Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ 'ರಾಮನ ಅವತಾರ' ಸಿನಿಮಾ ಟಿಕೆಟ್ - Vistara News

ಸಿನಿಮಾ

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Ramana Avatara Movie: ಸ್ಯಾಂಡಲ್‌ವುಡ್‌ನ ಭರವಸೆಯ ನಾಯಕ ರಿಷಿ ಮತ್ತು ಬಹುಭಾಷಾ ನಡಿ ಪ್ರಣೀತಾ ಸುಭಾಷ್‌ ಮೊದಲ ಬಾರಿ ತೆರೆ ಹಂಚಿಕೊಳ್ಳುತ್ತಿರುವ ಚಿತ್ರ ʼರಾಮನ ಅವತಾರʼ. ಈಗಾಗಲೇ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿದೆ. ಮೇ 10ರಂದು ಸಿನಿಮಾ ತೆರೆ ಕಾಣಲಿದೆ. ಇದೀ ಚಿತ್ರತಂಡ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

VISTARANEWS.COM


on

Ramana Avatara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಕವಲುದಾರಿ’ಯಂತಹ ಗಂಭೀರ ಸಿನಿಮಾ, ‘ನೋಡಿ ಸ್ವಾಮಿ ಇವನು ಇರೋದು ಹೀಗೆ’, ‘ಆಪರೇಷನ್ ಅಲಮೇಲಮ್ಮ’ ದಂತಹ ಕಾಮಿಡಿ ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿರುವ ನಟ ರಿಷಿ (Rishi) ಇದೀಗ ‘ರಾಮನ ಅವತಾರ’ (Ramana Avatara Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ವಿಭಿನ್ನ ಪ್ರಮೋಷನ್ ವಿಡಿಯೊ ಮೂಲಕ ʼರಾಮನ ಅವತಾರʼ ಬಳಗವೀಗ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗ ಚಿತ್ರತಂಡದ ಕಡೆಯಿಂದ ಮೆಗಾ ಆಫರ್‌ ಸಿಕ್ಕಿದೆ. ʼರಾಮನ ಅವತಾರʼ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

ಮೇ 9ಕ್ಕೆ ಪ್ರೀಮಿಯರ; ಮೇ 10ಕ್ಕೆ ಚಿತ್ರ ರಿಲೀಸ್

ʼರಾಮನ ಅವತಾರʼ ಚಿತ್ರ ಮೇ 10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೇ 10ಕ್ಕೂ ಮುನ್ನ ಒಂದು ದಿನ ಮೊದಲು ಅಂದರೆ ಮೇ 9ರಂದು ಪೇಯ್ಡ್ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ ದರ ಕೂಡ 99 ರೂ. ನಿಗದಿ ಮಾಡಲಾಗಿದೆ. ಜತೆಗೆ ಚಿತ್ರ ಬಿಡುಗಡೆ ದಿನ ಅಂದರೆ ಮೇ 10ಕ್ಕೂ ಕೂಡ ಟಿಕೆಟ್ ಬೆಲೆ 99 ರೂ. ಇರಲಿದೆ. ಒಟ್ಟಿನಲ್ಲಿ ಮೇ 9 ಹಾಗೂ ಮೇ 10ರಂದು ನೀವು ʼರಾಮನ ಅವತಾರʼ ಸಿನಿಮಾವನ್ನು 99 ರೂ.ಗೆ ವೀಕ್ಷಿಬಹುದು.

ʼರಾಮನ ಅವತಾರʼ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್  ಹಾಗೂ ಶುಭ್ರ ಅಯ್ಯಪ್ಪ ಸಾಥ್ ಕೊಟ್ಟಿದ್ದಾರೆ. ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ಪಂಪಾಪತಿ ಸಾರಥ್ಯದಲ್ಲಿ ಚಿತ್ರ ಮೂಡಿ ಬಂದಿದ್ದು, ನಿರ್ದೇಶಕರಾಗಿ ಇವರಿಗೆ ಇದು ಮೊದಲ ಸಾಹಸ. ʼರಾಮನ ಅವತಾರʼ ಸಿನಿಮಾದ ಮೂಲಕ ವಿಕಾಸ್ ಮಾರ್ಡನ್ ರಾಮನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಟ್ರೈಲರ್‌ ನೋಡುತ್ತಿದ್ದರೆ ರಾಮಾಯಣ ನೆನಪಿಸುವ ಒಂದಷ್ಟು ದೃಶ್ಯಗಳು ಕಾಣುತ್ತವೆ. ರಾಮ ಹೆಗೆ ಜೆಂಟಲ್ ಮ್ಯಾನ್ ಆಗ್ತಾನೆ? ರಾವಣನ ರೀತಿ ಸಮಸ್ಯೆಗಳನ್ನು ಹೇಗೆ ಎದುರಿಸ್ತಾನೆ ಎನ್ನುವುದನ್ನು ಕಟ್ಟಿ ಕೊಡಲಾಗದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ವಿಕಾಸ್ ಪಂಪಾಪತಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Kannada New Movie: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ಕೋಟಿಯ ಇನ್ನೊಂದು ಪೋಸ್ಟರ್‌ ರಿಲೀಸ್‌ ಆಗಿದೆ. ಅದ್ದೂರಿ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪೋಸ್ಟರ್‌ ರಿಲೀಸ್‌ ಮಾಡಿ ಶುಭ ಹಾರೈಸಿದರು. ಪರಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ, ಮೋಕ್ಷಾ‌ ಕುಶಾಲ್, ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಮತ್ತಿತರರು ನಟಿಸಿದ್ದಾರೆ. ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಕೋಟಿʼ ಸಿನಿಮಾದ ಪ್ರೀ ರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು (Kannada New Movie).

ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಅಭಿಮಾನಿಗಳ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದವರನ್ನು ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ʼಕೋಟಿʼ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ʼಕೋಟಿʼಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್‌ಗೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ʼಕೋಟಿʼಯ ಇತರ ನಟ ನಟಿಯರಿಂದ ವಿಶೇಷ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು.

ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು. ಈ ಚಿತ್ರದ ಸಂಗೀತ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ʼಕೋಟಿʼಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲ್‌ ಮುನ್ನಡೆಸಿದ್ದ ಪರಮ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಚಾನೆಲ್‌ನ ಸಿಬ್ಬಂದಿ ವಿಶೇಷ ವಿಡಿಯೊ ಮೂಲಕ ಅವರಿಗೆ ಶುಭ ಕೋರಿದರು. ವಿಡಿಯೊದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ ಹೊಸ ಸಿನಿಮಾ ಹೆಸರು ಅನೌನ್ಸ್‌! ಪರಮ್‌ ಆ್ಯಕ್ಷನ್‌ ಕಟ್‌!

ಈಗಾಗಲೇ ಪೋಸ್ಟರ್, ಟೀಸರ್, ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ‘ಕೋಟಿ’ ಕನ್ನಡ ಇಂಡಸ್ಟ್ರಿಯ ದ್ವಿತೀಯಾರ್ಧದ ಯಶಸ್ಸಿಗೆ ಮೊದಲ ಗೆಲುವಾಗುವ ಎಲ್ಲ ಲಕ್ಷಣ ಕಾಣುತ್ತಿದೆ ಎನ್ನುವುದು ಅಭಿಮಾನಿಗಳ ಮನದಾಳ. ‘ಕೋಟಿ ಮನರಂಜನೆ’ ಕಾರ್ಯಕ್ರಮವು ಇದೇ ಜೂನ್ 2ರಂದು ಸಂಜೆ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣದ ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Pushpa 2: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರದ ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್‌ ಆಗಿದೆ. ಈಗಾಗಲೇ ರಿಲೀಸ್‌ ಆಗಿರುವ ಮೊದಲ ಹಾಡು ಸೂಪರ್‌ ಹಿಟ್‌ ಆಗಿದ್ದು, ಎರಡನೇ ಹಾಡಿನ ಬಗ್ಗೆ ಕುತೂಹಲ ಮೂಡಿದೆ. ಹಾಗಾದರೆ ಎರಡನೇ ಹಾಡು ಯಾವಾಗ ರಿಲೀಸ್‌ ಆಗಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Pushpa 2
Koo

ಹೈದರಾಬಾದ್‌: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ.

ʻಪುಷ್ಪ ಪುಷ್ಪʼ ಅಲ್ಲು ಅರ್ಜುನ್‌ ಪಾತ್ರವನ್ನು ಪರಿಚಯಿಸುವ ಹಾಡಾದರೆ ಇದೀಗ ರಿಲೀಸ್‌ ಆಗಲಿರುವ ಎರಡನೇ ಹಾಡಿನಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಇರಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಾಡು ರಿಲೀಸ್‌ ಯಾವಾಗ?

ʼಪುಷ್ಪ 2ʼ ಚಿತ್ರದ ಎರಡನೇ ಹಾಡು ನಾಳೆ (ಮೇ 29) ಬೆಳಿಗ್ಗೆ 11.07ಕ್ಕೆ ರಿಲೀಸ್‌ ಆಗಲಿದೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್‌ ಫೋಸ್‌ ಕೊಡುತ್ತಿರುವ ಪೋಸ್ಟರ್‌ ಈಗಾಗಲೇ ಗಮನ ಸೆಳೆದಿದೆ. ಗುಲಾಬಿ ಬಣ್ಣ, ಹಲವು ಡ್ಯಾನ್ಸರ್‌ಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ನಗುತ್ತಾ ಪೋಸ್‌ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬರಲಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Continue Reading

ಸ್ಯಾಂಡಲ್ ವುಡ್

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Radhika Pandit: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ ಸದ್ಯ ನಟನೆಯಿಂದ ವಿರಾಮ ಪಡೆದುಕೊಂಡು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಮರಳಬೇಕೆಂದು ಆಗ್ರಹಿಸುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಈ ಮಧ್ಯೆ ಅವರು ನೀವು ಇಂದು (ಮೇ 28) ‘ನನಗೆ ಏನಾದರೂ ಕೇಳಬಹುದು’ʼ ಎಂದು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದು, ಪ್ರಶ್ನೆ ಕೇಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಕನ್ನಡದ ಪ್ರತಿಭಾವಂತ ಕಲಾವಿದೆ. ಹಲವು ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ ಅವರು ತಮ್ಮ ಅಭಿನಯ ಸಾಮರ್ಥ್ಯದಿಂದಲೇ ಅಭಿಮಾನಿಗಳ ಮನ ಗೆದ್ದವರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಟಿ ಸದ್ಯ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ (Yash) ಜತೆ ಸಪ್ತಪದಿ ತುಳಿದ ಬಳಿಕ ಅವರು ಅಭಿನಯದಿಂದ ವಿಮುಖರಾಗಿದ್ದಾರೆ. ಅದರಲ್ಲಿಯೂ ಎರಡು ಮಕ್ಕಳಾದ ಬಳಿಕ ಅವರು ಸಿನಿಮಾ ರಂಗದಿಂದ ದೂರ ಉಳಿದು ಅವರ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ನಟನೆಗೆ ಮರಳಲಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣವಾಗಿದ್ದು ರಾಧಿಕಾ ಪಂಡಿತ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌. ಅದೇನು ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: Radhika Pandit: ಹೇಗಿತ್ತು ರಾಧಿಕಾ ಪಂಡಿತ್‌ ಬರ್ತಡೇ ಸೆಲೆಬ್ರೇಷನ್‌? ಇಲ್ಲಿದೆ ವಿಡಿಯೊ!

Continue Reading

South Cinema

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

Rashmika Mandanna: ಟಾಲಿವುಡ್‌ನ ಕ್ಯೂಟ್‌ ಜೋಡಿ ಎಂದೇ ಕರೆಯಲ್ಪಡುವ ವಿಜಯ್‌ ದೇವರಕೊಂಡ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿದ್ದಾರಾ? ಇವರಿಬ್ಬರು ಈ ಬಗ್ಗೆ ಬಾಯಿ ಬಿಡದಿದ್ದರೂ ಹೌದು ಎನ್ನುವುದಕ್ಕೆ ಅನೇಕ ಕಾರಣ ಸಿಗುತ್ತವೆ. ಸದ್ಯ ವಿಜಯ್‌ ದೇವರಕೊಂಡ ಅವರ ಸಹೋದರ, ʼಬೇಬಿʼ ಖ್ಯಾತಿನ ನಟ ಆನಂದ್‌ ದೇವರಕೊಂಡ ಇದೇ ರೀತಿಯ ಪ್ರಶ್ನೆ ಕೇಳಿದ್ದು, ರಶ್ಮಿಕಾ ನಾಚಿ ನೀರಾಗಿದ್ದಾರೆ. ಇಲ್ಲಿದೆ ಆ ವಿಡಿಯೊ.

VISTARANEWS.COM


on

Rashmika Mandanna
Koo

ಹೈದರಾಬಾದ್‌: ಕನ್ನಡತಿ, ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ (Vijay Deverakonda) ಮಧ್ಯೆ ಒಂದೊಳ್ಳೆ ಬಾಂಧವ್ಯವಿದೆ. ಇಬ್ಬರು ಪರಸ್ಪರ ಡೇಟಿಂಗ್‌ ಮಾಡುತ್ತಿರುವ ವಿಚಾರವನ್ನು ಬಾಯಿ ಬಿಟ್ಟು ಹೇಳಿಕೊಳ್ಳದಿದ್ದರೂ ಆಗಾಗ ಜತೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು, ವಿಜಯ್‌ ಮನೆಗೆ ರಶ್ಮಿಕಾ ಭೇಟಿ ನೀಡುತ್ತಿರುವುದು ಮುಂತಾದ ಕಾರಣಕ್ಕೆ ಇಬ್ಬರು ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಗಾಸಿಪ್‌ ಕಾಲಂಗಳಲ್ಲಿಯೂ ಇಬ್ಬರು ಆಗಾಗ ಕಾಣಿಸಿಕೊಳ್ಳುತ್ತಾರೆ. ಇದೀಗ ಇದೇ ವಿಚಾರವಾಗಿ ವಿಜಯ್‌ ದೇವರಕೊಂಡ ಅವರ ಸಹೋದರ, ನಟ ಆನಂದ್‌ ದೇವರಕೊಂಡ (Anand Deverakonda) ಜತೆ ರಶ್ಮಿಕಾ ಮಾತನಾಡಿದ್ದು, ವಿಡಿಯೊ ವೈರಲ್‌ ಆಗಿದೆ.

ಸೋಮವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವೊಂದರಲ್ಲಿ ಆನಂದ್‌ ದೇವರಕೊಂಡ ಮತ್ತು ರಶ್ಮಿಕಾ ಜತೆಯಾಗಿ ಭಾವಹಿಸಿದ್ದರು. ಆ ವೇಳೆ ರಶ್ಮಿಕಾ ಬಳಿ ಆನಂದ್‌ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ನಿಮ್ಮ ನೆಚ್ಚಿನ ಸಹ ಕಲಾವಿದ ಯಾರು ಎಂದೂ ಪ್ರಶ್ನಿಸಿದ್ದರು. ಆನಂದ್‌ ಅವರು ವಿಜಯ್‌ ದೇವರಕೊಂಡ ಅವರನ್ನು ಉದ್ದೇಶಿಸಿಯೇ ಈ ಪ್ರಶ್ನೆ ಕೇಳಿದ್ದರು. ಇದನ್ನು ಅರಿತ ರಶ್ಮಿಕಾ ನಾಚಿ ನೀರಾಗಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇಲ್ಲಿದೆ ಕ್ಯೂಟ್‌ ವಿಡಿಯೊ

ʼʼನಿಮ್ಮ ನೆಚ್ಚಿನ ಕೋಸ್ಟಾರ್‌ ಯಾರು?ʼʼ ಎಂದು ಆನಂದ್‌ ಕೇಳುತ್ತಿದ್ದಂತೆ ನೆರೆದಿದ್ದ ಜನರೆಲ್ಲ ವಿಜಯ್‌ ದೇವರಕೊಂಡ ಎಂದು ಕೋಗಲು ಆರಂಭಿಸಿದರು. “ಆನಂದ್, ನನ್ನನ್ನು ಯಾಕೆ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದೀರಿ?” ಎಂದು ನಗುತ್ತಲೇ ರಶ್ಮಿಕಾ ಪ್ರಶ್ನಿಸಿದರು. ನಂತರ ಅವರು “ರೌಡಿ ಬಾಯ್” ಎಂದು ವಿಜಯ್ ಹೆಸರನ್ನು ಸುತ್ತುಬಳಸಿ ಹೇಳಿ ಅಭಿಮಾನಿಗಳಿಗೆ ಇನ್ನಷ್ಟು ಸುಳಿವು ನೀಡಿದರು. ಸದ್ಯ ವಿಜಯ್‌-ರಶ್ಮಿಕಾ ಅಭಿಮಾನಿಗಳು ಈ ಕುರಿತು ಚರ್ಚೆ ನಡೆಸಲು ಆರಂಭಿಸಿದ್ದಾರೆ. ಶೀಘ್ರದಲ್ಲಿಯೇ ಇವರು ತಮ್ಮ ಸಂಬಂಧವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದೆಲ್ಲ ಮಾತನಾಡಲು ಆರಂಭಿಸಿದ್ದಾರೆ.

ಯಾಕಾಗಿ ಗಾಸಿಪ್‌?

ವಿಜಯ್‌ ಮತ್ತು ರಶ್ಮಿಕಾ ಜತೆಯಾಗಿ ಅಭಿನಯಿಸಿದ ತೆಲುಗು ಚಿತ್ರ ʼಗೀತಾ ಗೋವಿಂದಮ್‌ʼ 2018ರಲ್ಲಿ ತೆರೆಕಂಡಿತ್ತು. ಮೊದಲ ಬಾರಿ ಜತೆಯಾಗಿ ಅಭಿನಯಿಸಿದ್ದ ಈ ಕ್ಯೂಟ್‌ ಜೋಡಿಯನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ತೆರೆಮೇಲೆ ಇವರ ಕೆಮೆಷ್ಟ್ರಿ ಮ್ಯಾಜಿಕ್‌ ಮಾಡಿತ್ತು. ಅಂದಿನಿಂದ ಇವರು ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ಗಾಸಿಪ್‌ ಹಬ್ಬಿದೆ. ಬಳಿಕ 2019ರಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಂಡ ʼಡಿಯರ್‌ ಕಾಮ್ರೇಡ್‌ʼ ತೆಲುಗು ಸಿನಿಮಾ ರಿಲೀಸ್‌ ಆಗಿತ್ತು. ಇದು ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡದಿದ್ದರೂ ಈ ಜೋಡಿ ಮತ್ತೊಮ್ಮೆ ಗಮನ ಸೆಳೆದಿತ್ತು. ಆದರೆ ಇವರು ಸಾವರ್ಜನಿಕವಾಗಿ ತನ್ನ ಸಂಬಂಧವನ್ನು ಇದುವರೆಗೆ ಒಪ್ಪಿಕೊಂಡಿಲ್ಲ ಜತೆಗೆ ನಿರಾಕರಿಸಿಲ್ಲ.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

ಈ ವರ್ಷದ ಏಪ್ರಿಲ್‌ನಲ್ಲಿ ರಶ್ಮಿಕಾ ಹುಟ್ಟುಹಬ್ಬವನ್ನು ಇಬ್ಬರು ಅಬುದಾಬಿಯಲ್ಲಿ ಆಚರಿಸಿಕೊಂಡಿದ್ದರು. ಇವರು ಇದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ನೋಡಿದ ಅಭಿಮಾನಿಗಳು ಇಬ್ಬರು ಒಂದೇ ಸ್ಥಳದಲ್ಲಿ ಇದ್ದುದನ್ನು ಗುರುತಿಸಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್‌ನಲ್ಲಿ ಬ್ಯುಸಿ ಇದ್ದಾರೆ. ರಶ್ಮಿಕಾ ದಕ್ಷಿಣ ಭಾರತದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ಛಾಪು ಮೂಡಿಸಿದ್ದು, ಉತ್ತಮ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ಒಪ್ಪಿಕೊಂಡ ಸಿನಿಮಾ ಮುಗಿಸಿ ಇಬ್ಬರು ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Continue Reading
Advertisement
Mysore Vasudevacharya Memorial Music utsav Vidwat Sabha and award ceremony
ಮೈಸೂರು18 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ18 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ33 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ37 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್45 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ49 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ49 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌