South Cinema
ARM Teaser: ಮಲಯಾಳಿ ಹಿರೋನ ಪ್ಯಾನ್ ಇಂಡಿಯಾ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ನಟ ರಕ್ಷಿತ್ ಶೆಟ್ಟಿ
ಕನ್ನಡ ಟೀಸರ್ ಬಿಡುಗಡೆ ಮಾಡಿದ ರಕ್ಷಿತ್ ಶೆಟ್ಟಿ ‘ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ತುಂಬ ಖುಷಿಯಾಯಿತು. ಈ ಸಿನಿಮಾದಲ್ಲಿ ಟೊವಿನೋ ಥಾಮಸ್ ಅವರ ನಟನೆಯನ್ನು ನೋಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.
‘ಮಿನ್ನಲ್ ಮುರಳಿ’ ಎಂಬ ಮಲಯಾಳಂ ಭಾಷೆಯ, ಸೂಪರ್ ಹೀರೋ ಚಲನಚಿತ್ರದ ಮೂಲಕ ಖ್ಯಾತಿ ಪಡೆದಿದ್ದ ನಟ ಟೊವಿನೋ ಥಾಮಸ್ ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ‘ (Ajayante Randam Moshanam- ARM)ನ ಟೀಸರ್ ಇಂದು ಬಿಡುಗಡೆಯಾಗಿದೆ. ಸಿನಿಮಾದ ಕನ್ನಡ ಟೀಸರ್ನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರು ರಿಲೀಸ್ ಮಾಡಿದ್ದಾರೆ. ಟೊವಿನೋ ಥಾಮಸ್ ಅವರ ಸಿನಿ ಬದುಕಿನ ಅತ್ಯಂತ ಮಹತ್ವದ ಪ್ರಾಜೆಕ್ಟ್ ಎನ್ನಿಸಿರುವ ‘ಅಜಯಂತೆ ರಂದಂ ಮೋಷನಂ’ ಸಿನಿಮಾದ ಟೀಸರ್ನ್ನು ಕನ್ನಡದಲ್ಲಿ ರಕ್ಷಿತ್ ಶೆಟ್ಟಿ, ಹಿಂದಿಯಲ್ಲಿ ಹೃತಿಕ್ ರೋಷನ್, ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಲೋಕೇಶ್ ಕನಕರಾಜ್ ಮತ್ತು ಆರ್ಯ, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ಸೋಷಿಯಲ್ ಮೀಡಿಯಾ ಮೂಲಕ ಬಿಡುಗಡೆ ಮಾಡಿದ್ದಾರೆ.
ಕನ್ನಡ ಟೀಸರ್ ಬಿಡುಗಡೆ ಮಾಡಿದ ರಕ್ಷಿತ್ ಶೆಟ್ಟಿ ‘ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ತುಂಬ ಖುಷಿಯಾಯಿತು. ಈ ಸಿನಿಮಾದಲ್ಲಿ ಟೊವಿನೋ ಥಾಮಸ್ ಅವರ ನಟನೆಯನ್ನು ನೋಡಲು ಉತ್ಸುಕನಾಗಿದ್ದೇನೆ. ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ. ಹಾಗೇ, ಟೀಸರ್ನ ಯೂಟ್ಯೂಬ್ ಲಿಂಕ್ ಅಡ್ರೆಸ್ ಕೊಟ್ಟಿದ್ದಾರೆ. ಹಿಂದಿಯಲ್ಲಿ ಬಿಡುಗಡೆ ಮಾಡಿದ ಹೃತಿಕ್ ರೋಷನ್ ಅವರು ‘ARM ಸಿನಿಮಾದ ಹಿಂದಿ ಟೀಸರ್ ಬಿಡುಗಡೆ ಮಾಡಿದ್ದು ಖುಷಿಯಾಯಿತು. ಮಲಯಾಳಂ ಸಿನಿಮಾ ಇಂಡಸ್ಟ್ರಿಯ ತಾರಾಗಣ ಸೇರಿಕೊಂಡು ಒಂದು ಮಹಾತ್ವಾಕಾಂಕ್ಷಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ARM ಕನ್ನಡ ಟೀಸರ್ ಇಲ್ಲಿದೆ
ಟೊವಿನೋ ಥಾಮಸ್ ಅವರು ಅಜಯಂತೆ ರಂದಂ ಮೋಷನಂ ಸಿನಿಮಾದಲ್ಲಿ ಮಾಸ್ ಅವತಾರ ತಾಳಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಘಟನೆ ಸುತ್ತ ಇಡೀ ಟೀಸರ್ ಸಾಗುತ್ತದೆ. ಈ ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿರುವುದು ವಿಶೇಷ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.
ಟೊವಿನೋ ಥಾಮಸ್ ಜೋಡಿಯಾಗಿ ಕೃತಿ ನಟಿಸುತ್ತಿದ್ದು, ಉಳಿದಂತೆ ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
South Cinema
Kannada New Movie: ಮೊದಲ ಬಾರಿಗೆ ಗುಜರಾತಿ ಸಿನಿಮಾ ಕನ್ನಡದಲ್ಲಿ!
Kannada New Movie: ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು.
ಬೆಂಗಳೂರು: ‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ (Kannada New Movie) ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ.
`ವರ ಪಧಾರವೋ ಸಾವಧಾನ; ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು. ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಕನ್ನಡ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ.
ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Kannada New Movie: ‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ
ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ. ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ9 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ13 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ16 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ