Rishab Shetty: ಬೇರೆ ಭಾಷೆಗಳಿಂದಲೂ ರಿಷಬ್‌ಗೆ ಭಾರಿ ಆಫರ್‌; ಕಾಂತಾರ 2 ಕಥೆ ಏನು? Vistara News
Connect with us

South Cinema

Rishab Shetty: ಬೇರೆ ಭಾಷೆಗಳಿಂದಲೂ ರಿಷಬ್‌ಗೆ ಭಾರಿ ಆಫರ್‌; ಕಾಂತಾರ 2 ಕಥೆ ಏನು?

Rishab Shetty: ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ (Hombale Films) ಮಾಹಿತಿ ನೀಡಲಿದೆ ಎಂದಿದ್ದಾರೆ ರಿಷಬ್ ಶೆಟ್ಟಿ.

VISTARANEWS.COM


on

Rishab Shetty
Koo

ಬೆಂಗಳೂರು: ರಾಜ್‌ ಬಿ.ಶೆಟ್ಟಿ ನಟನೆಯ “ಟೋಬಿ’ ಚಿತ್ರದ ಟ್ರೈಲರ್‌ ಶುಕ್ರವಾರ (ಆ.4) ರಕ್ಷಿತ್‌ ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ (Rishab Shetty) ಬಿಡುಗಡೆಗೊಳಿಸಿದರು. ರಿಷಬ್‌ ಈ ಸಂದರ್ಭದಲ್ಲಿ, ಕಾಂತಾರ ಪ್ರೀಕ್ವೆಲ್‌ ಸ್ಕ್ರಿಪ್ಟ್‌ ಪೂರ್ಣಗೊಂಡಿದ್ದು ಪ್ರಿಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದೆ ಎಂದರು. ʻʻಸದ್ಯ ಬರವಣಿಗೆಯ ಕೆಲಸ ಮುಗಿದಿದೆ. ಡೈಲಾಗ್ ಲಾಕ್ ಆಗಿದೆ. ಎರಡು ಹಂತದಲ್ಲಿ ಬರೆವಣಿಗೆ ಕೆಲಸ ಮುಗಿಸಿರುವೆ. ನಾನು ಮತ್ತು ನನ್ನ ತಂಡ ಸ್ಕ್ರಿಪ್ಟ್ ಮಾಡುವಾಗ ಹಲವಾರು ರೀತಿಯ ಆಯಾಮಗಳನ್ನು ಹುಡುಕಿಕೊಂಡು, ಸಂಶೋಧನೆ ಮಾಡಿ ಸ್ಕ್ರಿಪ್ಟ್ ಲಾಕ್ ಮಾಡಿದ್ದೇವೆʼʼ ಎಂದರು.

ಲೊಕೇಷನ್ ಹುಡುಕಾಟದ ಜತೆ ಜತೆಗೆ ಕಲಾವಿದರ ಆಯ್ಕೆಯ ಕೆಲಸ ಕೂಡ ನಡೆದಿದೆಯಂತೆ. ʻʻಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ (Hombale Films) ಮಾಹಿತಿ ನೀಡಲಿದೆ ಎಂದಿದ್ದಾರೆ ರಿಷಬ್ ಶೆಟ್ಟಿ.

ʻʻಕಾಂತಾರ-2′ ಚಿತ್ರೀಕರಣಕ್ಕೆ ಯಾವುದೇ ನಿರ್ದಿಷ್ಟ ಸಮಯದ ಮಿತಿ ಹಾಕಿಕೊಂಡಿಲ್ಲ. ಮೊದಲ ಭಾಗವು ಎಷ್ಟು ಸಮಯದ ಮಿತಿಯನ್ನು ಬಯಸಿತ್ತೋ, ಅಷ್ಟೇ ಸಮಯದಲ್ಲಿ ಅದರ ಚಿತ್ರೀಕರಣ ಮುಗಿಸಿದ್ದೆವು. ಪ್ರಿಕ್ವೆಲ್ ಕಥೆಯ ಬೇಡಿಕೆ ಏನಿರುತ್ತದೆಯೋ ಅಷ್ಟೇ ಸಮಯವನ್ನು ಅದಕ್ಕೆ ನೀಡುತ್ತೇವೆ’ ಎನ್ನುತ್ತಾರೆ ರಿಷಬ್‌.

ಇದನ್ನೂ ಓದಿ: Rishab Shetty: ರಮ್ಯಾಗೆ ತಿರುಗೇಟು ಕೊಟ್ಟ ರಿಷಬ್‌, ರಾಜ್‌ ಬಿ ಶೆಟ್ಟಿ; ‘ಹಾಸ್ಟೆಲ್ ಹುಡುಗರ’ ಸುತ್ತ ಅನುಮಾನದ ಹುತ್ತ!

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜ ಎಂದಿದ್ದಾರೆ ರಿಷಬ್‌. ʻʻಬೇರೆ ಭಾಷೆಗಳಿಂದ ಹಲವು ಸಿನಿಮಾ ಅವಕಾಶಗಳು ಬಂದಿದ್ದವು. ಆದರೆ ನನಗೆ ‘ಕಾಂತಾರ’ವೇ ಆದ್ಯತೆ. ಕಾಂತಾರ’ದ ಯಶಸ್ಸಿಗೆ ಕನ್ನಡಿಗರು ಕಾರಣ. ಇವರು ನೀಡಿರುವ ಯಶಸ್ಸಿನ ಬೆನ್ನಲ್ಲೇ ಬೇರೆ ಭಾಷೆಯಲ್ಲಿ ಅವಕಾಶ ಬಂತೆಂದು ಓಡಿ ಹೋಗುವುದಿಲ್ಲ. ಹೊರಗಡೆಯಿಂದ ಬಂದ ತಂತ್ರಜ್ಞರು, ನಿರ್ದೇಶಕರು ಕನ್ನಡ ಸಿನಿಮಾ ಮಾಡಿ ಪ್ರಪಂಚದಾದ್ಯಂತ ತೆಗೆದುಕೊಂಡು ಹೋದರೆ ಅಭ್ಯಂತರವಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾ. “ಕಾಂತಾರ-2′ ಪೂರ್ಣಗೊಂಡ ಬಳಿಕ ಮುಂದಿನ ಸಿನಿಮಾಗಳ ಬಗ್ಗೆ ಯೋಚಿಸುವೆ’ ಎಂದರು ರಿಷಬ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Parineeti Chopra: ಮದುವೆಯಲ್ಲಿ ಫೋನ್‌, ಕ್ಯಾಮೆರಾಗಳಿಗೆ ಟೇಪ್‌, 100 ಭದ್ರತಾ ಸಿಬ್ಬಂದಿ!

Parineeti Chopra: ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

VISTARANEWS.COM


on

Edited by

Parineeti Chopra Wedding
Koo

ಬೆಂಗಳೂರು: ಸೆಪ್ಟೆಂಬರ್ 24ರಂದು ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ (Parineeti Chopra) ಹಾಗೂ ಆಮ್‌ ಆದ್ಮಿ ಪಕ್ಷದ ಸಂಸದ ರಾಘವ್‌ ಚಡ್ಡಾ (Raghav Chadha) ಅವರ ವಿವಾಹ ಉದಯಪುರದಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಈಗಾಗಲೇ ಜೋಡಿ ಉದಯಪುರಕ್ಕೆ (Parineeti Chopra wedding) ತಲುಪಿದೆ. ಸದ್ಯ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ವಿವಾಹದಲ್ಲಿ 100 ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲ, ಮದುವೆಯಲ್ಲೂ ಕಟ್ಟುನಿಟ್ಟಿನ ಭದ್ರತಾ ನಿಯಮಗಳಿವೆ. ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

ಹೋಟೆಲ್ ಮೂಲಗಳ ಪ್ರಕಾರ, ಮದುವೆಯ ಸಿದ್ಧತೆಗಳ ಜತೆಗೆ ಕಾರ್ಯಕ್ರಮದ ಫೋಟೊಗಳು ಮತ್ತು ವಿಡಿಯೊಗಳು ಲೀಕ್‌ ಆಗದ್ದಂತೆ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ. ಹೋಟೆಲ್‌ಗೆ ಪ್ರವೇಶಿಸುವವರ ಮೊಬೈಲ್ ಕ್ಯಾಮೆರಾಗಳಿಗೆ ನೀಲಿ ಬಣ್ಣದ ಟೇಪ್ ಅನ್ನು ಅಂಟಿಸಲಾಗುತ್ತದೆ. ಇದರಿಂದ ಅವರು ಮದುವೆ ಸಮಾರಂಭದಲ್ಲಿ ಯಾವುದೇ ವೀಡಿಯೊ-ಫೋಟೋಗ್ರಾಫ್ ತೆಗೆದುಕೊಳ್ಳುವಂತಿಲ್ಲ. ಈ ನೀಲಿ ಟೇಪ್‌ನ ವಿಶೇಷತೆ ಏನೆಂದರೆ, ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಅಳವಡಿಸಿದ ನಂತರ ಯಾರಾದರೂ ಅದನ್ನು ತೆಗೆದರೆ, ಟೇಪ್‌ನಲ್ಲಿ ಬಾಣದ ಚಿಹ್ನೆ ಗೋಚರಿಸುತ್ತದೆ. ಸೆಕ್ಯೂರಿಟಿ ಅವರು ಪರಿಶೀಲಿಸಿದಾಗ ಕ್ಯಾಮೆರಾ ಬಳಸಲು ಟೇಪ್ ತೆಗೆದಿರುವುದು ಗೊತ್ತಾಗಿ ಬಿಡುತ್ತದೆ. ಈ ನಿರ್ಬಂಧವು ವಿಶೇಷವಾಗಿ ಹೋಟೆಲ್ ಸಿಬ್ಬಂದಿಗೆ, ಬಾಣಸಿಗರಿಗೆ ಅನ್ವಯಿಸುತ್ತದೆ. ಕರಣ್ ಜೋಹರ್, ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಡಿಸೈನರ್ ಮನೀಶ್ ಮಲ್ಹೋತ್ರಾ ಅವರಂತಹ ಸೆಲೆಬ್ರಿಟಿಗಳು ಇಂದೇ (ಸೆ. 23) ಉದಯಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Parineeti Chopra; ನಾಳೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಅದ್ಧೂರಿ ಮದುವೆ; ಭರ್ಜರಿ ಸಿದ್ಧತೆ!

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷ ಮೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆಗೆ 20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.

ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ಚಮ್ಕೀಲಾ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್‌ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.

Continue Reading

South Cinema

Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್‌!

Actress Nayanthara : ಯೂಟ್ಯೂಬರ್ ಡ್ಯೂಡ್ ವಿಕ್ಕಿ ಅವರ ಜತೆ ಸಿನಿಮಾ ಮಾಡುತ್ತಿದ್ದಾರೆ. ಈಗ ನಟಿ ಯೂಟ್ಯೂಬರ್ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಲು ತಯಾರಾಗಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ತಂದಿದೆ.

VISTARANEWS.COM


on

Edited by

Mannangatti Poster
Koo

ಬೆಂಗಳೂರು: ನಯನತಾರಾ (Actress Nayanthara: ) ಇನ್ನೂ ಜವಾನ್‌ (Jawan Movie)ಸಿನಿಮಾ ಸಕ್ಸೆಸ್‌ ಮೂಡ್‌ನಲ್ಲಿದ್ದಾರೆ. ಈ ಸಿನಿಮಾ ಮೂಲಕ ಕಾಲಿವುಡ್‌ ಲೇಡಿ ಸೂಪರ್‌ ಸ್ಟಾರ್‌ ಹಿಂದಿಗೂ ಪರಿಚಯವಾದರು. ನಯನತಾರಾ ಹೊಸಬರ ಜತೆ ಕೆಲಸ ಮಾಡುವುದಿಲ್ಲ ಎಂದು ಹಲವರ ವಾದವಾಗಿತ್ತು. ಜವಾನ್‌ ಯಶಸ್ಸಿನ ಉತ್ತಂಗದಲ್ಲಿರುವ ನಟಿ ಇನ್ನು ಹೊಸಬರ ಜತೆ ಕೆಲಸ ಮಾಡುವುದೇ ಇಲ್ಲ ಎಂಬ ಚರ್ಚೆಗಳು ಆಗಿತ್ತು. ಆದರೀಗ ನಟಿ ಈ ವದಂತಿಗಳನ್ನು ಸುಳ್ಳು ಮಾಡಿದ್ದಾರೆ. ಯೂಟ್ಯೂಬರ್ ಡ್ಯೂಡ್ ವಿಕ್ಕಿ ಅವರ ಜತೆ ಸಿನಿಮಾ ಮಾಡುತ್ತಿದ್ದಾರೆ. ಈಗ ನಟಿ ಯೂಟ್ಯೂಬರ್ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಲು ತಯಾರಾಗಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ತಂದಿದೆ.

ಯೂಟ್ಯೂಬರ್ ಡ್ಯೂಡ್ ವಿಕ್ಕಿ ನಿರ್ದೇಶನದದ ಈ ಸಿನಿಮಾಗೆ ನಯನತಾರಾ ನಾಯಕಿ. ಈಗಾಗಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ಹಂಚಿಕೊಂಡಿದೆ. ಈ ಯೋಜನೆಗೆ ‘ಮನ್ನಂಗಟ್ಟಿ’ ಎಂದು ಹೆಸರಿಡಲಾಗಿದೆ. ಮತ್ತು ಅದರ ಅಡಿಬರಹ, ‘1960 ರಿಂದ ಮನ್ನಂಗಟ್ಟಿ (Mannangatti)’. ಈ ಚಿತ್ರಕ್ಕೆ ‘ಸಿನ್ಸ್ 1960’ ಎನ್ನುವ ಅಡಿಬರಹ ಇದೆ. ಲಕ್ಷ್ಮಣ್ ಕುಮಾರ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯೋಗಿ ಬಾಬು, ಗೌರಿ ಕಿಶನ್ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಆರ್‌ಡಿ ರಾಜಶೇಖರ್ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ ಮತ್ತು ಸೀನ್ ರೋಲ್ಡನ್ ಸಂಗೀತ ಸಂಯೋಜಿಸಿದ್ದಾರೆ. ಡ್ಯೂಡ್ ವಿಕ್ಕಿ ಬರೆದು ನಿರ್ದೇಶಿಸಿದ ಈ ಚಿತ್ರವನ್ನು ಪ್ರಿನ್ಸ್ ಪಿಕ್ಚರ್ಸ್ ಬೆಂಬಲಿಸಿದೆ. ನಯನತಾರಾ ನಟನೆಯ ಮತ್ತೊಂದು ಸಿನಿಮಾ ‘ಉರೈವನ್’ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ಇದರ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಜಯಂ ರವಿ ಹೀರೋ. ಈ ಸಿನಿಮಾಗೆ ಎ ಪ್ರಮಾಣಪತ್ರ ಸಿಕ್ಕಿದೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕೂಡ ಇದೇ ದಿನ ರಿಲೀಸ್ ಆಗುತ್ತಿದ್ದು, ಭರ್ಜರಿ ಪೈಪೋಟಿ ಉಂಟಾಗಲಿದೆ.

ಇದನ್ನೂ ಓದಿ: Actress Nayanthara: ನಿರ್ದೇಶಕ ಅಟ್ಲೀ ಜತೆ ಇರುವ ಫೋಟೊ ಹಂಚಿಕೊಂಡ ನಯನತಾರಾ; ಮುನಿಸಿಗೆ ತೆರೆ ಎಳೆದರೆ?

ಇದನ್ನೂ ಓದಿ: Actress Nayanthara: ನಿರ್ದೇಶಕ ಅಟ್ಲೀ ಜತೆ ಇರುವ ಫೋಟೊ ಹಂಚಿಕೊಂಡ ನಯನತಾರಾ; ಮುನಿಸಿಗೆ ತೆರೆ ಎಳೆದರೆ?

 ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಲ್ವಾ ನಯನತಾರಾ?

ಶಾರುಖ್ ಖಾನ್ (Shah Rukh Khan) ಅವರ ಬ್ಲಾಕ್‌ಬಸ್ಟರ್ ಸಿನಿಮಾ ʻಜವಾನ್‌ʼನಲ್ಲಿ ನಟಿ ನಯನತಾರಾ(Nayanthara) ಏಜೆಂಟ್ ನರ್ಮದಾ ರಾಯ್‌ ಪಾತ್ರವನ್ನು ನಿರ್ವಹಿಸಿದ್ದಾರೆ. ಶಾರುಖ್‌-ನಯನತಾರಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಆದರೆ, ನಯನತಾರಾ ಅವರಿಗೆ ಅಟ್ಲೀ ಕುರಿತು ಅಸಮಾಧಾನ ಇದೆ ಎಂದು ವರದಿಯಾಗಿತ್ತು. ಚಿತ್ರದಲ್ಲಿ ತಮ್ಮ ಪಾತ್ರವನ್ನು ಹಲವು ಕಡೆ ಕತ್ತರಿಸಿದ್ದರಿಂದ ಅಟ್ಲಿಯೊಂದಿಗೆ ನಯನತಾರಾ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ಅಲ್ಲದೆ, ದೀಪಿಕಾ ಅವರ ಪಾತ್ರವನ್ನು ಹೆಚ್ಚು ಹೈಲೈಟ್‌ ಮಾಡಿರುವ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದೂ ವರದಿಯಾಗಿತ್ತು.

ಚಿತ್ರದಲ್ಲಿ ವಿಕ್ರಮ್ ರಾಥೋಡ್ (ಶಾರುಖ್‌) ಪತ್ನಿಯಾಗಿ ದೀಪಿಕಾ ಪಡುಕೋಣೆ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಮೂಲ ಪ್ರಕಾರ ದೀಪಿಕಾ ಅವರದ್ದು ಅತಿಥಿ ಪಾತ್ರವಲ್ಲ. ಬದಲಿಗೆ ಜವಾನ್ ಅನ್ನು “ಶಾರುಖ್‌-ದೀಪಿಕಾ” ಚಿತ್ರದಂತೆ ಕಾಣುವಂತೆ ಮಾಡಲಾಗಿದೆ ಎಂದು ಹೇಳಿದೆ. ಇದು ಅತಿಥಿ ಪಾತ್ರವಾಗಿರಲಿಲ್ಲ. ಜವಾನ್ ಅನ್ನು ಬಹುತೇಕ ಶಾರುಖ್‌-ದೀಪಿಕಾ ಚಿತ್ರದಂತೆ ಕಾಣುವಂತೆ ಮಾಡಲಾಗಿದೆ. ನಯನತಾರಾ ದಕ್ಷಿಣದ ಪ್ರಮುಖ ನಟಿ, ಆದ್ದರಿಂದ ಅವರು ಜವಾನ್ ಸಿನಿಮಾ ಬಗ್ಗೆ ಸಂತೋಷವಾಗಿರಲಿಲ್ಲ. ಇನ್ನು ಮುಂದೆ ಯಾವುದೇ ಬಾಲಿವುಡ್‌ ಸಿನಿಮಾಗಳಲ್ಲಿ ಕಾಣಿಸುವುದಿಲ್ಲ ಎಂದು ನಯನತಾರಾ ಅಸಮಾಧಾನ ಹೊರ ಹಾಕಿದ್ದಾರೆ ಎಂದು ವರದಿಯಾಗಿತ್ತು.

Continue Reading

South Cinema

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Vijay Raghavendra: ಪೊಲೀಸ್ ಖದರ್‌ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

VISTARANEWS.COM


on

Edited by

Vijay Raghavendra
Koo

ಬೆಂಗಳೂರು: ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ (Vijay Raghavendra) ಹಾಗೂ ಸೋನು ಗೌಡ (sonu gowda) ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್‌ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಹಾಗೂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ʻʻಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಬಂದಿದೆʼʼ ಎಂದರು.

ನಟ ವಿಜಯ್ ರಾಘವೇಂದ್ರ ಮಾತನಾಡಿ, ʻʻಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ ಹೇಳುವಂತೆ God father of good and bad ಎನ್ನುವಾಗೇ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಆಗುತ್ತದೆ. ನಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್ ಟೀಸರ್ ನೋಡಿದರೆ ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆʼʼ ಎಂದರು.

ಇದನ್ನೂ ಓದಿ: Vijay Raghavendra: ವಿಜಯ್‌ ರಾಘವೇಂದ್ರರನ್ನು ಭೇಟಿ ಮಾಡಿದ ಕಿಚ್ಚ ಸುದೀಪ್‌-ಪ್ರಿಯಾ ದಂಪತಿ

ನಟಿ ಸೋನುಗೌಡ ಮಾತನಾಡಿ, ʻʻಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಪರ್‌ಫಾರ್ಮೆನ್ಸ್‌ಗೆ ತುಂಬ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್‌ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೆವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆʼʼ ಎಂದರು.

ಮರೀಚಿ ಲವ್ ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .

ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನಾ ಸೋಮಣ್ಣ, ಆರ್ಯನ್, ಶ್ರುತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Continue Reading

South Cinema

Sai Pallavi: ಮದುವೆ‌ ವದಂತಿ ಬಗ್ಗೆ ಕೊನೆಗೂ ಬಾಯ್ಬಿಟ್ಟ ಸಾಯಿ ಪಲ್ಲವಿ!

Sai Pallavi: ಆ ಚಿತ್ರ ನೋಡಿದವರೆಲ್ಲ ಸಾಯಿ ಪಲ್ಲವಿ ಮದುವೆಯಾಗಿದ್ದಾರೆ ಎಂದೇ ನಂಬಿಕೊಂಡು ಚಿತ್ರವನ್ನು ಇನ್ನಷ್ಟು ವೈರಲ್ ಮಾಡಿದ್ದರು. ಇದೀಗ ನಟಿ ಈ ಬಗ್ಗೆ ಕ್ಲ್ಯಾರಿಟಿ ಕೊಟ್ಟಿದ್ದಾರೆ.

VISTARANEWS.COM


on

Edited by

Sai Pallavi
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಹಲವು ದಿನಗಳಿಂದ ಸಾಯಿ ಪಲ್ಲವಿ (Sai Pallavi) ಮದುವೆಯಾಗಿದ್ದಾರೆ ಎಂಬ ಸುದ್ದಿ ಸಖತ್‌ ವೈರಲ್‌ ಆಗಿತ್ತು. ನಟಿ ಖ್ಯಾತ ನಿರ್ದೇಶಕನ ಜತೆ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಎಂದು ಹೇಳಾಗುತ್ತಿತ್ತು. ಈ ಅನುಮಾನಕ್ಕೆ ಕಾರಣವಾಗಿದ್ದು ಒಂದು ಫೋಟೊ. ಸಾಯಿ ಪಲ್ಲವಿ ಹಾರ ಹಾಕಿಕೊಂಡು ವ್ಯಕ್ತಿಯೊಬ್ಬರ ಪಕ್ಕ ನಿಂತಿದ್ದರು. ಆ ಚಿತ್ರ ನೋಡಿದವರೆಲ್ಲ ಸಾಯಿ ಪಲ್ಲವಿ ಮದುವೆಯಾಗಿದ್ದಾರೆ ಎಂದೇ ನಂಬಿಕೊಂಡು ಚಿತ್ರವನ್ನು ಇನ್ನಷ್ಟು ವೈರಲ್ ಮಾಡಿದ್ದರು. ಇದೀಗ ನಟಿ ಈ ಬಗ್ಗೆ ಕ್ಲ್ಯಾರಿಟಿ ಕೊಟ್ಟಿದ್ದಾರೆ.

ʻʻನಾನು ವದಂತಿಗಳಿಗೆ ಹೆದರುವುದಿಲ್ಲ. ಆದರೆ ಕುಟುಂಬ ಸ್ನೇಹಿತರ ವಿಚಾರಕ್ಕೆ ಬಂದಾಗ ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡಲೇ ಬೇಕು. ಆ ಫೋಟೊ ನನ್ನ ಮದುವೆಯದ್ದಲ್ಲ. ಸಿನಿಮಾ ಮುಹೂರ್ತ ವೇಳೆ ತೆಗೆದ ಫೋಟೊ. ಸಮಾರಂಭದ ಫೋಟೊವನ್ನು ಈ ರೀತಿ ಉಪಯೋಗಿಸಿಕೊಂಡು ಕೆಟ್ಟ ಉದ್ದೇಶದಿಂದ ಆ ಚಿತ್ರವನ್ನು ವೈರಲ್ ಮಾಡಲಾಗಿದೆ. ನನ್ನ ಕೆಲಸದ ಬಗ್ಗೆ ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳಬೇಕಾದ ಸಮಯದಲ್ಲಿ, ಈ ರೀತಿಯ ಅನಾವಶ್ಯಕ ವಿಷಯಗಳ ಬಗ್ಗೆ ವಿವರಿಸುವ ಸನ್ನಿವೇಶ ಸೃಷ್ಟಿಯಾಗಿರುವ ಬಗ್ಗೆ ಬೇಸರವಿದೆʼʼಎಂದು ಟ್ವೀಟ್‌ ಮಾಡಿದ್ದಾರೆ.

ಸಾಯಿ ಸಾಂಪ್ರದಾಯಿಕ ಅವತಾರದಲ್ಲಿ ಬಿಳಿ ಕುರ್ತಾ ಮತ್ತು ಗೋಲ್ಡನ್-ಕಂದು ಬಣ್ಣದ ದುಪಟ್ಟಾವನ್ನು ಧರಿಸಿರುವ ಚಿತ್ರವು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಾಗ ವದಂತಿ ಶುರುವಾಯಿತು. ಅವರ ಪಕ್ಕದಲ್ಲಿ ನಿಂತಿರುವ ವ್ಯಕ್ತಿ ಚಿತ್ರದ ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ. ಚಿತ್ರದ ಕ್ಲ್ಯಾಪ್‌ ಬೋರ್ಡ್‌ ಹಿಡಿದು ನಿಂತಿದ್ದರು. ಈವೆಂಟ್‌ನ ಇತರ ಚಿತ್ರಗಳಲ್ಲಿ, SK21 ಚಿತ್ರದ ನಾಯಕ ನಟ ಶಿವಕಾರ್ತಿಕೇಯನ್ ಮತ್ತು ಹಿರಿಯ ನಟ ಕಮಲ್ ಹಾಸನ್ ಕೂಡ ನಿಂತಿದ್ದಾರೆ. ಇಬ್ಬರೂ ಮಹೂರ್ತ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿದ್ದರು. ಕಳೆದ ವರ್ಷ ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿದ ಗಾರ್ಗಿ ಚಿತ್ರದಲ್ಲಿ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡರು.

ಇದನ್ನೂ ಓದಿ: Sai Pallavi: ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ; ಸಾಯಿ ಪಲ್ಲವಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌!

ಸಾಯಿ ಪಲ್ಲವಿ ಟ್ವೀಟ್‌

ಇದನ್ನೂ ಓದಿ: Sai Pallavi: ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ; ಸಾಯಿ ಪಲ್ಲವಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌!

ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿ ಪಲ್ಲವಿ (Sai Pallavi:) ಆಯ್ಕೆಯಾಗಿದ್ದಾರೆ. ʻಲವ್ ಸ್ಟೋರಿʼ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡುತ್ತಿದ್ದಾರೆ.ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ.

Continue Reading
Advertisement
Police visit sopt
ಕರ್ನಾಟಕ5 mins ago

Murder Case : ಮಲಗಿದ್ದವಳ ಮೇಲೆ ಕಲ್ಲು ಎತ್ತಿಹಾಕಿ ಕೊಂದ; ಬಳಿಕ ಮರಕ್ಕೆ ನೇಣು ಬಿಗಿದುಕೊಂಡ ಕುಡುಕ ಪತಿ!

R Ashwin batting after 1st ODI vs Australia
ಕ್ರಿಕೆಟ್6 mins ago

Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರ

Gurpatwant Singh Pannun
ದೇಶ21 mins ago

India Canada Row: ಉಗ್ರನಿಗೆ ಕೆನಡಾ ಬೆಂಬಲದ ಬೆನ್ನಲ್ಲೇ ಖಲಿಸ್ತಾನಿ ಪನ್ನುನ್ ಆಸ್ತಿ ಜಪ್ತಿ ಮಾಡಿದ ಎನ್‌ಐಎ

money saving tips
ಮನಿ-ಗೈಡ್26 mins ago

Money Guide: ಹಣ ಉಳಿಸೋದು ಹೇಗೆ? ಮಿಲೇನಿಯಲ್ಸ್‌ಗಾಗಿ 10 ಟಿಪ್ಸ್‌ ಇಲ್ಲಿವೆ!

Bus Hit Bike and Fire Accident in chikkamagaluru
ಕರ್ನಾಟಕ55 mins ago

Accident Case : ಚಲಿಸುತ್ತಿದ್ದಾಗಲೇ ಸುಟ್ಟು ಕರಕಲಾದ ಕಾರು; ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

pakistan cricket team
ಕ್ರಿಕೆಟ್59 mins ago

ICC World Cup: ಪಾಕಿಸ್ತಾನ ತಂಡಕ್ಕೆ ವೀಸಾ ಸಮಸ್ಯೆ; ಭಾರತ ಪ್ರಯಾಣ ವಿಳಂಬ

Mother Child death in viroopa sandra
ಕರ್ನಾಟಕ1 hour ago

Mother-Child death : 3 ವರ್ಷದ ಮಗುವಿನ ಕತ್ತು ಹಿಸುಕಿ ಬಾವಿಗೆ ಹಾರಿದ ತಾಯಿ; ಎಷ್ಟು ಕಷ್ಟ ಅನುಭವಿಸಿದ್ದಳೋ?

money guide
ಮನಿ ಗೈಡ್1 hour ago

Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

September 26 Bangalore bandh
ಕರ್ನಾಟಕ2 hours ago

Cauvery Protest : ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ, ಸ್ತಬ್ಧವಾಗಲಿದೆ ರಾಜಧಾನಿ

Jairam Ramesh On Narendra Modi Over Parliament Building
ದೇಶ2 hours ago

Jairam Ramesh: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’‌ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ11 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌