Ram Charan: ಮತ್ತೆ ಒಂದಾಯ್ತು 'ರಂಗಸ್ಥಳಂ' ಜೋಡಿ; ರಾಮ್ ಚರಣ್‌-ಸುಕುಮಾರ್ ಮತ್ತೊಂದು ಸಿನಿಮಾ - Vistara News

ಸಿನಿಮಾ

Ram Charan: ಮತ್ತೆ ಒಂದಾಯ್ತು ‘ರಂಗಸ್ಥಳಂ’ ಜೋಡಿ; ರಾಮ್ ಚರಣ್‌-ಸುಕುಮಾರ್ ಮತ್ತೊಂದು ಸಿನಿಮಾ

Ram Charan: ʼಮಗಧೀರʼ, ʼಆರ್‌.ಆರ್‌.ಆರ್‌.ʼ ಚಿತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದ ರಾಮ್‌ ಚರಣ್‌ ಮತ್ತು ಟಾಲಿವುಡ್‌ ಹಿಟ್‌ ಚಿತ್ರಗಳ ನಿರ್ದೇಶಕ ಸುಕುಮಾರ್ ʼರಂಗಸ್ಥಳಂʼ ಸಿನಿಮಾದ ಬಳಿಕ ಮತ್ತೆ ಒಂದಾಗುತ್ತಿದ್ದಾರೆ. ಈ ಹಿಟ್‌ ಜೋಡಿಯ ಕಾಂಬಿನೇಷನ್‌ ನಿರೀಕ್ಷೆ ಹುಟ್ಟು ಹಾಕಿದೆ.

VISTARANEWS.COM


on

ram charan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಗ್ಲೋಬಲ್ ಸ್ಟಾರ್ ರಾಮ್ ಚರಣ್ (Ram Charan) ಹೋಳಿ (Holi) ಹಬ್ಬದ ಸಂಭ್ರಮದಲ್ಲಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ʼಗೇಮ್ ಚೇಂಜರ್ʼ (Game Changer) ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜತೆ ಕೈ ಜೋಡಿಸಿದ್ದಾರೆ. ಆರ್‌ಸಿ 16 ಸಿನಿಮಾಗೆ ಬುಚ್ಚಿ ಬಾಬು ಆ್ಯಕ್ಷನ್‌ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್‌ಗೂ ಮೊದಲೇ ರಾಮ್‌ ಚರಣ್‌ ಅವರ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.

ಮೈತ್ರಿ ಮೂವಿ ಮೇಕರ್ಸ್, ರಾಮ್ ಚರಣ್ ಹಾಗೂ ʼಪುಷ್ಪʼ ನಿರ್ದೇಶಕ ಸುಕುಮಾರ್ ಮತ್ತೆ ಒಂದಾಗಿದ್ದಾರೆ. ʼರಂಗಸ್ಥಳಂʼ ಮೂಲಕ ಧಮಾಕ ಎಬ್ಬಿಸಿದ್ದ ಈ ತ್ರಿವಳಿ ಕಾಂಬೋದಲ್ಲಿ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ಬಣ್ಣದ ಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ಆರ್‌.ಆರ್‌.ಆರ್‌. ಸಿನಿಮಾದ ಭಾರೀ ಯಶಸ್ಸಿನ ಬಳಿಕ ಶಂಕರ್ ಸಾರಥ್ಯದ ʼಗೇಮ್ ಚೇಂಜರ್ʼ ಚಿತ್ರದಲ್ಲಿ ರಾಮ್ ನಟಿಸುತ್ತಿದ್ದಾರೆ. ಜತೆಗೆ ʼಉಪ್ಪೇನಾʼ ನಿರ್ದೇಶಕ ಬುಚ್ಚಿ ಬಾಬುಗೂ ಕಾಲ್ ಶೀಟ್ ಕೊಟ್ಟಿರುವ ಮೆಗಾ ಪ್ರಿನ್ಸ್ ಈಗ ಸುಕುಮಾರ್ ಹೊಸ ಕಥೆಯಲ್ಲಿ ಮಿಂಚಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಹಾಗೂ ಸುಕುಮಾರ್ ರೈಟಿಂಗ್ ಹಣ ಹೂಡುತ್ತಿರುವ ಈ ಸಿನಿಮಾಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಸೂಪರ್ ಹಿಟ್ ಆದ ʼರಂಗಸ್ಥಳಂʼ ಚಿತ್ರಕ್ಕೂ ಸಂಗೀತ ನೀಡಿದ್ದ ದೇವಿಶ್ರೀ ಪ್ರಸಾದ್ ಮತ್ತೆ ಸುಕುಮಾರ್ ಹಾಗೂ ರಾಮ್ ಸಿನಿಮಾ ಮೂಲಕ ಧಮಾಕ ಎಬ್ಬಿಸುವ ಸೂಚನೆ ನೀಡಿದ್ದಾರೆ. ಅಂದ ಹಾಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಮೂಡಿ ಬರಲಿದೆ. ರಾಮ್‌ ಚರಣ್‌ ಅವರ ಈ 17ನೇ ಚಿತ್ರ 2025ರಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ʼಗೇಮ್‌ ಚೇಂಜರ್‌ʼ

ಪಾಲಿಟಿಕಲ್‌ ಥ್ರಿಲ್ಲರ್‌ ʼಗೇಮ್‌ ಚೇಂಜರ್‌ʼ ಸಿನಿಮಾಕ್ಕೆ ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕ ಶಂಕರ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹುಟ್ಟು ಹಾಕಿದೆ. 2019ರಲ್ಲಿ ಬಿಡುಗಡೆಯಾದ ʼವಿನಯ ವಿಧೇಯ ರಾಮʼ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: Actor Ramcharan: ರಾಮ್ ಚರಣ್ ಮಗುವಿಗಾಗಿ ವಿಶೇಷ ಟ್ಯೂನ್ ಮಾಡಿದ ನಾಟು ನಾಟು ಖ್ಯಾತಿಯ ಕಾಲ ಭೈರವ!

ಈ ಪ್ರಾಜೆಕ್ಟ್ ಅನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಕಿರುತೆರೆ

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Kannada Serials TRP: ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.‘ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಲಕ್ಷ್ಮೀ ನಿವಾಸಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

VISTARANEWS.COM


on

Kannada Serials TRP Puttakkana makkalu TOP one
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ತಮ್ಮ ಜೀವಾ ಈಗಾಗಲೇ ಕೆಲಸ ಕಳೆದುಕೊಂಡಿರುವ ವಿಚಾರ ಗೌತಮ್‌ಗೆ ಗೊತ್ತಾಗಿದೆ. ಫುಡ್‌ ಡೆಲವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಐದನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ.

Continue Reading

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಬಾಲಿವುಡ್

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

Ananya Panday: ಅನನ್ಯಾ ಮತ್ತು ಆದಿತ್ಯ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022 ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

VISTARANEWS.COM


on

Ananya Panday Aditya Roy Kapur parties with Sara Ali Khan
Koo

ಬೆಂಗಳೂರು: ಅನನ್ಯಾ ಪಾಂಡೆ (Ananya Panday) ಮತ್ತು ಆದಿತ್ಯ ರಾಯ್ ಕಪೂರ್ (Aditya Roy Kapur ) ನಡುವೆ ಡೇಟಿಂಗ್ ವದಂತಿಗಳು ಹೊಸದೇನಲ್ಲ. ಆದರೆ ಹೊಸ ವರದಿಗಳ ಪ್ರಕಾರ ಈ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡರು. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವರದಿಯಾಗಿದೆ.

ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

ಅನನ್ಯಾ ಮತ್ತು ಆದಿತ್ಯ ಪ್ರೇಮ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ಕರಣ್ ಜೋಹರ್ ಅವರು ತಮ್ಮ ಟಾಕ್ ಶೋ ಸಂದರ್ಭದಲ್ಲಿಯೂ ಅನನ್ಯಾ ಈ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: Ananya Panday: ‘ಹಾವು’ ಜತೆಗಿದ್ದ ಫೋಟೊ ಡಿಲಿಟ್ ಮಾಡಿದ ನಟಿ ಅನನ್ಯಾ ಪಾಂಡೆ

ಸಾರಾ ಅಲಿ ಖಾನ್ ಮತ್ತು ಅನನ್ಯಾ ಪಾಂಡೆ (Ananya Panday) ‘ಕಾಫಿ ವಿತ್ ಕರಣ್’ ಸೀಸನ್‌ 8ರಲ್ಲಿ ಅತಿಥಿಗಳಾಗಿ ಆಗಮಿಸಿದ್ದರು. ಸಾರಾ ಅವರು ಶುಭಮನ್ ಗಿಲ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದರೆ, ಅನನ್ಯಾ ಅವರು ಆದಿತ್ಯ ರಾಯ್ ಕಪೂರ್ ಜತೆಗಿನ ಸಂಬಂಧವನ್ನು ಬಹುತೇಕ ದೃಢಪಡಿಸಿದ್ದರು. ನಿರ್ಮಾಪಕ ಮತ್ತು ನಿರೂಪಕ ಕರಣ್ ಜೋಹರ್ ಅನನ್ಯಾ ಅವರನ್ನು ʻಆದಿತ್ಯ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದೀರ? ಎಂದು ಪ್ರಶ್ನೆ ಕೇಳಿದ್ದರು. ಇದರಿಂದ ಬಚಾವ್‌ ಆಗಲು ಅನನ್ಯಾ ಹಲವಾರು ಪ್ರಯತ್ನಗಳನ್ನು ಮಾಡಿದದ್ದರು. ಆದರೆ ಕೊನೆಗೂ ಆಗಿರಲಿಲ್ಲ. ಆದಿತ್ಯ ಜತೆ ಇರುವುದು ನಿಮ್ಮ ಸ್ನೇಹಾನಾ ಅಥವಾ ಸ್ನೇಹಕ್ಕಿಂತ ಮುಂದುವರಿದ ಸಂಬಂಧನಾ?ಎಂದು ಪ್ರಶ್ನೆ ಇಟ್ಟರು ಕರಣ್‌. “ಸ್ನೇಹಿತರಲ್ಲ, ನಾವು ಸ್ನೇಹಿತರು” ಎಂದು ಅನನ್ಯಾ ಹೇಳಿದರು, ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಆದರೆ ಕರಣ್ ವ್ಯಂಗ್ಯವಾಡಿದರು,”ಬೆಸ್ಟ್ ಫ್ರೆಂಡ್ಸ್, ನಾವು ನಿಜವಾಗಿಯೂ ಒಳ್ಳೆಯ ಸ್ನೇಹಿತರು” ಎಂದಿದ್ದರು ಅನನ್ಯಾ.

Continue Reading
Advertisement
KL Rahul
ಕ್ರೀಡೆ14 mins ago

IPL 2024 : ಲಕ್ನೊ ತಂಡದ ನಾಯಕನ ಸ್ಥಾನದಿಂದ ರಾಹುಲ್ ಔಟ್​?

Prajwal Revanna Case DK Shivakumar alleged mastermind in 25000 pen drive allotment
ಹಾಸನ16 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

Maldives anti-India stance
ಪ್ರಮುಖ ಸುದ್ದಿ1 hour ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ1 hour ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ1 hour ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest2 hours ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar alleged mastermind in 25000 pen drive allotment
ಹಾಸನ16 mins ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ7 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಟ್ರೆಂಡಿಂಗ್‌