Rocking Star Yash | 10 ಕೋಟಿ ನಷ್ಟ ಕಂಡಿದ್ದ ಯಶ್‌ ಸಿನಿಮಾ ತೆಲುಗಿನಲ್ಲಿ ರಿಲೀಸ್‌: ಮನಗೆಲ್ಲುತ್ತಾ ʻರಾರಾಜುʼ! - Vistara News

ಟಾಲಿವುಡ್

Rocking Star Yash | 10 ಕೋಟಿ ನಷ್ಟ ಕಂಡಿದ್ದ ಯಶ್‌ ಸಿನಿಮಾ ತೆಲುಗಿನಲ್ಲಿ ರಿಲೀಸ್‌: ಮನಗೆಲ್ಲುತ್ತಾ ʻರಾರಾಜುʼ!

ಯಶ್‌ ನಟನೆಯ ‘ಸಂತು ಸ್ಟ್ರೈಟ್‌ (Rocking Star Yash) ಫಾರ್ವರ್ಡ್‌’ ಸಿನಿಮಾ ತೆಲುಗಿಗೆ ಡಬ್‌ ಆಗಿದೆ. ʻರಾರಾಜುʼ ಹೆಸರಿನಲ್ಲಿ ಬಿಡುಗಡೆಗೊಂಡಿದೆ.

VISTARANEWS.COM


on

Yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕೆಜಿಎಫ್‌ ಸಿನಿಮಾ ಯಶಸ್ಸಿನ (Rocking Star Yash) ಮೂಲಕ ರಾಕಿಂಗ್‌ ಸ್ಟಾರ್‌ ಯಶ್‌ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಹೊರಹೊಮ್ಮಿದರು. ಯಶ್‌ಗೆ ಹೊರರಾಜ್ಯ ಸೇರಿದಂತೆ ದೇಶ ವಿದೇಶಗಳಲ್ಲಿ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣದಲ್ಲಿ ಅವರದ್ದೇ ಫ್ಯಾನ್ಸ್‌ ಸಂಘಗಳು ಹುಟ್ಟಿಕೊಂಡಿವೆ. ಇದೀಗ ಯಶ್‌ ನಟನೆಯ ‘ಸಂತು ಸ್ಟ್ರೈಟ್‌ ಫಾರ್ವರ್ಡ್‌’ ಸಿನಿಮಾ ʻರಾರಾಜುʼ ಹೆಸರಿನಲ್ಲಿ ಡಬ್‌ ಆಗಿ ತೆಲುಗಿನಲ್ಲಿ ಅಕ್ಟೋಬರ್‌ 14ರಂದು ಬಿಡುಗಡೆಗೊಂಡಿದೆ.

ಮಹೇಶ್‌ ರಾವ್‌ ನಿರ್ದೇಶನದ ‘ಸಂತು ಸ್ಟ್ರೈಟ್‌ ಫಾರ್ವರ್ಡ್‌’ ಸಿನಿಮಾ 2016ರಲ್ಲಿ ತೆರೆ ಕಂಡಿತ್ತು. ಜೋಡಿಯಾಗಿ ರಾಧಿಕಾ ಪಂಡಿತ್‌ ಬಣ್ಣ ಹಚ್ಚಿದ್ದರು. ಈ ಚಿತ್ರದಿಂದ 10 ಕೋಟಿ ರೂ. ನಷ್ಟವಾಗಿತ್ತು ಎಂದು ಇತ್ತೀಚೆಗೆ ಕೆ. ಮಂಜು ಹೇಳಿಕೊಂಡಿದ್ದರು. ‘ಸಂತು ಸ್ಟ್ರೈಟ್‌ ಫಾರ್ವರ್ಡ್‌’ ಜತೆಗೆ ಸುದೀಪ್‌- ಉಪೇಂದ್ರ ನಟನೆಯ ‘ಮುಕುಂದ ಮುರಾರಿ’ ಸಿನಿಮಾ ರಿಲೀಸ್‌ ಆಗಿ ಸಕ್ಸೆಸ್‌ ಕಂಡಿತ್ತು.

ಇದನ್ನೂ ಓದಿ | Rocking Star Yash | ರಾಕಿಂಗ್‌ ಸ್ಟಾರ್‌ ಯಶ್‌ ಬಾಲಿವುಡ್‌ ನಂ 1 ಸ್ಟಾರ್‌ ಎಂದ ಶಾಹಿದ್‌ ಕಪೂರ್‌!

Rocking Star Yash

ನಿರ್ಮಾಪಕ ವಿ. ಎಸ್ ಸುಬ್ಬಾರಾವು ‘ಸಂತು ಸ್ಟ್ರೈಟ್‌ ಫಾರ್ವರ್ಡ್‌’ ಚಿತ್ರವನ್ನು ತೆಲುಗಿಗೆ ಡಬ್‌ ಮಾಡಿ ರಿಲೀಸ್‌ ಮಾಡಿದ್ದಾರೆ. ‘ಕಿಂಗ್‌ ಆಫ್‌ ಕಿಂಗ್ಸ್‌’ ಎನ್ನುವ ಟ್ಯಾಗ್‌ಲೈನ್ ಕೂಡ ಇದೆ. ಹೈದರಾಬಾದ್‌ನಲ್ಲಿ 26ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಸ್ಯಾಂಡಲ್‌ವುಡ್‌ನಲ್ಲಿ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾ ಸೋಲುಂಡಿತ್ತು. 2016ರಲ್ಲಿಯೇ ತೆಲುಗಿನಲ್ಲಿ ರಿಲೀಸ್‌ ಮಾಡಬೇಕೆಂದು ನಿರ್ಧಾರವೂ ಕೂಡ ಆಗಿತ್ತು. ಆದರೆ ಇದೀಗ ರಿಲೀಸ್‌ ಆಗಿದೆ. ಟಾಲಿವುಡ್‌ನಲ್ಲಿ ಪ್ರೇಕ್ಷಕರಿಗೆ ಇಷ್ಟವಾಗುತ್ತಾ ಎಂಬುದು ಕಾದು ನೋಡಬೇಕಿದೆ.

Rocking Star Yash

ಇದನ್ನೂ ಓದಿ | Rocking Star Yash | ರಾಕಿ ಬಾಯ್‌ ಯಶ್‌ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟು ಇಂದಿಗೆ 14 ವರ್ಷ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Jerusha Christopher: ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ʻವೀರ ಮದಕರಿʼ ಬಾಲನಟಿ ನಾಯಕಿ!

Jerusha Christopher: ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಇತ್ತೀಚೆಗಷ್ಟೇ `ಅಪರೂಪ’ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ (Jerusha Christopher) ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತರುತ್ತಿದ್ದಾರೆ.

VISTARANEWS.COM


on

Jerusha Christopher In mahesh Babu Movie
Koo

ಬೆಂಗಳೂರು: ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ʻಆಕಾಶ್ʼ, ʻಅರಸುʼ, ʻಪರಮೇಶ ಪಾನ್ ವಾಲʼ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇತ್ತೀಚೆಗಷ್ಟೇ `ಅಪರೂಪ’ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ (Jerusha Christopher) ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಸಿನಿಮಾಪ್ರೇಮಿಗಳ ಎದುರು ತರುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. `ಮೆರವಣಿಗೆ’ ಸಿನಿಮಾ ಮೂಲಕ ಐಂದ್ರಿತಾ ರೇ , ಚಿರು ಸಿನಿಮಾ ಮೂಲಕ ಕೃತಿ ಕರಬಂದ, `ಅಜಿತ್ ಚಿತ್ರ’ದ ಮೂಲಕ ನಿಕ್ಕಿ ಗಲ್ರಾನಿ , ಕ್ರೇಜಿ ಬಾಯ್ ಮೂಲಕ ಆಶಿಕಾ ರಂಗನಾಥ್ ಮತ್ತು ಅಪರೂಪದ ಮೂಲಕ ಹೃತಿಕಾ ಶ್ರೀನಿವಾಸ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Rashmika Mandanna : ಮಹೇಶ್ ಬಾಬು ಫೋಟೊಗೆ ಹೋಲಿಸಿದ್ದಕ್ಕೆ ರಶ್ಮಿಕಾ ಮಂದಣ್ಣ ಕೊಟ್ಟ ರಿಯಾಕ್ಷನ್‌ ಏನು?

ಅಂದಹಾಗೇ ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ʻವೀರ ಮದಕರಿʼ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Continue Reading

ಟಾಲಿವುಡ್

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

Mrunal Thakur: ದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali). ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ( ‘Love and War’) ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾ ಹಿಂದಿಯ ಹಿಟ್‌ ಸಿನಿಮಾವಾದ ʻಸಂಗಮ್ʼ ಕಥೆಯಿಂದ ಸ್ಫೂರ್ತಿ ಪಡೆದಿದೆ ಎಂದು ವರದಿಯಾಗಿದೆ. ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ಠಾಕೂರ್ (Mrunal Thakur) ಮತ್ತು ಸಿದ್ಧಾಂತ್ ಚತುರ್ವೇದಿ ಜೋಡಿಯಾಗಿ ನಟಿಸುತ್ತಿದ್ದಾರೆ.

VISTARANEWS.COM


on

Mrunal Thakur and Siddhant Chaturvedi to start shoot
Koo

ಬೆಂಗಳೂರು: ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರ ಮುಂದಿನ ಚಿತ್ರಕ್ಕೆ ಮೃಣಾಲ್ ಠಾಕೂರ್ (Mrunal Thakur) ಮತ್ತು ಸಿದ್ಧಾಂತ್ ಚತುರ್ವೇದಿ ಜೋಡಿಯಾಗಿ ನಟಿಸುತ್ತಿದ್ದಾರೆ. ಮುಂದಿನ ವಾರ ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎಂದು ವರದಿಯಾಗಿದೆ. ʻಸೀತಾರಾಮಂʼ, ʻಹಾಯ್ ನಾನ್ನʼ, ʻಫ್ಯಾಮಿಲಿ ಸ್ಟಾರ್ʼ ಚಿತ್ರದ ಸಕ್ಸೆಸ್‌ ನಂತರ ಮೃಣಾಲ್ ಮತ್ತೆ ಹವಾ ಕ್ರಿಯೇಟ್ ಮಾಡಲಿದ್ದಾರೆ. ಮೃಣಾಲ್‌ ಮತ್ತು ಸಿದ್ಧಾಂತ್ ಮುಂದಿನ ವಾರ ಮುಂಬೈನಲ್ಲಿ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್ ಮೊದಲ ವಾರದಿಂದಲೇ ರವಿ ಉದ್ಯಾವರ್ ಅವರೊಂದಿಗೆ ಕಾರ್ಯಾಗಾರಗಳಿಗೆ ಭಾಗಿಯಾಗಿದ್ದರು. ಉದ್ಯಾವರ್ ಈ ಹಿಂದೆ ದಿವಂಗತ ನಟಿ ಶ್ರೀದೇವಿ ಅಭಿನಯದ MoM (2017) ಚಿತ್ರವನ್ನು ನಿರ್ದೇಶಿಸಿದ್ದರು. ಕೆಲವು ಮೂಲಗಳ ಪ್ರಕಾರ ‘ಲವ್ ಆ್ಯಂಡ್ ವಾರ್’ ಸಿನಿಮಾ ಬಳಿಕ ಬನ್ಸಾಲಿ ಈ ಸಿನಿಮಾದ ಚಿತ್ರೀಕರಣವನ್ನು ಮುಗಿಸುವ ಪ್ಲ್ಯಾನ್‌ನಲ್ಲಿದ್ದಾರೆ.

ಇದನ್ನೂ ಓದಿ: Mrunal Thakur: ಕೈ ಕೈ ಹಿಡಿದುಕೊಂಡ ಮೃಣಾಲ್ ಠಾಕೂರ್- ಬಾದ್‌ಶಾ; ಡೇಟಿಂಗ್ ಇರಬಹುದಾ?

ಬನ್ಸಾಲಿಯ ‘ಲವ್ ಆ್ಯಂಡ್ ವಾರ್’ಗೆ 1964ರ ಹಿಟ್‌ ಸಿನಿಮಾದಿಂದ ಸ್ಫೂರ್ತಿ!

ʼದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali). ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ( ‘Love and War’) ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಈ ಸಿನಿಮಾ ಹಿಂದಿಯ ಹಿಟ್‌ ಸಿನಿಮಾವಾದ ʻಸಂಗಮ್ʼ ಕಥೆಯಿಂದ ಸ್ಫೂರ್ತಿ ಪಡೆದಿದೆ ಎಂದು ವರದಿಯಾಗಿದೆ. 1964ರ ಈ ʻಸಂಗಮ್‌ʼ ( film Sangam) ಚಲನಚಿತ್ರದಲ್ಲಿ ರಾಜ್ ಕಪೂರ್, ವೈಜಯಂತಿಮಾಲಾ ಮತ್ತು ರಾಜೇಂದ್ರ ಕುಮಾರ್ ನಟಿಸಿದ್ದರು. ಈಗ ಈ ‘ಲವ್ ಆ್ಯಂಡ್ ವಾರ್’ ನಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್‌ ನಟಿಸಲಿದ್ದಾರೆ.

ಈ ‘ಲವ್ ಆ್ಯಂಡ್ ವಾರ್’ ಸಿನಿಮಾ ʻಸಂಗಮ್‌ʼ ರಿಮೇಕ್‌ ಎಂದು ಬಹಳ ಹಿಂದೆಯೇ ವರದಿಯಾಗಿತ್ತು. ಆರಂಭದಲ್ಲಿ, ಧರ್ಮ ಪ್ರೊಡಕ್ಷನ್ಸ್ ಈ ಸಿನಿಮಾ ಮಾಡಲು ಯೋಜಿಸಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಮಾಡಲು ಆಗಲಿಲ್ಲ. ಬನ್ಸಾಲಿಯವರ ‘ಲವ್ ಆ್ಯಂಡ್ ವಾರ್’ ಸಿನಿಮಾ ಒಂದು ತ್ರಿಕೋನ ಪ್ರೇಮ ಕಥೆಯಾಗಿದೆ ಎಂದು ವರದಿಯಾಗಿದೆ. ಮಾತ್ರವಲ್ಲ 1964ರ ಚಲನಚಿತ್ರ ʻಸಂಗಮ್‌ʼ ಸಿನಿಮಾದಿಂದ ಸ್ಫೂರ್ತಿ ಪಡೆದ ‘ಲವ್ ಆ್ಯಂಡ್ ವಾರ್’ ಆಧುನಿಕ ಕಾಲದ ಚಿತ್ರಕಥೆ ಹೊಂದಿರಲಿದೆ ಎಂದು ವರದಿಯಾಗಿದೆ.

ಈ ಚಿತ್ರಕ್ಕಾಗಿ ರಣಬೀರ್ ಕಪೂರ್ ತಮ್ಮ ತಾತ ರಾಜ್ ಕಪೂರ್ ಅವರ ʻಸಂಗಮ್ʼ ಪಾತ್ರ ನಿಭಾಯಿಸಲಿದ್ದಾರಂತೆ. ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬ ವಿಷಯ ದೃಢಪಟ್ಟಿಲ್ಲದಿದ್ದರೂ 2024ರ ದ್ವಿತೀಯಾರ್ಧದಲ್ಲಿ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ.

Continue Reading

South Cinema

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Mahesh Babu: ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ.

VISTARANEWS.COM


on

Mahesh Babu SS Rajamouli return from Dubai
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ. ಈ ಸಿನಿಮಾದಲ್ಲಿ ಮಹೇಶ್‌ ಬಾಬು ಅವರ ಲುಕ್‌ ಡಿಫ್‌ರೆಂಟ್‌ ಆಗಿರಲಿದೆ ಎಂದು ಈ ಮುಂಚೆ ರಾಜಮೌಳಿ ಅವರು ಹೇಳಿದ್ದರು. ಆ ಲುಕ್​ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗ ಮಹೇಶ್​ ಬಾಬು ಅವರು ಹೊಸ ಗೆಟಪ್​ ಬಹಿರಂಗ ಆಗಿದೆ.

ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಇತ್ತೀಚೆಗೆ ಆರ್‌ಆರ್‌ಆರ್ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ಗೆ ಬಂದಿದ್ದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಟಾಲಿವುಡ್

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Teja Sajja: ಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Teja Sajja Hanuman Movie Feme Mirai announce
Koo

ಬೆಂಗಳೂರು: ʻಹನುಮಾನ್ʼ ಸಿನಿಮಾ (Hanuman Movie) ಮೂಲಕ ಸೂಪರ್ ಸಕ್ಸೆಸ್‌ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ (Teja Sajja) ಹೊಸ ಸಿನಿಮಾ ಅನೌನ್ಸ್ ಆಗಿದೆ. ʻಕಾರ್ತಿಕೇಯʼ, ʻಕಾರ್ತಿಕೇಯ-2ʼ , `ಧಮಾಕ’ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ  ಅವರು ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಅನಾವರಣಗೊಂಡಿದೆ.

ʻಹನುಮಾನ್ʼನಲ್ಲಿ ಸೂಪರ್ ಹೀರೊ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ʻಮಿರಾಯ್ʼ ಎಂಬ ಟೈಟಲ್ ಇಡಲಾಗಿದೆ. ʻಮಿರಾಯ್ʼ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

ʻಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Hanuman Chalisa: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ FIR;‌ ಪಾಕಿಸ್ತಾನವನ್ನು ಆಳುತ್ತಿದ್ದೀರಾ ಎಂದು ಸಿಎಂಗೆ ಜೋಶಿ ಪ್ರಶ್ನೆ

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು 2025ರ ಏಪ್ರಿಲ್ 18ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

Continue Reading
Advertisement
Road Accident
ಉಡುಪಿ2 mins ago

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

supreme court baba ramdev IMA
ಪ್ರಮುಖ ಸುದ್ದಿ3 mins ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 20247 mins ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ25 mins ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ39 mins ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 202450 mins ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು56 mins ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ1 hour ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ1 hour ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ1 hour ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು21 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ22 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌