Actor Darshan: ನಟ ದರ್ಶನ್‌ ಇಂದೇ ಆಸ್ಪತ್ರೆಗೆ ಆಡ್ಮಿಟ್‌: ನಾಳೆ ಆಪರೇಷನ್‌! - Vistara News

ಸ್ಯಾಂಡಲ್ ವುಡ್

Actor Darshan: ನಟ ದರ್ಶನ್‌ ಇಂದೇ ಆಸ್ಪತ್ರೆಗೆ ಆಡ್ಮಿಟ್‌: ನಾಳೆ ಆಪರೇಷನ್‌!

Actor Darshan: ಶೂಟಿಂಗ್‌ ಸಮಯದಲ್ಲಿ ದರ್ಶನ್‌ ಅವರ ಕೈಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಅವರ ಕೈಗೆ ಬೆಲ್ಟ್‌ ಹಾಕಲಾಗಿದೆ. ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್‌ ಕೂಡ ಭಾಗಿಯಾಗಿದ್ದರು. ಅವರ ಕೈ ಪೆಟ್ಟಾಗಿದ್ದು ಕಂಡು ಬಂದಿದ್ದು, ಇದೀಗ ನಟ ಆಪರೇಷನ್‌ಗೆ ಒಳಗಾಗಲಿದ್ದಾರೆ. ʻಇಂದು ಆಸ್ಪತ್ರೆಗೆ ಆಡ್ಮಿಟ್‌ ಆಗಿ ನಾಳೆ ಆಪರೇಷನ್‌ ಮಾಡಿಸಿಕೊಳ್ಳಲಿದ್ದಾರೆ ದರ್ಶನ್‌.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮಂಡ್ಯ ಕ್ಷೇತ್ರದಿಂದ (Mandya Lok Sabha constituency) ಸ್ಪರ್ಧೆ ಮಾಡುವ ತೀರ್ಮಾನ ಕೈಬಿಟ್ಟು ಕಮಲ ಹಿಡಿದಿರುವ ಸುಮಲತಾ ಅಂಬರೀಶ್‌, ಇನ್ನು ಮುಂದೆ ಬಿಜೆಪಿ ಕಾರ್ಯಕರ್ತಳಾಗಿ ಕೆಲಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್‌ ಕೂಡ ಭಾಗಿಯಾಗಿದ್ದರು. ಅವರ ಕೈ ಪೆಟ್ಟಾಗಿದ್ದು ಕಂಡು ಬಂದಿದ್ದು, ಇದೀಗ ನಟ ಆಪರೇಷನ್‌ಗೆ ಒಳಗಾಗಲಿದ್ದಾರೆ.

ಬಹಿರಂಗ ಸಭೆಯಲ್ಲಿ ದರ್ಶನ್‌ ಈ ಬಗ್ಗೆ ಮಾತನಾಡಿ ʻʻಇಂದು ಆಸ್ಪತ್ರೆಗೆ ಆಡ್ಮಿಟ್‌ ಆಗಿ ನಾಳೆ ಆಪರೇಷನ್‌ ಮಾಡಿಸಿಕೊಳ್ಳಲಿದ್ದೇನೆ. ಅಮ್ಮನಿಗೆ ಮೊದಲೇ ಡೇಟ್‌ ಕೊಟ್ಟಿದ್ದೆ. ಇಂದು ಇಲ್ಲಿಗೆ ಬಂದೆʼʼಎಂದು ಹೇಳಿದರು. ಶೂಟಿಂಗ್‌ ಸಮಯದಲ್ಲಿ ದರ್ಶನ್‌ ಅವರ ಕೈಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಅವರ ಕೈಗೆ ಬೆಲ್ಟ್‌ ಹಾಕಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್ ಪುತ್ರ ವಿನೀಶ್ ಕುದುರೆ ಸವಾರಿ ಬಲು ಜೋರು! ವಿಡಿಯೊ ವೈರಲ್‌!

ಅಭಿಮಾನಿಗಳ ಬೇಸರದ ಬಗ್ಗೆ ಸುಮಲತಾ ಹೇಳಿದ್ದೇನು?

ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕಿದರಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅಂಬರೀಶ್‌, ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ನಾನು ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುತ್ತಿದ್ದಂತೆ ಮತ್ತೆ ಕೆಲವರು ಚಪ್ಪಾಳೆ, ಶಿಳ್ಳೆ ಹಾಕಿ ಸಂಭ್ರಮಿಸಿದರು. ಅದು ನಿಮಗೆ ಕೇಳಲಿಲ್ಲವೇ? ಎಂದು ಮರು ಪ್ರಶ್ನೆಯನ್ನು ಹಾಕಿದರು. ನೋಡಿ, ಯಾವುದೇ ವಿಷಯದಲ್ಲಿಯಾದರೂ ಯಾರನ್ನೂ ನೂರಕ್ಕೆ ನೂರು ಮೆಚ್ಚಿಸಲು ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರಿಗೆ ಈಗ ಅಸಮಾಧಾನ ಆಗಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಅಂಬರೀಶ್‌ ಅವರ ಅಭಿಮಾನಿಗಳು ಸದಾ ನನ್ನ ಬೆನ್ನ ಹಿಂದೆ ಇರಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದರು.

ಎಚ್‌ಡಿಕೆ ಬೆಂಬಲ ಕೋರಿದ್ದಾರೆ

ಎಚ್‌.ಡಿ. ಕುಮಾರಸ್ವಾಮಿ ಅವರದ್ದು ಸೌಜನ್ಯಯುತ ಭೇಟಿಯಾಗಿತ್ತು. ಅವರು ನನ್ನನ್ನು ಭೇಟಿ ಮಾಡಿದ ವೇಳೆ ಈಗಿನ ಚುನಾವಣೆ ಬಗ್ಗೆ ಹೆಚ್ಚೇನೂ ಮಾತನಾಡಲಿಲ್ಲ. ಹಳೆಯದ್ದನ್ನೆಲ್ಲ ಮರೆತು ಬಿಡಿ ಎಂದು ಮನವಿ ಮಾಡಿದ್ದರು. ಅಲ್ಲದೆ, ತಮಗೆ ಬೆಂಬಲ ಸೂಚಿಸಿ ಎಂದೂ ಅವರು ಕೇಳಿಕೊಂಡಿದ್ದರು ಎಂದು ಎಚ್‌ಡಿಕೆ ಭೇಟಿ ಬಗ್ಗೆ ಸುಮಲತಾ ಅಂಬರೀಶ್‌ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Lok Sabha Election 2024: ಅಧಿಕಾರಕ್ಕೆ ಅಂಟಿಕೊಂಡಿಲ್ಲವೆಂದು ಸುಮಲತಾ ಪತ್ರ; ನಾಳೆಯ ನಿರ್ಧಾರ ಏನು? ದರ್ಶನ್‌ ಭಾಗಿ!

ಇದು ನನ್ನ ಕಾರ್ಯಕರ್ತರ ಹಾಗೂ ಮಂಡ್ಯ ಜಿಲ್ಲೆಯ ಜನತೆಯ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರವಾಗಿದೆ. ಮಂಡ್ಯವೇ ನನ್ನ ಕರ್ಮ ಭೂಮಿ. ಹೀಗಾಗಿ ನನ್ನ ರಾಜಕಾರಣ ಮಂಡ್ಯ ಬಿಟ್ಟು ಒಂದಿಂಚೂ ಸಾಗದು. ಮುಂದೆ ನನಗೆ ಬೇರೆ ಬೇರೆ ಅವಕಾಶಗಳು ಸಿಗಬಹುದು. ಆದರೆ, ಮಂಡ್ಯದ ಜನರನ್ನು ಎಂದಿಗೂ ಮರೆಯಲಾರೆ ಎಂದು ಸುಮಲತಾ ಅಂಬರೀಶ್‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Karthik Jayaram: ʻಅಶ್ವಿನಿ ನಕ್ಷತ್ರʼ ಖ್ಯಾತಿಯ ʻಜೆಕೆʼ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​!

Karthik Jayaram: ಜೆಕೆ ಹೊಸ ಸಿನಿಮಾಗೆ ʻವೀರ್ʼ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಯುವ ಪ್ರತಿಭೆ ಲೋಹಿತ್ ಆರ್ ನಾಯ್ಕ್ ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಲೋಹಿತ್ ಅವರಿಗಿದು ಚೊಚ್ಚಲ ಪ್ರಯತ್ನ. ʻವೀರ್ ಸಿನಿಮಾ ಮೂಲಕ ಲೋಹಿತ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

VISTARANEWS.COM


on

Karthik Jayaram The first look of The Veer motion Poster
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಕಾರ್ತಿಕ್​ ಜಯರಾಮ್ (Karthik Jayaram)​ ಅಲಿಯಾಸ್​ ಜೆಕೆ ಮೇ.1ರಂದು ಜನುಮದಿನ ಆಚರಿಸಿಕೊಂಡರು. ʻಅಶ್ವಿನಿ ನಕ್ಷತ್ರʼ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಜೆಕೆ ಹೊಸ ಸಿನಿಮಾಗೆ ʻವೀರ್ʼ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಯುವ ಪ್ರತಿಭೆ ಲೋಹಿತ್ ಆರ್ ನಾಯ್ಕ್ ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಲೋಹಿತ್ ಅವರಿಗಿದು ಚೊಚ್ಚಲ ಪ್ರಯತ್ನ. ʻವೀರ್ ಸಿನಿಮಾ ಮೂಲಕ ಲೋಹಿತ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಹರಿ ಸಂತು ಗರಡಿಯಲ್ಲಿ ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿರುವ ಲೋಹಿತ್ ವೀರ್ ಚಿತ್ರದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇದನ್ನೂ ಓದಿ: Karthik Jayram: ಬಣ್ಣದಲೋಕಕ್ಕೆ ಗುಡ್ ಬೈ ಹೇಳ್ತಾರಾ ಜೆಕೆ? ಗೌರವ ಇಲ್ಲದ ಕಡೆ ಇರಲ್ಲ ಅಂದಿದ್ಯಾಕೆ?

ʻವೀರ್ʼ ಸಿನಿಮಾದಲ್ಲಿ ಜೆಕೆಗೆ ಜೋಡಿಯಾಗಿ ಪ್ರಣತಿ ನಾಯಕಿಯಾಗಿ ನಟಿಸಿದ್ದು, ರೋಚಿತ್, ಮಂಜು ಪಾವಗಡ ತಾರಾಬಳಗದಲ್ಲಿದ್ದಾರೆ. ಚಿತ್ರದಲ್ಲಿ ಜೆಕೆ ಮೂಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವೀರ್ ಸಿನಿಮಾವನ್ನು ರಾಜರಾಜೇಶ್ವರಿ ಪ್ರೊಡಕ್ಷನ್ ನಡಿ ಗೀತಾ ಜಯಶ್ರೀನಿವಾಸನ್ ಬಂಡವಾಳ ಹೂಡುತ್ತಿದ್ದಾರೆ. ಆರ್ ದೇವೇಂದ್ರ ಛಾಯಾಗ್ರಹಣ, ಧ್ರುವ ಎಂ ಬಿ ಸಂಗೀತ , ಆರ್ಯನ್ ಗೌಡ ಸಂಕಲನ, ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆ, ಹರಿ ಸಂತು ಸಾಹಿತ್ಯ ಹಾಡುಗಳಿವೆ. ಸದ್ಯ ವೀರ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ನಟ ಜೆಕೆಗೆ, ಕನ್ನಡ- ಹಿಂದಿ ಕಿರುತೆರೆಯಲ್ಲಿ ಯಶಸ್ಸು ಸಿಕ್ಕ ಹಾಗೇ ಸಿನಿಮಾದಲ್ಲಿ ಸಿಗಲಿಲ್ಲ. ಆದರೆ, ಜೆಕೆ ಅವರು ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಬಣ್ಣದಲೋಕಕ್ಕೆ ಗುಡ್ ಬೈ ಎಂದಿದ್ದ ಜೆಕೆ

ʻʻನನಗೆ ಬರುವ ಸಿನಿಮಾ ಅವಕಾಶಗಳನ್ನು ತಪ್ಪಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿತ್ತು ಅದಕ್ಕೂ ಕಲ್ಲು ಹಾಕಿದರು. ದುಷ್ಟರಿಂದ ನಾನು ದೂರ ಇರುತ್ತೇನೆ. ಹಾಗಾಗಿ ಸಿನಿಮಾ ಇಂಡಸ್ಟ್ರಿ ನನಗೆ ಬೇಡ. ನನಗೆ ನೆಮ್ಮದಿ ಮುಖ್ಯ. ನನ್ನ ಮಾತು ಯಾರಿಗೆ ಅರ್ಥವಾಗಬೇಕು ಅವರಿಗೆ ಅರ್ಥ ಆದರೆ ಸಾಕು. ಇಂಡಸ್ಟ್ರಿಯಲ್ಲಿ 14ವರ್ಷದಿಂದ ಇದ್ದೇನೆ. ನಟನೆ ನನ್ನ ಫ್ಯಾಶನ್​​. ಈ ವೃತ್ತಿ ಇಲ್ಲ ಅಂದರೆ ಬೇರೆ ಇದೆ. ನಾನು ವಿದ್ಯಾವಂತʼʼ ಎಂದಿದ್ದರು. ‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡುತ್ತಿದ್ದೇನೆ’ ಎಂದಿದ್ದರು.

ಇತೀಚೆಗೆ ನಟ ಜೆಕೆ ತಮ್ಮ ಮದುವೆ ವಿಚಾರಕ್ಕೆ ಸಾಕಷ್ಟು ಸುದ್ದಿಯಾಗಿದ್ದರು. ಜೆಕೆ ಅವರು ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಜತೆಗಿನ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಕಳೆದ ಒಂದು ವರ್ಷದಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದಾರೆ. ಈ ಬಗ್ಗೆ ಅಪರ್ಣಾ, ಜೆಕೆ ಬರ್ತ್‌ಡೇ (ಮೇ1)ರಂದು ವಿಶ್ ಮಾಡುವ ಮೂಲಕ ಎಂಗೇಜ್ ಆಗಿರುವ ಬಗ್ಗೆ ಸುಳಿವು ನೀಡಿದ್ದರು.

Continue Reading

ಸ್ಯಾಂಡಲ್ ವುಡ್

Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Kantara Movie: ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

VISTARANEWS.COM


on

Kantara Movie Massive Set Constructed In Kundapura
Koo

ಬೆಂಗಳೂರು: ʼಕಾಂತಾರʼ ಪ್ಯಾನ್‌ (Kantara Movie) ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ (Hombale Films) ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇತ್ತೀಚಿನ ವರದಿಗಳ ಪ್ರಕಾರ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ.

ಒಂದು ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆ ಇದ್ದು, 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ವರದಿಯಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.

ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

ಕಾಂತಾರ ಒಂದು ದಂತಕಥೆʼ ಎಂದರೆ ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೋ ಪಾಲಾಗಿದೆ. ಕೆಲವು ಮೂಲಗಳ ಪ್ರಕಾರ ಚಿತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಯಕಿಯ ಪಾತ್ರ ಇರಲಿದೆ ಎನ್ನಲಾಗಿದೆ. ಇನ್ನು ಕೆಲವು ವರದಿಗಳು ನಾಯಕಿಯಾಗಿ ರುಕ್ಮಿಣಿ ವಸಂತ್‌ ಆಯ್ಕೆಯಾಗಿದ್ದಾರೆ ಎಂದಿವೆ. ಚಿತ್ರತಂಡ ಇನ್ನೂ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿಲ್ಲ.

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಸ್ಯಾಂಡಲ್ ವುಡ್

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Manvita Kamath: ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

VISTARANEWS.COM


on

Manvita Kamath marriage with arun Pics are here
Koo

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು (ಮೇ 1) ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗಿದೆ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

ಸ್ನೇಹಿತರು, ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದೆ ಜೋಡಿ.

ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ ಅರುಣ್‌. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ʼಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು.

Continue Reading

ಸಿನಿಮಾ

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Duniya Vijay: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

VISTARANEWS.COM


on

Duniya Vijay Visited Kolluru Shri Mookambika Devi Temple
Koo

ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಚ್ಚ ವಿಶೇಷ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: Duniya Vijay: ಪುತ್ರಿಗಾಗಿ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌

ಇದಾದ ಬಳಿಕ ಚಿತ್ರರಂಗದ ಸ್ಟಾರ್ ನಟ ಮೋಹನ್‌ಲಾಲ್ ಭೇಟಿ ನೀಡಿ, ಮುಂಜಾನೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದರು.

ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಕೆಲವು ದಿನಗಳ ಹಿಂದೆಯಷ್ಟೇ ಹೊಸ ಸಿನಿಮಾ ಘೋಷಣೆ ಮಾಡಿದ್ದರು. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ.

Continue Reading
Advertisement
Lok Sabha Election
ಪ್ರಮುಖ ಸುದ್ದಿ29 mins ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ33 mins ago

Tsering Namgyal: ಸಂಸತ್ತಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ್ದ ತ್ಸೆರಿಂಗ್‌ ಈಗ ಅದೇ ಪಕ್ಷದ ಲಡಾಕ್‌ ಅಭ್ಯರ್ಥಿ!

IPL 2024
ಪ್ರಮುಖ ಸುದ್ದಿ40 mins ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ1 hour ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ1 hour ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ1 hour ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ2 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ2 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ2 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ2 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ6 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ20 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌