Site icon Vistara News

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Kiran Raj Met Jon Abraham

ಬೆಂಗಳೂರು: ‘777 ಚಾರ್ಲಿ’ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು ನಿರ್ದೇಶಕ ಕಿರಣ್ ರಾಜ್. ಇದೀಗ ಕಿರಣ್‌ ರಾಜ್‌ ಅವರ ಮುಂಬರುವ ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಕಾದಿದ್ದಾರೆ. ಏಕಾಏಕಿ ಕಿರಣ್‌ ರಾಜ್‌ ಅವರು ಖ್ಯಾತ ನಟ ಜಾನ್ ಅಬ್ರಾಹಂ (Jon Abraham) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಿರಣ್‌ ರಾಜ್‌ “ಎಂತಹ ಅದ್ಭುತ ದಿನ” ಎಂದು ಬರೆದುಕೊಂಡಿದ್ದಾರೆ. ಫೋಟೊ ನೋಡಿ ಸಿನಿರಸಿಕರು ಥ್ರಿಲ್‌ ಆಗಿದ್ದಾರೆ.

‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

ಕಿರಣ್‌ ರಾಜ್‌ ಸದ್ಯ ಜಾನ್‌ ಅಬ್ರಾಹಂ ಜತೆ ಫೋಟೊ ಶೇರ್‌ ಮಾಡಿ ʻʻ”ಎಂತಹ ಅದ್ಭುತ ದಿನ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777ಚಾರ್ಲಿ ಬಿಡುಗಡೆಯ ಸಮಯದಲ್ಲಿ ನಾವು ಮೊದಲು ಫೋನ್‌ ಮೂಲಕ ಮಾತನಾಡಿದ್ದೇವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ, ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು! ಜಾನ್ ಅಬ್ರಾಹಂ ತೋರಿದ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ಈ ದಿನಕ್ಕೆ ಕೃತಜ್ಞʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Raj: ನಟ ಕಿರಣ್ ರಾಜ್‌ ಮತ್ತೊಂದು ಸಾಹಸ; ಅತಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿ Ronny ದಾಖಲೆ!

777 ಚಾರ್ಲಿ ಬಳಿಕ ಕಿರಣ್‌ ರಾಜ್‌ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್‌ ಮಾಡಿರಲಿಲ್ಲ. ಈಗ ದಿಢೀರನೇ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿದ ಖುಷಿಯ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಹಾಂ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು.

Exit mobile version