Randeep Hooda: ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್​ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡ ನಟ; ಬದ್ಧತೆಗೆ ಜೈ ಎಂದ ಫ್ಯಾನ್ಸ್‌ - Vistara News

ಸಿನಿಮಾ

Randeep Hooda: ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್​ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡ ನಟ; ಬದ್ಧತೆಗೆ ಜೈ ಎಂದ ಫ್ಯಾನ್ಸ್‌

Randeep Hooda: ಬಾಲಿವುಡ್‌ ನಟ ರಣದೀಪ್ ಹೂಡಾ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಚಿತ್ರದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್​ ದಾಮೋದರ್​ ಸಾವರ್ಕರ್​ ಪಾತ್ರಕ್ಕಾಗಿ ಬರೋಬ್ಬರಿ 30 ಕೆಜಿ ತೂಕ ಕಳೆದುಕೊಂಡಿದ್ದಾರೆ.

VISTARANEWS.COM


on

hooda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಣದೀಪ್ ಹೂಡಾ (Randeep Hooda) ಬಾಲಿವುಡ್‌ನ ಪ್ರತಿಭಾವಂತ ನಟರಲ್ಲಿ ಒಬ್ಬರು. ಅವರು ತಮ್ಮ ಮುಂಬರುವ ‘ಸ್ವಾತಂತ್ರ್ಯ ವೀರ ಸಾವರ್ಕರ್​’ (Swatantrya Veer Savarkar) ಚಿತ್ರದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್​ ದಾಮೋದರ್​ ಸಾವರ್ಕರ್​ (Vinayak Damodar Savarkar) ಪಾತ್ರಕ್ಕಾಗಿ ಬರೋಬ್ಬರಿ 30 ಕೆಜಿ ತೂಕ ಕಳೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ರಣದೀಪ್ ಹೂಡಾ ಈ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಅಚ್ಚರಿಗೊಳಗಾಗಿದ್ದಾರೆ. ತಮ್ಮ ನೆಚ್ಚಿನ ನಟನ ಬದ್ಧತೆ, ಬದಲಾವಣೆಯನ್ನು ಬೆರಗುಗಣ್ಣಿನಿಂದ ನೋಡಿದ್ದಾರೆ. ಸದ್ಯ ಈ ಫೋಟೊ ವೈರಲ್‌ ಆಗಿದೆ.

ಕಟ್ಟುಮಸ್ತಾದ ಶರೀರ ಹೊಂದಿದ್ದ ರಣದೀಪ್​ ಹೂಡಾ ಅವರು ಸಾವರ್ಕರ್​ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಫೋಸ್‌​ ನೀಡಿದ್ದಾರೆ. ಕನ್ನಡಿ ಮುಂದೆ ನಿಂತಿರುವ ಈ ಫೋಟೊವನ್ನು ಹಂಚಿಕೊಂಡಿರುವ ಅವರು ಇದಕ್ಕೆ ʼಕಾಲಾ ಪಾನಿʼ ಎಂಬ ಕ್ಯಾಪ್ಶನ್‌ ನೀಡಿದ್ದಾರೆ. ಇತ್ತೀಚೆಗಷ್ಟೇ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಈ ಚಿತ್ರದ ಬಗ್ಗೆ ಮಾಹಿತಿ ನೀಡಿ, ʼʼಅಂಡಮಾನ್‌ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಸಾವರ್ಕರ್ ಇದ್ದಂತೆ ಕಾಣಲು ರಣದೀಪ್ ಹೂಡಾ ಅವರು 30 ಕೆಜಿ ತೂಕವನ್ನು ಕಳೆದುಕೊಂಡಿದ್ದರುʼʼ ಎಂದು ಹೇಳಿದ್ದರು. ಜತೆಗೆ ಪಾತ್ರದ ಬಗ್ಗೆ ರಣದೀಪ್ ಅವರ ಬದ್ಧತೆಯನ್ನು ಶ್ಲಾಘಿಸಿದ್ದರು.

ಫೋಟೊ ನೋಡಿದ ಅಭಿಮಾನಿಗಳು ರಣದೀಪ್ ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ʼʼಈ ಫೋಟೊ ನೋಡಿ ರೋಮಾಂಚವಾಯಿತು. ಈ ಸಿನಿಮಾ ನೋಡಿವಾಗ ಖಚಿತವಾಗಿ ಪ್ರೇಕ್ಷಕ್ ಕಣ್ಣು ತುಂಬಿ ಬರಲಿದೆʼʼ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ.

ನಟನೆಯ ಜತೆಗೆ ನಿರ್ದೇಶನ

ವಿಶೇಷ ಎಂದರೆ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಚಿತ್ರದಲ್ಲಿ ರಣದೀಪ್‌ ನಾಯಕನಾಗಿ ನಟಿಸುವ ಜತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಮಾರ್ಚ್‌ 22ರಂದು ಈ ಸಿನಿಮಾ ತೆರೆ ಕಾಣಲಿದೆ. ಹಿಂದಿ ಮಾತ್ರವಲ್ಲದೇ ಮರಾಠಿಯಲ್ಲಿಯೂ ಈ ಸಿನಿಮಾ ಬಿಡುಗಡೆಯಾಗಲಿದೆ. ಕಲಾವಿದರ ಅಂಕಿತಾ ಲೋಖಂಡೆ, ಅಮಿತ್‌ ಸಿಯಾಲ್‌, ರಾಕೇಶ್‌ ಚತುರ್ವೇದಿ, ಲೋಕೇಶ್‌ ಮಿತ್ತಲ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಮಹಾತ್ಮ ಗಾಂಧಿ, ಬಾಲ ಗಂಗಾಧರ್​ ತಿಲಕ್​, ಡಾ.ಬಿ.ಆರ್​. ಅಂಬೇಡ್ಕರ್​, ಸುಭಾಷ್​ ಚಂದ್ರ ಬೋಸ್​, ಜವಹರ್​ ಲಾಲ್​ ನೆಹರೂ, ಭಗತ್​ ಸಿಂಗ್​ ಸೇರಿದಂತೆ ಹಲವು ನೈಜ ಪಾತ್ರಗಳು ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾದಲ್ಲಿವೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿ ಗಮನ ಸೆಳೆದಿತ್ತು.

ಹಿಂದೊಮ್ಮೆ 2016ರಲ್ಲಿ ಬಿಡುಗಡೆಯಾದ ʼಸರಬ್ಜಿತ್‌ʼ ಬಾಲಿವುಡ್‌ ಚಿತ್ರಕ್ಕಾಗಿ ರಣದೀಪ್‌ ಹೂಡಾ ಗುರುತೇ ಸಿಗದಂತೆ ಬದಲಾಗಿದ್ದರು. ಆಗಲೂ ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್​ ಅಭಿಮಾನಿಗಳ ಗಮನ ಸೆಳೆದಿತ್ತು. ಈ ಚಿತ್ರದಲ್ಲಿನ ಪಾತ್ರಕ್ಕೆ ಅಪಾರ ಮೆಚ್ಚುಗೆಯೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Randeep Hooda: ಮಣಿಪುರದ ಮೈತಿ ಪದ್ಧತಿಯಂತೆ ವಿವಾಹವಾದ ಸ್ಟಾರ್‌ ನಟ; ಏನಿದರ ವಿಶೇಷ?

ಈ ಮಧ್ಯೆ ರಣದೀಪ್‌ ಹೂಡಾ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಬಿಜೆಪಿ ಅವರಿಗೆ ಟಿಕೆಟ್‌ ನೀಡಲಿದೆ. ಹರಿಯಾಣದ ರೋಹ್ಟಕ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ರಣದೀಪ್‌ ಹೂಡಾ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

Aamir Khan: ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು.

VISTARANEWS.COM


on

Aamir Khan talks about power of namaste
Koo

ಬೆಂಗಳೂರು: ಕಪಿಲ್ ಶರ್ಮಾ ಶೋನಲ್ಲಿ ಆಮೀರ್ ಖಾನ್ (Aamir Khan ) ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ಇದನ್ನೂ ಓದಿ: Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ ಎಂದು ಆಮೀರ್ ಖಾನ್ ಬಹಿರಂಗಪಡಿಸಿದ್ದರು. ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದರು.

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

Ranbir Kapoor: ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪಾರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Ranbir Kapoor stunned as photographer abuses in front of him
Koo

ಬೆಂಗಳೂರು: ನಟ ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ರಣಬೀರ್‌ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ, ಫೋಟೋಗ್ರಾಫರ್‌ ಫೋಟೊ ತೆಗೆಸಿಕೊಳ್ಳಲು ಮುಂದಾಗಿದ್ದ. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೊಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಗೊತ್ತಾಗಿಲ್ಲ. ಅಶ್ಲೀಲ ಪದ ಬಳಕೆ ಮಾಡುತ್ತಿದ್ದಂತೆ ರಣಬೀರ್‌ ಕೂಡ ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ. ರಣಬೀರ್‌ ಕಾರ್ಯಕ್ರಮಕ್ಕೆ ರಣಬೀರ್ ಕಪ್ಪು ಕುರ್ತಾ-ಪೈಜಾಮಾ ಧರಿಸಿ ಬಂದಿದ್ದರು.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

Continue Reading
Advertisement
ದೇಶ3 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್9 mins ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್14 mins ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Amit Shah
ದೇಶ16 mins ago

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Samantha Ruth Prabhu announces new film Bangaram
ಟಾಲಿವುಡ್34 mins ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Aamir Khan talks about power of namaste
ಬಾಲಿವುಡ್38 mins ago

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

IPL 2024
ಕ್ರೀಡೆ44 mins ago

IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

Mohan Bhagwat
ದೇಶ1 hour ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 20241 hour ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ1 hour ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20242 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ7 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌