Ranbir Kapoor, Alia Bhatt, and Yash in Nitesh Tiwari Ramayan Actor Yash: ರಾಮಾಯಣ ಆಧರಿಸಿದ ಸಿನಿಮಾದಲ್ಲಿ ರಣಬೀರ್‌, ಆಲಿಯಾ; ರಾಕಿಂಗ್‌ ಸ್ಟಾರ್‌ ಯಶ್‌ ಪಾತ್ರವೇನು? - Vistara News

South Cinema

Actor Yash: ರಾಮಾಯಣ ಆಧರಿಸಿದ ಸಿನಿಮಾದಲ್ಲಿ ರಣಬೀರ್‌, ಆಲಿಯಾ; ರಾಕಿಂಗ್‌ ಸ್ಟಾರ್‌ ಯಶ್‌ ಪಾತ್ರವೇನು?

ಈ ಚಿತ್ರದಲ್ಲಿ ಈ ಚಿತ್ರದಲ್ಲಿ ರಣಬೀರ್, ಆಲಿಯಾ ಭಟ್ ಹಾಗೂ ಯಶ್ (Actor Yash) ನಟಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಸಿನಿಮಾ ಡಿಸೆಂಬರ್ ವೇಳೆಗೆ ಸೆಟ್ಟೇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Ranbir Kapoor, Alia Bhatt,
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ನಿರ್ದೇಶಕ ನಿತೇಶ್ ತಿವಾರಿ ರಾಮಾಯಣ ಆಧರಿಸಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿತ್ತು. ರಾವಣನ ಪಾತ್ರವನ್ನು ನಿರ್ವಹಿಸುವ ನಟನನ್ನು ನಿರ್ದೇಶಕರು ಹುಡುಕಲು ಸಾಧ್ಯವಾಗದ ಕಾರಣ ಈ ಪ್ರಾಜೆಕ್ಟ್‌ ನಿಧಾನ ಗತಿಯಲ್ಲಿ ಸಾಗಿತ್ತು ಎನ್ನಲಾಗಿದೆ. ಇದೀಗ ಈ ಚಿತ್ರದಲ್ಲಿ ಈ ಚಿತ್ರದಲ್ಲಿ ರಣಬೀರ್, ಆಲಿಯಾ ಭಟ್ ಹಾಗೂ ಯಶ್ (Actor Yash) ನಟಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಸಿನಿಮಾ ಡಿಸೆಂಬರ್ ವೇಳೆಗೆ ಸೆಟ್ಟೇರಲಿದೆ ಎಂದು ವರದಿಯಾಗಿದೆ.

ಕಳೆದ ಕೆಲವು ವಾರಗಳಿಂದ ರಣಬೀರ್ ಮತ್ತು ಆಲಿಯಾ ಇಬ್ಬರೂ ಅನಿಮೇಷನ್​ ಸ್ಟುಡಿಯೋ ಡಿಎನ್​ಇಜಿಗೆ ಭೇಟಿ ನೀಡಿದ್ದಾರೆ. ರಾಮಾಯಣ ಕೆಲಸದ ಪ್ರೊಗ್ರೆಸ್ ವೀಕ್ಷಿಸಲು ಅವರು ಅಲ್ಲಿಗೆ ಭೇಟಿ ನೀಡಿದ್ದರು. ರಣಬೀರ್ ಕಪೂರ್ ಅವರ ಲುಕ್​ ಟೆಸ್ಟ್ ನಡೆಯಬೇಕಷ್ಟೆ. ಇದರ ಜತೆ ನಿತೇಶ್ ತಿವಾರಿ ಕಚೇರಿಗೂ ಅವರು ಭೇಟಿ ನೀಡಿದ್ದಾರೆ’ ಎಂದು ಮೂಲಗಳು ಹೇಳಿರುವುದಾಗಿ ಪಿಂಕ್​ವಿಲ್ಲಾ ವರದಿ ಮಾಡಿದೆ.

ಈಗಾಗಲೇ ಪಾತ್ರವರ್ಗ ಕೂಡ ಫಿಕ್ಸ್‌ ಆಗಿದ್ದು, ರಣಬೀರ್ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಆಲಿಯಾ ಭಟ್ ಸೀತೆ ಪಾತ್ರವನ್ನು ನಿಭಾಯಸಿಲಿದ್ದಾರೆ ಎನ್ನಲಾಗಿದೆ. ಚಿತ್ರತಂಡ ದೀಪಾವಳಿ ಹೊತ್ತಿಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ: Actor Yash: ಅಭಿಷೇಕ್‌ ದಂಪತಿಗೆ ವಿಶ್‌ ಮಾಡಿದ ಯಶ್‌ -ರಾಧಿಕಾ; ಸೈಲಿಶ್‌ ಆಗಿ ಕಂಡ ರಾಕಿ ಭಾಯ್!

ರಾವಣನ ಪಾತ್ರ ನಿಭಾಯಿಸಲಿದ್ದಾರಾ ಯಶ್‌?

ಜನವರಿ 28 ರಂದು, ನಿತೇಶ್ ತಿವಾರಿ ಮತ್ತು ಮಧು ಮಂತೇನಾ ರಾವಣನ ಪಾತ್ರದಲ್ಲಿ ನಟಿಸಲು ಯಶ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪಿಂಕ್ವಿಲ್ಲಾ ಮೊದಲು ವರದಿ ಮಾಡಿತ್ತು. ಕಳೆದ ಎಂಟು ತಿಂಗಳಿನಿಂದ ಸಂಭಾಷಣೆಗಳು ನಡೆಯುತ್ತಿವೆ ಎಂದು ಮೂಲವು ಹಂಚಿಕೊಂಡಿದೆ. ರಾಮಾಯಣದ ಹೊರತಾಗಿ, ಯಶ್ ಕೂಡ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರೊಂದಿಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಯಶ್‌ ಅವರು ಸಿನಿಮಾಗೆ ಅಧಿಕೃತವಾಗಿ ಸಹಿ ಹಾಕುವುದು ಅಷ್ಟೇ ಬಾಕಿ ಇದೆ ಎನ್ನಲಾಗುತ್ತಿದೆ. ಈ ಮೊದಲು ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಅಪ್​ಡೇಟ್ ಸಿಕ್ಕಿಲ್ಲ.

ಈ ಸಿನಿಮಾವನ್ನು ಅಲ್ಲು ಅರವಿಂದ್, ಮಧು ಮಂತೇನಾ ಮತ್ತು ನಮಿತ್ ಮಲ್ಹೋತ್ರಾ ನಿರ್ಮಿಸಲಿದ್ದು, ನಿತೇಶ್ ತಿವಾರಿ ಮತ್ತು ರವಿ ಉದ್ಯಾವರ್ ನಿರ್ದೇಶಕರಾಗಿದ್ದಾರೆ. 2023ರ ಡಿಸೆಂಬರ್ /2024ರ ಜನವರಿಯಲ್ಲಿ ಸಿನಿಮಾ ಸೆಟ್ಟೇರುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Kannada New Movie: ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie anartha cinema teaser Out
Koo

ಬೆಂಗಳೂರು: ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ (Kannada New Movie) ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೊದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೀಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು ʻʻಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಒಂದು ಮಟ್ಟಕ್ಕೆ ಪ್ರೀತಿಸಿರುತ್ತಾರೆ. ನಾವುಗಳು ಬ್ರೇಕ್‌ಅಪ್ ಎನ್ನುವ ಪದವನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಿದ ನಂತರ, ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ. ನೋಡುಗರಿಗೆ ಊಹಿಸಲಾಗದ ತಿರುವುಗಳಿವೆ. ಕ್ಲೈಮಾಕ್ಸ್‌ದಲ್ಲಿ ಹೀಗೂ ಆಗಬಹುದು ಎನ್ನುವಲ್ಲಿಗೆ ಶುಭಂ ಬರುತ್ತದೆ. ನಮ್ಮ ಚಿತ್ರವು ಎಲ್ಲಾ ಕಮರ್ಷಿಯಲ್ ಸಿನಿಮಾಗಳ ಅಂಶಗಳನ್ನು ಹೊಂದಿದ್ದರೂ, ಒಂದು ಅಂಶವು ಖಂಡಿತ ಭಿನ್ನವಾಗಿದೆ. ಅದನ್ನು ತಿಳಿಯಲು ನೀವುಗಳು ಚಿತ್ರಮಂದಿರಕ್ಕೆ ಬನ್ನಿರೆಂದುʼʼ ಕೋರಿದರು.



ನಾಯಕನಾಗಬೇಕೆಂದು ಆಸೆ ಪಟ್ಟಿದ್ದೆ. ಉದ್ಯಮದಲ್ಲಿ ಯಶಸ್ಸು ಕಂಡು, ಈಗ ತೇಜಸ್ ಸಿನಿ ಕ್ರಿಯೇಶನ್ಸ್ ಮೂಲಕ ನಿರ್ಮಾಪಕನಾಗಿದ್ದೇನೆ ಎನ್ನುತ್ತಾರೆ ಶ್ರೀಧರ್.ಎನ್.ಸಿ.ಹೊಸಮನೆ. ನಟ ಮಂಡ್ಯರಮೇಶ್ ಬಳಿ ತರಭೇತಿ ಪಡೆದುಕೊಂಡಿರುವ ವಿಶಾಲ್ ಮಣ್ಣೂರು ನಾಯಕ. ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮಂಡ್ಯದ ವಿಹಾನಿ, ಕಿರುಚಿತ್ರಗಳಲ್ಲಿ ನಟಿಸಿ, ಈಗ ನಾಯಕಿಯಾಗಿ ಬಡ್ತಿಗೊಂಡಿದ್ದಾರೆ. ಉಳಿದಂತೆ ಸಿ.ವಿಜಯ್‌ಕುಮಾರ್, ರಕ್ಷಿತ್, ಗಣೇಶ್, ಪ್ರಸನ್ನ ಬಾಗೀನ, ಅರ್ಪಿತ ಮುಂತಾದವರು ನಟಿಸಿದ್ದಾರೆ.

ಸಾಹಿತ್ಯ-ಸಂಗೀತ ಡಾ.ವಿ.ನಾಗೇಂದ್ರಪ್ರಸಾದ್, ಛಾಯಾಗ್ರಹಣ ಕುಮಾರ್‌ಗೌಡನಾಗವಾರ, ಸಂಕಲನ ನಿಷಿತ್‌ಪೂಜಾರಿ-ವಿನಯ್, ಹಿನ್ನಲೆ ಶಬ್ದ ನಿತಿನ್, ಸಾಹಸ ಕುಂಗು ಫು ಚಂದ್ರು ಅವರದಾಗಿದೆ. ವಿತರಕ ಎಂ.ರಮೇಶ್ ಒಡೆತನದ ಅಕ್ಷರ ಫಿಲಿಂಸ್ ಮುಖಾಂತರ ಚಿತ್ರವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಟಾಲಿವುಡ್

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Kalki 2898 AD:  ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Kalki 2898 AD Keerthy Suresh Lends Her Voice To Bujji Car
Koo

ಬೆಂಗಳೂರು: ಇತ್ತೀಚೆಗೆ ಟಾಲಿವುಡ್‌ ನಟ ಪ್ರಭಾಸ್‌ ಅವರು ಡಾರ್ಲಿಂಗ್ಸ್‌(ಫ್ಯಾನ್ಸ್)ಗೆ (Kalki 2898 AD) ಸರ್‌ಪ್ರೈಸ್ ನ್ಯೂಸ್ ಇದೆ ಎಂದು ಇನ್‌ಸ್ಟಾ ಪೋಸ್ಟ್‌ ಮಾಡಿದ್ದರು. ಇದಾದ ಬಳಿಕ ಕೆಲವರು ಪ್ರಭಾಸ್ ಮದುವೆ ಫಿಕ್ಸ್ ಎಂದು ಕಮೆಂಟ್‌ ಮಾಡಿದ್ದರು. ಕೆಲವೇ ಕ್ಷಣಗಳಲ್ಲಿ ಪ್ರಭಾಸ್‌ ಮದುವೆ ಬಗ್ಗೆ ಹೇಳುತ್ತಿಲ್ಲ. ಸಿನಿಮಾ ಬಗ್ಗೆಯೇ ಪೋಸ್ಟ್‌ ಮಾಡಿರುತ್ತಾರೆ ಎಂದು ಕಮೆಂಟ್‌ ಮಾಡಿದ್ದರು. ಅದರಂತೆ ಈಗ ಆ ವಿಶೇಷ ವ್ಯಕ್ತಿ ಯಾರು ಎನ್ನುವುದು ಈಗ ರಿವೀಲ್ ಆಗಿದೆ. ಸದ್ಯ ಚಿತ್ರದ ʻಬುಜ್ಜಿʼ ಎನ್ನುವ ಪಾತ್ರವನ್ನು ಪರಿಚಯಿಸಲಾಗಿದೆ. ʻಬುಜ್ಜಿʼ ಎನ್ನುವುದು ಒಂದು ಸಣ್ಣ ರೋಬೊ. ಸದಾ ಚಿತ್ರದ ನಾಯಕ ಭೈರವನ ಜತೆಗಿರುವ ಪಾತ್ರ. ಬುಜ್ಜಿಗೆ ನಟಿ ಕೀರ್ತಿ ಸುರೇಶ್ ವಾಯ್ಸ್ ಕೊಟ್ಟಿದ್ದಾರೆ. ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ.  ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿಯೇ ಪ್ರಭಾಸ್​ ಅವರು ಆ ರೀತಿ ಪೋಸ್ಟ್​ ಮಾಡಿದ್ದರು. 

ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ. ಅದಲ್ಲಿ ಬುಜ್ಜಿ “ನನ್ನ ಜೀವನವೇನು? ‘ದೇಹ ಇಲ್ಲದೇ ಹೀಗೆ ಬದುಕಬೇಕಾ?” ಎಂದು ಕೇಳುತ್ತದೆ. ಅಷ್ಟರಲ್ಲಿ ಪ್ರಭಾಸ್ ಎಂಟ್ರಿ ಆಗುತ್ತದೆ. ಬುಜ್ಜಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮೇ 22 ರವರೆಗೆ ಕಾಯಬೇಕು ಎಂದು ಚಿತ್ರತಂಡ ಟ್ವಿಸ್ಟ್ ಕೊಟ್ಟಿದೆ. ಬಹಳ ಸ್ಮಾರ್ಟ್ ಆಗಿರುವ ಬುಜ್ಜಿಗೆ ವಾಹನ ಇರಲಿದೆ. ವಾಹನ ಹೇಗೆ ಸಿದ್ದ ಪಡಿಸಿಲಾಗಿತ್ತು ಎನ್ನುವ ಮೇಕಿಂಗ್‌ ವಿಡಿಯೊ ಇದು. ಮೇ 22ಕ್ಕೆ ಆ ವಾಹನದ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ. ನಟಿ ಕೀರ್ತಿ ಸುರೇಶ್ ವಾಯ್ಸ್ ಬುಜ್ಜಿಗೆ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ನಟಿಯರು ವಾಯ್ಸ್ ಕೊಡಲಿದ್ದಾರೆ. ಕನ್ನಡದಲ್ಲಿ ಯಾರು ಡಬ್ ಮಾಡುತ್ತಾರೆ ಎನ್ನುವ ಮಾಹಿತಿ ತಿಳಿದು ಬಂದಿಲ್ಲ.

ಇದನ್ನೂ ಓದಿ: Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading

ಸ್ಯಾಂಡಲ್ ವುಡ್

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇವರು ಧರಿಸಿರುವ ಅನಾರ್ಕಲಿ ಗೌನ್‌ ವಿಶೇಷತೆ ಏನು? ಇಲ್ಲಿದೆ ಒಂದಿಷ್ಟು ಟಿಪ್ಸ್.

VISTARANEWS.COM


on

Milana Nagaraj Anarkali border gown worn
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಆಕರ್ಷಕವಾಗಿ ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಮಹಿಳೆಯರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಮಿಲನಾ ನಾಗರಾಜ್‌ ಈಗ ಗರ್ಭಿಣಿ.
ಈಗಷ್ಟೇ ವಿದೇಶದಲ್ಲಿ ಬೇಬಿ ಮೂನ್‌ ಮುಗಿಸಿ ಪತಿ ಡಾರ್ಲಿಂಗ್‌ ಕೃಷ್ಣ ಅವರೊಂದಿಗೆ ಮರಳಿರುವ ಮಿಲನಾ ಅವರು ನಾನಾ ಇವೆಂಟ್‌ನಲ್ಲಿ ಒಂದಲ್ಲ ಒಂದು ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಬೇಬಿ ಬಂಪ್‌ ಹೈಲೈಟಾಗದಂತೆ ಡ್ರೆಸ್‌ಗಳನ್ನು ಧರಿಸುತ್ತಾರೆ. ಡೀಸೆಂಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದು ಫ್ಯಾಷನ್‌ ವಿಮರ್ಶಕರ ಪ್ರಶಂಸೆಗೂ ಒಳಗಾಗುತ್ತಿರುತ್ತಾರೆ.

ಅನಾರ್ಕಲಿ ಗೌನ್‌ನಲ್ಲಿ ಮಿಲನಾ ಸ್ಟೈಲ್‌ & ಸ್ಮೈಲ್‌:

“ಪ್ರೆಗ್ನೆಂಟ್‌ ಆಗಿರುವ ಮಿಲನಾ ನಾಗರಾಜ್‌ ಅವರ ಬೇಬಿ ಬಂಪ್‌ ಎಲ್ಲಿಯೂ ಹೈಲೈಟ್‌ ಆಗುತ್ತಿಲ್ಲ ಎನ್ನುವುದಕ್ಕಿಂತ ಅವರು ಧರಿಸುತ್ತಿರುವ ಉಡುಪುಗಳ ಡಿಸೈನ್‌ ಅಷ್ಟೊಂದು ನೀಟಾಗಿದೆ. ಅವರು ಧರಿಸಿರುವ ಒಂದೊಂದು ಔಟ್‌ಫಿಟ್‌ ಕೂಡ ಡಿಸೆಂಟ್‌ ಲುಕ್‌ ನೀಡುವುದರೊಂದಿಗೆ ಅವರಿಗೆ ಕಂಫರ್ಟಬಲ್‌ ಫೀಲ್‌ ನೀಡಿದೆ” ಎನ್ನುತ್ತಾರೆ ಫ್ಯಾಷನಿಸ್ಟಾಗಳು.

ಇದನ್ನೂ ಓದಿ: Milana Nagaraj: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಲವ್‌ ಮಾಕ್ಟೆಲ್‌ʼ ಜೋಡಿ!

ಗೋಲ್ಡನ್‌ ಅನಾರ್ಕಲಿ ಡಿಟೇಲ್ಸ್‌

ಎಥ್ನಿಕ್‌ವೇರ್‌ ಡಿಸೈನ್‌ಗಳಿಗೆ ಖ್ಯಾತಿ ಗಳಿಸಿರುವ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿಯವರ ಡಿಸೈನರ್‌ವೇರ್‌ ಇದು. ಕ್ರಶ್ಡ್‌ ಟಿಶ್ಯೂ ಮೆಟೀರಿಯಲ್‌ನ ಈ ಫ್ಯಾಬ್ರಿಕ್‌ ಅನಾರ್ಕಲಿ ವಿನ್ಯಾಸವನ್ನು ಒಳಗೊಂಡಿದೆ. ಮಿಲನಾಗೆ ಎಲಿಗೆಂಟ್‌ ಲುಕ್‌ ನೀಡಿರುವ ಈ ಅನಾರ್ಕಲಿ ಗೌನ್‌ಗೆ ಸ್ಲೀವ್‌ ಹಾಗೂ ಡಿಸೈನರ್‌ವೇರ್‌ ಕೆಳಗೆ ಇರುವ ಬಿಗ್‌ ಬಾರ್ಡರ್‌ ಕಂಪ್ಲೀಟ್‌ ಟ್ರೆಡಿಷನಲ್‌ ಲುಕ್‌ ನೀಡಿದೆ. ಇದರೊಂದಿಗೆ ಕಾಂಟ್ರಸ್ಟ್‌ ಶೇಡ್‌ನ ಬನಾರಸಿ ಬಾರ್ಡರ್‌ ಬಗೆಯ ಸೊಂಟದ ಪಟ್ಟಿ ಅಂದರೆ ಟೈಯಿಂಗ್‌ ಹ್ಯಾಂಡ್‌ ವರ್ಕ್‌ ಎಂಬ್ರಾಯ್ಡರಿ ಮಾಡಿರುವ ವೇಸ್ಟ್‌ ಬೆಲ್ಟ್‌ ಅಥವಾ ಕಮರ್‌ಬಾಂದ್‌ ಗೌನನ್ನು ಇನ್ನಷ್ಟು ಆಕರ್ಷಕವಾಗಿಸಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ರೆಡ್‌ ಪ್ಯೂರ್‌ ಅರ್ಗಾನ್ಜಾ ದುಪಟ್ಟಾ ಕೂಡ ಸಖತ್‌ ಲುಕ್‌ ನೀಡಿದೆ ಎಂದು ವಿವರಿಸುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿ. ಅವರ ಪ್ರಕಾರ, ಅನಾರ್ಕಲಿ ಡಿಸೈನ್‌ನಲ್ಲೂ ಟ್ರೆಡಿಷನಲ್‌ ಲುಕ್‌ ನೀಡಬಹುದು ಎನ್ನುವುದಕ್ಕೆ ಈ ಡಿಸೈನರ್‌ವೇರ್‌ ಸಾಕ್ಷಿ ಎನ್ನುತ್ತಾರೆ.

ಮಿಲನಾ ನಾಗರಾಜ್‌ ಆಕರ್ಷಕ ಲುಕ್‌

ನಟಿ ಮಿಲನಾ ನಾಗರಾಜ್‌ ಖಾಸಗಿ ಕಾರ್ಯಕ್ರಮಕ್ಕೆಂದು ಧರಿಸಿದ ಈ ಅನಾರ್ಕಲಿ ಗೌನ್‌ನ ಸ್ಟೈಲಿಂಗ್‌ ಸ್ಟೈಲಿಸ್ಟ್‌ಗಳಾದ ತೇಜು ಹಾಗೂ ಖುಷಿ ಮಾಡಿದ್ದಾರೆ. ಇನ್ನು, ವರಹಾ ಸಿಲ್ವರ್‌ ಜ್ಯುವೆಲರಿ ಧರಿಸಿರುವ ಮಿಲನಾ ಲೈಟ್‌ ಮೇಕಪ್‌ನಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಮಿಲನಾಗೆ ಈ ಡಿಸೈನರ್‌ವೇರ್‌ ಸಖತ್‌ ಇಷ್ಟವಾಗಿದೆಯಂತೆ. ಅದರಲ್ಲೂ ಟ್ರೆಡಿಷನಲ್‌ ಲುಕ್‌ ನೀಡುವ ಈ ಔಟ್‌ಫಿಟ್‌ ಲೈಟ್‌ವೈಟ್‌ ಆಗಿರುವುದು ಮತ್ತಷ್ಟು ಕಂಫರ್ಟಬಲ್‌ ಆಗಿಸಿದೆಯಂತೆ. ಯಾವುದೇ ಉಡುಪನ್ನು ನಾನು ಇಷ್ಟಪಟ್ಟು ಧರಿಸುತ್ತೇನೆ ಎನ್ನುತ್ತಾರೆ ಅವರು.

ಮಿಲನಾ ಎಲಿಗೆಂಟ್‌ ಫ್ಯಾಷನ್‌ ಮಂತ್ರ

ಈ ಹಿಂದೆ ವಿಸ್ತಾರ ನ್ಯೂಸ್‌ನ ಫ್ಯಾಷನ್‌ ಕುರಿತ ಸಂದರ್ಶನದಲ್ಲಿ ಮಿಲನಾ ಅವರೇ ಹೇಳಿದಂತೆ, ಯಾವುದೇ ಔಟ್‌ಫಿಟ್‌ ಹಾಗೂ ಡಿಸೈನರ್‌ವೇರ್‌ ಕಂಫರ್ಟಬಲ್‌ ಫೀಲ್‌ ನೀಡಿದಾಗ ತಂತಾನೇ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ. ನಮ್ಮ ಪರ್ಸನಾಲಿಟಿಗೆ ತಕ್ಕಂತೆ ಧರಿಸಿದಾಗ ಇನ್ನಷ್ಟು ಸುಂದರವಾಗಿ ಕಾಣುತ್ತದೆ ಎಂಬುದು ಸತ್ಯಕ್ಕೆ ಹತ್ತಿರ ಎಂಬುದು ತಿಳಿದು ಬರುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading
Advertisement
Sobhita Dhulipala golden new look from Cannes Film Festival
ಬಾಲಿವುಡ್3 mins ago

Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

IPL 2024 Man commits suicide after taking loan for IPL betting
ರಾಯಚೂರು10 mins ago

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

MLC Election
ಕರ್ನಾಟಕ13 mins ago

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

Kannada New Movie anartha cinema teaser Out
ಸ್ಯಾಂಡಲ್ ವುಡ್40 mins ago

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Air india
ದೇಶ45 mins ago

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Aishwarya Rai undergo surgery post her return from Cannes Film Festival
ಬಾಲಿವುಡ್2 hours ago

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

IPL 2024
ಐಪಿಎಲ್ 20242 hours ago

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

viral video
ವೈರಲ್ ನ್ಯೂಸ್2 hours ago

Viral Video: ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

Kalki 2898 AD Keerthy Suresh Lends Her Voice To Bujji Car
ಟಾಲಿವುಡ್2 hours ago

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Vijay Sethupathi Starrer Tamil Movie Teaser Released
ಕಾಲಿವುಡ್2 hours ago

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌