Rakul Preet Singh | ಮಾಲ್ಡೀವ್ಸ್‌ ಪ್ರವಾಸದಲ್ಲಿ ರಾಕುಲ್‌ ಪ್ರೀತ್‌ ಸಿಂಗ್‌: ಹಾಟ್‌ ಫೋಟೊ ಹಂಚಿಕೊಂಡ ನಟಿ! - Vistara News

ಕಾಲಿವುಡ್

Rakul Preet Singh | ಮಾಲ್ಡೀವ್ಸ್‌ ಪ್ರವಾಸದಲ್ಲಿ ರಾಕುಲ್‌ ಪ್ರೀತ್‌ ಸಿಂಗ್‌: ಹಾಟ್‌ ಫೋಟೊ ಹಂಚಿಕೊಂಡ ನಟಿ!

ರಾಕುಲ್‌ ಪ್ರೀತ್‌ ಸಿಂಗ್‌ ಸೆಲೆಬ್ರಿಟಿಗಳ (Rakul Preet Singh ) ನೆಚ್ಚಿನ ತಾಣ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ನಟಿಯ ಹಾಟ್‌ ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Rakul Preet Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟಿ ರಾಕುಲ್‌ ಪ್ರೀತ್‌ ಸಿಂಗ್‌ (Rakul Preet Singh ) ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸೆಲೆಬ್ರಿಟಿಗಳ ನೆಚ್ಚಿನ ತಾಣ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಮಾಲ್ಡೀವ್ಸ್‌ ಪ್ರವಾಸದಲ್ಲಿ ರಾಕುಲ್‌ ಪ್ರೀತ್‌ ಸಿಂಗ್‌ ಎಂಜಾಯ್‌ ಮಾಡುತ್ತಿರುವ ಫೋಟೊಗಳನ್ನು ಇನ್‌ಸ್ಟಾ ಮೂಲಕ ಹಂಚಿಕೊಂಡಿದ್ದಾರೆ. ರಾಕುಲ್ ಇತ್ತೀಚಿಗಷ್ಟೆ ʻಥ್ಯಾಂಕ್‌ ಗಾಡ್‌ʼ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯ ಸೋಲು ಕಂಡಿದೆ. 

ಈ ಹಿಂದೆ ಅಷ್ಟೇ ನಟ ಹಾಗೂ ನಿರ್ಮಾಪಕ ಜಕ್ಕಿ ಬಗ್‌ನಾನಿಯೊಂದಿಗೆ ನಟಿ ರಾಕುಲ್‌ ಪ್ರೀತ್‌ ಸಿಂಗ್‌ ಡೇಟಿಂಗ್‌ ಮಾಡುತ್ತಿರುವುದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗಿತ್ತು. ಜೋಡಿ ಶೀಘ್ರದಲ್ಲಿಯೇ ಮದುವೆಯಾಗಲು ನಿರ್ಧಾರ ಮಾಡಿದ್ದಾರೆ ಎಂಬ ಅಧಿಕೃತ ಸುದ್ದಿ ಹೊರ ಬಂದಿತ್ತು. ರಾಕುಲ್‌ ಹಾಗೂ ಜಕ್ಕಿ ಶೀಘ್ರದಲ್ಲಿಯೇ ಮದುವೆಯಾಗಲಿದ್ದಾರಂತೆ. ಮದುವೆ ಡೇಟ್‌ ಮತ್ತು ಜಾಗವನ್ನು ಫಿಕ್ಸ್‌ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು.

ಇದನ್ನೂ ಓದಿ | Rakul Preet Singh | ಮದುವೆ ಆಗಲಿದ್ದಾರಂತೆ ನಟಿ ರಾಕುಲ್‌: ವೈರಲ್‌ ಆಯ್ತು ಅಣ್ಣನ ಪೋಸ್ಟ್‌!

Rakul Preet Singh
Rakul Preet Singh
Rakul Preet Singh
Rakul Preet Singh
Rakul Preet Singh
Rakul Preet Singh

ರಾಕುಲ್‌ ಮದುವೆ ದಿನದ ಬಗ್ಗೆ ಈಗಾಗಲೇ ಎಲ್ಲರೊಂದಿಗೆ ಹಂಚಿಕೊಂಡಿಡಿದ್ದಾರೆ ಎಂದು ರಾಕುಲ್‌ ಸಹೋದರ ಅಮನ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿರುವುದು ವರದಿಯಾಗಿತ್ತು. ಮದುವೆ ವಿಚಾರವನ್ನು ಜಕ್ಕಿ ಬಗ್‌ನಾನಿ ತಂದೆ ವಾಸು ಕೂಡ ಖಚಿತಪಡಿಸಿದ್ದು, ಮದುವೆ ತಯಾರಿ ನಡೆದಿದೆ ಎಂದಿದ್ದರು ಎಂದು ವರದಿ ಆಗಿತ್ತು.

ಇತ್ತೀಚಿಗಷ್ಟೆ ಅನನ್ಯಾ ಪಾಂಡೆ, ಮೌನಿ ರಾಯ್‌, ಜಾನ್ವಿ ಕಪೂರ್‌, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದರು. ಇದೀಗ ರಾಕುಲ್ ಸರದಿ ಎನ್ನುತ್ತಿದ್ದಾರೆ ನೆಟ್ಟಿಗರು.

ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ ರಾಕುಲ್‌!
ಕಟ್‌ಪುಟ್ಲಿʼಯಲ್ಲಿ ಕಾಣಿಸಿಕೊಂಡಿರುವ ರಾಕುಲ್, ಅನುಭೂತಿ ಕಶ್ಯಪ್ ಚೊಚ್ಚಲ ನಿರ್ದೇಶನದ ʻಡಾಕ್ಟರ್ ಜಿʼ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ಜತೆ ಶೀಘ್ರದಲ್ಲೇ ಕಾಣಿಸಿಕೊಳ್ಳಲಿದ್ದಾರೆ. ಕಮಲ್ ಹಾಸನ್ ನಟನೆಯ ʻಇಂಡಿಯನ್ 2 ʼಸೇರಿದಂತೆ, ʻಛತ್ರಿವಾಲಿʼ ಸಿನಿಮಾಗಳು ಬಿಡುಗಡೆಯಾಗಲು ಸಜ್ಜಾಗಿವೆ.

ಇದನ್ನೂ ಓದಿ | Hansika Motwani | ʻಬಿಂದಾಸ್‌ʼ ಹುಡುಗಿಗೆ ಕಲ್ಯಾಣವಂತೆ: ವರ ಯಾರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Karthi next film: ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

VISTARANEWS.COM


on

Karthi next film Suriya to produce Meiyazhagan
Koo

ಬೆಂಗಳೂರು: ಇಂದು ನಟ ಸೂರ್ಯ ಅವರ ಸಹೋದರ ಕಾರ್ತಿ ಜನುಮದಿನ. ನಟ ಸೂರ್ಯ ತನ್ನ ಸಹೋದರ, ನಟ ಕಾರ್ತಿ ಅವರಿಗೆ ಒಂದು ದಿನ ಮುಂಚಿತವಾಗಿ ವಿಶ್‌ ಮಾಡಿದ್ದಾರೆ. ಜತೆಗೆ ಕಾರ್ತಿ ಅವರ ಮುಂಬರುವ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಪ್ರೇಮ್ ಕುಮಾರ್ ನಿರ್ದೇಶಿಸಿರುವ ಮತ್ತು ಸೂರ್ಯ ಅವರೇ ಸ್ವತಃ ನಿರ್ಮಿಸಿದ, ʻಮೇಯಳಗನ್ʼ (Meiyazhagan ) ಸಿನಿಮಾದಲ್ಲಿ ಕಾರ್ತಿ (Karthi next film) ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿ ಮತ್ತು ಅರವಿಂದ್ ಸ್ವಾಮಿ (Arvind Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪೋಸ್ಟರ್ ಒಂದರಲ್ಲಿ ಅರವಿಂದ್ ಅವರು ಸೈಕಲ್ ಮೇಲೆ ಕುಳಿತಿದ್ದಾರೆ. ಹಿಂದೆ ಕಾರ್ತಿ ಕೂತ್ತಿದ್ದಾರೆ. ಸವಾರಿ ಮಾಡುವಾಗ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಾಣಬಹುದು. ಎರಡನೇ ಪೋಸ್ಟರ್‌ನಲ್ಲಿ, ಕಾರ್ತಿ ಅವರು ಎತ್ತಿನ ಎದುರು ನಿಂತಿದ್ದಾರೆ. ಅವರು ನಗುತ್ತಿದ್ದಾರೆ. ಇದು ಹಳ್ಳಿಯ ಕಥೆ ಇರಬಹುದು ಎನ್ನಲಾಗುತ್ತಿದೆ.

ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಕಂಗುವ ಸಿನಿಮಾ

ಸೂರ್ಯ ಸದ್ಯ ಕಂಗುವ ಸಿನಿಮಾದಲ್ಲಿ ನಟಿಸಲಿದ್ದಾರೆ, ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Rain News
ಕರ್ನಾಟಕ15 mins ago

Rain News: ಚಿತ್ತಾಪುರದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ; ಹೊತ್ತಿ ಉರಿದ ತೆಂಗಿನ ಮರ

Jos Butler
ಪ್ರಮುಖ ಸುದ್ದಿ16 mins ago

Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

Wagah Border
ದೇಶ35 mins ago

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Virat kohli
ಪ್ರಮುಖ ಸುದ್ದಿ44 mins ago

Virat kohli : ಬ್ರೇಕ್​ ತೆಗೆದುಕೊಂಡ ಕೊಹ್ಲಿ, ಅಭ್ಯಾಸ ಪಂದ್ಯಕ್ಕೆ ಅನುಮಾನ

FSSAI Warning
ಆರೋಗ್ಯ1 hour ago

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

fraud case
ಕರ್ನಾಟಕ1 hour ago

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ದಂಪತಿ ಪರಾರಿ!

Constables
ದೇಶ2 hours ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ2 hours ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ2 hours ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌