Site icon Vistara News

Rishab Shetty: ಕಾಂತಾರ ಚಿತ್ರಕ್ಕೆ 1 ವರ್ಷ; ಸದಾ ಚಿರಋಣಿ ಎಂದ ರಿಷಬ್‌ ಶೆಟ್ಟಿ!

Rishab Shetty

ಬೆಂಗಳೂರು: ʻಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರಕ್ಕೆ ಹೋಗಿತ್ತು. ಇಂದಿಗೆ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ಕಳೆದಿದೆ. ಈ ಯಶಸ್ಸಿಗೆ ರಿಷಬ್‌ ಶೆಟ್ಟಿ ಪೋಸ್ಟ್‌ ಮೂಲಕ ಧನ್ಯವಾದ ಸೂಚಿಸಿದ್ದಾರೆ.

ʻʻಕಾಂತಾರ ಡಿವೈನ್ ಬ್ಲಾಕ್‌ಬಸ್ಟರ್‌ ಒಂದು ವರ್ಷದ ಸಂಭ್ರಮ. ನಾವು ಎಂದೆಂದಿಗೂ ಮೆಚ್ಚುವ ಚಿತ್ರ. ಎಪಿಕ್ ಬ್ಲಾಕ್‌ಬಸ್ಟರ್ ಆಗಿ ಪರಿವರ್ತಿಸಿದ ಪ್ರೇಕ್ಷಕರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಮರೆಯಲಾಗದ ವರ್ಷ ಅದು. ಧನ್ಯವಾದಗಳು. ಈ ಅಭೂತಪೂರ್ವ ಯಶಸ್ಸಿಗೆ ಕಾರಣವಾದ ಎಲ್ಲರಿಗೂ ನಾನು ನನ್ನ ತಂಡ ಸದಾ ಚಿರಋಣಿʼʼಎಂದು ರಿಷಬ್‌ ಬರೆದುಕೊಂಡಿದ್ದಾರೆ.

ಈ ಸಿನಿಮಾದ ಪ್ರಮುಖ ಹೈಲೈಟ್‌ ಎಂದರೆ ʻವರಾಹ ರೂಪಂʼ ಹಾಡು. ಈ ಹಾಡು ವಿವಾದಕ್ಕೆ ಎಷ್ಟು ಕಾರಣವಾಗಿತ್ತೋ ಅಷ್ಟೇ ಖ್ಯಾತಿಯನ್ನು ಪಡೆಯಿತು. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಈಗಾಗಲೇ ಹೊಸ ಘೋಷಣೆ ಕೂಡ ಆಗಿದೆ ಆಗಿದೆ. ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ‘ವರಾಹ ರೂಪಂʼ ವಿಡಿಯೊ ಸಾಂಗ್ ರಿಲೀಸ್ ಮಾಡುತ್ತಿದೆ.

ಇದನ್ನೂ ಓದಿ: Rishab Shetty: ಸೆ.30ಕ್ಕೆ ʻಕಾಂತಾರʼ ಬಿಡುಗಡೆಯಾಗಿ ಒಂದು ವರ್ಷ; ಭರ್ಜರಿ ಸಿಹಿ ಸುದ್ದಿ ಕೊಟ್ಟೇ ಬಿಡ್ತು ಹೊಂಬಾಳೆ!

ʼಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜ ಎಂದಿದ್ದಾರೆ ರಿಷಬ್‌. ʻʻಬೇರೆ ಭಾಷೆಗಳಿಂದ ಹಲವು ಸಿನಿಮಾ ಅವಕಾಶಗಳು ಬಂದಿದ್ದವು. ಆದರೆ ನನಗೆ ‘ಕಾಂತಾರ’ವೇ ಆದ್ಯತೆ. ಕಾಂತಾರ’ದ ಯಶಸ್ಸಿಗೆ ಕನ್ನಡಿಗರು ಕಾರಣ. ಇವರು ನೀಡಿರುವ ಯಶಸ್ಸಿನ ಬೆನ್ನಲ್ಲೇ ಬೇರೆ ಭಾಷೆಯಲ್ಲಿ ಅವಕಾಶ ಬಂತೆಂದು ಓಡಿ ಹೋಗುವುದಿಲ್ಲ. ಹೊರಗಡೆಯಿಂದ ಬಂದ ತಂತ್ರಜ್ಞರು, ನಿರ್ದೇಶಕರು ಕನ್ನಡ ಸಿನಿಮಾ ಮಾಡಿ ಪ್ರಪಂಚದಾದ್ಯಂತ ತೆಗೆದುಕೊಂಡು ಹೋದರೆ ಅಭ್ಯಂತರವಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾ. “ಕಾಂತಾರ-2′ ಪೂರ್ಣಗೊಂಡ ಬಳಿಕ ಮುಂದಿನ ಸಿನಿಮಾಗಳ ಬಗ್ಗೆ ಯೋಚಿಸುವೆ’ ಎಂದರು ರಿಷಬ್‌.

Exit mobile version