Salman Khan ಗೂ ಇದ್ದವು ಕಷ್ಟದ ದಿನಗಳು, ದುಡ್ಡಿಲ್ಲದಾಗ ಶರ್ಟ್ ಕೊಡಿಸಿದ್ದ ಸುನಿಲ್‌ ಶೆಟ್ಟಿ! - Vistara News

ಬಾಲಿವುಡ್

Salman Khan ಗೂ ಇದ್ದವು ಕಷ್ಟದ ದಿನಗಳು, ದುಡ್ಡಿಲ್ಲದಾಗ ಶರ್ಟ್ ಕೊಡಿಸಿದ್ದ ಸುನಿಲ್‌ ಶೆಟ್ಟಿ!

ಸಿನಿಮಾ ನಟರು, ಅದರಲ್ಲೂ ಸಲ್ಮಾನ್‌ ಖಾನ್‌ನಂಥವರು ಎಂದ ಕೂಡಲೇ ನಮಗೆ ಅವರು ಚಿನ್ನದ ಚಮಚ ಬಾಯಲ್ಲಿ ಇಟ್ಟುಕೊಂಡೇ ಬೆಳೆದವರು ಎಂಬ ಭಾವನೆ ಇರುತ್ತದೆ. ಅವರು ಕೂಡಾ ಕಷ್ಟ ಮತ್ತು ಅಪಮಾನದ ಕಾಲ ದಾಟಿಕೊಂಡೇ ಬಂದಿರುತ್ತಾರೆ. salman Khan ಹೇಳಿದ ಈ ಕಥೆಗಳು ನಿಜಕ್ಕೂ ನಮ್ಮ ಭಾವಕೋಶಗಳಿಗೆ ತಾಕುತ್ತವೆ.

VISTARANEWS.COM


on

salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇವತ್ತು ಸಲ್ಮಾನ್‌ ಖಾನ್‌ (salman Khan) ಎಂದರೆ ಕೋಟ್ಯಂತರ ಅಭಿಮಾನಿಗಳ ಪಾಲಿಗೆ ಪ್ರೀತಿಯ ದೊರೆ. ಕನಸಿನಲ್ಲೂ ಬರುವ ಲವರ್‌ ಬಾಯ್‌. ಪ್ರತಿ ಸಿನಿಮಾವನ್ನೂ ಹಿಟ್‌ ಮಾಡಿಸಬಲ್ಲ, ಒಂದೊಂದು ಸಿನಿಮಾಕ್ಕೂ ನೂರಾರು ಕೋಟಿ ರೂ. ಸಂಭಾವನೆ ಪಡೆಯುವ ಪವರ್‌ಫುಲ್‌ ಸ್ಟಾರ್‌. ಆದರೆ, ಇದೇ ಸಲ್ಮಾನ್‌ ಖಾನ್‌ ಮೊದಲ ಸಿನಿಮಾ ಮೈನೇ ಪ್ಯಾರ್‌ ಕಿಯಾ ಸೂಪರ್‌ ಹಿಟ್‌ ಆದ ಬಳಿಕವೂ ವೃತ್ತಿ ಬದುಕಿನಲ್ಲಿ ದೊಡ್ಡ ಸಂಕಷ್ಟಗಳನ್ನು ಎದುರಿಸಿದ್ದರು ಮಾತ್ರವಲ್ಲದೆ ಹಣವಿಲ್ಲದೆ ಒದ್ದಾಡಿದ್ದರು ಎಂದರೆ ನೀವು ನಂಬುತ್ತೀರಾ? ಆವತ್ತೊಂದು ದಿನ ಅಂಗಡಿಯಲ್ಲಿ ನಿಂತು ಶರ್ಟ್‌ ಒಂದನ್ನು ಆಸೆಗಣ್ಣುಗಳಿಂದ ನೋಡುತ್ತಾ, ಖರೀದಿಸಲು ಹಣವಿಲ್ಲದೆ ಬೇಜಾರಲ್ಲಿ ನಿಂತಿದ್ದಾಗ ಅವರ ಬಳಿ ಬಂದು ಏನೂ ಹೇಳದೆ ಅದೇ ಶರ್ಟ್‌ನ್ನು ಗಿಫ್ಟಾಗಿ ಕೊಟ್ಟಿದ್ದರು ಸುನಿಲ್‌ ಶೆಟ್ಟಿ. ಇಂಥಹುದೇ ಹಲವು ಎಂದೂ ಕೇಳದ ಕಥೆಗಳನ್ನು ಸಲ್ಮಾನ್‌ ಖಾನ್‌ ಹಂಚಿಕೊಂಡಿದ್ದು ಭಾನುವಾರ. ಅಬುಧಾಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (IIFA) ಪ್ರದಾನ ಸಮಾರಂಭದಲ್ಲಿ ಹಳೆ ನೆನಪಿಗೆ ಜಾರಿದ ಸಲ್ಮಾನ್‌ ವಸ್ತುಶಃ ಕಣ್ಣೀರಾದರು.

ಯಶಸ್ಸೆಲ್ಲ ಭಾಗ್ಯ ಶ್ರೀ ಪಾಲಾಯಿತು!
ಮೈನೆ ಪ್ಯಾರ್‌ ಕಿಯಾ ಸೂಪರ್‌ ಹಿಟ್‌ ಆಗಿದ್ದೇನೋ ನಿಜ. ಆದರೆ, ಅದರ ಯಶಸ್ಸೆಲ್ಲ ಸಿಕ್ಕಿದ್ದು ನಾಯಕಿಯಾಗಿದ್ದ ಭಾಗ್ಯಶ್ರೀಗೆ ಎಂದು ಹೇಳುತ್ತಾ ನಕ್ಕರು ಸಲ್ಮಾನ್‌ ಖಾನ್‌. ಸಿನಿಮಾದ ಯಶಸ್ಸಿನ ಬಳಿಕ ʻನಾನು ವೈವಾಹಿಕ ಬದುಕಿಗಾಗಿ ಚಿತ್ರರಂಗವನ್ನು ತೊರೆಯುತ್ತಿದ್ದೇನೆʼ ಎಂದು ಭಾಗ್ಯಶ್ರೀ ಘೋಷಿಸಿದ್ದರು. ಇದರಿಂದ ಎಲ್ಲರೂ ಭಾಗ್ಯ ಶ್ರೀ ಬಗ್ಗೆಯೇ ಮಾತನಾಡುವಂತಾಯಿತು. ನಾನು ಸೂಪರ್‌ ಹಿಟ್‌ ಚಿತ್ರ ನೀಡಿದರೂ ಕೆಲಸವಿಲ್ಲದೆ ಕುಳಿತುಕೊಳ್ಳಬೇಕಾಯಿತು ಎಂದು ನೆನಪಿಸಿಕೊಳ್ಳುತ್ತಾ ಹನಿಗಣ್ಣಾದರು ಸಲ್ಮಾನ್‌.

1989ರಲ್ಲಿ ʻತೆರೆಕಂಡ ಮೈನೆ ಪ್ಯಾರ್‌ ಕಿಯಾʼ, ನಾಯಕವಾಗಿ ಸಲ್ಮಾನ್‌ (salman Khan) ಅವರ ಮೊದಲ ಚಿತ್ರವಾಗಿದ್ದರೆ ಭಾಗ್ಯಶ್ರೀ ಅವರ ಚೊಚ್ಚಲ ಚಿತ್ರವಾಗಿತ್ತು. ಸೂರಜ್‌ ಬರ್ಜಾತ್ಯ ಅವರ ನಿರ್ದೇಶನದ ಈ ಚಿತ್ರ ಗಳಿಕೆಯಲ್ಲಿ ಹೊಸ ದಾಖಲೆಯನ್ನೂ ಬರೆದಿತ್ತು. ಆದರೆ ಚಿತ್ರ ತೆರೆಕಂಡ ಸ್ವಲ್ಪ ಸಮಯದ ನಂತರ, ತಾವು ಹಿಮಾಲಯ್‌ ದಸಾನಿ ಅವರನ್ನು ವಿವಾಹವಾಗುವುದಕ್ಕಾಗಿ ಚಿತ್ರರಂಗವನ್ನು ತೊರೆಯುತ್ತಿರುವುದಾಗಿ ಭಾಗ್ಯಶ್ರೀ ಅವರು ಘೋಷಿಸಿದ್ದರು.

ದೇವರಂಥ ವ್ಯಕ್ತಿ ಬಂದರು
ʻʻʻಸುಮಾರು ಆರು ತಿಂಗಳ ಕಾಲ ಕೈಯಲ್ಲಿ ಕೆಲಸವಿಲ್ಲದೆ ಕುಳಿತಿದ್ದೆ. ನನ್ನ ಪರಿಸ್ಥಿತಿಯನ್ನು ನೋಡಲಾಗದ ತಂದೆಯವರು ನಿರ್ಮಾಪಕ ಜಿ.ಪಿ. ಸಿಪ್ಪಿ ಅವರಿಗೆ 2000 ರೂ. ಕೊಟ್ಟು ಸಲ್ಮಾನ್‌ ಖಾನ್‌ಗಾಗಿ ಒಂದು ಸಿನಿಮಾ ಮಾಡುತ್ತಿದ್ದೇನೆ ಎಂದು ಘೋಷಣೆ ಮಾಡಿಬಿಡಿ ಎಂದಿದ್ದರಂತೆ. ಜಿ.ಪಿ. ಸಿಪ್ಪಿ ಹಾಗೆ ಮಾಡಿದರು ಕೂಡಾ. ಆದರೆ, ಸಿನಿಮಾವೇ ಬರಲಿಲ್ಲ. ಇಂಥ ಹೊತ್ತಿನಲ್ಲಿ ದೇವರಂಥ ವ್ಯಕ್ತಿಯೊಬ್ಬರು ನನ್ನ ಜೀವನದಲ್ಲಿ ಬಂದರು. ಅವರೇ ರಮೇಶ್ ತುರಾನಿ. ಅದೊಂದು ದಿನ ರಮೇಶ್‌ ತುರಾನಿ ಅವರು ಜಿ.ಪಿ. ಸಿಪ್ಪಿ ಅವರ ಬಳಿಗೆ ಹೋಗಿ ಐದು ಲಕ್ಷ ರೂ. ಕೊಟ್ಟು, ಸಂಗೀತ ನಿರ್ದೇಶನ ಮಾಡಿ ಕೊಡಿ ಎಂದರು. ಹಾಗೆ 1991ರಲ್ಲಿ ಹುಟ್ಟಿಕೊಂಡಿದ್ದೇ ಪತ್ಥರ್‌ ಕೆ ಪೂಲ್.‌ ತ್ಯಾಂಕ್ಯೂ ರಮೇಶ್‌ ತುರಾನಿʼʼ ಎಂದರು ಸಲ್ಮಾನ್‌ ಖಾನ್‌.

ಹಾಗೆಯೇ 2008ರಲ್ಲಿ ತಮ್ಮ ವೃತ್ತಿ ಜೀವನ ಕುಂಟುತ್ತಿದ್ದಾಗ, ʻವಾಂಟೆಡ್‌ʼ ಚಿತ್ರದ ಮೂಲದ ಜೀವ ತುಂಬಿದ್ದು ಬೋನಿ ಕಪೂರ್‌ ಎಂದು ಕಪೂರ್‌ ಅವರನ್ನು ಅಪ್ಪಿಕೊಂಡರು. ʻಬೋನಿ ಕಪೂರ್‌ ಅವರು ನನ್ನ ವೃತ್ತಿ ಜೀವನದುದ್ದಕ್ಕೂ ನನಗೆ ನೆರವಾಗಿದ್ದಾರೆʼ ಎಂದ ಖಾನ್‌, ʻ2005ರಲ್ಲೂ ʻನೋ ಎಂಟ್ರಿʼ ಮೂಲಕ ಅವಕಾಶದ ಬಾಗಿಲನ್ನು ತೆರೆದಿದ್ದರುʼ ಎಂದು ಹಳೆಯದ್ದನ್ನು ಮೆಲುಕು ಹಾಕಿದರು.

ಸುನಿಲ್‌ ಶೆಟ್ಟಿ ಶರ್ಟ್ ಕೊಡಿಸಿದ್ದು
ಸಲ್ಮಾನ್‌ ಖಾನ್‌ ಒಂದೊಂದು ಕಥೆ ಹೇಳುತ್ತಲೇ ಸ್ವಯಂ ಕಣ್ಣೀರಾದರು. ಅವರ ಜತೆಗೆ ಪ್ರೇಕ್ಷಕರೂ ಭಾವುಕರಾದರು. ಆದರೆ, ಎಲ್ಲರನ್ನೂ ಕಣ್ಣೀರು ಸುರಿಸುವಂತೆ ಮಾಡಿದ್ದು ಸಲ್ಮಾನ್‌ ಹೇಳಿದ ಸುನಿಲ್‌ ಶೆಟ್ಟಿ ಕಥೆ
ʻʻಆಗ ನನ್ನ ಬಳಿ ತುಂಬ ದುಡ್ಡಿರಲಿಲ್ಲ. ಒಂದು ಶರ್ಟ್‌ ಮತ್ತು ಜೀನ್ಸ್‌ ತೆಗೆದುಕೊಳ್ಳಲು ಮಾತ್ರ ಹಣವಿತ್ತು. ನಾನು ಒಂದು ಜನಪ್ರಿಯ ಅಂಗಡಿಗೆ ಹೋದೆ. ಆಗ ಒಂದು ಹೊಸ ಟ್ರೆಂಡ್‌ನ ಜೀನ್ಸ್‌ ಬಂದಿತ್ತು. ಅದುವೇ ಸ್ಟೋನ್‌ ವಾಷ್ಡ್‌ ಜೀನ್ಸ್‌. ನಾನು ತೆಗೆದುಕೊಂಡು ಹೋಗಿದ್ದ ಹಣ ಆ ಜೀನ್ಸ್‌ ಕೊಳ್ಳುವುದಕ್ಕೇ ಮುಗಿದು ಹೋಯಿತು. ಶರ್ಟ್‌ಗೆ ನನ್ನ ಬಳಿ ದುಡ್ಡಿರಲಿಲ್ಲ. ನಾನು ಶರ್ಟು ನೋಡುತ್ತಾ ನಿಂತಿದ್ದೆ. ಆಗ ಅದೇ ಶಾಪ್‌ಗೆ ಬಂದಿದ್ದ ಸುನಿಲ್‌ ಶೆಟ್ಟಿ ಅವರು ನನ್ನಲ್ಲಿ ಹಣವಿಲ್ಲದಿರುವುದನ್ನು ಗಮನಿಸಿ ತಾವೇ ನನಗೆ ಶರ್ಟು ಕೊಡಿಸಿದರು. ಆ ಕ್ಷಣವನ್ನು ಯಾವತ್ತೂ ಮರೆಯಲಾರೆ,ʼʼ ಎಂದು ಹೇಳಿದರು ಸಲ್ಮಾನ್‌.

ಇದೇ ಕಾರ್ಯಕ್ರಮದಲ್ಲಿ ಸುನಿಲ್‌ ಶೆಟ್ಟಿ ಅವರ ಪುತ್ರ ಆಹಾನ್‌ ಶೆಟ್ಟಿ ಇದ್ದರು. ಅವರು ಕೂಡಲೇ ವೇದಿಕೆಗೆ ಬಂದು ಸಲ್ಮಾನ್‌ ಖಾನ್‌ ಅವರನ್ನು ಬಿಗಿದಪ್ಪಿಕೊಂಡರು. ಕಥೆ ಇಷ್ಟಕ್ಕೇ ಮುಗಿದಿಲ್ಲ. ʻʻನಾನು ಅಲ್ಲೊಂದು ಚಂದದ ಪರ್ಸ್‌ ಇರುವುದನ್ನು ನೋಡಿದ್ದೆ. ನಾನು ಅದನ್ನೇ ನೋಡುತ್ತಿದ್ದುದನ್ನು ಸುನಿಲ್‌ ಶೆಟ್ಟಿ ಅವರು ಎಲ್ಲಿಂದಲೋ ಗಮನಿಸಿದ್ದರು ಅನಿಸುತ್ತದೆ. ಅವರು ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ತಮ್ಮ ಬಳಿ ಇದ್ದ ಹೆಚ್ಚುವರಿ ಪರ್ಸ್‌ನ್ನು ನನಗೆ ನೀಡಿದರುʼ ಎಂದು ಸಲ್ಮಾನ್‌ ನೆನಪಿಸಿಕೊಂಡರು.‌

ಇದನ್ನೂ ಓದಿ: Jawan Teaser: ಲಿಯಾಮ್ ನೀಸನ್ ಅವರ 1990ರ ಚಿತ್ರ ಡಾರ್ಕ್‌ಮ್ಯಾನ್ ಕಾಪಿ ಮಾಡಿದ್ರಾ SRK?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Dhadak 2:ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

VISTARANEWS.COM


on

Karan Johar announces Dhadak 2
Koo

ಬೆಂಗಳೂರು:  ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar ) ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಕರಣ್ ಜೋಹರ್ ತಮ್ಮ ಹೊಸ ಚಿತ್ರಕ್ಕೆ ‘ಧಡಕ್ 2’ (Dhadak 2) ಎಂದು ಹೆಸರಿಟ್ಟಿದ್ದಾರೆ. ಕರಣ್‌ ಜೋಹರ್ ನಿರ್ಮಿಸಿದ ಈ ಚಿತ್ರದಲ್ಲಿ ಸಿದ್ಧಾಂತ್ ಚತುರ್ವೇದಿ ಮತ್ತು ʻಅನಿಮಲ್‌ʼ ಸಿನಿಮಾ ಖ್ಯಾತಿಯ ತೃಪ್ತಿ ಡಿಮ್ರಿ ನಟಿಸಲಿದ್ದಾರೆ. ಶಾಜಿಯಾ ಇಕ್ಬಾಲ್ ನಿರ್ದೇಶಿಸಲಿದ್ದಾರೆ.

ʻಗಲ್ಲಿ ಬಾಯ್’ ಖ್ಯಾತಿಯ ಸಿದ್ಧಾಂತ್​ ಚತುರ್ವೇದಿ ಅವರು ತೆರೆ ಹಂಚಿಕೊಳ್ಳಲಿದ್ದಾರೆ. ‘ಧಡಕ್​ 2’ ಸಿನಿಮಾದಲ್ಲಿ ಜಾತಿಯ ಕುರಿತಾದ ಕಹಾನಿ ಇರಲಿದೆ ಎಂಬುದನ್ನು ಅವರು ತಿಳಿಸಿದ್ದಾರೆ.ಕರಣ್​ ಜೋಹರ್​ ಅವರ ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ‘ಧಡಕ್​ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಕರಣ್ ಜೋಹರ್ “ಒಂದು ಕಾಲದಲ್ಲಿ ಒಬ್ಬನಿದ್ದ ರಾಜ, ಒಬ್ಬಳಿದ್ದಳು ರಾಣಿ. ಆದರೆ ಅವರಿಬ್ಬರದ್ದೂ ಬೇರೆ ಜಾತಿ. ಕಥೆ ಮುಗಿಯಿತುʼʼಎಂದು ವಿಡಿಯೊ ಜತೆ ಕ್ಯಾಪ್ಞನ್‌ ಶೇರ್‌ ಮಾಡಿಕೊಂಡಿದ್ದಾರೆ. ಧಡಕ್ 2 ಚಿತ್ರಮಂದಿರಗಳಲ್ಲಿ 2024ರ ನವೆಂಬರ್‌ 22ರಂದು ಬಿಡುಗಡೆಯಾಗುತ್ತಿದೆ.

ಜೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ನಿರ್ಮಿಸಿರುವ ‘ಧಡಕ್ 2’ ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

2018ರಲ್ಲಿ ಕರಣ್​ ಜೋಹರ್​ ನಿರ್ಮಾಣ ಮಾಡಿದ್ದ ‘ಧಡಕ್​’ ಸಿನಿಮಾದಲ್ಲಿ ಕೂಡ ಜಾತಿಗೆ ಸಂಬಂಧಿಸಿದ ಕಥೆ ಇತ್ತು. ಆ ಸಿನಿಮಾ ಮೂಲಕ ನಟಿ ಜಾನ್ವಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡಿದರು. ಅದು ಮರಾಠಿಯ ‘ಸೈರಾಟ್​’ ಸಿನಿಮಾದ ರಿಮೇಕ್​ ಆಗಿತ್ತು.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading

ಬಾಲಿವುಡ್

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Munawar Faruqui: ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ತಮ್ಮ ಮಗನನ್ನು ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

VISTARANEWS.COM


on

Munawar Faruqui gets married for second timeʼ Munawar Faruqui gets married for second timeʼ
Koo

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui)  ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮೆಹಜಬೀನ್ ಕೋಟ್ವಾಲಾ (Mehzabeen Coatwala) ಅವರನ್ನು ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮುನಾವರ್ ಮದುವೆಯಲ್ಲಿ ಅವರ ಆತ್ಮೀಯರು ಮಾತ್ರ ಹಾಜರಿದ್ದರು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಮುಂಬೈನ ಐಟಿಸಿ ಗ್ರ್ಯಾಂಡ್ ಮರಾಠಾದಲ್ಲಿ ಆರತಕ್ಷತೆಯನ್ನು ಕೂಡ ಆಯೋಜಿಸಿದ್ದರು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಮುನಾವರ್ ಅವರ ಸ್ನೇಹಿತ-ನಟ ಹಿನಾ ಖಾನ್ ಈ ಸಮಾರಂಭಕ್ಕೆ ಆಹ್ವಾನಿತರಾದವರಲ್ಲಿ ಒಬ್ಬರು. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಿನಾ ಈ ಫೋಟೊಗಳನ್ನು ಹಂಚಿಕೊಂಡಿದ್ದರು.

ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಮುನಾವರ್ ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಏ. 10ರ ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

Continue Reading

ಸಿನಿಮಾ

Anant Ambani: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಪ್ಲ್ಯಾನಿಂಗ್‌ ಹೇಗಿದೆ? ಸಖತ್‌ ಕ್ಯೂರಿಯಸ್‌ ಆಗಿರಲಿದೆ ರಾಧಿಕಾ ಉಡುಪು!

Anant Ambani: ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

VISTARANEWS.COM


on

Anant Ambani things to know from celebrity guests to space theme bash
Koo

ಬೆಂಗಳೂರು: ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಇಟಲಿಯಲ್ಲಿ ಆಯೋಜಿಸಿದ್ದಾರೆ.  ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಅಂಬಾನಿ ಕುಟುಂಬದ ಇತರ ಗಣ್ಯ ವ್ಯಕ್ತಿಗಳು ಎರಡನೇ ವಿವಾಹ ಪೂರ್ವ ಸಂಭ್ರಮಾಚರಣೆಗೆ ತೆರಳುತ್ತಿದ್ದಾರೆ. 2024ರ ಮಾರ್ಚ್‌ನಲ್ಲಿ ಜಾಮ್‌ನಗರದಲ್ಲಿ ನಡೆದ ಪ್ರಿ ವೆಡ್ಡಿಂಗ್‌ ಆಚರಣೆಗಳಂತೆಯೇ ಇದು ಕೂಡ ಅದ್ಧೂರಿಯಾಗಿ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಆಚರಣೆ ಎಲ್ಲಿ ಪ್ರಾರಂಭವಾಗುತ್ತದೆ? ಹೇಗೆ ಇರಲಿದೆ?

ವರದಿಯ ಪ್ರಕಾರ, ಮೇ 28 ಮತ್ತು 30ರ ನಡುವೆ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು)  800 ಅತಿಥಿಗಳಿಗಾಗಿ  ಪಾರ್ಟಿ ಆಯೋಜಿಸಲಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. 

ಮೇ 30 ರಂದು, ಅತಿಥಿಗಳು ಬಂದಿಳಿಯುತ್ತಾರೆ. ನಂತರ ಔತಣಕೂಟ ಮತ್ತು ಪಾರ್ಟಿಯು 1 ಗಂಟೆಗೆ ಪ್ರಾರಂಭವಾಗುತ್ತದೆ. ಮೇ 31 ರಂದು ಬೆಳಗ್ಗೆ ಕ್ರೂಸ್‌ನಲ್ಲಿ ಅತಿಥಿಗಳು ಇಳಿಯುತ್ತಾರೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ರಣಬೀರ್ ಕಪೂರ್, ಆಲಿಯಾ ಭಟ್, ರಣವೀರ್ ಸಿಂಗ್ ಮುಂತಾದ ಗಣ್ಯ ಸೆಲೆಬ್ರಿಟಿಗಳು ಇರಲಿದ್ದಾರೆ. ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಕುಟುಂಬದೊಂದಿಗೆ ಆಚರಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

ತಂತ್ರಜ್ಞಾನ ಬಳಸಿ ತಯಾರಿಸಲಾಗಿದೆ ರಾಧಿಕಾ ಮರ್ಚಂಟ್‌ ಡ್ರೆಸ್‌!

ರಾಧಿಕಾ ಮರ್ಚಂಟ್‌ ಅಂದವಾದ ಕಸ್ಟಮ್-ನಿರ್ಮಿತ ಗ್ರೇಸ್ ಲಿಂಗ್ ಕೌಚರ್ ( Grace Ling Couture piece) ಪೀಸ್ ಧರಿಸುತ್ತಾರೆ ಎನ್ನಲಾಗಿದೆ. ಈ ಉಡುಪು 3D ವಿನ್ಯಾಸದಲ್ಲಿ ಇರಲಿದೆಯಂತೆ. ಏರೋಸ್ಪೇಸ್ ಅಲ್ಯೂಮಿನಿಯಂ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎನ್ನಲಾಗಿದೆ.

ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು. ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಬಾಲಿವುಡ್

Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

Anant Ambani Radhika: ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಆಯೋಜಿಸಿದ್ದಾರೆ. ಹೀಗಾಗಿ ಆಲಿಯಾ ದಂಪತಿ ಇಟಲಿಗೆ ಹೊರಡಿದ್ದಾರೆ ಎಂದು ವರದಿಯಾಗಿದೆ. 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ.

VISTARANEWS.COM


on

Ranbir Kapoor and Alia Bhatt flew to Italy
Koo

ಬೆಂಗಳೂರು: ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಗಳು ರಾಹಾ ಕಪೂರ್ ಜತೆ ಭಾನುವಾರ ರಾತ್ರಿ (ಮೇ.26) ಮುಂಬೈನಿಂದ ಇಟಲಿಗೆ ಹಾರಿದ್ದಾರೆ. ಮುಂಬೈನ ಕಲಿನಾ ವಿಮಾನ ನಿಲ್ದಾಣದಿಂದ (Ranbir Kapoor and Alia Bhatt flew to Italy) ಕುಟುಂಬ ಹೊರಡುತ್ತಿರುವ ಹಲವು ಫೋಟೊ ಹಾಗೂ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಆಯೋಜಿಸಿದ್ದಾರೆ. ಹೀಗಾಗಿ ಆಲಿಯಾ ದಂಪತಿ ಇಟಲಿಗೆ ಹೊರಡಿದ್ದಾರೆ ಎಂದು ವರದಿಯಾಗಿದೆ.

800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೊದಲ್ಲಿ ರಣಬೀರ್‌ ಮಗಳನ್ನು ಎತ್ತಿಕೊಂಡಿದ್ದಾರೆ. ಪ್ರಯಾಣಕ್ಕಾಗಿ, ಆಲಿಯಾ ಬೂದು ಬಣ್ಣದ ಹೂಡಿ ಮತ್ತು ಪ್ಯಾಂಟ್ ಧರಿಸಿದ್ದರು. ರಣಬೀರ್ ಬಿಳಿ ಟೀ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದರು. ರಾಹಾ ಕಪೂರ್ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಅಂಬಾನಿ ಕುಟುಂಬ ಆಯೋಜಿಸಿದ್ದು, ಈ ವಿವಾಹಪೂರ್ವ ಆಚರಣೆಯಲ್ಲಿ ಕುಟುಂಬ ಭಾಗಿಯಾಗಲಿದೆ.

ಇದನ್ನೂ ಓದಿ: Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading
Advertisement
Vijayapura news
ಪ್ರಮುಖ ಸುದ್ದಿ4 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ5 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ5 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ6 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ6 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ6 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ6 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ6 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ6 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ6 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ11 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌