Rashmika Mandanna: ನೆಲ ಒರೆಸುವ ಬಟ್ಟೆ ಹಾಗಿದೆ ಎಂದ ನೆಟ್ಟಿಗರು: ರಶ್ಮಿಕಾ ಧರಿಸಿದ ಟಾಪ್‌ ಬೆಲೆ ಎಷ್ಟು? - Vistara News

ಸಿನಿಮಾ

Rashmika Mandanna: ನೆಲ ಒರೆಸುವ ಬಟ್ಟೆ ಹಾಗಿದೆ ಎಂದ ನೆಟ್ಟಿಗರು: ರಶ್ಮಿಕಾ ಧರಿಸಿದ ಟಾಪ್‌ ಬೆಲೆ ಎಷ್ಟು?

ಇತ್ತೀಚೆಗೆ, ರಶ್ಮಿಕಾ ಮಂದಣ್ಣ (Rashmika Mandanna) ವಿಮಾನ ನಿಲ್ದಾಣದಲ್ಲಿ ಸರಳವಾದ ಟಾಪ್ ಧರಿಸಿ ಕಾಣಿಸಿಕೊಂಡರು. ಆದರೆ ಇದೀಗ ಅವರ ಬಟ್ಟೆ ಬೆಲೆಯ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

Rashmika wears Rs 2.05 lakh Dolce & Gabbana knitted top
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೆಲೆಬ್ರಿಟಿಗಳು ಆಗಾಗ ತಮ್ಮ ಬಟ್ಟೆಗಳ ಮೂಲಕ ಸಖತ್‌ ಸುದಿಯಲ್ಲಿರುತ್ತಾರೆ. ಇತ್ತೀಚೆಗೆ, ರಶ್ಮಿಕಾ ಮಂದಣ್ಣ (Rashmika Mandanna) ವಿಮಾನ ನಿಲ್ದಾಣದಲ್ಲಿ ಸರಳವಾದ ಟಾಪ್ ಧರಿಸಿ ಕಾಣಿಸಿಕೊಂಡರು. ಆದರೆ ಇದೀಗ ಅವರ ಬಟ್ಟೆ ಬೆಲೆಯ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 2 ಲಕ್ಷ ರೂಪಾಯಿಯ ಬೆಲೆ ಬಾಳವ ಟಾಪ್ ಧರಿಸಿ ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಟಿಯ ಟಾಪ್ ಬೆಲೆ ಕೇಳಿ ನೆಟ್ಟಿಗರು ಸಖತ್ ಕಮೆಂಟ್ ಮಾಡುತ್ತಿದ್ದಾರೆ. 

ರಶ್ಮಿಕಾ ಮಂದಣ್ಣ ಅವರು ಕ್ಯಾಶುಯಲ್ ಆಗಿ ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣ ಮಾಡುವಾಗ ರಶ್ಮಿಕಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. 2.06 ಲಕ್ಷ ರೂ. ಸಿಂಪಲ್ ಆಗಿರುವ ಟಾಪ್ ಧರಿಸಿ ಎಂಟ್ರಿ ಕೊಟ್ಟಿದ್ದಾರೆ. ನಟಿ ಧರಿಸಿರುವ Dolce (ಡೋಲ್ಸ್) ಮತ್ತು Gabbana (ಗಬ್ಬಾನಾ) ಹೆಸರಿನ ಪೀಚ್ ಬಣ್ಣದ ಟಾಪ್ 2 ಲಕ್ಷದ 6 ಸಾವಿರದ 336 ರೂಪಾಯಿ ಎನ್ನಲಾಗಿದೆ. ರಿಪ್ಡ್ ಡೆನಿಮ್ ಜೀನ್ಸ್‌ನೊಂದಿಗೆ ರಶ್ಮಿಕಾ ಧರಿಸಿದ್ದಾರೆ. ನೆಲ ಒರೆಸುವ ಬಟ್ಟೆಯ ಹಾಗಿದೆ ಎಂದು ನೆಟ್ಟಿಗರು ನಟಿಯ ಕಾಲೆಳೆದಿದ್ದಾರೆ.‌ ನಟಿಯ ದುಬಾರಿ ಬೆಲೆಯ ಡ್ರೆಸ್‌ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಟ್ರೋಲ್‌ ಆಗುತ್ತಿದೆ.

ಇದನ್ನೂ ಓದಿ: Rashmika Mandanna: ಅಭಿಮಾನಿಗೇ ಪ್ರಪೋಸ್‌ ಮಾಡಿದ ರಶ್ಮಿಕಾ ಮಂದಣ್ಣ! ವೈರಲ್‌ ಆಯ್ತು ವಿಡಿಯೊ

ಇದನ್ನೂ ಓದಿ: Rashmika Mandanna | ಕೊನೆಗೂ ರಕ್ಷಿತ್ ಶೆಟ್ಟಿ- ರಿಷಬ್ ಶೆಟ್ಟಿ ಕುರಿತು ತುಟಿ ಬಿಚ್ಚಿದ ನ್ಯಾಷನಲ್‌ ಕ್ರಷ್!‌ ಏನ್‌ ಹೇಳಿದ್ರು?

ನಟಿ ವಿಜಯ್ ದಳಪತಿ ಅಭಿನಯದ ‘ವಾರಿಸು’ ಹಾಗೂ ಸಿದ್ಧಾರ್ಥ್‌ ಜತೆ ʻಮಿಷನ್ ಮಜ್ನುʼ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡರು. ಸದ್ಯ ಅಲ್ಲು ಅರ್ಜುನ್‌ ಜತೆ ಪುಷ್ಪಾ-2 ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಭೇಟಿ ನೀಡಿದ ನಂತರ ಅವರು ಹೊಸ ಚಿತ್ರಕ್ಕೆ ಸಹಿ ಹಾಕುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

ಬಾಲಿವುಡ್ ನ ಆದರ್ಶ ಜೋಡಿಯಲ್ಲಿ ಶಾರುಖ್ ಮತ್ತು ಗೌರಿ ಅವರೂ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ 33 ವರ್ಷಗಳಾಗಿದ್ದು ಮೂವರು ಮಕ್ಕಳ ಪೋಷಕರಾಗಿದ್ದರೆ. ಧರ್ಮದ ವಿಚಾರದಲ್ಲಿ ಗೌರಿ (Gauri Khan) ಈಗಲೂ ಹಿಂದುವಾಗಿಯೇ ಉಳಿದಿದ್ದಾರೆ. ಇದಕ್ಕೆ ಕಾರಣ ಏನೆಂಬುದನ್ನು ಅವರೇ ಹೇಳಿದ್ದಾರೆ.

VISTARANEWS.COM


on

By

Gauri Khan
Koo

ಬಾಲಿವುಡ್ ನ (bollywood) ಆದರ್ಶ ದಂಪತಿಗಳ ಸಾಲಿನಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan), ಗೌರಿ ಖಾನ್ (Gauri Khan) ದಂಪತಿಯೂ ಇದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರಿಬ್ಬರ ನಡುವಿನ ಪ್ರೀತಿ ಮತ್ತು ಹೊಂದಾಣಿಕೆ. ಇದು ಅವರ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಂತೆ ಮಾಡಿದೆ.

ಅಭಿಮಾನಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಾಣುವ ಈ ದಂಪತಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಾನು ನಿಮ್ಮೊಂದಿಗೆ ಬೆಳೆಯಲು ಬಯಸುತ್ತೇನೆ ಎಂದು ಹೇಳಿ ಮತ್ತೆ ಎಲ್ಲರ ಮನ ಗೆದ್ದಿದ್ದಾರೆ.

ಗೌರಿ ಮತ್ತು ಶಾರುಖ್ ಖಾನ್ ಅವರ ಧರ್ಮ ಬೇರೆಬೇರೆಯಾದರೂ ಇದು ಅವರಿಬ್ಬರ ನಡುವಿನ ಪ್ರೀತಿಗೆ ಅಡ್ಡಿಯಾಗಲಿಲ್ಲ. ಮದುವೆಯ ಮೊದಲು ಕೆಲವು ತೊಂದರೆಗಳು ಎದುರಾದರೂ ಮದುವೆಯ ಬಳಿಕ ದಂಪತಿ ಎಂದರೆ ಹೀಗಿರಬೇಕು ಎನ್ನುವಷ್ಟು ಇವರಿಬ್ಬರೂ ಮಾದರಿಯಾಗಿದ್ದಾರೆ.

ಕಿಂಗ್ ಖಾನ್ ಮೊದಲಿನಿಂದಲೂ ತನ್ನ ರಾಣಿಗೆ ಆದರ್ಶ ಪತಿ. ಶಾರುಖ್ ಖಾನ್ ಮುಸ್ಲಿಂ ಆಗಿರುವುದರಿಂದ ಮದುವೆಯಾದ ಬಳಿಕ ಗೌರಿ ಮುಸ್ಲಿಂ ಆಗಿ ಮತಾಂತರವಾಗುತ್ತಾರೆ ಎನ್ನುವ ಹೇಳಿಕೆಗಳು ಜೋರಾಗಿ ಕೇಳಿ ಬಂದಿತ್ತು. ಹೀಗಾಗಿ ಅವರಿಗೂ ಪದೇಪದೇ ತಾವು ಮುಸ್ಲಿಂ ಆಗಿ ಮತಾಂತರಗೊಳ್ಳುವುದಿಲ್ಲ ಎಂದು ಹೇಳಬೇಕಾದ ಸಂದರ್ಭಗಳು ಎದುರಾಗಿತ್ತು.

ಇತ್ತೀಚೆಗೆ ಕರಣ್ ಜೋಹರ್ ಅವರ ಕಾರ್ಯಕ್ರಮ ಕಾಫಿ ವಿತ್ ಕರಣ್‌ನಲ್ಲಿಹೃತಿಕ್ ರೋಷನ್ ಅವರ ಪತ್ನಿ ಸುಸ್ಸಾನ್ನೆ ಖಾನ್ ಅವರೊಂದಿಗೆ ಗೌರಿ ಆಗಮಿಸಿದ್ದರು. ಅಲ್ಲಿ ಗೌರಿ ಮುಸ್ಲಿಂ ಆಗಿ ಮತಾಂತರಗೊಳ್ಳದಿರುವ ಕುರಿತು ಚರ್ಚೆ
ನಡೆದಿತ್ತು.

ಯಾಕೆ ಮತಾಂತರವಾಗಲಿಲ್ಲ?

ಶಾರುಖ್ ಖಾನ್ ಅವರ ಧರ್ಮಕ್ಕೆ ನಾನು ಮತಾಂತರವಾಗುವುದಿಲ್ಲ ಎಂದು ಗೌರಿ ಖಾನ್ ಹೇಳಿರುವ ಹಳೆಯ ವಿಡಿಯೋ ಈಗ ಮತ್ತೆ ಸದ್ದು ಮಾಡಿದೆ. ಇದರಲ್ಲಿ ಅವರು ತಾವು ಇಸ್ಲಾಂ ಧರ್ಮಕ್ಕೆ ಮತಾಂತರವಾಗದೇ ಉಳಿಯಲು ಕಾರಣವನ್ನೂ ಕೊಟ್ಟಿದ್ದಾರೆ.

ನಮ್ಮಿಬ್ಬರ ಮಧ್ಯೆ ಸಮತೋಲನವಿದೆ. ನಾನು ಶಾರುಖ್ ಅವರ ಧರ್ಮವನ್ನು ಗೌರವಿಸುತ್ತೇನೆ. ಮತ್ತು ಅವರೂ ನನ್ನ ಧರ್ಮವನ್ನು ಗೌರವಿಸುತ್ತಾರೆ. ಹೀಗಾಗಿ ನಾನು ಮತಾಂತರಗೊಂಡು ಮುಸ್ಲಿಂ ಆಗಬೇಕು ಈ ಎನ್ನುವುದರಲ್ಲಿ ಅರ್ಥವಿಲ್ಲ. ಪರಸ್ಪರ ಜೊತೆಯಾಗಿ ಬಾಳಲು ಅದು ಅನಿವಾರ್ಯ ಎಂಬುದನ್ನು ನಾನು ನಂಬುವುದಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಅವರ ಧರ್ಮವನ್ನು ಅನುಸರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?


ಶಾರುಖ್‌ನಂತೆ ನನ್ನ ಧರ್ಮವನ್ನು ಯಾವತ್ತೂ ಅಗೌರವಗೊಳಿಸುವುದಿಲ್ಲ. ಮಗ ಆರ್ಯನ್ ತನ್ನ ತಂದೆಯ ಧರ್ಮವನ್ನು ಅನುಸರಿಸುತ್ತಾನೆ. ಆರ್ಯನ್ ಗೆ ಶಾರುಖ್‌ ಎಂದರೆ ತುಂಬಾ ಇಷ್ಟ.ಹೀಗಾಗಿ ಆತ ಅವರ ಧರ್ಮವನ್ನು ಅನುಸರಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಮುಸ್ಲಿಂ ಎಂದು ಅವರಿಬ್ಬರು ಯಾವಾಗಲೂ ಹೇಳುತ್ತಿರುತ್ತಾರೆ. ಅದನ್ನು ನಾನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ ಗೌರಿ ಖಾನ್.

ಶಾರುಖ್ ಖಾನ್ ಹಾಗೂ ಗೌರಿ ಖಾನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 33 ವರ್ಷಗಳಾಗಿವೆ. ಬಾಲಿವುಡ್‌ನ ಈ ಸುವರ್ಣ ದಂಪತಿಗೆ ಆರ್ಯನ್ ಖಾನ್, ಸುಹಾನಾ ಖಾನ್ ಮತ್ತು ಅಬ್ರಾಮ್ ಖಾನ್ ಎಂಬ ಮೂರು ಮಕ್ಕಳಿದ್ದಾರೆ.

Continue Reading

ಪ್ರಮುಖ ಸುದ್ದಿ

Sandalwood News : ಚಿತ್ರರಂಗದ ಸಮಸ್ಯೆ ಬಗೆಹರಿಸಲು ಗೋವಾಕ್ಕೆ ಹೋದ ನಿಯೋಗದೊಳಗೆ ಜಟಾಪಟಿ!

Kannada Producers: ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ.

VISTARANEWS.COM


on

Kannada producers
Koo

ಬೆಂಗಳೂರು: ಕನ್ನಡ ಚಲನಚಿತ್ರ ಕ್ಷೇತ್ರ (Sandalwood News) ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲೆಂದು ಗೋವಾಗೆ ಹೋಗಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ (Kannada Producers) ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳಲ್ಲಿ ಕೆಲವು ಪರಸ್ಪರ ಗಲಾಟೆ ಮಾಡಿಕೊಂಡ ಪ್ರಸಂಗ ವರದಿಯಾಗಿದೆ. ಸಣ್ಣದಾಗಿ ಆರಂಭಗೊಂಡ ವಾಗ್ವಾದ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿದ್ದು ಪರಸ್ಪರ ಹೊಡೆದಾಡಿಕೊಂಡ ಬಳಿಕ ಪ್ರತ್ಯೇಕವಾಗಿ ಬೆಂಗಳೂರಿಗೆ ತಿರುಗಿ ಬಂದಿದ್ದಾರೆ. ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲೆಂದು ಹೋದವರು ಹೊಸ ಸಮಸ್ಯೆ ಸೃಷ್ಟಿಸಿಕೊಂಡು ಬಂದಿದ್ದಾರೆ.

ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ. ಕೊನೆಗದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ನಿರ್ಮಾಪಕರಾದ ರಥಾವರ ಮಂಜುನಾಥ್, ಎ.ಗಣೇಶ್ ಹಾಗೂ ಸತೀಶ್ ಆರ್ಯ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ.

ಗಲಾಟೆ ಮಾಡಿದ ಬಳಿಕ ಮೂವರನ್ನು ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಕಳುಹಿಸಲಾಗಿದೆ. ಗೋವಾ ಟ್ರಿಪ್‌ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ಬುಧವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್ ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್ ಈ ಪ್ರವಾಸದಲ್ಲಿದ್ದರು.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗಲಾಟೆ ಯಾವ ಕಾರಣಕ್ಕೆ ನಡೆಯಿತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಪಾರ್ಟಿ ಮಾಡುವ ವೇಳೆ ಮಾತಿಗೆ ಬೆಳೆದು ಗಲಾಟೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಚಾರ ಟೀಕೆಗೆ ಒಳಗಾಗಿದ್ದು ಅಲ್ಲಿಗೆ ಹೋಗಿ ಗಲಾಟೆ ಮಾಡಿ ಬರುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Kannada New Movie: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ಕೋಟಿಯ ಇನ್ನೊಂದು ಪೋಸ್ಟರ್‌ ರಿಲೀಸ್‌ ಆಗಿದೆ. ಅದ್ದೂರಿ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪೋಸ್ಟರ್‌ ರಿಲೀಸ್‌ ಮಾಡಿ ಶುಭ ಹಾರೈಸಿದರು. ಪರಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ, ಮೋಕ್ಷಾ‌ ಕುಶಾಲ್, ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಮತ್ತಿತರರು ನಟಿಸಿದ್ದಾರೆ. ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಕೋಟಿʼ ಸಿನಿಮಾದ ಪ್ರೀ ರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು (Kannada New Movie).

ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಅಭಿಮಾನಿಗಳ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದವರನ್ನು ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ʼಕೋಟಿʼ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ʼಕೋಟಿʼಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್‌ಗೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ʼಕೋಟಿʼಯ ಇತರ ನಟ ನಟಿಯರಿಂದ ವಿಶೇಷ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು.

ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು. ಈ ಚಿತ್ರದ ಸಂಗೀತ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ʼಕೋಟಿʼಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲ್‌ ಮುನ್ನಡೆಸಿದ್ದ ಪರಮ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಚಾನೆಲ್‌ನ ಸಿಬ್ಬಂದಿ ವಿಶೇಷ ವಿಡಿಯೊ ಮೂಲಕ ಅವರಿಗೆ ಶುಭ ಕೋರಿದರು. ವಿಡಿಯೊದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ ಹೊಸ ಸಿನಿಮಾ ಹೆಸರು ಅನೌನ್ಸ್‌! ಪರಮ್‌ ಆ್ಯಕ್ಷನ್‌ ಕಟ್‌!

ಈಗಾಗಲೇ ಪೋಸ್ಟರ್, ಟೀಸರ್, ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ‘ಕೋಟಿ’ ಕನ್ನಡ ಇಂಡಸ್ಟ್ರಿಯ ದ್ವಿತೀಯಾರ್ಧದ ಯಶಸ್ಸಿಗೆ ಮೊದಲ ಗೆಲುವಾಗುವ ಎಲ್ಲ ಲಕ್ಷಣ ಕಾಣುತ್ತಿದೆ ಎನ್ನುವುದು ಅಭಿಮಾನಿಗಳ ಮನದಾಳ. ‘ಕೋಟಿ ಮನರಂಜನೆ’ ಕಾರ್ಯಕ್ರಮವು ಇದೇ ಜೂನ್ 2ರಂದು ಸಂಜೆ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣದ ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Pushpa 2: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರದ ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್‌ ಆಗಿದೆ. ಈಗಾಗಲೇ ರಿಲೀಸ್‌ ಆಗಿರುವ ಮೊದಲ ಹಾಡು ಸೂಪರ್‌ ಹಿಟ್‌ ಆಗಿದ್ದು, ಎರಡನೇ ಹಾಡಿನ ಬಗ್ಗೆ ಕುತೂಹಲ ಮೂಡಿದೆ. ಹಾಗಾದರೆ ಎರಡನೇ ಹಾಡು ಯಾವಾಗ ರಿಲೀಸ್‌ ಆಗಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Pushpa 2
Koo

ಹೈದರಾಬಾದ್‌: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ.

ʻಪುಷ್ಪ ಪುಷ್ಪʼ ಅಲ್ಲು ಅರ್ಜುನ್‌ ಪಾತ್ರವನ್ನು ಪರಿಚಯಿಸುವ ಹಾಡಾದರೆ ಇದೀಗ ರಿಲೀಸ್‌ ಆಗಲಿರುವ ಎರಡನೇ ಹಾಡಿನಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಇರಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಾಡು ರಿಲೀಸ್‌ ಯಾವಾಗ?

ʼಪುಷ್ಪ 2ʼ ಚಿತ್ರದ ಎರಡನೇ ಹಾಡು ನಾಳೆ (ಮೇ 29) ಬೆಳಿಗ್ಗೆ 11.07ಕ್ಕೆ ರಿಲೀಸ್‌ ಆಗಲಿದೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್‌ ಫೋಸ್‌ ಕೊಡುತ್ತಿರುವ ಪೋಸ್ಟರ್‌ ಈಗಾಗಲೇ ಗಮನ ಸೆಳೆದಿದೆ. ಗುಲಾಬಿ ಬಣ್ಣ, ಹಲವು ಡ್ಯಾನ್ಸರ್‌ಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ನಗುತ್ತಾ ಪೋಸ್‌ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬರಲಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Continue Reading
Advertisement
Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ5 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ5 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ5 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ6 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ6 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ6 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ6 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ6 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ6 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು17 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌