RRR won Oscars because of me Ajay Devgn Ajay Devgn: ಆರ್‌ಆರ್‌ಆರ್‌ ಆಸ್ಕರ್‌ ಗೆದ್ದಿದ್ದೇ ನನ್ನಿಂದ: ಅಜಯ್ ದೇವಗನ್‌ - Vistara News

ಕಿರುತೆರೆ

Ajay Devgn: ಆರ್‌ಆರ್‌ಆರ್‌ ಆಸ್ಕರ್‌ ಗೆದ್ದಿದ್ದೇ ನನ್ನಿಂದ: ಅಜಯ್ ದೇವಗನ್‌

ಸಂಭಾಷಣೆಯ ಸಮಯದಲ್ಲಿ, ಕಪಿಲ್ ಶರ್ಮಾ RRR (Ajay Devgn) ಗೆಲುವಿಗಾಗಿ ಅಜಯ್ ಅವರನ್ನು ಅಭಿನಂದಿಸಿದ್ದಾರೆ. ಈ ವೇಳೆ ಅಜಯ್‌ ದೇವಗನ್‌ ನಗುತ್ತಲೇ ಆರ್‌ಆರ್‌ಆರ್‌ ಸಿನಿಮಾ ನನ್ನಿಂದಲೇ ಆಸ್ಕರ್‌ ಗೆದ್ದಿದೆ ಎಂದರು.

VISTARANEWS.COM


on

RRR won Oscars because of me Ajay Devgn
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಜಯ್ ದೇವಗನ್ (Ajay Devgn) ತಮ್ಮ ಮುಂಬರುವ ಚಿತ್ರ ಭೋಲಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದ ಸಮಯದಲ್ಲಿ, ಅಜಯ್ ಅವರು ಕಪಿಲ್ ಶರ್ಮಾ ಶೋಗೆ ಭೇಟಿ ನೀಡಿದರು. ಸಂಭಾಷಣೆಯ ಸಮಯದಲ್ಲಿ, ಕಪಿಲ್ ಶರ್ಮಾ RRR ಗೆಲುವಿಗಾಗಿ ಅಜಯ್ ಅವರನ್ನು ಅಭಿನಂದಿಸಿದ್ದಾರೆ. ಈ ವೇಳೆ ಅಜಯ್‌ ದೇವಗನ್‌ ನಗುತ್ತ, ಆರ್‌ಆರ್‌ಆರ್‌ ಸಿನಿಮಾ ನನ್ನಿಂದಲೇ ಆಸ್ಕರ್‌ ಗೆದ್ದಿದೆ ಎಂದರು.

ಆರ್‌ಆರ್‌ಆರ್ ಗೆಲುವಿಗಾಗಿ ಕಪಿಲ್ ಅವರು ಅಜಯ್ ಅವರನ್ನು ಅಭಿನಂದಿಸಿದ್ದಾರೆ. RRR ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಟು ನಾಟುಗಾಗಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಜಯ್ ಆರ್‌ಆರ್‌ಆರ್‌ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಕಪಿಲ್ ಅವರು ಅಭಿನಂದನೆ ಸಲ್ಲಿಸುತ್ತಿದ್ದಂತೆ ಪ್ರತಿಕ್ರಿಯಿಸಿದ ಅಜಯ್, ʻʻಚಿತ್ರವು ಆಸ್ಕರ್ ಪ್ರಶಸ್ತಿಯನ್ನು ತನ್ನಿಂದ ಗಳಿಸಿತು. ನಾನೇದಾರೂ ನಾಟು ನಾಟು ಹಾಡಿಗೆ ಡ್ಯಾನ್ಸ್‌ ಮಾಡಿದ್ದರೆ ಏನಾಗುತ್ತಿತ್ತು?ಎಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.

ಅಜಯ್‌ ದೇವಗನ್‌ ಅವರ ಈ ಪ್ರತಿಕ್ರಿಯೆ ಎಲ್ಲರನ್ನು ನಗುವಂತೆ ಮಾಡಿದೆ. ಅಜಯ್ ದೇವಗನ್‌ ಹೊರತುಪಡಿಸಿ, RRR ನಲ್ಲಿ ಆಲಿಯಾ ಭಟ್ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಎಸ್‌ಎಸ್ ರಾಜಮೌಳಿ ನಿರ್ದೇಶಿಸಿದ್ದಾರೆ ಮತ್ತು ಜ್ಯೂನಿಯರ್‌ ಎನ್‌ಟಿಆರ್ ಮತ್ತು ರಾಮ್ ಚರಣ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Bholaa trailer: ಅಜಯ್ ದೇವಗನ್ ನಟನೆ, ನಿರ್ದೇಶನದ ʻಭೋಲಾʼ ಟ್ರೈಲರ್‌ ಔಟ್‌

ಕಪಿಲ್‌ ಶರ್ಮಾ ಶೋ ಟ್ವೀಟ್‌

ಮಾರ್ಚ್‌ 30ರಂದು ಸಿನಿಮಾ ತೆರೆಗೆ

ʻಭೋಲಾʼ ಸಿನಿಮಾ 2019ರಲ್ಲಿ ಬಿಡುಗಡೆಯಾದ ತಮಿಳಿನ ʻಕೈದಿʼ ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ಕಾರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಜಯ್ ದೇವಗನ್ ನಿರ್ದೇಶನದ ʻಭೋಲಾʼ ಮಾರ್ಚ್ 30ರಂದು ಥಿಯೇಟರ್‌ಗಳಿಗೆ ಬರಲಿದೆ.

ಟಬು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೋಲಾ ಚಿತ್ರವು ಅಜಯ್ ದೇವಗನ್ ಮತ್ತು ನಟಿ ಟಬು ಅವರ ಒಂಬತ್ತನೇ ಚಿತ್ರವಾಗಿದೆ. ಇವರಿಬ್ಬರು ಕೊನೆಯದಾಗಿ ದೃಶ್ಯಂ 2ದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ದೀಪಕ್ ಡೊಬ್ರಿಯಾಲ್, ಸಂಜಯ್ ಮಿಶ್ರಾ, ಅಮಲಾ ಪೌಲ್ ಮತ್ತು ವಿನೀತ್ ಕುಮಾರ್ ಸೇರಿದಂತೆ ಇತರರು ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Myna Serial Udaya TV: ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ ಭವ್ಯಾ!

Myna Serial Udaya Tv: 90ರ ದಶಕದ ಬಹುಬೇಡಿಕೆಯ ನಟಿ ಭವ್ಯಾ ʻಮೈನಾʼ ಧಾರಾವಾಹಿಗೆ ಎಂಟ್ರಿ ಕೊಟ್ಟಿದ್ದಾರೆ. ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ.

VISTARANEWS.COM


on

Myna Serial Udaya Tv bhavya actress entry
Koo

ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ (Myna Serial Udaya TV) ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ (bhavya actress), ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ ಬರೆದ ಕಾದಂಬರಿʼ, ʻಕೃಷ್ಣ ನೀ ಬೇಗನೆ ಬಾರೋʼ, ʻಕರುಣಾಮಯಿʼ, ʻಹೃದಯಗೀತೆʼ, ʻಮತ್ತೆ ಹಾಡಿತು ಕೋಗಿಲೆʼ, ʻಸಾಂಗ್ಲಿಯಾನʼ ಇತ್ಯಾದಿ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ವಿಷ್ಣುವರ್ಧನ್‌, ಶಂಕರನಾಗ್‌, ಅಂಬರೀಶ್‌, ರವಿಚಂದ್ರನ್ ಮತ್ತಿತರ ದಿಗ್ಗಜ ಕಲಾವಿದರ ಜತೆ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಭವ್ಯಾ, ಟಿವಿ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಇದೇ ಮೊದಲು.

ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ. ಕಟ್ಟುನಿಟ್ಟಾದರೂ ತಾಯಿ ಹೃದಯಿ. ಊರು ಬಿಟ್ಟು ಪರವೂರಿಗೆ ಬಂದಿರುವ ಹೆಣ್ಣುಮಕ್ಕಳೇ ಹೆಚ್ಚಿರುವ ಜಾಗದಲ್ಲಿ ಎಲ್ಲರನ್ನೂ ನಿಯಂತ್ರಿಸುತ್ತ ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತ ಎಲ್ಲರ ಭಾವನೆಗಳಿಗೂ ಬೆಲೆ ಕೊಡುವ ಅಪರೂಪದ ಪಾತ್ರ.

ಇದನ್ನೂ ಓದಿ: Uday Kiran: ದಿವಂಗತ ನಟ ಉದಯ್ ಕಿರಣ್ ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾ ರಿ-ರಿಲೀಸ್‌!

ಮೈನಾ ಜೀವನದಲ್ಲಿ ಹಠಾತ್ತನೆ ಬರುವ ಅನಿರೀಕ್ಷಿತ ತಿರುವು ಕಂಗೆಡಿಸಿದಾಗ ಅವಳಿಗೆ ಆಸರೆಯಾಗಿ ನಿಲ್ಲುತ್ತಾಳೆ ಅರುಂಧತಿ. ಹಾಗೆಯೇ ಇವರ ಮಹಿಳಾ ಹಾಸ್ಟೆಲ್‌ನಲ್ಲಿರುವ ಇತರ ನಾಲ್ಕು ಹೆಣ್ಣುಮಕ್ಕಳೂ ʻಮೈನಾʼ ಧಾರಾವಾಹಿಯ ಮಹತ್ವದ ಪಾತ್ರಗಳಾಗಿ ಬರುತ್ತಾರೆ. ಮಹಿಳಾ ಹಾಸ್ಟೆಲ್‌ ಈ ಧಾರಾವಾಹಿಯಲ್ಲಿ ಒಂದು ಬಹುಮುಖ್ಯ ಅಂಗವೇ ಆಗಿದೆ.
ʻಮೈನಾʼ ಧಾರಾವಾಹಿ ಪ್ರತಿದಿನ (ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದೆ.

ಉದಯ ಟಿವಿಯಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ‘ಕನ್ಯಾದಾನ’, ‘ಗಂಗೆಗೌ’ರಿ, ‘ಅಣ್ಣತಂಗಿ’, ‘ಶಾಂಭವಿ’, ‘ಸೇವಂತಿ’, ‘ರಾಧಿಕಾ’, ‘ಜನನಿ’, ‘ಗೌರಿಪುರದ ಗಯ್ಯಾಳಿಗಳು’ ಹೀಗೆ ಸಾಕಷ್ಟು ವೈವಿಧ್ಯಮಯ ಧಾರಾವಾಹಿಗಳು ಪ್ರಸಾರ ಆಗುತ್ತಿವೆ. ಇದಕ್ಕೆ ಈಗ ಹೊಸ ಧಾರಾವಾಹಿ ʼಮೈನಾʼ ಸೇರ್ಪಡೆ ಆಗಿದೆ.

ಮೈನಾ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ನಟಿಸುತ್ತಿದ್ದಾರೆ. ಈ ಹಿಂದೆ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ನಕ್ಷತ್ರಾ ಎನ್ನುವ ಪಾತ್ರ ಮಾಡಿದ್ದರು. ಟಿ ಎಸ್ ನಾಗಾಭರಣ, ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್, ಸಿದ್ದಾರ್ಥ್, ಪ್ರಭಂಜನ, ಸಾಗರ್, ಹರ್ಷಾರ್ಜುನ್, ಯಶಸ್ವಿನಿ, ಆಶಾ, ಅನುಷಾ ಕುಮಾರಿ, ಮಾಸ್ಟರ್ ಅರುಣ್, ಮಾಸ್ಟರ್ ರಣವೀರ್ ಮುಂತಾದವರು ನಟಿಸುತ್ತಿದ್ದಾರೆ.

Continue Reading

ಕಿರುತೆರೆ

Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

Seetha Raama Serial: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ʼಸೀತಾ ರಾಮʼ ಹಿಂದಿಗೆ ರಿಮೇಕ್‌ ಆಗುತ್ತಿದೆ. ಈ ಧಾರಾವಾಹಿ ಪ್ರೋಮೊ ಹೇಗಿದೆ ನೀವೇ ನೋಡಿ.

VISTARANEWS.COM


on

Seetha Raama Serial
Koo

ಬೆಂಗಳೂರು: ಟಿಆರ್‌ಪಿಯಲ್ಲಿ ಸದಾ ಮುಂಚೂಣಿಯಲ್ಲಿರುವ, ಟಾಪ್‌ 5ರೊಳಗೆ ಸ್ಥಾನ ಪಡೆದುಕೊಳ್ಳುತ್ತಿರುವ ಕನ್ನಡದ ಜನಪ್ರಿಯ ಧಾರಾವಾಹಿ ʼಸೀತಾ ರಾಮʼ (Seetha Raama Serial). ಝೀ ಕನ್ನಡ (Zee Kannada) ವಾಹಿನಿಯಲ್ಲಿ ಈ ಸೀರಿಯಲ್‌ ಪ್ರಸಾರವಾಗುತ್ತಿದೆ. ಸದ್ಯ ಇದು ಹಿಂದಿಗೆ ರಿಮೇಕ್‌ ಆಗುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಸದ್ಯ ಹಿಂದಿ ರಿಮೇಕ್‌ನ ಪ್ರೋಮೊ ಬಿಡುಗಡೆಯಾಗಿದ್ದು, ಗಮನ ಸೆಳೆಯುತ್ತಿದೆ.

ʼಸೀತಾ ರಾಮʼ ಸೀರಿಯಲ್‌ನ ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸದ್ಯ ಯಾವಾಗಿನಿಂದ ಟೆಲಿಕಾಸ್ಟ್‌ ಆಗಲಿದೆ ಎನ್ನುವ ಮಾಹಿತಿ ಗೊತ್ತಾಗಿಲ್ಲ. ಕನ್ನಡದಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಗೌಡ, ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಇನ್ನು ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಬದಲಾವಣೆ ಎಂದರೆ ಸೀತಾ ರಾಮ ಸೀರಿಯಲ್‌ನಲ್ಲಿ ಸೀತಾಗೆ ಸಿಹಿ ಹೆಸರಿನ ಮಗಳಿದ್ದರೆ ‘ಮೇ ಹೂ ಸಾತ್ ತೆರೆ’ಯಲ್ಲಿ ನಾಯಕಿಗೆ ಮಗ ಇರುವುದು ಪ್ರೋಮೊದಲ್ಲಿ ಕಂಡು ಬಂದಿದೆ. ಉಳಿದಂತೆ ಕೊಂಚ ಮಾರ್ಪಾಡಿನೊಂದಿಗೆ ಮೂಲ ಕಥೆಯಂತೆಯೇ ಇದು ಮೂಡಿ ಬರಲಿದೆ.

ಕನ್ನಡವೂ ರಿಮೇಕ್‌

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಫುಲ್ ಹೌಸ್ ಮೀಡಿಯಾ’ ನಿರ್ಮಾಣದ ‘ಮೇ ಹೂ ಸಾತ್ ತೇರೆ’ ಮುಂದಿನ ತಿಂಗಳಿನಿಂದ ಪ್ರಸಾರವಾಗುವ ಸಾಧ್ಯತೆ ಇದೆ.

2023ರ ಜುಲೈ 17ರಿಂದ ಪ್ರಸಾರವಾಗುತ್ತಿರುವ ʼಸೀತಾ ರಾಮʼ ಹಲವು ತಿರುವುಗಳೊಂದಿಗೆ ಪ್ರೇಕ್ಷಕರ ಮನ ರಂಜಿಸುತ್ತಿದೆ. ಮರಾಠಿ, ಕನ್ನಡದಲ್ಲಿ ಹಿಟ್‌ ಆದ ಈ ಧಾರಾವಾಹಿಯನ್ನು ಹಿಂದಿಯ ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 5ನಲ್ಲಿ ಇಲ್ಲ ʻಶ್ರೀರಸ್ತು ಶುಭಮಸ್ತುʼ: ರೇಸ್‌ಗಿಳಿದ ʻರಾಮಾಚಾರಿʼ!

ಕಳೆದ ವಾರ ಬಿಡುಗಡೆಯಾದ ಟಿಆರ್‌ಪಿ ಪಟ್ಟಿಯಲ್ಲಿ ʼಸೀತಾ ರಾಮʼ ಆರನೇ ಸ್ಥಾನದಲ್ಲಿತ್ತು. ಅದಕ್ಕೂ ಹಿಂದಿನ ವಾರ ನಾಲ್ಕನೇ ಸ್ಥಾನದಲ್ಲಿತ್ತು. ಮೊದಲ ಸ್ಥಾನಕ್ಕಾಗಿ ಸದ್ಯ ಝೀ ಕನ್ನಡ ವಾಹಿನಿಯ ‘ಪುಟ್ಟಕ್ಕನ ಮಕ್ಕಳು’ ಮತ್ತು ʼಲಕ್ಷ್ಮೀ ನಿವಾಸʼ ಸೀರಿಯಲ್‌ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಿರುತೆರೆ

Colors Kannada: ಕಿರುತೆರೆಗೆ ʼಬೆಳ್ಳುಳ್ಳಿ ಕಬಾಬ್ʼ ಚಂದ್ರು; ರಾವುಲ್ಲಾ ಮಾಲೀಕನ ಒನ್‌ ಮೋರ್‌ ಕಾರ್ಯಕ್ರಮ ಯಾವಾಗ?

Colors Kannada: ಕಲರ್ಸ್ ಕನ್ನಡ ವಾಹಿನಿಯಲ್ಲಿ ಜನಪ್ರಿಯ ಅಡುಗೆ ಕಾರ್ಯಕ್ರಮ ‘ಸವಿರುಚಿ’ ಸದ್ಯದಲ್ಲೇ ಆರಂಭವಾಗಲಿದೆ. ಈ ಕಾರ್ಯಕ್ರಮದ ಪ್ರೋಮೊ ರಿಲೀಸ್‌ ಆಗಿದೆ.

VISTARANEWS.COM


on

colors kannada
Koo

ಬೆಂಗಳೂರು: ಕನ್ನಡಿಗರಿಗೆ ಸ್ವಾದಿಷ್ಟ ಮನರಂಜನೆಯನ್ನು ಉಣಬಡಿಸುತ್ತಾ ಬಂದಿರುವ ಕಲರ್ಸ್ ಕನ್ನಡ (Colors Kannada) ಚಾನಲ್‌ ತನ್ನ ಜನಪ್ರಿಯ ಅಡುಗೆ ಕಾರ್ಯಕ್ರಮ ‘ಸವಿರುಚಿ’ (Saviruchi)ಯನ್ನು ಮತ್ತೆ ಆರಂಭಿಸಲಿದೆ.

ಯುಗಾದಿಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂತೆ ‘ಸವಿರುಚಿ’ಯ ಹೊಸ ಕಂತುಗಳು ಮೂಡಿ ಬರಲಿವೆ. ಏಪ್ರಿಲ್ 9ರಂದು ಆರಂಭವಾಗಲಿರುವ ‘ಸವಿರುಚಿ’ಯ ಹೊಸ ಸೀಸನ್‌ನ ನೀವು ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಿಸಬಹುದು.

ಹೊಸ ಸೀಸನ್ ‘ಸವಿರುಚಿ’ಯಲ್ಲಿ ಹಲವು ಹೊಸ ಅಂಶಗಳು ಇರಲಿವೆ. ಕರ್ನಾಟಕದ ಮೂಲೆಮೂಲೆಗಳ ಪಾಕ ಪ್ರವೀಣರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆಮೂಲೆಗಳಿಗೆ ತೆರಳಿ ಅಲ್ಲಿನ ಸಾಂಪ್ರದಾಯಿಕ ಅಡುಗೆಯನ್ನು ಪರಿಚಯಿಸುವುದರಿಂದಾಗಿ ಈ ಸೀಸಸ್‌ ಅನ್ನು ವೀಕ್ಷಕರಿಗೆ ಮತ್ತಷ್ಟು ಹತ್ತಿರವಾಗಲಿದೆ.

ಯುಗಾದಿ ಹಬ್ಬದ ದಿನವೇ ಹೊಸ ಸೀಸನ್ ಶುರುವಾಗುತ್ತಿರುವುದರ ಬಗ್ಗೆ ಮಾತನಾಡಿದ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ʼ‘ಹಬ್ಬ ಅಂದರೆ ಕುಟುಂಬದ ಎಲ್ಲರೂ ಒಟ್ಟಿಗೆ ಸೇರಿ ರುಚಿರುಚಿಯಾದ ಅಡುಗೆಯನ್ನು ಆನಂದಿಸುವುದು. ಈ ಯುಗಾದಿಯ ಸಡಗರವನ್ನು ‘ಸವಿರುಚಿ’ಯ ಹೊಸ ಸೀಸನ್ ಇನ್ನಷ್ಟು ರಸವತ್ತಾಗಿಸಲಿದೆʼ’ ಎಂದರು. ‘ʼನಮ್ಮ ವೀಕ್ಷಕರೆಲ್ಲರೂ ನಮ್ಮ ಕುಟುಂಬದವರೇ, ಅವರೆಲ್ಲರಿಗೂ ಯುಗಾದಿಯ ಶುಭಾಶಯ ಕೋರುತ್ತಾ ಉಡುಗೊರೆಯಾಗಿ ‘ಸವಿರುಚಿ’ಯ ಹೊಸ ಸೀಸನ್ನನ್ನು ಅವರಿಗೆ ನೀಡುತ್ತಿದ್ದೇವೆʼ’ ಎಂದು ಅವರು ಹೇಳಿದರು.

‘ನನ್ನಮ್ಮ ಸೂಪರ್ ಸ್ಟಾರ್’ ಖ್ಯಾತಿಯ ಜಾಹ್ನವಿ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದಾರೆ. ಅವರ ಜತೆಗೆ ಇತ್ತೀಚೆಗೆ ʼಬೆಳ್ಳುಳ್ಳಿ ಕಬಾಬ್ʼ ಮೂಲಕ ಎಲ್ಲೆಡೆ ಜನಪ್ರಿಯರಾಗಿರುವ ಬಿ.ಕೆ.ಚಂದ್ರು ಕೂಡ ಇರುವುದು ಮಜವನ್ನು ಮತ್ತೊಂದು ಹಂತಕ್ಕೆ ಏರಿಸಲಿದೆ.

ಇದನ್ನೂ ಓದಿ: Sonu Srinivas Gowda: ಸೋನು ಗೌಡ ದತ್ತು ಪಡೆದ ಪ್ರಕರಣ; ಮಗುವಿನ ಪಾಲಕರಿಗೂ ಸಂಕಷ್ಟ; ಕಾನೂನು ಏನು ಹೇಳುತ್ತದೆ?

‘ಸವಿರುಚಿ’ಯಲ್ಲಿ ಬರೀ ಅಡುಗೆ ಮಾಡುವುದಷ್ಟೇ ಅಲ್ಲದೆ, ಅದರ ಪೌಷ್ಟಿಕತೆಯ ಕುರಿತು ತಜ್ಞರ ಅಭಿಪ್ರಾಯಗಳೂ ಇರುವುದು ಈ ಕಾರ್ಯಕ್ರಮವನ್ನು ವಿಶೇಷಗೊಳಿಸಲಿವೆ. ಈಗಾಗಲೇ ಒಂದು ಚೆಂದದ ಕಾರ್ಯಕ್ರಮದ ಪರಿಮಳ ನಿಮ್ಮ ಮೂಗಿಗೆ ಬರತೊಡಗಿದ್ದರೆ ಏಪ್ರಿಲ್ 9ರ ಮಧ್ಯಾಹ್ನ 12 ಗಂಟೆಗೆ ಕಲರ್ಸ್ ಕನ್ನಡ ನೋಡಲು ಮರೆಯಬೇಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

Rakshit Shetty: ಕಳೆದ ವರ್ಷ ತೆರೆಕಂಡು ಗಮನ ಸೆಳೆದ ಕನ್ನಡ ಚಿತ್ರಗಳ ಪೈಕಿ ಸಪ್ತ ಸಾಗರದಾಚೆ ಎಲ್ಲೋ ಕೂಡ ಒಂದು. ಒದರ ಮೊದಲ ಭಾಗ ಈಗಾಗಲೇ ಕಿರುತೆರೆಯಲ್ಲಿ ಪ್ರಸಾರವಾಗಿದೆ. ಇದೀಗ ಎರಡನೇ ಭಾಗ ಸೈಡ್‌ ಬಿ ಕೂಡ ಪ್ರಸಾರವಾಗಲಿದೆ. ಯಾವಾಗ, ಯಾವ ಚಾನಲೆಎ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Rakshit Shetty
Koo

ಬೆಂಗಳೂರು: ಕಳೆದ ವರ್ಷ ತೆರೆಕಂಡ ʼಸಪ್ತ ಸಾಗರದಾಚೆ ಎಲ್ಲೋʼ (Sapta Saagaradaache Ello) ಸರಣಿ ಚಿತ್ರಗಳು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಿದ್ದವು. ಯಶಸ್ವಿ ನಿರ್ದೇಶಕ ಹೇಮಂತ್‌ ಎಂ. ರಾವ್‌ ಮತ್ತು ರಕ್ಷಿತ್‌ ಶೆಟ್ಟಿ (Rakshit Shetty) ಕಾಂಬಿನೇಷ್‌ನ ಈ ದೃಶ್ಯ ಕಾವ್ಯ ಕನ್ನಡ ಜತೆಗೆ ಇತರ ಭಾಷೆಗಳಲ್ಲಿಯೂ ತೆರೆಕಂಡು ಗಮನ ಸೆಳೆದಿತ್ತು. ಒಟಿಟಿಯಲ್ಲಿಯೂ ಸ್ಟ್ರೀಮಿಂಗ್‌ ಆಗಿ ಮೆಚ್ಚುಗೆ ಪಡೆದಿದ್ದ ಈ ಚಿತ್ರ ಇದೀಗ ಕಿರುತೆರೆಗೂ ಲಗ್ಗೆ ಇಟ್ಟಿದೆ. ಯಾವ ಚಾನಲ್‌ನಲ್ಲಿ, ಯಾವಾಗ ಪ್ರಸಾರವಾಗಲಿದೆ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಯಾವಾಗ ಪ್ರಸಾರ?

ಜೀ ಕನ್ನಡ ವಾಹಿನಿಯಲ್ಲಿ ಮೊಟ್ಟ ಮೊದಲ ಬಾರಿಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ’ ಸಿನಿಮಾ ಪ್ರಸಾರ ಆಗಲಿದೆ. ಭಾನುವಾರ (ಮಾರ್ಚ್ 24) ರಾತ್ರಿ 7.30ಕ್ಕೆ ಈ ಸಿನಿಮಾ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ’ ಕೂಡ ಇತ್ತೀಚೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿತ್ತು.

‘ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್‌ ಮತ್ತು ಚೈತ್ರಾ ಜೆ. ಆಚಾರ್ ಜೋಡಿ ಮೋಡಿ ಮಾಡಿತ್ತು. ಇವರೊಂದಿಗೆ ಅಚ್ಯುತ್ ಕುಮಾರ್, ಜೆ.ಪಿ. ತೂಮಿನಾಡ್, ರಮೇಶ್ ಇಂದಿರಾ, ಗೋಪಾಲ ಕೃಷ್ಣ ದೇಶಪಾಂಡೆ, ಯಮುನಾ ಶ್ರೀನಿಧಿ ಪಾತ್ರಗಳು ಕೂಡ ಜನರನ್ನು ಆಕರ್ಷಿಸಿದ್ದವು. ಜತೆಗೆ ಚರಣ್ ರಾಜ್ ಸಂಯೋಜನೆಯ ಹಾಡುಗಳು ನೋಡುಗರ ಹೃದಯ ಗೆದ್ದಿದ್ದರೆ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಕೂಡ ಮೆಚ್ಚುಗೆ ಗಳಿಸಿತ್ತು.

ಹಿಟ್‌ ಕಾಂಬಿನೇಷನ್‌

2016ರಲ್ಲಿ ತೆರೆಕಂಡ ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಸಿನಿಮಾದ ಬಳಿಕ ʼಸಪ್ತ ಸಾಗರದಾಚೆ ಎಲ್ಲೋʼ ಚಿತ್ರಕ್ಕಾಗಿ ನಿರ್ದೇಶಕ ಹೇಮಂತ್‌ ಎಂ. ರಾವ್‌ ಮತ್ತು ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಒಂದಾಗಿದ್ದರು. ಅನಂತ್‌ನಾಗ್‌, ವಶಿಷ್ಟ ಸಿಂಹ, ಶ್ರುತಿ ಹರಿಹರನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಸಿನಿಮಾ ಚಿತ್ರ ಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಪರಭಾಷಿಕರೂ ಈ ಚಿತ್ರವನ್ನು ಹೊಗಳಿದ್ದರು. ಹೀಗಾಗಿ ʼಸಪ್ತ ಸಾಗರದಾಚೆ ಎಲ್ಲೋʼ ಸೆಟ್ಟೇರಿದಾಗಿನಿಂದ ನಿರೀಕ್ಷೆ ಗರಿಗೆದರಿತ್ತು. ಕಮರ್ಷಿಯಲ್‌ ಅಂಶಗಳಿಲ್ಲದೆ ಈ ಶುದ್ಧ ಕ್ಲಾಸಿಕ್‌ ಚಿತ್ರ ನಿರೀಕ್ಷೆಯಂತೆ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಮಾತ್ರವಲ್ಲ ರಕ್ಷಿತ್‌ ಶೆಟ್ಟಿ, ರುಕ್ಮಿಣಿ ವಸಂತ್‌ ಮತ್ತು ಚೈತ್ರಾ ಜೆ. ಆಚಾರ್‌ ಅವರ ವೃತ್ತಿ ಬದುಕಿನ ಅತ್ಯುತ್ತಮ ಚಿತ್ರಗಳ ಪೈಕಿ ಇದೂ ಒಂದು ಎನಿಸಿಕೊಂಡಿತ್ತು.

ಇದನ್ನೂ ಓದಿ: Naga Vamsi: ಸಪ್ತ ಸಾಗರದಾಚೆ ಎಲ್ಲೋ ತುಂಬಾ ಗೋಳು ಸಿನಿಮಾ, ಯಾಕೆ ನೋಡಬೇಕು? ನಿರ್ಮಾಪಕ ನಾಗ ವಂಶಿ!

ಸದ್ಯ ʼಸಪ್ತ ಸಾಗರದಾಚೆ ಎಲ್ಲೋʼ ಸರಣಿ ಚಿತ್ರಗಳ ಯಶಸ್ಸಿನಲ್ಲಿ ತೇಲುತ್ತಿರುವ ರಕ್ಷಿತ್‌ ಶೆಟ್ಟಿ (Rakshit Shetty) ವಿವಿಧ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿ ಇದ್ದಾರೆ. ʼಉಳಿದವರು ಕಂಡಂತೆʼ ಸಿನಿಮಾದ ಮುಂದುವರಿದ ಭಾಗ ʼರಿಚರ್ಡ್‌ ಆ್ಯಂಟನಿ: ಲಾರ್ಡ್‌ ಆಫ್‌ ದಿ ಸಿʼ ಚಿತ್ರವನ್ನು ನಿರ್ದೇಶಿಸುವ ಜತೆಗೆ ನಟಿಸಲಿದ್ದಾರೆ. ಜತೆಗೆ ಇನ್ನೊಂದಷ್ಟು ಸಿನಿಮಾದ ಭಾಗವಾಗುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
gold rate today
ಚಿನ್ನದ ದರ2 mins ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

attempt to murder case
ಬೆಂಗಳೂರು13 mins ago

Attempt To Murder : ಹಣದಾಸೆಗೆ ವೃದ್ಧ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Alia Bhatt hosts Hope Gala
ಬಾಲಿವುಡ್16 mins ago

Alia Bhatt: ಲಂಡನ್‌ನಲ್ಲಿ `ಹೋಪ್ ಗಾಲಾ’ ಹೋಸ್ಟ್‌ ಮಾಡಿದ ಆಲಿಯಾ; ಏನಿದರ ಉದ್ದೇಶ?

RCB
ಕ್ರೀಡೆ20 mins ago

RCB vs KKR: ಕೆಕೆಆರ್​ ಸವಾಲು ಸುಲಭದ್ದಲ್ಲ; ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ದಾಖಲೆ ಹೇಗಿದೆ?

Thalaivar 171 Rajinikanth first look
ಕಾಲಿವುಡ್21 mins ago

Thalaivar 171: ರಜನಿಕಾಂತ್‌ 171ನೇ ಸಿನಿಮಾ ಪೋಸ್ಟರ್‌ ಔಟ್‌; ʻರೋಲೆಕ್ಸ್‌ʼ ಸೂರ್ಯ ಎಂಟ್ರಿ ಆಗ್ತಾರಾ?

Narendra Modi And Bill Gates
ದೇಶ31 mins ago

Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

Lok Sabha Election 2024 JDS finalised candidates for 3 constituency
ಪ್ರಮುಖ ಸುದ್ದಿ32 mins ago

HD Deve Gowda: ನಾಲ್ಕು ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ದೇವೇಗೌಡರು; ಮಾಸ್ಟರ್‌ ಪ್ಲಾನ್‌ ಏನು?

Sania Mirza
ಕ್ರೀಡೆ1 hour ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ1 hour ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು1 hour ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202422 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202424 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌