Samantha after Shaakuntalam travel abroad to shoot Samantha Ruth Prabhu: `ಶಾಕುಂತಲಂ' ಸಿನಿಮಾ ಫ್ಲಾಪ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ್ಯಾಕೆ ಸಮಂತಾ? ಕಾರಣ ಇಲ್ಲಿದೆ! - Vistara News

South Cinema

Samantha Ruth Prabhu: `ಶಾಕುಂತಲಂ’ ಸಿನಿಮಾ ಫ್ಲಾಪ್ ಆದ ಬೆನ್ನಲ್ಲೇ ವಿದೇಶಕ್ಕೆ ಹಾರಿದ್ಯಾಕೆ ಸಮಂತಾ? ಕಾರಣ ಇಲ್ಲಿದೆ!

ಮಿಶ್ರ ವಿಮರ್ಶೆಗಳನ್ನು ಪಡೆದ ಶಾಕುಂತಲಂ ಚಿತ್ರದಲ್ಲಿ ಸಮಂತಾ (Samantha Ruth Prabhu) ಕೊನೆಯದಾಗಿ ಕಾಣಿಸಿಕೊಂಡಿದ್ದರು. ಯಶೋದಾ ನಂತರ ಇದು ಅವರ ಮೊದಲ ದೊಡ್ಡ ಬಜೆಟ್‌ ಸಿನಿಮಾ ಇದಾಗಿದೆ.

VISTARANEWS.COM


on

Samantha after Shaakuntalam travel abroad to shoot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟಿ ಸಮಂತಾ (Samantha Ruth Prabhu) ಅಭಿನಯದ ಶಾಕುಂತಲಂ ಸಿನಿಮಾ ಬಿಡುಗಡೆಗೊಂಡಿದೆ. 50 ಕೋಟಿ ರೂ. ಬಜೆಟ್‌ ಸಿನಿಮಾ ಆಗಿದ್ದರೂ, 10 ಕೋಟಿ ರೂ. ಕೂಡ ಗಳಿಕೆ ಕಾಣದ ಸ್ಥಿತಿಯಲ್ಲಿ ಇದೆ. ಈಗಾಗಲೇ ನಟಿಗೆ ಫ್ಲಾಪ್ ರಾಣಿ ಎಂಬ ಪಟ್ಟ ಕೂಡ ಬಂದಿದೆ. ಹಲವು ಟ್ರೋಲ್‌ಗೂ ಗುರಿಯಾಗಿದ್ದಾರೆ. ಇದ್ಯಾವುದನ್ನೂ ಲೆಕ್ಕಿಸದೇ ಸಮಂತಾ ಸದ್ಯ ತನ್ನ ಮುಂಬರುವ ಪ್ರಾಜೆಕ್ಟ್ ʻಸಿಟಾಡೆಲ್ʼ ವೆಬ್‌ ಸಿರೀಸ್‌ ಕಡೆಗೆ ಗಮನ ಹರಿಸಿದ್ದಾರೆ.

ಈ ವೆಬ್‌ ಸಿರೀಸ್‌ ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ. ವರುಣ್ ಧವನ್ ಜತೆ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮುಂದಿನ ಶೆಡ್ಯೂಲ್ ಚಿತ್ರೀಕರಣಕ್ಕಾಗಿ ನಟಿ ವಿದೇಶ ಪ್ರವಾಸ ಮಾಡಲಿದ್ದಾರೆ. ತಮ್ಮ ಇನ್‌ಸ್ಟಾದಲ್ಲಿ ಪೋಸ್ಟ್‌ ಹಂಚಿಕೊಂಡು ಅದೇ ಸುಳಿವು ನೀಡಿದ್ದಾರೆ. ನಟಿ ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಫೋಟೊ ಜತೆಗೆ ವಿಮಾನದ GIF (ಗಿಫ್‌) ಇದೆ.

ರುಸ್ಸೋ ಬ್ರದರ್ಸ್‌ನ ಅಂತಾರಾಷ್ಟ್ರೀಯ ಸರಣಿ ಸಿಟಾಡೆಲ್‌ನ ಭಾರತೀಯ ಅವತರಣಿಕೆಯಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ನಟಿಸಿದ್ದಾರೆ. ರಾಜ್ ನಿಡಿಮೋರು ಮತ್ತು ಕೃಷ್ಣ ಡಿಕೆ ಅವರು ತಮ್ಮ ಬ್ಯಾನರ್ ಡಿ2ಆರ್ ಫಿಲ್ಮ್ಸ್ ಅಡಿಯಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಈ ಸರಣಿಯನ್ನು D2R ಫಿಲ್ಮ್ಸ್ ಮತ್ತು ಅಮೆಜಾನ್ ಸ್ಟುಡಿಯೋಸ್ ನಿರ್ಮಿಸಿದೆ.

ಮಿಶ್ರ ವಿಮರ್ಶೆಗಳನ್ನು ಪಡೆದ ಶಾಕುಂತಲಂ ಚಿತ್ರದಲ್ಲಿ ಸಮಂತಾ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಯಶೋದಾ ನಂತರ ಇದು ಅವರ ಮೊದಲ ದೊಡ್ಡ ಬಜೆಟ್‌ ಸಿನಿಮಾ ಇದಾಗಿದೆ. ಸದ್ಯ ಸ್ಯಾಮ್ ಸಿಟಾಡೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ವರುಣ್ ಧವನ್ ಜತೆ ನಟಿಸುತ್ತಿದ್ದಾರೆ.

ಇದನ್ನೂ ಓದಿ: Samantha Ruth Prabhu: ಅತ್ಯಂತ ಕಡಿಮೆ ಗಳಿಕೆ ಕಂಡ ಶಾಕುಂತಲಂ: ʻಪ್ಲಾಪ್‌ ರಾಣಿʼ ಎಂಬ ಹಣೆಪಟ್ಟಿ ಹೊತ್ತ ಸಮಂತಾ!

Samantha Ruth Prabhu

ಸಮಂತಾ ರುತ್ ಪ್ರಭು (Samantha) ಮತ್ತು ವಿಜಯ್ ದೇವರಕೊಂಡ (Vijay Devarakonda) ಕಾಂಬಿನೇಶನ್‌ ಸಿನಿಮಾವಾದ ಖುಷಿ ಸಿನಿಮಾ ಇದೇ ಸೆಪ್ಟೆಂಬರ್‌ 1ರಂದು ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. 2018ರ ಮಹಾನಟಿ ಚಿತ್ರದ ನಂತರ ವಿಜಯ್‌ ಹಾಗೂ ಸ್ಯಾಮ್‌ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಖುಷಿ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

SS Rajamouli: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಘೋಷಿಸಿದರು. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

VISTARANEWS.COM


on

SS Rajamouli Announces Baahubali Crown of Blood Animated Series
Koo

ಬೆಂಗಳೂರು: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಅನ್ನು ಮಂಗಳವಾರ (ಏ.30) ಘೋಷಿಸಿದರು. ಶೀಘ್ರದಲ್ಲೇ ಟ್ರೈಲರ್‌ ಬಿಡುಗಡೆಯಾಗಲಿದೆ ಎಂದು ರಾಜಮೌಳಿ ಅವರು ಖಚಿತಪಡಿಸಿದ್ದಾರೆ. ಟೈಟಲ್‌ ಜತೆಗೆ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.

ವಿಡಿಯೊದಲ್ಲಿ, ದೃಶ್ಯಗಳೊಂದಿಗೆ, ರಾಜಮೌಳಿ ಬರೆದಿದ್ದಾರೆ, “ಮಾಹಿಷ್ಮತಿಯ ಜನರು ಅವನ ಹೆಸರನ್ನು ಜಪಿಸಿದಾಗ, ಬ್ರಹ್ಮಾಂಡದ ಯಾವುದೇ ಶಕ್ತಿಯು ಅವನನ್ನು ಹಿಂತಿರುಗಿವುಕೆಯನ್ನು ತಡೆಯಲು ಸಾಧ್ಯವಿಲ್ಲ. ಬಾಹುಬಲಿ: ಕ್ರೌನ್ ಆಫ್ ಬ್ಲಡ್, ಆನಿಮೇಟೆಡ್ ಸಿರೀಸ್‌ ಟ್ರೈಲರ್‌ ಶೀಘ್ರದಲ್ಲೇ ಬರಲಿದೆ!ʼಎಂದು ಬರೆದುಕೊಂಡಿದ್ದಾರೆ. ರಾಜಮೌಳಿ ಅವರೇ ಇದನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ‘ಬಾಹುಬಲಿ’ ಸಿನಿಮಾ ಕಥೆಯನ್ನೇ ಹೊಂದಿರಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಬಾಹುಬಲಿಗೆ ಅನಿಮೇಟೆಡ್ ಸ್ಪಿನ್ ನೀಡಿರುವುದು ಇದೇ ಮೊದಲಲ್ಲ. 2017 ರಲ್ಲಿ, ರಾಜಮೌಳಿ ʻಬಾಹುಬಲಿ: ದಿ ಲಾಸ್ಟ್ ಲೆಜೆಂಡ್ಸ್; ಎಂಬ ಶೀರ್ಷಿಕೆಯ ನಾಲ್ಕು-ಋತುವಿನ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದರು. ಸರಣಿಯನ್ನು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: SS Rajamouli: ಹೆಂಡತಿ ಜತೆ ರಾಜಮೌಳಿ ಲವ್ಲಿ ಡ್ಯೂಯೆಟ್‌! ನೀವೆ ನೋಡಿ ಈ ಜೋಡಿಯ ಡ್ಯಾನ್ಸ್‌!

ಬಾಹುಬಲಿ ಬಿಡುಗಡೆಯ ನಂತರ ಭಾರತದಲ್ಲಿ ಮಾತ್ರವಲ್ಲದೆ ಜಪಾನ್, ಚೀನಾ ಮತ್ತು ಪ್ರಮುಖ ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹಲವಾರು ದಾಖಲೆಗಳನ್ನು ಮುರಿದಿದೆ. ಬಾಹುಬಲಿ 2 ಅನ್ನು ಎಸ್‌ಎಸ್ ರಾಜಮೌಳಿ ನಿರ್ದೇಶಿಸಿದ್ದಾರೆ. ದೇಶೀಯ ಬಾಕ್ಸ್ ಆಫೀಸ್ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಬಾಹುಬಲಿ 2 ಈಗಾಗಲೇ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ರಮ್ಯಾ ಕೃಷ್ಣನ್, ಸತ್ಯರಾಜ್ ಮತ್ತು ನಾಸರ್ ಸೇರಿದಂತೆ ಪ್ರತಿಭಾವಂತ ನಟರನ್ನು ಒಳಗೊಂಡಿತ್ತು ಬಾಹುಬಲಿ ಸಿನಿಮಾ.

‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ: SS Rajamouli: ಜಪಾನ್‌ ಭೂಕಂಪದಲ್ಲಿ ಬದುಕುಳಿದ ರಾಜಮೌಳಿ, ಮಗ ಕಾರ್ತಿಕೇಯ!

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Vinay Gowd: . ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Got three Film Offer
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವಿನಯ್‌ ಗೌಡ ( Vinay Gowda) ಅವರಿಗೆ ಹಲವು ಆಫರ್‌ಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ವಿನಯ್‌ ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಇದರಲ್ಲಿ ಸಖತ್‌ ಹೆಸರು ಗಳಿಸಿದ್ದರು.

ಹಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸಿದ್ದರು ವಿನಯ್‌. ಇದೀಗ ಮಾಧ್ಯಮದವೊಂದರಲ್ಲಿ ತಮಗೆ ಬಂದ ಆಫರ್‌ಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾಗಳು, ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

Continue Reading

ಸಿನಿಮಾ

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

Family Drama Trailer: ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ ಆಕರ್ಷ್ ಈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ.

VISTARANEWS.COM


on

Family Drama Trailer Out
Koo

ಬೆಂಗಳೂರು: 2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದೇ ಸುದ್ದಿ. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ‘ (Family Drama Trailer) ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ ಅಂತೀರಾ? ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾ ತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ ‘ಫ್ಯಾಮಿಲಿ ಡ್ರಾಮ’.

ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ಬಿಡುಗಡೆಗೆ ರೆಡಿಯಾಗಿರುವ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜತೆಗೆ ಒಂದಿಷ್ಟು ಕಿರು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

ಇನ್ನೂ ಈ ಸಿನಿಮಾದಲ್ಲಿ ʻಆಚಾರ್ ಆ್ಯಂಡ್ ಕೋʼ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ, ʻಡೇರ್ ಡೆವಿಲ್ ಮುಸ್ತಾಫʼ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ʻಆಚಾರ್ ಆ್ಯಂಡ್ ಕೋʼ ಬಳಿಕ ಸಿಂಧು (Sindhu Sreenivasa Murthy) ಒಪ್ಪಿಕೊಂಡ ಚಿತ್ರ ಇದಾಗಿದೆ. ‘ಫ್ಯಾಮಿಲಿ ಡ್ರಾಮ’ ಡಾರ್ಕ್‌ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ತಂಡ.

ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು.

ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.

Continue Reading

ಸ್ಯಾಂಡಲ್ ವುಡ್

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

Dheeren Rajkumar: ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

VISTARANEWS.COM


on

dheeren rajkumar announces a new film change his name
Koo

ಬೆಂಗಳೂರು: ‘ಶಿವ 143’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಧೀರೇನ್ ರಾಮ್‌ಕುಮಾರ್ (Dheeren Ramkumar) ಮೊದಲ ಪ್ರಯತ್ನದಲ್ಲಿ ಸೋತಿದ್ದರು. ಎರಡು ವರ್ಷದ ಹಿಂದೆ ಬಂದಿದ್ದ ‘ಶಿವ 143’ ಸಿನಿಮಾ ಅಷ್ಟಾಗಿ ಸದ್ದು ಮಾಡಲಿಲ್ಲ. ಇದೀಗ ಹೊಸ ಸಿನಿಮಾ ಸಾಹಸಕ್ಕೆ ಧೀರೇನ್ ಮುಂದಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೊಸ ಸಿನಿಮಾ ಮೂಲಕ ಹೊಸ ಜರ್ನಿ ಎಂದಿದ್ದಾರೆ.

ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ. ಸ್ಟುಡಿಯೋಸ್‌ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. “ರತ್ನನ್ ಪ್ರಪಂಚ” ಮೂಲಕ ರೋಹಿತ್ ಪದಕಿ, “ಪೌಡರ್” ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, “ಗುರುದೇವ್ ಹೊಯ್ಸಳ” ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದೆ.

ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ. ಪ್ರಸ್ತುತವಾಗಿ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರ ಸೆಟ್ಟೇರಿದ್ದು, “ಪೌಡರ್” ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ವರನಟ ರಾಜಕುಮಾರ್ ಪುತ್ರಿ ಪೂರ್ಣಿಮಾ ಮಗ ಧೀರೇನ್‌ ರಾಮ್‌ಕುಮಾರ್‌ (ಧೀರೇನ್ ರಾಜ್‌ಕುಮಾರ್ʼ).

ಇದನ್ನೂ ಓದಿ: Shiva 143 | ಧೀರೇನ್‌ ರಾಮ್‌ಕುಮಾರ್‌ ಚಿತ್ರ ಶಿವ 143 ರಾಜ್ಯಾದ್ಯಂತ ಬಿಡುಗಡೆ : ಅಪ್ಪು ಕಟೌಟ್ ಮುಖ್ಯ ಆಕರ್ಷಣೆ!

ʻʻಶಿವ 143ʼʼ ಸಿನಿಮಾ

ತೆಲುಗಿನ ‘RX100’ ಸಿನಿಮಾ ರೀಮೇಕ್ ಆಗಿದ್ದ ‘ಶಿವ 143’ ಚಿತ್ರಕ್ಕೆ ಅರ್ಜುನ್ ಜನ್ಯಾ ಟ್ಯೂನ್ ಹಾಕಿದ್ದರು. ಅವಿನಾಶ್, ಚರಣ್ ರಾಜ್, ಚಿಕ್ಕಣ್ಣ, ಸಾಧು ಕೋಕಿಲ, ಶೋಭರಾಜ್ ಸೇರಿ ದೊಡ್ಡ ತಾರಾಗಣವೇ ಚಿತ್ರದಲ್ಲಿತ್ತು.
ಈ ಚಿತ್ರ ಜಯಣ್ಣ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಮೂಡಿ ಬಂದಿತ್ತು. ಛಾಯಾಗ್ರಹಣ ಜವಾಬ್ದಾರಿಯನ್ನು ಶಿವ ಹೊತ್ತಿದ್ದರು. ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಚಿತ್ರ ನಿರ್ಮಾಣ ಮಾಡಿದ್ದರು. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದರು.

ನಾಯಕಿಯಾಗಿ ಮಾನ್ವಿತಾ ಕಾಮತ್‌ ನಟಿಸಿದ್ದರು. ಚರಣ್‌ ರಾಜ್‌ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು

ಧೀರೇನ್ ಸಹೋದರಿ ಧನ್ಯಾ ರಾಮ್‌ಕುಮಾರ್ ಕೂಡ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಧನ್ಯಾ ಬಳಿಕ ‘ಹೈಡ್ ಅಂಡ್ ಸೀಕ್’, ‘ಕಾಲಾಪತ್ಥರ್’, ‘ಎಲ್ಲಾ ನಿನಗಾಗಿ’ ಸಿನಿಮಾಗಳಲ್ಲಿ ನಟಿಸಿದರು.

Continue Reading
Advertisement
delhi schools bomb threat
ಪ್ರಮುಖ ಸುದ್ದಿ22 mins ago

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Columbia University
ವಿದೇಶ47 mins ago

Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

High-tec Gadget
ತಂತ್ರಜ್ಞಾನ59 mins ago

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

hassan pen drive case hd revanna prajwal revanna
ಕ್ರೈಂ1 hour ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Bhavyashree Poojary exit Neenade Naa Serial
ಕಿರುತೆರೆ1 hour ago

Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

Heat Wave
ದೇಶ2 hours ago

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

SS Rajamouli Announces Baahubali Crown of Blood Animated Series
ಟಾಲಿವುಡ್2 hours ago

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

Viral video
ವೈರಲ್ ನ್ಯೂಸ್2 hours ago

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

lok sabha election 2024 voting
ಪ್ರಮುಖ ಸುದ್ದಿ2 hours ago

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Aamir Khan on collaborating with SRK, Salman Khan
ಸಿನಿಮಾ2 hours ago

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌