Rashmika Mandanna | ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಚೇರಿ ಎದುರು ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ! - Vistara News

ಬಾಲಿವುಡ್

Rashmika Mandanna | ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಚೇರಿ ಎದುರು ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ!

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಕಡೆಯಿಂದ ಆಫರ್‌ ಬಂದಿದೆ ಎನ್ನಲಾಗುತ್ತಿದೆ.

VISTARANEWS.COM


on

Rashmika Mandanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಟ್ರೋಲ್‌ಗೆ ಎಷ್ಟೇ ಗುರಿಯಾಗಿದ್ದರೂ, ಸಿನಿರಂಗದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿದ್ದಾರೆ. ಏನಾದರೂ ಒಂದು ವಿವಾದದಲ್ಲಿ ಸಿಲುಕುತ್ತಿರುವ ರಶ್ಮಿಕಾ ಇದೀಗ ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಕಡೆಯಿಂದ ಆಫರ್‌ ಬಂದಿದೆ ಎನ್ನಲಾಗುತ್ತಿದೆ.

ʻಗುಡ ಬೈʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ರಶ್ಮಿಕಾ, ಈ ಸಿನಿಮಾ ಅಷ್ಟಾಗಿ ಯಶಸ್ಸು ಕಂಡಿಲ್ಲ. ಈ ಸಿನಿಮಾ ಬಳಿಕ ಸಿದ್ಧಾರ್ಥ್‌ ಮಲ್ಹೋತ್ರ ಜತೆ ʻಮಿಷನ್ ಮಜ್ನುʼನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇದೀಗ ಹೊಸ ಸುದ್ದಿಯನ್ನು ನೀಡಿದ್ದಾರೆ.

ಇದನ್ನೂ ಓದಿ | Rashmika Mandanna | ರಶ್ಮಿಕಾ ಮಂದಣ್ಣ ಭೋಜ್‌ಪುರಿ ಸಿನಿಮಾಗೆ ಸೂಕ್ತ, ಹಿಂದಿಗಲ್ಲ ಎಂದ ವಿಮರ್ಶಕ ಕಮಾಲ್ ಖಾನ್!

ಬುಧವಾರ ಡಿಸೆಂಬರ್‌ 28ರ ರಾತ್ರಿ ನಿರ್ದೇಶಕ ಹಾಗೂ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ. ಸಿನಿಮಾ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Rashmika Mandanna | ಬಾಲಿವುಡ್‌ ಹಾಡು ಮಧುರ, ದಕ್ಷಿಣದ ಹಾಡು ಮಸಾಲಾ ಎಂದ ರಶ್ಮಿಕಾ ಮಂದಣ್ಣ! ತಿರುಗಿ ಬಿದ್ದ ಜನ!!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Sunidhi Chauhan: ಸುನಿಧಿ ಅವರು ಮೇರಿ ಆವಾಜ್‌ ಸುನೋ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ.

VISTARANEWS.COM


on

Sunidhi Chauhan audience member throws bottle at her
Koo

ಬೆಂಗಳೂರು: ನಾಲ್ಕು ವರ್ಷ ಇರುವಾಗಲೇ ಗಾಯಕಿ ಸುನಿಧಿ ಚೌಹಾಣ್ (Sunidhi Chauhan) ಹಾಡಲು ಶುರು ಮಾಡಿದ್ದರು. ದೂರದರ್ಶನದಲ್ಲಿ ʻಮೇರಿ ಆವಾಜ್‌ ಸುನೋʼ ಎಂಬ ಸಿಂಗಿಂಗ್‌ ರಿಯಾಲಿಟಿ ಶೋನಲ್ಲಿ ವಿನ್ನರ್‌ ಆದವರು. ಇದೀಗ ಕಾರ್ಯಕ್ರಮವೊಂದರಲ್ಲಿ ಸುನಿಧಿ ಚೌಹಾಣ್ ಅವರ ಮೇಲೆ ಪ್ರೇಕ್ಷಕರೊಬ್ಬರು ನೀರಿನ ಬಾಟಲಿಯನ್ನು ಎಸೆದಿದ್ದಾರೆ. ಇದೀಗ ಈ ಕ್ಲಿಪ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮಾತ್ರವಲ್ಲ ಸುನಿಧಿ ಚೌಹಾಣ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕ್ಲಿಪ್‌ನಲ್ಲಿ, ಬಾಟಲಿ ಒಂದು ಕ್ಷಣ ಸುನಿಧಿ ಚೌಹಾಣ್ ಮೇಲೆ ಬೀಳುತ್ತಿದ್ದಂತೆ ಗಾಬರಿಯಾದರು. ಪ್ರದರ್ಶನವನ್ನು ಮುಂದುವರಿಸುವ ಮೊದಲು ಅವರು ಒಂದು ಕ್ಷಣ ಸ್ತಬ್ಧವಾಗಿ ನಿಂತು ಬಿಟ್ಟರು. ತನ್ನ ಕೈಯನ್ನು ಎದೆಯ ಮೇಲೆ ಇಟ್ಟುಕೊಂಡು ಸುತ್ತಲೂ ನೋಡಿದರು. ಸ್ವಲ್ಪ ಸಮಯದ ನಂತರ, ಸುನಿಧಿ ವೇದಿಕೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ʻʻಬಾಟಲಿಗಳನ್ನು ಎಸೆದರೆ ಏನಾಗುತ್ತದೆ? ಹಾಗೆ ಮಾಡುವುದರಿಂದ ಪ್ರದರ್ಶನವು ನಿಲ್ಲುತ್ತದೆ. ನಿಮಗೆ ಹಾಗೆ ಆಗಬೇಕೆ?ಎಂದು ಪ್ರಶ್ನೆ ಇಟ್ಟಿದ್ದಾರೆ. ನೆರೆದ ಪ್ರೇಕ್ಷಕರು “ಇಲ್ಲ” ಎಂದು ಕೂಗಿದ್ದಾರೆ. ಈ ಸಂದರ್ಭವನ್ನು ಅತ್ಯಂತ ನಾಜೂಕಾಗಿ ಹ್ಯಾಂಡಲ್‌ ಮಾಡಿದ್ದಾರೆ ಸುನಿಧಿ.

ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಾಚಿಕೆಯಿಲ್ಲದವರು ! ಸುನಿಧಿ ಗ್ರೇಟ್‌” ಎಂದು ಬರೆದಿದ್ದಾರೆ. ಒಬ್ಬ ವ್ಯಕ್ತಿ, “ಇದು ತುಂಬಾ ಅಸಹ್ಯಕರ ನಡವಳಿಕೆ. ಸುನಿಧಿ ಗೌರವಕ್ಕೆ ಅರ್ಹಳು.” ಎಂದು ಕಮೆಂಟ್‌ ಮಾಡಿದ್ದಾರೆ. ʻʻಕಾರ್ಯಕ್ರಮವನ್ನು ಸುಲಭವಾಗಿ ಅವರು ಬಿಟ್ಟು ಹೋಗಬಹುದಿತ್ತು. ಆದರೆ ಸುನಿಧಿ ಹಾಗೇ ಮಾಡಿಲ್ಲ. ಅವಳು ಯಾವತ್ತು ಕ್ವೀನ್‌ʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಸುನಿಧಿ ಕೂಡ ತಮ್ಮ ಇನ್‌ಸ್ಟಾದಲ್ಲಿ ಈವೆಂಟ್‌ನ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಆದರೆ, ಘಟನೆಯ ಬಗ್ಗೆ ಏನು ಬರೆದುಕೊಂಡಿಲ್ಲ.

ಇದನ್ನೂ ಓದಿ: Ram Charan: ರಾಮ್‌ಚರಣ್‌ ಅಭಿನಯದ ʻಗೇಮ್ ಚೇಂಜರ್ʼ ಮೊದಲ ಸಾಂಗ್‌ ಔಟ್‌!

ಸುನಿಧಿ ಅವರು `ಮೇರಿ ಆವಾಜ್‌ ಸುನೋ’ ರಿಯಾಲಿಟಿ ಶೋನಲ್ಲಿ ಗೆದ್ದಿದ್ದರು. ಗೌತಮಿ ಮುಖರ್ಜಿ ಬಳಿ ಸುನಿಧಿ ಸಂಗೀತ ಅಭ್ಯಾಸ ಮಾಡಿದ್ದರು. ಬಾಬ್ಬಿ ಖಾನ್‌ ಅವರನ್ನು ಸುನಿಧಿ ಮದುವೆಯಾಗಿದ್ದರು. 2003ರಲ್ಲಿ ಇಬ್ಬರೂ ದೂರವಾದರು. 2012ರಲ್ಲಿ ಹೀತೇಶ್‌ ಸೋನಿಕ್‌ ಎಂಬುವರನ್ನು ಸುನಿಧಿ ಮದುವೆಯಾದರು. ಸುನಿಧಿಗೆ ಓರ್ವ ಪುತ್ರನಿದ್ದಾನೆ.

Continue Reading

ಬಾಲಿವುಡ್

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

Shreyas Talpade: ನಟ ಶ್ರೇಯಸ್‌ ತಲ್ಪಾಡೆ ಅವರು ‘ವೆಲ್‌ಕಮ್ ಟು ದಿ ಜಂಗಲ್‌’ ಸಿನಿಮಾದ ಚಿತ್ರೀಕರಣದರಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣ ಮುಗಿಸಿ ಮನೆಗೆ ಹೋದಮೇಲೆ ಅವರು ಕುಸಿದುಬಿದಿದ್ದರು. ತಕ್ಷಣ ಅವರನ್ನು ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ನಟ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ, 47 ವರ್ಷದ ಶ್ರೇಯಸ್‌ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ.

VISTARANEWS.COM


on

Shreyas Talpade hints his heart attack side effect of Covid vaccine
Koo

ಬೆಂಗಳೂರು: ಹಿಂದಿ ಮತ್ತು ಮರಾಠಿ ಚಿತ್ರರಂಗದ ಖ್ಯಾತ ನಟ ಶ್ರೇಯಸ್‌ ತಲ್ಪಾಡೆ (Shreyas Talpade) ಅವರಿಗೆ 2023ರ ಡಿಸೆಂಬರ್‌ 14ರಂದು ಹೃದಯಾಘಾತ ಸಂಭವಿಸಿತ್ತು. ಇದೀಗ ನಟ ಸಂದರ್ಶನವೊಂದರಲ್ಲಿ ನನಗೆ ಹೃದಯಾಘಾತ ಆಗಲು ಕಾರಣ ಕೋವಿಡ್ -19 ಲಸಿಕೆಯ ಅಡ್ಡ ಪರಿಣಾಮವಾಗಿರಬಹುದು ಎಂದು ಹೇಳಿಕೊಂಡಿದ್ದಾರೆ. ʻನಾನು ಆರೋಗ್ಯದ ಬಗ್ಗೆ ತುಂಬ ಕಾಳಜಿ ವಹಿಸುತ್ತೇನೆ. ಅದರ ಹೊರತಾಗಿಯೂ ಹೃದಯಾಘಾತವಾಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

ನಟ ಶ್ರೇಯಸ್‌ ತಲ್ಪಾಡೆ ಅವರು ‘ವೆಲ್‌ಕಮ್ ಟು ದಿ ಜಂಗಲ್‌’ ಸಿನಿಮಾದ ಚಿತ್ರೀಕರಣದರಲ್ಲಿ ಭಾಗಿಯಾಗಿದ್ದರು. ಚಿತ್ರೀಕರಣ ಮುಗಿಸಿ ಮನೆಗೆ ಹೋದಮೇಲೆ ಅವರು ಕುಸಿದುಬಿದಿದ್ದರು. ತಕ್ಷಣ ಅವರನ್ನು ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ನಟ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ,

ಶ್ರೇಯಸ್ ಮಾತನಾಡಿ, “ನಾನು ಧೂಮಪಾನ ಮಾಡುವುದಿಲ್ಲ. ನಾನು ರೆಗ್ಯುಲರ್‌ ಆಗಿ ಕುಡಿಯುವವನಲ್ಲ, ನಾನು ತಿಂಗಳಿಗೊಮ್ಮೆ ಕುಡಿಯುತ್ತೇನೆ. ತಂಬಾಕು ತಿನ್ನಲ್ಲ, ಹೌದು, ನನ್ನ ಕೊಲೆಸ್ಟ್ರಾಲ್ ಸ್ವಲ್ಪ ಹೆಚ್ಚಿತ್ತು. ಇದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ನಾನು ಅದಕ್ಕೆ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದೆ. ಆದರೆ ಈಗ ಕಡಿಮೆಯಾಗಿದೆ.ನನಗೆ ಮಧುಮೇಹ ಇಲ್ಲ, ರಕ್ತದೊತ್ತಡವಿಲ್ಲ.ಹಾಗಾದ್ರೆ ಕಾರಣವೇನು?ʼʼಎಂದರು.

ಇದನ್ನೂ ಓದಿ: Masoom Sawaal | ಸ್ಯಾನಿಟರಿ ಪ್ಯಾಡ್‌ ಮೇಲೆ ಶ್ರೀಕೃಷ್ಣ: ವಿವಾದ ಸೃಷ್ಟಿಸಿದ ಮಾಸೂಮ್‌ ಸವಾಲ್‌!

ಮಾತು ಮುಂದುವರಿಸಿ “ನಾನು ಸಿದ್ಧಾಂತವನ್ನು ನಿರಾಕರಿಸುವುದಿಲ್ಲ. ಕೋವಿಡ್-19 ವ್ಯಾಕ್ಸಿನೇಷನ್ ಮಾಡಿದ ನಂತರವೇ ನಾನು ಸ್ವಲ್ಪ ಆಯಾಸ ಮತ್ತು ದಣಿವನ್ನು ಅನುಭವಿಸಿದೆ. ಸ್ವಲ್ಪ ಪ್ರಮಾಣದ ಸತ್ಯ ಇರಬೇಕು. ಈ ರೀತಿ ನನ್ನ ಬಾಡಿ ಟೈಯರ್ಡ್‌ ಆಗಲು ಕಾರಣ ಕೋವಿಡ್ ಲಸಿಕೆಯಾಗಿರಬಹುದು. ನಮ್ಮ ದೇಹದಲ್ಲಿ ನಾವು ಏನು ತೆಗೆದುಕೊಂಡಿದ್ದೇವೆ ಎಂಬುದು ನಮಗೆ ನಿಜವಾಗಿ ತಿಳಿದಿಲ್ಲ. ನಾವು ಕಂಪನಿಗಳನ್ನು ನಂಬಿ ಎಲ್ಲರೂ ವಾಕ್ಸಿನ್‌ ತೆಗೆದುಕೊಂಡಂತೆ ತೆಗೆದುಕೊಂಡಿದ್ದೇ. ಕೋವಿಡ್ ಮೊದಲು ನಾನು ಅಂತಹ ಘಟನೆಗಳನ್ನು ಕೇಳಿರಲಿಲ್ಲʼʼಎಂದರು. ಕೊನೆಯಲ್ಲಿ ನಟ ಮಾತನಾಡಿ ʻʻಈ ರೀತಿ ಹೃದಯಾಘಾತವಾಗಲು ಕೋವಿಡ್‌ ಲಸಿಕೆಯಿಂದಲೋ ನನಗೆ ಖಚಿತವಿಲ್ಲ. ಸಾಕಷ್ಟು ಪುರಾವೆಗಳಿಲ್ಲದ ಕಾರಣ, ಯಾವುದೇ ಹೇಳಿಕೆಗಳನ್ನು ನೀಡುವುದರಲ್ಲಿ ಅರ್ಥವಿಲ್ಲʼʼಎಂದರು.

47 ವರ್ಷದ ಶ್ರೇಯಸ್‌ ತಲ್ಪಾಡೆ ತಮ್ಮ ಅಭಿನಯ ಪ್ರತಿಭೆಯಿಂದ ಗಮನ ಸೆಳೆದವರು. ಶಾರುಖ್ ಖಾನ್, ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್‌ಗಳ ಜೊತೆ ತೆರೆ ಹಂಚಿಕೊಂಡು ಮಿಂಚಿದ್ದಾರೆ. ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

Continue Reading

Latest

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

IPL 2024: ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸುತ್ತಿದೆ.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ವಿರಾಟ್ ಮತ್ತು ಅನುಷ್ಕಾ 2013 ರಲ್ಲಿ ಶಾಂಪೂ ಬ್ರಾಂಡ್​ನ ಜಾಹೀರಾತಿನ ಚಿತ್ರೀಕರಣಕ್ಕಾಗಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಅವರು 2017 ರಲ್ಲಿ ಇಟಲಿಯ ಟಸ್ಕನಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರು. 2021 ರಲ್ಲಿ, ಅವರು ತಮ್ಮ ಮೊದಲ ಮಗು ವಮಿಕಾಳನ್ನು ಸ್ವಾಗತಿಸಿದ್ದರು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಮತ್ತು ವಿರಾಟ್ ತಮ್ಮ ಎರಡನೇ ಮಗು ಅಕಾಯ್​​ ಕೊಹ್ಲಿಯ ಆಗಮನವನ್ನು ಘೋಷಿಸಿದ್ದರು.

ಅನುಷ್ಕಾ ಶರ್ಮಾ ಮುಂದಿನ ಚಿತ್ರ ಚಕ್ಡಾ ಎಕ್ಸ್​ಪ್ರೆಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಕ್ಡಾ ಎಕ್ಸ್​​ಪ್ರೆಸ್​ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರ. ಈ ಚಿತ್ರವು ಸುಮಾರು ೪ ವರ್ಷಗಳ ನಂತರ ಅವರು ಚಲನಚಿತ್ರಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಝೀರೋ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಬಾಲಿವುಡ್

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಮುಖ ಊದಿಕೊಂಡಂತೆ ಕಂಡಿದೆ.ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

VISTARANEWS.COM


on

Suchitra Krishnamoorthi Reveals Her Face Swelled Like A Balloon
Koo

ಬೆಂಗಳೂರು: ʻಕಭಿ ಹಾಂ ಕಭಿ ನಾʼ (Kabhi Haan Kabhi Naa) ಚಿತ್ರದಲ್ಲಿ ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಅವರ ಇತ್ತೀಚಿನ ಫೋಟೊಗಳು ವೈರಲ್‌ ಆಗಿವೆ. ಸುಚಿತ್ರಾ ಕೃಷ್ಣಮೂರ್ತಿ (Suchitra Krishnamoorthi) ಅವರ ಮುಖ ಊದಿಕೊಂಡಂತೆ ಕಂಡಿದೆ. ಇದಾದ ಬಳಿಕ ನಟಿಗೆ ಹಲವರು ಈ ಬಗ್ಗೆ ಪ್ರಶ್ನೆ ಇಟ್ಟಿದ್ದಾರೆ. ಇದೀಗ ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.

ಈವೆಂಟ್‌ನಿಂದ ತನ್ನ ಇತ್ತೀಚಿನ ಫೋಟೊವನ್ನು ಹಂಚಿಕೊಂಡ ಸುಚಿತ್ರಾʻʻಕಲಾ ಪ್ರದರ್ಶನದಲ್ಲಿ ನಾನು ಭಾಗಿಯಾಗಿದ್ದೆ. ಆಗ ನನ್ನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಮುಖ ಕೂಡ ಊದಿಕೊಂಡಂತೆ ಕಂಡಿತ್ತು. ಇದಾದ ಬಳಿಕ ಅನೇಕರು ನನ್ನ ಆರೋಗ್ಯವನ್ನು ವಿಚಾರಿಸುತ್ತಿದ್ದರು. ಮೊಣಕಾಲು ಕೂಡ ಕೆಲವು ದಿನಗಳಿಂದ ತೀವ್ರ ನೋವು ಆಗುತ್ತಿತ್ತು. ಅಷ್ಟೇ ಅಲ್ಲ ನನ್ನ ಮುಖ ಕೂಡ ಬಲೂನ್‌ನಂತೆ ಊದಿಕೊಂಡಿದೆ. ಕಾರಣ ಸೌಂದರ್ಯ ಚಿಕಿತ್ಸೆಯನ್ನು ಮಾಡಿದ್ದೇನೆ. ಹೀಗಾಗಿ ಮುಖ ಮರೆಮಾಚಲು ಪ್ರಯತ್ನಿಸಲಿಲ್ಲ. ಮತ್ತೆ ಮುಖ ಮುಂಚಿನಂತಾಗುತ್ತದೆ. ಸಮಯಬೇಕಷ್ಟೆʼʼ ಎಂದಿದ್ದಾರೆ.

ʻʻಕಾರ್ಯಕ್ರಮವೊಂದರಲ್ಲಿ ಜಾವೇದ್ ಅಖ್ತರ್ ಜತೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದೆ. ಕ್ಷಮಿಸಿ ಗ್ಲ್ಯಾಮರ್‌ ಆಗಿ ಕಾಣಿಸಿಕೊಂಡಿಲ್ಲ. ನಿಮ್ಮ ಮತ್ತು ಕಾಳಜಿ ಪ್ರೀತಿಗಾಗಿ ಧನ್ಯವಾದʼʼ ಎಂದು ನಟಿ ತಮ್ಮ ಫಾಲೋವರ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: Shah Rukh Khan: ದೇವದಾಸ್ ಚಿತ್ರದಲ್ಲಿ ಶಾರುಖ್ ಖಾನ್ ನಿಜವಾಗ್ಲೂ ಕುಡಿದಿದ್ದರೆ?

ಸುಚಿತ್ರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ಸಾಮಾಜಿಕ ಮಾಧ್ಯಮದ ಮೂಲಕ ಹಲವು ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಎಸ್ ಎಸ್ ಎಲ್ ಸಿಯಲ್ಲಿ ಟಾಪರ್ (SSLC Topper) ಆಗಿರುವ ಪ್ರಾಚಿ ನಿಗಮ್ ಮುಖದ ಬಗ್ಗೆ ಹೆಚ್ಚು ಟ್ರೋಲ್‌ ಆಗಿತ್ತು. ಪ್ರಾಚಿ ನಿಗಮ್ ಬಗ್ಗೆ ಜಾಹೀರಾತನ್ನು ಹಾಕಿದ್ದಕ್ಕಾಗಿ ಸುಚಿತ್ರಾ ಬಾಂಬೆ ಶೇವಿಂಗ್ ಕಂಪನಿ ಮತ್ತು ಅದರ ಮಾಲೀಕರ ಮೇಲೆ ನಟಿ ಆಕ್ರೋಶ ಹೊರಹಾಕಿದ್ದರು. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

Continue Reading
Advertisement
Accident News Drowned in water
ವಿಜಯಪುರ1 min ago

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Sunidhi Chauhan audience member throws bottle at her
ಬಾಲಿವುಡ್14 mins ago

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Vijay Sankeshwar
Lok Sabha Election 202415 mins ago

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Gold Rate
ಕರ್ನಾಟಕ36 mins ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Virat- Anushka
ಕ್ರೀಡೆ36 mins ago

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Jyotika Trolled For Claiming Online Private Voting
ಕಾಲಿವುಡ್44 mins ago

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Prajwal Revanna Case
ಕರ್ನಾಟಕ45 mins ago

Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

murder case In karwar
ಉತ್ತರ ಕನ್ನಡ47 mins ago

Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

Nijjar Killing
ದೇಶ1 hour ago

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Bhavya Gowda shares her experiences during shooting
ಕಿರುತೆರೆ1 hour ago

Bhavya Gowda: ಡ್ರಿಪ್ಸ್‌ ಹಾಕಿದ್ದರೂ ಶೂಟಿಂಗ್‌ಗೆ ಬರಲೇ ಬೇಕು ಅಂದ್ರು ಎಂದ ʻಗೀತಾ ಧಾರಾವಾಹಿʼ ನಟಿ ಭವ್ಯಾ ಗೌಡ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌