Salaar Box Office: ಮೊದಲ ದಿನವೇ 178 ಕೋಟಿ ರೂ. ಗಳಿಸಿ ದಾಖಲೆ ಬರೆದ ಸಲಾರ್​! - Vistara News

ಬಾಲಿವುಡ್

Salaar Box Office: ಮೊದಲ ದಿನವೇ 178 ಕೋಟಿ ರೂ. ಗಳಿಸಿ ದಾಖಲೆ ಬರೆದ ಸಲಾರ್​!

Salaar Box Office: ವರದಿಯ ಪ್ರಕಾರ ಸಿನಿಮಾ ಆರಂಭಿಕ ಅಂದಾಜಿನ ಪ್ರಕಾರ ಭಾರತದಲ್ಲಿ 95 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.ವಿಶ್ವ ಮಟ್ಟದಲ್ಲಿ ಈ ಸಿನಿಮಾದ ಗಳಿಕೆ 175 ಕೋಟಿ ರೂಪಾಯಿ ಆಗಿದೆ.

VISTARANEWS.COM


on

Salaar Box Office Prabhas
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಭಾಸ್ ಅಭಿನಯದ `ಸಲಾರ್’ ಸಿನಿಮಾ (Salaar Box Office) ಈ ವರ್ಷದ ದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎನಿಸಿಕೊಳ್ಳುವ ಹಾದಿಯಲ್ಲಿ ಸಾಗುತ್ತಿದೆ. ಮೊದಲ ದಿನ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಐತಿಹಾಸಿಕ ದಾಖಲೆ ಬರೆದಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ನ ನೀಡಿರುವ ಮಾಹಿತಿ ಪ್ರಕಾರ ಮೊದಲ ದಿನ 178.7 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಗಮನಾರ್ಹ ದಾಖಲೆಯನ್ನು ನಿರ್ಮಿಸಿದೆ. ಮಾಸ್ಟರ್ ಪೀಸ್, ರಾಜಕುಮಾರ, ಯುವರತ್ನ, ಕೆಜಿಎಫ್. ಕಾಂತಾರಾ, ರಾಘವೇಂದ್ರ ಸ್ಟೋರ್ಸ್ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ಕರ್ನಾಟಕದ ಸಂಸ್ಥೆ ಹೊಂಬಾಳೆ ಈ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ.

ಸಲಾರ್ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 70 ಕೋಟಿ ರೂ.ಗಳನ್ನು ಕಲೆಕ್ಷನ್ ಮಾಡಿದೆ. ತೆಲುಗು ಪ್ರದೇಶಗಳಲ್ಲಿ ಚಿತ್ರವು ಒಟ್ಟಾರೆ ಶೇಕಡಾ 88.93 ಆಕ್ಯುಪೆನ್ಸಿಯನ್ನು ಹೊಂದಿತ್ತು. ಕರ್ನಾಟಕ ಮತ್ತು ಕೇರಳದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಕ್ರಮವಾಗಿ 12 ಕೋಟಿ ರೂ. ಮತ್ತು ರೂ 5 ಕೋಟಿ ರೂ.ಗಳಿಸಿದೆ. ಇದರೊಂದಿಗೆ, ಶಾರುಖ್ ಖಾನ್ ಅಭಿನಯದ ಪಠಾಣ್, ಜವಾನ್ ಮತ್ತು ರಣಬೀರ್ ಕಪೂರ್ ಅವರ ಅನಿಮಲ್ ಸಿನಿಮಾವನ್ನು ಸೋಲಿಸಿ 2023ರ ಅತಿದೊಡ್ಡ ಓಪನರ್ ಎಂದು ಪ್ರಭಾಸ್‌ ಅನಿಸಿಕೊಂಡಿದ್ದಾರೆ. ಪಠಾಣ್‌ ಭಾರತದಲ್ಲಿ ತನ್ನ ಮೊದಲ ದಿನವೇ 57 ಕೋಟಿ ರೂ ಗಳಿಸಿದ್ದರೆ, ಜವಾನ್ 75 ಕೋಟಿ ರೂ. ಮತ್ತು ಅನಿಮಲ್ 63 ಕೋಟಿ ರೂ. ಗಳಿಕೆ ಕಂಡಿತ್ತು.

ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಭರ್ಜರಿ ಲಾಭ ಆಗಿದೆ.‘ಸಲಾರ್’ ಚಿತ್ರವನ್ನು ಕೆಲವರು ‘ಉಗ್ರಂ’ ಕಥೆ ಹಾಗೂ ‘ಕೆಜಿಎಫ್ 2’ ಮೇಕಿಂಗ್​ಗೆ ಹೋಲಿಕೆ ಮಾಡಿದರು. ವಿಶ್ವ ಮಟ್ಟದಲ್ಲಿ ಈ ಸಿನಿಮಾದ ಗಳಿಕೆ 175 ಕೋಟಿ ರೂಪಾಯಿ ಆಗಿದೆ. ಈ ಚಿತ್ರದಿಂದ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ದೊಡ್ಡ ಗೆಲುವು ಕಂಡಿದ್ದಾರೆ. ಕ್ರಿಸ್​ಮಸ್ ರಜೆ ಇರುವುದರಿಂದ ಸಿನಿಮಾ ಮತ್ತಷ್ಟು ಗಳಿಕೆ ಮಾಡಲಿದೆ.

ಇದನ್ನೂ ಓದಿ: Salaar Movie: ಸಲಾರ್‌ ಒಟಿಟಿ ಸ್ಟ್ರೀಮಿಂಗ್‌ ಎಲ್ಲಿ?

ಸಲಾರ್‌ ಎರಡನೇ ಭಾಗ ಬರಲಿದೆಯಾ ಎನ್ನುವ ಚರ್ಚೆಗಳು ಜೋರಾಗಿವೆ. ಸಿನಿಮಾ ಒಟಿಟಿ ಸ್ಟ್ರೀಮಿಂಗ್ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಸಾಧ್ಯವಾದಷ್ಟು ಬೇಗ ಸೀಕ್ವೆಲ್ ತೆರೆಗೆ ತರಲು ಚಿತ್ರತಂಡ ಮನಸ್ಸು ಮಾಡಿದೆ ಎನ್ನಲಾಗುತ್ತಿದೆ.ಸಲಾರ್’ ಒಟಿಟಿ ಸ್ಟ್ರೀಮಿಂಗ್ ಬಗ್ಗೆ ಹೇಳುವುದಾದರೆ ಸಿನಿಮಾ ನೆಟ್‌ಫ್ಲಿಕ್ಸ್‌ಗೆ ಬರಲಿದೆ ಎನ್ನಲಾಗಿದೆ. ಹೊಂಬಾಳೆ ಸಂಸ್ಥೆ ತನ್ನ ಎಲ್ಲಾ ಸಿನಿಮಾಗಳನ್ನು ಅಮೇಜಾನ್ ಪ್ರೈಂ ಕೊಡುತ್ತಾ ಬರುತ್ತಿತ್ತು. ಫೆಬ್ರವರಿಯಲ್ಲಿ ಸಿನಿಮಾ ಒಟಿಟಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ʼಡಂಕಿʼ ಮತ್ತು ʼಸಲಾರ್‌ʼ ಈ ವರ್ಷ ಬಹು ನಿರೀಕ್ಷೆ ಹುಟ್ಟು ಹಾಕಿರುವ ಚಿತ್ರಗಳು. ಟ್ರೈಲರ್‌, ಹಾಡುಗಳಿಂದಲೇ ಈ ಎರಡೂ ಚಿತ್ರಗಳು ನಿರೀಕ್ಷೆ ಮೂಡಿಸಿವೆ.

ʼಕೆಜಿಎಫ್‌ʼ ಸರಣಿ ಚಿತ್ರಗಳ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿರುವ ಪ್ರಶಾಂತ್‌ ನೀಲ್‌ ʼಸಲಾರ್‌ʼ ಚಿತ್ರವನ್ನು ನಿರ್ದೇಶಿಸಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತ್ತು. ಸತತ ಸೋಲುಗಳಿಂದ ಕಂಗೆಟ್ಟಿರುವ ಪ್ರಭಾಸ್‌ ವೃತ್ತಿ ಜೀವನಕ್ಕೆ ಇದು ತಿರುವು ನೀಡಿದ ಸಿನಿಮಾವಾಗಿ ಹೊರಹೊಮ್ಮಿದೆ. . ಪೃಥ್ವಿರಾಜ್‌, ಶ್ರುತಿ ಹಾಸನ್‌ ಮತ್ತತರರು ಮುಖ್ಯ ಪಾತ್ರದಲ್ಲಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading

ಬಾಲಿವುಡ್

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

Cannes 2024: 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

VISTARANEWS.COM


on

Cannes 2024 Indian influencer who stitched a 20 kg dress
Koo

ಬೆಂಗಳೂರು: ಫ್ಯಾಶನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ( Nancy Tyagi) ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿದ್ದಾರೆ. 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ.

“77ನೇ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದು ಖುಷಿಯಾಯ್ತು. 30 ದಿನಗಳು, 1000 ಮೀಟರ್ ಬಟ್ಟೆ ಮತ್ತು 20 ಕೆಜಿಗಿಂತ ಹೆಚ್ಚು ತೂಕವಿರುವ ಈ ಗುಲಾಬಿ ಗೌನ್ ಅನ್ನು ರಚಿಸಲು ನಾನು ನನ್ನ ಹೃದಯ ಮತ್ತು ಆತ್ಮವನ್ನೇ ಅರ್ಪಿಸಿದ್ದೇನೆ. ನನ್ನ ಕನಸು ಈಗ ನನಸಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದ. ನಿಮ್ಮ ಬೆಂಬಲವು ನನಗೆ ಸ್ಫೂರ್ತಿ ನೀಡಿದೆʼʼಎಂದು ಹೇಳಿಕೊಂಡಿದ್ದಾರೆ ನ್ಯಾನ್ಸಿ ತ್ಯಾಗಿ.

ಇದನ್ನೂ ಓದಿ: Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

ನ್ಯಾನ್ಸಿ ತ್ಯಾಗಿ ಶೇರ್‌ ಮಾಡಿಕೊಂಡ ಬಳಿಕ ಕೇವಲ ಒಂದು ಗಂಟೆಯಲ್ಲಿ 1.8 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ನ್ಯಾನ್ಸಿ ಫ್ಯಾನ್ಸ್‌ ಈಗ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ,ಮಾತ್ರವಲ್ಲ ಕಮೆಂಟ್‌ ಮೂಲಕ ʻʻನ್ಯಾನ್ಸಿ, ಇದು ವೈಯಕ್ತಿಕ ಗೆಲುವಿನಂತೆ ಭಾಸವಾಗುತ್ತಿದೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಕಠಿಣ ಪರಿಶ್ರಮ ಮತ್ತು ಪ್ರತಿಭೆ ಇದೆ ನಿಮ್ಮಲ್ಲಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಮತ್ತೊಬ್ಬರು ʻʻನನಗೆ ನ್ಯಾನ್ಸಿ ತ್ಯಾಗಿ ಬಗ್ಗೆ ವೈಯಕ್ತಿಕವಾಗಿ ತಿಳಿದಿಲ್ಲ, ಆದರೆ ನಾನು ಅವರನ್ನು ರೆಡ್‌ ಕಾರ್ಪೆಟ್ ಮೇಲೆ ನೋಡಿ ಸಂತೋಷವಾಯ್ತು. ದೇವರು ನಿಮ್ಮನ್ನು ಆಶೀರ್ವದಿಸಲಿ. ನಾನು ನಿಮಗೆ ಇನ್ನೊಂದು ವಿಷಯವನ್ನು ಹೇಳುತ್ತೇನೆ. ನೀವು ಬಾಲಿವುಡ್ ಸೆಲೆಬ್ರಿಟಿಗಳಿಗಿಂತ ಉತ್ತಮವಾಗಿ ಕಾಣುತ್ತೀರಿʼʼಎಂದು ಕಮೆಂಟ್‌ ಮಾಡಿದ್ದಾರೆ.

ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

Continue Reading

ಬಾಲಿವುಡ್

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Aishwarya Rai : ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Aishwarya Rai stopping blue gown at Cannes 2024
Koo

ಬೆಂಗಳೂರು: ಐಶ್ವರ್ಯಾ ರೈ (Aishwarya Rai ) ಬಚ್ಚನ್ ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವವಾದ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ (Cannes 2024) ಎರಡನೇ ಬಾರಿ ಮಿಂಚಿದ್ದಾರೆ. ಸ್ಕ್ರೀನಿಂಗ್‌ ಆಫ್‌ ಕೈಂಡ್ಸ್ ಆಫ್ ಕೈಂಡನೆಸ್‌ ಪ್ರದರ್ಶನಕ್ಕೆ ಹಾಜರಾಗುವ ಮೊದಲು ನಟಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದರು. ಐಶ್ವರ್ಯಾ ರೈ ಅವರು ಎರಡನೇ ಬಾರಿ ಬೆಳ್ಳಿ ಮತ್ತು ನೀಲಿ ಮಿಶ್ರಿತ ಗೌನ್ ಧರಿಸಿದ್ದರು. ಫಲ್ಗುಣಿ ಮತ್ತು ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಸ್ಕರ್ಟ್ ಇದಾಗಿತ್ತು. ‌ ಆದರೆ ಈ ಸ್ಕರ್ಟ್‌ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ.

ಫಲ್ಗುಣಿ ಮತ್ತು ಶೇನ್ ಪೀಕಾಕ್ ಅವರು ಫ್ರಾನ್ಸಿಸ್ ಫೋರ್ಡ್ ಕೊಪ್ಪೊಲಾ ಅವರ “ಮೆಗಾಲೋಪೊಲಿಸ್” ನ ಪ್ರಥಮ ಪ್ರದರ್ಶನಕ್ಕಾಗಿ ಉಡುಪನ್ನು ವಿನ್ಯಾಸಗೊಳಿಸಿದರು. ಆದರೆ ಈ ಗೌನ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಬ್ಬರು ʻʻಈ ಗೌನ್‌ನಲ್ಲಿ ತುಂಬ ಚೆಂದ ಕಾಣುತ್ತೀರಿ. ಆದರೆ ಇದು ಕಾನ್‌ ಉತ್ಸವಕ್ಕೆ ಸರಿ ಹೊಂದುವಂತಿಲ್ಲʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಬರ್ತ್‌ಡೇ ಪಾರ್ಟಿ ಇಂದ ಪ್ರಭಾವಿತರಾದರೇ? ನಿಮ್ಮ ಸ್ಟೈಲಿಶ್‌ರನ್ನು ಮೊದಲು ಕೆಲಸದಿಂದ ಕಿತ್ತು ಹಾಕಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Aishwarya Rai : ಐಶ್ವರ್ಯಾ ರೈಯಂತ ಕಣ್ಣು ಬೇಕೇ? ಮೀನು ತಿನ್ನಿ; ಮಹಾರಾಷ್ಟ್ರದ ಸಚಿವನ ವಿವಾದಾತ್ಮಕ ಹೇಳಿಕೆ

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಇದನ್ನೂ ಓದಿ: Aishwarya Rai: ಅತ್ತೆ, ನಾದಿನಿ ಕ್ರಾಪ್‌ ಮಾಡಿ ಫೋಟೊ ಹಂಚಿಕೊಂಡ ಐಶ್ವರ್ಯಾ ರೈ; ಕುಟುಂಬದಲ್ಲಿ ಬಿರುಕು?

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ಬಾಲಿವುಡ್

Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

Cannes 2024: ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ.

VISTARANEWS.COM


on

Kiara Advani Makes Cannes Debut In Thigh-High Slit Dress
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಬೆನ್ನಲ್ಲೇ ರೆಡ್ ಕಾರ್ಪೆಟ್ ಮೇಲೆ ನಟಿ ಕಿಯಾರಾ ಆಡ್ವಾಣಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ಕಿಯಾರಾ ಆಡ್ವಾಣಿ ಇದೀಗ ತಮ್ಮ ಲುಕ್‌ನ ವಿಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊವನ್ನು ಹಂಚಿಕೊಂಡ ಕಿಯಾರಾ, “ರಿವೇರಿಯಾದಲ್ಲಿ ರೆಂಡೆಜ್ವಸ್ (ನೀಲಿ ಹೃದಯದ ಎಮೋಜಿ)” ಎಂದು ಶೀರ್ಷಿಕೆ ನೀಡಿದ್ದಾರೆ. ಕಿಯಾರ ಉಡುಪನ್ನು ಲಕ್ಷ್ಮಿ ಲೆಹರ್ ಮತ್ತು ಪ್ರಬಲ್ ಗುರುಂಗ್ ಅವರು ವಿನ್ಯಾಸಗೊಳಿಸಿದ್ದಾರೆ. ಅಭಿಮಾನಿಯೊಬ್ಬರು ಕಿಯಾರ ಪೋಸ್ಟ್‌ಗೆ “ಅತ್ಯಂತ ಸುಂದರ ಮಹಿಳೆ” ಎಂದು ಕಮೆಂಟ್‌ ಮಾಡಿದ್ದಾರೆ. ಕಿಯಾರ ಮಿಲ್ಕಿ ವೈಟ್​ ಬಣ್ಣದ ಗೌನ್ ಬಟ್ಟೆ ಧರಿಸಿದ್ದರು. ಗೌನ್‌ ಕಟ್‌ ರೀತಿ ಉಡುಪನ್ನು ಧರಿಸಿದ್ದರು. ಮ್ಯಾಚಿಂಕ್‌ ಕಿವಿಯೋಲೆಯೊಂದಿಗೆ ಅತ್ಯಂತ ಸುಂದರವಾಗಿ ಕಂಡರು ಕಿಯಾರ. ಕಾರ್‌ನಲ್ಲಿ ಅಪ್ಸರಂತೆ ಇಳಿದು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ಅವರೂ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದರು. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿತ್ತು.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಲಿಪಾಲಾ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. 

ಇದನ್ನೂ ಓದಿ: Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ!

ಎಸ್ ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ. ನಟ ಯಶ್ (Yash) ನಾಯಕನಟನಾಗಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದಲ್ಲಿ ಕಿಯಾರಾ (kiara) ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕರೀನಾ ಕಪೂರ್ (kareena kapoor) ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯ ಬಳಿಕ ಇದೀಗ ಕಿಯಾರಾ ಅಡ್ವಾಣಿಯೂ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ಚಿತ್ರದಲ್ಲಿ ಕಿಯಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮೂವರು ಪ್ರಮುಖರು ನಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರೀನಾ ಕಪೂರ್ ಖಾನ್ ಮತ್ತು ಕಿಯಾರಾ ಅಡ್ವಾಣಿ ಈಗಾಗಲೇ ಚಿತ್ರತಂಡಕ್ಕೆ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಯಶ್ ಅವರ ಸಹೋದರಿಯಾಗಿ ಕರೀನಾ ನಟಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಆದರೆ ನಿರ್ಮಾಪಕರಿಂದ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

Continue Reading
Advertisement
Swati Maliwal Case
ದೇಶ5 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20248 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ15 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ22 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ37 mins ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ52 mins ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ55 mins ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್1 hour ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್2 hours ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌