Site icon Vistara News

Ram Charan: ಅಯ್ಯಪ್ಪ ಮಾಲೆ ಧರಿಸಿ ಮುಂಬೈ ಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ಕೊಟ್ಟ ರಾಮ್‌ಚರಣ್‌!

Ram Charan Visit To Siddhivinayak temple Mumbai

ಬೆಂಗಳೂರು: ಗ್ಲೋಬಲ್ ಸ್ಟಾರ್ ರಾಮ್ ಚರಣ್ (Ram Charan) ಮುಂಬೈನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಪ್ಪು ಬಣ್ಣದ ಸಾಧಾರಣಾ ಕುರ್ತಾ ಶರ್ಟ್ ಧರಿಸಿ, ಬರಿಗಾಲಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ರಾಮ್ ಚರಣ್ ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿದ್ದರು. ಅದೇ ಕಾರಣಕ್ಕೆ ಕಪ್ಪು ಬಣ್ಣದ ಸರಳ ಉಡುಗೆ ಧರಿಸಿ, ನಿಯಮದಂತೆ ಚಪ್ಪಲಿ ತ್ಯಜಿಸಿ ಬರಿಗಾಲಲ್ಲಿ ಬಂದಿದ್ದರು. ಮುಂಬೈನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ಮಗಳು ಕ್ಲಿಂಕಾರ ಜನಿಸಿದ ಬಳಿಕ ಅಯ್ಯಪ್ಪಮಾಲೆ ಧರಿಸಿದ್ದ ರಾಮ್ ಚರಣ್‌ ಅ.3ರಂದು ದೀಕ್ಷೆಯನ್ನು ಮುಕ್ತಾಯಗೊಳಿಸಿದ್ದಾರೆ.

ತ್ರಿಬಲ್ ಆರ್ ಸೂಪರ್ ಡೂಪರ್ ಹಿಟ್ ಬಳಿಕ ರಾಮ್ ಚರಣ್ ಕೇವಲ ಒಂದೆರಡು ದಿನಗಳಿಗಾಗಿ ಮಾಲೆ ಧರಿಸಿರಲಿಲ್ಲ. ಬದಲಿಗೆ ಬರೋಬ್ಬರಿ 41 ದಿನಗಳ ಕಾಲ ಅವರು ಮಾಲಾಧಾರಿಯಾಗಿ ಅಯ್ಯಪ್ಪನ ಸ್ಮರಣೆ ಮಾಡಿದ್ದರು. ಮಾಲಾಧಾರಿ ಪಾಲಿಸಬೇಕಾದ ಕಠಿಣ ನಿಯಮಗಳು 41 ದಿನಗಳ ವರೆಗೆ ಪಾಲಿಸಿದ್ದರು. ಇದೀಗ ಮಗಳು ಹುಟ್ಟಿದ ಬಳಿಕ ಮಾಲೆ ಧರಿಸಿದ್ದ ರಾಮ್ ಚರಣ್ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನದ ಬಳಿಕ ಅಯ್ಯಪ್ಪ ದೀಕ್ಷೆಯನ್ನು ಮುಗಿಸಿದ್ದಾರೆ. ದೇಗುಲಕ್ಕೆ ನಟ ಭೇಟಿ ನೀಡಿದ ಸಂದರ್ಭದಲ್ಲಿ ಅಭಿಮಾನಿಗಳು ಫೋಟೊಗಾಗಿ ಮುಗಿಬಿದ್ದರು. ಸದ್ಯ ರಾಮ್ ಚರಣ್ ಶಂಕರ್ ನಿರ್ದೆಶನದ ಗೇಮ್ ಚೇಂಜರ್ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Ram Charan: ರಾಮ್‌ ಚರಣ್‌ ಜತೆ ರವೀನಾ ಟಂಡನ್ ಮಗಳು ರೊಮ್ಯಾನ್ಸ್‌!

ನಿರ್ದೇಶಕ ಶಂಕರ್‌ ಜತೆ ಸಿನಿಮಾ ಮಾಡುವಾಗಲೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಟ ರಾಮ್‌ ಚರಣ್‌ (Ramcharan). ಇದೇ ಮೊದಲ ಬಾರಿಗೆ ʻಉಪ್ಪೇನʼ ಸಿನಿಮಾ ಖ್ಯಾತಿಯ ನಿರ್ದೇಶಕ ಬುಚ್ಚಿ ಬಾಬು (Buchi Babu film)ಸನಾ ಜತೆ ಕೈ ಜೋಡಿಸಿದ್ದಾರೆ. ಈ ಯೋಜನೆಯನ್ನು ಬಹಳ ಹಿಂದೆಯೇ ಘೋಷಿಸಲಾಗಿತ್ತು. ಇದೀಗ ರಾಮ್‌ಚರಣ್‌ ಜತೆ ನಾಯಕಿಯಾಗಿ ಯಾರು ಮಿಂಚಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ. ವರದಿಗಳ ಪ್ರಕಾರ ಬಾಲಿವುಡ್‌ ಸ್ಟಾರ್‌ ಹೀರೋಯಿನ್‌ ರವೀನಾ ಟಂಡನ್ ಅವರ ಮಗಳು, ರಶಾ ಥಡಾನಿ (Rasha Thadani) ಜೋಡಿಯಾಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ಲಾನ್‌ನಲ್ಲಿ ನಿರ್ಮಾಪಕರು ಇದ್ದಾರೆ. ಈ ಸಿನಿಮಾ ಮೂಲಕ ಬುಚ್ಚಿ ಬಾಬು ರವೀನಾ ಟಂಡನ್ ಅವರನ್ನು ಟಾಲಿವುಡ್‌ಗೆ ಪರಿಚಯಿಯುಸುತ್ತಿದ್ದಾರೆ. ಚಿತ್ರತಂಡದಿಂದ ಯಾವುದೇ ಅಧಿಕೃತ ಅಪ್‌ಡೇಟ್ ಹೊರಬಿದ್ದಿಲ್ಲ. ಆದರೆ ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ಸಿನಿಮಾಸ್ ಸಹ ಚಲನಚಿತ್ರ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ರಾಮ್ ಚರಣ್ ಸದ್ಯ ಶಂಕರ್ ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ.ಉಪ್ಪೇನ’ ಚಿತ್ರದ ಮೂಲಕ ನಿರ್ದೇಶನಕ್ಕೆ ಇಳಿದ ಬುಚ್ಚಿ ಬಾಬು ಅವರು ಎನ್‌ಟಿಆರ್‌ ಅವರಿಗಾಗಿ ಈ ಸ್ಕ್ರಿಪ್ಟ್‌ ಮಾಡಲಾಗಿತ್ತು ಎನ್ನಲಾಗಿದೆ. ಇದೊಂದು ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಎನ್ನಲಾಗುತ್ತಿದೆ. ಚಿತ್ರದ ಶೀರ್ಷಿಕೆ ಹಾಗೂ ಇನ್ನಷ್ಟು ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ ಚಿತ್ರತಂಡ.

Exit mobile version