ರಣಬೀರ್​-ಅಲಿಯಾಗೆ ಉಜ್ಜಯನಿ ದೇಗುಲಕ್ಕೆ ಸಿಗಲಿಲ್ಲ ಪ್ರವೇಶ; 2011ರಲ್ಲಿ ರಣಬೀರ್​ ಆಡಿದ ಮಾತು ಕಾರಣ - Vistara News

ಬಾಲಿವುಡ್

ರಣಬೀರ್​-ಅಲಿಯಾಗೆ ಉಜ್ಜಯನಿ ದೇಗುಲಕ್ಕೆ ಸಿಗಲಿಲ್ಲ ಪ್ರವೇಶ; 2011ರಲ್ಲಿ ರಣಬೀರ್​ ಆಡಿದ ಮಾತು ಕಾರಣ

ಇನ್ನೆರಡು ದಿನಗಳಲ್ಲಿ ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಣಬೀರ್​ ಮತ್ತು ಅಲಿಯಾ ಉಜ್ಜಯಿನಿ ದೇಗುಲಕ್ಕೆ ಹೋಗಿದ್ದರು. ಆದರೆ ಎಷ್ಟೇ ಪ್ರಯತ್ನ ಪಟ್ಟರೂ ಒಳಗೆ ಹೋಗಲು ಸಾಧ್ಯವಾಗಲಿಲ್ಲ.

VISTARANEWS.COM


on

Ranbir Kapoor Alia stopped to Enter Ujjain temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೆಪ್ಟೆಂಬರ್​ 6ರಂದು ಮಧ್ಯಪ್ರದೇಶದ ಉಜ್ಜಯಿನಿ ದೇವಸ್ಥಾನಕ್ಕೆ ಆಗಮಿಸಿದ್ದ ಬಾಲಿವುಡ್​ ತಾರಾ ಜೋಡಿ ರಣಬೀರ್​ ಕಪೂರ್​-ಅಲಿಯಾ ಭಟ್​ಗೆ ದೇಗುಲ ಪ್ರವೇಶಕ್ಕೆ ಅವಕಾಶ ಸಿಗಲಿಲ್ಲ. ಅವರೆಷ್ಟೇ ಪ್ರಯತ್ನ ಪಟ್ಟರೂ ದೇವರ ದರ್ಶನ ಸಾಧ್ಯವಾಗಲಿಲ್ಲ. ಸ್ಥಳೀಯ ವಿಶ್ವ ಹಿಂದು ಪರಿಷತ್​ (ವಿಎಚ್​ಪಿ), ಭಜರಂಗ ದಳದ ನಾಯಕರು, ಪ್ರಮುಖರೆಲ್ಲ ಸೇರಿ ರಣಬೀರ್ (ranbir kapoor)​ ಮತ್ತು ಅಲಿಯಾರನ್ನು ಹೊರಗಡೆಯೇ ತಡೆದಿದ್ದಾರೆ. ಇವರ ಜತೆ ಹೋಗಿದ್ದ ನಿರ್ದೇಶಕ ಆಯನ್​ ಮುಖರ್ಜಿ ಅವರಿಗೆ ಮಾತ್ರ ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನದಲ್ಲಿ ಜ್ಯೋತಿರ್ಲಿಂಗ ದರ್ಶನ ಪಡೆಯಲು ಸಾಧ್ಯವಾಯಿತು.

ಅಂದು ನೀಡಿದ್ದ ಹೇಳಿಕೆಯೇ ಕಾರಣ !
ರಣಬೀರ್​ ಕಪೂರ್​ ಮತ್ತು ಅಲಿಯಾ ಭಟ್​ ಇಬ್ಬರೂ ಬ್ರಹ್ಮಾಸ್ತ್ರ ಸಿನಿಮಾ ಪ್ರಮೋಶನ್​​ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 9ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ದಂಪತಿ ಉಜ್ಜಯಿನಿ ದೇಗುಲಕ್ಕೆ ಭೇಟಿ ಕೊಟ್ಟಿದ್ದರು. ಜತೆಗೆ ಬ್ರಹ್ಮಾಸ್ತ್ರ ನಿರ್ದೇಶನ ಆಯನ್​ ಮುಖರ್ಜಿಯೂ ಇದ್ದರು. ಆದರೆ ರಣಬೀರ್​ ಹಿಂದೊಮ್ಮೆ ಆಡಿದ್ದ ಮಾತೇ ಈಗ ಅವರನ್ನು ತಡೆಯಲು ಕಾರಣವಾಯಿತು. ‘ನನಗೆ ನಾನ್​-ವೆಜ್​​ಗಳಲ್ಲಿ ಮಟನ್​, ಚಿಕನ್​ ಮತ್ತು ಗೋಮಾಂಸ (Beef) ತಿನ್ನಲು ಇಷ್ಟ’ ಎಂದು ವರ್ಷಗಳ ಹಿಂದೆ ರಣಬೀರ್​ ಕಪೂರ್​ ಹೇಳಿದ್ದಾರೆ. ಗೋಮಾಂಸ ತಿನ್ನುವವರಿಗೆ ಈ ಪವಿತ್ರ ದೇಗುಲ ಪ್ರವೇಶಿಸಲು ಅವಕಾಶ ಕೊಡುವುದಿಲ್ಲ’ ಎಂದು ಬಜರಂಗ ದಳದ ನಾಯಕ ಅಂಕಿತ್ ಚೌಬೆ ತಿಳಿಸಿದ್ದಾರೆ.

ರಣಬೀರ್ ಕಪೂರ್ ಮತ್ತು ಅಲಿಯಾ ಭಟ್​ ಉಜ್ಜಯಿನಿ ಮಹಾಕಾಲೇಶ್ವರ ದೇಗುಲಕ್ಕೆ ಬರುತ್ತಿದ್ದಂತೆ ವಿಎಚ್​ಪಿ ಮತ್ತು ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಇವರಿಬ್ಬರೂ ದೇವಾಲಯ ಪ್ರವೇಶ ಮಾಡಬಾರದು ಎಂದು ಒಂದೇ ಸಮ ಗಲಾಟೆ ಮಾಡಿದ್ದಾರೆ. ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆಗ ಪೊಲೀಸರ ಜತೆ ಕೂಡ ಕಾರ್ಯಕರ್ತರು ವಾಗ್ವಾದಕ್ಕೆ ಇಳಿದರು. ಕೆಲವರು ಹೊಡೆದಾಟಕ್ಕೂ ಮುಂದಾದರು ಎಂದು ಉಜ್ಜಯನಿ ಸಿಎಸ್​​ಪಿ ಓಂ ಪ್ರಕಾಶ್​ ಮಿಶ್ರಾ ತಿಳಿಸಿದ್ದಾರೆ. ಅಲಿಯಾ ಭಟ್​ ಒಬ್ಬಳು ಹಿಂದು ವಿರೋಧಿ ಮತ್ತು ರಣಬೀರ್ ಕಪೂರ್​ ಒಬ್ಬ ಗೋಮಾಂಸ ಸೇವನೆ ಮಾಡುವವ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಗುಲದ ಮುಂದೆ ನಡೆದ ಪ್ರತಿಭಟನೆಯ ವಿಡಿಯೋ ಕೂಡ ವೈರಲ್ ಆಗಿದೆ.

ಯಾವಾಗ ಹೇಳಿದ್ದರು ರಣಬೀರ್​ ಕಪೂರ್​?
ರಣಬೀರ್​ ಕಪೂರ್​ ತಮಗೆ ಗೋಮಾಂಸ ತಿನ್ನಲು ಇಷ್ಟವೆಂದು ಹೇಳಿದ್ದು ಇತ್ತೀಚೆಗಲ್ಲ, ಈಗೊಂದು 11 ವರ್ಷಗಳ ಹಿಂದೆ. ಅಂದರೆ 2011ರಲ್ಲಿ ಅವರ ರಾಕ್​​ಸ್ಟಾರ್​ ಸಿನಿಮಾ ಪ್ರಮೋಶನ್​ ವೇಳೆ ಮಾತನಾಡುತ್ತ, ‘ನಾನು ಮೂಲತಃ ಪೇಶಾವರದವನು. ನನ್ನ ಕುಟುಂಬದ ಮೂಲ ಅಲ್ಲಿಯೇ ಇದೆ. ಹೀಗಾಗಿ ಪೇಶಾವರಿ ಶೈಲಿಯ ಆಹಾರಗಳನ್ನು ನಾವು ಹೆಚ್ಚಾಗಿ ತಿನ್ನುತ್ತೇವೆ. ನನಗಂತೂ ಮಟನ್​, ಚಿಕನ್​ ಮತ್ತು ಬೀಫ್​ (ಗೋಮಾಂಸ) ತುಂಬ ಇಷ್ಟ’ ಎಂದಿದ್ದರು. ಇತ್ತೀಚೆಗೆ ಅವರ ಬ್ರಹ್ಮಾಸ್ತ್ರ ಸಿನಿಮಾ ರಿಲೀಸ್​ ದಿನಾಂಕ ಸಮೀಪಿಸುತ್ತಿದ್ದಂತೆ ಈ ವಿಡಿಯೋ ಮತ್ತೆ ವೈರಲ್ ಆಗಿತ್ತು. ಈಗಾಗಲೇ ರಣಬೀರ್​ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಅವರನ್ನು ಪೇಶಾವರದ ಬೀಫ್​ ಹುಡುಗ ಎಂದೂ ಸೋಷಿಯಲ್​ ಮೀಡಿಯಾಗಳಲ್ಲಿ ಜರಿಯಲಾಗುತ್ತಿದೆ.

ಇದನ್ನೂ ಓದಿ: ಬ್ರಹ್ಮಾಸ್ತ್ರ: ರಣಬೀರ್‌ ದೇವಸ್ಥಾನದೊಳಗೆ ಚಪ್ಪಲಿ ಹಾಕಿದನೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vicky Kaushal: ಛತ್ರಪತಿ ಸಂಭಾಜಿ ಮಹಾರಾಜ ಲುಕ್‌ನಲ್ಲಿ ವಿಕ್ಕಿ ಕೌಶಲ್; ಫೋಟೊ ಲೀಕ್‌!

Vicky Kaushal: ವಿಕ್ಕಿ ಕೌಶಲ್ ಕೂಡ ಈ ಸಿನಿಮಾಗಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

VISTARANEWS.COM


on

Vicky Kaushal transforms into Chhatrapati Sambhaji Maharaj
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ವಿಕ್ಕಿ ಕೌಶಲ್ ಅವರ ಛತ್ರಪತಿ ಸಂಭಾಜಿ ಮಹಾರಾಜ ಲುಕ್ (leaked pics from sets of Chhava) ಲೀಕ್ ಆಗಿದೆ. ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ʻಛಾವಾʼ ಸಿನಿಮಾದ ಎರಡನೇ ಶೆಡ್ಯೂಲ್‌ ಫೋಟೊಗಳು ಎಂದು ವರದಿಯಾಗಿದೆ. ಲೀಕ್ ಆದ ಫೋಟೊದಲ್ಲಿ ವಿಕ್ಕಿ ಉದ್ದನೆಯ ಗಡ್ಡವನ್ನು ಬಿಟ್ಟಿರುವುದು ಕಾಣಬಹುದು. ಬೀಜ್ ಸ್ಲೀವ್‌ಲೆಸ್ ಜಾಕೆಟ್, ತಿಳಿ ಕಂದು ಬಣ್ಣದ ಧೋತಿ ಮತ್ತು ಸಾಂಪ್ರದಾಯಿಕ ಪರಿಕರಗಳನ್ನು ಹಾಕಿಕೊಂಡಿದ್ದಾರೆ. ವಿಕ್ಕಿ ಈ ಹೊಸ ಅವತಾರ ಕಂಡು ಅವರ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ಇದನ್ನೂ ಓದಿ: Vicky Kaushal: ರಶ್ಮಿಕಾ ಜತೆ ರೊಮ್ಯಾನ್ಸ್‌ ಮಾಡಲು 25 ಕೆಜಿ ತೂಕ ಹೆಚ್ಚಿಸಿಕೊಳ್ಳಲಿದ್ದಾರೆ ವಿಕ್ಕಿ ಕೌಶಲ್!

ವಿಕ್ಕಿ ಕೌಶಲ್ ಕೂಡ ಈ ಸಿನಿಮಾಗಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಶ್ಮಿಕಾ ಈಗಾಗಲೇ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಧ್ವನಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು.

Continue Reading

ಬಾಲಿವುಡ್

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

Karan Johar: ಕರಣ್ ಜೋಹರ್ ಅವರು ಚಲನಚಿತ್ರ ನಿರ್ಮಾಪಕರಾದ ಯಶ್ ಜೋಹರ್ ಮತ್ತು ಹಿರೂ ಜೋಹರ್ ದಂಪತಿ ಪುತ್ರ. ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ್ದರು. ʻಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹೆನಾ’, ‘ಮೈ ನೇಮ್ ಇಸ್ ಖಾನ್’, ‘ಸ್ಟೂಡೆಂಟ್ ಆಫ್ ದಿ ಇಯರ್’ ಹೀಗೆ ಅನೇಕ ಹಿಟ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Karan Johar receives Director of the Year award from Vice President of India
Koo

ಬೆಂಗಳೂರು: ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ​​(AIMA)ನ ಒಂಬತ್ತನೇ ರಾಷ್ಟ್ರೀಯ ನಾಯಕತ್ವ ಸಮ್ಮೇಳನದಲ್ಲಿ ( National Leadership Conclave) ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar) ಅವರಿಗೆ ವರ್ಷದ ನಿರ್ದೇಶಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ( ‘Rocky Aur Rani Kii Prem Kahaani’.) ಚಿತ್ರಕ್ಕಾಗಿ ಭಾರತದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕರಣ್ ಜೋಹರ್ ಅವರಿಗೆ ಪ್ರಶಸ್ತಿಯನ್ನು ನೀಡಿದರು.

ಎಐಎಂಎ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಣ್ ದೆಹಲಿಗೆ ಬಂದಿದ್ದರು. ಪ್ರಶಸ್ತಿ ಸ್ವೀಕರಿಸದ ಬಳಿಕ ಕರಣ್ ತಮ್ಮ ಜೀವನದ ಎರಡು ಆಧಾರ ಸ್ತಂಭಗಳಾದ ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕರಣ್ ಮಾತನಾಡಿ “ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್ ಅವರನ್ನು ಭೇಟಿಯಾಗಿದ್ದು ನನ್ನ ಅದೃಷ್ಟ. ನಾನು ಇಂದು ಇಲ್ಲಿಗೆ ಬಂದು ಕುಳಿತುಕೊಳ್ಳಲು ಕಾರಣ ಆದಿತ್ಯ ಚೋಪ್ರಾ ಮತ್ತು ಶಾರುಖ್ ಖಾನ್‌ ಎಂಬ ಎರಡು ಆಧಾರ ಸ್ತಂಭಗಳು. ಇವರಿಬ್ಬರು ನನಗೆ ರಕ್ತಸಂಬಂಧಿಗಳೂ ಅಲ್ಲದೇ ಇದ್ದರೂ ನನ್ನನ್ನು ಬಲವಾಗಿ ನಂಬಿದ್ದರು. ಇಂದು ಇವರಿಬ್ಬರ ಸಪೋರ್ಟ್‌ ಮತ್ತು ನನ್ನ ಹಾರ್ಡ್‌ವರ್ಕ್‌ನಿಂದಾಗಿ ಇಲ್ಲಿಯವರೆಗೆ ಬಂದಿರುವೆ. ನಾನು ಅವರಿಗೆ ಯಾವಾಗಲೂ ಕೃತಜ್ಞರಾಗಿರುತ್ತೇನೆʼʼ ಎಂದರು.

ಇದನ್ನೂ ಓದಿ: Karan Johar: 28 ವರ್ಷಗಳ ಬಳಿಕ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ: ಕರಣ್ ಜೋಹರ್ ನಿರೂಪಕ!

ಕರಣ್ ಜೋಹರ್ ಅವರು ಚಲನಚಿತ್ರ ನಿರ್ಮಾಪಕರಾದ ಯಶ್ ಜೋಹರ್ ಮತ್ತು ಹಿರೂ ಜೋಹರ್ ದಂಪತಿ ಪುತ್ರ. ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ್ದರು. ʻಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹೆನಾ’, ‘ಮೈ ನೇಮ್ ಇಸ್ ಖಾನ್’, ‘ಸ್ಟೂಡೆಂಟ್ ಆಫ್ ದಿ ಇಯರ್’ ಹೀಗೆ ಅನೇಕ ಹಿಟ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಕರಣ್ ಜೋಹರ್ ಮುಂಬರುವ ಸಿನಿಮಾ ‘ಮಿಸ್ಟರ್ ಆ್ಯಂಡ್ ಮಿಸಸ್ ಮಹಿ’ ಮೇ 31 ರಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾನ್ವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಪ್ರಮುಖ ಪಾತ್ರದಲ್ಲಿ ಇದ್ದಾರೆ.

Continue Reading

ಬಾಲಿವುಡ್

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

OM Puri: ಸ್ಟಾರ್ ಆಗುವುದು ಸುಲಭವಲ್ಲ. ಇಂದಿನ ಎಷ್ಟೋ ಸ್ಟಾರ್ ಗಳು ಒಂದು ಕಾಲದಲ್ಲಿ ತುಂಬಾ ಕಷ್ಟ ಪಟ್ಟಿದ್ದರು. ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ಇವರಲ್ಲಿ ಓಂ ಪುರಿ ಕೂಡ ಒಬ್ಬರು. ಸ್ಟಾರ್ ಆಗುವ ಮೊದಲು ಅವರ ಬದುಕಿನ ಕಡುಕಷ್ಟದ ದಿನಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

OM Puri
Koo

ಎಷ್ಟೇ ದೊಡ್ಡ ಮನೆತನದಿಂದ ಬಂದಿರಲಿ ಚಿತ್ರರಂಗದಲ್ಲಿ (film industry) ತನ್ನ ಸ್ವಂತ ಪರಿಶ್ರಮವಿಲ್ಲದೆ ಸ್ಟಾರ್ (star) ಆಗಲು ಸಾಧ್ಯವೇ ಇಲ್ಲ. ಇವತ್ತಿನ ಹಲವಾರು ಸೂಪರ್ ಸ್ಟಾರ್ ಗಳು (super star) ಒಂದು ಕಾಲದಲ್ಲಿ ಬೀದಿ ಬದಿಯಲ್ಲಿ ಮಲಗಿದ್ದರು, ಸಣ್ಣಪುಟ್ಟ ಕೆಲಸಗಳನ್ನು ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು.

ಬಾಲಿವುಡ್ ನ (bollywood) ಶಾರುಖ್ ಖಾನ್ (Shah Rukh Khan) , ಅಮಿತಾಬ್ ಬಚ್ಚನ್ (Amitabh Bachchan) ಕೂಡ ಒಂದು ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಸಹಿಸಿಯೇ ಮೇಲಕ್ಕೆ ಏರಿದವರು. ಹೀಗೆಯೇ ಕಷ್ಟಪಟ್ಟು ಮನೆ ಮಾತಾಗಿರುವವರಲ್ಲಿ ಬಾಲಿವುಡ್ ನಲ್ಲಿ ವಿವಿಧ ಪಾತ್ರಗಳಿಂದ ಪ್ರಸಿದ್ದಿ ಪಡೆದ ನಟ ಓಂ ಪುರಿ (OM Puri) ಕೂಡ ಒಬ್ಬರು.

ಜನನ ದಾಖಲೆಯೇ ಇಲ್ಲ

ಹರಿಯಾಣದ ಅಂಬಾಲದಲ್ಲಿ ಜನಿಸಿದ್ದ ಓಂ ಪುರಿ ಅವರ ತಂದೆ ಟೆಕ್ ಚಂದ್ ಪುರಿ ಭಾರತೀಯ ಸೇನೆಯಲ್ಲಿದ್ದರು ಮತ್ತು ರೈಲ್ವೇಯಲ್ಲಿಯೂ ಕೆಲಸ ಮಾಡಿದ್ದರು. ಆದರೂ ಓಂ ಪುರಿ ಅವರು ಯಾವುದೇ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ. ಹೀಗಾಗಿ ಅವರ ಜನ್ಮ ದಿನಾಂಕದ ಬಗ್ಗೆ ಅವರ ಕುಟುಂಬಕ್ಕೆ ಖಚಿತವಾಗಿ ತಿಳಿದಿಲ್ಲ.

ದಸರಾ ಆರಂಭವಾದ ಎರಡು ದಿನಗಳ ಅನಂತರ ತಾನು ಜನಿಸಿರುವುದಾಗಿ ತಾಯಿ ಹೇಳುತ್ತಿದ್ದರು ಎನ್ನುತ್ತಾರೆ ಓಂ ಪುರಿ.

ಇದನ್ನೂ ಓದಿ: Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

ಸ್ವಂತ ಪರಿಶ್ರಮದಿಂದ ಖ್ಯಾತಿ

ಓಂಪುರಿ ಅವರ ಬಾಲ್ಯವು ತುಂಬಾ ಸುಲಭವಾಗಿರಲಿಲ್ಲ. ಇಂದು ನಾವು ಅವರ ಕುಟುಂಬದ ಬಗ್ಗೆ ಮಾತನಾಡುತ್ತೇವೆ. ಆದರೆ ಅವರು ಹಿಂದುಳಿದ ಹಿನ್ನೆಲೆಯಿಂದ ಬಂದು ದೊಡ್ಡ ಹೆಸರನ್ನು ತಮ್ಮ ಸ್ವಂತ ಪರಿಶ್ರಮದಿಂದಲೇ ಗಳಿಸಿದರು.
ಎಂಟು ಮಂದಿಯಲ್ಲಿ ಇಬ್ಬರು ಮಾತ್ರ ಬದುಕಿ ಉಳಿದರು.

ಓಂ ಪುರಿ ಅವರ ಎಂಟು ಸಹೋದರರು ಮತ್ತು ಸಹೋದರಿಯರಲ್ಲಿ ಕಿರಿಯರಾಗಿದ್ದರು. ದುರದೃಷ್ಟವಶಾತ್ ಅವರ ಎಲ್ಲಾ ಸಹೋದರರು ಮತ್ತು ಸಹೋದರಿಯರು ಬಾಲ್ಯದಲ್ಲೇ ಸರಿಯಾದ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ನಿಧನರಾದರು. ಅವರ ಹಿರಿಯ ಸಹೋದರ ವೇದ್ ಮತ್ತು ಪುರಿ ಮಾತ್ರ ಬದುಕುಳಿದರು.


ಕಷ್ಟದ ಜೀವನ

ತಂದೆ ರೈಲ್ವೇ ಉದ್ಯೋಗಿಯಾಗಿದ್ದಾಗ ಸಿಮೆಂಟ್ ಕಳ್ಳತನದ ಆರೋಪದಿಂದ ಜೈಲು ಸೇರಿದ್ದರು. ಇದರ ಬಳಿಕ ಅವರ ಕುಟುಂಬವು ನಿರಾಶ್ರಿತವಾಯಿತು. ಈ ಸಮಯದಲ್ಲಿ ಓಂ ಪುರಿ ಅವರ ಸಹೋದರ ವೇದ್ ಪ್ರಕಾಶ್ ಪುರಿ ರೈಲು ನಿಲ್ದಾಣಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಓಂ ಪುರಿ ಅವರು ಸ್ಥಳೀಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬವನ್ನು ಬೆಂಬಲಿಸಲು ಇವರು ರೈಲು ಹಳಿಗಳಿಂದ ಕಲ್ಲಿದ್ದಲು ಸಂಗ್ರಹಿಸುತ್ತಿದ್ದರು.

ಕಷ್ಟವಿದ್ದರೂ ಓದು ಮುಂದುವರಿಸಿದರು

ಎಷ್ಟೇ ಕಷ್ಟವಿದ್ದರೂ ಪುರಿ ಅವರ ಅಧ್ಯಯನವನ್ನು ಬಿಡಲಿಲ್ಲ. ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ ಸೇರಿ, ಅಲ್ಲಿ ಅವರು ನಾಸಿರುದ್ದೀನ್ ಷಾ ಅವರನ್ನು ಭೇಟಿಯಾದರು. ಷಾ ಅವರು ಪುರಿ ಅವರನ್ನು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕರೆ ತಂದರು.

ಷಾ ಅವರೊಂದಿಗೆ ಕೆಲಸ

ಓಂ ಪುರಿ ಮತ್ತು ನಾಸಿರುದ್ದೀನ್ ಷಾ ಅವರೊಂದಿಗೆ ಒಟ್ಟಿಗೆ 26 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಮೊದಲ ಚಿತ್ರ 1977ರಲ್ಲಿ ಭೂಮಿಕಾ ಮತ್ತು ಅವರ ಕೊನೆಯ ಚಿತ್ರ 2009 ರಲ್ಲಿ ಬೋಲೋ ರಾಮ್.


ಹೃದಯಾಘಾತದಿಂದ ನಿಧನ

ಓಂ ಪುರಿ ಅವರು ಮುಂಬಯಿ ನ ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ 2017ರ ಜನವರಿ 6 ರಂದು ನಿಧನರಾದರು. ಚಾಚಿ 420 (1997), ಹೇರಾ ಫೆರಿ (2000), ಚೋರ್ ಮಚಾಯೆ ಶೋರ್ (2002), ದೀವಾನೆ ಹ್ಯೂ ಪಾಗಲ್, ಚುಪ್ ಚುಪ್ ಕೆ, ಕಿಸ್ಮೆತ್ ಕನೆಕ್ಷನ್ ಮತ್ತು ಮಲಾಮಾಲ್ ವೀಕ್ಲಿ (2006) ಮತ್ತು ಓಹ್ ಮೈ ಗಾಡ್, ಧೋಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು.

ಭಾರತೀಯ, ಬ್ರಿಟಿಷ್ ಮತ್ತು ಅಮೆರಿಕನ್ ಚಲನಚಿತ್ರಗಳಲ್ಲಿ ನಟಿಸಿರುವ ಅವರಿಗೆ ನ್ಯಾಷನಲ್ ಫಿಲಂ ಅವಾರ್ಡ್, ಅತ್ಯತ್ತಮ ನಟ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದೆ.

Continue Reading

ಬಾಲಿವುಡ್

Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

Riteish Deshmukh: ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Riteish Deshmukh-Genelia visit Ayodhya Ram Mandir
Koo

ಬೆಂಗಳೂರು: ನಟ ರಿತೇಶ್ ದೇಶಮುಖ್ (Riteish Deshmukh) ಏಪ್ರಿಲ್ 20ರಂದು ಪತ್ನಿ ಜೆನಿಲಿಯಾ ದೇಶಮುಖ್ (Genelia Deshmukh) ಮತ್ತು ಮಕ್ಕಳೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ದಂಪತಿ ರಾಮಮಂದಿರಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಿತೇಶ್ ಮತ್ತು ಜೆನಿಲಿಯಾ (Ayodhya Ram Mandir) ಫೋಟೊ ಶೇರ್‌ ಮಾಡಿಕೊಂಡು ʻʻರಾಮಲಲ್ಲಾ ದರ್ಶನ ಪಡೆದದ್ದಾಯ್ತುʼʼಎಂದು ಬರೆದುಕೊಂಡಿದ್ದಾರೆ.

ಫೋಟೊದಲ್ಲಿ ದಂಪತಿ ರಾಮನನ್ನು ಪ್ರಾರ್ಥಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮುಂಚೆ  ಪ್ರಿಯಾಂಕಾ ಚೋಪ್ರಾ (Priyanka Chopra), ಅವರ ಪತಿ-ಗಾಯಕ ನಿಕ್ ಜೋನಾಸ್ ಮತ್ತು ಅವರ ಪುತ್ರಿ ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆ ಬುಧವಾರ (ಮಾ.20) ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದರು.

ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Priyanka Chopra : ರಾಮಮಂದಿರದಲ್ಲಿ ಪ್ರಿಯಾಂಕಾ ಮಗಳು ಕ್ಯೂಟ್‌ ಆಗಿ ‘ಅಯೋಧ್ಯಾ’ ಎಂದು ಹೇಳಿದ್ದು ಹೀಗೆ!

ರಿತೇಶ್ ದೇಶಮುಖ್ ಪೋಸ್ಟ್‌

ಸಿನಿಮಾ ವಿಚಾರಕ್ಕೆ ಬಂದರೆ, ರಿತೇಶ್ ಅವರು ‘ಮಸ್ತಿ 4’ ಗಾಗಿ ಏಳು ವರ್ಷಗಳ ನಂತರ ವಿವೇಕ್ ಒಬೆರಾಯ್ ಮತ್ತು ಅಫ್ತಾಬ್ ಶಿವದಾಸನಿ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಇಂದ್ರ ಕುಮಾರ್, ಎ. ಜುಂಜುನ್ವಾಲಾ, ಅಶೋಕ್ ಠಾಕೇರಿಯಾ ಮತ್ತು ಎಸ್.ಕೆ. ಅಹ್ಲುವಾಲಿಯಾ ಬಂಡವಾಳ ಹೂಡಿದ್ದಾರೆ.

Continue Reading
Advertisement
Summer Tour
ಪ್ರವಾಸ4 mins ago

Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

Congress leader Rahul Gandhi election campaign on April 26 in Ballari
ಬಳ್ಳಾರಿ8 mins ago

Lok Sabha Election 2024: ಏ.26ರಂದು ರಾಹುಲ್‌ ಗಾಂಧಿ ಬಳ್ಳಾರಿಗೆ; ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಪರ ಪ್ರಚಾರ

on April 26 Namma Metro Service extended till late night
Lok Sabha Election 202421 mins ago

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Davanagere Lok Sabha constituency BJP candidate Gayatri Siddeshwar election campaign
ದಾವಣಗೆರೆ23 mins ago

Lok Sabha Election 2024: ಹರಿಹರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Lok sabha election 2024
ಕರ್ನಾಟಕ27 mins ago

Lok Sabha Election 2024: ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ರಾಜ್ಯ ಒಕ್ಕಲಿಗ ಸಂಘ; ಡಿಕೆಶಿಯನ್ನು ಸಿಎಂ ಮಾಡುವುದಾಗಿ ಶಪಥ

Top 10 Puddings
ಆಹಾರ/ಅಡುಗೆ30 mins ago

Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

Nitin Gadkari
ದೇಶ38 mins ago

Nitin Gadkari: ಚುನಾವಣೆ ಪ್ರಚಾರದ ವೇಳೆ ದಿಢೀರ್ ಕುಸಿದು ಬಿದ್ದ ನಿತಿನ್‌ ಗಡ್ಕರಿ; ತುರ್ತು ಚಿಕಿತ್ಸೆ

Vijay Deverakonda Mrunal Thakur The Family Star to release on OTT
ಟಾಲಿವುಡ್40 mins ago

Vijay Deverakonda: ಮೃಣಾಲ್ – ವಿಜಯ್ ದೇವರಕೊಂಡ ಅಭಿನಯದ ʻಫ್ಯಾಮಿಲಿ ಸ್ಟಾರ್ʼ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್‌!

Job Alert
ಉದ್ಯೋಗ41 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Lok Sabha Election 2024 Congress comes to power it will survey and grab property says Pralhad Joshi
Lok Sabha Election 202447 mins ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿ ಸರ್ವೆ; ಹೆಚ್ಚಿದ್ದರೆ ವಶಕ್ಕೆ;‌ ಕೇಂದ್ರ ಸಚಿವರ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌