Animal Box Office: ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ರೂ. ಕ್ಲಬ್‌ ಸೇರಿಯೇ ಬಿಟ್ಟಿತು; ‌ʻಅನಿಮಲ್‌ʼ ಕಮಾಲ್! - Vistara News

ಬಾಲಿವುಡ್

Animal Box Office: ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ರೂ. ಕ್ಲಬ್‌ ಸೇರಿಯೇ ಬಿಟ್ಟಿತು; ‌ʻಅನಿಮಲ್‌ʼ ಕಮಾಲ್!

Animal Box Office: ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

VISTARANEWS.COM


on

Ranbir Kapoor film animal crosses Rs 100 crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು; ರಣಬೀರ್ ಕಪೂರ್-ರಶ್ಮಿಕಾ ಅಭಿನಯದ ‘ಅನಿಮಲ್‌’ ಸಿನಿಮಾ (Animal Box Office) ಬಾಕ್ಸ್ ಆಫೀಸ್ ಕಲೆಕ್ಷನ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಡಿಸೆಂಬರ್ 1ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾ ಭಾರತದಲ್ಲಿ 100 ಕೋಟಿ ರೂ. ಕ್ಲಬ್‌ ಪ್ರವೇಶಿಸಿದೆ. ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಜತೆಗೆ ಅನಿಮಲ್‌ ಬಿಡುಗಡೆಯಾಗಿದ್ರೂ ಕೂಡ ಜಯಭೇರಿ ಬಾರಿಸಿದೆ. ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿದೆ. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿದೆ. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Animal Box Office: ʻಅನಿಮಲ್‌ʼ ಸೀಕ್ವೆಲ್‌ ಬರೋದು ಕನ್‌ಫರ್ಮ್‌? ಮೊದಲ ದಿನವೇ ಭರ್ಜರಿ ಬ್ಯಾಟಿಂಗ್‌!

ಅನಿಮಲ್‌ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಭಾರಿ ಸದ್ದು ಮಾಡಿತ್ತು. ಜತೆಗೆ ನಟಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಪೋಸ್ಟರ್‌ ಕೂಡ ರಿಲೀಸ್‌ ಆಗಿತ್ತು. ಇದಕ್ಕೆ ನಟಿಯ ಫ್ಯಾನ್ಸ್‌ ಫಿದಾ ಆಗಿದ್ದರು. ಚಿತ್ರತಂಡ ʼಹುವಾ ಮೈನ್‌ʼ ಹಾಡನ್ನು (Animal song Hua Main) ಕೂಡ ರಿಲೀಸ್‌ ಮಾಡಿದೆ. ಈ ಹಾಡಿನಲ್ಲಿ ರಶ್ಮಿಕಾ-ರಣಬೀರ್ ಕಪೂರ್‌ ಲಿಪ್‌ ಲಾಕ್‌ ದೃಶ್ಯಗಳು ಹೆಚ್ಚಿವೆ. ಸಿನಿಮಾದಲ್ಲಿ ಪ್ರೈವೇಟ್ ಜೆಟ್, ಕುಟುಂಬಸ್ಥರ ಮುಂದೆ ಲಿಪ್‌ ಲಾಕ್‌ ಮಾಡಿರುವ ಸೀನ್‌ಗಳಿವೆ. ತೆಲುಗಿನ ʼಅರ್ಜುನ್‌ ರೆಡ್ಡಿʼ, ಹಿಂದಿಯ ʼಕಬೀರ್‌ ಸಿಂಗ್‌ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ ಗೆದ್ದ ಸಂದೀಪ್‌ ರೆಡ್ಡಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Shilpa Shetty: ಶಿಲ್ಪಾ ಶೆಟ್ಟಿ ಅವರು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ, ನಟಿ ಶಮಿತಾ ಶೆಟ್ಟಿ ಅವರೊಂದಿಗೆ ಇರುವ ಹಲವು ಫೋಟೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ.ಕೆಲವು ದಿನಗಳ ಹಿಂದೆಯಷ್ಟೇ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಆಗಮಿಸಿ ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು (Delantha Bettu) ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಠಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

VISTARANEWS.COM


on

Shilpa Shetty sister Shamita visit Kedarnath with their mother
Koo

ಬೆಂಗಳೂರು: ನಟಿ ಶಿಲ್ಪಾ ಶೆಟ್ಟಿ ( Shilpa Shetty) ಅವರು ಸಹೋದರಿ ಶಮಿತಾ (Shamit Shetty) ಮತ್ತು ತಾಯಿಯ ಜತೆ ವೈಷ್ಣೋದೇವಿ ಹಾಗೂ ಕೇದಾರನಾಥ ತೀರ್ಥಯಾತ್ರೆಗೆ ಹೋಗಿದ್ದರು. ಈ ಮೂಲಕ ತಾಯಂದಿರ ದಿನವನ್ನು ವಿಶೇಷವಾಗಿ ಆಚರಿಸಿದರು. ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊ ಮತ್ತು ವಿಡಿಯೊಗಳನ್ನು ನಟಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಶಮಿತಾ ಇನ್‌ಸ್ಟಾದಲ್ಲಿ ವೀಡಿಯೊವನ್ನು ಹಂಚಿಕೊಂಡು “ಪ್ರೀತಿ ಮತ್ತು ಕೃತಜ್ಞತೆ ಮಾತ್ರ. ಓಂ ನಮಃ ಶಿವೈ” ಎಂದು ತಾಯಿಯ ಜತೆಗಿನ ಸುಂದರ ಕ್ಷಣಗಳ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ. ಕೆಲವು ಚಿತ್ರಗಳಲ್ಲಿ ಮೂವರು ದೇವಸ್ಥಾನಗಳ ಮುಂದೆ ಕೈ ಮುಗಿದು ನಿಂತಿದ್ದಾರೆ. ಶಿಲ್ಪಾ ಅವರ ಮಗಳು ಸಮೀಕ್ಷಾ ಕೂಡ ಜತೆಗೆ ಇದ್ದರು.

ಇದಕ್ಕೂ ಮುನ್ನ ಶಿಲ್ಪಾ ಶೆಟ್ಟಿ ಅವರು ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ತಾಯಿ ಸುನಂದಾ ಶೆಟ್ಟಿ ಮತ್ತು ಸಹೋದರಿ, ನಟಿ ಶಮಿತಾ ಶೆಟ್ಟಿ ಅವರೊಂದಿಗೆ ಇರುವ ಹಲವು ಫೋಟೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. “ನಮ್ಮ ದೇವಿಯೊಂದಿಗೆ ವೈಷ್ಣೋದೇವಿಯಲ್ಲಿ. ತಾಯಂದಿರ ದಿನದ ಶುಭಾಶಯಗಳು, ಇಂದು, ನಾಳೆ ಮತ್ತು ಪ್ರತಿದಿನ ʻಅಮ್ಮʼ ನಾವು ನಿಮ್ಮನ್ನು ಪ್ರೀತಿಸುತ್ತೇವೆʼʼಎಂದು ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

ಕೆಲವು ದಿನಗಳ ಹಿಂದೆಯಷ್ಟೇ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಆಗಮಿಸಿ ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು (Delantha Bettu) ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಠಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್ ಕುಂದ್ರಾ ಮತ್ತು ಸಮಿಷಾ ಕುಂದ್ರಾ ಮತ್ತು ತಾಯಿ ಸುನಂದಾ ಶೆಟ್ಟಿ ಮತ್ತು ಕುಟುಂಬದವರು ಜತೆಯಲ್ಲಿದ್ದರು.

ಮೂಲತಃ ಮಂಗಳೂರಿನವರಾಗಿರುವುದರಿಂದ ನಟಿ ಶಿಲ್ಪಾ ಕುಟುಂಬದ ಕಾರ್ಯಕ್ರಮಗಳು, ಭೂತಾರಾದನೆ, ದೈವ ದೇವರ ಆರಾಧನೆಗೆ, ಆಗಾಗ ಬರುತ್ತಿರುತ್ತಾರೆ.ಶಿಲ್ಪಾ ಶೆಟ್ಟಿ ಮತ್ತು ರಾಜ್‌ ಕುಂದ್ರಾ ದಂಪತಿ ತಮ್ಮ ಮಕ್ಕಳನ್ನು ಅತ್ಯಂತ ಪ್ರೀತಿಯಿಂದ ನೊಡಿಕೊಳ್ಳುತ್ತಿದ್ದಾರೆ. ಅವರ ಬೇಕು ಬೇಡಗಳನ್ನು ತೀರಿಸುವುದು ಮಾತ್ರವಲ್ಲ ವಿಭಿನ್ನ ಕಲ್ಪನೆಗಳೊಂದಿಗೆ ಬೆಳೆಸುತ್ತಿದ್ದಾರೆ.  ಶಿಲ್ಪಾ ಶೆಟ್ಟಿ ಕೊನೆಯದಾಗಿ ರೋಹಿತ್ ಶೆಟ್ಟಿಯವರ ʻಇಂಡಿಯನ್ ಪೋಲಿಸ್‌ ಫೋರ್ಸ್‌ʼನಲ್ಲಿ ಕಾಣಿಸಿಕೊಂಡರು.

Continue Reading

ಬಾಲಿವುಡ್

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

Kareena Kapoor: ಕರೀನಾ ಮತ್ತು ಸೈಫ್ 2012ರಲ್ಲಿ ವಿವಾಹವಾದರು. ಅದಕ್ಕೂ ಮುಂಚೆ ಸೈಫ್‌ ಅಮೃತಾ ಸಿಂಗ್ ಅವರನ್ನು ಮದುವೆಯಾಗಿದ್ದರು. 2004ರಲ್ಲಿ ವಿಚ್ಛೇದನ ಪಡೆದುಕೊಂಡರು. ಸೈಫ್ ಮತ್ತು ಅಮೃತಾ ಅವರಿಗೆ ಸಾರಾ ಅಲಿ ಖಾನ್ ಮತ್ತು ಇಬ್ರಾಹಿಂ ಅಲಿ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸೈಫ್ ಮತ್ತು ಕರೀನಾ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್ .

VISTARANEWS.COM


on

Kareena Kapoor Saif Ali Khan share a kiss in front of paparazzi
Koo

ಬೆಂಗಳೂರು: ಕರೀನಾ ಕಪೂರ್ (Kareena Kapoor) ಮತ್ತು ಸೈಫ್ ಅಲಿ ಖಾನ್ ತಮ್ಮ ಮುಂಬೈ ನಿವಾಸದ ಹೊರಗೆ ಒಬ್ಬರಿಗೊಬ್ಬರು ಚುಂಬಿಸಿಕೊಂಡಿದ್ದಾರೆ. ಪಾಪರಾಜಿಗಳ ಮುಂದೆಯೇ ಕಿಸ್‌ ಕೊಟ್ಟುಕೊಂಡಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ವೈರಲ್‌ ಆದ ವಿಡಿಯೊಗಳಲ್ಲಿ ದಂಪತಿ ತಮ್ಮ ಕಾರುಗಳ ಕಡೆಗೆ ಸಾಗುತ್ತಿರುವಾಗ ಒಬ್ಬರಿಗೊಬ್ಬರು ಮಾತು ಕತೆ ನಡೆಸಿದ್ದಾರೆ. ಈ ವೇಳೆ ಕರೀನಾ ಅವರು ಪತಿ ಸೈಫ್‌ಗೆ ಮೊದಲು ಮುತ್ತು ಕೊಟ್ಟರು. ಆ ಬಳಿಕ ಸೈಫ್‌ ಕೂಡ ಕರೀನಾಗೆ ಕಿಸ್‌ ಕೊಟ್ಟಿದ್ದಾರೆ. ಕರೀನಾ ನೀಲಿ ಬಣ್ಣದ ಡೆನಿಮ್‌ಗಳೊಂದಿಗೆ ಬಿಳಿ ಕುರ್ತಾವನ್ನು ಧರಿಸಿದ್ದರು. ಸೈಫ್ ಬಿಳಿ ಕುರ್ತಾದಲ್ಲಿ ಮ್ಯಾಚಿಂಗ್ ಪೈಜಾಮಾದೊಂದಿಗೆ ಕಾಣುತ್ತಿದ್ದರು.

ಇದೀಗ ಫ್ಯಾನ್ಸ್‌ ಕಮೆಂಟ್‌ ಮೂಲಕ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಈ ವಿಡಿಯೊಗೆ ಹಲವರು ʻಕ್ಯೂಟ್‌ʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻʻಮೊದಲ ಬಾರಿ ಭೇಟಿಯಾದಂತೆ ಕಾಣುತ್ತೀರಿ. ಸದಾ ಹೀಗೆ ನಗುತ್ತ ಇರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಕರೀನಾ ಮತ್ತು ಸೈಫ್ 2012ರಲ್ಲಿ ವಿವಾಹವಾದರು. ಅದಕ್ಕೂ ಮುಂಚೆ ಸೈಫ್‌ ಅಮೃತಾ ಸಿಂಗ್ ಅವರನ್ನು ಮದುವೆಯಾಗಿದ್ದರು. 2004ರಲ್ಲಿ ವಿಚ್ಛೇದನ ಪಡೆದುಕೊಂಡರು. ಸೈಫ್ ಮತ್ತು ಅಮೃತಾ ಅವರಿಗೆ ಸಾರಾ ಅಲಿ ಖಾನ್ ಮತ್ತು ಇಬ್ರಾಹಿಂ ಅಲಿ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸೈಫ್ ಮತ್ತು ಕರೀನಾ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್ .

ಇದನ್ನೂ ಓದಿ: Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

ಸಿನಿಮಾ ವಿಚಾರಕ್ಕೆ ಬಂದರೆ ಕರೀನಾ ಕಪೂರ್ ಕೊನೆಯದಾಗಿ ʻಕ್ರ್ಯೂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ರೋಹಿತ್ ಶೆಟ್ಟಿಯವರ ‘ಸಿಂಗಮ್ ಅಗೇನ್’ ಮತ್ತು ಹನ್ಸಲ್ ಮೆಹ್ತಾ ಅವರ ‘ದಿ ಬಕಿಂಗ್ಹ್ಯಾಮ್ ಮರ್ಡರ್ಸ್’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ, ಸೈಫ್ ಅಲಿ ಖಾನ್ ಅವರು ಜ್ಯೂನಿಯರ್‌ ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಅವರೊಂದಿಗೆ ‘ದೇವರ’ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

Continue Reading

ಬಾಲಿವುಡ್

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Shekhar Suman: ಸಂದರ್ಶನದಲ್ಲಿ ನಟ ಶೇಖರ್ ಸುಮನ್ ಮಾತನಾಡಿ ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Shekhar Suman Says Sex Workers Keep Society
Koo

ಬೆಂಗಳೂರು: ನಟ ಶೇಖರ್ ಸುಮನ್ (Shekhar Suman) ಅವರು ಲೈಂಗಿಕ ಕಾರ್ಯಕರ್ತರು ಮತ್ತು ವೇಶ್ಯೆಯರ ನಡುವಿನ ವ್ಯತ್ಯಾಸದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇವರ ಸಮಾಜದ ಉತ್ಪನ್ನಗಳು ಮತ್ತು ಅವರನ್ನು ಒಟ್ಟಿಗೆ ವರ್ಗೀಕರಿಸಬಾರದು ಎಂದು ಸಂದರ್ಶನದಲ್ಲಿ ಹೇಳಿದರು. ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.

“ವೇಶ್ಯೆಯರನ್ನು ಈ ರೀತಿ ಲೈಂಗಿಕ ಕಾರ್ಯಕರ್ತೆಯರೆಂದು ತೋರಿಸುವಂತೆ ಮಾಡಿದ್ದು ಸಮಾಜವೇ. ಯಾವುದೇ ಮಹಿಳೆ ಆಯ್ಕೆಯಿಂದ ವೇಶ್ಯೆಯಾಗುವುದಿಲ್ಲ. ಆದರೆ ಸಂದರ್ಭಗಳು ಹೆಚ್ಚಾಗಿ ಮಹಿಳೆಯನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಮಾಡುತ್ತವೆ. ಈ ಎಲ್ಲದರ ಹೊರತಾಗಿಯೂ, ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ಪುರುಷರ ಲೈಂಗಿಕ ಹಸಿವನ್ನು ಲೈಂಗಿಕ ಕಾರ್ಯಕರ್ತರಿಂದ ನೀಗಿಸಿಕೊಳ್ಳುತ್ತಿದ್ದಾರೆʼʼಎಂದರು.

ಶೇಖರ್ ಸುಮನ್ ಮಾತನಾಡಿ ʻʻಹೀರಾಮಂಡಿಯಲ್ಲಿ ಜನರು ಕಲೆ ಮತ್ತು ಸಂಗೀತದಂತಹ ವಿವಿಧ ಕೌಶಲ್ಯಗಳನ್ನು ಕಲಿಯಲು ಹೋದ ಸ್ಥಳವಾಗಿತ್ತು. ಮಕ್ಕಳನ್ನು ಅಲ್ಲಿಗೆ ಕಳುಹಿಸಲಾಗುತ್ತಿತ್ತು. ನವಾಬರು ಅವರಿಂದ ಅನೇಕ ವಿಚಾರಗಳನ್ನು ಕಲಿಯುತ್ತಿದ್ದರು. ಹೀರಾಮಂಡಿಯವರ ಕೊಡುಗೆ ಅಪಾರವಾಗಿತ್ತು, ಅದೊಂದು ಸಂಸ್ಥೆಯಾಗಿತ್ತು, ಆದರೆ ನಾವು ಯಾವಾಗಲೂ ವೇಶ್ಯೆಯರನ್ನು ವಿಭಿನ್ನ ಅರ್ಥದಲ್ಲಿ ನೋಡುತ್ತಿದ್ದೇವು. ಹೀರಾಮಂಡಿಯಲ್ಲಿ, ಸ್ವಾತಂತ್ರ್ಯ ಚಳವಳಿಗೆ ವೇಶ್ಯೆಯರ ಕೊಡುಗೆಯನ್ನು ಸಹ ತೋರಿಸಲಾಗಿದೆʼʼಎಂದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಶೇಖರ್ ಸುಮನ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ ಶೇಖರ್‌ ಸುಮನ್‌(Shekhar Suman) ಕೆಲವು ದಿನಗಳ ಹಿಂದೆ ಬಿಜೆಪಿ(BJP). ಸೇರ್ಪಡೆಗೊಂಡಿದ್ದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದ್ದರು.

ಈ ವೇಳೆ ಶೇಖರ್‌ ಸುಮನ್‌ ಮಾತನಾಡಿದ್ದು, ನಿನ್ನೆಯವರೆಗೆ ನಾನು ಇಲ್ಲಿ ಬಂದು ಕೂರುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ. ಜೀವನದಲ್ಲಿ ನಡೆದ ಅನೇಕ ಘಟನೆಗಳಿಂದಾಗಿ ನಾನು ಇಂದು ಇಲ್ಲಿ ಬಂದಿದ್ದೇನೆ. ಬಹಳ ಧನಾತ್ಮಕ ಚಿಂತನೆಯೊಂದಿಗೆ ನಾನು ಇಲ್ಲಿ ಬಂದಿದ್ದೇನೆ. ಇಲ್ಲಿ ಬರಲು ಪ್ರೇರೇಪಿಸಿದ ದೇವರಿಗೆ ನಾನು ಆಭಾರಿ ಎಂದು ಹೇಳಿದ್ದರು.

Continue Reading

ಸಿನಿಮಾ

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Richa Chadha : ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ.

VISTARANEWS.COM


on

Richa Chadha drank alcohol to perform Sanjay Leela Bhansali’s Heeramandi
Koo

ಬೆಂಗಳೂರು: `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ʻಹೀರಾಮಂಡಿʼ ಸಿನಿಮಾದಲ್ಲಿ (Sanjay Leela Bhansali’s Heeramandi) ನಟಿ ಒಂದು ದೃಶ್ಯದಲ್ಲಿ ಅಭಿನಯಿಸಲು ʻಜಿನ್ʼ ಸೇವಿಸಿದ್ದರಂತೆ. ದೃಶ್ಯ ರಿಯಲ್‌ ಆಗಿ ಬರಬೇಕು ಎಂದು ಮದ್ಯ ಸೇವಿಸಿದ ಪರಿಣಾಮ 30-40 ರೀಟೇಕ್‌ಗಳನ್ನು ಪಡೆದುಕೊಂಡು, ದೃಶ್ಯ ನಿಭಾಯಿಸಲು ಆಗದೇ ಪರದಾಡಿದ್ದರಂತೆ.

ಈ ಬಗ್ಗೆ ನಟಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿ ʻʻಸ್ವಲ್ಪ ಜಿನ್ ಸೇವಿಸಿ ನಟಿಸೋಣ ಎಂದು ಕೊಂಡು ಎಂದಿಗೂ ಕುಡಿಯದ ನಾನು ಜಿನ್ ಸೇವಿಸಿದೆ. ಜಿನ್ ಕುಡಿದ ಕೆಲವೇ ಹೊತ್ತಿನಲ್ಲಿ ದೃಶ್ಯವನ್ನು ನಿಭಾಯಿಸಲು ಕಷ್ಟಕವಾಯ್ತು. ನಟನೆ ಚೆನ್ನಾಗಿ ಆಗುವ ಬದಲಿಗೆ ಇನ್ನೂ ಕೆಟ್ಟದಾಯ್ತ. ಕೇವಲ ಒಂದು ಸೀನ್​ಗೆ ಸುಮಾರು30-40 ರೀಟೇಕ್‌ಗಳನ್ನು ಪಡೆದುಕೊಂಡೆ.  ಸರಿಯಾಗಿ ನಟಿಸಲು ಮಾತ್ರವಲ್ಲ, ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ’ ಎಂದಿದ್ದಾರೆ ರಿಚಾ ಚಡ್ಡಾ.ʼʼ

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಮಸಾನ್’, ಫಕ್ರೆ, ಸರಬ್​ಜಿತ್ ಇನ್ನೂ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿರುವ ‘ಶಕೀಲ’ ಸಿನಿಮಾನಲ್ಲಿಯೂ ರಿಚಾ ಚಡ್ಡ ನಟಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದರು. ಈಗಾಗಲೇ ನೆಟ್‌ಫ್ಲಿಕ್ಸ್‌ನಲ್ಲಿ ಸಿರೀಸ್‌ ಸ್ಟ್ರೀಮಿಂಗ್‌ ಆಗುತ್ತಿದೆ.

ಇದನ್ನೂ ಓದಿ: ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading
Advertisement
Health Tips Kannada
ಆರೋಗ್ಯ3 mins ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Gautam Gambhir
ಪ್ರಮುಖ ಸುದ್ದಿ13 mins ago

Gautam Gambhir : ಕೊಹ್ಲಿ ಜತೆಗಿನ ಜಗಳವಲ್ಲ, ಇನ್ನೊಂದು ವಿಚಾರದ ಬಗ್ಗೆ ಗಂಭೀರ್​ಗೆ ಸಿಕ್ಕಾಪಟ್ಟೆ ಪಶ್ಚಾತಾಪವಿದೆ

Karnataka Politics Operation Kamala is not possible says CM Siddaramaiah
ರಾಜಕೀಯ35 mins ago

Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Ujjaini Sri Marulasiddeshwara Rathotsava
ವಿಜಯನಗರ36 mins ago

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Swati Maliwal
ದೇಶ37 mins ago

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Madhavi Latha
ದೇಶ57 mins ago

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

pm Narendra Modi
ಪ್ರಮುಖ ಸುದ್ದಿ1 hour ago

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

karnataka politics eknath shinde
ಪ್ರಮುಖ ಸುದ್ದಿ2 hours ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Vijayapura news Drowned in water
ವಿಜಯಪುರ2 hours ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Road Accident between Bolero and bike Couple dies on the spot
ಕಲಬುರಗಿ2 hours ago

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ10 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ11 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ22 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ23 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌