Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು - Vistara News

ಸ್ಯಾಂಡಲ್ ವುಡ್

Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

Actor Darshan: ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ.

VISTARANEWS.COM


on

Actor Darshan Chandranna Family Members Want Anu To Attend Funeral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy murder case) ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು (ಜೂನ್‌ 15) ನಿರ್ಧಾರವಾಗಲಿದೆ. ಇನ್ನೊಂದೆಡೆ ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಕೂಡ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇದರಿಂದ ಮನನೊಂದು ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಕುಟುಂಬದವರು ಮಾಹಿತಿ ನೀಡಿ ʻʻಮಗ ಅರೆಸ್ಟ್‌ ಆಗಿದ್ದಕ್ಕೆ ತಂದೆಗೆ ಹೀಗೆ ಆಗಿದೆ. ಮಗ ಇಲ್ಲದೇ ಚಂದ್ರಣ್ಣ ಅವರನ್ನು ಮಣ್ಣಾಗಿಸಲು ಬಿಡುವುದಿಲ್ಲ. ಎಷ್ಟೇ ದಿನ ಆದರೂ ಶವ ಇಲ್ಲೇ ಇಡುತ್ತೇವೆ. ಅನು ಬರುವವರೆಗೂ ಶವ ಎತ್ತಲ್ಲʼʼಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಅನುಕುಮಾರ್‌ ಚಿಕ್ಕಪ್ಪ ಕೂಡ ಪ್ರತಿಕ್ರಿಯೆ ನೀಡಿ ‘ನನ್ನ ಅಣ್ಣನ ಸಾವಿಗೆ ದರ್ಶನ್ ಕಾರಣ. ಅವರೊಬ್ಬರೇ ಕೊಲೆ ಮಾಡಿದ್ದರೆ ಆಗಿತ್ತು. 16 ಜನರನ್ನು ಇಟ್ಟುಕೊಂಡು ಮಾಡೋದು ಬೇಕಿರಲಿಲ್ಲ. ಇಲ್ಲಿ ಬಡವರೇ ಸಾಯೋದು;ʼʼಎಂದು ಬೇಸರ ಹೊರ ಹಾಕಿದ್ದಾರೆ.

ಇದನ್ನೂ ಓದಿ: Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

ಮತ್ತೊಬ್ಬ ವ್ಯಕ್ತಿ ಪೊಲೀಸ್‌ ವಶಕ್ಕೆ

ಈ ಮಧ್ಯೆ ಪೊಲೀಸರು ತಡರಾತ್ರಿ ದರ್ಶನ್‌ ಮತ್ತು ಸಹಚರರಿಗೆ ಸಹಾಯ ಮಾಡಿದ್ದ ಇನ್ನೋರ್ವ ವ್ಯಕ್ತಿಯನ್ನೂ ವಶಕ್ಕೆ ಪಡೆದಿದ್ದಾರೆ. ಈತ ಆರೋಪಿಗಳ ಮೊಬೈಲ್ ಡೇಟಾ ಡಿಲೀಟ್ ಮಾಡಲು ಸಹಾಯ ಮಾಡಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಏನಿದು ಪ್ರಕರಣ?

ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಹಲವರ ಹೆಸರು ಕೇಳಿ ಬಂದಿದೆ. ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಜೂನ್‌ 11ರಂದು ದರ್ಶನ್‌ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

Actor Darshan: ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಈ ಹಿಂದೆ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಮನೆ ತೆರವಿಗೆ ಸರ್ಕಾರದಿಂದ ಮೈಖಿಕ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮವಾಗಿ ರಾಜಕಾಲುವೆ ಮೇಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಮನೆ ಒತ್ತುವರಿ ತೆರವು ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ನಟ ದರ್ಶನ್ (Actor Darshan) ಮನೆ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೌಕಿಕ ಸೂಚನೆ ಸಿಕ್ಕಿದೆ ಎನ್ನಲಾಗಿದ್ದು, ಯಾರೇ ಒತ್ತುವರಿ ಮಾಡಿ ಸ್ಟೇ ತಂದಿದ್ದರೂ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಮನೆ ರಾಜಕಾಲುವೆ ‌ಮೇಲೆ ಇದ್ದರೂ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಒತ್ತುವರಿಗೆ ತೆರವಿಗೆ ಸೂಚನೆ ಹಿನ್ನೆಲೆಯಲ್ಲಿ ಕ್ರಮಕ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೂಡ ಒತ್ತುವರಿ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ 2016ರಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದಾಗ ರಾಜ ಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ಅಂದಿನ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿಗೆ ಸೂಚನೆ ನೀಡಿತ್ತು. ಆಗ ಆರ್‌.ಆರ್‌. ನಗರದ ದರ್ಶನ್‌ ಅವರ ನಿವಾಸ ಕೂಡ ರಾಜ ಕಾಲುವೆಯ ಬಫರ್‌ ಜೋನ್‌ ಮೇಲೆ ನಿರ್ಮಿಸಿರುವುದು ತಿಳಿದುಬಂದಿತ್ತು.

ಐಡಿಯಲ್‌ ಹೋಮ್ಸ್‌, ದರ್ಶನ್‌, ಶಾಮನೂರು ಅವರ ಆಸ್ಪತ್ರೆ ಸೇರಿ ಹಲವು ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್‌ ನೀಡಲಾಗಿತ್ತು. ನೋಟಿಸ್‌ ನೀಡಿದ್ದರಿಂದ ದರ್ಶನ್‌ ಮತ್ತಿತರರು ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದು, ಬಳಿಕ 2016 ಅಕ್ಟೋಬರ್‌ನಲ್ಲಿ ತೆರವು ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಅಂದು ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ದರ್ಶನ್‌ ಇದೀಗ ಬಂಧನವಾಗಿರುವ ಹಿನ್ನೆಲೆಯಲ್ಲಿ ಮನೆ ಒತ್ತುವರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ | Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

ಹಾಸ್ಯನಟ ಚಿಕ್ಕಣ್ಣ ಬೆನ್ನಲ್ಲೇ ನಟ ಯಶಸ್‌ ಸೂರ್ಯಗೂ ನೋಟೀಸ್‌, ವಿಚಾರಣೆ

actor darshan yashas surya

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ (comedian Chikkanna) ಅವರ ವಿಚಾರಣೆ ನಡೆಸಲಾಗಿದ್ದು, ಅದೇ ಪಾರ್ಟಿಯಲ್ಲಿದ್ದ ಇನ್ನೊಬ್ಬ ನಟನಿಗೂ ಪೊಲೀಸ್‌ ವಿಚಾರಣೆ ನೋಟೀಸ್‌ (police notice) ಹೋಗಿದೆ.

ನಟ ಯಶಸ್‌ ಸೂರ್ಯ (Yashas Surya) ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಗೊತ್ತಾಗಿದೆ. ಈತ ದರ್ಶನ್‌ಗೆ ಆಪ್ತನಾಗಿದ್ದು, ಅದೇ ದಿನ ನಡೆಸಲಾದ ಪಾರ್ಟಿಯಲ್ಲಿ ಚಿಕ್ಕಣ್ಣ ಜೊತೆಗೆ ಹಾಜರಿದ್ದರು. ಇದೀಗ ವಿಚಾರಣೆಗೆ ಹಾಜರಾಗಲು ಯಶಸ್‌ಗೂ ನೋಟೀಸ್‌ ನೀಡಲಾಗಿದೆ.

ಚಿಕ್ಕಣ್ಣ, ಯಶಸ್ ಸೂರ್ಯ ಸೇರಿದಂತೆ ಇನ್ನೂ ಕೆಲ ನಟರಿಗೂ ಪೊಲೀಸರು ನೋಟೀಸ್ ನೀಡುವ ಸಾಧ್ಯತೆ ಇದೆ. ಮುಖ್ಯವಾಗಿ, ಅಂದು ದರ್ಶನ್‌ ಯಾರುಯಾರನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಪೊಲೀಸ್‌ ತನಿಖೆಯನ್ನು ಎದುರಿಸಬೇಕಿದೆ. ಅಂದು ನಡೆಸಿದ ಮಾತುಕತೆಯನ್ನು ದರ್ಶನ್‌, ರೇಣುಕಾಸ್ವಾಮಿ ವಿಚಾರ ಎತ್ತಿದ್ದರೇ ಎಂಬುದು ತನಿಖೆಯ ಮುಖ್ಯ ವಿಚಾರವಾಗಿರಲಿದೆ.

actor darshan yashas surya

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

Continue Reading

ಸಿನಿಮಾ

Actor Darshan: ನನ್ನ ಗುರು ದರ್ಶನ್ ಈ ಕೃತ್ಯ ಎಸಗಿದ್ದಾರೆಂದರೆ ನಂಬಲಾಗುತ್ತಿಲ್ಲ ಎಂದ ರಚಿತಾ ರಾಮ್!

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದು, ಸೆಲೆಬ್ರಿಟಿಗಳೂ ಸೇರಿದಂತೆ ಹಲವರು ಅವರ ಪರ-ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ಸೋಷಿಯಲ್‌ ಮೀಡಿಯಾದಲ್ಲಿ ಘಟನೆ ಬಗ್ಗೆ ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ನಟ ದರ್ಶನ್‌ (Actor Darshan) ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದು, ಸೆಲೆಬ್ರಿಟಿಗಳೂ ಸೇರಿದಂತೆ ಹಲವರು ಅವರ ಪರ-ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ ನಟಿ, ದರ್ಶನ್‌ ಅವರ ʼಬುಲ್‌ಬುಲ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ (Rachita Ram) ಸೋಷಿಯಲ್‌ ಮೀಡಿಯಾದಲ್ಲಿ ಘಟನೆ ಬಗ್ಗೆ ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.

ʼʼನಮಸ್ಕಾರʼʼ ಎಂದು ತಮ್ಮ ನೋಟ್‌ ಅನ್ನು ಆರಂಭಿಸಿರುವ ಅವರು ʼʼಇದನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆʼʼ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?

ʼʼಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭವಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆʼʼ ಎಂದು ಹೇಳಿದ್ದಾರೆ.

ಮುಂದುವರಿದು, ʼʼನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆʼʼ ಎಂದು ರಚಿತಾ ರಾಮ್‌ ಬರೆದುಕೊಂಡಿದ್ದಾರೆ.

ರಚಿತಾ ರಾಮ್‌ ಮತ್ತು ದರ್ಶನ್‌ ʼಬುಲ್‌ಬುಲ್‌ʼ, ʼಅಂಬರೀಷʼ, ʼಕ್ರಾಂತಿʼ ಮುಂತಾದ ಚಿತ್ರಗಳಲ್ಲಿ ಜತೆಯಾಗಿ ನಟಿಸಿದ್ದಾರೆ. 2013ರಲ್ಲಿ ತೆರೆಕಂಡ ʼಬುಲ್‌ಬುಲ್‌ʼ ಚಿತ್ರದ ಮೂಲಕ ರಚಿತಾ ರಾಮ್‌ ಸಿನಿರಂಗಕ್ಕೆ ಪರಿಚಿತರಾಗಿದ್ದರು.

ರಮ್ಯಾ ಹೇಳಿದ್ದೇನು?

ಈ ಹಿಂದೆ ಪ್ರಕರಣದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದ ನಟಿ ರಮ್ಯಾ,  “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಹೇಳಿದ್ದರು. “ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ ಒಂದಷ್ಟು ಟ್ರೋಲಿಗರ ವಿರುದ್ಧ ಕೇಸ್‌ ದಾಖಲಿಸಿದ್ದೇನೆ. ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಇವರು ಸಾಮಾಜಿಕ ಜಾಲತಾಣದಲ್ಲಿ ಹೀಗೇಕೆ ಸಮಯ ಹಾಳು ಮಾಡುತ್ತಿದ್ದಾರೆ? ಅವರ ಭವಿಷ್ಯದ ಮೇಲೆಯೇ ಏಕೆ ಕಲ್ಲು ಹಾಕೊಳ್ಳುತ್ತಿದ್ದಾರೆ ಎಂಬುದಾಗಿ ಅನಿಸಿದ್ದಿದೆ” ಎಂದು ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದರು.

“ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನಿಗಿಂತ ಯಾರು ದೊಡ್ಡವರಲ್ಲ. ಹಾಗಾಗಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನೀವು ಯಾರನ್ನೋ ಕೊಲ್ಲಬಾರದು. ನೀವು ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟಿದ್ದೇ ಆದರೆ, ಒಂದು ದೂರು ದಾಖಲಿಸಿ ಅಷ್ಟೆ. ಹಾಗೆಯೇ, ಥ್ಯಾಂಕ್‌ಲೆಸ್‌ ಜಾಬ್‌ ಮಾಡುತ್ತಿರುವ ಪೊಲೀಸರ ಅವಿರತ ಶ್ರಮವನ್ನೂ ನಾವು ಸ್ಮರಿಸಬೇಕಿದೆ ಹಾಗೆಯೇ, ಯಾವುದೇ ರಾಜಕೀಯ ಒತ್ತಡಕ್ಕೆ ಸಿಲುಕದೆ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ರಮ್ಯಾ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ, ದರ್ಶನ್‌, ಯಡಿಯೂರಪ್ಪ ಹಾಗೂ ಪ್ರಜ್ವಲ್‌ ರೇವಣ್ಣ ಎಂಬ ಹ್ಯಾಶ್‌ಟ್ಯಾಗ್‌ ಅನ್ನೂ ಬಳಸಿದ್ದರು.

ಇದನ್ನೂ ಓದಿ: Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

actor darshan Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಕರ್ನಾಟಕ

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಹಾಸ್ಯನಟ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹಾಜರಾಗಿದ್ದು, ನಟ ದರ್ಶನ್‌ ಜತೆ (Actor Darshan) ಜೂನ್‌ 8ರಂದು (ಇದೇ ರಾತ್ರಿ ರೇಣುಕಾಸ್ವಾಮಿ ಹತ್ಯೆಯಾಗಿದ್ದು) ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ್ದು ನಿಜ ಎಂಬುದಾಗಿ ನಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

ಪೊಲೀಸ್‌ ಠಾಣೆಯಲ್ಲಿ ಚಿಕ್ಕಣ್ಣ

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading
Advertisement
Indian Women
ವಿದೇಶ12 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ14 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್29 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು34 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್48 mins ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ54 mins ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ55 mins ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ1 hour ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

prajwal revanna case test
ಪ್ರಮುಖ ಸುದ್ದಿ1 hour ago

Prajwal Revanna Case: ʼಮತ್ತೆ ಮತ್ತೆ ಅದನ್ನು ತೋರಿಸೋಕೆ ಮುಜುಗರ….ʼ ಜಡ್ಜ್‌ ಮುಂದೆ ಅಲವತ್ತುಕೊಂಡ ಪ್ರಜ್ವಲ್!‌

Gemini Mobile App
ತಂತ್ರಜ್ಞಾನ2 hours ago

Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌