Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು - Vistara News

ಸಿನಿಮಾ

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

Ramayana Movie: ಸದ್ಯ ಚಿತ್ರ ಪ್ರೇಮಿಗಳ ಕುತೂಹಲ ಕೆರಳಿಸಿರುವ ಸಿನಿಮಾಗಳಲ್ಲಿ ರಾಮಾಯಣ ಕೂಡ ಒಂದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ರಾಕಿ ಭಾಯಿ ಯಶ್‌ ರಾವಣನಾಗಿ ಈ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸದೊಂದು ಅಪ್‌ಡೇಟ್‌ ಹೊರ ಬಿದ್ದಿದೆ. ಈ ಚಿತ್ರದ ಬಜೆಟ್‌ ಎಷ್ಟು ಗೊತ್ತೆ?

VISTARANEWS.COM


on

Ramayana Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಸದ್ಯ ದೇಶಾದ್ಯಂತ ʼರಾಮಾಯಣʼ (Ramayana Movie) ಚಿತ್ರದ್ದೇ ಸದ್ದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಬಹು ತಾರಾಗಣದ ಮೂಲಕವೇ ಸುದ್ದಿಯಾಗುತ್ತಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯರಾಗುತ್ತಿರುವ ಈ ಚಿತ್ರದಲ್ಲಿ ರಾಮನಾಗಿ ರಣಬೀರ್‌ ಕಪೂರ್‌ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Yash) ಬಾಲಿವುಡ್‌ಗೆ ಕಾಲಿಡುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸ ಅಪ್‌ಡೇಟ್‌ ಹೊರ ಬಿದ್ದಿದೆ.

ಬಜೆಟ್‌ ಎಷ್ಟು?

ʼರಾಮಾಯಣʼ ಸಿನಿಮಾ ಬರೋಬ್ಬರಿ 835 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಮೂಲಕ ಭಾರತೀಯ ಸಿನಿರಂಗದಲ್ಲೇ ಅತೀ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ. ʼʼರಾಮಾಯಣ ಕೇವಲ ಸಿನಿಮಾವಲ್ಲ. ಅದೊಂದು ಭಾವನೆ. ನಂಬಿಕೆ. ಹೀಗಾಗಿ ನಿರ್ಮಾಪಕರು ಈ ಚಿತ್ರದ ತಯಾರಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ. ದುಬಾರಿ ವೆಚ್ಚದಲ್ಲಿ ನಿರ್ಮಾಪಕರು ತೆರೆ ಮೇಲೆ ಮ್ಯಾಜಿಕ್‌ ಮಾಡಲು ಮುಂದಾಗಿದ್ದಾರೆʼʼ ಎಂದು ಮೂಲವೊಂದು ತಿಳಿಸಿದೆ.

ಈಗಾಗಲೇ ರಾಮಾಯಣ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಶೂಟಿಂಗ್‌ನ ತುಣುಕೊಂಡು ಲೀಕ್‌ ಆಗಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ʼʼಚಿತ್ರದ ಬಜೆಟ್‌ 835 ಕೋಟಿ ರೂ.ಗೆ ತಲುಪಲಿದೆ. ಪೋಸ್ಟ್‌ ಪ್ರೊಡಕ್ಷನ್‌ಗೇ ಸುಮಾರು 600 ದಿನ ಬೇಕಾಗುತ್ತದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವೊಂದು ರಾರಾಜಿಸಲಿದೆʼʼ ಎಂದು ವರದಿಯೊಂದರಲ್ಲಿ ವಿವರಿಸಲಾಗಿದೆ.

ಅತ್ಯಂತ ದುಬಾರಿ ಚಿತ್ರ

ಪ್ರಭಾಸ್‌ ಅಭಿನಯದ, ಕಳೆದ ವರ್ಷ ತೆರೆಕಂಡ ʼಆದಿಪುರುಷ್‌ʼ ಸಿನಿಮಾ ಇದುವರೆಗಿನ ಅತ್ಯಂತ ವೆಚ್ಚದ ಸಿನಿಮಾ ಎನಿಸಿಕೊಂಡಿತ್ತು. ರಾಮಾಯಣವನ್ನು ಆಧರಿಸಿದ ಇದು ಸುಮಾರು 700 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿತ್ತು ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪ್ರಭಾಸ್‌ ಅವರದ್ದೇ ʼಕಲ್ಕಿ 2898 ಎಡಿʼ ಸಿನಿಮಾ ಇದೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಇದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ಈ ಚಿತ್ರದ ಬಜೆಟ್‌ ಸುಮಾರು 600 ಕೋಟಿ ರೂ. ಇನ್ನು ರಜನಿಕಾಂತ್‌ ನಟಿಸಿದ್ದ ʼ2.0ʼ ಚಿತ್ರಕ್ಕೆ 570 ಕೋಟಿ ರೂ. ವೆಚ್ಚವಾಗಿತ್ತು. ಹೀಗಾಗಿ ʼರಾಮಾಯಣʼ ಇದುವರೆಗಿನ ದುಬಾರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು ಸುಮಾರು 3 ಭಾಗಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿಯೂ ಇದೆ.

ಯಶ್‌ ನಟಿಸುತ್ತಾರಾ?

ʼಕೆಜಿಎಫ್‌ʼ ಸರಣಿ ಸಿನಿಮಾ ಮೂಲಕ ದೇಶದ ಗಮನ ಸೆಳೆದ ಸ್ಯಾಂಡಲ್‌ವುಡ್‌ ನಟ ಯಶ್‌ ರಾಮಾಯಣ ಸಿನಿಮಾದಲ್ಲಿ ರಾವಣನನಾಗಿ ಅಬ್ಬರಿಸಲಿದ್ದಾರೆ. ಅದಕ್ಕಾಗಿ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಜತೆಗೆ ಯಶ್‌ ನಟಿಸುತ್ತಿಲ್ಲ, ಬದಲಾಗಿ ಚಿತ್ರ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ ಇದುವರೆಗೆ ಈ ಬಗ್ಗೆ ಚಿತ್ರತಂಡವಾಗಲೀ, ಯಶ್‌ ಕಡೆಯಿಂದಾಗಲೀ ಸ್ಪಷ್ಟನೆ ದೊರೆತಿಲ್ಲ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ನಟಿಸುತ್ತಾರೆ ಎಂದು ವರದಿಯಾಗಿದೆ. ಸದ್ಯ ಯಶ್ ಮತ್ತೊಂದು ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Kannada New Movie: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ ಟ್ರೇಲರ್ ಈಚೆಗೆ ಬಿಡುಗಡೆಯಾಯಿತು.

VISTARANEWS.COM


on

Kaagada movie released on 5th July
Koo

ಬೆಂಗಳೂರು: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ (Kannada New Movie) ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.

ಬಿಜೆಪಿ ಮುಖಂಡ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಚಿತ್ರದ ನಿರ್ದೇಶಕ ರಂಜಿತ್ ಮಾತನಾಡಿ, “ಕಾಗದ”, 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, “ಕಾಗದ” ದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ “ಕಾಗದ” ಚಿತ್ರ , ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ ಅವರು, “ಆಪಲ್ ಕೇಕ್” ಚಿತ್ರದ ನಂತರ ಇದು ನನ್ನ ಎರಡನೇ ನಿರ್ದೇಶನದ ಚಿತ್ರ ಎಂದು ಹೇಳಿದರು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ನನಗೆ ಮೊದಲಿನಿಂದಲೂ ಹಿಂದು-ಮುಸ್ಲಿಂ ಲವ್ ಸ್ಟೋರಿ ಸಿನಿಮಾ ಮಾಡುವ ಆಸೆಯಿತ್ತು. ಆದರೆ ನನ್ನ ಮನಮುಟ್ಟುವ ಹಾಗೆ ಯಾರು ಕಥೆ ಹೇಳುತ್ತಿರಲಿಲ್ಲ. ನನ್ನನ್ನು ಒಪ್ಪಿಸುವಲ್ಲಿ ರಂಜಿತ್ ಯಶಸ್ವಿಯಾದರು. ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. “ರಗಡ್” ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ರಗಡ್ ಚಿತ್ರ

ನಮ್ಮ ಮನೆಯ ಕೆಳಗಡೆ ಆಕ್ಟಿಂಗ್ ಸ್ಕೂಲ್ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ‌ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ ಎಂದು ನಾಯಕ ಆದಿತ್ಯ ತಿಳಿಸಿದ್ದಾರೆ.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನನಗೆ ತಾವೆಲ್ಲರೂ ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ನಾಯಕಿಯಾಗಿ ಇದು ಮೊದಲ ಚಿತ್ರ. “ಕಾಗದ” ಚಿತ್ರದಲ್ಲಿ ಬೋಲ್ಡ್ ಹುಡುಗಿಯ ಪಾತ್ರ ನನ್ನದು ಎನ್ನುತ್ತಾರೆ ನಾಯಕಿ ಅಂಕಿತ ಜಯರಾಂ.

ಚಿತ್ರದಲ್ಲಿ ನಟಿಸಿರುವ ಶಿವಮಂಜು, ಗೌತಮ್ ತಮ್ಮ ಪಾತ್ರದ ಬಗ್ಗೆ ಹೇಳಿದರು. ಸಂಗೀತದ ಬಗ್ಗೆ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ವೀನಸ್ ನಾಗರಾಜ ಮೂರ್ತಿ ಹಾಗೂ ವರ್ಣಾಲಂಕಾರದ ಬಗ್ಗೆ ಮಣಿ ಮಾಹಿತಿ ನೀಡಿದರು‌.

ಈ ಚಿತ್ರದ ವಿಶೇಷ ಪಾತ್ರದಲ್ಲಿ ನೇಹಾ ಪಾಟೀಲ್ ಕಾಣಿಸಿಕೊಂಡಿದ್ದಾರೆ. ಬಲ ರಾಜವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

“ಕಾಗದ” ಟ್ರೇಲರ್ ವೀಕ್ಷಿಸಿದ ಚಂದನವನದ ತಾರೆಯರಾದ ಧ್ರುವ ಸರ್ಜಾ, ರಮೇಶ್ ಅರವಿಂದ್, ಅನು ಪ್ರಭಾಕರ್ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ.

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Vinay Gowda: ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

VISTARANEWS.COM


on

Vinay Gowda acted darshan devil Movie and says Futture cant be predict
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಹೀಗಾಗಿ ಅವರ ʻಡೆವಿಲ್‌ʼ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸುತ್ತಿರುವ ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ (Vinay Gowda) ವಿಲನ್ ಆಗಿ ನಟಿಸುತ್ತಿದ್ದಾರೆ. ವಿನಯ್‌ ಸಂದರ್ಶನವೊಂದರಲ್ಲಿ ಡೆವಿಲ್‌ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಜತೆಗೆ ʻʻಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್ʼʼಎಂದು ಹೇಳಿಕೆ ನೀಡಿದ್ದಾರೆ.‌

ವಿನಯ್‌ ಗೌಡ ಮಾತನಾಡಿ ʻʻಬಿಗ್‌ ಬಾಸ್‌ ಮುಗಿಸಿದ ಬಳಿಕ ʻಡೆವಿಲ್‌ʼ ಸಿನಿಮಾ ಚಾನ್ಸ್‌ ಸಿಕ್ಕಿತು. ಈ ಸಿನಿಮಾ ಪರಿಚಯ ಹೇಗಾಯ್ತು ಎಂದರೆ ಪ್ರಕಾಶ್‌ ಅವರ ಜತೆ ಮುಂಚೆ ಕೆಲಸ ಮಾಡಿದ್ದೆ. ಒಂದಷ್ಟು ಧಾರಾವಾಹಿಗಳು ಮಾಡಿದ್ದೆ. ನನ್ನ ನಟನೆ ಗೊತ್ತು ಅವರಿಗೆ. ಈ ರೀತಿ ವಿಲನ್‌ ಕ್ಯಾರಕ್ಟರ್‌ ಬಗ್ಗೆ ಹೇಳಿದರು. ಬಳಿಕ ನಾನು ಸಿನಿಮಾಗೆ ಒಪ್ಪಿಗೆ ನೀಡಿದೆ. ಅವರ ಕೆಲಸ ಅಂತೂ ತುಂಬ ಕ್ಲೀನ್‌ ಹಾಗೂ ಕ್ಲೀಯರ್‌. ನಂದು ಡೆವಿಲ್‌ ಸಿನಿಮಾದಲ್ಲಿ 30% ಶೂಟ್‌ ಆಗಿದೆ. ಫೈಟ್‌ ಸೀಕ್ವೆನ್ಸ್‌ ಬಾಕಿ ಇದೆ. ಟೈಲಾಗ್‌ ಸ್ವಲ್ಪ ಬಾಕಿ ಉಳಿದೆʼʼ ಎಂದರು.

ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ

ದರ್ಶನ್‌ ವಿವಾದದ ಬಗ್ಗೆ ಮಾತನಾಡಿ ʻʻನಾನು ಯಾರ ಬಗ್ಗೆ ಮಾತಾಡಲ್ಲ. ನಾವು ಈ ಉದ್ಯಮಕ್ಕೆ ಲೇಟ್‌ ಆಗಿ ಬಂದು ಕಡಿಮೆ ಕೊಡುಗೆ ಕೊಟ್ಟಿರಬಹುದು. ಆದರೆ ಈಗ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ. ಇಲ್ಲಿ ಈ ಬಗ್ಗ ಪ್ರಶ್ನೆ ಬಂದಾಗ. ಹೌದು ತೊಂದರೆ ಆಗಿದೆ. ಮುಂದೆ ಏನಾಗುತ್ತೆ? ಎಲ್ಲಿರವರೆಗೆ ಹೋಗುತ್ತೆ ಗೊತ್ತಿಲ್ಲ. ನಾನು ಈ ಚಿತ್ರರಂಗದ ಒಂದು ಭಾಗವೆಂದು ಅಂದುಕೊಂಡಿದ್ದೇನೆ. ಈಗ ಇಂತಹದ್ದೊಂದು ಘಟನೆ ನಡೆದಿದೆ. ಅದನ್ನು ಜಡ್ಜ್‌ ಮಾಡುವುದಕ್ಕೆ ನಾವ್ಯಾರೂ ಅಲ್ಲ. ಮಾಡಿರುವುದು ನಿಜನಾ? ಸುಳ್ಳಾ? ಅದ್ಯಾವುದೂ ನಮಗೆ ಗೊತ್ತಿಲ್ಲ. ಅದಕ್ಕೆ ಕಮೆಂಟ್ ಮಾಡುವುದು ನನಗೆ ಸೂಟ್ ಆಗುತ್ತೆ ಅಂತ ಅನಿಸುತ್ತಿಲ್ಲ.” ಎಂದು ವಿನಯ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Pavithra Gowda : ಜೈಲಿನಲ್ಲಿರುವ ಪವಿತ್ರಾ ಗೌಡಗೆ ಬ್ಯಾಗ್​ ತುಂಬಾ ಸಾಮಗ್ರಿ ತಂದು ಕೊಟ್ಟ ಸಹೋದರ

ಸೂಪರ್‌ ಪ್ರಾಜೆಕ್ಟ್

ʻʻಈ ಘಟನೆ ಬಗ್ಗೆ ಹೇಳೋದೆನಂದರೆ ಒಂದು ಕಮೆಂಟ್‌ ಎಲ್ಲಿಯ ಹಂತದವರೆಗೆ ಹೋಗಿದೆ ನೋಡಿ. ಒಂದು ತಪ್ಪು ಕೆಲಸ ಮಾತ್ರ ಹೈಲೈಟ್‌ ಆಗತ್ತೆ. ತಪ್ಪು ಎಲ್ಲಿದೆ, ನೆಗೆಟಿವ್‌ ಎಲ್ಲಿದೆ ಅದು ಮಾತ್ರ ಹೈಲೈಟ್‌ ಆಗತ್ತೆ. ಪ್ರಾಜೆಕ್ಟ್‌ ಆರ್ಧಕ್ಕೆ ನಿಂತಿದೆ ಪ್ರಾಜೆಲ್ಟ್‌ ಭವಿಷ್ಯ ಯಾರಿಗೂ ಗೊತ್ತು, ಆದರೆ ಸೂಪರ್‌ ಪ್ರಾಜೆಕ್ಟ್.‌ ಆದರೆ ಬೇಜಾರಾಗತ್ತೆ. ಮುಂದೆ ಸರಿ ಹೋಗುತ್ತೆ ಎನ್ನುವ ನಂಬಿಕೆ ಅನ್ನೋದು ಇದೆಯಲ್ಲ. ಆ ಪ್ರಾಜೆಕ್ಟ್ ರಿಲೀಸ್ ಆದ್ಮೇಲೆ ಹಬ್ಬ ಇದೆಯಲ್ಲ. ಅದರ ಬಗ್ಗೆ ಯೋಚನೆ ಮಾಡುತ್ತಿರುತ್ತೇನೆ. ನಾನು ನೆಗೆಟಿವ್ ಯೋಚನೆ ಮಾಡುವುದಿಲ್ಲʼʼಎಂದರು.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು.ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾದ ಭವಿಷ್ಯ ಏನಾಗಬಹುದು ಎಂಬ ಆತಂಕ ಫ್ಯಾನ್ಸ್‌ಗೆ ಇದೆ.

Continue Reading

ಸ್ಯಾಂಡಲ್ ವುಡ್

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

Sanjith Hegde: ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಹೆಗಡೆ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ.

VISTARANEWS.COM


on

Sanjith Hegde Nange Allava song Out
Koo

ಬೆಂಗಳೂರು: ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗಡೆ (Sanjith Hegde) ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ (Nange Allava) ಬೆಳಕಿಗೆ ಬಂದ ಸಂಜಿತ್ ಹೆಗಡೆ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ.

‘ನೀ ನಂಗೆ ಅಲ್ಲವಾ’ ಅಂತಾ ಸಂಜಿತ್ ಹೆಗಡೆ ಯುವ ನಟಿ ಸಂಜನಾ ದಾಸ್ ಜತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಜಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಗಾನಬಜಾನ..ನಾಗಾರ್ಜುನ್ ಶರ್ಮಾ ಪದಪೊಣಿಸಿರುವ ಹಾಡಿಗೆ ಸಂಜಿತ್ ಹಾಡಿದ್ದಾರೆ. ಜೊತೆಗೆ ಸಂಗೀತ ಕೂಡ ಸಂಯೋಜಿಸಿದ್ದು, ಬಿಜೋಯ್ ಶೆಟ್ಟಿ ನಿರ್ದೇಶನದಲ್ಲಿ ನಂಗೆ ಅಲ್ಲವ ಹಾಡು ಮೂಡಿಬಂದಿದೆ.ʼ

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಯುವ ಪ್ರೇಮಿಗಳನ್ನು ಹಾಗೇ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತದೆ ನಂಗೆ ಅಲ್ಲವ’ ಹಾಡು. ಈ ಹಾಡಿನ ಬಗ್ಗೆ ಮನಬಿಚ್ಚಿರುವ ಸಂಚಿತ್, “ಈ ಹಾಡು ನನ್ನ ಜೀವನವನ್ನು ಬದಲಾಯಿಸಿತು. ನಾನು ತುಂಬಾ ಆತಂಕಗೊಂಡಿದ್ದೇನೆ ಮತ್ತು ಇದನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. “ನೀ ನಂಗೆ ಅಲ್ಲವಾ” ನನ್ನ ಪ್ರೀತಿಯ ಜೀವನದ ಪ್ರಯಣವನ್ನು ವ್ಯಕ್ತಪಡಿಸಲು ನನಗೆ ಸಹಾಯ ಮಾಡಿತು. ಈ ಪ್ರಯಾಣದಲ್ಲಿ ಭಾಗವಾಗಿರುವ ಪ್ರತಿಯೊಬ್ಬರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಹಾಡು ಬಿಡುಗಡೆಯೊಂದಿಗೆ ಹೃದಯ ತುಂಬಾ ಹಗುರ ಎನಿಸುತ್ತದೆ” ಎಂದಿದ್ದಾರೆ.

ಸಂಜಿತ್ ಹಿಂದಿಯಲ್ಲಿ “ಬಾದಲ್” ಮತ್ತು “ಗುಲಾಬೋ” ಹಾಡುಗಳೊಂದಿಗೆ ಈಗಾಗಲೇ ಹೊಸ ಅಲೆ ಸೃಷ್ಟಿಸಿದ್ದಾರೆ. ಈಗ ಅದೇ ಸಾಲಿಗೆ ನಂಗೆ ಅಲ್ಲವ ಗಾನಬಜಾನ ಸೇರ್ಪಡೆಯಾಗಿದೆ. ಸಂಜಿತ್ ಹೆಗ್ಡೆ ಯೂಟ್ಯೂಬ್ ಚಾನೆಲ್ ನಲ್ಲಿ ಹಾಗೂ ಎಲ್ಲಾ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಾಡು ಲಭ್ಯವಿದೆ. ವಾರ್ನರ್ ಮ್ಯೂಸಿಕ್ ಇಂಡಿಯಾ ಈ ಹಾಡನ್ನು ಬಿಡುಗಡೆ ಮಾಡಿದೆ.

Continue Reading
Advertisement
Viral Video
Latest59 seconds ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ3 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ6 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

prajwal revanna case 4th
ಕ್ರೈಂ40 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್48 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

IND vs ENG
ಕ್ರಿಕೆಟ್49 mins ago

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

VHP leader murder
ದೇಶ53 mins ago

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್1 hour ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Mass Shooting
ವಿದೇಶ1 hour ago

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Inzamam Ul Haq
ಕ್ರೀಡೆ2 hours ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌