Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ! - Vistara News

ಸಿನಿಮಾ

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Rakshit Shetty: ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

VISTARANEWS.COM


on

Rakshit Shetty Visited Koragajja Temple And Prayed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ‘ರಿಚರ್ಡ್​ ಆ್ಯಂಟನಿ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್​ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುಂಚೆ ನಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಅವರು ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿ ಬಂದಿದ್ದರು. ಜತೆಗೆ ಇನ್‌ಸ್ಟಾದಲ್ಲಿ ಶ್ರೀರಾಮ ಮೂರ್ತಿಯ ದರ್ಶನ ಪಡೆದ ಬಗ್ಗೆ ಬರೆದುಕೊಂಡಿದ್ದರು. ಮಾತ್ರವಲ್ಲ ವಿಗ್ರಹ ಕೆತ್ತನೆ ಮಾಡಿದ ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಬಳಿ ಸಿಂಪಲ್ ಸ್ಟಾರ್ ವಿಶೇಷ ಮನವಿ ಮಾಡಿದ್ದರು.

ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

ಇದನ್ನೂ ಓದಿ: Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

Tamanna Bhatia: ನಟಿ ತಮನ್ನಾ ಭಾಟಿಯಾ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಈ ಸರಣಿಯಲ್ಲಿನ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟಕ್ಕೆ ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Tamanna Bhatia
Koo


ಮುಂಬೈ: ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಪಡೆದಿರುವ ನಟಿ ತಮನ್ನಾ ಭಾಟಿಯಾ (Tamanna Bhatia )ಅವರು ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ತೆರೆಯ ಮೇಲೆ ಕಿಸ್ ಮಾಡುವುದಿಲ್ಲ ಎಂದಿದ್ದ ನಟಿ ‘ಲಸ್ಟ್ ಸ್ಟೋರೀಸ್ 2’ ವೆಬ್ ಸರಣಿಯಲ್ಲಿ ಬಿಂದಾಸ್‌ ಕಿಸ್ ಮಾಡಿ ನಿಯಮವನ್ನು ಮುರಿದು ಜನರ ಟೀಕೆಗೆ ಗುರಿಯಾಗಿದ್ದರು. ಇದೀಗ ನಟಿ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಹಿಂದೆಂದೂ ಕಾಣದಷ್ಟು ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Tamanna Bhatia

ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಆದರೆ ನಂತರ, ಸರಣಿಯಲ್ಲಿ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟವನ್ನು ಅನೇಕರು ಹೊಗಳಿದರೂ ಕೂಡ , ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಜನ್ ನಟಿಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ವೆಬ್ ಸರಣಿಯಲ್ಲಿ ನಟಿಯ ಬೋಲ್ಡ್ ಪೋಟೋಗಳನ್ನು ಹಂಚಿಕೊಂಡು ಅವರನ್ನು ದೂಷಿಸಿದ್ದಾರೆ. ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಲಿಲ್ಲವೆಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ಜೀ ಕರ್ದಾದಲ್ಲಿ ಇಬ್ಬರು ಬಾಲ್ಯದ ಸ್ನೇಹಿತರಾದ ಲಾವಣ್ಯ (ತಮನ್ನಾ ಭಾಟಿಯಾ) ಮತ್ತು ರಿಷಬ್ (ಸುಹೇಲ್ ನಯ್ಯರ್) ಅವರ ಕಥೆಗಳನ್ನು ತೋರಿಸುತ್ತದೆ. ಆದರೆ ಕೆಲವೊಂದು ವಿಚಾರಗಳು ತಮ್ಮ ಸಂಬಂಧವನ್ನು ಹಾಳುಮಾಡಲು ಪ್ರಾರಂಭಿಸಿದಾಗ ಅವರು ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

ಈ ಸರಣಿಯಲ್ಲಿ ಹುಸೇನ್ ದಲಾಲ್, ಸಯಾನ್ ಬ್ಯಾನರ್ಜಿ ಮತ್ತು ಸಂವೇದನಾ ಸುವಾಲ್ಕಾ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ತಮನ್ನಾ ಭಾಟಿಯಾ ಕೊನೆಯ ಬಾರಿಗೆ ಭಯಾನಕ-ಹಾಸ್ಯ ಚಿತ್ರ ‘ಅರಮನೆ 4’ ನಲ್ಲಿ ರಾಶಿ ಖನ್ನಾ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು 2024 ರ ಕಾಲಿವುಡ್‌ನ ಮೊದಲ ಹಿಟ್ ಚಿತ್ರ ಆಯಿತು. ಈಗ ಅವರು ವೆಬ್ ಸರಣಿಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

Continue Reading

ಕರ್ನಾಟಕ

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Kannada New Movie: ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

VISTARANEWS.COM


on

Dharma Keerthiraj starrer production No 1 movie Muhurta
Koo

ಬೆಂಗಳೂರು: ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ.ಲಿ. ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಎಚ್. ಜನಾರ್ದನ್ ಹಾಗೂ ಸಿ.ಎಲ್. ಹರ್ಷವರ್ಧನ್ ನಿರ್ಮಿಸುತ್ತಿರುವ ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ (Kannada New Movie) ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಆಕ್ಷನ್ ಡ್ರಾಮ ಜಾನರ್‌ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ.

ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ. ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Continue Reading

ಸಿನಿಮಾ

Actor Darshan: ದರ್ಶನ್ ಭೇಟಿ ಮಾಡಿದ ಪವಿತ್ರಾ ಗೌಡ ಆಪ್ತೆ; ನಟ ಧನ್ವೀರ್‌ಗೆ ಸಿಗದ ಅವಕಾಶ!

Actor Darshan: ಪವಿತ್ರಾ ಗೌಡ ಸ್ನೇಹಿತೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ದರ್ಶನ್‌ ಜತೆ ಮಾತನಾಡಿದ್ದಾರೆ. ಆದರೆ, ನಟ ಧನ್ವೀರ್‌ ಕೂಡ ದರ್ಶನ್‌ ಭೇಟಿಗೆ ತೆರಳಿದ್ದರು, ಅವರಿಗೆ ಮಾತ್ರ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

ದರ್ಶನ್ ‌ಭೇಟಿಯಾಗಿದ್ದಾಗಿ ಮಾಧ್ಯಮಗಳ ಬಳಿ ಸುಳ್ಳು ಹೇಳಿದ್ರಾ ಧನ್ವೀರ್?

ಜೈಲಿನಲ್ಲಿರುವ ದರ್ಶನ್ ಭೇಟಿಗೆ ನಟ ಧನ್ವೀರ್‌ಗೆ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. ಇದರಿಂದ ಬೇಸರದಲ್ಲಿಯೇ ಧನ್ವೀರ್‌ ವಾಪಸ್ ತೆರಳಿದ್ದಾರೆ. ಆದರೆ, ಮಾಧ್ಯಮಗಳ ಬಳಿ ಮಾತ್ರ ನಟ ದರ್ಶನ್‌ರನ್ನು ಭೇಟಿ ಮಾಡಿರುವುದಾಗಿ ಅವರು ಹೇಳಿರುವುದು ಅನುಮಾನಗಳಿಗೆ ಎಡೆಮಾಡಿದೆ.

ಮೊದಲಿಗೆ ದರ್ಶನ್‌ ಭೇಟಿ ಮಾಡಲು ಹೋಗಿದ್ದೆ, ಅವರ ಜತೆ ಹೆಚ್ಚು ಹೊತ್ತು ಮಾತನಾಡಲಾಗಲಿಲ್ಲ. ನಟ ದರ್ಶನ್ ಬೇಜಾರಿನಲ್ಲಿದ್ದಾರೆ ಎಂದು ಹೊರಟಿದ್ದರು. ಆದರೆ, ಜೈಲಿಗೆ ಭೇಟಿ ನೀಡಿದರೆ ಬಲಗೈಗೆ ಸೀಲ್ ಹಾಕಲಾಗುತ್ತದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಎಂಬ ಸೀಲ್ ಅನ್ನು ಕೈ ಮೇಲೆ ಹಾಕಲಾಗುತ್ತದೆ. ಆದರೆ ಧನ್ವೀರ್ ಕೈಯಲ್ಲಿ ಜೈಲಿನ ಸೀಲ್ ಇರದ ಕಾರಣ ಅವರು ದರ್ಶನ್‌ರನ್ನು ಭೇಟಿಯಾಗಿಲ್ಲ ಎನ್ನಲಾಗುತ್ತಿದೆ.

ಧನ್ವೀರ್‌ ಅಲ್ಲದೇ ಮೈಸೂರಿನಿಂದ ದರ್ಶನ್‌ ಅವರ ಬಾಲ್ಯ ಸ್ನೇಹಿತ ಶಿವಕುಮಾರ್ ಕೂಡ ಆಗಮಿಸಿದ್ದರು. ಆದರೆ, ಅವರಿಗೂ ಭೇಟಿ ಮಾಡಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ವಾಪಸ್‌ ತೆರಳಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Actor Darshan Devil gang gets life imprisonment What do legal experts say

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಹೆಸರು ಆಚೆಗೇ ಬಾರದೆ ಮುಚ್ಚಿಹೋಗುವುದರಲ್ಲಿತ್ತು. ಆರಂಭದಲ್ಲಿ ಪೊಲೀಸರಿಗೂ (Police) ಇದರ ಅರಿವು ಇರಲಿಲ್ಲ. ಆದರೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ತನಿಖೆ ಮಾಡುತ್ತ ಹೋದಂತೆಲ್ಲಾ ಒಂದೊಂದೇ ಎಳೆಗಳು ಬಿಚ್ಚಿಕೊಂಡು ದರ್ಶನ್‌ ಜೈಲುಪಾಲಾಗುವಂತಾಯಿತು. ಅದೇ ಒಂದು ರೋಚಕ ಕಹಾನಿ.

ಹತ್ಯೆಯ ಹಿಂದಿದ್ದ ಮಾಸ್ಟರ್ ಮೈಂಡ್ ಹೆಸರು ಬಾಯಿ ಬಿಡಿಸುವುದಕ್ಕೆ ಪೊಲೀಸರಿಗೆ ಸರಿ ಸುಮಾರು ಹತ್ತು ಗಂಟೆ ತೆಗೆದುಕೊಂಡಿತ್ತು. ಅದು ನಡೆದದ್ದು ಹೀಗೆ- ರೇಣುಕಾ ಸ್ವಾಮಿಯನ್ನು ಹಂತಕ‌ ಪಡೆ ಕೊಲೆ ಮಾಡಿದ್ದು ಶನಿವಾರ. ಭಾನುವಾರ ಸುಮನಹಳ್ಳಿ ಕಾಲುವೆಯಲ್ಲಿ ಆತನ ಶವ ಸಿಕ್ಕಿತ್ತು. ಶವ ಯಾರದು ಎಂಬ ಹುಡುಕಾಟದಲ್ಲಿದ್ದ ಪೊಲೀಸರಿಗೆ ನಾಲ್ವರು ಆರೋಪಿಗಳು ತಾವಾಗಿ ಬಂದು ಶರಣಾಗಿದ್ದರು.

ಕಾರ್ತಿಕ್, ನಿಖಿಲ್, ಕೇಶವ ಮೂರ್ತಿ ಹಾಗೂ ರಾಘವೇಂದ್ರ ಪೊಲೀಸರ ಬಳಿಗೆ ಸೋಮವಾರ ಬಂದು, ಕೊಲೆ ಮಾಡಿದ್ದು ನಾವೇ ಅಂತ ಹೇಳಿದ್ದರು. ಹಣಕಾಸಿನ ವಿಚಾರಕ್ಕಾಗಿ ನಾವೇ ಹಲ್ಲೆ ಮಾಡಿದೆವು, ಹಲ್ಲೆ ಮಾಡಿದ್ದು ಜಾಸ್ತಿಯಾಗಿ ಆತ ಸತ್ತುಹೋದ ಎಂದಿದ್ದರು. ಎಷ್ಟು ಪ್ರಶ್ನಿಸಿದರೂ ಅದರಾಚೆಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಹಲ್ಲೆ ಮಾಡಿದ ಜಾಗ ಯಾವುದು, ಅಲ್ಲಿಂದ ಇಲ್ಲಿಗೆ ಹೆಣ ಸಾಗಿಸಿದ್ದು ಹೇಗೆ, ಯಾವ ವಾಹನದಲ್ಲಿ, ರೇಣುಕಾ ಸ್ವಾಮಿಗೆ ಕೊಟ್ಟ ಹಣ ನಿಮಗೆ ಬಂದಿದ್ದು ಹೇಗೆ, ಆತನಿಗೂ ನಿಮಗೂ ಹೇಗೆ ಲಿಂಕು, ಇತ್ಯಾದಿ ಸರಣಿ ಪ್ರಶ್ನೆಗಳನ್ನು ಪೊಲೀಸರು ಹಾಕತೊಡಗಿದ ಕೂಡಲೇ ಶರಣಾಗತರು ಉತ್ತರ ಕೊಡಲಾಗದೆ ತತ್ತರಿಸಲು ಆರಂಭಿಸಿದರು.

ಸತತ ಹತ್ತು ಗಂಟೆಗಳ ಪ್ರಶ್ನಾವಳಿಯ ಬಳಿಕ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪ್ರದೂಷ್ ಹಾಗೂ ವಿನಯ್ ಹೆಸರುಗಳನ್ನು ಶರಣಾಗತರು ಬಾಯಿ ಬಿಟ್ಟಿದ್ದರು. ಇವರಿಬ್ಬರ ಹೆಸರು ಬಂದ ಕೂಡಲೇ ಜಾಗೃತರಾದ ಪೊಲೀಸರು, ಪ್ರಕರಣದಲ್ಲಿ ಇನ್ನಷ್ಟು ದೊಡ್ಡ ಹೆಸರುಗಳು ಇರಬಹುದು ಎಂಬ ಅರಿವಾಗಿ ಜಾಗೃತರಾದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರದೂಷ್ ಹಾಗೂ ವಿನಯ್‌ರನ್ನು ವಶಕ್ಕೆ ಪಡೆದರು.

ಪ್ರದೂಷ್‌ ಹಾಗೂ ವಿನಯ್‌ ಸುಲಭವಾಗಿ ಬಾಯಿ ಬಿಡಲಿಲ್ಲ. ಆರಂಭದಲ್ಲಿ, ಶರಣಾದವರು ಯಾರೂ ನಮಗೆ ಗೊತ್ತೇ ಇಲ್ಲ ಎಂದುಬಿಟ್ಟರು. ಪೊಲೀಸರು ವಿಚಾರಣೆ ತೀವ್ರಗೊಳಿಸಿದರು. ಆಗಲೂ ದರ್ಶನ್‌ ಹೆಸರು ಬಾಯಿ ಬಿಡಲಿಲ್ಲ ಪ್ರದೂಷ್ ಹಾಗೂ ವಿನಯ್. ಆದರೆ ಬೆಳಗಿನ ಜಾವ ಪೊಲೀಸರ ವಿಚಾರಣೆ ಧಾಟಿಗೆ ಬಳಲಿಹೋಗಿದ್ದ ವಿನಯ್ ಹಾಗೂ ಪ್ರದೂಷ್ ಪವಿತ್ರ ಗೌಡಳ ಹೆಸರು ಹೇಳಿದ್ದರು. ಪವಿತ್ರ ಗೌಡ ಯಾರು ಎಂದು ತಲೆ ಕೆಡಿಸಿಕೊಂಡ ಪೊಲೀಸರಿಗೆ ಆಕೆಗೆ ದರ್ಶನ್‌ ಲಿಂಕ್‌ ಇರುವುದು ಗೊತ್ತಾಗಿ ಇದು ಹೈ ಪ್ರೊಫೈಲ್‌ ಕೇಸು ಎಂಬುದು ಗೊತ್ತಾಗಿ ಹೋಗಿದೆ.

ನಂತರ ಪೊಲೀಸರು ಪವಿತ್ರ ಗೌಡಳ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಅಷ್ಟರಲ್ಲಿ ದರ್ಶನ್ ಜೊತೆ ಪವಿತ್ರ ಗೌಡ ಲಿಂಕ್ ಇರುವುದು ಚಾಟಿಂಗ್ಸ್, ಕಾಲ್ ಡಿಟೇಲ್ಸ್ ಮೂಲಕ ಪತ್ತೆಯಾಗಿದೆ. ಆರೋಪಿಗಳನ್ನೂ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ಕೂರಿಸಿಕೊಂಡು ಮತ್ತಷ್ಟು ವಿಚಾರಣೆ ನಡೆಸಿದಾಗ ಎಲ್ಲರೂ ಡಿ ಬಾಸ್‌ ಗ್ಯಾಂಗ್‌ ಆಗಿರುವುದು ಗೊತ್ತಾಗಿದೆ. ಪವಿತ್ರ ಗೌಡ ಕಾಲ್‌ ಹಿಸ್ಟರಿ, ಚಾಟ್‌ ಎಲ್ಲ ತೆಗೆದಾಗ ಅದರಲ್ಲಿ ರೇಣುಕ ಸ್ವಾಮಿಯ ಅಶ್ಲೀಲ ಮೆಸೇಜ್‌ಗಳ ಬಗೆಗಿನ ವಿವರಗಳು ಕಂಡುಬಂದಿವೆ. ಈ ಬಗ್ಗೆ ಪವನ್‌, ದರ್ಶನ್‌ಗೆ ಕಾಲ್‌ ಮಾಡಿ ರೇಣುಕಾ ಸ್ವಾಮಿಯ ಹಾವಳಿಯ ಬಗ್ಗೆ ತಿಳಿಸಿದ್ದು ಕೂಡ ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

ಕೂಡಲೇ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಸಿಪಿ ಗಿರೀಶ್ ಈ ವಿಷಯವನ್ನು ಕಮೀಷನರ್‌ಗೆ ಮುಟ್ಟಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಕಮೀಷನರ್, ದರ್ಶನ್ ಬಂಧನಕ್ಕೆ‌‌ ಸೂಚನೆ ನೀಡಿದ್ದರು. ಜೂನ್ 10ರ ರಾತ್ರಿಯೇ ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು ದರ್ಶನ್ ಇರುವ ಸ್ಥಳದ ಮಾಹಿತಿ ಕಲೆ ಹಾಕಿದ್ದರು. ಜೂನ್ 11ರ ಬೆಳಗ್ಗೆ 6.30ಕ್ಕೆ ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್ ಹೊರಗೆ ಬಂದ ಕೂಡಲೇ ವಶಕ್ಕೆ ಪಡೆದರು.

Continue Reading

Latest

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Actor Kamal Haasan: ರಜನಿಕಾಂತ್ ಹಾಗೂ ಕಮಲ್ ಹಾಸನ್ ಇಬ್ಬರೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟಾಗಲಿನಿಂದ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು.ಸಾಕಷ್ಟು ಸಿನಿಮಾಗಳಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದಾರೆ. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Actor Kamal Haasan
Koo

ಚೆನ್ನೈ : ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ (Actor Kamal Haasan) ಅವರು ತಮಿಳು ಚಿತ್ರರಂಗದ ಖ್ಯಾತ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು. ಇಳಮೈ ಊಂಜಲ್ ಆಡುಕಿರಾತು, ತಿಲ್ಲು ಮುಲ್ಲು, ಅಪೂರ್ವ ರಾಗಂಗಲ್, ಅವಲ್ ಅಪ್ಪಾದಿಥನ್, 16 ವಯತಿನಿಲೆ, ಐ ಮತ್ತು ನೈನೈತಾಲೆ ಇನಿಕ್ಕುಮ್ ಸೇರಿದಂತೆ ಸುಮಾರು 16 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು.

Actor Kamala Hasan

ಈ ಇಬ್ಬರು ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸೂಪರ್ ಸ್ಟಾರ್ ನಟರೆನಿಸಿಕೊಂಡಿದ್ದಾರೆ. ಹಿಂದಿ ಚಿತ್ರ ಗಿರಫ್ತಾರ್ (1985)ನಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ ಕೊನೆಯ ಚಿತ್ರವಾಗಿತ್ತು. ಇದರಲ್ಲಿ ಇಬ್ಬರೂ ಅಮಿತಾಭ್ ಬಚ್ಚನ್ ಜೊತೆ ಕಾಣಿಸಿಕೊಂಡರು. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

Actor Kamala Hasan

ನಟ ಕಮಲ್ ಹಾಸನ್ ಅವರ ನಟನೆಯ ‘ಇಂಡಿಯನ್ 2’ ಸಿನಿಮಾದ ಪ್ರಚಾರ ಕೆಲಸ ಪ್ರಾರಂಭವಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಆಗಿ ಬಹಳ ಸದ್ದು ಮಾಡಿತ್ತು. ಈ ಸಿನಿಮಾ ಬಗ್ಗೆ ಇತ್ತೀಚೆಗೆ, ಕಮಲ್ ಹಾಸನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರು ತಮ್ಮ ಹಾಗೂ ರಜನಿಕಾಂತ್ ಅವರ ನಡುವಿನ ಒಡನಾಟದ ಬಗ್ಗೆ ತಿಳಿಸಿದ್ದಾರೆ. ಹಾಗೂ ತಾವು ಒಟ್ಟಿಗೆ ಚಿತ್ರ ಮಾಡದಿರಲು ಕಾರಣವೇನು ಎಂಬುದಕ್ಕೆ ವಿವರಣೆ ನೀಡಿದ್ದಾರೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ನಂತರ ಅವರು ಮತ್ತು ರಜನಿಕಾಂತ್ ಇಬ್ಬರೂ ಚಲನಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದರು. ಆದರೆ ಅವರಿಬ್ಬರ ಮಾರ್ಗದರ್ಶಕರು ಪ್ರಸಿದ್ಧ ತಮಿಳು ಚಲನಚಿತ್ರ ನಿರ್ಮಾಪಕ ಕೆ. ಬಾಲಚಂದರ್ ಎಂಬುದು ಎಲ್ಲರಿಗೂ ತಿಳಿದಿದೆ ಎಂಬುದಾಗಿ ತಿಳಿಸಿದ್ದಾರೆ.

“ನಾವು ಆರಂಭದಲ್ಲಿ ಒಟ್ಟಿಗೆ ಅನೇಕ ಚಲನಚಿತ್ರಗಳನ್ನು ಮಾಡಿದ್ದೇವೆ. ನಂತರ ನಾವು ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದೇವೆ. ನಾವು ಇಬ್ಬರು ಕಾಂಪಿಟೇಟರ್‌ಗಳಲ್ಲ. ನಮಗೆ ಒಂದೇ ಮಾರ್ಗದರ್ಶಕರಿದ್ದರು. ನಮ್ಮ ನಡುವೆ ಯಾವುದೇ ಅಸೂಯೆ ಇಲ್ಲ ಮತ್ತು ನಮ್ಮ ದಾರಿ ಬೇರೆ ಬೇರೆ. ನಾವು ಎಂದಿಗೂ ಪರಸ್ಪರರ ಬಗ್ಗೆ ಕೀಳುಮಟ್ಟದ ಟೀಕೆಗಳನ್ನು ಮಾಡುವುದಿಲ್ಲ. ನಾವು ನಮ್ಮ 20ರ ಹರೆಯದಲ್ಲಿದ್ದಾಗಲೇ ಈ ಬಗ್ಗೆ ಪ್ರಾಮಿಸ್ ಮಾಡಿದ್ದೇವೆ. ಇಂಥದ್ದೇ ಎಂಬ ಕಾರಣವನ್ನು ಹೇಳಲು ಆಗುವುದಿಲ್ಲ. ಆದರೆ ನಾವು ಒಂದು ಹಂತಕ್ಕೆ ಬಂದ ಮೇಲೆ ನಮ್ಮ ನಮ್ಮ ಅಭಿರುಚಿಗಳು ಬೇರೆ ಬೇರೆಯಾದವು. ಹಾಗಾಗಿ ಒಟ್ಟಿಗೆ ಚಿತ್ರ ಮಾಡದಿರಲು ನಿರ್ಧರಿಸಿದೆವು” ಎಂಬುದಾಗಿ ಕಮಲ್‌ ಹಾಸನ್‌ ಅವರು ಹೇಳಿದ್ದಾರೆ.

ಅಲ್ಲದೇ ಕಮಲ್ ಹಾಸನ್ 1981ರಲ್ಲಿ ‘ಏಕ್ ದುಜೆ ಕೆ ಲಿಯೆ’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದು ಕೆ ಬಾಲಚಂದರ್ ನಿರ್ದೇಶನದ ಅವರ ತೆಲುಗು ಚಿತ್ರ ‘ಮರೋ ಚರಿತ್ರ’ದ ರಿಮೇಕ್ ಆಗಿದೆ. ಈ ವೇಳೆ ಕಮಲ್ ಹಾಸನ್ ತಮಗೆ ಹಿಂದಿ ಚಿತ್ರರಂಗದಲ್ಲಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ಪ್ರಸ್ತುತ, ಕಮಲ್ ಹಾಸನ್ ಅವರು ಕಲ್ಕಿ 2898ಎಡಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಕೇವಲ ಕೆಲವು ನಿಮಿಷಗಳ ಕಾಲ ಮಾತ್ರ ಪರದೆಯ ಮೇಲೆ ಕಾಣಿಸಿಕೊಳ್ಳುವಂತಹ ಚಿಕ್ಕ ಪಾತ್ರವನ್ನು ಮಾಡಿದ್ದಾರೆ. ಈ ಚಿತ್ರದ ಮುಂದಿನ ಭಾಗದಲ್ಲಿ ಈ ಪಾತ್ರ ಮಹತ್ವದ್ದಾಗಿದೆ ಎನ್ನಲಾಗಿದೆ.

Continue Reading
Advertisement
Dharamshala Tour
ಪ್ರವಾಸ10 mins ago

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

Vastu Tips
ಧಾರ್ಮಿಕ18 mins ago

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

Sour Curd
ಆರೋಗ್ಯ1 hour ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ1 hour ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್5 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ6 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ6 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ7 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ7 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ8 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌