇಳೆ ವಿಜಯಲಕ್ಷ್ಮಿಯವರು ಸಹ ಮೌನಕ್ಕೆ ಜಾರಿದ್ದು, ಇದೀಗ ಈ ಪೋಸ್ಟ್‌ ಮೂಲಕ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.

Continue Reading

Latest

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

VISTARANEWS.COM


on

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಇನ್ನು ಒಂದು ವರ್ಷ ಬಿಡುಗಡೆ ಆಗುವ ಸಾಧ್ಯತೆ ಇಲ್ಲ. ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ನಟ ದರ್ಶನ್‌ಗೆ, ನ್ಯಾಯಪೀಠ ಬಿಗ್ ಶಾಕ್ ಕೊಟ್ಟಿದೆ. ನಟ ದರ್ಶನ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇನ್ನು ಒಂದು ವರ್ಷ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ವಿಚಾರಣೆಯಲ್ಲಿ ಒಂದು ವರ್ಷ ಯಾವುದೇ ಪ್ರಗತಿಯಾಗದೇ ಇದ್ದಲ್ಲಿ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಮುಂದಿನ ಒಂದು ವರ್ಷದಲ್ಲಿ ಬಾಕಿ ಇರುವ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ಜಿ. ಬಿ ಪಾರ್ದಿವಾಲಾ ನೇತೃತ್ವದ ನ್ಯಾಯಪೀಠ ಹೇಳಿದೆ.
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಾಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ರ ಜಾಮೀನು ಅರ್ಜಿ ವಿಚಾರಣೆ ಮುಗಿಸಲು ಒಂದು ವರ್ಷ ಕಾಲಾವಕಾಶ ಕೊಟ್ಟಿದೆ. ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌