Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ! - Vistara News

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Actor Darshan: , ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

VISTARANEWS.COM


on

Actor Darshan case sanjana galrani Reaction about ramya statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಇದೀಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾರೆ ದರ್ಶನ್‌. ಈ ನಡುವೆ, ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟ ದರ್ಶನ್ ತೂಗುದೀಪ ಆರೋಪಿಯೇ ಹೊರತು ಅಪರಾಧಿ ಅಲ್ಲ ಎಂದಿದ್ದಾರೆ. ಜತೆಗೆ ರಮ್ಯಾ ಅವರ ಟ್ವಿಟರ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತಿನ ನಡುವೆ ತಾವು ಮೂರು ತಿಂಗಳು ಜೈಲಿನಲ್ಲಿದ್ದ ಅವಧಿಯನ್ನು ನೆನಪಿಸಿಕೊಂಡಿದ್ದಾರೆ.

ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

ಇನ್ನು ರಮ್ಯಾ ಅವರು ಗಲ್ಲು ಶಿಕ್ಷೆ ದರ್ಶನ್‌ ಅವರಿಗೆ ಆಗಬೇಕು ಎಂದು ಟ್ವೀಟ್‌ ಮಾಡಿದ್ದರು. ಈ ಬಗ್ಗೆ ಸಂಜನಾ ಅವರು ಪ್ರತಿಕ್ರಿಯೆ ನೀಡಿದ್ದು ಹೀಗೆ. ʻʻನೋಡಿ ಗಲ್ಲು ಶಿಕ್ಷೆ ಆಗಬೇಕು ಎಂದು ಹೇಳುವ ಅಧಿಕಾರ ಕೋರ್ಟ್‌ಗೆ ಇದೆ. ನನ್ನ ಉದಾಹರಣೆ ಕೊಡುತ್ತೇನೆ. ನಾನು ಡ್ರಗ್ಸ್‌ ಕೇಸ್‌ ವಿಚಾರವಾಗಿ ನನ್ನ ಕರೆದಾಗ ಏಕಾ ಏಕಿ ಅರೆಸ್ಟ್‌ ಮಾಡಿದ್ದರು. ಆಮೇಲೆ ಮೊಬೈಲ್‌ ತೆಗೆದುಕೊಂಡರು. ಆಮೇಲೆ ತುಂಬ ಕಷ್ಟ ಪಟ್ಟೆ. ಇನ್ನು ನ್ಯೂಸ್‌ನಲ್ಲಿ ನೋಡಿದಾಗ ಸಂಜನಾ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಬಂತು. ಇನ್ನು ಇಲ್ಲಿ ವಿಚಾರಣೆನೇ ಆಗಿಲ್ಲ. ಯಾವುದೇ ಹೇಳಿಕೆಯೇ ನೀಡಿಲ್ಲ. ಆಗಲೇ ತಪ್ಪು ಒಪ್ಪಿಕೊಂಡರು ಎಂದು ಮಾಧ್ಯಗಳಲ್ಲಿ ಬಂತು. ಡ್ರಗ್ಸ್‌ ದಂಧೆ ನಡೆಸುತ್ತಾರೆ ಎಂದೆಲ್ಲ ಹಬ್ಬಿತ್ತು. ಈ ತರ ರೂಮರ್ಸ್‌ವನ್ನು ಯಾರು ತಡಿಲಿಕ್ಕೆ ಆಗುತ್ತೆ. ನಮ್ಮ ವಕೀಲರು ಇನೋಸೆಂಟ್‌ ಅಂದರು ಯಾರು ಕ್ಯಾರ್‌ ಮಾಡಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

ʻʻಚಾರ್ಜ್‌ಶೀಟ್‌ವನ್ನು ಮೊದಲು ಗೌರವಿಸಬೇಕು. ಊಹಾಪೋಹಗಳು ನಿಜ ಅಲ್ಲ. ಇನ್ನು ದರ್ಶನ್‌ ಕೇಸ್‌ಗೆ ಸಂಬಂಧಪಟ್ಟಂತೆ ವಿಚಾರಣೆ ಇನ್ನೂ ನಡಯುತ್ತಿದೆ ಅಂದಿದ್ದಾರೆ. ಆದರೂ ಈ ಗಾಸಿಪ್‌ಗಳು ಯಾಕೆ ಅನ್ನೋದು ಗೊತ್ತಿಲ್ಲ. ಕೆಲವೊಂದು ಮಾಧ್ಯಮಗಳು ಟಿಆರ್‌ಪಿಗೋಸ್ಕರ ಏನೂ ಬೇಕಾದರು ಹಾಕುತ್ತಾರೆ. ದರ್ಶನ್‌ ಅವರು ಕೆಟ್ಟವರಲ್ಲʼʼಎಂದಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

KMH CUP: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

VISTARANEWS.COM


on

Actress Bhavana Ramanna is the ambassador for KMH Cup
Koo

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಆಯೋಜಿಸಲಾಗಿರುವ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ (KMH CUP) ಲೋಗೋ ಬಿಡುಗಡೆ ಸಮಾರಂಭ ಈಚೆಗೆ ನಡೆಯಿತು.

ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನ ರಾಮಣ್ಣ ಲೋಗೊ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡ ದಿನೇಶ್, ಸಂಘದ ಅಧ್ಯಕ್ಷ ಎಸ್. ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ವೇಳೆ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ “ಕೆಎಂಎಚ್‌ ಕಪ್” ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜತೆಯಿರುವ ನಟಿ ಭಾವನ ರಾಮಣ್ಣ ಈ ಟೂರ್ನಿಯ ರಾಯಭಾರಿಯಾಗಿದ್ದಾರೆ.

ಇದನ್ನೂ ಓದಿ: Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೂ ಪಂದ್ಯಗಳು ನಡೆಯುತ್ತದೆ. ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24, 999 ರೂಪಾಯಿ ಬಹುಮಾನ ನೀಡಲಾಗುವುದು.

ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತು ಸಾವಿರ ಪ್ರವೇಶ ದರ ವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷ ಬಾಬು ಧರ್ಮೇಂದ್ರ ತಿಳಿಸಿದರು.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ತಮ್ಮ ಮೊದಲ ಚಿತ್ರಕ್ಕೆ ಮೇಕಪ್ ಮಾಡಿದ ವೆಂಕಟೇಶ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ನಟಿ ಭಾವನ ರಾಮಣ್ಣ, ನಾನು ನಟಿಸುವ ಎಲ್ಲಾ ಚಿತ್ರಗಳ ನಿರ್ಮಾಪಕರಿಗೆ ಹೇಳುವುದು ಮೇಕಪ್ ಹಾಗೂ ಕೇಶಾಲಂಕಾರಕ್ಕೆ ಈ ಸಂಘದ ಸದಸ್ಯರೇ ಇರಲಿ ಎಂದು. ಈಗ ಸಾಕಷ್ಟು ಜನ‌ರು ಸಾಮಾಜಿಕ ಜಾಲತಾಣಗಳಲ್ಲಿ ಮೇಕಪ್ ಕುರಿತು ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅದರಿಂದ ಇವರಿಗೆ ಸ್ವಲ್ಪ ತೊಂದರೆಯಾಗುತ್ತಿದೆ‌. ಇನ್ನು ಈ ಟೂರ್ನಿಯ ಬಗ್ಗೆ ಹೇಳಬೇಕೆಂದರೆ, ಹೆಚ್ಚಾಗಿ ಕಲಾವಿದರು ಕ್ರಿಕೆಟ್ ಆಡುತ್ತೇವೆ‌. ತಂತ್ರಜ್ಞರು ಆಡುವುದು ಕಡಿಮೆ. ಕಾರ್ಮಿಕರು ಹಾಗೂ ತಂತ್ರಜ್ಞರಿಗಾಗಿ ಆಯೋಜಿಸಿರುವ ಈ ಕ್ರಿಕೆಟ್ ಟೂರ್ನಿಯ ರಾಯಭಾರಿಯಾಗಿದ್ದು ಖುಷಿಯಾಗಿದೆ. ಟೂರ್ನಿ ಯಶಸ್ವಿಯಾಗಲಿ ಎಂದು ತಿಳಿಸಿದರು.

Continue Reading

ಕರ್ನಾಟಕ

Kannada New Movie: ಮೊದಲ ಹಂತದ ಶೂಟಿಂಗ್ ಮುಗಿಸಿದ ʼಹೇ ಪ್ರಭುʼ ಚಿತ್ರ

Kannada New Movie: ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ 13ನೇ ಹೊಸ ಚಿತ್ರ “ಹೇ ಪ್ರಭು” ಸದ್ದಿಲ್ಲದೆ ಮೊದಲ ಹಂತದ ಶೂಟಿಂಗ್ ಮುಗಿಸಿದೆ. “ಹೇ ಪ್ರಭು ” ಈ ಹೆಸರು ಕೇಳಿದ ತಕ್ಷಣ ನೀವು ದೇವರು ಇರಬಹುದ ಅಧವಾ “ಪ್ರಭು” ಅಂದರೇ ನಮ್ಮ ನಾಡ ಪ್ರಭು ಕೆಂಪೇಗೌಡರಿರಬಹುದಾ ಎಂಬ ಕುತೂಹಲ ಮೂಡಿಸುತ್ತದೆ . ಸದ್ಯಕ್ಕೆ ಚಿತ್ರ ತಂಡ ಶೀರ್ಷಿಕೆ ವಿನ್ಯಾಸ (ಟೈಟಲ್ ಲೋಗೋ) ಅನಾವರಣಗೊಳಿಸಿದೆ, ಇದರಲ್ಲಿ ಕೆಂಪೇಗೌಡರ ಚಿತ್ರವಿರುವುದು ಕುತೂಹಲ ಮೂಡಿಸಿದೆ.

VISTARANEWS.COM


on

Hey Prabhu film has completed its first phase of shooting
Koo

ಬೆಂಗಳೂರು: ವಿನೂತನ ಶೀರ್ಷಿಕೆ ಮತ್ತು ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ 13ನೇ ಹೊಸ ಚಿತ್ರ “ಹೇ ಪ್ರಭು” ಸದ್ದಿಲ್ಲದೆ ಮೊದಲ ಹಂತದ ಶೂಟಿಂಗ್ ಮುಗಿಸಿದೆ. “ಹೇ ಪ್ರಭು” ಈ ಹೆಸರು ಕೇಳಿದ ತಕ್ಷಣ ನೀವು ದೇವರು ಇರಬಹುದಾ ಅಥವಾ “ಪ್ರಭು” ಅಂದರೆ ನಮ್ಮ ನಾಡಪ್ರಭು ಕೆಂಪೇಗೌಡರಿರಬಹುದಾ ಎಂಬ ಕುತೂಹಲ ಮೂಡಿಸುತ್ತದೆ. ಸದ್ಯಕ್ಕೆ ಚಿತ್ರತಂಡ ಶೀರ್ಷಿಕೆ ವಿನ್ಯಾಸ (ಟೈಟಲ್ ಲೋಗೋ) ಅನಾವರಣಗೊಳಿಸಿದೆ. ಇದರಲ್ಲಿ ಕೆಂಪೇಗೌಡರ ಚಿತ್ರವಿರುವುದು (Kannada New Movie) ಸ್ವಲ್ಪ ಕುತೂಹಲ ಮೂಡಿಸಿದೆ.

ಇನ್ನು 5 ದಿನಗಳ ಶೂಟಿಂಗ್ ಮುಗಿದರೆ ಚಿತ್ರೀಕರಣ ಮುಕ್ತಾಯವಾಗುತ್ತದೆ ಎಂದು ತಂಡ ಹೇಳಿಕೊಂಡಿದೆ. ಜೊತೆಜೊತೆಯಾಗಿ ಸಂಕಲನ ಕಾರ್ಯ ಕೂಡ ಪ್ರಗತಿಯಲ್ಲಿದ್ದು, ನಿರ್ದೇಶಕರು ಮೊದಲ ಪ್ರತಿಯನ್ನು ಶೀಘ್ರದಲ್ಲಿ ತರುವುದಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

ಪ್ರಮೋದ್ ಭಾರತೀಯ ಛಾಯಾಗ್ರಹಣ, ಡ್ಯಾನ್ನಿ ಆಂಡರ್ಸನ್, ಸಂಗೀತ, ಚಂದನ್ ಪಿ., ಶಮೀಕ್ ಭಾರದ್ವಾಜ್ ಮತ್ತು ಲಾರೆನ್ಸ್ ಪ್ರೀತಮ್ ತಾಂತ್ರಿಕ ಕೆಲಸದಲ್ಲಿ ಕಾರ್ಯವಹಿಸುತ್ತಿದ್ದಾರೆ. ಮಹೇಶ್ ಮತ್ತು ಪ್ರವೀಣ್ ಅವರ ಸಂಭಾಷಣೆ, ಅರಸು ಅಂತಾರೆ ಮತ್ತು ಮನೋಜ್ ರಾವ್ ಅವರ ಸಾಹಿತ್ಯ ಚಿತ್ರಕ್ಕಿದೆ. 24 Reels ಮತ್ತು Amrutha Film Center ನಿರ್ಮಾಣ, ಕಥೆ ಚಿತ್ರಕಥೆ ವೆಂಕಟ್ ಭಾರದ್ವಾಜ್ ಅವರದ್ದಾಗಿದೆ.

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಸನ್ ಜೈಪಾಲ್ ಅವರ ಪುತ್ರ ಡ್ಯಾನ್ನಿ ಆಂಡರ್ಸನ್ ಅವರನ್ನು ಚಿತ್ರರಂಗಕ್ಕೆ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ವೆಂಕಟ್ ಭಾರದ್ವಾಜ್ ಪರಿಚಯಿಸುತ್ತಿದ್ದಾರೆ.

ತಾರಾಬಳಗದಲ್ಲಿ ಜಯ್, ಸೂರ್ಯ ರಾಜ್, ಲಕ್ಷ್ಮಣ್ ಶಿವಶಂಕರ್ (ಕೆಂಪಿರ್ವೇ ಖ್ಯಾತಿ), ಸಂಹಿತ ವಿನ್ಯಾಸ, ಗಜಾನನ ಹೆಗಡೆ, ನಿರಂಜನ್ ಪ್ರಸಾದ್, ಹರಿ ಧನಂಜಯ , ಪ್ರಮೋದ್ ರಾಜ್ , ದಿಲೀಪ್ ದೇವ್, ನೇತ್ರ ಗೋಪಾಲ್, ಸುಚಿತ್ರ ದಿನೇಶ್, ಸಾಧನ ಭಟ್, ಮನೋಹರ್, ಶಶಿರ್ ರಾಜು , ಹಾಗೂ ಇತರರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಗೆ ಇದು ಗೋಲ್ಡನ್‌ ಟೈಮ್‌; ಇಳಿದ ಚಿನ್ನದ ದರ

ಶೀಘ್ರದಲ್ಲಿ ತಂಡ “ಹೇ ಪ್ರಭು ” ಮೊದಲ ನೋಟ (First Look) ಬಿಡುಗಡೆ ಮಾಡಲಿದೆ. ಸದ್ಯಕ್ಕೆ ವೆಂಕಟ್ ಭಾರದ್ವಾಜ್ ಅವರ ಹೈನ ಮತ್ತು ಆಹತ ಎರಡು ಚಿತ್ರ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

Actor Darshan : ದರ್ಶನ್‌‌‌ ನೋಡ್ಬೇಕೆಂದು ಜೈಲಿನ ಹೊರಗೆ ವಿಶೇಷಚೇತನ ಯುವತಿಯೊಬ್ಬಳು ಗೋಳಾಡಿದ್ದಾಳೆ. ದರ್ಶನ್‌ ಜೈಲುಪಾಲಾದ ದಿನದಿಂದ ಯುವತಿ ಊಟ ಬಿಟ್ಟು ಹಠ ಮಾಡುತ್ತಿದ್ದಾಳೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. ಗುರುವಾರವೂ ದರ್ಶನ್ ಭೇಟಿಗೆ ವಿಶೇಷ ಚೇತನ ಯುವತಿ ಆಗಮಿಸಿದ್ದಳು.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನ ನಿವಾಸಿ ಸೌಮ್ಯ ತನ್ನ ನೆಚ್ಚಿನ ನಟನನ್ನು ನೋಡಬೇಕೆಂದು ಹಠ ಹಿಡಿದಿದ್ದಳು. ದರ್ಶನ್‌ನನ್ನು ನೋಡುವ ತನಕ ಊಟ ಮಾಡುವುದಿಲ್ಲ ಎಂದಿದ್ದಾಳೆ. ಹೀಗಾಗಿ ಸೌಮ್ಯಳ ಪೋಷಕರು ಪರಪ್ಪನ ಅಗ್ರಹಾರಕ್ಕೆ ಭೇಟಿ ನಿಡಿದ್ದರು. ನಟ ದರ್ಶನ್‌ನ ಅಪ್ಪಟ ಅಭಿಮಾನಿಯಾಗಿರುವ ಸೌಮ್ಯ, ದರ್ಶನ್‌ ಜೈಲಿಗೆ ಹೋದ ದಿನದಿಂದ ಸರಿಯಾಗಿ ಊಟ ಮಾಡಿಲ್ಲ. ಜೈಲಿನಲ್ಲಿರುವ ದರ್ಶನ್ ಅವರನ್ನು ಭೇಟಿಯಾಗಬೇಕೆಂದು ಹಠ ಹಿಡಿದಿದ್ದಾಳೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ, ಪಟ್ಟಣಗೆರೆಯ ವಾಹನ ಶೆಡ್‌ (Pattanagere Shed) ಕಡೆ ಸುಳಿದಾಡಲು ವಾಹನ ಮಾಲಿಕರು ಅಂಜುತ್ತಿದ್ದಾರೆ. ಇಲ್ಲಿ ಸಾಲ ಬಾಕಿ (Loan default) ಉಳಿಸಿಕೊಂಡಿರುವವರ ವಾಹನಗಳನ್ನು ಸೀಜ್‌ (Seize) ಮಾಡಿ ತಂದಿಡಲಾಗುತ್ತಿದೆ. ಈಗ ಈ ವಾಹನಗಳನ್ನು ಬಿಡಿಸಿಕೊಳ್ಳಲು ಕೂಡ ಯಾರೂ ಈ ಶೆಡ್‌ ಕಡೆ ತಲೆ ಹಾಕುತ್ತಿಲ್ಲ.

ಸಾಲ ಬಾಕಿ ಉಳಿಸಿಕೊಂಡ ಪರಿಣಾಮ ಪಟ್ಟಣಗೆರೆ ಶೆಡ್‌ ಪಾಲಾಗಿರುವ ವಾಹನಗಳ ಮಾಲೀಕರಿಗೆ ಈಗ ಪಟ್ಟಣಗೆರೆಯ ಶೆಡ್ ಭಯವೇ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೊಲೆಯ ನಡೆದ ತಾಣ ಹಾಗೂ ಅದರ ಬರ್ಬರತೆ ಇವರ ಕೈಕಾಲು ನಡುಗುವಂತೆ ಮಾಡಿದೆ. ʼನೋ ಆರ್ಗ್ಯುಮೆಂಟ್, ಓನ್ಲಿ ಸೆಟಲ್‌ಮೆಂಟ್‌ʼ ಎನ್ನುತ್ತ ಗಪ್‌ಚುಪ್‌ ಆಗಿ ಹಣ ಕಟ್ಟಿ ಬಿಡಿಸಿಕೊಂಡು ಬರುತ್ತಿದ್ದಾರೆ. ಇದರ ಆಸುಪಾಸಿನಲ್ಲಿ ಓಡಾಡುವವರು ಸಹ, ʼಇದೇ ಆ ಶೆಡ್‌ʼ ಎಂದು ಮಾತಾಡಿಕೊಳ್ಳುತ್ತ ಶೆಡ್ಡನ್ನು ನೋಡುತ್ತ ಬಿರಬಿರನೆ ಸಾಗುತ್ತಾರೆ!

ಪಟ್ಟಣಗೆರೆ ಶೆಡ್‌ಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಮಾಲೀಕರು ಕೆಲವೆಡೆ ಬ್ಯಾಂಕ್‌ಗೆ ಹೋಗಿ ಹಣ ಕಟ್ಟಿ, ʼನೀವೇ ವಾಹನ ತಂದುಕೊಡಿʼ ಎಂದೂ ಬ್ಯಾಂಕ್‌ನವರಿಗೆ ಮನವಿ ಮಾಡುತ್ತಿದ್ದಾರಂತೆ. ನಾವು ಶೆಡ್‌ಗೆ ಹೋಗಲ್ಲ‌ ಸರ್, ನೀವೆ ಹೋಗಿ ಎಂದು ದುಂಬಾಲು ಬೀಳುತ್ತಿದ್ದಾರೆ! ʼʼಕ್ರೂರವಾಗಿ ಸತ್ತವರು ದೆವ್ವಗಳಾಗುತ್ತಾರಂತೆ. ಅವರ ಆತ್ಮಗಳು ಅಲ್ಲೇ ಸುಳಿದಾಡ್ತಾ ಇರುತ್ತಾವಂತೆ, ನಮಗ್ಯಾಕೆ ಬೇಕು ಸಾರ್‌ ಇಲ್ಲದ ಉಪದ್ವ್ಯಾಪʼʼ ಎಂದು ಕೂಡ ಕೆಲವು ಮಾಲೀಕರು ಹೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಯನ್ನು ಕೂಡಿಹಾಕಿ ದರ್ಶನ್‌ ಮತ್ತು ಗ್ಯಾಂಗ್‌ ಭೀಕರವಾಗಿ ಹಲ್ಲೆ ನಡೆಸಿತ್ತು. ವಾಹನಗಳಿಗೆ ರೇಣುಕಾ ಸ್ವಾಮಿಯ ತಲೆ ಜಪ್ಪಿ, ದೊಣ್ಣೆಗಳಿಂದ ಥಳಿಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿತ್ತು. ಈ ಪೀಡನೆಯನ್ನು ತಾಳಲಾರದೆ ರೇಣುಕಾ ಸ್ವಾಮಿ ಜೀವ ಶೆಡ್‌ನಲ್ಲಿಯೇ ಹೋಗಿತ್ತು. ಕೆಲಕಾಲ ಶವವನ್ನು ಶೆಡ್‌ನಲ್ಲೇ ಇಟ್ಟಿದ್ದ ಡಿ ಗ್ಯಾಂಗ್‌, ನಂತರ ಅದನ್ನು ಸುಮನಹಳ್ಳಿ ರಾಜಕಾಲುವೆಗೆ ಎಸೆದಿತ್ತು.

ದರ್ಶನ್‌ ಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ ಶಿಫ್ಟ್

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Vijayalakshmi Darshan: ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ನಮಗೆ ನ್ಯಾಯ ಸಿಗಲಿದೆ ಎಂದು ಹೇಳುವ ಮೂಲಕ ಅವರು ಅಭಿಮಾನಿಗಳ ದುಃಖ, ಬೇಸರವನ್ನು ತಣಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

Vijayalakshmi Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್‌ (Actor Darshan) ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಭೇಟಿಯಾಗಿ ಬಂದಿರುವ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ ಮೂಲಕ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. “ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

ವಿಜಯಲಕ್ಷ್ಮೀ ಪೋಸ್ಟ್‌ ಹೀಗಿದೆ…

” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

“ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ” ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದಿದ್ದರು.‌ ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ಇದನ್ನೂ ಓದಿ: Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Continue Reading
Advertisement
Ashada Sale 2024
ಫ್ಯಾಷನ್5 seconds ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Fishermen Arrest
ದೇಶ49 mins ago

Fishermen Arrest: ಶ್ರೀಲಂಕಾ ನೌಕಾಪಡೆಯ ನಾವಿಕ ಸಾವು; 10 ಭಾರತೀಯ ಮೀನುಗಾರರ ವಿರುದ್ಧ ಕೇಸ್‌ ದಾಖಲು

IND vs ENG Semi Final
ಕ್ರೀಡೆ56 mins ago

IND vs ENG Semi Final: ಗಯಾನದಲ್ಲಿ ಭಾರೀ ಗಾಳಿ-ಮಳೆ ಶುರು; ರದ್ದಾಗುತ್ತಾ ಸೆಮಿಫೈನಲ್​ ಪಂದ್ಯ?

Bitcoin Scam
ಕರ್ನಾಟಕ1 hour ago

Bitcoin Scam: ಬಿಟ್‌ಕಾಯಿನ್‌ ಕೇಸ್; ಪೊಲೀಸರ ಮೇಲೆ ಜೀಪ್‌ ಹತ್ತಿಸಿದ್ದ DySP ಶ್ರೀಧರ್‌ ಪೂಜಾರ್‌ಗೆ ಜಾಮೀನು!

IND vs ENG
ಕ್ರೀಡೆ1 hour ago

IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

Viral News
Latest1 hour ago

Viral News: ಆರ್ಡರ್ ಮಾಡಿ 6 ವರ್ಷ ಕಳೆದರೂ ವಸ್ತು ಕಳುಹಿಸದ ಫ್ಲಿಪ್‌ಕಾರ್ಟ್!

Star Fashion
ಫ್ಯಾಷನ್1 hour ago

Star Fashion: ಬ್ಲ್ಯಾಕ್‌ & ವೈಟ್‌ ಪ್ರಿಂಟೆಡ್‌ ಜಂಪ್‌ಸೂಟ್‌ನಲ್ಲಿ ನಟಿ ಆರೋಹಿ ನಾರಾಯಣ್‌ ಸ್ಟೈಲಿಶ್‌ ಲುಕ್‌!

Murder of Renukaswamy
ಪ್ರಮುಖ ಸುದ್ದಿ2 hours ago

Murder of Renukaswamy : ದರ್ಶನ್​ ಗ್ಯಾಂಗ್​ನಿಂದ ಕೊಲೆಯಾದ ರೇಣುಕಾ ಸ್ವಾಮಿ ಬಗ್ಗೆ ವಿಕಿಪೀಡಿಯಾ ಪೇಜ್​

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Kempegowda Jayanti All people of the society should live secular says CM Siddaramaiah
ಕರ್ನಾಟಕ2 hours ago

Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ7 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಟ್ರೆಂಡಿಂಗ್‌