Site icon Vistara News

Sukri Bommagowda: ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಜತೆ ಸಸಿ ನೆಟ್ಟು ಜನುಮದಿನ ಆಚರಿಸಿಕೊಂಡ ‘ರಾಮಾ ರಾಮಾ ರೇ’ ಖ್ಯಾತಿಯ ನಟರಾಜ್

rama rama re fame Nataraj planted saplings with National Award winner Sukri Bommagowda.

ಬೆಂಗಳೂರು: ‘ರಾಮಾ ರಾಮಾ ರೇ’, ‘ಮ್ಯಾನ್ ಆಫ್ ದಿ ಮ್ಯಾಚ್’ ಹಾಗೂ ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರಗಳ ಅಭಿನಯದ ಮೂಲಕ ಅಪಾರ ಮೆಚ್ಚುಗೆ ಗಳಿಸಿಕೊಂಡಿರುವ ಕಲಾವಿದ ನಟರಾಜ್ ಮತ್ತೆ ಸುದ್ದಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ ಭರವಸೆಯ ಕಲಾವಿದರೆಸಿಕೊಂಡಿರುವ ನಟರಾಜ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ಈ ವಿಶೇಷ ದಿನವನ್ನು ಅವರು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ, ವೃಕ್ಷಮಾತೆ ತುಳಸಿ ಗೌಡ (Tulasi Gowda) ಜತೆ ಕೆಲ ಕಾಲ ಸಮಯ ಕಳೆದಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿರುವ ಅವರೊಂದಿಗೆ ಗಿಡ ನೆಟ್ಟು ಸಂಭ್ರಮಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಗೋಕರ್ಣದ ಅಂಕೋಲಕ್ಕೆ ಪ್ರವಾಸ ಕೈಗೊಂಡಿದ್ದ ಅವರು, ಇದೇ ವೇಳೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ(Sukri Bommagowda) ಅವರೊಂದಿಗೂ ಕೆಲಕಾಲ ಸಮಯ ಕಳೆದಿದ್ದಾರೆ. ಈ ಮೂಲಕ ತಮ್ಮ ಬರ್ತ್‌ಡೇಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: Ram Charan: ರಾಮ್ ಚರಣ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮಗಧೀರ ಸಿನಿಮಾ ರಿ-ರಿಲೀಸ್‌!

ಬಳಿಕ ಅಲ್ಲಿಯೇ ಇದ್ದ ಹೊನ್ನಳ್ಳಿ ಶಾಲೆಯ ಮಕ್ಕಳ ಜತೆಯಲ್ಲಿ ಕಾಲ ಕಳೆದು ಮೂರು ದಿನಗಳ ಕಾಲ ಉತ್ತಮ ಕೆಲಸಗಳನ್ನು ಮಾಡುತ್ತ, ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ನಟರಾಜ್ ಮಾದರಿಯಾಗಿದ್ದಾರೆ.

Exit mobile version