Site icon Vistara News

Rishab Shetty : ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಕಾಂತಾರ 2! ಶೂಟಿಂಗ್‌ ಯಾವಾಗ?

Rishab Shetty

ಬೆಂಗಳೂರು: ಬಹುನಿರೀಕ್ಷಿತ ಕಾಂತಾರ 2 ಸಿನಿಮಾವನ್ನು ವೀಕ್ಷಿಸಲು ಸಿನಿರಸಿಕರು ಕಾತುರದಿಂದ ಕಾಯುತ್ತಿದ್ದಾರೆ. ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಕಾಂತಾರ 1 ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರಕ್ಕೆ ಹೋಗಲಿದೆ ಎನ್ನಲಾಗುತ್ತಿದೆ. ಕಾಂತಾರ 2 ಚಿತ್ರೀಕರಣ ಇನ್ನೂ ಪ್ರಾರಂಭವಾಗದಿದ್ದರೂ, ಸಿನಿಮಾ ಬಜೆಟ್ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಇದೀಗ ವರದಿಗಳ ಪ್ರಕಾರ ಕಾಂತಾರ 1 ಕ್ಕಿಂತ ಕಾಂತಾರ 2 ಸಿನಿಮಾ (Kantara 2 budget) ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.

ʼಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವದಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ನವೆಂಬರ್‌ನಲ್ಲಿ ಚಿತ್ರೀಕರಣ ಆರಂಭ, 2024ರ ದ್ವಿತಿಯಾರ್ಧದಲ್ಲಿ ಸಿನಿಮಾ ರಿಲೀಸ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೀತಿದೆ. ಆದರೆ ಈ ಬಗ್ಗೆ ಚಿತ್ರತಂಡ ಮಾತ್ರ ಯಾವುದೇ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: Rishab Shetty: ರಿಷಬ್‌ ಶೆಟ್ಟಿ ಸಿನಿಮಾಗೆ 5 ವರ್ಷ; ಸ್ಪೆಷಲ್‌ ವಿಡಿಯೊ ಹಂಚಿಕೊಂಡ ಡಿವೈನ್‌ ಸ್ಟಾರ್‌!

ಕಾಂತಾರ 2 ಅಪ್‌ಡೇಟ್‌ ಏನು?

ಲೊಕೇಷನ್ ಹುಡುಕಾಟದ ಜತೆ ಜತೆಗೆ ಕಲಾವಿದರ ಆಯ್ಕೆಯ ಕೆಲಸ ಕೂಡ ನಡೆದಿದೆಯಂತೆ. ʻʻಈ ಸಿನಿಮಾದ ಪಾತ್ರಕ್ಕಾಗಿ ಮತ್ತಷ್ಟು ಉದ್ದದ ಗಡ್ಡ ಬಿಡಬೇಕು. ಮಳೆಯಲ್ಲೇ ಚಿತ್ರೀಕರಣ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇನೆ. ಮುಹೂರ್ತ, ಶೂಟಿಂಗ್ ಮತ್ತಿತರ ಬಗ್ಗೆ ನಿರ್ಮಾಣ ಸಂಸ್ಥೆಯೇ (Hombale Films) ಮಾಹಿತಿ ನೀಡಲಿದೆ ಎಂದಿದ್ದಾರೆ ರಿಷಬ್ ಶೆಟ್ಟಿ.

ʻʻಕಾಂತಾರ-2′ ಚಿತ್ರೀಕರಣಕ್ಕೆ ಯಾವುದೇ ನಿರ್ದಿಷ್ಟ ಸಮಯದ ಮಿತಿ ಹಾಕಿಕೊಂಡಿಲ್ಲ. ಮೊದಲ ಭಾಗವು ಎಷ್ಟು ಸಮಯದ ಮಿತಿಯನ್ನು ಬಯಸಿತ್ತೋ, ಅಷ್ಟೇ ಸಮಯದಲ್ಲಿ ಅದರ ಚಿತ್ರೀಕರಣ ಮುಗಿಸಿದ್ದೆವು. ಪ್ರಿಕ್ವೆಲ್ ಕಥೆಯ ಬೇಡಿಕೆ ಏನಿರುತ್ತದೆಯೋ ಅಷ್ಟೇ ಸಮಯವನ್ನು ಅದಕ್ಕೆ ನೀಡುತ್ತೇವೆ’ ಎನ್ನುತ್ತಾರೆ ರಿಷಬ್‌.

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜ ಎಂದಿದ್ದಾರೆ ರಿಷಬ್‌. ʻʻಬೇರೆ ಭಾಷೆಗಳಿಂದ ಹಲವು ಸಿನಿಮಾ ಅವಕಾಶಗಳು ಬಂದಿದ್ದವು. ಆದರೆ ನನಗೆ ‘ಕಾಂತಾರ’ವೇ ಆದ್ಯತೆ. ಕಾಂತಾರ’ದ ಯಶಸ್ಸಿಗೆ ಕನ್ನಡಿಗರು ಕಾರಣ. ಇವರು ನೀಡಿರುವ ಯಶಸ್ಸಿನ ಬೆನ್ನಲ್ಲೇ ಬೇರೆ ಭಾಷೆಯಲ್ಲಿ ಅವಕಾಶ ಬಂತೆಂದು ಓಡಿ ಹೋಗುವುದಿಲ್ಲ. ಹೊರಗಡೆಯಿಂದ ಬಂದ ತಂತ್ರಜ್ಞರು, ನಿರ್ದೇಶಕರು ಕನ್ನಡ ಸಿನಿಮಾ ಮಾಡಿ ಪ್ರಪಂಚದಾದ್ಯಂತ ತೆಗೆದುಕೊಂಡು ಹೋದರೆ ಅಭ್ಯಂತರವಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾ. “ಕಾಂತಾರ-2′ ಪೂರ್ಣಗೊಂಡ ಬಳಿಕ ಮುಂದಿನ ಸಿನಿಮಾಗಳ ಬಗ್ಗೆ ಯೋಚಿಸುವೆ’ ಎಂದರು ರಿಷಬ್‌.

Exit mobile version