Site icon Vistara News

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Rakshit Shetty Visited Koragajja Temple And Prayed

ಬೆಂಗಳೂರು: ರಕ್ಷಿತ್ ಶೆಟ್ಟಿ (Rakshit Shetty) ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ‘ರಿಚರ್ಡ್​ ಆ್ಯಂಟನಿ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಈಗ ಅವರು ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ರಕ್ಷಿತ್ ಭೇಟಿ ನೀಡಿದ್ದಾರೆ. ಉಡುಪಿಗೆ ಬಂದಾಗಲೆಲ್ಲ ರಕ್ಷಿತ್​ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಇದಕ್ಕೂ ಮುಂಚೆ ನಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಅವರು ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿ ಬಂದಿದ್ದರು. ಜತೆಗೆ ಇನ್‌ಸ್ಟಾದಲ್ಲಿ ಶ್ರೀರಾಮ ಮೂರ್ತಿಯ ದರ್ಶನ ಪಡೆದ ಬಗ್ಗೆ ಬರೆದುಕೊಂಡಿದ್ದರು. ಮಾತ್ರವಲ್ಲ ವಿಗ್ರಹ ಕೆತ್ತನೆ ಮಾಡಿದ ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಬಳಿ ಸಿಂಪಲ್ ಸ್ಟಾರ್ ವಿಶೇಷ ಮನವಿ ಮಾಡಿದ್ದರು.

ರಕ್ಷಿತ್‌ ಶೆಟ್ಟಿ ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದರು.

ಇದನ್ನೂ ಓದಿ: Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

Exit mobile version