Rishab Bell Bottom-2: ಬೆಲ್ ಬಾಟಂ-2 ಸಿನಿಮಾದಿಂದ ಹೊಸ ಬಿಗ್‌ ಅಪ್‌ಡೇಟ್‌! - Vistara News

South Cinema

Rishab Bell Bottom-2: ಬೆಲ್ ಬಾಟಂ-2 ಸಿನಿಮಾದಿಂದ ಹೊಸ ಬಿಗ್‌ ಅಪ್‌ಡೇಟ್‌!

Rishab Bell Bottom-2: ನಿರ್ದೇಶಕ ಜಯತೀರ್ಥ ಸ್ಕ್ರಿಪ್ಟ್ ಎಲ್ಲ ಈಗಾಗಲೇ ರೆಡಿ ಇದೆ. ಇನ್ನೇನು ಶೂಟಿಂಗ್ ಹೋಗಬೇಕಷ್ಟೇ ಎಂದು ಮಾಧ್ಯಮಕ್ಕೆ ಹೇಳಿಕೊಂಡಿದ್ದರು. ಇಷ್ಟು ದಿನವಾದ ಮೇಲೆ ಬೆಲ್ ಬಾಟಂ-2 ಸಿನಿಮಾ ಬಗ್ಗೆ ಹೊಸ ಅಪ್‌ಡೇಟ್‌ವೊಂದು ವೈರಲ್‌ ಆಗುತ್ತಿದೆ.

VISTARANEWS.COM


on

Rashab Shetty Haripriya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಸದ್ಯ ಕಾಂತಾರ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕಾಂತಾರಕ್ಕೂ ಮುಂಚೆ ರಿಷಬ್‌ ಬೆಲ್ ಬಾಟಂ-2 (Rishab Bell Bottom-2) ಬಗ್ಗೆ ಅನೌನ್ಸ್‌ ಮಾಡಿದ್ದರು. ಕನ್ನಡದ ಮಟ್ಟಿಗೆ ಈ ಸಿನಿಮಾ ಅದ್ಭುತ ಕಥೆಯನ್ನೆ ಹೊಂದಿತ್ತು. ಇದೇ ಕಥೆ ಬೇರೆ ಭಾಷೆಯಲ್ಲೂ ರಿಮೇಕ್ ಆಗಿರೋದು ಕನ್ನಡದ ಹೆಮ್ಮೆಯ ವಿಷಯವೇ ಸರಿ. ನಿರ್ದೇಶಕ ಜಯತೀರ್ಥ ಸ್ಕ್ರಿಪ್ಟ್ ಎಲ್ಲ ಈಗಾಗಲೇ ರೆಡಿ ಇದೆ. ಇನ್ನೇನು ಶೂಟಿಂಗ್ ಹೋಗಬೇಕಷ್ಟೇ ಎಂದು ಮಾಧ್ಯಮಕ್ಕೆ ಹೇಳಿಕೊಂಡಿದ್ದರು. ಇಷ್ಟು ದಿನವಾದ ಮೇಲೆ ಬೆಲ್ ಬಾಟಂ-2 ಸಿನಿಮಾ ಬಗ್ಗೆ ಹೊಸ ಅಪ್‌ಡೇಟ್‌ವೊಂದು ವೈರಲ್‌ ಆಗುತ್ತಿದೆ.

ಬೆಲ್‌ಬಾಟಂ ನಿರ್ಮಿಸಿದ ಸಂಸ್ಥೆಯು ಬೆಲ್‌ ಬಾಟಂ 2 ಸಿನಿಮಾವನ್ನು ದೊಡ್ಡ ಪ್ರಮಾನದಲ್ಲಿ ನಿರ್ಮಿಸಲಿದೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಂತಾರ ಸಿನಿಮಾದ ಕೆಲಸದಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾದ್ದರಿಂದ ಆ ಗ್ಯಾಪ್‌ನಲ್ಲಿ ನಿರ್ದೇಶಕ ಜಯತೀರ್ಥ ಕೈವ್ ಚಿತ್ರ ಶುರು ಮಾಡಿದರು. ಬೆಲ್ ಬಾಟಂ-2 ಸಿನಿಮಾದ ಬಗ್ಗೆನೂ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆ ಇದೆ. ಕಾಂತಾರ ಸಿನಿಮಾದ ಮುಂಚೇನೆ ಈ ಚಿತ್ರ ಸೂಪರ್ ಹಿಟ್ ಆಗಿದೆ. ಕಾಂತಾರ-2 ಮತ್ತು ಬೆಲ್ ಬಾಟಂ-2 ಎರಡೂ ಸಿನಿಮಾ ಕುರಿತು ಈಗಲೇ ಭಾರೀ ಕುತೂಹಲ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rishab Shetty : ಕಾಂತಾರ-2 ಸಿನಿಮಾ ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ರಿಷಬ್‌ ಶೆಟ್ಟಿ!

Rishab Bell Bottom-2

ಬದುಕು ಬದಲಿಸಿದ ಕಾಂತಾರ

ತಾವು ಹುಟ್ಟಿದ ಮಣ್ಣಿನ ಕತೆಯೊಂದನ್ನು ಹುಡುಕಿ ತೆಗೆದು ಕಾಂತಾರ ಸಿನಿಮಾ ಮಾಡಿದ ಬಳಿಕ ರಿಷಬ್‌ ಅವರ ಪೂರ್ಣ ಸಾಮರ್ಥ್ಯ ಜಗತ್ತಿಗೆ ಪರಿಚಯವಾಯಿತು. ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುವ ಮೂಲಕ ರಿಷಬ್​ ಶೆಟ್ಟಿ ಎಂಬ ಕೆರಾಡಿ ಪ್ರತಿಭೆ ಜಗದ್ವಿಖ್ಯಾತಿ ಪಡೆಯಿತು. ಬಳಿಕ ಡಿವೈನ್​ ಸ್ಟಾರ್​ ಎಂಬ ಹೆಸರಿನಿಂದ ಕರೆಸಿಕೊಳ್ಳುತ್ತಿರುವ ಅವರು ಕಾಂತಾರ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಅವರೀಗ ಎಲ್ಲೇ ಹೋದರೂ ಅಭಿಮಾನಿಗಳು ಅವರನ್ನು ಸುತ್ತುವರಿಯುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

Dolly Dhananjay: `ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Dolly Dhananjay Kotie Cinema Kannada
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ʻಕೋಟಿʼ ಸಿನಿಮಾದ ಹಾಡುಗಳ ಹಕ್ಕನ್ನು ʻಸರಿಗಮʼ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ‌ ವೀಕ್ಷಿಸಬಹುದು.

ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗತ್ತೆ‌ ಅನ್ನೊ ನಂಬಿಕೆ ಇದೆ” ಎಂದು ಹೇಳಿದರು.

“ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಷನ್ನಿನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಕೋಟಿಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

`ಕೋಟಿ `ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Rashmika Mandanna: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿದರು.

VISTARANEWS.COM


on

Rashmika Mandanna Reacts To India Decade of Growth Amid Lok Sabha Polls
Koo

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದಾರೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾಧ್ಯಮದ ಜತೆ ಮಾತನಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು.

ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದರು.

ಸದ್ಯ ದೇಶದಲ್ಲಿ 2024ರ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಯುವ ಪೀಳಿಗೆ ಜವಾಬ್ದಾರಿಯುತವಾಗಿ ಮತ ಚಲಾಯಿಸುವಂತೆ ರಶ್ಮಿಕಾ ಮನವಿ ಮಾಡಿದ್ದಾರೆ, “ಯುವ ಪೀಳಿಗೆ – ಯುವ ಭಾರತ – ಅಂತಹ ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ! ಯುವ ಭಾರತೀಯರು ಮತ ಚಲಾಯಿಸಬೇಕು. ಜನರು ನಿಜವಾಗಿಯೂ ನೋಡುತ್ತಿದ್ದಾರೆ, ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ. ಅದರ ಬಗ್ಗೆ ತುಂಬಾ ಸ್ಮಾರ್ಟ್ ಆಗಿದ್ದಾರೆ. ಅವರು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ರಶ್ಮಿಕಾ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟಿಗೆ ಕೆಲವರು ಮೊದಲು ನೀವು ವೋಟ್‌ ಹಾಕಿ ಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Actor Dhanush: ಕಾಲಿವುಡ್‌ ನಟ ಧನುಷ್‌ ಮತ್ತು ಐಶ್ವರ್ಯಾ ರಜನಿಕಾಂತ್‌ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ ಅವರು ಇಬ್ಬರ ಬಗ್ಗೆ ಶಾಕಿಂಗ್‌ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರು ಪರಸ್ಪರ ಮೋಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Actor Dhanush
Koo

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ತಮ್ಮ ಮಾಜಿ ಪತಿ ಕಾರ್ತಿಕ್ ವಿರುದ್ಧವೂ ಸುಚಿತ್ರಾ ಗಂಭೀರ ಆರೋಪ ಮಾಡಿದ್ದಾರೆ. ʼʼಆತ (ಕಾರ್ತಿಕ್) ಸಲಿಂಗಕಾಮಿ. ಆದರೆ ಅದನ್ನು ಹೇಳಲು ಅವನಿಗೆ ಧೈರ್ಯವಿಲ್ಲ. ಪತಿ ಸಲಿಂಗಕಾಮಿ ಎಂದು ನನಗೆ ಮದುವೆಯಾದ 2 ವರ್ಷಕ್ಕೆ ತಿಳಿಯಿತು. ಧನುಷ್ ಹಾಗೂ ನನ್ನ ಮಾತಿ ಪತಿ ಒಟ್ಟಿಗೆ ಕೋಣೆಯಲ್ಲಿ ಏನು ಮಾಡುತ್ತಿದ್ದರು? ಪಾರ್ಟಿಗಳಲ್ಲಿ ಏನು ನಡೆಯುತ್ತಿತ್ತು?ʼʼ ಎಂದು ಸುಚಿತ್ರಾ ಕೇಳಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ ಕೂಡ ಒಂದು. ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿರುವ ಈ ಸಿನಿಮಾದ ಕನ್ನಡ ಮತ್ತು ಹಿಂದಿ ಅವತರಣಿಕೆಯ ತಮ್ಮ ಪಾತ್ರಕ್ಕೆ ನಾಯಕಿ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ. ಮೂಲತಃ ಕರ್ನಾಟಕವರಾದ ದೀಪಿಕಾ 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಬಳಿಕ ಕನ್ನಡತ್ತ ಮುಖ ಮಾಡಿರಲಿಲ್ಲ. ಈದೀಗ ಅವರು ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading
Advertisement
bangalore woman murder case
ಕ್ರೈಂ5 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Dolly Dhananjay Kotie Cinema Kannada
ಸ್ಯಾಂಡಲ್ ವುಡ್36 mins ago

Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

terror module
ದೇಶ42 mins ago

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಸಿಖ್ ಉಗ್ರರ ಜತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

woman murder case
ಕ್ರೈಂ46 mins ago

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್1 hour ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ1 hour ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್2 hours ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ2 hours ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ2 hours ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ5 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ15 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202417 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202420 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ21 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು22 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌