Ram Mandir: `ರಾಮ ಮಂಗಳಂ' ಭಕ್ತಿಗೀತೆ ರಿಲೀಸ್ ಮಾಡಿದ ಹೊಂಬಾಳೆ ಫಿಲ್ಮ್ಸ್‌! - Vistara News

ರಾಮ ಮಂದಿರ

Ram Mandir: `ರಾಮ ಮಂಗಳಂ’ ಭಕ್ತಿಗೀತೆ ರಿಲೀಸ್ ಮಾಡಿದ ಹೊಂಬಾಳೆ ಫಿಲ್ಮ್ಸ್‌!

Ram Mandir: ರಾಮಮಂದಿರ ಲೋಕಾರ್ಪಣೆ ಸುದಿನವನ್ನು ಒಂದು ದೇಶ, ಒಂದು ಸಂಸ್ಕೃತಿ ಎನ್ನುವ ರೀತಿಯಲ್ಲಿ ರಾಮಮಂಗಳಂ ಗೀತೆ ಸಂಯೋಜಿಸಲಾಗಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಹೊಂಬಾಳೆ ಫಿಲ್ಮ್ಸ್ ವತಿಯಿಂದ ರಾಮಮಂಗಳಂ ಗೀತೆ ಸಂಯೋಜಿಸಿ, ಅಯೋಧ್ಯೆ ರಾಮನಿಗೆ ಸಮರ್ಪಿಸಿದ್ದಾರೆ.

VISTARANEWS.COM


on

Ram Mandir Ramachandraya Mangalam song released by hombale Films
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಸೂಪರ್ ಹಿಟ್ಸ್ ಸಿನಿಮಾಗಳ ಮೇಕರ್ ವಿಜಯ್ ಕಿರಗಂದೂರು ಮಾಲೀಕತ್ವದ ಹೊಂಬಾಳೆ ಫಿಲ್ಮ್ಸ್ ಅಯೋಧ್ಯೆ ರಾಮನಿಗಾಗಿ “ರಾಮ ಮಂಗಳಂ” (Ram Mandir) ಗಾಯನ ಗುಚ್ಚ ಅರ್ಪಣೆ ಮಾಡಿದೆ. 17ನೇ ಶತಮಾನದ ರಾಮಭಕ್ತ, ಪುರಾಣ ಪ್ರಸಿದ್ಧ ಗಾಯಕ ಶ್ರೀ ಭದ್ರಾಚಲ ರಾಮದಾಸು ರಚಿಸಿದ್ದ `ರಾಮಮಂಗಳಂ’ ಗೀತೆಗೆ ಗಾಯನ ಸ್ವರೂಪ ಕೊಟ್ಟಿದ್ದಾರೆ.

ರಾಮಮಂದಿರ ಲೋಕಾರ್ಪಣೆ ಸುದಿನವನ್ನು ಒಂದು ದೇಶ, ಒಂದು ಸಂಸ್ಕೃತಿ ಎನ್ನುವ ರೀತಿಯಲ್ಲಿ ರಾಮಮಂಗಳಂ ಗೀತೆ ಸಂಯೋಜಿಸಲಾಗಿದೆ. ಕರ್ನಾಟಕದ ಕಲಾಶ್ರೀ ಖ್ಯಾತಿಯ ಪಂಡಿತ್ ಪ್ರವೀಣ್ ಡಿ ರಾವ್ ಸಾರಥ್ಯದಲ್ಲಿ ವಿ.ಎಸ್.ಶೃತಿ, ಅರುಂಧತಿ ವಶಿಷ್ಠಾ, ಪೂಜಾರಾವ್, ಚಿನ್ಮಯಿ ಚಂದ್ರಶೇಖರ್, ನಿಖಿಲ್ ಪಾರ್ಥಸಾರಥಿ, ಸಾಥ್ವಿಕ್ ಚಕ್ರವರ್ತಿ, ಹೆಚ್.ಸಿ.ಭಾರ್ಗವ್, ಮಧ್ವೇಶ್ ಭಾರದ್ವಾಜ್, ಎಂ.ಆರ್.ಅಭಿಷೇಕ್ ಸೇರಿರುವ ಗಾಯಕರ ತಂಡ ರಾಮಮಂಗಳ ಗೀತೆಗೆ ಧ್ವನಿಯಾಗಿದ್ದಾರೆ.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಹೊಂಬಾಳೆ ಫಿಲ್ಮ್ಸ್ ವತಿಯಿಂದ ರಾಮಮಂಗಳಂ ಗೀತೆ ಸಂಯೋಜಿಸಿ, ಅಯೋಧ್ಯೆ ರಾಮನಿಗೆ ಸಮರ್ಪಿಸಿದ್ದಾರೆ.

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಸೋಮವಾರ (ಜನವರಿ 22) ಪ್ರಾಣಪ್ರತಿಷ್ಠೆ ನೆರವೇರಿಸಲಾಗುತ್ತದೆ. ರಾಮಮಂದಿರದ (Ram Mandir) 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.

ಇದನ್ನೂ ಓದಿ: Ram Mandir: ರಾಮನ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿ; ಆರ್.‌ ಅಶೋಕ್‌, ಎಚ್‌ಡಿಕೆ ಆಗ್ರಹ

ಪ್ರಾಣ ಪ್ರತಿಷ್ಠಾ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಮ ಮಂದಿರ

Ayodhya Ram Mandir: ರಾಮಮಂದಿರಕ್ಕೆ ಬರುವ ಚಿನ್ನ, ಬೆಳ್ಳಿ ಆಭರಣಗಳ ಕಾವಲಿಗೆ ಇಬ್ಬರು ಆರ್​​ಎಸ್​ಎಸ್​​ ಕಾರ್ಯಕರ್ತರ ನೇಮಕ

ಅಯೋಧ್ಯೆ ರಾಮ ಮಂದಿರದ (Ayodhya Ram Mandir) ರಾಮಲಲ್ಲಾನಿಗೆ ಪ್ರತಿದಿನ ಲಕ್ಷಾಂತರ ರೂಪಾಯಿ ನಗದು ಸೇರಿದಂತೆ ಚಿನ್ನ, ಬೆಳ್ಳಿ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳೂ ಬರುತ್ತಿದೆ. ಇದನ್ನು ನಿರ್ವಹಿಸಲು ಮತ್ತು ದಾಖಲಿಸಲು ದೇವಸ್ಥಾನದ ಟ್ರಸ್ಟ್‌ನಿಂದ ಇಬ್ಬರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.

VISTARANEWS.COM


on

By

Ayodhya Ram Mandir
Koo

ಉತ್ತರಪ್ರದೇಶ: ಅಯೋಧ್ಯೆಯ ರಾಮಮಂದಿರದ (Ayodhya Ram Mandir) ರಾಮಲಲ್ಲಾನ (ramlalla) ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಅಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗೆ ಭೇಟಿ ನೀಡುವ ಭಕ್ತರು ಭಾರಿ ಪ್ರಮಾಣದ ಕಾಣಿಕೆ ಅರ್ಪಿಸುತ್ತಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳನ್ನೂ ಸಲ್ಲಿಸುತ್ತಾರೆ. ಪ್ರತಿದಿನ ಲಕ್ಷಾಂತರ ರೂಪಾಯಿ ಹುಂಡಿಗೆ ಬೀಳುವುದು ಸೇರಿದಂತೆ ಬೆಲೆಬಾಳುವ ಆಭರಣಗಳನ್ನು ಅರ್ಪಿಸುತ್ತಿದ್ದಾರೆ. ಹೀಗಾಗಿ ಇವುಗಳ ನಿರ್ವಹಣೆಗೆಂದು ದೇವಸ್ಥಾನದ ಟ್ರಸ್ಟ್‌ ಇಬ್ಬರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು (RSS workers) ನೇಮಕ ಮಾಡಿದೆ.

ಈ ಆರೆಸ್ಸೆಸ್ ಕಾರ್ಯಕರ್ತರು ಆಭರಣಗಳನ್ನು ದಾನ ಮಾಡುವ ಪ್ರತಿಯೊಬ್ಬ ಭಕ್ತನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಲಾಗುತ್ತಿದೆ. ಮಾಹಿತಿ ದಾಖಲು ಮಾಡಲು ವಿವಿಧ ಪಾಳಿಗಳಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಾರೆ. ಪ್ರತಿ ದಿನದ ಸಂಜೆ ಕಾಣಿಕೆ ರೂಪದಲ್ಲಿ ಬಂದಿರುವ ಆಭರಣಗಳನ್ನು ದಾಖಲಿಸಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಲಾಕರ್‌ನಲ್ಲಿ ಠೇವಣಿ ಇಡಲಾಗುತ್ತಿದೆ. ಕೆಲವು ಭಕ್ತರು ದೇಣಿಗೆ ಕೌಂಟರ್​ಗೆ ಹೋಗುವ ಬದಲು ಅಲ್ಲಿನ ಸಿಬ್ಬಂದಿ ಮೂಲಕ ಹಣ ನೀಡಲಾಗುತ್ತಿದೆ. ಈ ವಹಿವಾಟುಗಳನ್ನೂ ಎಚ್ಚರಿಕೆಯಿಂದ ದಾಖಲು ಮಾಡಲು ಟ್ರಸ್ಟ್​ ಮುಂದಾಗಿದೆ. ಈ ಎಲ್ಲ ವಹಿವಾಟುಗಳ ಬಗ್ಗೆ ನಿಗಾ ಇಡಲು ಆರ್​ಎಸ್​ಎಸ್​ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.

ಬಾಲ ರಾಮನಿಗೆ ಅಲಂಕಾರ ಮಾಡುವ ಆಭರಣಗಳನ್ನು ರಕ್ಷಿಸಲು ನಿವೃತ್ತ ಸೇನಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ರಾಮಲಲ್ಲಾನನ್ನು ಅಲಂಕರಿಸುವಾಗ ಮತ್ತು ಅದನ್ನು ತೆಗೆಯುವ ವೇಳೆ ಪುರೋಹಿತರು ನಿವೃತ್ತ ಸೈನಿಕರ ಮೇಲ್ವಿಚಾರಣೆಯಲ್ಲಿ ಲಾಕರ್‌ನಿಂದ ಆಭರಣಗಳನ್ನು ಪಡೆದು ವಾಪಸ್​ ಕೊಡುತ್ತಾರೆ. ಎಲ್ಲ ಆಭರಣವನ್ನು ತೆಗೆಯುವಾಗ ಮತ್ತು ಹಾಕುವಾಗ ಲೆಕ್ಕ ಹಾಕಲಾಗುತ್ತದೆ.

Ayodhya Ram Mandir
Ayodhya Ram Mandir


ಎಂಟು ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುವ ಇಬ್ಬರು ಬಂದೂಕು ಹೊಂದಿರುವ ಆರು ಅಂಗರಕ್ಷಕರನ್ನು ಬಾಲರಾಮನ ವಿಗ್ರಹಕ್ಕೆ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿದ ಮೂವರು ಸೇರಿದಂತೆ 20 ನಿವೃತ್ತ ಸೇನಾ ಸಿಬ್ಬಂದಿಯನ್ನು ರಾಮ ಮಂದಿರದಲ್ಲಿ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಧಾರ್ಮಿಕ ಗುರುಗಳು ಗರ್ಭಗುಡಿಯ ಹೊರಗೆ ನಿಂತು ಪೂಜೆಗೆ ಸಹಾಯ ಮಾಡುತ್ತಾರೆ. ಉಳಿದ ಸಿಬ್ಬಂದಿ ಭಕ್ತರ ಹರಿವನ್ನು ನಿಯೋಜಿಸುತ್ತಿದ್ದಾರೆ.

ಆರತಿ ಮತ್ತು ಇತರ ಪೂಜೆಗಳ ಸಮಯದಲ್ಲಿ ಗಂಟೆಗಳನ್ನು ಬಾರಿಸಲು ಮತ್ತು ಉಳಿದ ವ್ಯವಸ್ಥೆಗಳನ್ನು ನಿರ್ವಹಿಸಲು ಅವರು ಸಹಾಯ ಮಾಡುತ್ತಾರೆ. 17 ನಿವೃತ್ತ ಸೈನಿಕರು ಸಾಮಾನ್ಯ ಉಡುಪುಗಳನ್ನು ಧರಿಸಿ ದೇಗುಲದ ಆವರಣದ ಮೇಲ್ವಿಚಾರಣೆ ಮಾಡುತ್ತಾರೆ.

ಈ ನಡುವೆ ಶ್ರೀ ರಾಮ ಜನ್ಮಭೂಮಿ ಆವರಣದ ಶೇಷಾವತಾರ ದೇವಾಲಯದ ನಿರ್ಮಾಣ ಪ್ರಾರಂಭವಾಗಿದೆ. ರಾಮಮಂದಿರ ಮತ್ತು ಕುಬೇರ ದಿಬ್ಬದ ನಡುವೆ ಈ ಹೊಸ ದೇವಾಲಯ ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

ದಕ್ಷಿಣ ಭಾರತದ ಸಂತರ ಸಲಹೆ ಪಡೆದು ಶೇಷಾವತಾರ್ ದೇವಾಲಯದ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಅದರ ಎತ್ತರವು ರಾಮ ಮಂದಿರದಕ್ಕೆ ಸಮಾನವಾಗಿದೆ. ಈ ದೇವಾಲಯವು ಶ್ರೀ ಸೀತಾರಾಮನ ವಿಗ್ರಹ ಹೊಂದಿರುತ್ತದೆ. ಇದನ್ನು ಶೇಷನಾಗ ರಕ್ಷಿಸುತ್ತಾನೆ. ಇನ್ನು ಸಪ್ತ ಮಂಟಪದ ಅಡಿಪಾಯದ ಕೆಲಸವು ಬಹುತೇಕ ಪೂರ್ಣಗೊಂಡಿದೆ. ಅಡಿಪಾಯ ಮತ್ತು ಗೋಡೆಗೆ ಕಲ್ಲುಗಳ ಕಟ್ಟುವ ಕಾರ್ಯ ನಡೆಸಲಾಗುತ್ತಿದೆ.

Continue Reading

ಪ್ರಮುಖ ಸುದ್ದಿ

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Ayodhya Ram Mandir : ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ವಿಶ್ವ ಪ್ರಸಿದ್ಧ ರಾಮ ಮಂದಿರುವ ಇರುವ ಅಯೋಧ್ಯೆಯಲ್ಲಿ 650 ಕೋಟಿ ರೂ.ಗಳ ವೆಚ್ಚದಲ್ಲಿ ‘ದೇವಾಲಯಗಳ ವಸ್ತುಸಂಗ್ರಹಾಲಯ’ ನಿರ್ಮಿಸುವ ಟಾಟಾ ಸನ್ಸ್​ ಸಂಸ್ಥೆಯ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ನಿರ್ಧಾರದ ಬಗ್ಗೆ ವಿವರಗಳನ್ನು ಹಂಚಿಕೊಂಡ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್, ಪ್ರವಾಸೋದ್ಯಮ ಇಲಾಖೆಯು ಅಂತರರಾಷ್ಟ್ರೀಯ ಮಟ್ಟದ ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಬಳಸುವ ಭೂಮಿಯನ್ನು 90 ವರ್ಷಗಳ ಗುತ್ತಿಗೆಗೆ 1 ರೂಪಾಯಿ ಮೊತ್ತಕ್ಕೆ ನೀಡಲಿದೆ ಎಂದು ಹೇಳಿದರು.

ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ. ದೇವಾಲಯದ ಪಟ್ಟಣದಲ್ಲಿ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ಹೆಚ್ಚುವರಿ 100 ಕೋಟಿ ರೂ.ಗಳ ಕಂಪನಿಯ ಪ್ರಸ್ತಾಪವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಅವರು ಹೇಳಿದರು.

ಟಾಟಾ ಸನ್ಸ್ ಪ್ರಮುಖ ಹೂಡಿಕೆ ಹೋಲ್ಡಿಂಗ್ ಕಂಪನಿ

ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಹೆಲಿಪ್ಯಾಡ್​ಗಳನ್ನು ನಿರ್ಮಿಸುವ ಮೂಲಕ ಲಕ್ನೋ, ಪ್ರಯಾಗ್ರಾಜ್ ಮತ್ತು ಕಪಿಲವಾಸ್ತುಗಳಲ್ಲಿ ಹೆಲಿಕಾಪ್ಟರ್ ಸೇವೆಗಳನ್ನು ಪ್ರಾರಂಭಿಸುವುದು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆದ ಇತರ ಪ್ರಸ್ತಾಪಗಳಾಗಿವೆ.

ಇದನ್ನೂ ಓದಿ:Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

ಸುಪ್ತ ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪಕ್ಕೂ ಸಂಪುಟ ಅನುಮೋದನೆ ಪಡೆದಿದೆ ಎಂದು ಸಚಿವರು ಹೇಳಿದರು.

ಲಕ್ನೋದ ಕೋಥಿ ರೋಶನ್ ದುಲ್ಹಾ, ಮಥುರಾದ ಬರ್ಸಾನಾ ಜಲ್ ಮಹಲ್ ಮತ್ತು ಕಾನ್ಪುರದ ಶುಕ್ಲಾ ತಲಾಬ್ (ಕೊಳ) ಈ ಮೂರು ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ ಎಂದು ಸಿಂಗ್​ ಹೇಳಿದ್ದಾರೆ. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಪ್ರವಾಸೋದ್ಯಮ ಫೆಲೋಶಿಪ್ ಕಾರ್ಯಕ್ರಮದಡಿ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Ayodhya Ram Mandir : ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

VISTARANEWS.COM


on

Ayodhya Ram Mandir:
Koo

ನವದೆಹಲಿ: ದೇವಾಲಯದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಮಿಶ್ರಾ ಹೇಳಿದ್ದಾರೆ.

ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯವಿದೆ ಎಂದು ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಕಳೆದ ಶನಿವಾರ ಆರೋಪಿಸಿದ್ದರು. ಮಧ್ಯರಾತ್ರಿಯ ಮಳೆಯ ನಂತರ ದೇವಾಲಯದ ಆವರಣದಲ್ಲಿ ತುಂಬಿದ್ದ ಮಳೆನೀರನ್ನು ಹೊರಹಾಕಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಸೋಮವಾರ ಆರೋಪಿಸಿದ್ದರು. ಸಮಸ್ಯೆ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಾಲಯದ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಘಟನೆಯ ಬಗ್ಗೆ ಗಮನ ಹರಿಸುವಂತೆ ಮತ್ತು ಸೋರಿಕೆಯನ್ನು ತಡೆಯಲು ಮತ್ತು ದೇವಾಲಯದಿಂದ ನೀರಿನ ಹೊರಹರಿವನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ದಾಸ್ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಧ್ಯರಾತ್ರಿ ಸುರಿದ ಮಳೆ

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಚಾವಣಿಯಿಂದ ಭಾರಿ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ರಾಮ್ ಲಲ್ಲಾ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದ ಚಾವಣಿಯಿಂದ ಮಳೆನೀರು ನೇರವಾಗಿ ಸೋರಿಕೆಯಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ದೇಶಾದ್ಯಂತದ ಎಂಜಿನಿಯರ್​ಗಳು ರಾಮ ಮಂದಿರವನ್ನು ನಿರ್ಮಿಸುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ದೇವಾಲಯವನ್ನು ಜನವರಿ 22 ರಂದು ಉದ್ಘಾಟಿಸಲಾಗಿದೆ. ಆದರೆ, ಮಳೆ ಬಂದರೆ ಚಾವಣಿ ಸೋರುತ್ತದೆ ಎಂದು ಯಾರಿಗೂ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದರು. ದೊಡ್ಡ ಎಂಜಿನಿಯರ್​ಗಳ ಸಮ್ಮುಖದಲ್ಲಿಯೇ ಇಂತಹ ಘಟನೆ ನಡೆಯುತ್ತಿದೆ, ಇದು ತುಂಬಾ ತಪ್ಪು ಎಂದು ಅವರು ಹೇಳಿದರು.

ಚಾವಣಿಯ ಮೇಲೆ ತಾತ್ಕಾಲಿಕ ಸೂರು ನಿರ್ಮಾಣ ಮಾಡುವ ಮೂಲಕ ಭಕ್ತರಿಗೆ ಮಳೆ ನೀರು ಮತ್ತು ಸೂರ್ಯನ ಬಿಸಿಲಿನಿಂದ ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ದೇವಾಲಯದ ನಿರ್ಮಾಣದ ಪ್ರಗತಿಯ ಬಗ್ಗೆ ಮಾತನಾಡಿದ ಮಿಶ್ರಾ, ಮೊದಲ ಮಹಡಿಯಲ್ಲಿ ಕೆಲಸ ನಡೆಯುತ್ತಿದೆ. ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ ವೇಳೆಗೆ ದೇವಾಲಯದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

Continue Reading

ದೇಶ

Ram Mandir: ಸೋರುತಿಹುದು ಅಯೋಧ್ಯೆ ರಾಮಮಂದಿರ ಮಾಳಿಗೆ; ದೇಗುಲದ ಮುಖ್ಯ ಅರ್ಚಕರ ಆತಂಕ

Ram Mandir: ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ ಎಂಬುದಾಗಿ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಮಾಹಿತಿ ನೀಡಿದ್ದಾರೆ. ಸೋರುತ್ತಿರುವ ಕುರಿತು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷರೂ ತಿಳಿಸಿದ್ದಾರೆ.

VISTARANEWS.COM


on

Ram Mandir
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾದ ಭವ್ಯ ರಾಮಮಂದಿರಕ್ಕೆ (Ram Mandir) ಚಾಲನೆ ನೀಡಿ ಆರು ತಿಂಗಳಾಗಿದೆ. 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ರಾಮಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈಗಲೂ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ, ಮಳೆ ಬಂದಾಗ ರಾಮಮಂದಿರದ ಚಾವಣಿ ಸೋರುತ್ತಿದೆ ಎಂಬುದಾಗಿ ದೇವಾಲಯದ ಮುಖ್ಯ ಅರ್ಚಕರೇ ಮಾಹಿತಿ ನೀಡಿದ್ದಾರೆ.

ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದಾರೆ. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ. ರಾಮಮಂದಿರಕ್ಕೆ ಬರುವ ಭಕ್ತರಿಗೂ ಇದರಿಂದ ಮುಜುಗರ ಆಗುತ್ತದೆ. ಕೂಡಲೇ ಚಾವಣಿಯನ್ನು ದುರಸ್ತಿ ಮಾಡಬೇಕು. ಇದರ ಕುರಿತು ಇನ್ನಷ್ಟು ಗಮನ ಹರಿಸಬೇಕು” ಎಂಬುದಾಗಿ ಸತ್ಯೇಂದ್ರ ದಾಸ್‌ ಅವರು ಒತ್ತಾಯಿಸಿದ್ದಾರೆ.

ಶ್ರೀ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಕೂಡ ನೀರು ಒಳಗೆ ಬರುತ್ತಿರುವುದನ್ನು ದೃಢಪಡಿಸಿದ್ದಾರೆ. “ನಾನು ಅಯೋಧ್ಯೆಯಲ್ಲಿ ಇದ್ದೇನೆ. ಮೊದಲ ಮಹಡಿಯಿಂದ ಮಳೆ ನೀರು ಸೋರಿಕೆಯಾಗುತ್ತಿರುವುದನ್ನುನೋಡಿದ್ದೇನೆ. ಎರಡನೇ ಮಹಡಿಯ ಗುರು ಮಂಟಪ ತೆಗೆದ ಕಾರಣ ನೀರು ಒಳಗೆ ಬರುತ್ತಿದೆ ಎಂದು ಎನಿಸುತ್ತಿದೆ. ಎರಡನೇ ಮಹಡಿಯನ್ನು ಸಂಪೂರ್ಣವಾಗಿ ನಿರ್ಮಿಸಿದ ಬಳಿಕ ಸಮಸ್ಯೆ ಬಗೆಹರಿಯುತ್ತದೆ ಎಂದು ಅನಿಸುತ್ತಿದೆ. ಇದರ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಪರಿಣತ ಎಂಜಿನಿಯರ್‌ಗಳು, ತಜ್ಞರು ಸೇರಿ ರಾಮಮಂದಿರವನ್ನು ನಿರ್ಮಿಸಿದ್ದಾರೆ. ತೀವ್ರ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದರೂ ಮಂದಿರಕ್ಕೆ ಧಕ್ಕೆಯಾಗದ ಹಾಗೆ ನಿರ್ಮಿಸಲಾಗಿದೆ. ಹೀಗಿದ್ದರೂ ರಾಮಮಂದಿರವು ಮೊದಲ ಮಳೆಗೇ ಸೋರಿಕೆಯಾಗಿರುವುದು ಅರ್ಚಕರ ಆತಂಕಕ್ಕೆ ಕಾರಣವಾಗಿದೆ. ಅವ್ಯವಸ್ಥೆ ಕುರಿತು ರಾಮನ ಭಕ್ತರು ಕೂಡ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Continue Reading
Advertisement
Dina bhavishya
ಭವಿಷ್ಯ5 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ19 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು22 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ22 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌