Viral Video: ಸಲ್ಮಾನ್ ಖಾನ್​ರನ್ನು ಮಾತಾಡಿಸಲು ಬಂದ ವಿಕ್ಕಿ ಕೌಶಲ್​​ಗೆ ಅವಮಾನ?-ಬಾಡಿಗಾರ್ಡ್ಸ್ ಮಾಡಿದ್ದೇನು? Vistara News
Connect with us

ಬಾಲಿವುಡ್

Viral Video: ಸಲ್ಮಾನ್ ಖಾನ್​ರನ್ನು ಮಾತಾಡಿಸಲು ಬಂದ ವಿಕ್ಕಿ ಕೌಶಲ್​​ಗೆ ಅವಮಾನ?-ಬಾಡಿಗಾರ್ಡ್ಸ್ ಮಾಡಿದ್ದೇನು?

filmyselfies.official ಎಂಬ ಇನ್​ಸ್ಟಾಗ್ರಾಂನಲ್ಲಿ ವಿಡಿಯೊ ಪೋಸ್ಟ್ ಆಗಿದೆ. ಸಲ್ಮಾನ್​ ಖಾನ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೋಗುತ್ತಿದ್ದರು. ಅವರ ಅಕ್ಕಪಕ್ಕ ಭದ್ರತಾ ಸಿಬ್ಬಂದಿ, ಇನ್ನಿತರರು ನಡೆದು ಬರುತ್ತಿದ್ದರು. ಆಗಲೇ ವಿಕ್ಕಿ ಕೌಶಲ್ ಕೂಡ ಅಲ್ಲಿಗೆ ಬಂದಿದ್ದರು.

VISTARANEWS.COM


on

Salman Khan And Vicky Kaushal
Koo

ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ (IIFA 2023) ಅಬುಧಾಬಿಯಲ್ಲಿ ನಡೆಯುತ್ತಿದೆ. ಇದರಲ್ಲಿ ಬಾಲಿವುಡ್​ ಖ್ಯಾತ ತಾರೆಯರಾದ ಅಭಿಷೇಕ್ ಬಚ್ಚನ್, ನೋರಾ ಸಿಂಗ್, ರಾಕುಲ್ ಪ್ರೀತ್ ಸಿಂಗ್ ಮತ್ತು ಇಶಾ ಗುಪ್ತಾ, ಸಲ್ಮಾನ್​ ಖಾನ್​, ವಿಕ್ಕಿ ಕೌಶಲ್​ ಸೇರಿ ಬಾಲಿವುಡ್​ನ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ಅದರಲ್ಲೀಗ ನಟ ಸಲ್ಮಾನ್​ ಖಾನ್​​ ಮತ್ತು ವಿಕ್ಕಿ ಕೌಶಲ್​ ಸುದ್ದಿಯಲ್ಲಿದ್ದಾರೆ. ಅಬುಧಾಬಿಯ ಯಾಸ್ ದ್ವೀಪದಲ್ಲಿ ನಡೆಯುತ್ತಿರುವ IIFA 2023ರಲ್ಲಿ ವಿಕ್ಕಿ ಕೌಶಲ್​ ಅವರು ಸಲ್ಮಾನ್​ ಖಾನ್​​ ಅವರನ್ನು ಮಾತನಾಡಿಸಲು ಬರುತ್ತಿದ್ದ ವೇಳೆ, ಸಲ್ಮಾನ್ ಖಾನ್ (Salman Khan)​ ಅವರ ಅಂಗರಕ್ಷಕರು (ಬಾಡಿಗಾರ್ಡ್​ಗಳು) ವಿಕ್ಕಿ ಕೌಶಲ್ (Vicky Kaushal)​​ರನ್ನು ಪಕ್ಕಕ್ಕೆ ತಳ್ಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದು ನಟ ವಿಕ್ಕಿ ಕೌಶಲ್ ಅಭಿಮಾನಿಗಳನ್ನು ನೋಯಿಸಿದೆ.

filmyselfies.official ಎಂಬ ಇನ್​ಸ್ಟಾಗ್ರಾಂನಲ್ಲಿ ವಿಡಿಯೊ ಪೋಸ್ಟ್ ಆಗಿದೆ. ಸಲ್ಮಾನ್​ ಖಾನ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೋಗುತ್ತಿದ್ದರು. ಅವರ ಅಕ್ಕಪಕ್ಕ ಭದ್ರತಾ ಸಿಬ್ಬಂದಿ, ಇನ್ನಿತರರು ನಡೆದು ಬರುತ್ತಿದ್ದರು. ಆಗ ವಿಕ್ಕಿ ಕೌಶಲ್​ ಎದುರಿನಿಂದ ಬರುತ್ತಾರೆ. ಸಲ್ಮಾನ್ ಖಾನ್​ ಒಂದು ಕ್ಷಣ ನಿಂತು ವಿಕ್ಕಿ ಕೌಶಲ್ ಬಳಿ ಮಾತಾಡುತ್ತಾರೆ. ಆದರೆ ಅಷ್ಟರಲ್ಲಿ ಸಲ್ಮಾನ್​ ಖಾನ್​ ಸೆಕ್ಯೂರಿಟಿ ಸಿಬ್ಬಂದಿ ವಿಕ್ಕಿ ಕೌಶಲ್​​ರನ್ನು ಪಕ್ಕಕ್ಕೆ ತಳ್ಳುತ್ತಾರೆ. ಸಲ್ಮಾನ್​ ಖಾನ್ ಮುಂದೆ ಹೋಗುವುದನ್ನು ವಿಡಿಯೊದಲ್ಲಿ ನೋಡಬಹುದು. ವಿಡಿಯೊ ವೈರಲ್ ಆಗುತ್ತಿದ್ದಂತೆ ವಿಕ್ಕಿ ಕೌಶಲ್ ಅಭಿಮಾನಿಗಳು, ನೆಟ್ಟಿಗರು ಅಸಮಾಧಾನ ಹೊರಹಾಕಿದ್ದಾರೆ. ’ಸಲ್ಮಾನ್ ಖಾನ್ ಅಂಗರಕ್ಷಕರಿಗೆ ಗೌರವ ಕೊಟ್ಟು ಗೊತ್ತಿಲ್ಲ’ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಕಮೆಂಟ್ ಮಾಡಿ ‘ವಿಕ್ಕಿ ಕೌಶಲ್​ ಅವರು ಅಷ್ಟು ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರೂ, ಸಲ್ಮಾನ್ ಖಾನ್​ ಯಾಕೆ ಅವರ ಬಳಿ ಅಷ್ಟು ಸೂಕ್ತವಾಗಿ ಮಾತನಾಡಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ವೈರಲ್ ಆಗುತ್ತಿರುವ ವಿಡಿಯೊ ವಿಕ್ಕಿ ಕೌಶಲ್​ ಅಭಿಮಾನಿಗಳಿಗೆ ನೋವುಂಟು ಮಾಡಿದೆ.

ವಿಕ್ಕಿ ಕೌಶಲ್ ಪ್ರತಿಕ್ರಿಯೆ ಏನು?

ಈ ವಿಡಿಯೊ ವೈರಲ್ ಆದ ಕೆಲವೇ ಕ್ಷಣದಲ್ಲಿ ವಿಕ್ಕಿ ಕೌಶಲ್ ಮತ್ತು ಸಲ್ಮಾನ್ ಖಾನ್​ ಪರಸ್ಪರ ಅಪ್ಪಿಕೊಂಡ ದೃಶ್ಯವೂ ವೈರಲ್ ಆಯಿತು. ಆದರೆ ಅಭಿಮಾನಿಗಳು ಸಮಾಧಾನ ಪಟ್ಟುಕೊಂಡಿಲ್ಲ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇದ್ದ ಮಾಧ್ಯಮದವರೂ ವಿಕ್ಕಿ ಕೌಶಲ್​ಗೆ ಇದೇ ಪ್ರಶ್ನೆಯನ್ನು ಹಲವು ಬಾರಿ ಕೇಳಲು ಶುರು ಮಾಡಿದರು. ಆಗ ಪ್ರತಿಕ್ರಿಯೆ ನೀಡಿದ ನಟ, ‘ಈ ವಿಷಯವನ್ನು ದೊಡ್ಡದು ಮಾಡಬೇಕಿಲ್ಲ. ಮಾತಾಡುವುದು ಅನಗತ್ಯ’ ಎಂದಿದ್ದಾರೆ. ‘ಒಂದು ವಿಡಿಯೊ ನೋಡಿ ಏನೋ ಆಯಿತು ಅಂದುಕೊಳ್ಳುವುದು ಸರಿಯಲ್ಲ. ವಿಡಿಯೊದಲ್ಲಿ ಕಂಡಿದ್ದೇ ನಿಜವಾಗಿರುವುದಿಲ್ಲ’ ಎಂದೂ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

IIFA 2023 Winners Full List: ಹೃತಿಕ್ ರೋಷನ್ ಅತ್ಯುತ್ತಮ ನಟ ಪ್ರಶಸ್ತಿ, ಆಲಿಯಾ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.ಆಲಿಯಾ ಸಮಾರಂಭದಲ್ಲಿ ಗೈರಾದ ಕಾರಣ ನಿರ್ಮಾಪಕ ಜಯಂತಿಲಾಲ್ ಗಡಾ ಪ್ರಶಸ್ತಿಯನ್ನು ಸ್ವೀಕರಿಸಿದರು.

VISTARANEWS.COM


on

Edited by

IIFA 2023 Winners Hrithik Roshan and anil Kapoor
Koo

ಬೆಂಗಳೂರು: ಅಬುಧಾಬಿಯಲ್ಲಿ ಮೇ 27ರಂದು ನಡೆದ ಇಂಟರ್‌ನ್ಯಾಷನಲ್ ಇಂಡಿಯನ್ ಫಿಲ್ಮ್ ಅಕಾಡೆಮಿ ಅವಾರ್ಡ್ಸ್ (IIFA 2023)ರಲ್ಲಿ (IIFA 2023 Winners Full List) ಹೃತಿಕ್ ರೋಷನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಸೈಫ್ ಅಲಿ ಖಾನ್ ನಟಿಸಿದ ವಿಕ್ರಮ್ ವೇದಾದಲ್ಲಿ ಅವರ ಸಾಹಸಮಯ ಅಭಿನಯಕ್ಕಾಗಿ ಟ್ರೋಫಿಯನ್ನು ಪಡೆದರು. ಅಷ್ಟೇ ಅಲ್ಲದೇ ʻಗಂಗೂಬಾಯಿ ಕಥಿಯಾವಾಡಿʼಗಾಗಿ ಆಲಿಯಾ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆಲಿಯಾ ಸಮಾರಂಭದಲ್ಲಿ ಗೈರಾದ ಕಾರಣ ನಿರ್ಮಾಪಕ ಜಯಂತಿಲಾಲ್ ಗಡಾ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಬಾರಿ ʻಗಂಗೂಬಾಯಿ ಕಥಿಯಾವಾಡಿ ಸಿನಿಮಾಗೆ ಹಲವು ಪ್ರಶಸ್ತಿಗಳು ಸಂದಿವೆ.

ಹಿರಿಯ ನಟ ಅನಿಲ್ ಕಪೂರ್ ಅವರು IIFA 2023ರಲ್ಲಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಪಡೆದರು. ʻಜಗ್‌ಜಗ್ ಜೀಯೋದಲ್ಲಿʼನ ಅವರ ಪಾತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದರು.

ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಕಮಲ್ ಹಾಸನ್‌ಗೆ ಪ್ರಶಸ್ತಿ

ಹಿರಿಯ ನಟ ಕಮಲ್ ಹಾಸನ್ ಅವರು ಐಐಎಫ್‌ಎ 2023ರಲ್ಲಿ (IIFA 2023) ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿಯನ್ನು ನೀಡಿದಾಗ ಭಾರೀ ಕರತಾಡನದ ಪಡೆದರು. ಗಾಯಕ ಮತ್ತು ಸಂಗೀತ ಸಂಯೋಜಕ ಎಆರ್ ರೆಹಮಾನ್ ಅವರು ಕಮಲ್‌ ಹಾಸನ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಮಲ್ ಹಾಸನ್ ಟ್ರೋಫಿ ಸ್ವೀಕರಿಸಿದ ತಕ್ಷಣ, ಸಲ್ಮಾನ್ ಖಾನ್ ಸೇರಿದಂತೆ ಎಲ್ಲರೂ ತಮ್ಮ ಸ್ಥಾನದಿಂದ ಎದ್ದು ನಿಂತು ನಟನನ್ನು ಶ್ಲಾಘಿಸಿದರು.

ವಿಕ್ರಮ್ ವೇದಾ ತಮಿಳು ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ಆರ್ ಮಾಧವನ್ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಹಿಂದಿಯಲ್ಲಿ ಹೃತಿಕ್‌ ಹಾಗೂ ಸೈಫ್‌ ನಟಿಸಿದ್ದರು.

ಇದನ್ನೂ ಓದಿ: Aahana Kumra: ಐಫಾ ಕಾರ್ಯಕ್ರಮದಲ್ಲಿ ನಟಿ ಅಹಾನಾ ಕುಮ್ರಾಳ ಡ್ರೆಸ್‌ ಜಾರುವುದರಲ್ಲಿತ್ತು, ಆಗ? ವಿಡಿಯೊ ವೈರಲ್​

ಬ್ರಹ್ಮಾಸ್ತ್ರ ಮತ್ತು ಗಂಗೂಬಾಯಿ ಕಾಠಿಯಾವಾಡಿಗೆ ದೊಡ್ಡ ಗೆಲುವು

ಬಾಲಿವುಡ್ ಫ್ಯಾಂಟಸಿ ಚಿತ್ರ ಬ್ರಹ್ಮಾಸ್ತ್ರ: ಭಾಗ ಒಂದು – ಶಿವ, ಮತ್ತು ಜೀವನಚರಿತ್ರೆ ಗಂಗೂಬಾಯಿ ಕಾಠಿಯಾವಾಡಿ ಈ ವರ್ಷದ IIFAನಲ್ಲಿ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಶ್ರೇಯಾ ಘೋಷಾಲ್ ಮತ್ತು ಅರಿಜಿತ್ ಸಿಂಗ್ ಅತ್ಯುತ್ತಮ ಹಿನ್ನೆಲೆ ಗಾಯಕಿ, ಗಾಯಕಿ ವಿಭಾಗ, ಹಾಗೆಯೇ ಮೌನಿ ರಾಯ್‌ ಅತ್ಯುತ್ತಮ ಪೋಷಕ ನಟಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ಮಗ, ಬಾಬಿಲ್ ಖಾನ್, ʻಕಾಲಾʼ ಚಿತ್ರಕ್ಕಾಗಿ ಬೆಸ್ಟ್‌ ಡೆಬ್ಯೂಟ್‌ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಧೋಕಾ ಅರೌಂಡ್ ದಿ ಕಾರ್ನರ್‌ಗಾಗಿ ಖುಶಾಲಿ ಕುಮಾರ್ ಬೆಸ್‌ ಡೆಬ್ಯೂಟ್‌ ಫಿಮೇಲ್‌ ಅವಾರ್ಡ್‌ ಪಡೆದುಕೊಂಡರು.

ಗಂಗೂಬಾಯಿ ಕಾಠಿಯಾವಾ ಡಿಸಿನಿಮಾದ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಂಡಿತು. ಛಾಯಾಗ್ರಹಣ, ಚಿತ್ರಕಥೆ ಮತ್ತು ಸಂಭಾಷಣೆಗಾಗಿ ಟ್ರೋಫಿಗಳನ್ನು ಗೆದ್ದುಕೊಂಡಿತು. ಈ ಚಿತ್ರದಲ್ಲಿ ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: Pavan Wadeyar: ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ನಿರ್ಮಾಪಕ ಪವನ್ ಒಡೆಯರ್‌ಗೆ ದುಬೈನಲ್ಲಿ ಸನ್ಮಾನ

ಪ್ರಶಸ್ತಿಗಳ ವಿವರ ಇಲ್ಲಿದೆ!

  • ಅತ್ಯುತ್ತಮ ಚಿತ್ರ: ದೃಶ್ಯಂ 2
  • ಅತ್ಯುತ್ತಮ ನಿರ್ದೇಶಕ: ಆರ್ ಮಾಧವನ್ ರಾಕೆಟ್ರಿ: ದಿ ನಂಬಿ ಎಫೆಕ್ಟ್
  • ಅತ್ಯುತ್ತಮ ನಟಿ : ಗಂಗೂಬಾಯಿ ಕಾಠಿಯಾವಾಡಿಗಾಗಿ ಆಲಿಯಾ ಭಟ್
  • ಅತ್ಯುತ್ತಮ ನಟ : ವಿಕ್ರಮ್ ವೇದಕ್ಕಾಗಿ ಹೃತಿಕ್ ರೋಷನ್
  • ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ: ಬ್ರಹ್ಮಾಸ್ತ್ರ ಸಿನಿಮಾದ ಮೌನಿ ರಾಯ್: ಭಾಗ ಒಂದು – ಶಿವ
  • ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟ : ಜಗ್ ಜಗ್ ಜೀಯೋಗಾಗಿ ಅನಿಲ್ ಕಪೂರ್
  • ಫ್ಯಾಷನ್‌ ವಿಭಾಗ : ಮನೀಶ್ ಮಲ್ಹೋತ್ರಾ
  • ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆ: ಕಮಲ್ ಹಾಸನ್
  • ಅತ್ಯುತ್ತಮ ಅಡಾಪ್ಟೆಡ್ ಸ್ಟೋರಿ : ಆಮಿಲ್ ಕೀಯಾನ್ ಖಾನ್ ಮತ್ತು ಅಭಿಷೇಕ್ ಪಾಠಕ್ ದೃಶ್ಯಂ 2
  • ಅತ್ಯುತ್ತಮ ಮೂಲ ಕಥೆ: ಡಾರ್ಲಿಂಗ್ಸ್‌ಗಾಗಿ ಪರ್ವೀಜ್ ಶೇಖ್ ಮತ್ತು ಜಸ್ಮೀತ್ ರೀನ್
  • ಪ್ರಾದೇಶಿಕ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆ: ರಿತೇಶ್ ದೇಶಮುಖ್ ನಿರ್ದೇಶನದ ಮರಾಠಿ ಚಲನಚಿತ್ರ ವೇದ್
  • ಬೆಸ್ಟ್‌ ಡೆಬ್ಯೂಟ್‌ ಅವಾರ್ಡ್‌ (ಪುರುಷರ ವಿಭಾಗ): ಗಂಗೂಬಾಯಿ ಕಾಠಿಯಾವಾಡಿಗಾಗಿ ಶಾಂತನು ಮಹೇಶ್ವರಿ ಮತ್ತು ಕ್ಲಾಗಾಗಿ ಬಾಬಿಲ್ ಖಾನ್
  • ಬೆಸ್ಟ್‌ ಡೆಬ್ಯೂಟ್‌ ಅವಾರ್ಡ್‌ (ಮಹಿಳೆಯ ವಿಭಾಗ): ಧೋಕಾ ಅರೌಂಡ್ ದಿ ಕಾರ್ನರ್‌ಗಾಗಿ ಖುಶಾಲಿ ಕುಮಾರ್
  • ಅತ್ಯುತ್ತಮ ಹಿನ್ನೆಲೆ ಗಾಯಕಿ : ಬ್ರಹ್ಮಾಸ್ತ್ರ, ಶ್ರೇಯಾ ಘೋಷಾಲ್
  • ಅತ್ಯುತ್ತಮ ಹಿನ್ನೆಲೆ ಗಾಯಕ: ಬ್ರಹ್ಮಾಸ್ತ್ರದ ಕೇಸರಿಯಾ ಹಾಡಿಗೆ ಅರಿಜಿತ್ ಸಿಂಗ್
  • ಅತ್ಯುತ್ತಮ ಸಂಗೀತ ನಿರ್ದೇಶನ: ಬ್ರಹ್ಮಾಸ್ತ್ರಕ್ಕಾಗಿ ಪ್ರೀತಮ್
  • ಅತ್ಯುತ್ತಮ ಗೀತರಚನೆಕಾರ: ಅಮಿತಾಭ್ ಭಟ್ಟಾಚಾರ್ಯ ಬ್ರಹ್ಮಾಸ್ತ್ರದ ಕೇಸರಿಯಾ
  • ಅತ್ಯುತ್ತಮ ಛಾಯಾಗ್ರಹಣ: ಗಂಗೂಬಾಯಿ ಕಾಠಿಯಾವಾಡಿ
  • ಅತ್ಯುತ್ತಮ ಚಿತ್ರಕಥೆ: ಗಂಗೂಬಾಯಿ ಕಾಠಿಯಾವಾಡಿ
  • ಅತ್ಯುತ್ತಮ ಸಂಭಾಷಣೆ: ಗಂಗೂಬಾಯಿ ಕಾಠಿಯಾವಾಡಿ
  • ಶೀರ್ಷಿಕೆ ಗೀತೆಗಾಗಿ ಅತ್ಯುತ್ತಮ ನೃತ್ಯ ಸಂಯೋಜನೆ: ಭೂಲ್ ಭುಲೈಯಾ 2
  • ಅತ್ಯುತ್ತಮ ಧ್ವನಿ ವಿನ್ಯಾಸ: ಭೂಲ್ ಭುಲೈಯಾ 2
  • ಅತ್ಯುತ್ತಮ ಸಂಕಲನ: ದೃಶ್ಯಂ 2
  • ಅತ್ಯುತ್ತಮ ಹಿನ್ನೆಲೆ ಸಂಗೀತ: ವಿಕ್ರಮ್ ವೇದಾ
  • ಸೌಂಡ್‌ ಮಿಕ್ಸಿಂಗ್‌: ಮೋನಿಕಾ ಓ ಮೈ ಡಾರ್ಲಿಂಗ್
Continue Reading

ಬಾಲಿವುಡ್

Aahana Kumra: ಐಫಾ ಕಾರ್ಯಕ್ರಮದಲ್ಲಿ ನಟಿ ಅಹಾನಾ ಕುಮ್ರಾಳ ಡ್ರೆಸ್‌ ಜಾರುವುದರಲ್ಲಿತ್ತು, ಆಗ? ವಿಡಿಯೊ ವೈರಲ್​

ನಟಿ ಅಹಾನಾ ಕುಮ್ರಾ (Aahana Kumra) ಅವರು ದುಬೈನಲ್ಲಿ ಐಫಾ ಕಾರ್ಯಕ್ರಮದ ಗ್ರೀನ್‌ ಕಾರ್ಪೆಟ್‌ನಲ್ಲಿ ಭಾಗವಹಿಸಿದ್ದು, ಅಲ್ಲಿ ಅವರು ತೊಟ್ಟ ಉಡುಗೆಯಿಂದ ಇರಿಸುಮುರಿಸಾಗಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

VISTARANEWS.COM


on

Edited by

Koo

ದುಬೈ: ಬಾಲಿವುಡ್‌ನ ಹಲವು ಗಣ್ಯರು ಸದ್ಯ ಅರಬ್‌ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ನಡೆಯುತ್ತಿರುವ ಐಫಾ 2023 (IIFA awards 2023) ಕಾರ್ಯಕ್ರಮದಲ್ಲಿದ್ದಾರೆ. ಅದರಂತೆ ನಟಿ ಅಹಾನಾ ಕುಮ್ರಾ (Aahana Kumra) ಕೂಡ ಇದೇ ಕಾರ್ಯಕ್ರಮದಲ್ಲಿದ್ದಾರೆ. ಈ ವೇಳೆ ನಟಿ ತೊಟ್ಟ ಉಡುಗೆ ಅವರಿಗೆ ಸರಿಯಾಗದೆ ಜಾರುತ್ತಿದ್ದು, ನಟಿ ಅದನ್ನು ಜಾರದಂತೆ ಹಲವು ಬಾರಿ ಹಿಡಿದುಕೊಂಡಿದ್ದು ಕಂಡುಬಂದಿದೆ.

ಹೌದು. ಐಫಾ ಕಾರ್ಯಕ್ರಮದ ಗ್ರೀನ್‌ ಕಾರ್ಪೆಟ್‌ ಕಾರ್ಯಕ್ರಮದಲ್ಲಿ ಅಹಾನಾ ಭಾಗಿಯಾಗಿದ್ದರು. ಅದರಲ್ಲಿ ಅವರು ಆಫ್‌ ಶೋಲ್ಡರ್‌ ಇರುವ ಕಪ್ಪು ಬಣ್ಣದ ಗೌನ್‌ ಅನ್ನು ತೊಟ್ಟಿದ್ದರು. ಅವರು ಮಾಧ್ಯಮದವರೆದುರು ಕ್ಯಾಮರಾಗಳಿಗೆ ಫೋಸ್‌ ಕೊಡುವಾಗ ಹಲವು ಬಾರಿ ಡ್ರೆಸ್‌ ಜಾರಿದೆ. ಹಾಗಾಗಿ ನಟಿ ಅದನ್ನು ಎಳೆದುಕೊಂಡು ಸರಿ ಮಾಡಿಕೊಂಡು ಫೋಸ್‌ ಕೊಟ್ಟಿದ್ದಾರೆ. ಈ ದೃಶ್ಯಗಳಿರುವ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಇದನ್ನೂ ಓದಿ: Aahana s Kumra | ಸ್ಟೈಲಿಶ್ ಪರ್ಪಲ್ ಡ್ರೆಸ್‌ನಲ್ಲಿ ಮಿಂಚಿದ ಅಹಾನಾ ಕುಮ್ರಾ
ಅಂದ ಹಾಗೆ ನಟಿ ಕಳೆದ ವಾರ ಕಾರ್ಯಕ್ರಮದವೊಂದರಲ್ಲಿ ಭಾಗಿಯಾಗಿದ್ದಾ ಅಭಿಮಾನಿಯೊಬ್ಬರಿಗೆ ಸಿಟ್ಟಿನಿಂದ ಬೈದಿದ್ದರು. ನಟಿ ಜತೆ ಫೋಟೋ ತೆಗೆಸಿಕೊಳ್ಳಲೆಂದು ಬಂದ ಅಭಿಮಾನಿಯೊಬ್ಬರು ಆಕೆಯ ಸೊಂಟಕ್ಕೆ ಕೈ ಹಾಕಿದ್ದರು. ಇದರಿಂದ ಸಿಟ್ಟಿಗೆದ್ದ ನಟಿ, “ನನ್ನನ್ನು ಮುಟ್ಟಬೇಡಿ” ಎಂದು ಜೋರಾಗಿಯೇ ಹೇಳಿದ್ದರು. ಆ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್‌ ಆಗಿತ್ತು.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಆಕೆ, “ನಾವು ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಓಪನ್‌ ಆಗಿ ಇರುತ್ತೇವೆ ಎನ್ನುವ ಕಾರಣಕ್ಕೆ ನಮ್ಮೊಂದಿಗೆ ಏನು ಬೇಕಾದರೂ ಮಾಡಬಹುದು ಎಂದು ಕೆಲವರು ಅಂದುಕೊಂಡುಬಿಡುತ್ತಾರೆ. ಆದರೆ ಎಲ್ಲದಕ್ಕೂ ಗಡಿ ಇದ್ದೇ ಇರುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ಸುರಕ್ಷತೆ ಬಹುಮುಖ್ಯ. ಅದಕ್ಕಾಗಿ ಬೌನ್ಸರ್‌ಗಳನ್ನು ನೇಮಿಸಬೇಕು” ಎಂದು ಹೇಳಿದ್ದರು.

Continue Reading

South Cinema

Ashish Vidyarthi: ಯಾವುದೇ ವಯಸ್ಸಲ್ಲಾದರೂ ಸಂತೋಷವಾಗಿರಬಹುದು; ಮದುವೆ ಬಗ್ಗೆ ಆಶಿಶ್ ವಿದ್ಯಾರ್ಥಿ ಹೇಳಿದ್ದೇನು?

Ashish Vidyarthi: ʻʻಪ್ರತಿಯೊಬ್ಬರು ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು. ವಯಸ್ಸು ಮುಖ್ಯವಲ್ಲ. ಪ್ರತಿಯೊಬ್ಬರ ಜೀವನದ ಆಯ್ಕೆಗಳನ್ನು ನಾವು ಗೌರವಿಸಬೇಕುʼʼ ಎಂದರು.

VISTARANEWS.COM


on

Edited by

Ashish Vidyarthi says about His Marriage
Koo

ಮುಂಬೈ: ಹಿಂದಿ ಚಿತ್ರರಂಗದಲ್ಲಿ ಖಳನಾಯಕನ ಪಾತ್ರಗಳನ್ನು ನಿರ್ವಹಿಸಿದ ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ (Ashish Vidyarthi) ಅವರು ತಮ್ಮ 60 ನೇ ವಯಸ್ಸಿನಲ್ಲಿ ಅಸ್ಸಾಂನ ರೂಪಾಲಿ ಬರುವಾ (Rupali Barua) ಅವರನ್ನು ಮೇ 25ರಂದು ವಿವಾಹವಾದರು. ಇದೀಗ ತಮ್ಮ ಮದುವೆಯ ಬಗ್ಗೆ ನಟ ವಿಡಿಯೊ ಮೂಲಕ ಮನಬಿಚ್ಚಿ ಮಾತನಾಡಿದ್ದಾರೆ. ʻʻಪ್ರತಿಯೊಬ್ಬರು ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು. ವಯಸ್ಸು ಮುಖ್ಯವಲ್ಲ. ಪ್ರತಿಯೊಬ್ಬರ ಜೀವನ ಆಯ್ಕೆಗಳನ್ನು ನಾವು ಗೌರವಿಸಬೇಕುʼʼ ಎಂದರು.

“ನಮ್ಮ ಪ್ರತಿಯೊಬ್ಬರ ಜೀವನವು ವಿಭಿನ್ನವಾಗಿದೆ. ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಭಿನ್ನ ಸವಾಲುಗಳು, ಹಿನ್ನೆಲೆಗಳು, ಶಿಕ್ಷಣ ಮತ್ತು ನಾವು ಯೋಚಿಸುವ ರೀತಿ ಇದೆ. ನಮ್ಮಲ್ಲಿ ಎಲ್ಲರಿಗೂ ಅವರದ್ದೇ ಆದ ವೃತ್ತಿಗಳಿವೆ. ನಾವೆಲ್ಲರೂ ವಿವಿಧ ದೇಶಗಳು, ಧರ್ಮಗಳು ಮತ್ತು ನಂಬಿಕೆಗಳಿಂದ ಬಂದವರು, ಆದರೆ ಒಂದು ಸಾಮಾನ್ಯ ವಿಷಯವೆಂದರೆ ನಾವೆಲ್ಲರೂ ಸಂತೋಷವಾಗಿರಲು ಬಯಸುತ್ತೇವೆʼʼಎಂದರು.

22 ವರ್ಷಗಳ ತಮ್ಮ ಹಾಗೂ ಮೊದಲ ಪತ್ನಿಯ (ರಾಜೋಶಿ ಬರುವಾ ) ದಾಂಪತ್ಯ ಜೀವನ ಕಳೆದ ಎರಡು ವರ್ಷಗಳಿಂದ ಸರಿ ಇರಲಿಲ್ಲ ಎಂದು ಹೇಳಿಕೊಂಡರು. “22 ವರ್ಷಗಳ ಹಿಂದೆ ಪಿಲೂ (ರಾಜೋಶಿ ಬರುವಾ) ಮತ್ತು ನಾನು ಭೇಟಿಯಾದೆವು. ಬಳಿಕ ಮದುವೆಯಾದೆವು. ಅಲ್ಲದೆ, ಜೀವನ ಚೆನ್ನಾಗಿಯೇ ಇತ್ತು. ಎರಡು ವರ್ಷಗಳಿಂದ ಸರಿ ಇರಲಿಲ್ಲʼʼಎಂದರು.

ʻʻಪಿಲೂ ಮತ್ತು ನಾನು ಸೌಹಾರ್ದಯುತವಾಗಿ ಒಟ್ಟಿಗೆ ನಡೆಯಲು ಸಾಧ್ಯವಾಗದಿದ್ದರೆ, ಪ್ರತ್ಯೇಕವಾಗಿ ನಡೆಯೋಣ ಎಂದು ನಿರ್ಧರಿಸಿದೆವುʼʼ ಎಂದು ಆಶಿಶ್ ಹೇಳಿದರು. “ನಾನು ಯಾರೊಂದಿಗಾದರೂ ಇರಲು ಬಯಸುತ್ತೇನೆಯೋ ಅವರೊಂದಿಗೆ ಮದುವೆಯಾಗಲು ಬಯಸುತ್ತೇನೆ ಎಂದು ನನಗೆ ದೃಢವಾದ ನಂಬಿಕೆ ಇತ್ತು. ನಾನು ರೂಪಾಲಿ ಬರುವಾ ಅವರನ್ನು ಭೇಟಿಯಾದೆ. ನಾವು ಒಂದು ವರ್ಷದ ಹಿಂದೆ ಭೇಟಿಯಾದೆವು. ಪರಸ್ಪರ ಮಾತನಾಡಿದೆವು. ಗಂಡ ಮತ್ತು ಹೆಂಡತಿಯಾಗಿ ಒಟ್ಟಿಗೆ ಬದುಕಬೇಕೆಂದು ನಿರ್ಧರಿಸಿ ರೂಪಾಲಿ ಮತ್ತು ನಾನು ಮದುವೆಯಾದೆವು. ಅವಳ ವಯಸ್ಸು 50 ಮತ್ತು ನನಗೆ 57 ವರ್ಷ, 60 ಅಲ್ಲ, ಆದರೆ ವಯಸ್ಸು ಮುಖ್ಯವಲ್ಲ. ನಮ್ಮಲ್ಲಿ ಪ್ರತಿಯೊಬ್ಬರೂ ಯಾವುದೇ ವಯಸ್ಸಿನಲ್ಲಾದರೂ ಸಂತೋಷವಾಗಿರಬಹುದು ”ಎಂದು ನಟ ಹೇಳಿಕೊಂಡರು. ಪ್ರತಿಯೊಬ್ಬರ ಜೀವನ ಆಯ್ಕೆಗಳನ್ನು ನಾವು ಗೌರವಿಸಬೇಕು ಎಂದು ಹೇಳುವ ಮೂಲಕ ಆಶಿಶ್ ವಿದ್ಯಾರ್ಥಿ ಮಾತಿಗೆ ಪೂರ್ಣ ವಿರಾಮ ಇಟ್ಟರು.

ಇದನ್ನೂ ಓದಿ: Ashish Vidyarthi Marriage: ಆಶಿಶ್ ವಿದ್ಯಾರ್ಥಿ ಮರು ಮದುವೆ ಬಳಿಕ ಮೊದಲ ಪತ್ನಿಯ ಪೋಸ್ಟ್‌ ವೈರಲ್‌!

Ashish Vidyarthi

ಆಶಿಶ್ ವಿದ್ಯಾರ್ಥಿ ಪೋಸ್ಟ್‌

ಆಶಿಶ್ ವಿದ್ಯಾರ್ಥಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಕೋರ್ಟ್‌ ಮ್ಯಾರೇಜ್‌ ಆಗಿದ್ದಾರೆ. ಮದುವೆಯಲ್ಲಿ ಕೇರಳ ಮತ್ತು ಅಸ್ಸಾಂ ಸಂಪ್ರದಾಯಗಳನ್ನು ಅನುಸರಿಸಿದ್ದಾರೆ. ʻ ರಾಜೋಶಿ ಬರುವಾ ವೃತ್ತಿಯಲ್ಲಿ ನಟಿ. ಶಕುಂತಲಾ ಬರುವಾ ಅವರ ಮಗಳು. ಆಶಿಶ್ ಮತ್ತು ರಾಜೋಶಿ ಮದುವೆಯಾಗಿ 23 ವರ್ಷಗಳಾಗಿದ್ದು, ಅವರಿಗೆ ಅರ್ಥ ವಿದ್ಯಾರ್ಥಿ ಎಂಬ ಮಗನಿದ್ದಾನೆ. ಆಶಿಶ್ ವಿದ್ಯಾರ್ಥಿ ಅವರ ತಂದೆ ಮಲಯಾಳಿಯಾಗಿದ್ದು ಕೇರಳದ ಕಣ್ಣೂರಿನವರಾಗಿದ್ದರು. ಅವರ ತಾಯಿ ಬೆಂಗಾಲಿಯವರಾಗಿದ್ದು ರಾಜಸ್ಥಾನ ಮೂಲದವರು.

Ashish Vidyarthi

ಆಶಿಶ್‌ ಇದುವರೆಗೆ 11 ವಿವಿಧ ಭಾಷೆಗಳಲ್ಲಿ ಸುಮಾರು 300 ಚಿತ್ರಗಳಲ್ಲಿ ಅಭಿನಯಿಸಿದ್ದರು. ಸರ್ದಾರ್ ವಲ್ಲಭಭಭಾಯಿ ಪಟೇಲ್ ಅವರ ಜೀವನವನ್ನು ಆಧರಿಸಿದ ಸರ್ದಾರ್‌ನಲ್ಲಿ ಆಶಿಶ್ ವಿದ್ಯಾರ್ಥಿ ವಿ ಪಿ ಮೆನನ್ ಪಾತ್ರವನ್ನು ನಿರ್ವಹಿಸಿದ್ದಾರೆ.

Continue Reading

South Cinema

Anushka Sharma: ಕಾನ್‌ ಚಲನಚಿತ್ರೋತ್ಸವದಲ್ಲಿ ಮಿಂಚಿದ ಅನುಷ್ಕಾ ಶರ್ಮಾ

Anushka Sharma: 76ನೇ ಕಾನ್‌ ಚಲನಚಿತ್ರೋತ್ಸವ ತಾರಾ ಬಳಗದಿಂದ ಕೂಡಿದೆ. ಅನುಷ್ಕಾ ಶರ್ಮಾ ಇದೇ ಮೊದಲ ಬಾರಿಗೆ ಕಾನ್‌ ಉತ್ಸವದಲ್ಲಿ ಭಾಗಿಯಾಗಿದ್ದರು. ನಟಿಯ ಫೋಟೊಗಳು ಇಲ್ಲಿವೆ!

VISTARANEWS.COM


on

Edited by

Anushka Sharma Cannes Film Festival
Koo
Anushka Sharma

76ನೇ ಕಾನ್‌ ಚಲನಚಿತ್ರೋತ್ಸವದಲ್ಲಿ ನಟಿ ಅನುಷ್ಕಾ ಶರ್ಮಾ (Anushka Sharma) ಇದೇ ಮೊದಲ ಬಾರಿಗೆ ಕಾನ್‌ ಭಾಗಿಯಾಗಿದ್ದರು.

Anushka Sharma

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ, ಸಾರಾ ಅಲಿ ಖಾನ್ ಸೇರಿದಂತೆ ಭಾರತದ ಹಲವು ಸೆಲೆಬ್ರಿಟಿಗಳು ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.

Anushka Sharma

ಬೆರಗುಗೊಳಿಸುವ ಬಿಳಿ ಹೂವಿನ ಗೌನ್‌ನಲ್ಲಿ ಅನುಷ್ಕಾ ಕಾಣಿಸಿಕೊಂಡಿದ್ದು ಹೀಗೆ. ಈ ಫೋಟೋದಲ್ಲಿ ಅನುಷ್ಕಾ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಅನೇಕರು ಬರೆದುಕೊಂಡಿದ್ದಾರೆ.

Anushka Sharma

ಅನುಷ್ಕಾ ಫೋಟೊ ಶೇರ್‌ ಮಾಡುತ್ತಿದ್ದಂತೆ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

Anushka Sharma

ಅನುಷ್ಕಾ ಶರ್ಮಾ ಅವರು ಚಕ್​ ದೇ ಎಕ್ಸ್​ಪ್ರೆಸ್​ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಭಾರತ ಮಹಿಳೆಯರ ತಂಡದ ಮಾಜಿ ವೇಗದ ಬೌಲರ್​ ಜೂಲನ್ ಗೋಸ್ವಾಮಿ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಈ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ ಜೂಲನ್​ ಗೋಸ್ವಾಮಿ ಪಾತ್ರವನ್ನು ಮಾಡಿದ್ದಾರೆ.

Continue Reading
Advertisement
french open novak djokovic
ಕ್ರೀಡೆ5 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ10 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema20 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema23 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ27 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್40 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ51 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ1 hour ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ2 hours ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ2 hours ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ1 hour ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!