Salman Khan hugs a young fan at airport Salman Khan: ಸಲ್ಮಾನ್‌ ಖಾನ್‌ ಕಂಡೊಡನೆ ಓಡಿ ಬಂದು ಬಿಗಿಯಾಗಿ ತಬ್ಬಿಕೊಂಡ ಬಾಲಕ; ವಿಡಿಯೊ ವೈರಲ್‌ - Vistara News

South Cinema

Salman Khan: ಸಲ್ಮಾನ್‌ ಖಾನ್‌ ಕಂಡೊಡನೆ ಓಡಿ ಬಂದು ಬಿಗಿಯಾಗಿ ತಬ್ಬಿಕೊಂಡ ಬಾಲಕ; ವಿಡಿಯೊ ವೈರಲ್‌

ನಟ ಸಲ್ಮಾನ್‌ ಖಾನ್‌ (Salman Khan) ಬಹು ದಿನಗಳ ಬಳಿಕ ಹೊಸ ಲುಕ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ನಟನನ್ನು ಕಾಣುತ್ತಿದ್ದಂತೆ ಹೆಚ್ಚಿನ ಭದ್ರತೆಯ ನಡಯವೆಯೂ ಬಾಲಕ ಓಡಿ ಬಂದು ಸಲ್ಮಾನ್‌ ಖಾನ್‌ ಅವರನ್ನು ತಬ್ಬಿಕೊಂಡಿದ್ದಾನೆ.

VISTARANEWS.COM


on

Salman Khan hugs a young fan at airport
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ; ನಟ ಸಲ್ಮಾನ್‌ ಖಾನ್‌ (Salman Khan) ಬಹು ದಿನಗಳ ಬಳಿಕ ಹೊಸ ಲುಕ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ನಟನನ್ನು ಕಾಣುತ್ತಿದ್ದಂತೆ ಹೆಚ್ಚಿನ ಭದ್ರತೆಯ ನಡಯವೆಯೂ ಬಾಲಕ ಓಡಿ ಬಂದು ಸಲ್ಮಾನ್‌ ಖಾನ್‌ ಅವರನ್ನು ತಬ್ಬಿಕೊಂಡಿದ್ದಾನೆ. ಸಲ್ಲು ಕೂಡ ಬಾಲಕನಿಗೆ ಹಗ್ ಮಾಡಿದ್ದಾರೆ. ಪಾಪರಾಜಿ(ಫೋಟೊಗ್ರಾಫರ್‌ಗಳ) ಖಾತೆಯಲ್ಲಿ ಈ ವಿಡಿಯೊ ಪೋಸ್ಟ್‌ ಮಾಡಿಕೊಂಡಿದ್ದು, ಇದೀಗ ವಿಡಿಯೊ ವೈರಲ್‌ ಆಗಿದೆ.

ಸಲ್ಮಾನ್‌ ಖಾನ್‌ ಅಭಿಮಾನಿಯೊಂದಿಗೆ ಇರುವ ಮುದ್ದಾದ ಕ್ಷಣವನ್ನು ಪಾಪರಾಜಿಗಳು ( ಫೋಟೊಗ್ರಾಫರ್‌ಗಳ) ಸೆರೆಹಿಡಿದಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೊದಲ್ಲಿ ಸಲ್ಮಾನ್‌ ಮುಂಬೈ ನಿಲ್ದಾಣದಲ್ಲಿ ಪ್ರವೇಶ ದ್ವಾರದ ಕಡೆಗೆ ಹೋಗುತ್ತಿದ್ದಂತೆ, ಅವರ ಅಭಿಮಾನಿ ಬಾಲಕ ಓಡಿ ಬಂದು ಅವರನ್ನು ಬಿಗಿಯಾಗಿ ತಬ್ಬಿಕೊಂಡಿದ್ದಾನೆ. ಸಲ್ಮಾನ್ ಅವರ ಮುಖದಲ್ಲಿ ನಗು ಇತ್ತು. ಅಷ್ಟೇ ಅಲ್ಲದೇ ಬಾಲಕನ ಬೆನ್ನನ್ನು ಪ್ರೀತಿಯಿಂದ ತಟ್ಟಿದ್ದಾರೆ. ವಿಡಿಯೊ ವೈರಲ್‌ ಆಗುತ್ತಿದ್ದಂತೆ ಸಲ್ಲು ಅಭಿಮಾನಿಯೊಬ್ಬರು ʻ ಎಂತಹ ಒಳ್ಳೆಯ ವ್ಯಕ್ತಿತ್ವʼʼ ಎಂದು ಕಮೆಂಟ್‌ ಮಾಡಿದ್ದಾರೆ. “ಈ ಹುಡುಗ ತುಂಬಾ ಅದೃಷ್ಟಶಾಲಿ” ಎಂದು ಇನ್ನೊಬ್ಬರು ಬರೆದಿದ್ದಾರೆ.

ಸಲ್ಮಾನ್ ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಸೆಟ್‌ನಲ್ಲಿ ಶೂಟಿಂಗ್ ಮಾಡುವಾಗ ಗಾಯಗೊಂಡಿದ್ದರು. ತಮ್ಮ ಭುಜಕ್ಕೆ ಸ್ವಲ್ಪ ಗಾಯವಾಗಿದೆ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಲು ಟ್ವಿಟರ್‌ನಲ್ಲಿ ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದರು.
ಸಲ್ಮಾನ್ ಕೊನೆಯದಾಗಿ ʻಕಿಸಿ ಕಾ ಭಾಯ್ ಕಿಸಿ ಕಿ ಜಾನ್ʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಫರ್ಹಾದ್ ಸಾಮ್ಜಿ ನಿರ್ದೇಶನದ ಈ ಸಿನಿಮಾ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು.

ಇದನ್ನೂ ಓದಿ: Salman Khan: 3 ದಶಕದ ಬಾಡಿಗಾರ್ಡ್‌ ಶೇರಾಗೆ ಜನ್ಮದಿನದ ಶುಭ ಕೋರಿದ ಸಲ್ಮಾನ್‌ ಖಾನ್

ವೈರಲ್‌ ವಿಡಿಯೊ

ಮನೀಶ್ ಶರ್ಮಾ ನಿರ್ದೇಶನದ ಟೈಗರ್ 3 ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಕೂಡ ನಟಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Ondu Sarala Premakathe: ಒಟಿಟಿಗೆ ಬಂದೇ ಬಿಡ್ತು ʻಒಂದು ಸರಳ ಪ್ರೇಮಕಥೆʼ; ಕನ್ನಡಿಗರ ಆಕ್ರೋಶ!

Ondu Sarala Premakathe: ಸಿಂಪಲ್ ಸುನಿ ಮತ್ತೊಂದು ಪ್ರೇಮಕಥೆಯನ್ನು ಪ್ರೇಕ್ಷಕರಿಗೆ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸಿನಿಮಾ ಅಮೆಜಾನ್‌ ಪ್ರೈಂಗೆ ಲಗ್ಗೆ ಇಟ್ಟಿದೆ.

VISTARANEWS.COM


on

Ondu Sarala Premakathe ott in amazon prime
Koo

ಬೆಂಗಳೂರು: ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ʻಒಂದು ಸರಳ ಪ್ರೇಮಕಥೆʼ ಸಿನಿಮಾ (Ondu Sarala Premakathe) ಫೆಬ್ರವರಿ 8ರಂದು ತೆರೆ ಕಂಡಿತ್ತು. ಯಶಸ್ವಿ ಪ್ರದರ್ಶನ ಕೂಡ ಕಂಡಿದೆ. ಇದೀಗ ಅದು ಸದ್ದಿಲ್ಲದೆ ಒಟಿಟಿಗೆ ಲಗ್ಗೆ ಇಟ್ಟಿದೆ. ಅಮೆಜಾನ್‌ ಪ್ರೈಂನಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ. ಶೀಘ್ರದಲ್ಲೇ ಸ್ಟಾರ್‌ ಸುವರ್ಣ ಕಿರುತೆರೆ ವಾಹಿನಿಯಲ್ಲಿ ಸಿನಿಮಾ ಪ್ರೀಮಿಯರ್ ಆಗಲಿದೆ. ಆದರೆ ಕನ್ನಡಿಗರು ಅಮೆಜಾನ್‌ ಪ್ರೈಮ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಏಕೆಂದರೆ, ಬೇರೆ ಭಾಷೆಯ ಚಿತ್ರಗಳಿಗೆ ಸಾಕಷ್ಟು ಮೊದಲೇ ಭಾರಿ ಪ್ರಚಾರ ಕೊಡುವ ಅಮೆಜಾನ್‌ ಪ್ರೈಂ, ಈ ಕನ್ನಡ ಚಿತ್ರವನ್ನು ಸದ್ದಿಲ್ಲದೆ ಬಿಡುಗಡೆ ಮಾಡುತ್ತಿದೆ.

ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್, ನಾಯಕ ವಿನಯ್, ನಾಯಕಿಯರಾದ ಸ್ವಾತಿಷ್ಠಾ, ಮಲ್ಲಿಕಾ ಅಮೋಘ ಅಭಿನಯ, ವೀರ್ ಸಮರ್ಥ್ ಅವರ ಟ್ಯೂನ್ ಸಿನಿರಸಿಕರು ಸಖತ್ ಇಷ್ಟಪಟ್ಟಿದ್ದರು. ರಾಘವೇಂದ್ರ ರಾಜ್ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮೆರಾ ಶ್ರಮವಿದೆ.

ʻʻಬೇರೆ ಭಾಷೆಗಳ ಸಿನಿಮಾಗಳನ್ನು ಸ್ಟ್ರೀಮಿಂಗ್ ಮಾಡುವಾಗ ಮೊದಲೇ ದಿನಾಂಕ ನಿಗದಿ ಮಾಡಿ ಘೋಷಣೆ ಮಾಡುತ್ತಾರೆ. ಆದರೆ ಕನ್ನಡ ಸಿನಿಮಾಗಳಿಗೆ ಹಾಗೇ ಇಲ್ಲʼʼ ಎಂದು ಕನ್ನಡಿಗರು ಅಮೆಜಾನ್‌ ಪ್ರೈಂ ವಿರುದ್ಧ ಕಮೆಂಟ್‌ ಮಾಡುತ್ತಿದ್ದಾರೆ.

ಸಿಂಪಲ್ ಸುನಿ ಮತ್ತೊಂದು ಪ್ರೇಮಕಥೆಯನ್ನು ಪ್ರೇಕ್ಷಕರಿಗೆ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತಿಳಿ ಹಾಸ್ಯ, ಒನ್ಲೈನರ್ ಡೈಲಾಗ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ಕೊಡುತ್ತಿವೆ.

ಇದನ್ನೂ ಓದಿ: Ondu Sarala Premakathe: ನಾಲ್ಕು ಭಾಷೆಗಳಿಗೆ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಡಬ್; ಒಟಿಟಿ ರಿಲೀಸ್ ಯಾವಾಗ?

ತಮ್ಮ ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆಯುತ್ತಾ ಬರ್ತಿದ್ದಾರೆ. ‘ಅವತಾರ ಪುರುಷ’ ಬಳಿಕ ಸುನಿ ‘ಗತವೈಭವ’ ಸಿನಿಮಾ ಕೈಗೆತ್ತಿಕೊಂಡಿದ್ದರು. ಬಳಿಕ ಸದ್ದಿಲ್ಲದೇ ‘ಒಂದು ಸರಳ ಪ್ರೇಮಕಥೆ’ ಶುರು ಮಾಡಿದ್ದರು.

Continue Reading

ಕಾಲಿವುಡ್

Actor Suriya: `ಸುಧಾ ಕೊಂಗರ’ ನಿರ್ದೇಶನದ ಸಿನಿಮಾ ಇನ್ನೂ ಸೆಟ್ಟೇರಲೇ ಇಲ್ಲ! ಸೂರ್ಯ ಹೇಳಿದ್ದೇನು?

Actor Suriy: ʼಸೂರರೈ ಪೋಟ್ರುʼ ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಶಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಇದಕ್ಕೆ ಸುಧಾ ಕೊಂಗರ ಅವರ ನಿರ್ದೇಶನವಿತ್ತು. ಇದೀಗ ನಿರ್ದೇಶಕಿಯ ʻಪುರಾಣನೂರುʼ ಸಿನಿಮಾ ಇನ್ನೂ ಸೆಟ್ಟೇರಲಿಲ್ಲ. ಈ ಸಿನಿಮಾ ಬಗ್ಗೆ ಸೂರ್ಯ ಅವರೇ ಅಪ್‌ಡೇಟ್‌ ನೀಡಿದ್ದಾರೆ.

VISTARANEWS.COM


on

Sudha Kongara
Koo

ಬೆಂಗಳೂರು: 2020ರಲ್ಲಿ ತೆರೆಕಂಡ ತಮಿಳು ಚಿತ್ರ ʼಸೂರರೈ ಪೋಟ್ರುʼ (Soorarai Pottru) ಯಾರು ತಾನೇ ಮರೆಯಲು ಸಾಧ್ಯ? ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಈ ಸಿನಿಮಾದಲ್ಲಿ ಕಾಲಿವುಡ್‌ ಸೂಪರ್‌ ಸ್ಟಾರ್‌ ಸೂರ್ಯ (Actor Suriya) ಮನೋಜ್ಞ ಅಭಿನಯ (Soorarai Pottru)ನೀಡಿ ಗಮನ ಸೆಳೆದಿದ್ದರು. ಸುಧಾ ಕೊಂಗರ(Sudha Kongara Prasad) ನಿರ್ದೇಶನದ ಈ ಚಿತ್ರ ಮೋಡಿ ಮಾಡಿತ್ತು. ಇದೀಗ ಈ ಜೋಡಿ ಮತ್ತೆ ‘ಪುರಾಣನೂರು’ (Puranaanooru) ಚಿತ್ರಕ್ಕಾಗಿ ಒಂದಾಗಿದೆ. ಅಕ್ಟೋಬರ್ 2023ರಲ್ಲಿ ಸಿನಿಮಾ ಘೋಷಿಸಿದ್ದರೂ, ಇನ್ನೂ ಸೆಟ್ಟೇರಿಲ್ಲ. ಇದೀಗ ಈ ಸಿನಿಮಾ ಬಗ್ಗೆ ಸೂರ್ಯ ಅವರೇ ಅಪ್‌ಡೇಟ್‌ ನೀಡಿದ್ದಾರೆ.

ಸೂರ್ಯ ಅವರು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದುʻʻ ʻ ಪುರಾಣನೂರುʼ ಸಿನಿಮಾ ಸೆಟ್ಟೇರಲು ಇನ್ನಷ್ಟು ಸಮಯ ಬೇಕು. ಈ ಸಿನಿಮಾ ತುಂಬಾ ವಿಶೇಷ ಮತ್ತು ಹೃದಯಕ್ಕೆ ಹತ್ತಿರವಾಗಿದೆ. ಶೀಘ್ರದಲ್ಲೇ ಹೊಸ ವಿಚಾರ ಹಂಚಿಕೊಳ್ಳುತ್ತೇವೆʼʼ ಎಂದಿದ್ದಾರೆ. ಚಿತ್ರದಲ್ಲಿ ದುಲ್ಕರ್ ಸಲ್ಮಾನ್, ನಜ್ರಿಯಾ ನಾಜಿಮ್ ಮತ್ತು ವಿಜಯ್ ವರ್ಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರಕ್ಕೆ ಜಿವಿ ಪ್ರಕಾಶ್ ಕುಮಾರ್ ಅವರ ಸಂಗೀತವಿದೆ. 2ಡಿ ಎಂಟರ್‌ಟೈನ್‌ಮೆಂಟ್ ಮತ್ತು ಮೀನಾಕ್ಷಿ ಸಿನಿಮಾಸ್ ಜಂಟಿಯಾಗಿ ನಿರ್ಮಿಸಿದೆ.

ಇದನ್ನೂ ಓದಿ: Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ದೂರು!

`ಸೂರರೈ ಪೋಟ್ರುʼ ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಶಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್‌ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಸೂರ್ಯ ಅತ್ಯುತ್ತಮ ನಟ, ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಅಲ್ಲದೆ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕೆ ಜಿ.ವಿ.ಪ್ರಕಾಶ್‌ ಕುಮಾರ್‌ಗೆ ನ್ಯಾಶನಲ್‌ ಅವಾರ್ಡ್‌ ಬಂದಿತ್ತು. ಅತ್ಯುತ್ತಮ ಚಿತ್ರವಾಗಿಯೂ ಆಯ್ಕೆಯಾಗಿತ್ತು. ಈ ತಂಡ ಹೊಸ ಪ್ರಾಜೆಕ್ಟ್‌ಗೆ ಮತ್ತೆ ಒಂದಾಗಿದೆ.ಮ್ಯೂಸಿಕ್ ಮಾಂತ್ರಿಕ ಜಿ.ವಿ.ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ. ಸದ್ಯ ಸೂರ್ಯ ʼಕಂಗುವಾʼ, ʼವಾಡಿವಾಸಲ್‌ʼ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಸೂರ್ಯ ʼಕಂಗುವಾʼ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಶಿವ ನಿರ್ದೇಶನದ ಈ ಸಿನಿಮಾ 300–350 ಕೋಟಿ ರೂ.ಗಳಲ್ಲಿ ತಯಾರಾಗಲಿದ್ದು, ನಿರೀಕ್ಷೆ ಮೂಡಿಸಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಸೂರ್ಯ 6 ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ ನಟಿ ದಿಶಾ ಪಠಾಣಿ ನಾಯಕಿಯಾಗಿ ನಟಿಸಿದ್ದು, ಬಾಬಿ ಡಿಯೋಲ್‌, ಯೋಗಿ ಬಾಬು ಮತ್ತಿತರರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಸೂರ್ಯ ಭರ್ಜರಿ ಆ್ಯಕ್ಷನ್ ಸೀನ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. 2024ರ ಆರಂಭದಲ್ಲಿ ಇದು ಬಿಡುಗಡೆಯಾಗುವ ಸಾಧ್ಯತೆ ಇದೆ. 3Dಯಲ್ಲೂ ಈ ಚಿತ್ರ ಮೂಡಿ ಬರಲಿದೆ. ಸದ್ಯ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ.

Continue Reading

ಟಾಲಿವುಡ್

SS Rajamouli: ಮಹೇಶ್‌ ಬಾಬು ಸಿನಿಮಾ ಬಗ್ಗೆ ಜಪಾನ್‌ನಲ್ಲಿ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಜಮೌಳಿ!

SS Rajamouli: ಜಪಾನ್‌ನಲ್ಲಿ ಮತ್ತೊಮ್ಮೆ ‘ಆರ್‌ಆರ್‌ಆರ್’ ಸಿನಿಮಾ ಸ್ಕ್ರೀನಿಂಗ್‌ ಆಗಿದೆ. ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ಹಾಜರಾಗಿದ್ದರು ಎಸ್‌ಎಸ್ ರಾಜಮೌಳಿ.

VISTARANEWS.COM


on

SS Rajamouli soft launches Mahesh Babu
Koo

ಬೆಂಗಳೂರು: ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದಾರೆ. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದರು.

ಇದನ್ನೂ ಓದಿ: SS Rajamouli: ಇಂಡೋನೇಷಿಯಾದ ನಟಿ ಜತೆ ಮಹೇಶ್ ಬಾಬು ರೊಮ್ಯಾನ್ಸ್‌!

‘RRR’ ನ ಅದ್ಭುತ ಯಶಸ್ಸಿನ ನಂತರ, ರಾಜಮೌಳಿ ಮತ್ತು ಮಹೇಶ್ ಬಾಬು ತಮ್ಮ ಮೆಗಾ-ಬಜೆಟ್ ಚಲನಚಿತ್ರವನ್ನು ಘೋಷಿಸಿದ್ದರು. ಇದು ಬಹು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಚಿತ್ರಕ್ಕಾಗಿ ಹಾಲಿವುಡ್ ಸ್ಟುಡಿಯೊ ಜತೆಗೂ ಒಪ್ಪಂದ ಮಾಡಿಕೊಳ್ಳಲು ರಾಜಮೌಳಿ ನಿರ್ಧರಿಸಿದ್ದಾರೆ.

ಸದ್ಯ ಚಿತ್ರಕ್ಕೆ ʼಎಸ್‌.ಎಸ್‌.ಬಿ.ಎಂ. 29ʼ (SSMB 29) ಎನ್ನುವ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಮೊದಲ ಬಾರಿಗೆ ಇಬ್ಬರು ಚಿತ್ರಕ್ಕಾಗಿ ಒಂದಾಗುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಮತ್ತೊಂದು ಮುಖ್ಯ ಕಾರಣ.

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಕಾಲಿವುಡ್

Thalapathy Vijay: 14 ವರ್ಷಗಳ ಬಳಿಕ ದಳಪತಿ ವಿಜಯ್‌ ಕೇರಳಕ್ಕೆ; ಕಾರಿನ ಗ್ಲಾಸ್ ಪೀಸ್ ಪೀಸ್!

Thalapathy Vijay ‘ಗ್ರೇಟೆಸ್ಟ್ ಆಫ್ ಆಲ್ ಟೈಮ್ ಸಿನಿಮಾ ಚಿತ್ರೀಕರಣಕ್ಕೆಂದು 14 ವರ್ಷಗಳ ಬಳಿಕ ದಳಪತಿ ವಿಜಯ್‌ ಕೇರಳಕ್ಕೆ ಬಂದಿದ್ದಾರೆ. ಈ ವೇಳೆ ವಿಜಯ್ ಪ್ರಯಾಣಿಸುತ್ತಿದ್ದ ಕಾರಿಗೆ ಅಭಿಮಾನಿಗಳಿಂದ ಹಾನಿಯಾಗಿದೆ. ಇಲ್ಲಿದೆ ವಿಡಿಯೊ.

VISTARANEWS.COM


on

Thalapathy Vijay
Koo

ಬೆಂಗಳೂರು: ವೆಂಕಟ್ ಪ್ರಭು ನಿರ್ದೇಶನದ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಚಿತ್ರ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಗೋಟ್)’ (‘Greatest Of All Time (GOAT)’) ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಗೂ ಮುನ್ನ, ಅದರ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ನಟ ಕೇರಳಕ್ಕೆ ಭೇಟಿ ನೀಡಿದ್ದಾರೆ. 14 ವರ್ಷಗಳ ಸುದೀರ್ಘ ಅವಧಿಯ ನಂತರ ಅವರು ಕೇರಳ ರಾಜ್ಯಕ್ಕೆ ಮರಳಿದ್ದರು. ಜತೆಗೆ ವಿಜಯ್ ಪ್ರಯಾಣಿಸುತ್ತಿದ್ದ ಕಾರಿಗೆ ಅಭಿಮಾನಿಗಳಿಂದ ಹಾನಿಯಾಗಿದೆ. ವಿಡಿಯೊವೊಂದರಲ್ಲಿ ಕಾರಿನ ಗ್ಲಾಸ್‌ ಪುಡಿ ಪುಡಿಯಾಗಿವೆ.

ವಿಜಯ್ ಅವರು ಈ ಸಿನಿಮಾದ ಚಿತ್ರೀಕರಣಕ್ಕಾಗಿ ಒಂದು ವಾರಗಳ ಕಾಲ ಕೇರಳದಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವಿಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಮಹತ್ವದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ಅಷ್ಟೇ ಅಲ್ಲ, ‘ವಿಜಯ್ ಸ್ಟಾರ್ಮ್ ಹಿಟ್ಸ್ ಕೇರಳ’ ಮತ್ತು ‘ಗೋಟ್’ ಎಂಬ ಹ್ಯಾಶ್‌ಟ್ಯಾಗ್‌ಗಳು ಎಕ್ಸ್‌ನಲ್ಲಿ ಟ್ರೆಂಡ್‌ ಆಗಿವೆ. ಎಷ್ಟೇ ಕಟ್ಟು ನಿಟ್ಟಿದ್ದರೂ ಅಭಿಮಾನಿಗಳು ನಟನ ಕಾರಿನ ಗ್ಲಾಸ್‌ವನ್ನು ಪುಡಿ ಪುಡಿ ಮಾಡಿದ್ದಾರೆ.

ಇದನ್ನೂ ಓದಿ: Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌!

ʻGOAT’ ಸಿನಿಮಾದಲ್ಲಿ ವಿಜಯ್ ಜತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ತ್ರಿಷಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ.

“ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

Continue Reading
Advertisement
Ketan Inamdar
ಪ್ರಮುಖ ಸುದ್ದಿ10 mins ago

Gujarat BJP : ಒಳಗಿನ ಕರೆಗೆ ಓಗೊಟ್ಟು ಬಿಜೆಪಿಗೆ ರಾಜೀನಾಮೆ ನೀಡಿದ ಗುಜರಾತ್ ಶಾಸಕ!

baby bath
ವೈರಲ್ ನ್ಯೂಸ್12 mins ago

Viral News: ಬಾಲ್ಯದ ಫೋಟೊ ಗೂಗಲ್‌ ಡ್ರೈವ್‌ಗೆ ಸೇರಿದ್ದೇ ತಪ್ಪಾಯ್ತು: ಈ ಟೆಕ್ಕಿ ಗೋಳು ಯಾರಿಗೂ ಬೇಡ; ಅಂಥಹದ್ದೇನಾಯ್ತು?

Aishwarya Rai
ಬಾಲಿವುಡ್18 mins ago

Aishwarya Rai: ತಂದೆ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಐಶ್ವರ್ಯಾ ರೈ!

Summer Fashion
ಫ್ಯಾಷನ್22 mins ago

Summer Fashion: ಸಮ್ಮರ್‌ ಸೀರೆಯಲ್ಲಿ ನಟಿ ನಿಮಿಕಾರಂತೆ ಆಕರ್ಷಕವಾಗಿ ಕಾಣಲು 5 ಟಿಪ್ಸ್ !

DV Sadananda Gowda Congress
ರಾಜಕೀಯ24 mins ago

DV Sadananda Gowda : ಡಿವಿಎಸ್‌ ಕಾಂಗ್ರೆಸ್‌ ಸೇರ್ಪಡೆಗೆ ಒಕ್ಕಲಿಗರ ಸಂಘ ಬೆಂಬಲ; ಕೈ ತೀರ್ಮಾನ ಏನು?

Karti Chidambaram
ಪ್ರಮುಖ ಸುದ್ದಿ31 mins ago

Chinese visa scam : ಚೀನಾ ವೀಸಾ ಹಗರಣ: ಕಾರ್ತಿ ಚಿದಂಬರಂ ಸೇರಿ ಹಲವರಿಗೆ ಕೋರ್ಟ್​​ ಸಮನ್ಸ್

Tough fight between BJP and Congress in Chamarajanagar
ರಾಜಕೀಯ45 mins ago

Vistara News Polling Booth: ಚಾಮರಾಜನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಟಫ್‌ ಫೈಟ್; ಯಾರಿಗೆಷ್ಟು ಮತ?

Additional Special bus facility for Sri Marikamba Devi Jatra in Sirsi
ಉತ್ತರ ಕನ್ನಡ50 mins ago

Uttara Kannada News: ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಇಂದಿನಿಂದ ಹೆಚ್ಚುವರಿ ವಿಶೇಷ ಬಸ್

Modi Speech
ಪ್ರಮುಖ ಸುದ್ದಿ52 mins ago

Narendra Modi : ಸೇಲಂ ರ್ಯಾಲಿಯ ಭಾಷಣದಲ್ಲಿ ಭಾವುಕರಾದ ಪ್ರಧಾನಿ ಮೋದಿ; ಅವರು ಹೇಳಿದ್ದೇನು?

Ondu Sarala Premakathe ott in amazon prime
ಸ್ಯಾಂಡಲ್ ವುಡ್1 hour ago

Ondu Sarala Premakathe: ಒಟಿಟಿಗೆ ಬಂದೇ ಬಿಡ್ತು ʻಒಂದು ಸರಳ ಪ್ರೇಮಕಥೆʼ; ಕನ್ನಡಿಗರ ಆಕ್ರೋಶ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು4 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು23 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ2 days ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ4 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ5 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌