Salaar Box Office: ʻಸಲಾರ್‌ʼ ಹೊಸ ದಾಖಲೆ; 500 ಕೋಟಿ ರೂ. ಕಲೆಕ್ಷನ್‌ನತ್ತ ಸಿನಿಮಾ! - Vistara News

South Cinema

Salaar Box Office: ʻಸಲಾರ್‌ʼ ಹೊಸ ದಾಖಲೆ; 500 ಕೋಟಿ ರೂ. ಕಲೆಕ್ಷನ್‌ನತ್ತ ಸಿನಿಮಾ!

Salaar Box Office: ಡಿಸೆಂಬರ್ 22ರಂದು ವಿಶ್ವಾದ್ಯಂತ ಸಲಾರ್‌ ಸಿನಿಮಾ ತೆರೆಗೆ ಅಪ್ಪಳಿಸಿತು. ಶಾರುಖ್‌ ಅವರ ಡಂಕಿ ಸಿನಿಮಾ ಜತೆ ಕ್ಲ್ಯಾಶ್‌ ಆಗಿತ್ತು. ಡಿಸೆಂಬರ್ 25ರಂದು ‘ಸಲಾರ್’ ಭಾರತದಲ್ಲಿ 42.50 ಕೋಟಿ ರೂ. ನಿವ್ವಳ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.

VISTARANEWS.COM


on

Salaar box office Day four 250 crore in India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಸಲಾರ್‌ʼ ಸಿನಿಮಾ (Salaar Box Office) ಬಿಡುಗಡೆಯಾದಾಗಿನಿಂದ ಕಲೆಕ್ಷನ್‌ನಲ್ಲಿ ಭಾರಿ ಮುನ್ನುಗ್ಗುತ್ತಲೇ ಇದೆ. ಮೂರು ದಿನಗಳಲ್ಲಿ, ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ 400 ಕೋಟಿ ರೂ. ಗಳಿಸಿದೆ. ಈಗ ಜಾಗತಿಕವಾಗಿ 500 ಕೋಟಿ ರೂಪಾಯಿಗಳತ್ತ ಸಾಗುತ್ತಿದೆ. ಈ ಚಿತ್ರ ಕೇವಲ ನಾಲ್ಕು ದಿನಗಳಲ್ಲಿ ಭಾರತದಲ್ಲಿ 250 ಕೋಟಿ ರೂ. ಗಡಿ ದಾಟುವ ಮೂಲಕ ಮತ್ತೊಂದು ದಾಖಲೆಯನ್ನು ಮುರಿದಿದೆ.

ಡಿಸೆಂಬರ್ 22ರಂದು ವಿಶ್ವಾದ್ಯಂತ ಸಲಾರ್‌ ಸಿನಿಮಾ ತೆರೆಗೆ ಅಪ್ಪಳಿಸಿತು. ಶಾರುಖ್‌ ಅವರ ಡಂಕಿ ಸಿನಿಮಾ ಜತೆ ಕ್ಲ್ಯಾಶ್‌ ಆಗಿತ್ತು. ಡಿಸೆಂಬರ್ 25ರಂದು ‘ಸಲಾರ್’ ಭಾರತದಲ್ಲಿ 42.50 ಕೋಟಿ ರೂ. ನಿವ್ವಳ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಇದು ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ನಾಲ್ಕು ದಿನಗಳ ಒಟ್ಟು ಕಲೆಕ್ಷನ್ 251.60 ಕೋಟಿ ರೂ. ಆಗಿದೆ. ಈ ಚಲನಚಿತ್ರ ಕ್ರಿಸ್‌ಮಸ್‌ನಲ್ಲಿ ಭಾರತದಲ್ಲಿ ಶೇಕಡಾ 63.41ರಷ್ಟು ಆಕ್ಯುಪೆನ್ಸಿಯನ್ನು ದಾಖಲಿಸಿದೆ.

ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ ಗಳಿಕೆ ಮಾಡಿದ್ದು 90 ಕೋಟಿ ರೂಪಾಯಿ. ಎರಡನೇ ದಿನ (ಡಿಸೆಂಬರ್ 23) ಈ ಸಿನಿಮಾ ಬಾಚಿಕೊಂಡಿದ್ದು 56 ಕೋಟಿ ರೂಪಾಯಿ. ಮೂರನೇ ದಿನ ಸಿನಿಮಾ ಬಾಚಿಕೊಂಡಿದ್ದು 62 ಕೋಟಿ ರೂಪಾಯಿ. ಕೇವಲ ನಾಲ್ಕು ದಿನಗಳಲ್ಲಿ ಭಾರತದಲ್ಲಿ 250 ಕೋಟಿ ರೂ. ಗಡಿ ದಾಟುವ ಮೂಲಕ ಮತ್ತೊಂದು ದಾಖಲೆಯನ್ನು ಮುರಿದಿದೆ.

ಇದನ್ನೂ ಓದಿ: Salaar Box Office: ಮೂರೇ ದಿನಕ್ಕೆ 400 ಕೋಟಿ ರೂ. ಬಾಚಿದ ʻಸಲಾರ್‌ʼ!

ಸಲಾರ್‌ ಎರಡನೇ ಭಾಗ ಬರಲಿದೆಯಾ ಎನ್ನುವ ಚರ್ಚೆಗಳು ಜೋರಾಗಿವೆ. ಸಿನಿಮಾ ಒಟಿಟಿ ಸ್ಟ್ರೀಮಿಂಗ್ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಸಾಧ್ಯವಾದಷ್ಟು ಬೇಗ ಸೀಕ್ವೆಲ್ ತೆರೆಗೆ ತರಲು ಚಿತ್ರತಂಡ ಮನಸ್ಸು ಮಾಡಿದೆ ಎನ್ನಲಾಗುತ್ತಿದೆ.ಸಲಾರ್’ ಒಟಿಟಿ ಸ್ಟ್ರೀಮಿಂಗ್ ಬಗ್ಗೆ ಹೇಳುವುದಾದರೆ ಸಿನಿಮಾ ನೆಟ್‌ಫ್ಲಿಕ್ಸ್‌ಗೆ ಬರಲಿದೆ ಎನ್ನಲಾಗಿದೆ. ಹೊಂಬಾಳೆ ಸಂಸ್ಥೆ ತನ್ನ ಎಲ್ಲಾ ಸಿನಿಮಾಗಳನ್ನು ಅಮೇಜಾನ್ ಪ್ರೈಂ ಕೊಡುತ್ತಾ ಬರುತ್ತಿತ್ತು. ಫೆಬ್ರವರಿಯಲ್ಲಿ ಸಿನಿಮಾ ಒಟಿಟಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ʼಡಂಕಿʼ ಮತ್ತು ʼಸಲಾರ್‌ʼ ಈ ವರ್ಷ ಬಹು ನಿರೀಕ್ಷೆ ಹುಟ್ಟು ಹಾಕಿರುವ ಚಿತ್ರಗಳು. ಟ್ರೈಲರ್‌, ಹಾಡುಗಳಿಂದಲೇ ಈ ಎರಡೂ ಚಿತ್ರಗಳು ನಿರೀಕ್ಷೆ ಮೂಡಿಸಿವೆ.

ʼಕೆಜಿಎಫ್‌ʼ ಸರಣಿ ಚಿತ್ರಗಳ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿರುವ ಪ್ರಶಾಂತ್‌ ನೀಲ್‌ ʼಸಲಾರ್‌ʼ ಚಿತ್ರವನ್ನು ನಿರ್ದೇಶಿಸಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತ್ತು. ಸತತ ಸೋಲುಗಳಿಂದ ಕಂಗೆಟ್ಟಿರುವ ಪ್ರಭಾಸ್‌ ವೃತ್ತಿ ಜೀವನಕ್ಕೆ ಇದು ತಿರುವು ನೀಡಿದ ಸಿನಿಮಾವಾಗಿ ಹೊರಹೊಮ್ಮಿದೆ. . ಪೃಥ್ವಿರಾಜ್‌, ಶ್ರುತಿ ಹಾಸನ್‌ ಮತ್ತತರರು ಮುಖ್ಯ ಪಾತ್ರದಲ್ಲಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Kannada New Movie: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

VISTARANEWS.COM


on

Kannada New Movie The judgement Trailer Out Kannada
Koo

ಬೆಂಗಳೂರು: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ʻ ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆʼʼ ಎಂದರು.

ಇದನ್ನೂ ಓದಿ: Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

ʻʻನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮʼʼ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Dhruva Sarja: ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ.

VISTARANEWS.COM


on

dhruva sarja support C Cinema Kanda Kanda Video Song Release
Koo

ಬೆಂಗಳೂರು: `ಸಿ’..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದ್ದೇವೆ ಅಂತನೂ (Dhruva Sarja) ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನವನದಲ್ಲಿ ʻಶ್ʼ..ʻಸೈʼ..ʻಎʼ..ʻಓಂʼ…ಹೀಗೆ ಒಂದೇ ಅಕ್ಷರದ ಹೆಸರಿನ ಹಲವು ಸಿನಿಮಾಗಳು ಬಂದು ಹೋದವು. ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ..

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ʻಕಂದಾ…ಕಂದಾʼ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.

ಇದನ್ನೂ ಓದಿ: Dhruva Sarja: ವಿಮಾನ ದುರಂತ: ಕೂದಲೆಳೆ ಅಂತರದಿಂದ ಪಾರಾದ ಧ್ರುವ ಸರ್ಜಾ!

ಈ ಬಗ್ಗೆ ನಟ ಧ್ರುವ ಸರ್ಜಾ ಮಾತನಾಡಿ ʻʻಸಿ ಎಂದರೆ ಕ್ರೈಂ. ಹೊಸ ತಂಡ ಸೇರಿ ಒಳ್ಳೆಯ ಸಿನಿಮಾ ಮಾಡಿದೆ. ಹೊಸಬರಿಗೆ ಸಪೋರ್ಟ್‌ ಮಾಡಿ. ಚಿತ್ರತಂಡಕ್ಕೆ ಶುಭವಾಗಲಿʼʼಎಂದರು.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ʻಸಿʼ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

Continue Reading

ಟಾಲಿವುಡ್

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Pushpa 2: ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

VISTARANEWS.COM


on

Pushpa 2 Allu Arjun anasuya bharadwaj poster look out
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳು ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಒಂದಾದ ಅನಸೂಯಾ ಭಾರದ್ವಾಜ್ ಅವರ ಜನ್ಮದಿನದಂದು ತಂಡ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಅನಸೂಯಾ ಅವರ ಹುಟ್ಟುಹಬ್ಬದ ಗೌರವಾರ್ಥವಾಗಿ, ಚಿತ್ರ ನಿರ್ಮಾಪಕರು ಅವರ ಫಸ್ಟ್‌ ಲುಕ್‌ ಅನಾವರಣಗೊಳಿಸಿದ್ದಾರೆ.

ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

ಹೀರೋ ಅಲ್ಲು ಅರ್ಜುನ್‌ಗೆ (Allu Arjun) ಅನಸೂಯಾ ಖಡಕ್ ವಿಲನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: Allu Arjun: ʻಪುಷ್ಪ 2ʼ ಸಿನಿಮಾಗೆ ಹೆದರಿತಾ ʻಸಿಂಗಂʼ? ಅಜಯ್ ದೇವಗನ್ ಸಿನಿಮಾ ಮುಂದೂಡಿಕೆ!

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

Kannada New Movie: `ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿತ್ತು. ಇದೊಂದು ಕ್ರೈಂ ಥ್ರಿಲ್ಲರ್ ಹಾಗೂ ಆಕ್ಷನ್ ಜಾನರ್ ಚಿತ್ರ. ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳನ್ನೇ ಆಧರಿಸಿದ ಕಥೆ ಇತ್ತು. ಬೆಂಗಳೂರು, ಮೈಸೂರು ಸಕಲೇಶಪುರ, ಮಂಗಳೂರು, ಸುತ್ತಮುತ್ತ 95 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ.

VISTARANEWS.COM


on

Kannada New Movie tanush shivannas mr natwarlal In OTT
Koo

ಬೆಂಗಳೂರು: ತನುಷ್ ಸಿನಿಮಾಸ್ ಲಾಂಛನದಲ್ಲಿ (Kannada New Movie) ತನುಷ್ ಶಿವಣ್ಣ ನಿರ್ಮಿಸಿರುವ, ತನುಷ್ ಶಿವಣ್ಣ, ಸೋನಾಲ್ ಮೊಂಥೆರೋ ಜೋಡಿಯ “Mr ನಟ್ವರ್ ಲಾಲ್” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ʻಅಯೋಧ್ಯಾಪುರʼ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ‘ನಟ್ವರ್ ಲಾಲ್’ ಚಿತ್ರ ಅಮೆಜಾನ್ ಪ್ರೈಮ್‌ನಲ್ಲಿ ಲಭ್ಯವಿದೆ.

`ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿತ್ತು. ಇದೊಂದು ಕ್ರೈಂ ಥ್ರಿಲ್ಲರ್ ಹಾಗೂ ಆಕ್ಷನ್ ಜಾನರ್ ಚಿತ್ರ. ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳನ್ನೇ ಆಧರಿಸಿದ ಕಥೆ ಇತ್ತು. ಬೆಂಗಳೂರು, ಮೈಸೂರು ಸಕಲೇಶಪುರ, ಮಂಗಳೂರು, ಸುತ್ತಮುತ್ತ 95 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು.

‘ನಟ್ವರ್‌ಲಾಲ್ (1912-2009) ಎಂದೂ ಕರೆಯಲ್ಪಡುವ ಕುಖ್ಯಾತ ಮಿಥಿಲೇಶ್ ಕುಮಾರ್ ಶ್ರೀವಾಸ್ತವ್ ಅವರ ಸುತ್ತ ಸುತ್ತುತ್ತದೆ. ತಾಜ್ ಮಹಲ್, ಕೆಂಪು ಕೋಟೆ, ರಾಷ್ಟ್ರಪತಿ ಭವನ ಮತ್ತು ಭಾರತದ ಸಂಸತ್ ಭವನದಂತಹ ಐತಿಹಾಸಿಕ ಕಟ್ಟಡಗಳ ಮಾರಾಟವನ್ನು ಒಳಗೊಂಡಂತೆ, ನಟ್ವರ್‌ಲಾಲ್ ಇತರೆ ಹಗರಣಗಳಿಗೆ ಹೆಸರಾದ ಭಾರತೀಯ ವಂಚಕ. ಆತನ ಜೀವನದ ಅಂಶಗಳನ್ನು ನಿರೂಪಣೆಯಲ್ಲಿ ಹೆಣೆದಿದ್ದೇವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ನಾಗಭೂಷಣ್, ರಾಜೇಶ್ ನಟರಂಗ, ಕಾಕ್ರೋಚ್ ಸುದೀ, ಯಶ್ ಶೆಟ್ಟಿ, ರಾಜೇಂದ್ರ ಕಾರಂತ್, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಸೇರಿದಂತೆ ಹಲವು ಮಂದಿ ನಟಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸಿನಿಮಾದ ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಅನ್ನೋ ರೊಮ್ಯಾಂಟಿಕ್ ಸಾಂಗ್ ಪ್ರೇಕ್ಷಕರಿಗೆ ಕಿಕ್ ಕೊಟ್ಟಿತ್ತು. ವಿಶೇಷ ಅಂದರೆ, ಈ ಹಾಡನ್ನು ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ಸಾಂಗ್ ‘ವರಾಹ ರೂಪಂ’ ಹಾಡಿರುವ ಸಾಯಿ ವಿಘ್ನೇಶ್ ಹಾಡಿದ್ದರು. ಈ ರೊಮ್ಯಾಂಟಿಕ್ ಹಾಡಿಗೆ ನಿರ್ದೇಶಕ ‘ಭರ್ಜರಿ’ ಚೇತನ್ ಸಾಹಿತ್ಯ ರಚಿಸಿದ್ದು, ಧರ್ಮ ವಿಷ್ ಸಂಗೀತ ನೀಡಿದ್ದರು.

Continue Reading
Advertisement
Prajwal Revanna Case Lawyer Devarajegowda sent to judicial custody End of police custody
ಕ್ರೈಂ7 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ20 mins ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್22 mins ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ24 mins ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್40 mins ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು41 mins ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ42 mins ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್57 mins ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ1 hour ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ1 hour ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌