Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಟ್ರೈಲರ್‌ ರಿಲೀಸ್‌! - Vistara News

ಸಿನಿಮಾ

Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಟ್ರೈಲರ್‌ ರಿಲೀಸ್‌!

ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ರೂಪೇಶ್‌ ಶೆಟ್ಟಿ (Roopesh Shetty) ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಟ್ರೈಲರ್‌ ರಿಲೀಸ್‌ ಆಗಿದೆ.

VISTARANEWS.COM


on

Roopesh Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಗನ್. ಎಂ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ಜನವರಿ 13ಕ್ಕೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಬಿಗ್ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty), ಹಾಗೂ ʻಬ್ರಹ್ಮಗಂಟುʼ ಧಾರಾವಾಹಿ ಖ್ಯಾತಿಯ ಗೀತಾ ಭಾರತಿ, ಪಂಚಮಿ ರಾವ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಈ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ.

ನಿರ್ದೇಶಕ ಗಗನ್. ಎಂ ಮಾತನಾಡಿ ʻʻಕಿರುಚಿತ್ರ, ಡಾಕ್ಯುಮೆಂಟರಿ ನಿರ್ದೇಶನ ಮಾಡಿದ್ದೇನೆ. ತುಳು ಸಿನಿಮಾವೊಂದಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಮಂಕು ಭಾಯ್ ಫಾಕ್ಸಿ ರಾಣಿ ನನ್ನ ನಿರ್ದೇಶನದ ಮೊದಲ ಸಿನಿಮಾ. ಮೊದಲು ಇದನ್ನು ಶಾರ್ಟ್ ಮೂವಿ ಮಾಡೋಣ ಎಂದು ಪ್ಲ್ಯಾನ್ ಮಾಡಿಕೊಂಡಿದ್ದೆ. ರೂಪೇಶ್ ಶೆಟ್ಟಿ ಈ ಸಿನಿಮಾ ಮಾಡಲು ಒಪ್ಪಿಕೊಂಡ ಮೇಲೆ ಇದರ ಕಥೆಯನ್ನು ಸಿನಿಮಾಗೆ ಹೇಗೆ ಬೇಕೋ ಹಾಗೆ ಸಿದ್ಧಮಾಡಿಕೊಂಡೆವು. 2019ರಲ್ಲಿ ಆರಂಭವಾದ ಸಿನಿಮಾವಿದು. ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಪೂರ್ತಿ ಕಥೆ ಮಂಗಳೂರು ಕನ್ನಡ ಭಾಷೆಯಲ್ಲಿ ಸಾಗಲಿದೆ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಜೀವನದಲ್ಲಿ ನಡೆಯುವ ಪ್ರೇಮಕಥೆ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾ ಜನವರಿ 13ಕ್ಕೆ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ | Roopesh Shetty | ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಸಿನಿಮಾ ಮಂಕು ಭಾಯ್ ಫಾಕ್ಸಿ ರಾಣಿ ಬಿಡುಗಡೆಗೆ ಸಜ್ಜು

ನಾಯಕಿ ಪಂಚಮಿ ರಾವ್ ಮಾತನಾಡಿ ʻʻಇದು ನನ್ನ ಮೊದಲ ಸಿನಿಮಾ. ನಾನು ಕ್ಲಾಸಿಕಲ್ ಡಾನ್ಸರ್ ಕೂಡ ಹೌದು. ಸಿನಿಮಾ ರಂಗದ ಮೇಲೆ ಮೊದಲಿನಿಂದ ಆಸಕ್ತಿ ಇತ್ತು. ಒಂದೊಳ್ಳೆ ಕಂಟೆಂಟ್ ಇರುವ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ನಿರ್ದೇಶಕರು ಕಥೆ ಹೇಳಿದಾಗ ಕಥೆ ತುಂಬಾ ವಿಭಿನ್ನ ಎನಿಸಿತು ಆದ್ದರಿಂದ ಒಪ್ಪಿಕೊಂಡೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದರು.

ಗೀತಾ ಭಾರತಿ ಭಟ್ ಮಾತನಾಡಿ ʻʻನನಗೆ ಈ ಪ್ರಾಜೆಕ್ಟ್ ವೈಯಕ್ತಿಕವಾಗಿ ತುಂಬ ಸ್ಪೆಷಲ್. ಹಲವು ಸಿನಿಮಾಗಳಲ್ಲಿ ಸಪೋರ್ಟಿಂಗ್ ಕ್ಯಾರೆಕ್ಟರ್ ಮಾಡಿದ್ದೇನೆ. ಆದರೆ ಲೀಡ್ ರೋಲ್‌ನಲ್ಲಿ ಮಾಡಿರೋದು ಇದೇ ಮೊದಲು. ಶೂಟಿಂಗ್ ಅನುಭವ ತುಂಬಾ ಚೆನ್ನಾಗಿತ್ತು. ಆರಂಭದಲ್ಲಿ ಮಂಗಳೂರು ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಆದರೆ ಶೂಟಿಂಗ್ ಮುಗಿಯುವ ಹೊತ್ತಿಗೆ ಪೂರ್ತಿ ಮಂಗಳೂರು ಕನ್ನಡ ಕಲಿತಿದ್ದೆ. ಸಿನಿಮಾ ಎರಡೂವರೆ ವರ್ಷದ ನಂತರ ತೆರೆ ಮೇಲೆ ಬರುತ್ತಿದೆ. ನನ್ನನ್ನು ನಾನು ತೆರೆ ಮೇಲೆ ನೋಡಿಕೊಂಡಾಗ ಇನ್ನಷ್ಟು ಮುಂದೆ ಹೋಗಲು ಆತ್ಮ ವಿಶ್ವಾಸ ಬಂದಿದೆʼʼಎಂದರು.

Roopesh Shetty

ನಾಯಕ ನಟ ರೂಪೇಶ್ ಶೆಟ್ಟಿ ಮಾತನಾಡಿ ʻʻಈ ಸಿನಿಮಾ ಶೂಟ್ ಆಗಿ ಮೂರು ವರ್ಷ ಆಯ್ತು. ಚಿತ್ರದಲ್ಲಿ ಕಂಟೆಂಟ್ ಹೀರೊ. ಯಕ್ಷಗಾನದಲ್ಲಿ ಸಿಂಹದ ವೇಷ ಹಾಕುವ ಹುಡುಗನ ಕಥೆ ಚಿತ್ರದಲ್ಲಿದೆ. ಸ್ನೇಹಿತರೇ ಆತನಿಗೆ ಪ್ರಪಂಚ. ಇದರೊಂದಿಗೆ ಒಂದು ಮುಗ್ಧ ಲವ್ ಸ್ಟೋರಿ ಇರುವ ಸಿನಿಮಾ. ನಿರ್ದೇಶಕ ಗಗನ್ ಒಂದು ಕನ್ನಡ ಸಿನಿಮಾ ಮಾಡೋಣ ಎಂದಾಗ ಒಪ್ಪಿಕೊಂಡೆ. ಚಿತ್ರಕ್ಕಾಗಿ ಎಂಟು ಕೆಜಿ ದಪ್ಪ ಆಗಿದ್ದೆ. ಕನ್ನಡದಲ್ಲಿ ಲೀಡ್ ಆಗಿ ನಟಿಸುತ್ತಿರುವ ಐದನೇ ಸಿನಿಮಾವಿದು. ‘ಡೇಂಜರ್ ಝೋನ್’, ‘ಅನುಷ್ಕಾ’, ‘ನಿಶಬ್ದ 2’, ‘ಗೋವಿಂದ ಗೋವಿಂದ’ ಸಿನಿಮಾ ಮಾಡಿದ್ದೇನೆ. ಆಗೆಲ್ಲ ಆ ಸಿನಿಮಾದಲ್ಲಿ ನಾನಿದ್ದೇನೆ ಎಂದು ಹೇಳುತ್ತಿದ್ದೆ. ಆದ್ರೆ ಫಸ್ಟ್ ಟೈಂ ರೂಪೇಶ್ ಶೆಟ್ಟಿ ಸಿನಿಮಾ ಬರುತ್ತಿದೆ ಎಂದು ಎಲ್ಲರುರೂ ಹೇಳುತ್ತಿದ್ದಾರೆ ಇದು ತುಂಬಾ ಖುಷಿ ಕೊಡುತ್ತಿದೆ. ಇದಕ್ಕೆಲ್ಲ ಬಿಗ್ ಬಾಸ್ ಕಾರಣ. ಜನವರಿ 13ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿʼʼ ಎಂದರು.

ಪ್ರಕಾಶ್ ತೂಮಿನಾಡು, ಅರ್ಜುನ ಕಜೆ, ಪ್ರಶಾಂತ್ ಅಂಚನ್, ವಿವೇಕ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸೆನ್ಸಾರ್ ನಲ್ಲಿ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರ ಜನವರಿ 13ರಂದು ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ | Roopesh Shetty | ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್‌ ಶೆಟ್ಟಿ ಸಿನಿಮಾ ಫ್ಯಾಥೋ ಸಾಂಗ್‌ ಔಟ್‌: ಜನವರಿಯಲ್ಲಿ ಚಿತ್ರ ಬಿಡುಗಡೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

Aishwarya Rai:   ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು.

VISTARANEWS.COM


on

Aishwarya Rai undergo surgery post her return from Cannes Film Festival
Koo

ಬೆಂಗಳೂರು: ಐಶ್ವರ್ಯಾ ರೈ ಬಚ್ಚನ್ (Aishwarya Rai) ಅವರು 77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ (77th Cannes Film Festival) ಎರಡು ಶೇಡ್‌ನಲ್ಲಿ ಕಂಡಿದ್ದಾರೆ. ಕೈಗೆ ಬ್ಯಾಂಡೇಜ್‌ ಸುತ್ತಿಕೊಂಡಿದ್ದರೂ ನಟಿ ಸಖತ್‌ ಆಗಿಯೇ ಪೋಸ್‌ ಕೊಟ್ಟರು. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ ಅಂತೆ.

ಮೂಲಗಳ ಪ್ರಕಾರ ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಈ ಬಾರಿ ನಟಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು. ಮುಂದಿನ ವಾರ ನಟಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. ಮಗಳು ಆರಾಧ್ಯ ಬಚ್ಚನ್ ಜತೆ ಈ ಬಾರಿ ಐಶ್ವರ್ಯಾ ರೈ ಚಲನಚಿತ್ರೋತ್ಸವಕ್ಕೆ ಹೋಗಿದ್ದರು.

ಮೊದಲ ದಿನ ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದ್ದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದರು. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದರು.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

Continue Reading

ಟಾಲಿವುಡ್

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Kalki 2898 AD:  ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Kalki 2898 AD Keerthy Suresh Lends Her Voice To Bujji Car
Koo

ಬೆಂಗಳೂರು: ಇತ್ತೀಚೆಗೆ ಟಾಲಿವುಡ್‌ ನಟ ಪ್ರಭಾಸ್‌ ಅವರು ಡಾರ್ಲಿಂಗ್ಸ್‌(ಫ್ಯಾನ್ಸ್)ಗೆ (Kalki 2898 AD) ಸರ್‌ಪ್ರೈಸ್ ನ್ಯೂಸ್ ಇದೆ ಎಂದು ಇನ್‌ಸ್ಟಾ ಪೋಸ್ಟ್‌ ಮಾಡಿದ್ದರು. ಇದಾದ ಬಳಿಕ ಕೆಲವರು ಪ್ರಭಾಸ್ ಮದುವೆ ಫಿಕ್ಸ್ ಎಂದು ಕಮೆಂಟ್‌ ಮಾಡಿದ್ದರು. ಕೆಲವೇ ಕ್ಷಣಗಳಲ್ಲಿ ಪ್ರಭಾಸ್‌ ಮದುವೆ ಬಗ್ಗೆ ಹೇಳುತ್ತಿಲ್ಲ. ಸಿನಿಮಾ ಬಗ್ಗೆಯೇ ಪೋಸ್ಟ್‌ ಮಾಡಿರುತ್ತಾರೆ ಎಂದು ಕಮೆಂಟ್‌ ಮಾಡಿದ್ದರು. ಅದರಂತೆ ಈಗ ಆ ವಿಶೇಷ ವ್ಯಕ್ತಿ ಯಾರು ಎನ್ನುವುದು ಈಗ ರಿವೀಲ್ ಆಗಿದೆ. ಸದ್ಯ ಚಿತ್ರದ ʻಬುಜ್ಜಿʼ ಎನ್ನುವ ಪಾತ್ರವನ್ನು ಪರಿಚಯಿಸಲಾಗಿದೆ. ʻಬುಜ್ಜಿʼ ಎನ್ನುವುದು ಒಂದು ಸಣ್ಣ ರೋಬೊ. ಸದಾ ಚಿತ್ರದ ನಾಯಕ ಭೈರವನ ಜತೆಗಿರುವ ಪಾತ್ರ. ಬುಜ್ಜಿಗೆ ನಟಿ ಕೀರ್ತಿ ಸುರೇಶ್ ವಾಯ್ಸ್ ಕೊಟ್ಟಿದ್ದಾರೆ. ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ.  ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿಯೇ ಪ್ರಭಾಸ್​ ಅವರು ಆ ರೀತಿ ಪೋಸ್ಟ್​ ಮಾಡಿದ್ದರು. 

ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ. ಅದಲ್ಲಿ ಬುಜ್ಜಿ “ನನ್ನ ಜೀವನವೇನು? ‘ದೇಹ ಇಲ್ಲದೇ ಹೀಗೆ ಬದುಕಬೇಕಾ?” ಎಂದು ಕೇಳುತ್ತದೆ. ಅಷ್ಟರಲ್ಲಿ ಪ್ರಭಾಸ್ ಎಂಟ್ರಿ ಆಗುತ್ತದೆ. ಬುಜ್ಜಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮೇ 22 ರವರೆಗೆ ಕಾಯಬೇಕು ಎಂದು ಚಿತ್ರತಂಡ ಟ್ವಿಸ್ಟ್ ಕೊಟ್ಟಿದೆ. ಬಹಳ ಸ್ಮಾರ್ಟ್ ಆಗಿರುವ ಬುಜ್ಜಿಗೆ ವಾಹನ ಇರಲಿದೆ. ವಾಹನ ಹೇಗೆ ಸಿದ್ದ ಪಡಿಸಿಲಾಗಿತ್ತು ಎನ್ನುವ ಮೇಕಿಂಗ್‌ ವಿಡಿಯೊ ಇದು. ಮೇ 22ಕ್ಕೆ ಆ ವಾಹನದ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ. ನಟಿ ಕೀರ್ತಿ ಸುರೇಶ್ ವಾಯ್ಸ್ ಬುಜ್ಜಿಗೆ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ನಟಿಯರು ವಾಯ್ಸ್ ಕೊಡಲಿದ್ದಾರೆ. ಕನ್ನಡದಲ್ಲಿ ಯಾರು ಡಬ್ ಮಾಡುತ್ತಾರೆ ಎನ್ನುವ ಮಾಹಿತಿ ತಿಳಿದು ಬಂದಿಲ್ಲ.

ಇದನ್ನೂ ಓದಿ: Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading

ಸಿನಿಮಾ

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Kannada New Movie: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಚಿತ್ರದ ಪೋಸ್ಟರ್ ಈಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಸಿಂಪಲ್ ಸುನಿ, ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

VISTARANEWS.COM


on

Bank of Bhagyalakshmi movie poster released
Koo

ಬೆಂಗಳೂರು: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ. ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಚಿತ್ರದ ಪೋಸ್ಟರ್ (Kannada New Movie) ಬಿಡುಗಡೆಯಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್ ಸುನಿ ಅವರು ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌

ದಿಯಾ , ದಸರಾ, ಕೆಟಿಎಂ ಹಾಗೂ ಬ್ಲಿಂಕ್ ಸಿನಿಮಾಗಳಲ್ಲಿ ಅಭಿನಯದಲ್ಲಿ ಹೆಸರು ಮಾಡಿ, ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಸಿನಿಮಾದ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ. ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನಿಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ ವಿಎಫ್‌ಎಕ್ಸ್‌ (VFX) ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

ಹಾಸ್ಯ ಪ್ರಧಾನ ಕಥಾಹಂದರ

ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವನ್ನು ಈ ಚಿತ್ರವು ಒಳಗೊಂಡಿದೆ. ಸಹ ಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಸೇರಿದಂತೆ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಶೀಘ್ರದಲ್ಲೇ ಚಿತ್ರೀಕರಣ ಮುಕ್ತಾಯ

ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತಮುತ್ತ ಶೇ.80 ರಷ್ಟು ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಇನ್ನು ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾವನ್ನು ನಿರ್ಮಾಪಕ ಎಚ್.ಕೆ ಪ್ರಕಾಶ್, ಕನ್ನಡದ ಜತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ. ಕಾಸರಗೋಡು ಅವರ ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಅವರ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

Continue Reading
Advertisement
Aishwarya Rai undergo surgery post her return from Cannes Film Festival
ಬಾಲಿವುಡ್48 mins ago

Aishwarya Rai:   ಕಾನ್‌ ಫಿಲ್ಮ್‌ ಫೆಸ್ಟಿವಲ್‌ ಮುಗಿದ ಬಳಿಕ ಐಶ್ವರ್ಯಾ ರೈ ಕೈಗೆ ಶಸ್ತ್ರ ಚಿಕಿತ್ಸೆ

IPL 2024
ಐಪಿಎಲ್ 202448 mins ago

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

viral video
ವೈರಲ್ ನ್ಯೂಸ್58 mins ago

Viral Video: ಛೀ…ಈತನೆಂಥಾ ಕಾಮುಕ! ಸಾರ್ವಜನಿಕ ಸ್ಥಳದಲ್ಲಿ ಈ ಪಾಪಿ ಬಾಲಕಿಗೆ ಮಾಡಿದ್ದೇನು ಗೊತ್ತಾ?

Kalki 2898 AD Keerthy Suresh Lends Her Voice To Bujji Car
ಟಾಲಿವುಡ್1 hour ago

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Vijay Sethupathi Starrer Tamil Movie Teaser Released
ಕಾಲಿವುಡ್2 hours ago

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Arvind Kejriwal
ದೇಶ2 hours ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ2 hours ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ3 hours ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20243 hours ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌