Rana Daggubati: ರಾಣಾ ದಗ್ಗುಬಾಟಿ ಹೊಸ ಸಿನಿಮಾ ಅನೌನ್ಸ್‌; ಟೀಕೆಗೆ ಗುರಿಯಾಯ್ತು ಫಸ್ಟ್‌ ಲುಕ್‌! - Vistara News

South Cinema

Rana Daggubati: ರಾಣಾ ದಗ್ಗುಬಾಟಿ ಹೊಸ ಸಿನಿಮಾ ಅನೌನ್ಸ್‌; ಟೀಕೆಗೆ ಗುರಿಯಾಯ್ತು ಫಸ್ಟ್‌ ಲುಕ್‌!

Rana Daggubati: ನೇನೆ ರಾಜು ನೇನೆ ಮಂತ್ರಿ 2017ರಲ್ಲಿ ಬಿಡುಗಡೆಯಾಯಿತು. ಕಾಜಲ್ ಅಗರ್ವಾಲ್ ಮತ್ತು ಕ್ಯಾಥರೀನ್ ತ್ರೇಸಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

VISTARANEWS.COM


on

Rana Daggubati announces new film with Teja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻನೆನೆ ರಾಜು ನೇನೆ ಮಂತ್ರಿʼ ಯಶಸ್ಸಿನ ನಂತರ ನಟ ರಾಣಾ ದಗ್ಗುಬಾಟಿ ನಿರ್ದೇಶಕ ತೇಜ ಜತೆ ಮತ್ತೆ ಕೈ ಜೋಡಿಸಿದ್ದಾರೆ. ರಾಣಾ ಅವರ ಜನ್ಮದಿನದಂದು, ನಟ ತನ್ನ ಮುಂದಿನ ಪ್ರಾಜೆಕ್ಟ್ ರಾಕ್ಷಸ ರಾಜ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ರಾಣಾ ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿದ್ದಾರೆ. ರೆಟ್ರೊ ಶೈಲಿಯಲ್ಲಿ ವಿನ್ಯಾಸಗೊಳಿಸಲಾದ ಪೋಸ್ಟರ್‌ನಲ್ಲಿ, ನಟ ಭುಜದ ಮೇಲೆ ಬಂದೂಕನ್ನು ಹಿಡಿದಿರುವುದು ಕಾಣಬಹುದು.

ರಾಕ್ಷಸ ರಾಜ ಸಿನಿಮಾದ ಪಾತ್ರವರ್ಗವನ್ನು ಇನ್ನೂ ಚಿತ್ರತಂಡ ಘೋಷಿಸಿಲ್ಲ. ಈ ಫಸ್ಟ್‌ ಲುಕ್‌ ಔಟ್‌ ಆದ ಬಳಿಕ ನೆಟ್ಟಿಗರು ಟೀಕೆ ಮಾಡಿದ್ದಾರೆ. ನೆಟ್ಟಿಗರೊಬ್ಬರು “ರಾಣಾ ಅವರ ಇದುವರೆಗಿನ ಚಲನಚಿತ್ರಗಳಲ್ಲಿ ಕೆಟ್ಟ ಪೋಸ್ಟರ್ ವಿನ್ಯಾಸ ಇದು” ಎಂದು ಕಮೆಂಟ್‌ ಮಾಡಿದ್ದಾರೆ, ಮತ್ತೊಬ್ಬರು ʻʻಟ್ವಿಟ್ಟರ್‌ನಿಂದ ಪೋಸ್ಟರ್ ಡಿಲಿಟ್‌ ಮಾಡಿ ಏಕೆಂದರೆ ಇದು ಭಯಾನಕವಾಗಿದೆʼʼಎಂದು ಕಮೆಂಟ್‌ ಮಾಡಿದ್ದಾರೆ.

ನೇನೆ ರಾಜು ನೇನೆ ಮಂತ್ರಿ 2017ರಲ್ಲಿ ಬಿಡುಗಡೆಯಾಯಿತು. ಕಾಜಲ್ ಅಗರ್ವಾಲ್ ಮತ್ತು ಕ್ಯಾಥರೀನ್ ತ್ರೇಸಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಈ ವರ್ಷದ ಆರಂಭದಲ್ಲಿ ತೆರೆಕಂಡ ತೇಜ ಅವರ ಕೊನೆಯ ಚಿತ್ರ ಅಹಿಂಸಾದಲ್ಲಿ ರಾಣಾ ಅವರ ಸಹೋದರ ಅಭಿರಾಮ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.

ಇದನ್ನೂ ಓದಿ: Rana Daggubati : ಬಾಹುಬಲಿಗಾಗಿ 400 ಕೋಟಿ ಸಾಲ ಪಡೆದಿದ್ದರಾ ರಾಜಮೌಳಿ? ರಾಣಾ ದಗ್ಗುಬಾಟಿ ಹೇಳಿದ್ದೇನು?

ದುಲ್ಕರ್ ಸಲ್ಮಾನ್ ಸಿನಿಮಾಗೆ ರಾಣಾ ದಗ್ಗುಬಾಟಿ ಸಾಥ್‌!

ಮಾಲಿವುಡ್‌ ನಟ ದುಲ್ಕರ್ ಸಲ್ಮಾನ್ (Dulquer Salmaan) ಅವರ ಮುಂಬರುವ ಬಹುಭಾಷಾ ಚಿತ್ರಕ್ಕೆ ‘ಕಾಂತಾ’ ಎಂದು ಹೆಸರಿಡಲಾಗಿದೆ. ಈ ಚಿತ್ರವನ್ನು ‘ನಿಲಾ’ ಖ್ಯಾತಿಯ ಸೆಲ್ವಮಣಿ ಸೆಲ್ವರಾಜ್ ನಿರ್ದೇಶಿಸಿದ್ದಾರೆ. ರಾಣಾ ದಗ್ಗುಬಾಟಿ ಮತ್ತು ದುಲ್ಕರ್ ಸಲ್ಮಾನ್ ತಮ್ಮ ನಿರ್ಮಾಣ ಸಂಸ್ಥೆಗಳಾದ ಸ್ಪಿರಿಟ್ ಮೀಡಿಯಾ ಮತ್ತು ವೇಫೇರರ್ ಫಿಲ್ಮ್ಸ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈ ಬಗ್ಗೆ ದುಲ್ಕರ್ ಸಲ್ಮಾನ್ ಮಾತನಾಡಿ ʻʻಕಾಂತಾ’ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ. ನಾನು ಕಥೆಯನ್ನು ಕೇಳಿದ ದಿನದಿಂದ ಇದನ್ನು ಜೀವಂತವಾಗಿ ತರಲು ಉತ್ಸುಕನಾಗಿದ್ದೇನೆ. ಏಕೆಂದರೆ ಇದರಲ್ಲಿನ ಪಾತ್ರ ಭಿನ್ನವಾಗಿದೆ. ಸ್ಪಿರಿಟ್ ಮೀಡಿಯಾ ಜತೆಗೆ ಸಿನಿಮಾ ನಿರ್ಮಿಸಲು ಮತ್ತು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಸವಾಲಿನ ಪಾತ್ರಗಳಲ್ಲಿ ಒಂದನ್ನು ನಿರ್ವಹಿಸಲು ನಾನು ಖಂಡಿತವಾಗಿಯೂ ಎದುರುನೋಡುತ್ತಿರುವ ರೋಚಕ ಪ್ರಯಾಣವಾಗಿದೆ” ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

Sri Reddy: ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. . ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು.

VISTARANEWS.COM


on

sri reddy me too fame telugu actress post goes viral
Koo

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು. ಅಲ್ಲಿಂದ ನಟಿಯ ಹೆಸರು ಮುನ್ನಲೆಗೆ ಬಂದಿತ್ತು. ಇದೀಗ ನಟಿ ಶ್ರೀರೆಡ್ಡಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ನಟಿ ಹೇಳಿಕೊಂಡಿದ್ದಾರೆ.

ನಟಿ ಶ್ರೀರೆಡ್ಡಿ ಟಾಲಿವುಡ್‌ನ ಹಲವು ಮಂದಿಯನ್ನು ಟಾರ್ಗೆಟ್ ಮಾಡಿದ್ದರು. ತೆಲುಗಿನ ಕೆಲವು ನಟಿಯರ ಮೇಲೂ ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪವನ್‌ ಕಲ್ಯಾಣ್‌ ಅವರನ್ನು ನಟಿ ಬಿಟ್ಟಿಲ್ಲ. ಮಾತ್ರವಲ್ಲ ಪರಭಾಷೆ ನಟಿಯರಿಗೆ ಹಲವು ಅವಕಾಶಗಳನ್ನು ನೀಡುತ್ತಿದ್ದು, ತೆಲುಗು ನಟಿಯರಿಗೇ ಹೆಚ್ಚು ಅವಕಾಶ ಸಿಕ್ಕಿಲ್ಲ ಎಂದೂ ಟೀಕೆ ಕೂಡ ಮಾಡಿದ್ದರು. ಮೀಟೂ ಅಭಿಯಾನದ ವೇಲೆ ಹಲವು ರಾಜಕೀಯ, ಸಿನಿಮಾ ವ್ಯಕ್ತಿಗಳ ಬಗ್ಗೆ ಮಾಡಿದ ಪೋಸ್ಟ್‌ ಭಾರಿ ಸಂಚಲನ ಸೃಷ್ಟಿಸಿತ್ತು.

ಬಳಿಕ ಶ್ರೀರೆಡ್ಡಿ ಏನೇ ಹೇಳಿಕೆ ಕೊಟ್ಟರು ಜನರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಈ ಕಾರಣಕ್ಕೆ ಶ್ರೀರೆಡ್ಡಿ ತನ್ನದೊಂದು ಯೂಟ್ಯೂಬ್ ಚಾನೆಲ್ ತೆರೆದಿದ್ದರು ಅದರಲ್ಲಿ ಬೇರೆ ಬೇರೆ ವಿಷಯಗಳ ಬಗ್ಗೆ ವಿಡಿಯೋ ಮಾಡುತ್ತಿದ್ದರು. ಅದರಲ್ಲೂ ವೈಸಿಪಿ ನಾಯಕ ವೈಎಸ್ ಜಗನ್ ದೊಡ್ಡ ಅಭಿಮಾನಿಯಾಗಿದ್ದ ಶ್ರೀ ರೆಡ್ಡಿ ಅವರನ್ನು ಬೆಂಬಲಿಸಿ ವಿಡಿಯೋ ಮಾಡುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ವೈಸಿಪಿ ಪಕ್ಷದ ಪರವಾಗಿ ಹೆಚ್ಚು ವಿಡಿಯೋಗಳನ್ನು ಮಾಡಿ ಸುದ್ದಿಯಲ್ಲಿ ಇದ್ದರು.ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಶ್ರೀರೆಡ್ಡಿ ನಂಬಿದ್ದರು. ಆದರೆ, ಪರಿಸ್ಥಿತಿ ಬದಲಾಗಿತ್ತು. ಜಗನ್ ಮೋಹನ್ ರೆಡ್ಡಿ ಚುನಾವಣೆಯಲ್ಲಿ ಸೋತಿದ್ದರು. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾದರೆ, ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿದ್ದರು.ಇದೀಗ ನಟಿ ಈ ಬಗ್ಗೆ ಭಾರಿ ಟ್ರೋಲ್‌ ಆಗುತ್ತಿದ್ದಾರೆ.

ಹಳೆಯ ವಿಡಿಯೊಳನ್ನು ಇಟ್ಟುಕೊಂಡು ನಟಿಯನ್ನು ಟ್ರೋಲ್‌ ಮಾಡಲಾಗುತ್ತಿದೆ. ಶ್ರೀರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೆಲುಗುದೇಶಂ ಪಕ್ಷದ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದಾಗಿ ಮನನೊಂದ ನಟಿ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗ ಹೇಳುತ್ತಿರುವ ಮಾತುಗಳು ಸಿಲ್ಲಿ ಎನಿಸಬಹುದು. ಆದರೆ, ನಾನು ಸಾಯಲು ಬಯಸುತ್ತೇನೆ ಎಂದು ಶ್ರೀರೆಡ್ಡಿ ಬರೆದುಕೊಂಡಿದ್ದಾರೆ.

ಶ್ರೀರೆಡ್ಡಿಗೆ ಚಲನಚಿತ್ರ ಕಲಾವಿದರ ಸಂಘ ನಿಷೇಧ ಹೇರಿತ್ತು. ಏಪ್ರಿಲ್ 2018 ರಲ್ಲಿ ಶ್ರೀ ರೆಡ್ಡಿ ಫಿಲಂ ಚೇಂಬರ್ ಮುಂದೆ ಬೆತ್ತಲೆಯಾಗಿ ಪ್ರದರ್ಶನ ನೀಡಿದ್ದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು. ಶ್ರೀರೆಡ್ಡಿ ಲೈಂಗಿಕ ಕಿರುಕುಳ ಮತ್ತು ತೆಲುಗು ಹುಡುಗಿಯರಿಗೆ ಅವಕಾಶ ನೀಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದರು.


Continue Reading

ಸ್ಯಾಂಡಲ್ ವುಡ್

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Vinay Guruji: ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Vinay Guruji met by master anand brother
Koo

ಬೆಂಗಳೂರು: ಮಾಸ್ಟರ್ ಆನಂದ್ ಸಹೋದರ ಮಾಸ್ಟರ್ ಅರುಣ್ ಹರಿಹರನ್ (Arun Hariharan) ಕೂಡ ನಿರ್ದೇಶಕದಲ್ಲಿ ಬ್ಯುಸಿಯಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಇದೀಗ ‘Huu ಅಂತೀಯಾ…Uhuu ಅಂತೀಯಾ’ ಎಂಬ ಹೊಸ ಬಗೆಯ ವಿನೂತನ ಗೇಮ್ ಶೋ ನಿರೂಪಕ ಕೂಡ ಆಗಿದ್ದಾರೆ. ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

ಅರುಣ್ ಹರಿಹರನ್ ಮಾತನಾಡಿ ʻʻನಾನು ದೇವರನ್ನ ನಂಬಲ್ಲ. ಇನ್ನೂ ದೇವ ಮಾನವನ್ನು ನಂಬಲು ಹೇಗೆ ಸಾಧ್ಯ? ಆದರೆ ನಮ್ಮ ಅಣ್ಣ ಬಾ ಎಂದು ಹೇಳಿದ ಅಂತ ವಿನಯ್ ಗುರೂಜೀ ಅವರನ್ನು ಭೇಟಿ ಮಾಡಲು ಹೋದೆ. ಅಲ್ಲಿ ಹೋದಾಗ ನಾವು ಹೋಗುತ್ತಿದ್ದಂತೆ ಗೇಟ್‌ ಬಳಿ ನಿಂತಿದ್ದರು ‘ಬನ್ನಿ ಬನ್ನಿ ನಿಮಗಾಗಿ ಕಾಯುತ್ತಿದ್ದೆ’ ಅಂತ ಹೇಳಿದರು. ಆನಂತ್ ಸಂಪೂರ್ಣ ವ್ಯವಸ್ಥೆ ಮಾಡಿದ್ದಾನೆ ಅಂದುಕೊಂಡು ಸುಮ್ಮನಾದೆʼʼಎಂದು ಮಾತು ಮುಂದುವರಿಸಿದರು.

ʻʻಗುರೂಜಿ ಫುಲ್‌ ಶಾರ್ಟ್ಸ್‌ ಹಾಕ್ಕೊಂಡು ಕೂತಿದ್ದಾರೆ. ನಾನು ಮಾಮೂಲಿ ಖಾವಿನೋ ಅಥವಾ ಬಿಳಿ ಬಣ್ಣದ ಉಡುಪನ್ನೋ ಧರಿಸುತ್ತಾರೆ ಅಂದುಕೊಂಡಿದ್ದೆ. ಆದರೆ ನೋಡುವಾಗ ಅವರು ಹಾಗೆ ಕಂಡಿಲ್ಲ. ನಮ್ಮ ಅಣ್ಣ ಕರೆದುಕೊಂಡು ಬಂದ ಮಕ್ಕರ್‌ ಮಾಡಿದ ಎಂದು ಅಂದುಕೊಂಡಿದ್ದೆ. ಇಡೀ ಟೀಂ ನೋಡಿ ನಿಮಗೆ ಕಾಯುತ್ತಿದ್ದೆ ಎಂದರು. ಗುರೂಜಿ ಅವರು ಊಟ ಬಡಿಸುತ್ತಿದ್ದರು. ಬಜ್ಜಿ ಬಡಿಸುವಾಗ ಇದರಷ್ಟೇ ಖಾರ ಇದ್ಯಲ್ಲ ನೀನು? ಎಂದು ಕೇಳಿದ್ದರು. ಎಷ್ಟು ಬೈಕ್ಕೊಂಡೆ ಅಲ್ವಾ? ಎಂದರು ನಾನು ಅಣ್ಣನೇ ನನ್ನ ಬಗ್ಗೆ ಅವರಿಗೆ ಇದೆಲ್ಲ ಹೇಳಿರಬೇಕು ಎಂದು ಅಂದುಕೊಂಡೆ. ನಮ್ಮ ಡಿಒಪಿ ಮೊಬೈಲ್‌ ಒಡೆದಿದ್ದೂ ಹೇಳಿದ್ದರು. ಮನೆ ಕೂಡ ಬೇಗ ಆಗುತ್ತೆ ಎಂದೂ ಹೇಳುತ್ತಾರೆ. ಇಷ್ಟೆಲ್ಲ ಹೇಳಿದಾಗ ಅಣ್ಣನೇ ಎಲ್ಲವೂ ಹೇಳಿರುತ್ತಾರೆ ಅಂದುಕೊಂಡೆʼʼಎಂದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನಾನು ಆಗಷ್ಟೇ ಮದುವೆಯಾಗಿದ್ದೆ. ಆಗ ನನ್ನ ಹಳೆ ಪರಚಿಕೊಂಡ ಗಾಯದ ಬಗ್ಗೆ ಹೇಳಿಬಿಟ್ಟರು. ಹೆಂಗಿದ್ದಾಳೋ ಅವಳು ಅಂದುಬಿಟ್ಟರು. ಕಾಲು ಕೈ ಎಲ್ಲಾ ತಣ್ಣಗಾಯ್ತು. ಅಣ್ಣ ಇಷ್ಟೋಂದು ಹೇಳಿದ್ದಾನ ಯಾವ ಹುಡುಗಿ ಹೆಸರು ಹೇಳಿರಬಹುದು ಅಂತ ಯೋಚನೆ ಮಾಡುತ್ತಿದ್ದೆ. ಮತ್ತೊಂದು ರೌಂಡ್‌ ಬಂದರು ಲಿಸ್ಟ್ ತೆಗೆದು ಯೋಚನೆ ಮಾಡುತ್ತಿದ್ದೀಯಾ ಅಂದ್ರು. ಆ ಕ್ಷಣಕ್ಕೆ ನಾನು ಅವರಿಗೆ ಏನೋ ಪವರ್ ಇದೆ ಎಂದು ಅವರಿಗೆ ಸರೆಂಡರ್ ಆಗಿಬಿಟ್ಟೆ. ತುಂಬಾ ಫ್ರೆಂಡ್ಲಿಯಾಗಿ ಮಾತನಾಡಿಸುತ್ತಾರೆ ಯಾರು ಏನೇ ಕೊಟ್ಟರೂ ನಮಗೆ ಕೊಡುತ್ತಿದ್ದರು’ ಎಂದಿದ್ದಾರೆ ಅರುಣ್.

Continue Reading

ಟಾಲಿವುಡ್

Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ!

Megastar Chiranjeevi: ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

VISTARANEWS.COM


on

Actor Chiranjeevi gets flak for ‘rudely’ pushing IndiGo employee
Koo

ಬೆಂಗಳೂರು: ನಾಗಾರ್ಜುನ ಮತ್ತು ಧನುಷ್ ಬಳಿಕ ವಿಮಾನ ನಿಲ್ದಾಣದಲ್ಲಿ ನಟ ಚಿರಂಜೀವಿ (Actor Chiranjeevi) ಅವರು ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನು ತಳ್ಳಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಇದೀಗ ನಟನ ಈ ನಡವಳಿಕೆ ಬಗ್ಗೆ ನೆಟ್ಟಿಗರು ಕಮೆಂಟ್‌ ಮೂಲಕ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೊ ಕೂಡ ಭಾರಿ ವೈರಲ್‌ ಆಗುತ್ತಿದೆ.

ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ” ವಿಮಾನ ನಿಲ್ದಾಣದಲ್ಲಿ ಚಿರಂಜೀವಿ ಅಸಭ್ಯ ವರ್ತನೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರನ್ನು ನಟನನ್ನು ಸಮರ್ಥಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳನ್ನು ನಿರ್ಲಕ್ಷಿಸಿರುವುದು, ತಳ್ಳಿರುವುದು ಇದೇ ಮೊದಲಲ್ಲ. ಇತ್ತೀಚೆಗೆ, ನಾಗಾರ್ಜುನ ವಿಚಾರದಲ್ಲಿಯೂ ಇದೇ ಆಯ್ತು. ತಳ್ಳಿದ ವೀಡಿಯೊ ವೈರಲ್ ಆಗಿತ್ತು. ಬಳಿಕ ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದರು.

ಚಿರಂಜೀವಿ ಶೀಘ್ರದಲ್ಲೇ ಮಲ್ಲಾಡಿ ವಸಿಷ್ಠ ಅವರ ʻವಿಶ್ವಂಭರʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಅಲ್ಲಿ ತ್ರಿಶಾ ಕೃಷ್ಣನ್ ಸಹನಟಿಯಾಗಲಿದ್ದಾರೆ. ಅವರು ಇತ್ತೀಚೆಗೆ ರಾಮ್ ಚರಣ್, ಉಪಾಸನಾ, ಕ್ಲಿನ್ ಕಾರಾ ಮತ್ತು ಸುರೇಖಾ ಅವರೊಂದಿಗೆ ಪ್ಯಾರಿಸ್‌ನಲ್ಲಿ 2024 ರ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ‘ವಿಶ್ವಂಭರ’ ಸಿನಿಮಾಗೆ ತ್ರಿಷಾ ನಾಯಕಿ!

ವಿಶ್ವಂಭರ’ ಸಿನಿಮಾದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಆರಂಭವಾಗಿದ್ದು, ಶೂಟಿಂಗ್‌ ಭರದಿಂದ ಸಾಗುತ್ತಿದೆ ಎನ್ನಲಾಗಿದೆ.ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ ಜತೆ ತ್ರಿಶಾ ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದರು. ತ್ರಿಶಾ ಅವರು ಚಿರಂಜೀವಿ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. 18 ವರ್ಷಗಳ ನಂತರ ಮೆಗಾಸ್ಟಾರ್ ಅವರೊಂದಿಗೆ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಮಲ್ಲಿಡಿ ವಸಿಷ್ಠ ಅವರು ಬರೆದು ನಿರ್ದೇಶಿಸಿದ ‘ವಿಶ್ವಂಭರ’ ಒಂದು ಸೋಷಿಯೋ-ಫ್ಯಾಂಟಸಿ ಚಿತ್ರವಾಗಿದ್ದು, ಚಿರಂಜೀವಿ ಮುಖ್ಯ ಪಾತ್ರದಲ್ಲಿದ್ದಾರೆ. ವರದಿಗಳ ಪ್ರಕಾರ, ‘ವಿಶ್ವಂಭರ’ ಚಿತ್ರವನ್ನು ಯುವಿ ಕ್ರಿಯೇಷನ್ಸ್‌ 250 ಕೋಟಿ ರೂಪಾಯಿಗೂ ಹೆಚ್ಚು ಬಜೆಟ್‌ನಲ್ಲಿ ನಿರ್ಮಿಸಲಿದೆ ಎನ್ನಲಾಗಿದೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆ ಬರೆದರೆ, ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಚೋಟಾ ಕೆ ನಾಯ್ಡು ಛಾಯಾಗ್ರಹಣ ಸಿನಿಮಾಕ್ಕಿದೆ.

ಸಿನಿಮಾಗಾಗಿ ಚಿರಂಜೀವಿ ಅವರು ಸಖತ್‌ ವರ್ಕೌಟ್‌ ಮಾಡುತ್ತಿದ್ದಾರೆ. 2023ರಲ್ಲಿ `ಭೋಲಾ ಶಂಕರ’ ಸಿನಿಮಾ ರಿಲೀಸ್‌ ಆಗಿತ್ತು. ಆದರೆ ಸಿನಿಮಾ ಗಳಿಕೆ ಕಂಡಿರಲಿಲ್ಲ. ಇದೀಗ ವಿಶಿಷ್ಟ ಪಾತ್ರದ ಮೂಲಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಚಿರಂಜೀವಿ ಅವರನ್ನು ಹೊರತುಪಡಿಸಿ ಉಳಿದ ಪಾತ್ರಗಳಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿಲ್ಲ. ಇದಲ್ಲದೇ ಚಿರಂಜೀವಿ ಅವರು ಬೋಯಪತಿ ಶ್ರೀನು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ.

Continue Reading

ಟಾಲಿವುಡ್

Vanitha Vijaykumar: 43 ವರ್ಷದ ನಟಿ ವನಿತಾ ವಿಜಯಕುಮಾರ್ 4ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು?

Vanitha Vijaykumar: ನಟಿ ಈ ಹಿಂದೆ ಮೂರು ಬಾರಿ ಮದುವೆಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ವನಿತಾ ಅವರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮದುವೆ ಬಗ್ಗೆ ಪ್ರಶ್ನೆ ಕೇಳಿರುವ ಅಭಿಮಾನಿಯೊಬ್ಬರಿಗೆ, “ಒಂದು ಅನಿರೀಕ್ಷಿತ ತಿರುವಿಗಾಗಿ ಕಾಯಿರಿ” ಎಂದು ವನಿತಾ ಉತ್ತರಿಸಿದ್ದಾರಂತೆ!

VISTARANEWS.COM


on

Vanitha Vijaykumar Set To Tie The Knot Again
Koo

ಬೆಂಗಳೂರು: ವನಿತಾ ವಿಜಯಕುಮಾರ್ (Vanitha Vijaykumar) ತಮಿಳಿನ ಜನಪ್ರಿಯ ಹಿರಿಯ ನಟ ವಿಜಯಕುಮಾರ್ ಅವರ ಪುತ್ರಿ. ಅಷ್ಟೇ ಅಲ್ಲದೇ ಇತ್ತೀಚೆಗೆ ನರೇಶ್‌-ಪವಿತ್ರಾ ಲೋಕೇಶ್‌ ಅಭಿನಯ ಮತ್ತೆ ಮದುವೆ ಸಿನಿಮಾದಲ್ಲಿ ರಮ್ಯಾ ಅವರ ಪಾತ್ರ ನಿಭಾಯಿಸಿರುವ ನಟಿ. ವನಿತಾ ವಿಜಜ್‌ಕುಮಾರ್ ಹಲವು ಸಿನಿಮಾಗಳಿಗೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದರು. ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.ಆದರೆ ನಟನೆಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿ ವನಿತಾ ವಿಜಯಕುಮಾರ್ ಅವರು ನಾಲ್ಕನೇ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ನಟಿ ಈ ಹಿಂದೆ ಮೂರು ಬಾರಿ ಮದುವೆಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ವನಿತಾ ಅವರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮದುವೆ ಬಗ್ಗೆ ಪ್ರಶ್ನೆ ಕೇಳಿರುವ ಅಭಿಮಾನಿಯೊಬ್ಬರಿಗೆ, “ಒಂದು ಅನಿರೀಕ್ಷಿತ ತಿರುವಿಗಾಗಿ ಕಾಯಿರಿ” ಎಂದು ವನಿತಾ ಉತ್ತರಿಸಿದ್ದಾರಂತೆ!

ಎರಡೂ ಮದುವೆಗಳು ಅಂತ್ಯ!

ಒಮ್ಮೆ ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ಜತೆ ಪ್ರೀತಿಯಲ್ಲಿದ್ದರು. ಆದರೆ, ಈ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರೂ ತಮ್ಮ ಸಂಬಂಧವನ್ನು ಜಗಳದಲ್ಲಿಯೇ ಅಂತ್ಯಗೊಳಿಸುತ್ತಾರೆ. ಬಳಿಕ ಪೀಟರ್ ಪೌಲ್‌ ಜತೆ ವಿವಾಹವಾದರೂ, ಅದು ಕೂಡ ಬೇಗನೇ ಕೊನೆ ಆಯ್ತು. ಪೀಟರ್ (vanitha vijayakumar husband peter paul) ಮದುವೆಯನ್ನು ಮೊದಲ ಪತ್ನಿ ತೀವ್ರ ವಿರೋಧಿಸಿದ್ದರು. ವನಿತಾ ಜತೆ ಮದುವೆಯಾಗಿದ್ದೇ ಗೊತ್ತಿಲ್ಲ ಎಂದು ಮೊದಲ ಪತ್ನಿ ಬೀದಿ ರಂಪ ಮಾಡಿದ್ದರು.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

ವನಿತಾ ವಿಜಯಕುಮಾರ್ ತನ್ನ ಕುಟುಂಬದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿಲ್ಲ. ತಂದೆ ವಿಜಯಕುಮಾರ್ ಮತ್ತು ಆಕೆಯ ಸಹೋದರ ಅರುಣ್ ವಿಜಯ್ ಈ ನಟನಿಂದ ದೂರವೇ ಉಳಿಸಿದ್ದಾರೆ.

2000ರಲ್ಲಿ, ವನಿತಾ ವಿಜಯ್‌ಕುಮಾರ್ ಅವರು ನಟ ಆಕಾಶ್ ಅವರೊಂದಿಗೆ ಮದುವೆಯಾದರು. ಈ ದಂಪತಿಗೆ ಮಗ ಕೂಡ ಇದ್ದ. ಆದರೆ 2005ರಲ್ಲಿ ವಿಚ್ಛೇದನ ಪಡೆದು ಆಕಾಶ್ ಅವರಿಂದ ದೂರವಾದರು. ನಂತರ 2007ರಲ್ಲಿ ಉದ್ಯಮಿ ಆನಂದ್ ಜಯ್ ರಾಮನ್ ಎಂಬುವವರ ಜೊತೆಗೆ ವನಿತಾ ಎರಡನೇ ಮದುವೆಯಾದರು. ಆದರೆ 2012ರಲ್ಲಿ ಅವರೊಂದಿಗೂ ಹೊಂದಾಣಿಕೆ ಕೊರತೆಯಿಂದ ದಾಂಪತ್ಯಕ್ಕೆ ಕೊನೆ ಹಾಡಿದರು. ಬಳಿಕ 2020ರಲ್ಲಿ ಫೋಟೋಗ್ರಾಫರ್ ಪೀಟರ್ ಪೌಲ್‌ ಮದುವೆಯಾದರು. ಆದರೆ ನಾಲ್ಕೇ ತಿಂಗಳಲ್ಲಿ ಈ ಮದುವೆ ಕೂಡ ಮುರಿದುಬಿತ್ತು.

ತ್ಯಾಗರಾಜನ್ ನಿರ್ದೇಶನದಲ್ಲಿ ತಯಾರಾದ ಅಂದಗನ್ ಎಂಬ ತಮಿಳು ಚಿತ್ರದಲ್ಲಿ ವನಿತಾ ನಟಿಸುತ್ತಿದ್ದಾರೆ. ಇದರಲ್ಲಿ ಪ್ರಶಾಂತ್ ನಾಯಕನಾಗಿ ಸಿಮ್ರಾನ್, ಪ್ರಿಯಾ ಆನಂದ್, ಕಾರ್ತಿಕ್ ಮತ್ತು ಸಮುದ್ರಕನಿ ನಟಿಸಿದ್ದಾರೆ. ಈ ಚಿತ್ರವನ್ನು ಸ್ಟಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಾಂತಿ ತ್ಯಾಗರಾಜನ್ ಮತ್ತು ಪ್ರೀತಿ ತ್ಯಾಗರಾಜನ್ ನಿರ್ಮಿಸಿದ್ದಾರೆ.

Continue Reading
Advertisement
Pakistani Army
ದೇಶ4 mins ago

ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

shiradi landslide
ಹಾಸನ17 mins ago

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Actor Darshan siddharudha life journey book sent to Darshan
ಸ್ಯಾಂಡಲ್ ವುಡ್19 mins ago

Actor Darshan: ನಟ ದರ್ಶನ್‌ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ರವಾನೆ

Paris Olympics Boxing
ಕ್ರೀಡೆ28 mins ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

sri reddy me too fame telugu actress post goes viral
ಟಾಲಿವುಡ್39 mins ago

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

soldier death mandya
ಮಂಡ್ಯ54 mins ago

Soldier Death: ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಯೋಧ ಮೃತ್ಯು

Khaled Meshaal
ವಿದೇಶ57 mins ago

Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

Anshuman Gaekwad
ಕ್ರೀಡೆ1 hour ago

Anshuman Gaekwad: ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Actor Jaggesh tears after seeing the current state of Kannada film industry
ಸಿನಿಮಾ1 hour ago

Actor Jaggesh: ಕನ್ನಡ ಚಿತ್ರರಂಗದ ಈಗಿನ ಸ್ಥಿತಿಗತಿ ಕಂಡು ಕಣ್ಣೀರಿಟ್ಟ ನವರಸ ನಾಯಕ ಜಗ್ಗೇಶ್‌!

LPG Price Hike
ವಾಣಿಜ್ಯ1 hour ago

LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌