Review: ಇನ್ನೂ ಬೆಸ್ಟ್‌ ಆಗಬಹುದಿತ್ತು ʼಬೀಸ್ಟ್‌ʼ - Vistara News

ಸಿನಿಮಾ

Review: ಇನ್ನೂ ಬೆಸ್ಟ್‌ ಆಗಬಹುದಿತ್ತು ʼಬೀಸ್ಟ್‌ʼ

ಅಭಿಮಾನಿಗಳ ನಿರೀಕ್ಷೆ ಮುಟ್ಟುವಲ್ಲಿ ವಿಫಲವಾಗಿರುವ ಚಿತ್ರ. ನಿರ್ದೇಶಕ ನೆಲ್ಸನ್ ಹಾಗೂ ನಟ ವಿಜಯ್‌ ತಳಪತಿ ಅಭಿಮಾನಿಗಳಿಗೆ ನಿರಾಸೆ ಉಂಟುಮಾಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರ: ಬೀಸ್ಟ್‌ (ತಮಿಳು)
ನಿರ್ದೇಶನ: ನೆಲ್ಸನ್‌
ನಿರ್ಮಾಪಕ: ಕಲಾನಿಧಿ ಮಾರನ್‌
ಸಂಗೀತ: ಅನಿರುದ್ಧ್‌ ರವಿಚಂದ್ರನ್‌
ತಾರಾಗಣ: ವಿಜಯ್‌, ಪೂಜಾ ಹೆಗಡೆ, ಸೆಲ್ವ ರಾಘವನ್‌, ಅಂಕುರ್‌ ವೈಕಲ್‌, ವಿ.ಟಿ.ವಿ ಗಣೇಶ್‌, ಯೋಗಿ ಬಾಬು

ಒಂದು ಚಿತ್ರ ಸೂಪರ್‌ ಹಿಟ್‌ ಆದ ನಂತರ ಪ್ರೇಕ್ಷಕರಲ್ಲಿ ಸಹಜವಾಗಿ ಆ ನಿರ್ದೇಶಕರ ಮೇಲೆ ಭರವಸೆ ಹೆಚ್ಚುತ್ತದೆ, ನಿರೀಕ್ಷೆ ಹೆಚ್ಚುತ್ತದೆ. ಕೊನೇಪಕ್ಷ ಹಿಂದಿನ ಚಿತ್ರದ ಮಟ್ಟದಲ್ಲಿ ಇರುತ್ತದೆ ಎಂಬ ನಂಬಿಕೆ ಇರುತ್ತದೆ. ಅದೇ ರೀತಿಯ ಭರವಸೆಯನ್ನು ತಮಿಳು ಚಿತ್ರರಂಗದ ನಿರ್ದೇಶಕ ನೆಲ್ಸನ್‌ ಮೂಡಿಸಿದ್ದರು. ತಾವು ನಿರ್ದೇಶಿಸಿದ ಶಿವಕಾರ್ತಿಕೇಯನ್‌ ಅಭಿನಯದ ಡಾಕ್ಟರ್‌ ಎಂಬ ಚಿತ್ರ ವಿನೂತನವಾಗಿತ್ತು. But ನೆಲ್ಸನ್‌ ನಿರ್ದೇಶನದ ಬೀಸ್ಟ್‌ ಚಿತ್ರ ಜನರ ನಿರೀಕ್ಷೆಯನ್ನು ಮುಟ್ಟುವುಲ್ಲಿ ಇನ್ನಷ್ಟು ಪ್ರಯತ್ನ ಮಾಡಬಹುದಿತ್ತು.

ಕಥೆ ಹೇಗಿದೆ?

ಬೀಸ್ಟ್‌ ಟ್ರೇಲರ್‌ ನೊಡಿದಾಗ ಸಿನಿಮಾದ ಒಂದು ಸಾಮಾನ್ಯ ಚಿತ್ರಣ ಅರಿವಾಗುತ್ತದೆ. ಒಬ್ಬ ಯೋಧನ ಕಥೆ ಇದು ಎಂದು ತಿಳಿಯುತ್ತದೆ. But ಉಳಿದ ಯೋಧರ ಕಥೆಯಂತೆ, ಯಾವುದೋ ಯುದ್ಧವನ್ನು ಆಧರಿಸಿ ಮಾಡಿರುವಂತಹ ಕಥೆಯಲ್ಲ. ಒಂದು ಶಾಪಿಂಗ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯುವಂತಹ ಸರಳವಾದ ಕಥೆ. ಭಯೋತ್ಪಾದಕರು ಹೈಜಾಕ್‌ ಮಾಡಿದ ಶಾಪಿಂಗ್‌ ಕಾಂಪ್ಲೆಕ್ಸ್‌ನಿಂದ ನಾಗರಿಕರನ್ನು ಸುರಕ್ಷಿತವಾಗಿ ಹೊರತರಬೇಕಾಗುತ್ತದೆ. ಆ ಪ್ರಯತ್ನದ ಸುತ್ತ ನಡೆಯುವ ಘಟನೆಯನ್ನು ಚಿತ್ರವಾಗಿಸಲಾಗಿದೆ.

ಹೇಗಿದೆ ಚಿತ್ರ?

ಪ್ರೇಕ್ಷಕರು ಚಿತ್ರವನ್ನು ಯಾಕೆ ನೋಡಲು ಚಿತ್ರಮಂದಿರಕ್ಕೆ ಬರುತ್ತಾರೆ ಎಂದು ನಿರ್ದೇಶಕ ಅರಿತುಕೊಂಡಿದ್ದರೆ ಉತ್ತಮ. ಕೆಲವರು ನಿರ್ದೇಶಕ ಅದ್ಭುತ ಕಥೆಯನ್ನು ಚಿತ್ರ ಮಾಡಿರುತ್ತಾರೆ ಎಂಬ ಭರವಸೆ ಇಟ್ಟು ಚಿತ್ರ ನೋಡಲು ಹೋಗುತ್ತಾರೆ. ಕೆಲವರು ಚಿತ್ರದ ಮೇಕಿಂಗ್‌ ಹೇಗಿದೆ ಎಂದು ನೊಡುತ್ತಾರೆ. ಕೆಲವರು ನಟ ಅಥವಾ ನಟಿಯ ಮೇಲಿರುವ ಅಭಿಮಾನದಿಂದ ನೋಡುತ್ತಾರೆ. But, ಬೀಸ್ಟ್‌ ಚಿತ್ರ ಈ ಮೂರು ಅಂಶಗಳನ್ನೂ ಸಾರ್ಥಕಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಬಹುದು.

  1. ಅದ್ಭುತ ಎನಿಸುಂತಹ ಕಥೆಯಲ್ಲ.
  2. ನಟ Vijay Thalapathy ಅತ್ಯತ್ತಮ ನಟ. ಈವರೆಗೆ ಬಿಡುಗಡೆಗೊಂಡತಹ ಎಲ್ಲಾ ಚಿತ್ರದಲ್ಲಿ ಅವರ ಅಭಿನಯದ ಛಾಪು ಮೂಡಿಸಿದ್ದಾರೆ. But, ಬೀಸ್ಟ್‌ ಚಿತ್ರದ ವೀರರಾಘವನ್‌ ಪಾತ್ರದಲ್ಲಿ ಅವರ ಮುಖದ ಭಾವನೆಗಳು ಬದಲಾಗುವುದು ಕಾಣುವುದಿಲ್ಲ. ಕೆಲವು ದೃಶ್ಯಗಳಲ್ಲಿ ಮಾತ್ರ ಅವರ ಖದರ್‌ ಸ್ಟೈಲ್‌ನಲ್ಲಿ ಮೆರೆದಿದ್ದು ಕಂಡುಬರುತ್ತದೆ. ಇದು ಕೂಡ ಚಿತ್ರದ ವೈಫಲ್ಯ.
    ಪೂಜಾ ಹೆಗಡೆ ನಟಿಸಿದ ಪ್ರೀತಿ ಎಂಬ ಪಾತ್ರವೂ ಸಾಧಾರಣವಾಗಿ ಮೂಡಿಬಂದಿದೆ. ಉಳಿದ ಸಹಾಯಕ ಪಾತ್ರಗಳು ಕೂಡ ಸಾಮಾನ್ಯ.
  3. ಚಿತ್ರದ ಕಥೆಯನ್ನು ಗಡಿಬಿಡಿಯಲ್ಲಿ ಹೇಳಿದಂತೆ ಭಾಸವಾಗುತ್ತದೆ.
  4. ಚಿತ್ರದಲ್ಲಿ ವೀರರಾಘವನ್‌ ಪಾತ್ರದ ಪ್ರವೇಶದಿಂದ ಶುರು ಮಾಡಿ ಅಂತ್ಯದವರೆಗೂ ಚಿತ್ರ ಡಲ್‌ ಎಂದು ಭಾಸವಾಗುತ್ತದೆ. So, ಎಲ್ಲಿಯೂ ʼವ್ಹಾವ್‌ʼ ಎನ್ನುವ ಸನ್ನಿವೇಶ ಬರುವುದಿಲ್ಲ.
  5. ಅಲ್ಲಲ್ಲಿ ಹಾಸ್ಯದ ಅಂಶವನ್ನು ಕಾಣಬಹುದು ಆದರೆ ಅದು ಒತ್ತಾಯಪೂರ್ವಕವಾಗಿ ಮದ್ಯೆ ಮಧ್ಯೆ ಸೇರಿಸಿದಂತೆ ಅನುಭವವಾಗುತ್ತದೆ. So, ಅದ್ಭುತ ಕಾಮಿಡಿಯ ಅಂಶಗಳು ಕಾಣುವುದಿಲ್ಲ.
  6. ಚಿತ್ರದಲ್ಲಿ ಇರುವುದೇ ಎರಡು ಹಾಡುಗಳು. ಒಂದು ಹಾಡು ಚಿತ್ರ ಮುಗಿದ ನಂತರ ಬರುತ್ತದೆ. ಮತ್ತೊಂದು ಚಿತ್ರದ ಮಧ್ಯದಲ್ಲಿ ಬರುತ್ತದೆ but ಅದು ಕಥೆಯ ಓಘಕ್ಕೆ ತೊಡಕು ಉಂಟುಮಾಡುತ್ತದೆ. ಎರಡೂ ಹಾಡುಗಳನ್ನು ಬಿಡಿಯಾಗಿ ಕೇಳಿದಾಗ ಚೆನ್ನಾಗಿದೆ.

ಚಿತ್ರದಲ್ಲಿರುವ ಗುಣಾತ್ಮಕ ಆಂಶಗಳು

So, ಚಿತ್ರದಲ್ಲಿ ಗುಣಾತ್ಮಕ ಅಂಶಗಳೇ ಇಲ್ವಾ? ಎಂಬ ಪ್ರಶ್ನೆ ಮೂಡಬಹುದು.
But, ಚಿತ್ರದಲ್ಲಿ ಕೆಲವು ಗುಣಾತ್ಮಕ ಅಂಶಗಳಿವೆ.

  1. ನಿರ್ದೇಶಕ ನೆಲ್ಸನ್‌ ಒಂದು ಹೊಸ ಪ್ರಯತ್ನವನ್ನು ಮಾಡುವ ಉದ್ದೇಶದಿಂದ ಚಿತ್ರವನ್ನು ನಿರ್ದೇಶಿಸಿದ್ದಾರೆ.
  2. ಸಾಮಾನ್ಯವಾಗಿ ಯಾವುದೇ ದೊಡ್ಡ ಸ್ಟಾರ್‌ ಚಿತ್ರದಲ್ಲಿ ಎಂಟ್ರಿ ಭರ್ಜರಿಯಾಗಿರುತ್ತದೆ. ಆದರೆ ಈ ಸಿನಿಮಾದಲ್ಲಿ ತುಂಬಾ ಸಾದಾ ಎಂಟ್ರಿ. ಇದೊಂದು ಹೊಸ ಪ್ರಯತ್ನ ಎನ್ನಬಹುದು.
  3. ಚಿತ್ರದ ಹಿನ್ನಲೆ ಸಂಗೀತ ಮೆಚ್ಚುವಂಥದ್ದು. ಅನಿರುಧ್ಧ್‌ ರವಿಚಂದ್ರನ್‌ ನೀಡಿದ ಹಿನ್ನಲೆ ಸಂಗೀತ ನಿಜಕ್ಕೂ ಅದ್ಭುತ ಎನ್ನಬಹುದು. Hence, ಸಂದರ್ಭಕ್ಕೆ ಹೊಂದುವಂತಹ ಸಂಗೀತ ನೀಡುವುದರಲ್ಲಿ ಅನಿರುದ್ಧ್‌ ಪಳಗಿದ್ದಾರೆ.
  4. ಚಿತ್ರದಲ್ಲಿ ಕೆಲವು ವನ್‌ ಲೈನರ್‌ ಡೈಲಾಗ್‌ಗಳಿವೆ. ಅದನ್ನು ವಿಜಯ್‌ ಸ್ವರದಲ್ಲಿ ಆ ಮಾತುಗಳನ್ನು ಕೇಳಲು ಖುಷಿ ಕೊಡುತ್ತದೆ.
  5. ಚಿತ್ರದ ಮೇಕಿಂಗ್‌ ಒಂದು ಮಟ್ಟದಲ್ಲಿ ಗೆದ್ದಿದೆ ಎನ್ನಬಹುದು. ಛಾಯಗ್ರಾಹಕ ಮನೋಜ್‌ ಪರಮಹಂಸ ಚಿತ್ರೀಕರಣ ಮಾಡಿದ್ದಾರೆ ಹಾಗೂ ಆರ್‌. ನಿರ್ಮಲ್‌ ಅಚ್ಚುಕಟ್ಟಾಗಿ ಎಡಿಟಿಂಗ್‌ ಮಾಡಿದ್ದಾರೆ.

ಬೀಸ್ಟ್‌ ಟ್ರೇಲರ್‌ ಬಿಡುಗಡೆಗೊಂಡಾಗ ಅತ್ಯುತ್ತಮ ಚಿತ್ರವಾಗುವ ಸಾಧ್ಯತೆಯಿದೆ ಎಂದು ಭರವಸೆ ಮೂಡಿಸಿತ್ತು. ಚಿತ್ರದ ಬಿಡುಗಡೆಯ ಮುನ್ನ ಸಾಕಷ್ಟು ಹೈಪ್‌ ಕೂಡ ನೀಡಲಾಗಿತ್ತು. ಈ ಹಿಂದೆ ಕೂಡ ಥುಪಾಕಿಯಂತಹ ಸಿನಿಮಾಗಳಲ್ಲಿ ಸೈನಿಕನ ಪಾತ್ರದಲ್ಲಿ ವಿಜಯ್‌ ಅದ್ಭುತ ಅಭಿನಯ ಮಾಡಿದ್ದು ಸಹಜವಾಗಿ ನಿರೀಕ್ಷೆಯ ಮಟ್ಟ ಹೆಚ್ಚಿತ್ತು. But, ಬೀಸ್ಟ್‌ ಚಿತ್ರ ಪ್ರೇಕ್ಷಕರ ಹಾಗೂ ಅಭಿಮಾನಿಗಳ ನಿರೀಕ್ಷೆಯನ್ನು ಮುಟ್ಟುವಲ್ಲಿ ಯಶಸ್ವಿಯಾಗಿಲ್ಲ.

ಹೆಚ್ಚಿನ ಓದಿಗಾಗಿ: KGF Chapter 2 ಚಿತ್ರ ವಿಮರ್ಶೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

A: Film by Upendra: ಈ ಚಿತ್ರಕ್ಕೆ ನಾನು ನಾಯಕಿಯಾಗಿ ಆಯ್ಕೆಯಾಗಿದ್ದು ನಿಜಕ್ಕೂ ಆಶ್ಚರ್ಯ. ನಾನು ಆಗ ಓದುತ್ತದೆ. ನ್ಯೂಯಾರ್ಕ್ ನಲ್ಲಿದೆ. ನನ್ನ ಫೋಟೊ ನೋಡಿದ ಉಪೇಂದ್ರ ಅವರು ನಾಯಕಿಯಾಗಿ ಆಯ್ಕೆ ಮಾಡಿದರು. ನಿಜವಾಗಲೂ ಉಪೇಂದ್ರ ಅವರು ಬರೀ ಕರ್ನಾಟಕ ಅಷ್ಟೇ ಅಲ್ಲ. ಇಡೀ ದೇಶ ಕಂಡ ಅತ್ಯಂತ ಪ್ರತಿಭಾವಂತ ನಿರ್ದೇಶಕ ಎಂದು ಹೇಳಿದ್ದಾರೆ.

VISTARANEWS.COM


on

A: Film by Upendra
Koo

ಬೆಂಗಳೂರು: ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ “A” (A: Film by Upendra) ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ . ಈ ಚಿತ್ರ ತೆರೆಕಂಡು 26 ವರ್ಷಗಳಾಗಿದೆ. ಹಿಂದಿನ ವಾರ ಈ ಚಿತ್ರ ಕರ್ನಾಟಕದಾದ್ಯಂತ ರೀ ರಿಲೀಸ್ ಕೂಡ ಆಗಿ ಜನರ ಮನ ಗೆಲ್ಲುತ್ತಿದೆ. ಈ ಸಂತಸವನ್ನು ನಾಯಕಿ ಚಾಂದಿನಿ ಸೇರಿದಂತೆ “A” ಚಿತ್ರತಂಡದ ಸದಸ್ಯರು ಮಧ್ಯಮದ ಮುಂದೆ ಹಂಚಿಕೊಂಡರು.

26 ವರ್ಷಗಳ ಹಿಂದೆ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ ಚಿತ್ರ ಉಪೇಂದ್ರ ನಿರ್ದೇಶನದ “A” ಎಂದು ಮಾತನಾಡಿದ ನಾಯಕಿ ಚಾಂದಿನಿ, ಈ ಚಿತ್ರ ಇತ್ತೀಚೆಗೆ ರೀ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಹಳ ಸಂತೋಷವಾಗಿದೆ. ಈ ಚಿತ್ರಕ್ಕೆ ನಾನು ನಾಯಕಿಯಾಗಿ ಆಯ್ಕೆಯಾಗಿದ್ದು ನಿಜಕ್ಕೂ ಆಶ್ಚರ್ಯ. ನಾನು ಆಗ ಓದುತ್ತದೆ. ನ್ಯೂಯಾರ್ಕ್ ನಲ್ಲಿದೆ. ನನ್ನ ಫೋಟೊ ನೋಡಿದ ಉಪೇಂದ್ರ ಅವರು ನಾಯಕಿಯಾಗಿ ಆಯ್ಕೆ ಮಾಡಿದರು. ನಿಜವಾಗಲೂ ಉಪೇಂದ್ರ ಅವರು ಬರೀ ಕರ್ನಾಟಕ ಅಷ್ಟೇ ಅಲ್ಲ. ಇಡೀ ದೇಶ ಕಂಡ ಅತ್ಯಂತ ಪ್ರತಿಭಾವಂತ ನಿರ್ದೇಶಕ ಎಂದು ಹೇಳಿದ್ದಾರೆ.

ಮುಂದುವರಿದ ಅವರು, ಉಪೇಂದ್ರ ಅವರಿಂದ ಮೊದಲ ಚಿತ್ರದಲ್ಲೇ ನಾನು ಸಾಕಷ್ಟು ಕಲಿತಿದ್ದೇನೆ. ಮೊದಲ ಚಿತ್ರದ ಚಿತ್ರೀಕರಣದ ಅನುಭವ ಈಗಲೂ ಕಣ್ಣ ಮುಂದೆ ಇದೆ. ನಾನು “A” ಚಿತ್ರದ ನಂತರ ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಗಳ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನನ್ನನ್ನು ಎಲ್ಲರೂ ಗುರುತಿಸುವುದು “A” ಚಿತ್ರದ ನಾಯಕಿ ಅಂತ. ಅಷ್ಟು ಹೆಸರು ತಂದುಕೊಟ್ಟಿದೆ ನನಗೆ ಈ ಚಿತ್ರ. ಈ ಸಂದರ್ಭದಲ್ಲಿ ನಿರ್ದೇಶಕರಿಗೆ, ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಮತ್ತೊಂದು ಮುಖ್ಯವಾದ ವಿಷಯವೆಂದರೆ ಈ ಜನಪ್ರಿಯ ಚಿತ್ರವನ್ನು ಇನ್ನಷ್ಟು ಮುಂದುವರೆಸುವುದು ನನ್ನ ಹಂಬಲ. ಹಾಗಾಗಿ ‘A’ ಚಿತ್ರದ ಮುಂದುವರೆದ ಭಾಗ ಮಾಡುವುದಕ್ಕೆ ತೀರ್ಮಾನ ಮಾಡಿದ್ದೇನೆ. ಕಥೆ ಮತ್ತು ಚಿತ್ರಕಥೆಯನ್ನು ನಾನೇ ಬರದಿದ್ದೇನೆ. ನಿರ್ಮಾಪಕ ಮಂಜುನಾಥ್, ಸಂಗೀತ ನಿರ್ದೇಶಕ ಗುರುಕಿರಣ್‍ ಮುಂತಾದವರು ಜೊತೆಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

ಇನ್ನೊಂದು ವಿಷಯ ಬಾಕಿ ಇದೆ. ನಾವೆಲ್ಲರೂ ಹೋಗಿ ಉಪೇಂದ್ರ ಅವರ ಬಳಿ ಈ ಚಿತ್ರವನ್ನು ನೀವೇ ನಿರ್ದೇಶಿಸಬೇಕು ಹಾಗೂ ನಾಯಕರಾಗೂ ನಟಿಸಬೇಕು ಎಂದು ಮನವಿ ಮಾಡುವುದು. ಸದ್ಯದಲ್ಲೇ ಅವರನ್ನು ಭೇಟಿ ಮಾಡುತ್ತೇವೆ‌. ಅವರು ಒಪ್ಪುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ಸಿನಿಮಾ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ಪ್ರಾರಂಭವಾಗಲಿದೆ. ಆ ಚಿತ್ರದಲ್ಲಿದ್ದ ಬಹುತೇಕ ಚಿತ್ರತಂಡದ ಸದಸ್ಯರು ಈ ಚಿತ್ರದಲ್ಲೂ ಇರುತ್ತಾರೆ ಎಂದು ಚಾಂದಿನಿ ಹೇಳಿದರು.

ಚಿತ್ರ ಆರಂಭವಾದಗಿನಿಂದ ಹಿಡಿದು ಬಿಡುಗಡೆಯಾಗುವವರೆಗಿನ ಮಾಹಿತಿಯನ್ನು ನಿರ್ಮಾಪಕ ಮಂಜುನಾಥ್ ನೀಡಿದರು. ಹಾಡುಗಳ ಕುರಿತು ಗುರುಕಿರಣ್ ಮಾತನಾಡಿದರು. ವಿ.ಮನೋಹರ್, ಗುರುದತ್ತ್, ಲೋಕಿ, ರಾಜಾರಾಮ್, ಜೋಶಿ ಮುಂತಾದ ಚಿತ್ರತಂಡದ ಸದಸ್ಯರು ಹಾಗೂ ವಿತರಕ ಶಂಕರ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಉಪೇಂದ್ರ ಅವರು ವಿದೇಶದಲ್ಲಿರುವುದರಿಂದ ವಿಡಿಯೋ ಮೂಲಕ ಖುಷಿ ಹಂಚಿಕೊಂಡರು.

Continue Reading

ಪ್ರಮುಖ ಸುದ್ದಿ

Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

Chow Chow Bath: ಸಿನಿ ಬಜಾರ್ ನಲ್ಲಿ ಬಿಡುಗಡೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು ಐವತ್ತು ದಿನಗಳ ಕಾಲ ಈ ಸಿನಿಮಾ ಸಿನಿ ಬಜಾರಿನಲ್ಲಿ ಪ್ರದರ್ಶನ ಕಾಣಲಿದೆ. ಆರಂಭದಿಂದಲೂ ಚೌ ಚೌ ಬಾತ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಕೊಂಡಿತ್ತು.

VISTARANEWS.COM


on

'Chow Chow Bath'
Koo

ಬೆಂಗಳೂರು: ಕೇಂಜ ಚೇತನ್​ ಕುಮಾರ್ ನಿರ್ದೇಶನದ ಚೌ ಚೌ ಬಾತ್’ (Chow Chow Bath) ಈ ವರ್ಷ ಬಿಡುಗಡೆಗೊಂಡಿರುವ ಚೆಂದದ ಚಿತ್ರಗಳಲ್ಲೊಂದಾಗಿ ಗುರುತಿಸಿಕೊಂಡಿದೆ. ಒಂದಷ್ಟು ಪ್ರಯೋಗಾತ್ಮಕ ಅಂಶಗಳು, ಪ್ರೇಕ್ಷಕರನ್ನೇ ತನ್ನೊಳಗಿಳಿಸಿಕೊಂಡು ಕರೆದೊಯ್ಯುವ ಗುಣದ ದೃಷ್ಯದಿಂದ ಕಳೆಗಟ್ಟಿಕೊಂಡಿದ್ದ ಚಿತ್ರ `ಚೌ ಚೌ ಬಾತ್’. ಅತ್ಯತ್ತಮ ವಿಮರ್ಶೆ ಪಡೆದಿದ್ದ ಈ ಸಿನಿಮಾವನ್ನು ನೋಡಿದ ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದ್ದ ಚೌ ಚೌ ಬಾತ್ ಇದೀಗ ಸಿನಿ ಬಜಾರ್​ ಎಂಬ ಡಿಜಿಟಲ್ ಥಿಯೇಟರಿನಲ್ಲಿ ಬಿಡುಗಡೆಗೊಂಡಿದೆ.

ಸಿನಿ ಬಜಾರ್ ನಲ್ಲಿ ಬಿಡುಗಡೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು ಐವತ್ತು ದಿನಗಳ ಕಾಲ ಈ ಸಿನಿಮಾ ಸಿನಿ ಬಜಾರಿನಲ್ಲಿ ಪ್ರದರ್ಶನ ಕಾಣಲಿದೆ. ಆರಂಭದಿಂದಲೂ ಚೌ ಚೌ ಬಾತ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಕೊಂಡಿತ್ತು. ಈ ಕಾರಣದಿಂದಲೇ ಈ ಸಿನಿಮಾ ಯಶ ಕಂಡಿದ್ದೀಗ ಇತಿಹಾಸ. ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾದ್ದೊಂದು ಸಮ್ಮೋಹಕ ಶೈಲಿಯಲ್ಲಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರೇಕ್ಷಕರಿಂದಲೇ ಈ ಚಿತ್ರ ಮೆಚ್ಚುಗೆ ಗಳಿಸಿಕೊಂಡಿತ್ತು. ಇಂಥಾ ಸದಭಿಪ್ರಾಯ ಕೇಳಿ ಸಿನಿಮಾ ಮಂದಿರಗಳಲ್ಲಿ ನೋಡಬೇಕಂದುಕೊಂಡು ಸಾಧ್ಯವಾಗದವರು, ಸಿನಿ ಬಜಾರ್ ಡಾಟ್ ಕಾಮ್ ನಲ್ಲಿ ಚೌ ಚೌ ಬಾತ್ ನ ಅಸಲೀ ಸವಿಯನ್ನು ಆಸ್ವಾದಿಸುವ ಅವಕಾಶವೀಗ ಒದಗಿ ಬಂದಿದೆ.

ಇದನ್ನೂ ಓದಿ: Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

ಇದು ಹೈಪರ್ ಲಿಂಕ್ ರೊಮ್ಯಾಂಟಿಕ್ ಜಾನರಿನ ಚಿತ್ರ. ಕನ್ನಡದ ಮಟ್ಟಿಗಿದು ಅಪರೂಪದ ಜಾನರ್. ಮೂರು ವಿಭಿನ್ನ ಪ್ರೇಮ ಕಥನಗಳನ್ನು ತೆರೆದಿಡುವ ಚೌ ಚೌ ಬಾತ್ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆಯುವಂತಿದೆ. ಹೀಗೊಂದು ಅಭಿಪ್ರಾಯ ನೋಡಿದವರಿಂದಲೇ ಮೂಡಿಕೊಂಡಿದೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮನಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮುನಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿದೆ. ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

Continue Reading

ಪ್ರಮುಖ ಸುದ್ದಿ

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Maarige Daariಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಅವರ ಒಂದಷ್ಟು ಲುಕ್ಕುಗಳ ಝಲಕ್ಕುಗಳು ಫಸ್ಟ್ ಲುಕ್ ಟೀಸರ್ ಮೂಲಕ ಜಾಹೀರಾಗಿವೆ. ನೆಲಮೂಲದ ಕಥೆ, ಮಾಸ್ ದೃಷ್ಯಾವಳಿಗಳ ಸುಳಿವು ನೀಡಿದೆ.

VISTARANEWS.COM


on

Maarige Daari
Koo

ಬೆಂಗಳೂರು: ಕನ್ನಡ ಸಿನಿ ಕ್ಷೇತ್ರಕ್ಕೆ (Sandalwood) ಮತ್ತೊಂದು ಹೊಸ ತಂಡದ ಆಗಮನವಾಗಿದೆ. `ಮಾರಿಗೆ ದಾರಿ’ (Maarige Daari) ಶೀರ್ಷಿಕೆಯ ಈ ಸಿನಿಮಾವೀಗ ಸದ್ದಿಲ್ಲದೆ ಚಿತ್ರೀಕರಣ (Cinema Shooting) ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸತೇನನ್ನೋ ಹೇಳ ಹೊರಟಿರುವಂತೆ ಭಾಸವಾಗುವ ಈ ಟೀಸಸ್​​ನಲ್ಲಿ ಕಥೆಯ ಕುರಿತು ಒಂಚೂರು ಸುಳಿವನ್ನೂ ಬಿಟ್ಟು ಕೊಡದೆ, ಹೀರೋ ಕ್ಯಾರೆಕ್ಟರಿನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದಿಡಲಾಗಿದೆ. ಸದರಿ ಫಸ್ಟ್ ಲುಕ್ ಟೀಸರ್ ಮೂಲಕ ಮಾರಿಗೆ ದಾರಿ ಪಕ್ಕಾ ಮಾಸ್ ಕಂಟೆಂಟ್ ಹೊಂದಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ.

ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಅವರ ಒಂದಷ್ಟು ಲುಕ್ಕುಗಳ ಝಲಕ್ಕುಗಳು ಫಸ್ಟ್ ಲುಕ್ ಟೀಸರ್ ಮೂಲಕ ಜಾಹೀರಾಗಿವೆ. ನೆಲಮೂಲದ ಕಥೆ, ಮಾಸ್ ದೃಷ್ಯಾವಳಿಗಳ ಸುಳಿವಿನೊಂದಿಗೆ ಮೂಡಿ ಬಂದಿರೋ ಈ ಫಸಟ್ ಲುಕ್ ಟೀಸರ್ ಒಂದಷ್ಟು ಆಲೋಚೆನೆಗೆ ಹಚ್ಚುವಂತಿದೆ. ಈ ಮೂಲಕ ಹೊಸಬರೇ ಸೇರಿಕೊಂಡು ರೂಪಿಸಿರುವ ಮಾರಿಗೆ ದಾರಿ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ರಾಧಾ ಫಿಲಂಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಕನ್ನಡದ ಪ್ರೇಕ್ಷಕರಿಗೆ ತೀರಾ ಫ್ರೆಶ್ ಅನ್ನಿಸುವಂಥಾ ಕಥೆಯೊಂದಿಗೆ ಈ ಸಿನಿಮಾವನ್ನು ರೂಪಿಸಿರೋದಾಗಿ ನಿರ್ದೇಶಕರು ಹೇಳಿಕೊಂಡಿದ್ದಾರೆ. ಅದಕ್ಕೆ ತಕ್ಕುದಾದ ಒಂದಷ್ಟು ಅಂಶಗಳು ಈ ಟೀಸರಿನಲ್ಲಿ ಕಾಣಿಸಿವೆ. ಇನ್ನುಳಿದಂತೆ, ಅಗಸ್ತ್ಯ, ಮಹಾಲಕ್ಷ್ಮಿ, ಕಾಕ್ರೋಚ್ ಸುಧಿ, ವರ್ಧನ್, ಪ್ರದೀಪ್ ಪೂಜಾರಿ, ಬೆನಕ ನಂಜಪ್ಪ, ಬಾಲ ರಾಜವಾಡಿ ಮುಂತಾದವರ ತಾರಾಗಣದೊಂದಿಗೆ ಮಾರಿಗೆ ದಾರಿ ಕಳೆಗಟ್ಟಿಕೊಂಡಿದೆ. ಜಗದೀಶ್ ಗೌಡ ಛಾಯಾಗ್ರಹಣ, ಸ್ವಾಮಿನಾಥನ್ ಆರ್.ಕೆ ಸಂಗೀತ ನಿರ್ದೇಶನ, ಜಗದೀಶ್ ಗೌಡ ಸಂಕಲನ ಈ ಚಿತ್ರಕ್ಕಿದೆ.

ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ (koti kannada movie) ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ.

ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.
ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ ಹಾಡಿನ ಬಗ್ಗೆ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ಎಕ್ಸೈಂಟಿಂಗ್ ಮತ್ತು ಚಾಲೆಂಜಿಂಗ್ ಆಗಿತ್ತು. ಸಖತ್ ಮಜಾ ಮಾಡಿದೀನಿ ಈ ಹಾಡನ್ನು ಮಾಡುವ ಪ್ರಕ್ರಿಯೆಯಲ್ಲಿ” ಎಂದು ಹೇಳಿದರು.

Continue Reading

Latest

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Aishwarya Rai : ಈ ತಿಂಗಳ ಆರಂಭದಲ್ಲಿ, ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯ ಅವರೊಂದಿಗೆ ಕಾನ್​ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಅವರು ಈ ವರ್ಷ ಬ್ಯಾಕ್ ಟು ಬ್ಯಾಕ್ ರೆಡ್ ಕಾರ್ಪೆಟ್ ನಲ್ಲಿ ಕಾಣಿಸಿಕೊಂಡರು. ಕೈಂಡ್ಸ್ ಆಫ್ ಕೈಂಡ್ನೆಸ್ ಪ್ರದರ್ಶನದ ಸಮಯದಲ್ಲಿ ಮಾಜಿ ವಿಶ್ವ ಸುಂದರಿ ಫಾಲ್ಗುಣಿ ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಅಂಚುಗಳ ಬೆಳ್ಳಿ ಮತ್ತು ನೀಲಿ ಬಣ್ಣದ ಉಡುಪನ್ನು ಧರಿಸಿ ರೆಡ್ ಕಾರ್ಪೆಟ್​ನಲ್ಲಿ ನಡೆದಿದ್ದರು.

VISTARANEWS.COM


on

Aishwarya Rai
Koo

ನವದೆಹಲಿ: ಐಶ್ವರ್ಯಾ ರೈ ಬಚ್ಚನ್ (Aishwarya Rai) ತಮ್ಮ ತಾಯಿ ಬೃಂದಾ ರೈ ಅವರ ಹುಟ್ಟುಹಬ್ಬದ ಆಚರಣೆಯ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್​ನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ, ನಟಿ ತನ್ನ ತಾಯಿ ಬೃಂದಾ, ಮಗಳು ಆರಾಧ್ಯ ಮತ್ತು ಕೆಲವು ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಪೋಸ್ ನೀಡುವುದನ್ನು ಕಾಣಬಹುದು. ಈ ಮೂವರು ಹುಟ್ಟುಹಬ್ಬದ ಕೇಕ್​ನೊಂದಿಗೆ ಪೋಸ್ ನೀಡುವುದನ್ನು ಕಾಣಬಹುದು. “ಲವ್ ಯು ಬರ್ತ್ ಡೇ ಗರ್ಲ್, ಡಿಯರ್ ಮಮ್ಮಿ-ದೊಡ್ಡಾ” ಎಂದು ಐಶ್ವರ್ಯಾ ರೈ ಬಚ್ಚನ್ ಬರೆದಿದ್ದಾರೆ. ತನ್ನ ತಾಯಿಯ ಫೋಟೋವನ್ನು ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಮತ್ತೊಂದು ಪೋಸ್ಟ್​ನಲ್ಲಿ “ಹುಟ್ಟುಹಬ್ಬದ ಶುಭಾಶಯಗಳು ಪ್ರೀತಿಯ ಅಮ್ಮ. ನಿನ್ನನ್ನು ಶಾಶ್ವತವಾಗಿ ಪ್ರೀತಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯ ಅವರೊಂದಿಗೆ ಕಾನ್​ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಅವರು ಈ ವರ್ಷ ಬ್ಯಾಕ್ ಟು ಬ್ಯಾಕ್ ರೆಡ್ ಕಾರ್ಪೆಟ್ ನಲ್ಲಿ ಕಾಣಿಸಿಕೊಂಡರು. ಕೈಂಡ್ಸ್ ಆಫ್ ಕೈಂಡ್ನೆಸ್ ಪ್ರದರ್ಶನದ ಸಮಯದಲ್ಲಿ ಮಾಜಿ ವಿಶ್ವ ಸುಂದರಿ ಫಾಲ್ಗುಣಿ ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಅಂಚುಗಳ ಬೆಳ್ಳಿ ಮತ್ತು ನೀಲಿ ಬಣ್ಣದ ಉಡುಪನ್ನು ಧರಿಸಿ ರೆಡ್ ಕಾರ್ಪೆಟ್​ನಲ್ಲಿ ನಡೆದಿದ್ದರು. ಅದಕ್ಕೂ ಮೊದಲು, ಅವರು ಚಿನ್ನದ ಅಲಂಕಾರಗಳೊಂದಿಗೆ ಕಪ್ಪು ಮತ್ತು ಬಿಳಿ ಉಡುಪನ್ನು ಧರಿಸಿದ್ದರು.

ಉಮ್ರಾವ್ ಜಾನ್, ಗುರು, ಕುಚ್ ನಾ ಕಹೋ ಮತ್ತು ರಾವಣ್ ಚಿತ್ರಗಳ ನಟಿಯಾಗಿರುವ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಏಪ್ರಿಲ್ 20, 2007 ರಂದು ವಿವಾಹವಾಗಿದ್ದರು. ದಂಪತಿಗಳು ತಮ್ಮ ಮಗಳು ಆರಾಧ್ಯಳನ್ನು 2011ರಲ್ಲಿ ಸ್ವಾಗತಿಸಿದ್ದರು.

ಇದನ್ನು ಓದಿ: koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಐಶ್ವರ್ಯಾ ರೈ ಬಚ್ಚನ್ ಕೊನೆಯ ಬಾರಿಗೆ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 ಚಿತ್ರದಲ್ಲಿ ತ್ರಿಷಾ, ವಿಕ್ರಮ್, ಕಾರ್ತಿ, ಜಯಂ ರವಿ, ಶೋಭಿತಾ ಧುಲಿಪಾಲ ಮತ್ತು ಐಶ್ವರ್ಯಾ ಲಕ್ಷ್ಮಿ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು ಕಳೆದ ವರ್ಷ ಬಿಡುಗಡೆಯಾಯಿತು ಮತ್ತು ಇದು ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿ ಹೊರಹೊಮ್ಮಿತು.

Continue Reading
Advertisement
DC m s Diwakar instructed for adequate supply of sowing seed, fertilizers in monsoon season
ಮಳೆ54 seconds ago

Vijayanagara News: ಬಿತ್ತನೆ ಬೀಜ, ರಸ ಗೊಬ್ಬರ ಸಮರ್ಪಕ ಪೂರೈಕೆಗೆ ಡಿಸಿ ದಿವಾಕರ್ ಸೂಚನೆ

Rave party case Three persons including a PSI of Hebbagodi police station have been suspended
ಕ್ರೈಂ3 mins ago

Rave party: ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಪಿಎಸ್‌ಐ ಸೇರಿ ಮೂವರ ಸಸ್ಪೆಂಡ್‌

Union Minister Pralhad Joshi latest statement in Hubli
ರಾಜಕೀಯ3 mins ago

Pralhad Joshi: ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಪ್ರಲ್ಹಾದ್‌ ಜೋಶಿ

Miracle case At Bagalakote News
ವೈರಲ್ ನ್ಯೂಸ್11 mins ago

Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

A: Film by Upendra
ಪ್ರಮುಖ ಸುದ್ದಿ14 mins ago

A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

gold rate today rachita ram
ಚಿನ್ನದ ದರ17 mins ago

Gold Rate Today: ಬಂಗಾರದ ಬೆಲೆ ಮತ್ತೆ ತೀವ್ರ ಇಳಿಕೆ; ಇದು ಚಿನ್ನ ಕೊಳ್ಳುವವರ ವಾರ!

'Chow Chow Bath'
ಪ್ರಮುಖ ಸುದ್ದಿ27 mins ago

Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

Maarige Daari
ಪ್ರಮುಖ ಸುದ್ದಿ48 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ1 hour ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು1 hour ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌