Site icon Vistara News

Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

rishab shetty

ಬೆಂಗಳೂರು: ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಈಗಾಗಲೇ ಕಾಂತಾರ-2 (Kantara Prequel) ಬರವಣಿಗೆಯ ಕೆಲಸ ಶುರು ಮಾಡಿದ್ದಾರೆ. ಹೊಂಬಾಳೆ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ತಯಾರಾಗಲಿದ್ದು, ಇದೀಗ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ರಿಷಬ್ ಕಾಂತಾರ 2ಗೆ ಕುದುರೆ ಸವಾರಿ ಬಳಿಕ ಇದೀಗ ಜನಪ್ರಿಯ ಕಲೆ ಕಳರಿ ಪಯಟ್ಟುಗಳನ್ನು ಕಲಿಯುತ್ತಿದ್ದಾರೆ. ಕಳರಿ ಪಯಟ್ಟು ಮಾಡುತ್ತಿರುವ ರಿಷಬ್ ಫೋಟೋ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

ಕಾಂತಾರ ಪ್ರೀಕ್ವೆಲ್‌ಗೆ ರಿಷಬ್ ಶೆಟ್ಟಿ ಭರ್ಜರಿ ತಯಾರಿ ನಡೆಸಿದ್ದು, ಕಾಂತಾರದಲ್ಲಿ ಕಂಬಳ ತೋರಿಸಿದ್ದ ಡಿವೈನ್‌ ಸ್ಟಾರ್‌ ಇದೀಗ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೇರಳದ ಪರಿಣಿತರಿಂದ ಕಳರಿ ಫೈಟ್ ಕಲಿತಿದ್ದಾರೆ. ಕಳರಿಯ ಒಂದು ಝಲಕ್‌ ಅನ್ನು ರಿಷಬ್‌ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕಾಂತಾರ ಪ್ರೀಕ್ವೆಲ್ ಈಗಾಗಲೇ ಶೇ. 35ರಷ್ಟು ಶೂಟಿಂಗ್ ಪೂರ್ತಿ ಆಗಿದೆ. ಕಾಂತಾರ ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ.

ಇದನ್ನೂ ಓದಿ: Rishab Shetty : ಭಾರತವನ್ನು ಕೆಟ್ಟದಾಗಿ ತೋರಿಸುವ ಸಿನಿಮಾಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ರಿಷಭ್‌ ಶೆಟ್ಟಿ

ಈ ಪ್ರೀಕ್ವೆಲ್‌ನಲ್ಲಿ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಮತ್ತು ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಸಾಥ್ ನೀಡುತ್ತಿದ್ದಾರೆ. ‘ಕಾಂತಾರ’ ಹಿನ್ನೆಲೆ ಹೇಗಿರಲಿದೆ ಎಂದು ಈಗಾಗಲೇ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ‘ನೀವು ನೋಡಿರುವುದು ಎರಡನೇ ಭಾಗ. ಮೊದಲ ಭಾಗವನ್ನು ನಾನು ಕಟ್ಟಿಕೊಡುತ್ತಿದ್ದೇನೆ’ಎಂದು ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು. ಈ ಮೂಲಕ ಪ್ರಿಕ್ವೆಲ್‌ ಮಾಡುತ್ತಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದರು. ‘ಕಾಂತಾರ 2’ ಚಿತ್ರಕ್ಕಾಗಿ ಮಳೆಗಾಲದ ಅವಶ್ಯಕತೆ ಇದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಆಗಸ್ಟ್-ಸೆಪ್ಟೆಂಬರ್​ ತಿಂಗಳನ್ನು ರಿಷಬ್​ ಆಯ್ಕೆ ಮಾಡಿಕೊಂಡಿದ್ದಾರೆ.

ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ. ಕಾಂತಾರ-1ರಲ್ಲಿ ನಾಯಕ ಶಿವ ಮತ್ತು ಅವರ ತಂದೆಯಾಗಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್, ನವೀನ್ ಡಿ ಪಡೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದರು. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡ ಬಳಿಕ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಇದು ತೆರೆ ಕಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version