Rishab Shetty: ವಿಶ್ವಸಂಸ್ಥೆಯ ವೇದಿಕೆಯಲ್ಲಿ ರಿಷಬ್‌ ಕನ್ನಡ ಭಾಷಣ: ವಿಡಿಯೊ ವೈರಲ್‌ - Vistara News

ಸಿನಿಮಾ

Rishab Shetty: ವಿಶ್ವಸಂಸ್ಥೆಯ ವೇದಿಕೆಯಲ್ಲಿ ರಿಷಬ್‌ ಕನ್ನಡ ಭಾಷಣ: ವಿಡಿಯೊ ವೈರಲ್‌

ಮಾರ್ಚ್ 17 ರಂದು (Rishab Shetty) ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್‌ನಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದಾಗಿ ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತ ತಿಳಿಸಿರುವುದು ವರದಿಯಾಗಿದೆ. ರಿಷಬ್ ಕೂಡ ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ (Kantara) ಚಿತ್ರದ ಕುರಿತು ವಿಷಯ ಮಂಡಿಸಲಿದ್ದಾರೆ

VISTARANEWS.COM


on

Rishab's Kannada speech at the United Nations forum Kantara will be screened
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ(UNHRC) ವಾರ್ಷಿಕ ಸಭೆಯಲ್ಲಿ ನಟ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೇ ಸಭೆಯಲ್ಲಿ ಕನ್ನಡದಲ್ಲಿಯೇ ಮಾತನಾಡಲಿದ್ದಾರೆ ರಿಷಬ್‌. ಜತೆಗೆ ಮಾರ್ಚ್ 17 ರಂದು ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್‌ನಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದಾಗಿ ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತ ತಿಳಿಸಿರುವುದು ವರದಿಯಾಗಿದೆ.

ವಿವಿಧ ದೇಶಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಕುರಿತು ಮಾತನಾಡುತ್ತಿದ್ದು, ರಿಷಬ್ ಕೂಡ ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ (Kantara) ಚಿತ್ರದ ಕುರಿತು ವಿಷಯ ಮಂಡಿಸಲಿದ್ದಾರೆ. ಕನ್ನಡದಲ್ಲೇ ರಿಷಬ್ ಭಾಷಣ ಮಾಡಿದ್ದು, ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಡಿಯೊದಲ್ಲಿ ನಟ ಕರ್ನಾಟಕ ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕು ಹೀಗೆ ನಾಡಿ ಭವ್ಯ ಸಂಸ್ಕೃತಿಯ ಕುರಿತು ಮಾತನಾಡಿದ್ದಾರೆ.

ವಿಡಿಯೊ ಇಲ್ಲಿದೆ

ಮಾರ್ಚ್‌ 17ರಂದು ಸ್ವಿಟ್ಜರ್ಲ್ಯಾಂಡ್ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಕಾಂತಾರ ಸಿನಿಮಾದ ಪ್ರದರ್ಶನದಲ್ಲೂ ಭಾಗಿಯಾಗಲಿದ್ದಾರೆ. ಸಿನಿಮಾ ಪ್ರದರ್ಶನದ ನಂತರ ಅವರೊಂದಿಗೆ ಮಾತುಕತೆಗೂ ಕೂಡ ಸಂಸ್ಥೆಯು ಆಯೋಜನೆ ಮಾಡಿದೆ.

ವಿಶ್ವಸಂಸ್ಥೆಯ ಮಾನವ ಮಾನವ ಹಕ್ಕುಗಳ ಮಂಡಳಿ(UNHRC) ವಾರ್ಷಿಕ ಸಭೆಯಲ್ಲಿ ಮಾತನಾಡಲು ಈಗಾಗಲೇ ಸ್ವಿಟ್ಜರ್ಲ್ಯಾಂಡ್ ಜಿನಿವಾ ತಲುಪಿದ್ದಾರೆ. ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲೀಸ್‍ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ನಲ್ಲಿ ರಿಷಬ್ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಹಾಗೂ ಕಾಂತಾರ ಸಿನಿಮಾದ ಬಗ್ಗೆಯೂ ಮಾತನಾಡಲಿದ್ದಾರೆ ಎಂದು ನಿರ್ದೇಶಕಿ ಅನಿಂಧ್ಯಾ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲಿಸಿ ಟ್ವೀಟ್‌ನಲ್ಲಿ ʻʻಜಿನೀವಾದಲ್ಲಿ, UNHRC ಅಧಿವೇಶನದಲ್ಲಿ, ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಮತ್ತು ಭಾರತೀಯ ಸಿನಿಮಾ ಕುರಿತು ರಿಷಬ್‌ ಮಾತನಾಡಲಿದ್ದಾರೆ. CGAPP ನಿರ್ದೇಶಕ ಅನಿಂದ್ಯಾ ಸೇನ್‌ಗುಪ್ತ ಅವರನ್ನು ಭೇಟಿಯಾದ ಕ್ಷಣʼʼಎಂದು ಹಂಚಿಕೊಂಡಿದೆ

ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲಿಸಿ ಟ್ವೀಟ್‌


ಇದನ್ನೂ ಓದಿ: Rishab Shetty: ಕಾಂತಾರ ಚಿತ್ರದ ಬಳಿಕ ಬೊಮ್ಮಾಯಿಗೆ ರಿಷಬ್‌ ಶೆಟ್ಟಿ ಮನವಿ ಸಲ್ಲಿಸಿದ್ದೇನು?

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

Lok Sabha Election 2024: ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ.

VISTARANEWS.COM


on

Lok Sabha Election 2024 sandalwood celebs where do cast their votes
Koo

ಬೆಂಗಳೂರು: ಕರ್ನಾಟಕ ಸೇರಿದಂತೆ (Lok Sabha Election 2024) ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ಕಲಾ ದಂಪತಿಗಳದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಬೆಂಗಳೂರು ಉತ್ತರ, ಯಶವಂತಪುರ ಕ್ಷೇತ್ರದಲ್ಲಿ ವೋಟ್‌ ಹಾಕಿದರು. ಚಂದನ್ ಶೆಟ್ಟಿ ನಾಗರಾಬಾವಿಯಲ್ಲಿ ಮತದಾನ ಮಾಡಿದ್ದಾರೆ.

ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ವೋಟ್ ಮಾಡಲಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮತ ಚಲಾಯಿಸಲು ಕತ್ರಿಗುಪ್ಪೆ BTL ವಿದ್ಯಾವಾಹಿನಿ ಶಾಲೆಯ ಮತಗಟ್ಟೆಗೆ ತೆರಳಲಿದ್ದಾರೆ.

ಇದನ್ನೂ ಓದಿ: Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

ಗಣೇಶ್, ದಿಗಂತ್, ಪ್ರೇಮ್ ದಂಪತಿ ಆರ್‌ ಆರ್ ನಗರ, ಕುಂದಾಪುರದ ಕೆರಾಡಿ ಶಾಲೆಯಲ್ಲಿ ರಿಷಬ್ ಶೆಟ್ಟಿ, ಉಡುಪಿಯಲ್ಲಿ ರಕ್ಷಿತ್ ಶೆಟ್ಟಿ, ಅರಸೀಕೆರೆಯಲ್ಲಿ ಧನಂಜಯ್ ಮತ ಚಲಾಯಿಸಲಿದ್ದಾರೆ.
ಮಾಳವಿಕಾ ಅವಿನಾಶ್,ವಸಿಷ್ಠ ಸಿಂಹ, ಹರಿಪ್ರಿಯಾ, ಅಮೂಲ್ಯ, ಅವಿನಾಶ್‌ ಆರ್‌ ಆರ್‌​ನಗರದಲ್ಲಿ,
ಸೃಜನ್ ಲೋಕೇಶ್, ಪೂಜಾ ಗಾಂಧಿ, ದುನಿಯಾ ವಿಜಯ್ ಕತ್ರಿಗುಪ್ಪೆ.

ಅನಂತ್ ನಾಗ್: ಮಲ್ಲೇಶ್ವರಂ, ​ಧ್ರುವ ಸರ್ಜಾ: ತ್ಯಾಗರಾಜನಗರ (ಕೆಆರ್​.ರೋಡ್​, ಶಾಸ್ತ್ರಿ ನಗರ) ಶ್ರೀಮುರುಳಿ: ವಸಂತ ನಗರ ಪ್ರಶಾಂತ್​ನೀಲ್​: ವಸಂತ ನಗರ, ಮಾಲಾಶ್ರೀ: ಶಿವಾಜಿನಗರ ರಾಜ್ ಬಿ.ಶೆಟ್ಟಿ: ಉಡುಪಿ ನಿಖಿಲ್ ಕುಮಾರಸ್ವಾಮಿ: ಕೇತಮಾರನಹಳ್ಳಿ (ಬಿಡದಿ) ಆಶಿಕಾ ರಂಗನಾಥ್: ತುಮಕೂರು ಚಿಕ್ಕಣ್ಣ: ಮೈಸೂರು ವಿನೋದ್ ರಾಜ್: ಸೋಲದೇವನ ಹಳ್ಳಿ ದೊಡ್ಡಣ್ಣ: ಬಿದರುಕಲ್ಲು ಮತ ಚಲಾಯಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Salman Khan : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಎಂಬಿಬ್ಬರು ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Salman Khan
Koo

ಮುಂಬಯಿ: ಬಾಲಿವುಡ್​ ನಟ ಸಲ್ಮಾನ್​ ಖಾನ್ (Salman Khan) ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ (Firing at Salman Khan house) ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಪಂಜಾಬ್​ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಗುಂಡಿನ ದಾಳಿ ನಡೆಸಿದವರಿಗೆ ಗನ್​ಗಳನ್ನು ನೀಡಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಎಂಬಿಬ್ಬರು ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದಾರೆ.

ಸಲ್ಮಾನ್ ಖಾನ್‌ನನ್ನು ಕೊಂದೇ ತೀರುತ್ತೇನೆ, ನನ್ನ ಜೀವನದ ಗುರಿ: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಅವರಿಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿʼʼ ಎಂದು ಉಲ್ಲೇಖಿಸಿದ್ದಾರೆ. ʻʻಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂಬುದಾಗಿ ಹೇಳಿದ್ದಾರೆ.

“ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆʼʼ ಎಂದು ಬಿಷ್ಣೋಯ್ ಹೇಳಿದ್ದಾರೆ.

ಇದನ್ನೂ ಓದಿ: Gyanvapi Mosque: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶ ನೀಡಿದ್ದ ಜಡ್ಜ್‌ಗೆ ವಿದೇಶದಿಂದ ಜೀವ ಬೆದರಿಕೆ

ʻʻಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ” ಹೇಳಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ, ಕೃಷ್ಣಮೃಗವನ್ನು ಕೊಂದ ಆರೋಪದ ಮೂಲಕ ಸಲ್ಮಾನ್ ತನ್ನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಲಾರೆನ್ಸ್‌ ಬಿಷ್ಣೋಯ್‌ ಹೇಳಿದ್ದಾರೆ.

ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ. ಇದರ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು. ನಾನು ಬೇರೆಯವರನ್ನು ಅವಲಂಬಿಸುವುದಿಲ್ಲ,’’ ಎಂದು ಎಬಿಪಿ ಸುದ್ದಿವಾಹಿನಿಗೆ ತಿಳಿಸಿದರು.

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಇದನ್ನು ಜಾಂಬಾಜಿ ಎಂದೂ ಕರೆಯುತ್ತಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Kannada Serials TRP: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

VISTARANEWS.COM


on

Kannada Serials TRP Lakshmi Nivasa In Top Amruthadhaare in Top 5
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ. ಇತ್ತೀಚೆಗೆ ಆರಂಭ ಆಗಿರುವ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ‘ಅಮೃತಧಾರೆ’ ಧಾರಾವಾಹಿ ಇದೆ. ಎರಡೂ ಧಾರಾವಾಹಿಗಳಿಗೆ ಈ ಬಾರಿ ಐದನೇ ಸ್ಥಾನ ಸಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಫ್ಯಾಷನ್

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Ethnic Collection: ನೆಟ್‌ಫ್ಲಿಕ್ಸ್‌ (Netflix) ಹಾಗೂ ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ‌ʼಹೀರಾಮಂಡಿ: ದಿ ಡೈಮಂಡ್ ಬಜಾರ್ʼ (Heeramandi: The Diamond Bazaar) ವೆಬ್‌ ಸೀರಿಸ್‌ನಿಂದ ಸ್ಫೂರ್ತಿ ಪಡೆದ ಸಾಂಪ್ರದಾಯಿಕ ದಿರಿಸುಗಳ (Ethnic Collection) ಎಕ್ಸ್‌ಕ್ಲೂಸಿವ್ ಸಂಗ್ರಹದ ಅನಾವರಣವನ್ನು ಭಾರತದ ಪ್ರೀಮಿಯರ್ ಫ್ಯಾಷನ್ ಇ-ಟೇಲರ್ ಆದ ಅಜಿಯೋ ಬುಧವಾರ ಘೋಷಿಸಿದೆ. ಇಂದಿನಿಂದ (ಏಪ್ರಿಲ್ 25) ಗ್ರಾಹಕರು ಖರೀದಿಸಬಹುದು.

VISTARANEWS.COM


on

Ethnic Collection
Koo

ಮುಂಬೈ: ನೆಟ್‌ಫ್ಲಿಕ್ಸ್‌ (Netflix) ಹಾಗೂ ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ‌ʼಹೀರಾಮಂಡಿ: ದಿ ಡೈಮಂಡ್ ಬಜಾರ್ʼ (Heeramandi: The Diamond Bazaar) ವೆಬ್‌ ಸೀರಿಸ್‌ನಿಂದ ಸ್ಫೂರ್ತಿ ಪಡೆದ ಸಾಂಪ್ರದಾಯಿಕ ದಿರಿಸುಗಳ (Ethnic Collection) ಎಕ್ಸ್‌ಕ್ಲೂಸಿವ್ ಸಂಗ್ರಹದ ಅನಾವರಣವನ್ನು ಭಾರತದ ಪ್ರೀಮಿಯರ್ ಫ್ಯಾಷನ್ ಇ-ಟೇಲರ್ ಆದ ಅಜಿಯೋ ಬುಧವಾರ ಘೋಷಿಸಿದೆ. ಅಜಿಯೋದ ಹೌಸ್ ಆಫ್ ಎಥ್ನಿಕ್ಸ್ (AJIO’s House of Ethnics) ಅಡಿಯಲ್ಲಿ ಇದನ್ನು ಆರಂಭಿಸಲಾಗಿದೆ. ನೆಟ್‌ಫ್ಲಿಕ್ಸ್‌ನ ಈ ಸರಣಿಯಿಂದ ಪ್ರೇರಣೆಗೊಂಡ 250 ಸ್ಟೈಲ್‌ನ ಸಾಂಪ್ರದಾಯಿಕ ದಿರಿಸುಗಳ ಈ ಸೀಮಿತ ಅವಧಿಯ ಸಂಗ್ರಹವು ಗ್ರಾಹಕರಿಗೆ ಒದಗಿಸಲಿದೆ. ಇಂದಿನಿಂದ (ಏಪ್ರಿಲ್ 25) ಗ್ರಾಹಕರು ಖರೀದಿಸಬಹುದು.

ʼಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಈ ಸೀರಿಸ್‌ನಲ್ಲಿ ಬಳಸಲಾದ ಬಣ್ಣಗಳು, ಸಿಲೌಟ್‌ಗಳು, ಬಟ್ಟೆಗಳು ಮತ್ತು ಅಲಂಕಾರಗಳಿಂದ ಈ ಬಹು ನಿರೀಕ್ಷಿತ ಸಂಗ್ರಹವು ಪ್ರೇರಣೆ ಪಡೆದಿದೆ. ಈ ಸಂಗ್ರಹದ ಶ್ರೇಣಿಯಲ್ಲಿ ಬಟ್ಟೆಗಳಿಗೆ ಶುದ್ಧ ರೇಷ್ಮೆ, ಟಿಶ್ಯೂ, ಜಾರ್ಜೆಟ್‌ ಮತ್ತು ಬ್ರೋಕೇಡ್‌ಗಳನ್ನು ಬಳಸಲಾಗಿದೆ. ಇವುಗಳಲ್ಲಿ ಬಹಳ ಕೌಶಲದಿಂದ ರೂಪಿಸಿದ ಡಬ್ಕಾ ಕೈ ಕಸೂತಿ, ಪಾರ್ಸಿ ಕಸೂತಿ, ಬೀಡ್ ವರ್ಕ್ ಮತ್ತು ಇದೇ ಸೀರಿಸ್‌ನಿಂದ ಸ್ಫೂರ್ತಿಗೊಂಡ ಡಿಜಿಟಲ್ ಪ್ರಿಂಟ್ಸ್ ಇವೆ.

ಇದು ಮಹಿಳಾ ಕೇಂದ್ರಿತ ಸಂಗ್ರಹವಾಗಿದ್ದು, ಶರಾರಾ, ಕುರ್ತಾ ಸೂಟ್ ಸೆಟ್, ಲೆಹೆಂಗಾ ಮತ್ತು ಸೀರೆಗಳನ್ನು ಒಳಗೊಂಡಿದೆ. ಇವುಗಳ ಬೆಲೆ 4,000 ರೂ.ಯೊಂದ ಆರಂಭಗೊಂಡು 1,50,000 ರೂ. ತನಕ ಇರುತ್ತದೆ. ಇದನ್ನು ಸಂಜಯ್ ಲೀಲಾ ಬನ್ಸಾಲಿ ಅವರ ತಂಡ ವಿನ್ಯಾಸ ಮಾಡಿದೆ. ಅಜಿಯೋ ಹಾಗೂ ನೆಟ್‌ಫ್ಲಿಕ್ಸ್ ಮಧ್ಯೆ ಈ ಪಾಲುದಾರಿಕೆಯ ಕಲ್ಪನೆ ಮೂಡಿರುವ ಬಗೆಯೂ ಆಸಕ್ತಿದಾಯಕ. ಇದರಿಂದಾಗಿ ಅಭಿಮಾನಿಗಳು ನೆಟ್‌ಫ್ಲಿಕ್ಸ್ ಸೀರಿಸ್‌ನಿಂದ ಪ್ರೇರಣೆಗೊಂಡ ವಿಶಿಷ್ಟ ಸ್ಟೈಲ್ ಹೊಂದಬಹುದು.

ಅಜಿಯೋದ ಸಿಇಒ ವಿನೀತ್ ನಾಯರ್ ಅವರು ಮಾತನಾಡಿ, “ಸಂಜಯ್ ಲೀಲಾ ಬನ್ಸಾಲಿ ಅವರ ಸೃಷ್ಟಿಯಲ್ಲಿ ಫ್ಯಾಷನ್ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ. ಇದರ ಥೀಮ್ ಭಾರತೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯಲ್ಲಿ ಆಳವಾಗಿ ಬೇರೂರಿರುತ್ತದೆ. ಆದ್ದರಿಂದ ನಾವು ʼಹೀರಾಮಂಡಿʼಗಾಗಿ ನೆಟ್‌ಫ್ಲಿಕ್ಸ್‌ನೊಂದಿಗೆ ಈ ಸಹಯೋಗದ ಬಗ್ಗೆ ಯೋಚಿಸಿದಾಗ ಅದು ಬಹಳಷ್ಟು ಅರ್ಥಪೂರ್ಣ ಎನಿಸಿತು. ಅಜಿಯೋದ ಹೌಸ್ ಆಫ್ ಎಥ್ನಿಕ್ಸ್ ಈ ಸೀಮಿತ ಆವೃತ್ತಿಯ ಸಂಗ್ರಹಕ್ಕೆ ಪರಿಪೂರ್ಣ ಲಾಂಚ್‌ಪ್ಯಾಡ್ ಆಗಿದೆ. ಗ್ರಾಹಕರು ಆರಾಧಿಸುವ ಫ್ಯಾಷನ್‌ ಕೈಗೆಟುಕುವಂತೆ ಮಾಡುತ್ತದೆ. ನಿಮ್ಮ ಕನಸಿನ ಬಾಲಿವುಡ್-ಪ್ರೇರಿತ ಲುಕ್ ಪಡೆಯುವುದಕ್ಕೆ ಇದು ಸಹಾಯ ಮಾಡುತ್ತದೆʼʼ ಎಂದು ಹೇಳಿದ್ದಾರೆ.

ʼಹೀರಾಮಂಡಿ: ಡೈಮಂಡ್ ಬಜಾರ್ʼ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಚೊಚ್ಚಲ ವೆಬ್ ಸೀರಿಸ್‌. ಇದು 2024ರಲ್ಲಿ ಬಹು ನಿರೀಕ್ಷಿತ ಸರಣಿಗಳಲ್ಲಿ ಒಂದಾಗಿದೆ. ಸ್ವಾತಂತ್ರ್ಯಪೂರ್ವ ಭಾರತಲ್ಲಿ ನಡೆಯುವ ಘಟನೆ ಇದಾಗಿದೆ. ಅಂತಿಮ ಎಳೆಯನ್ನು ತವೈಫ್‌ಗಳ ಕಲೆಯನ್ನು ಹಿಡಿದಿಟ್ಟುಕೊಳ್ಳುವ (ಮುಜ್ರಾ) ಪರೀಕ್ಷೆಗೆ ಒಳಪಡಿಸಲಾಗಿದೆ.

ನೆಟ್‌ಫ್ಲಿಕ್ಸ್‌ನ ಏಪ್ಯಾಕ್ ಮಾರ್ಕೆಟಿಂಗ್ ಪಾಲುದಾರಿಕೆಯ ಹಿರಿಯ ನಿರ್ದೇಶಕಿ ಶಿಲ್ಪಾ ಸಿಂಗ್ ಮಾತನಾಡಿ, “ಸಂಜಯ್ ಲೀಲಾ ಬನ್ಸಾಲಿ ಅವರ ಕಥೆಗಳಲ್ಲಿನ ವೇಷಭೂಷಣಗಳು ಮುಖ್ಯ ಪಾತ್ರ ವಹಿಸುತ್ತವೆ. ಕಥಾಹಂದರಕ್ಕೆ ಇನ್ನಷ್ಟು ಗಟ್ಟಿತನವನ್ನು ಸೇರಿಸುತ್ತವೆ. ʼಹೀರಾಮಂಡಿ: ಡೈಮಂಡ್ ಬಜಾರ್ʼ ಹಿಂದೆಂದೂ ನೋಡಿರದ ಕೆಲವು ಸಾಂಪ್ರದಾಯಿಕ ಶೈಲಿಗಳು ಮತ್ತು ಫ್ಯಾಷನ್‌ಗಳನ್ನು ಹೊಂದಿರುತ್ತದೆ. ʼಹೀರಾಮಂಡಿʼಯಿಂದ ಪ್ರೇರಿತವಾದ ಅಜಿಯೋ ಹೌಸ್ ಆಫ್ ಎಥ್ನಿಕ್ಸ್‌ನಿಂದ ಹೊಸ ಮತ್ತು ವಿಶೇಷ ಸಂಗ್ರಹವನ್ನು ಈ ಸಹಯೋಗವು ತರುತ್ತದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Mens Neck Chains Fashion: ಹುಡುಗರ ಕ್ರೇಜಿ ಫ್ಯಾಷನ್‌ಗೆ ಬಂತು ಫಂಕಿ ನೆಕ್‌ ಚೈನ್ಸ್‌

ಅಜಿಯೋ ಹೌಸ್ ಆಫ್ ಎಥ್ನಿಕ್ಸ್ ಬಿಬಾ (BIBA), ಇಂಡಿ ಪಿಕ್ಸ್, ನೈರಿಕಾ (Nyrika), ಆರ್ಕೆ ರಿತು ಕುಮಾರ್, ಸತ್ಯ ಪಾಲ್, ರಿ-ವಾಹ್, ಗ್ಲೋಬಲ್ ದೇಸಿ, ಗುಲ್ಮೊಹರ್ ಜೈಪುರ್, ಸೋಚ್ ಮತ್ತು ಫ್ಯಾಬಿಂಡಿಯಾದಂತಹ ಉನ್ನತ ಸಾಂಪ್ರದಾಯಿಕ ದಿರಿಸುಗಳ ಬ್ರಾಂಡ್‌ಗಳನ್ನು ಹೊಂದಿರುವ ಕ್ಯುರೇಟೆಡ್ ಸ್ಟೋರ್ ಆಗಿದೆ. 3 ಲಕ್ಷಕ್ಕೂ ಹೆಚ್ಚು ಸ್ಟೈಲ್‌ಗಳೊಂದಿಗೆ ಅಜಿಯೋ ಹೌಸ್ ಆಫ್ ಎಥ್ನಿಕ್ಸ್ ಸಾಂಪ್ರದಾಯಿಕ ದಿರಿಸುಗಳ ಫ್ಯಾಷನ್‌ಗಾಗಿ ಭಾರತದ ಆದ್ಯತೆಯ ತಾಣವಾಗಿದೆ. ʼಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಆಗಲಿದೆ.

Continue Reading
Advertisement
Pune Police 60 Hours Operation; Drugs worth more than Rs 1300 crore seized
ಕ್ರೈಂ2 mins ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ3 mins ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ13 mins ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ41 mins ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ43 mins ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

lok sabha election 2024 sudha murthy voting
Live News1 hour ago

Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

ಅಂಕಣ2 hours ago

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Eating Bread
ಆಹಾರ/ಅಡುಗೆ2 hours ago

Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election 2024: ಇಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

Karnataka Weather Forecast
ಮಳೆ2 hours ago

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ16 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ17 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ20 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202421 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌